Author: kannadanewsnow09

ಹುಬ್ಬಳ್ಳಿ: ಜಿಲ್ಲೆಯಲ್ಲಿ ಹೊಸ ವರ್ಷದ ದಿನವೇ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಹಾಡ ಹಗಲೇ ಯುಕವನೊಬ್ಬನಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹುಬ್ಬಳ್ಳಿಯ ಅಯೋಧ್ಯೆ ನಗರದಲ್ಲಿ ಇಂದು ಹಾಡ ಹಗಲೇ ಯುವಕನೊಬ್ಬನಿಗೆ ಚಾಕುವಿನಿಂದ ಇರಿಯಲಾಗಿದೆ. ಆ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿಯಲಾಗಿದೆ ಎನ್ನಲಾಗುತ್ತಿದೆ. ಚಾಕು ಇರಿತಕ್ಕೆ ಒಳಗಾದಿದ್ದಂತ ಮಾರುತಿ ಎಂಬ ಯುವಕನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಸಂಬಂಧ ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/state-government-announces-development-and-environmental-journalism-awards-for-2017-to-2023/ https://kannadanewsnow.com/kannada/mother-four-sisters-murder-arshad-wanted-to-become-hindu/

Read More

ಬೆಂಗಳೂರು: ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರವರೆಗಿನ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಈ ಪ್ರಶಸ್ತಿಗಳನ್ನು ಸರ್ಕಾರವು 2001ನೇ ಸಾಲಿನಿಂದ ಪ್ರಾರಂಭಿಸಿದ್ದು, 2016 ರವರೆಗೆ ನಾಡಿನ 32 ಜನ ಹಿರಿಯ ಪತ್ರಕರ್ತರು ಈ ಎರಡೂ ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ. ಕೋವಿಡ್ ಹಾಗೂ ಇತರೆ ಕಾರಣಗಳಿಂದ ವಿಳಂಬವಾಗಿದ್ದ 2017ರಿಂದ 2023ರ ವರೆಗಿನ ಏಳು ವರ್ಷಗಳ ಅವಧಿಯ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರನ್ನು ಹಿರಿಯ ಪತ್ರಕರ್ತರಾದ ಸನತ್ ಕುಮಾರ್ ಬೆಳಗಲಿ ಹಾಗೂ ಕೆ.ಶಿವಕುಮಾರ್ ಅವರಿದ್ದ ಸಮಿತಿಯು ಆಯ್ಕೆ ಮಾಡಿದೆ. ಪ್ರಶಸ್ತಿಯು ತಲಾ ಒಂದು ಲಕ್ಷ ರೂಪಾಯಿ ನಗದು, ಸ್ಮರಣಿಕೆ, ಅಭಿನಂದನಾ ಪತ್ರ ಒಳಗೊಂಡಿರುತ್ತದೆ. ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ವಿಜೇತರ ವಿವರ ಹೀಗಿದೆ… ವಿಜಯಲಕ್ಷ್ಮಿ ಶಿಬರೂರು (2017) : ಮೂಲತ: ದಕ್ಷಿಣ ಕನ್ನಡ ಜಿಲ್ಲೆಯ ಶಿಬರೂರು ಗ್ರಾಮದವರಾದ ವಿಜಯಲಕ್ಷ್ಮಿ ಅವರು, ಕಳೆದ ಸುಮಾರು 25 ವರ್ಷಗಳಿಂದ ನಾಡಿನ ವಿವಿಧ ಮಾಧ್ಯಮಗಳಿಗೆ ಸೇವೆ…

Read More

ಶಿವಮೊಗ್ಗ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಪಿಹೆಚ್‌ಡಿ ಅಧ್ಯಯನ ಪ್ರಾರಂಭಿಸಿರುವ ಅರ್ಹ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ /ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ. 2024-25 ನೇ ಸಾಲಿನಲ್ಲಿ ಪ್ರಥಮ ಪೂರ್ಣಾವಧಿ ಪಿಎಚ್‌ಡಿ ಅಧ್ಯಯನಲ್ಲಿ ಪ್ರಾರಂಭಿಸಿರುವ (ಜ. 10-01-2024 ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್‌ಡಿ ಪ್ರಾರಂಭಿಸಿರಬೇಕು) ಹಾಗೂ ಕರ್ನಾಟಕ ಶಾಸನ ಬದ್ಧ ವಿಶ್ವವಿದ್ಯಾಲಯಗಳಲ್ಲಿ /ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್‌ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶವಿದೆ. ಅರ್ಜಿ ಸಲ್ಲಿಸಲು ಜ.20 ಕಡೆಯ ದಿನವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಆನ್‌ಲೈನ್ ಅರ್ಜಿ ಪ್ರತಿಯೊಂದಿಗೆ ಒಂದು ಸೆಟ್ ಅಧಿಕೃತ ದಾಖಲೆಗಳನ್ನು ಸಂಬAಧಪಟ್ಟ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ವೆಬ್‌ಸೈಟ್ https://www.bcwd.karnataka.gov.in , ಸಹಾಯವಾಣಿ : 8050770004 ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ…

