Author: kannadanewsnow09

ಓಂ ಶ್ರೀ ಗುರುಭ್ಯೋ ನಮಃ ‌ ‌ ‌ ‌ ‌ ‌ ‌ ಶ್ರೀ ಗೌರೀ ಅಷ್ಟೋತ್ತರ ಶತನಾಮಾವಲಿಃ ಓಂ ಮಹಾಮನೋನ್ಮಣೀಶಕ್ತ್ಯೈ ನಮಃ । ಓಂ ಶಿವಶಕ್ತ್ಯೈ ನಮಃ । ಓಂ ಶಿವಂಕರ್ಯೈ ನಮಃ । ಓಂ ಇಚ್ಛಾಶಕ್ತಿ ಕ್ರಿಯಾಶಕ್ತಿ ಜ್ಞಾನಶಕ್ತಿ ಸ್ವರೂಪಿಣ್ಯೈ ನಮಃ । ಓಂ ಶಾನ್ತ್ಯತೀತ ಕಲಾನನ್ದಾಯೈ ನಮಃ । ಓಂ ಶಿವಮಾಯಾಯೈ ನಮಃ । ಓಂ ಶಿವಪ್ರಿಯಾಯೈ ನಮಃ । ಓಂ ಸರ್ವಜ್ಞಾಯೈ ನಮಃ । ಓಂ ಸುನ್ದರ್ಯೈ ನಮಃ । ಓಂ ಸೌಮ್ಯಾಯೈ ನಮಃ । 10 । ಓಂ ಸಚ್ಚಿದಾನನ್ದರೂಪಿಣ್ಯೈ ನಮಃ । ಓಂ ಪರಾಪರಾಮಯ್ಯೈ ನಮಃ । ಓಂ ಬಾಲಾಯೈ ನಮಃ । ಓಂ ತ್ರಿಪುರಾಯೈ ನಮಃ । ಓಂ ಕುಂಡಲ್ಯೈ ನಮಃ । ಓಂ ಶಿವಾಯೈ ನಮಃ । ಓಂ ರುದ್ರಾಣ್ಯೈ ನಮಃ । ಓಂ ವಿಜಯಾಯೈ ನಮಃ । ಓಂ ಸರ್ವಾಯೈ ನಮಃ । ಓಂ ಶರ್ವಾಣ್ಯೈ ನಮಃ…

Read More

ಬೆಂಗಳೂರು: ಕಳೆದ ಆರು ದಿನಗಳಿಂದ ರಾಜ್ಯದಾದ್ಯಂತ ಗ್ರಾಮ ಪಂಚಾಯತಿಗಳ ನೌಕಕರು ಹೂಡಿದ್ದ ಮುಷ್ಕರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರು ತೆಗೆದುಕೊಂಡ ನಿರ್ಧಾರಗಳಿಂದ ಸುಖಾಂತ್ಯವಾಗಿದೆ. ಹೀಗಾಗಿ ನಾಳೆಯಿಂದ ಎಂದಿನಂತೆ ಕಚೇರಿ ಕಾರ್ಯಗಳಲ್ಲಿ ನಿರತರಾಗುವುದಾಗಿ ನೌಕರ ಸಂಘದ ಪ್ರತಿನಿಧಿಗಳು ಘೋಷಿಸಿದರು. ನೌಕರರ ಮಹಾ ಒಕ್ಕೂಟ ಹಾಗೂ ಗ್ರಾಮ ಪಂಚಾಯತ್ ಸದಸ್ಯರುಗಳ ಸುಮಾರು 300ಕ್ಕೂ ಹೆಚ್ಚು ಪ್ರತಿನಿಧಿಗಳು ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ತಮ್ಮ ಬೇಢೀಕೆಗಳನ್ನು ಸಚಿವರ ಮುಂದಿರಿಸಿದರು, ಸುಮಾರು 75ಕ್ಕೂ ಹೆಚ್ಚು ಬೇಡಿಕೆಗಳನ್ನು ಮೂರು ಗಂಟೆಗಳ ಕಾಲ ಆಲಿಸಿದ ಸಚಿವರು ಕಾನೂನಿನ ಚೌಕಟ್ಟಿನಲ್ಲಿ ಸಾಧ್ಯವಾಗಬುದಾದ ಎಲ್ಲ ಬೇಡಿಕೆಗಳನ್ನು ಕಾಲಮಿತಿಯಲ್ಲಿ ಆದ್ಯತೆಯ ಮೇಲೆ ಈಡೇರಿಸುವುದಾಗಿ ತಿಳಿಸಿದರು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಬಡ್ತಿ ಹಾಗೂ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ನೌಕರರ ಸಂಘದ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ರಚಿಸುವುದಾಗಿ ಪ್ರಕಟಿಸಿದ ಸಚಿವರು ಮೂರು ತಿಂಗಳ ಕಾಲಮಿತಿಯೊಳಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದರು. ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುವ…

Read More

ಶಿವಮೊಗ್ಗ: ಜಿಲ್ಲೆಯ ಪ್ರಸಿದ್ಧ ದೇವಾಲಯವಾದಂತ ಸಿಗಂದೂರು ಚೌಡೇಶ್ವರಿ ತಾಯಿಯ ದೇಗುಲಕ್ಕೆ ಇಂದು ಸ್ಯಾಂಡಲ್ ವುಡ್ ನಟ ಪ್ರೇಮ್ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ, ತಾಯಿಯ ದರ್ಶನವನ್ನು ಪಡೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಿಯ ಸನ್ನಿಧಿಯಲ್ಲಿ ದಸರಾ ಪ್ರಯುಕ್ತ ದಸರಾ ವೈಭವ ನಡೆಯುತ್ತಿದೆ. ಅಕ್ಟೋಬರ್.8ರಿಂದ ಆರಂಭಗೊಂಡಿದ್ದು, ಅಕ್ಟೋಬರ್.12ರವರೆಗೆ ನಡೆಯಲಿದೆ. ಇಂದು ಸಾಗರ ತಾಲ್ಲೂಕಿನ ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವಂತ ಸಿಗಂಧೂರು ಚೌಡೇಶ್ವರಿ ದೇವಾಲಯಕ್ಕೆ ಸ್ಯಾಂಡಲ್ ವುಡ್ ನಟ ಪ್ರೇಮ್ ಕುಟುಂಬ ಸಮೇತ ದೇವಿಯ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ವಿಶೇಷ ಪೂಜೆಯನ್ನು ಚೌಡೇಶ್ವರಿ ದೇವಿಗೆ ಸಲ್ಲಿಸಿದರು. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು https://kannadanewsnow.com/kannada/good-news-for-state-government-employees-special-permission-to-vote-on-association-elections/ https://kannadanewsnow.com/kannada/good-news-for-property-owners-in-bengaluru-e-khata-to-be-available-at-bengaluru-one-centre-soon/

Read More

ಬೆಂಗಳೂರು: ಕರ್ನಾಟಕದ ಭಾರತೀಯ ಜನತಾ ಪಕ್ಷದ ನಾಯಕರು ಛಲವಾದಿ ನಾರಾಯಣಸ್ವಾಮಿ ರವರಿಗೆ ಹೊಸಕೋಟೆ CA ನಿವೇಶನದ ಬಿರಿಯಾನಿ ಹೋಟೆಲ್ ಹಗರಣ ಕುರಿತು ಸ್ಪಷ್ಟಕಾರಣ ನೀಡಿಲ್ಲ. ವಿರೋಧ ಪಕ್ಷದ ನಾಯಕ ಸ್ಥಾನವನ್ನು ಕಲ್ಪಿಸಿ, ಇದುವರಿಗೆ ಅವರ ಮೇಲೆ ಬಂದಿರುವ ಆರೋಪಗಳಿಗೆ ಸಾರ್ವಜನಿಕವಾಗಿ ಭಾರತೀಯ ಜನತಾ ಪಕ್ಷ ಉತ್ತರ ನೀಡಲು ಸಾಧ್ಯವಾಗಿಲ್ಲ. ಚಲವಾದಿ ನಾರಾಯಣಸ್ವಾಮಿ ರವರು ಕೇವಲ ಪ್ರಚಾರಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುವ ಬದಲು ಇವರ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಸಹಕರಿಸಿ ಅವರ ಸ್ಥಾನಕ್ಕೆ ರಾಜೀನಾಮೆ ನೀಡಿ ಪಾರಾದರ್ಶಕವಾದ ತನಿಖೆಗೆ ಅವಕಾಶ ಕಲ್ಪಿಸಿ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ಆಗ್ರಹಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಭಾರತೀಯ ಜನತಾ ಪಕ್ಷದ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ರವರು ಈ ದಿನ ಪತ್ರಿಕಾಗೋಷ್ಠಿ ಮಾಡುವುದರ ಮೂಲಕ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಮುಖ್ಯಮಂತ್ರಿಗಳಾದ…