Read More

ಬೆಂಗಳೂರು: ಸಚಿನ್ ಬರೆದಿಟ್ಟ 7 ಪುಟಗಳ ಡೆತ್ ನೋಟಿನಲ್ಲಿ 2-3 ಬಾರಿ ಪ್ರಿಯಾಂಕ್ ಖರ್ಗೆಯವರ ಹೆಸರು ಪ್ರಸ್ತಾಪವಾಗಿದೆ. ಜೊತೆಗೆ ಎಫ್‍ಎಸ್‍ಎಲ್ ವರದಿಯಲ್ಲೂ ಡೆತ್ ನೋಟ್ ಅಸಲಿ ಎಂದು ದೃಢಪಟ್ಟಿದೆ. ದಾಖಲೆ ಕೊಡಿ ಎಂದರೆ ಇನ್ನೇನು ದಾಖಲೆ ಬೇಕು ನಿಮಗೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಾಖಲೆ ಇಲ್ಲದ ಕಾರಣ ಸಚಿವ ಸ್ಥಾನದಿಂದ ಕೈಬಿಡುವ ವಿಚಾರ ಉದ್ಭವಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಮುಖ್ಯಮಂತ್ರಿಗಳೇ ಇದು ನಮಗೆ ಮೊದಲೇ ಗೊತ್ತಿದೆ. ನಿಮಗೆ ಧೈರ್ಯ ಇಲ್ಲ ಎಂಬುದು ನಮಗೆ ಗೊತ್ತಿದೆ ಎಂದು ಟೀಕಿಸಿದರು. ಆ ಸಚಿವರ ತಂದೆಯವರು ಎಐಸಿಸಿ ಅಧ್ಯಕ್ಷರು. ನೀವು ಇದಕ್ಕೆ ಕೈ ಹಾಕಿದರೆ ಅವರು ನಿಮ್ಮ ಬುಡಕ್ಕೆ ಕೈ ಹಾಕುವ ಭಯ ನಿಮಗಿದೆ ಎಂದು ವಿಶ್ಲೇಷಿಸಿದರು. ನೀವು ಕುರ್ಚಿಗೆ ಅಂಟಿ ಕುಳಿತವರು. ಇಷ್ಟೊತ್ತಿಗೆ ನೀವು ಅವರನ್ನು ವಜಾ ಮಾಡಬೇಕಿತ್ತು. ರಾಜೀನಾಮೆ ಪಡೆಯಬೇಕಾಗಿತ್ತು. ಬೇರೆ…

Read More

ಧನ, ಹೆಸರು, ಕೀರ್ತಿ, ಅಂತಸ್ತು ಮುಂತಾದ ಸಕಲ ಭಾಗ್ಯಗಳನ್ನು ಪಡೆಯಲು ಬ್ರಾಹ್ಮೀ ಮುಹೂರ್ತದ ಸಮಯದಲ್ಲಿ ಮಾತ್ರ ಈ ಲಕ್ಷ್ಮೀ ಮಂತ್ರವನ್ನು 21 ದಿನಗಳ ಕಾಲ ಪಠಿಸಿ. ನೀವು ಎಂದಿಗೂ ನಿರೀಕ್ಷಿಸದ ಸಂಪತ್ತು ಮತ್ತು ಸಮೃದ್ಧಿಯ ಜೀವನವನ್ನು ನೀವು ಬದುಕಬಹುದು. ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಹಣ, ಹೆಸರು, ಕೀರ್ತಿ, ಅಂತಸ್ತು ಹೀಗೆ ಎಲ್ಲರ ಮುಂದೆ ಗೌರವದಿಂದ ಬಾಳಲು ಬಯಸುತ್ತಾರೆ ಮತ್ತು ಅದಕ್ಕಾಗಿ ನಾವು ಪ್ರತಿದಿನ ಮಾಡಬಹುದಾದ ಎಲ್ಲಾ ಕೆಲಸಗಳು ಪ್ರಯತ್ನ ಮತ್ತು ಹೋರಾಟವಾಗಿದೆ. ಎಷ್ಟೇ ಪ್ರಯತ್ನ ಪಟ್ಟರೂ ಎಲ್ಲರೂ ಈ ರೀತಿ ಬದುಕಲು ಸಾಧ್ಯವಿಲ್ಲ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ…

Read More

ಬೆಂಗಳೂರು: ನಿನ್ನೆ ಹೊಸ ವರ್ಷಾಚರಣೆಯ ಸಂಭ್ರಮದ ವೇಳೆಯಲ್ಲಿ ಬಿಎಂಟಿಸಿಗೆ ಭರ್ಜರಿ ಆದಾಯವೇ ಹರಿದು ಬಂದಿದೆ. ನಿನ್ನೆ ಒಂದೇ ದಿನ 35 ಲಕ್ಷ ಜನರು ಬಿಎಂಟಿಸಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದು, ಬರೋಬ್ಬರಿ 5 ಕೋಟಿ ಆದಾಯ ಬಂದಿದೆ. ಬೆಂಗಳೂರಲ್ಲಿ ನಿನ್ನೆ ರಾತ್ರಿಯಂದು ಹೊಸ ವರ್ಷಾಚರಣೆಯನ್ನು ಜನರು ಸಂಭ್ರಮದಿಂದ ಆಚರಿಸಿದರು. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ವಿವಿಧೆಡೆಯಲ್ಲೇ ಜನ ಸಾಗರವೇ ಸೇರಿತ್ತು. ನಗರದ ವಿವಿಧೆಡೆಗಳಿಂದ ಆಗಮಿಸಿದ್ದಂತ ಜನರು ಹೊಸ ವರ್ಷಾಚರಣೆಯನ್ನು ಆಚರಿಸಿ ಸಂಭ್ರಮಿಸಿದರು. ಇವರ ಅನುಕೂಲಕ್ಕಾಗಿ ಹೆಚ್ಚುವರಿ ಬಿಎಂಟಿಸಿ ಬಸ್ ಸಂಚಾರದ ವ್ಯವಸ್ಥೆ ಕೂಡ ಮಾಡಲಾಗಿತ್ತು. ನಿನ್ನೆ ಒಂದೇ ದಿನ 35 ಲಕ್ಷ ಜನರು ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣಿಸಿದ್ದಾರೆ. ಹೀಗಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಬರೋಬ್ಬರಿ ರೂ.5,48,89,254 ಕೋಟಿ ಆದಾಯ ಬಂದಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/karnatakas-prestigious-ksrtc-bags-9-national-level-awards/ https://kannadanewsnow.com/kannada/sagarotsava-2025-to-be-held-at-sagar-on-jan-5-bhoomanni-basket-competition-miracle-show-to-be-held/ https://kannadanewsnow.com/kannada/breaking-yadgir-man-hacked-to-death-with-knife/

Read More

ಬೆಂಗಳೂರು: ಕರ್ನಾಟಕದ ಹೆಮ್ಮೆಯ KSRTCಗೆ ಪ್ರಶಸ್ತಿಗಳ ಸರಮಾಲೆ ಮುಂದುವರೆದಿದೆ. ಈಗಾಗಲೇ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಂತ ಕೆ ಎಸ್ ಆರ್ ಟಿಸಿ ಇದೀಗ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿಯನ್ನು ನಿಗಮ ಹಂಚಿಕೊಂಡಿದ್ದು, ಕೆ ಎಸ್ ಆರ್ ಟಿ ಸಿ ಗೆ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ಪಡೆದಿದೆ. ಅವುಗಳಲ್ಲಿ 6 AdWorld Showdown ಚಿನ್ನದ ಪ್ರಶಸ್ತಿ, 2 Grow Care India ಹಾಗೂ 1 PRSI ರಾಷ್ಟ್ರೀಯ ಪ್ರಶಸ್ತಿ-2024 ಸೇರಿವೆ ಎಂದಿದೆ. AdWorld Showdown ಪ್ರಶಸ್ತಿಗಳು ಈ ಕೆಳಗಿನ ವಿಭಾಗಗಳಲ್ಲಿ ಲಭಿಸಿರುತ್ತದೆ ಎಂದು ಹೇಳಿದೆ. 1. ಅಶ್ವಮೇಧ ಕ್ಲಾಸಿಕ್ ಬಸ್ಸುಗಳ ಪರಿಚಯ- ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಉಪಕ್ರಮ 2. ಅಂಬಾರಿ ಉತ್ಸವ ಬಸ್ ಅತ್ಯುತ್ತಮ ಬ್ರಾಂಡ್ ಅನುಭವ. 3. ಅಶ್ವಮೇಧ ಕ್ಲಾಸಿಕ್ ಬಸ್ಸುಗಳು- ಅತ್ಯುತ್ತಮ ಕಾರ್ಪೊರೇಟ್ ಸಂವಹನ ಹಾಗೂ ನಿರ್ವಹಣೆ 4. ಪಲ್ಲಕ್ಕಿ ಬಸ್ಸುಗಳ -ಅತ್ಯುತ್ತಮ ಗ್ರಾಹಕ ಸ್ವೀಕೃತಿ 5. ಪ್ರತಿಷ್ಠಿತ ಬಸ್ಸು ಸೇವೆಗಳ…