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಆಸ್ತಿಗಳಿಗೆ ಇ – ಖಾತಾ ʼಬೆಂಗಳೂರು ಒನ್‌ ಕೇಂದ್ರʼಗಳಲ್ಲೂ ಶೀಘ್ರವೇ ಲಭ್ಯವಾಗಲಿದೆ. ಇ – ಖಾತಾಗಳನ್ನು ಒದಗಿಸಲು ಪಾಲಿಕೆಯ ಪ್ರತಿ ಸಹಾಯಕ ಕಂದಾಯ ಅಧಿಕಾರಿ ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ನಾಗರಿಕರು ಕೇಂದ್ರಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆ ಸಲ್ಲಿಸಿ ಇ – ಖಾತಾ ಪಡೆಯಬಹುದು ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ. https://twitter.com/KarnatakaVarthe/status/1844335490972987429 ಬಿಬಿಎಂಪಿ ಇಆಸ್ತಿ ವ್ಯವಸ್ಥೆಯಲ್ಲಿ ನಿಮ್ಮ ಡ್ರಾಫ್ಟ್ ಇ-ಖಾತಾ ಅನ್ನು ಆನ್ ಲೈನ್ ನಲ್ಲಿ ವೀಕ್ಷಿಸಲು ಹೀಗೆ ಮಾಡಿ (1) ಎಲ್ಲಾ ಕರಡು ಇ-ಖಾತಾಗಳನ್ನು(ಸುಮಾರು 22 ಲಕ್ಷ) ವಾರ್ಡ್ ವಾರು BBMPeAasthi.karnataka.gov.in ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗಿದೆ. (2) ನಿಮ್ಮ ಸ್ವತ್ತಿನ ಆಸ್ತಿ ತೆರಿಗೆಯ ರಶೀದಿಯಿಂದ ನಿಮ್ಮ ವಾರ್ಡ್ ಹೆಸರು ಮತ್ತು ಸಂಖ್ಯೆಯನ್ನು ನೀವು ತಿಳಿದುಕೊಳ್ಳಬಹುದು. (3) ಆನ್‌ಲೈನ್‌ನಲ್ಲಿ ಒಮ್ಮೆ ನೀವು ನಿಮ್ಮ ವಾರ್ಡ್ ಗೆ ಭೇಟಿ ನೀಡಿದರೆ, ಆ ವಾರ್ಡ್ ನ ಎಲ್ಲಾ ಡ್ರಾಫ್ಟ್ ಇ-ಖಾತಾ ಪಟ್ಟಿಮಾಡಲಾಗಿದ್ದು, ಇದು ನಿಮಗೆ ಲಭ್ಯವಿರುತ್ತದೆ. (4) ಮೊದಲಬಾರಿಗೆ…