Read More

ನ್ಯೂ ಓರ್ಲಿಯನ್ಸ್: ಹೊಸ ವರ್ಷದ ದಿನದಂದು ಕಾರು ಜನರ ಗುಂಪಿಗೆ ಡಿಕ್ಕಿ ಹೊಡೆದ ಪರಿಣಾಮ 10 ಜನರು ಸಾವನ್ನಪ್ಪಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಡಬ್ಲ್ಯುಜಿಎನ್ಒ ಪ್ರಕಾರ, ಮುಂಜಾನೆ 3: 15 ರ ಸುಮಾರಿಗೆ ನ್ಯೂ ಓರ್ಲಿಯನ್ಸ್ನ ಬೋರ್ಬನ್ ಸ್ಟ್ರೀಟ್ ಮತ್ತು ಐಬರ್ವಿಲ್ಲೆ ಜಂಕ್ಷನ್ ಬಳಿ ಎಸ್ಯುವಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಬೋರ್ಬನ್ ಸ್ಟ್ರೀಟ್ ಅನ್ನು ನಿರ್ಬಂಧಿಸಲಾಗಿದೆ ಮತ್ತು ತುರ್ತು ಸಿಬ್ಬಂದಿಯನ್ನು ಘಟನಾ ಸ್ಥಳಕ್ಕೆ ಕರೆತರಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. https://twitter.com/TheInsiderPaper/status/1874411695407509751 ಬೋರ್ಬನ್ ಸ್ಟ್ರೀಟ್ನಲ್ಲಿ ಟ್ರಕ್ ಹೆಚ್ಚಿನ ವೇಗದಲ್ಲಿ ಜನಸಮೂಹಕ್ಕೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಸಿಬಿಎಸ್ ನ್ಯೂಸ್ನ ಕಾಟಿ ವೀಸ್ಗೆ ತಿಳಿಸಿದ್ದಾರೆ. ಇದರ ನಂತರ, ಚಾಲಕ ವಾಹನದಿಂದ ಹೊರಬಂದು ಗುಂಡು ಹಾರಿಸಲು ಪ್ರಾರಂಭಿಸಿದನು, ಮತ್ತು ಪೊಲೀಸರು ಪ್ರತಿದಾಳಿ ನಡೆಸಿದರು. ಏತನ್ಮಧ್ಯೆ, ಸಾಮಾಜಿಕ ಮಾಧ್ಯಮ ಸೈಟ್ ಎಕ್ಸ್ ನಲ್ಲಿನ ವರದಿಗಳು ಅಪಘಾತದಲ್ಲಿ ಕನಿಷ್ಠ 10 ಅಥವಾ ಹೆಚ್ಚಿನ ಜನರು ಸಾವನ್ನಪ್ಪಿದ್ದಾರೆ ಎಂದು ಸೂಚಿಸಿದೆ. https://twitter.com/Seno_Vibes/status/1874418678894301407…