Read More

ಬೆಂಗಳೂರು: ಮುಂಬರುವ ಕೆಲವೇ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆಗಳು ಆಗಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ರಾಜಕೀಯ ಸಂಚಲನ ಕುರಿತ ಪ್ರಶ್ನೆಗೆ ಉತ್ತರ ನೀಡಿದರು. ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆಗಳನ್ನು ಕಾಣುತ್ತಿದ್ದೇವೆ ಎಂದು ನುಡಿದರು. ದಸರಾ ಬಳಿಕ ಮುಖ್ಯಮಂತ್ರಿ ಬದಲಾವಣೆ ಎಂದು ಹೇಳಿದ್ದೀರಲ್ಲ ಎಂಬ ಪ್ರಶ್ನೆಗೆ ಕ್ಷಿಪ್ರ ರಾಜಕೀಯ ಬದಲಾವಣೆ ಆಗಲಿದೆ ಎಂದು ಹೇಳಿದ್ದೇನೆ; ಅದೆಲ್ಲವೂ ಸೇರಿಕೊಂಡಿವೆ ಎಂದು ತಿಳಿಸಿದರು. ಪಕ್ಷದ ಹಿರಿಯರಿಗೆ ನನ್ನನ್ನು ಅರ್ಥ ಮಾಡಿಕೊಳ್ಳಲು ಸ್ವಲ್ಪ ಸಮಯ ಬೇಕು. ಹಾಗಾಗಿ ನಮ್ಮ ಪಕ್ಷದವರ ಹೇಳಿಕೆಗಳನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಭಾವಿಸುವುದು ತಪ್ಪಾಗುತ್ತದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವುದಾಗಿ ಹೇಳಿದ್ದೇನೆ. ಸ್ವಲ್ಪ ಸಮಯ ಬೇಕಾಗುತ್ತದೆ. ಬರುವ ದಿನಗಳಲ್ಲಿ ಎಲ್ಲವೂ ಒಳ್ಳೆಯದಾಗಲಿದೆ ಎಂದು ಈ ಕುರಿತು ಪ್ರಶ್ನೆಗೆ ಉತ್ತರ ಕೊಟ್ಟರು. ಹುಕ್ಕೇರಿ ಹಿರೇಮಠದ ಪರಮಪೂಜ್ಯ ಷಟಸ್ಥಳ ಬ್ರಹ್ಮ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ…

Read More

ಬೆಂಗಳೂರು: ದೀಪಾವಳಿ ಹಬ್ಬದಲ್ಲಿ ನಿರೀಕ್ಷಿತ ಪ್ರಯಾಣಿಕರ ದಟ್ಟಣೆಯನ್ನು ತೆರವುಗೊಳಿಸಲು, ನೈಋತ್ಯ ರೈಲ್ವೆಯು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ – ಉತ್ತರಾಖಂಡ ರಾಜ್ಯದ ಯೋಗ ನಗರಿ ಋಷಿಕೇಶ ಮತ್ತು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ -ರಾಜ್ಯಸ್ಥಾನದ ಭಗತ್-ಕಿ-ಕೋಠಿ ನಿಲ್ದಾಣಗಳ ನಡುವೆ ವಿಶೇಷ ರೈಲುಗಳನ್ನು ಓಡಿಸಲಿದೆ. ಅವುಗಳ ವಿವರ ಈ ಕೆಳಗಿನಂತಿವೆ: ಹುಬ್ಬಳ್ಳಿ-ಯೋಗ ನಗರಿ ಋಷಿಕೇಶ ನಿಲ್ದಾಣಗಳ ನಡುವೆ 4 ಟ್ರಿಪ್ ವಿಶೇಷ ರೈಲು ಸೇವೆ: ರೈಲು ಸಂಖ್ಯೆ 07363 ಎಸ್ಎಸ್ಎಸ್ ಹುಬ್ಬಳ್ಳಿ-ಯೋಗ ನಗರಿ ಋಷಿಕೇಶ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 14 ರಿಂದ ನವೆಂಬರ್ 4, 2024 ರವರೆಗೆ ಪ್ರತಿ ಸೋಮವಾರ ಎಸ್ಎಸ್ಎಸ್ ಹುಬ್ಬಳ್ಳಿಯಿಂದ 20:30 ಗಂಟೆಗೆ ಹೊರಟು, ಬುಧವಾರ 23:30 ಗಂಟೆಗೆ ಯೋಗ ನಗರಿ ಋಷಿಕೇಶ ತಲುಪಲಿದೆ. ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 07364 ಯೋಗ ನಗರಿ ಋಷಿಕೇಶ-ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 17 ರಿಂದ ನವೆಂಬರ್ 7, 2024 ರವರೆಗೆ ಪ್ರತಿ ಗುರುವಾರ…

Read More

ಬೆಂಗಳೂರು: ನಗರದಲ್ಲಿ ಮುಂಬರುವ ದಸರ ಹಾಗೂ ದೀಪಾವಳಿ ಹಬ್ಬದ ದಿನಗಳಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ಕುರಿತು ಮಾರ್ಗಸೂಚಿಯನ್ನು ಬಿಬಿಎಂಪಿಯಿಂದ ಪ್ರಕಟಿಸಲಾಗಿದೆ. ಅವುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ತಿಳಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿ ತ್ಯಾಜ್ಯ, ಉತ್ಪತ್ತಿಯಾಗುತ್ತದೆಂದು ಅಂದಾಜಿಸಲಾಗಿದ್ದು, ಹಬ್ಬದ ದಿನಗಳಂದು ಹಾಗೂ ನಂತರ ಘನತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ಈ ಕೆಳಕಂಡಂತೆ ವಿಲೇವಾರಿ ಕ್ರಮಗಳನ್ನು ಅನುಸರಿಸಬೇಕಾಗಿರುತ್ತದೆ. 1. ಬಾಳೇಕಂದು, ಮಾವಿನ ಎಲೆ, ಹೂವು ಹಾಗೂ ಇತರೆ ಹಬ್ಬದ ವಸ್ತುಗಳನ್ನು ಮಾರಾಟ ಮಾಡುವ ವ್ಯಾಪಾರಿಗಳಿಗೆ ವಿಶೇಷವಾಗಿ ಮಾರುಕಟ್ಟೆಗಳಲ್ಲಿ ಹಸಿ ಮತ್ತು ಒಣ ತ್ಯಾಜ್ಯವನ್ನು ವಿಂಗಡಿಸಿ ನೀಡಲು ಅರಿವು ಮೂಡಿಸುವುದು. 2. ಮಾರುಕಟ್ಟೆಗಳು ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬದ ಸಾಮಾನುಗಳನ್ನು ಮಾರಾಟ ಮಾಡುವ ವ್ಯಾಪಾರಿಗಳು ಏಕ ಬಳಕೆ ಪ್ಲಾಸ್ಟಿಕ್‌ಗಳನ್ನು ಬಳಸದಂತೆ ನಿಗಾವಹಿಸಲು ವಾರ್ಡ್‌ಗಳಲ್ಲಿ ಘನತ್ಯಾಜ್ಯ ಆರೋಗ್ಯ ಅಧಿಕಾರಿಗಳ ಮತ್ತು ಮಾರ್ಷಲ್‌ಗಳು ತಂಡಗಳನ್ನು ರಚಿಸಿಕೊಂಡು ದಿನಂಪ್ರತಿ…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬಿಜೆಪಿ ಕಾಲದ ಕೋವಿಡ್ ಹಗರಣವನ್ನು ತನಿಖೆ ನಡೆಸಲು ಎಸ್ಐಟಿ ತಂಡ ರಚಿಸುವುದು ಸೇರಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಹಾಗಾದ್ರೇ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಮೆ|| ಮೃಣಾಲ್ ಶುಗರ್ಸ್ ಲಿ., ಪುಡಕಲಕಟ್ಟಿ, ಧಾರವಾಡ ತಾಲ್ಲೂಕು, ಧಾರವಾಡ ಜಿಲ್ಲೆ ಈ ಸಕ್ಕರೆ ಕಾರ್ಖಾನೆಯಿಂದ 7.50 ಕಿ.