Read More

ನ್ಯೂ ಓರ್ಲಿಯನ್ಸ್: ಇಲ್ಲಿನ ಫ್ರೆಂಚ್ ಕ್ವಾರ್ಟರ್ನ ಬೋರ್ಬನ್ ಸ್ಟ್ರೀಟ್ನಲ್ಲಿ ಬುಧವಾರ ಮುಂಜಾನೆ ವಾಹನವೊಂದು ಹೆಚ್ಚಿನ ವೇಗದಲ್ಲಿ ಜನಸಮೂಹಕ್ಕೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಇದು ಸಾಮೂಹಿಕ ಸಾವುನೋವು ಘಟನೆಗೆ ಕಾರಣವಾಯಿತು ಎಂದು ಬಿಬಿಸಿಯ ಯುಎಸ್ ಪಾಲುದಾರ ಸಿಬಿಎಸ್ ನ್ಯೂಸ್ ತಿಳಿಸಿದೆ. ನಂತರ ಚಾಲಕ ವಾಹನದಿಂದ ಹೊರಬಂದು ಆಯುಧವನ್ನು ಹಾರಿಸಲು ಪ್ರಾರಂಭಿಸಿದನು. ಇದರಿಂದಾಗಿ ಪೊಲೀಸರು ಗುಂಡು ಹಾರಿಸಲು ಪ್ರೇರೇಪಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಅನೇಕ ವ್ಯಕ್ತಿಗಳು ಗಾಯಗಳೊಂದಿಗೆ ನೆಲದ ಮೇಲೆ ಕಂಡುಬಂದಿದ್ದಾರೆ. ನ್ಯೂ ಓರ್ಲಿಯನ್ಸ್ ಪೊಲೀಸ್ ಇಲಾಖೆಯ ವಕ್ತಾರರು ಸಿಬಿಎಸ್ ನ್ಯೂಸ್ಗೆ ಖಚಿತಪಡಿಸಿದ್ದು, ಆರಂಭಿಕ ವರದಿಗಳು ಕಾರು ಜನರ ಗುಂಪಿಗೆ ಡಿಕ್ಕಿ ಹೊಡೆದಿರಬಹುದು ಎಂದು ಸೂಚಿಸುತ್ತವೆ. ಗಾಯಗಳ ಪ್ರಮಾಣ ಅಸ್ಪಷ್ಟವಾಗಿದ್ದರೂ, ಸಾವುನೋವುಗಳು ವರದಿಯಾಗಿವೆ. ಘಟನೆ ಇನ್ನೂ ತನಿಖೆಯಲ್ಲಿದೆ ಮತ್ತು ಹೆಚ್ಚಿನ ವಿವರಗಳನ್ನು ಸಂಗ್ರಹಿಸಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಸದ್ಯದ ಮಾಹಿತಿಯ ಪ್ರಕಾರ ಒಬ್ಬರು ಸಾವನ್ನಪ್ಪಿದ್ದು, ಇನ್ನೂ ಹಲವರು ಗಾಯಗೊಂಡಿರೋದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. https://kannadanewsnow.com/kannada/new-years-eve-15-mt-of-waste-collected-in-and-around-mg-road-in-bengaluru/ https://kannadanewsnow.com/kannada/fir-lodged-against-ct-ravi-13-others-for-poster-campaign-against-priyank-kharge/…

Read More

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಂಬಂಧ ಬಿಜೆಪಿಯಿಂದ ಪೋಸ್ಟರ್ ಅಭಿಯಾನವನ್ನು ಆರಂಭಿಸಲಾಗಿತ್ತು. ಬೆಂಗಳೂರಿನ ಹಲವೆಡೆ ಗೋಡೆಗಳಿಗೆ ಬಿಜೆಪಿಯಿಂದ ಪೋಸ್ಟರ್ ಕೂಡ ಅಂಟಿಸಲಾಗಿತ್ತು. ಈ ಹಿನ್ನಲೆಯಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ, ಎನ್.ರವಿಕುಮಾರ್ ಸೇರಿದಂತೆ 13 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿಯಿಂದ ಪೋಸ್ಟರ್ ಅಭಿಯಾನ ನಡೆಸಲಾಗಿತ್ತು. ಈ ಹಿನ್ನಲೆಯಲ್ಲಿ ಪಿಎಸ್ಐ ಶಶಿಧರ ವಣ್ಣೂರ ಅವರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಸಿ.ಟಿ ರವಿ ಸೇರಿದಂತೆ 13 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪರಿಷತ್ ಸದಸ್ಯ ಸಿ.ಟಿ ರವಿ, ಎನ್ ರವಿ ಕುಮಾರ್ ಸೇರಿದಂತೆ ಇತರೆ 13 ಬಿಜೆಪಿ ಮುಖಂಡರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಕ್ರಮವಾಗಿ ರಸ್ತೆಯಲ್ಲಿ ಗುಂಪು ಸೇರಿ ಸಾರ್ವಜನಿಕರಿಗೆ ಅಡ್ಡಿ ಆರೋಪದಲ್ಲಿ ಈ ಕೇಸ್ ದಾಖಲಾಗಿದೆ. https://kannadanewsnow.com/kannada/new-years-eve-15-mt-of-waste-collected-in-and-around-mg-road-in-bengaluru/ https://kannadanewsnow.com/kannada/sagarotsava-2025-to-be-held-at-sagar-on-jan-5-bhoomanni-basket-competition-miracle-show-to-be-held/

Read More