ಮೀ ತ್ರಿಜ್ಯಾಕಾರದಲ್ಲಿರುವ ಗ್ರಾಮಗಳನ್ನು ಶ್ರೀ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆ ನಿ., ಬೈಲಹೊಂಗಲ ತಾಲ್ಲೂಕು, ಬೆಳಗಾವಿ ಜಿಲ್ಲೆ ಇವರಿಂದ ಹಿಂಪಡೆಯುವುದು ಮತ್ತು ಮರುಹಂಚಿಕೆ ಮಾಡುವುದು ಸಮಂಜಸವಾಗಿರುತ್ತದೆ ಎಂದು ಪರಿಗಣಿಸಿ ಧಾರವಾಡ ಜಿಲ್ಲೆಯ 19 ಗ್ರಾಮಗಳನ್ನು ಕಬ್ಬು ಖರೀದಿಗಾಗಿ ಮರು ಹಂಚಿಕೆ ಮಾಡಿದೆ. • 19 ಗ್ರಾಮಗಳನ್ನು ಶ್ರೀ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆಯಿಂದ ಹಿಂಪಡೆದು ಮೆ|| ಮೃಣಾಲ್ ಶುಗರ್ಸಗೆ ಮೀಸಲು ಕ್ಷೇತ್ರವನ್ನಾಗಿ ಹಂಚಿಕೆ ಮಾಡಲಾಗಿದೆ. • ಪುಡಕಲಕಟ್ಟೆ, ಉಪ್ಪಿನ ಬೆಟಗೇರಿ,…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿ ರಾಘವೇಂದ್ರ ಡೆವಲಪರ್ಸ್ ನಿಂದ ಲೇಔಟ್ ಮಾಡಲಾಗಿದೆ. ಈ ಲೇಔಟ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಸತ್ಯಕ್ಕೆ ದೂರವಾದಂತ ಸುದ್ದಿಗಳು ಹರಿದಾಡುತ್ತಿದ್ದವು. ಈ ಬಗ್ಗೆ ರಾಘವೇಂದ್ರ ಡೆವಲಪರ್ಸ್ ಮಾಲೀಕ ಪ್ರದೀಪ್ ಕುಮಾರ್ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಅದು ಏನು ಅಂತ ಮುಂದೆ ಓದಿ. ಇಂದು ಈ ಕುರಿತಂತೆ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಸಾಗರ ಜನತೆಗೆ ನಮಸ್ಕಾರ. ನಾನು ಪ್ರದೀಪ್ ಕುಮಾರ್. ರಾಘವೇಂದ್ರ ಡೆವಲಪರ್ಸ್ ಮಾಲೀಕನಾಗಿದ್ದೇನೆ. ನಾನು ಸಾಗರ ನಗರಸಭೆ ವ್ಯಾಪ್ತಿಯನ್ನು ಒಳಗೊಂಡ ವಿಜಯನಗರ 2ನೇ ಹಂತದಲ್ಲಿ 4 ಎಕರೆ ಜಮೀನನ್ನು ಜಂಟಿ ಅಭಿವೃದ್ಧಿ ಮಾಡಲು ಮಾಲೀಕರಾದಂತ ಅನಿಲ್ ಕುಮಾರ್ ಅವರಿಂದ ಖರೀದಿಸಿರುತ್ತೇನೆ ಎಂದಿದ್ದಾರೆ. ಸಾಗರದ ಸಬ್ ರಿಜಿಸ್ಟಾರ್ ಕಚೇರಿಯಲ್ಲಿ ಈ ಸಂಬಂಧ ನೋಂದಾಯಿಸಿಕೊಳ್ಳಲಾಗಿದೆ. ಒಪ್ಪಂದದಂತೆ ನನ್ನ ಬ್ಯಾಂಕ್ ಖಾತೆಯಿಂದ ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಲಾಗಿರುತ್ತದೆ. ಒಪ್ಪಂದದ ಪ್ರಕಾರ ನಾನು ರಸ್ತೆ, ಚರಂಡಿ, ಯುಜಿಡಿ, ವಿದ್ಯುತ್ ಕಂಬಗಳನ್ನು ಕೂಡ ಅಳವಡಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ. ಜಂಟಿ ಅಭಿವೃದ್ಧಿಯ…

Read More