Author: kannadanewsnow09

ಬೆಂಗಳೂರು: ಬೆಂಗಳೂರು ನಗರದಲ್ಲಿ ಬಿಬಿಎಂಪಿ ಖಾತಾ ಹೊಂದಿರದ ಸುಮಾರು 5 ಲಕ್ಷಕ್ಕೂ ಹೆಚ್ಚು ಸ್ವತ್ತುಗಳು ಇರಬಹುದೆಂದು ನಿರೀಕ್ಷಿಸಲಾಗಿದ್ದು, ಈ ಸ್ವತ್ತುಗಳು ಇಲ್ಲಿಯವರೆಗೆ ಯಾವುದೇ ಖಾತಾವಿಲ್ಲದೆ ಸಬ್ ರಿಜಿಸ್ಟ್ರಾರ್ ಕಛೇರಿಗಳಲ್ಲಿ ವಹಿವಾಟು ನಡೆಸುತ್ತಿದ್ದು, ಅವುಗಳಲ್ಲಿ ಹಲವು ಸ್ವತ್ತುಗಳು ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿವೆ. ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಈ 5 ಲಕ್ಷಕ್ಕೂ ಹೆಚ್ಚು ಸ್ವತ್ತುಗಳನ್ನು ಪಾಲಿಕೆಯ ತೆರಿಗೆ ವ್ಯಾಪ್ತಿಗೆ ತರುವ ಮತ್ತು ಅರ್ಹತೆ ಹೊಂದುವ ಎಲ್ಲಾ ಸ್ವತ್ತುಗಳಿಗೂ ಬಿಬಿಎಂಪಿ ವತಿಯಿಂದ ಹೊಸ ಖಾತಾ ನೀಡುವ ದೂರದೃಷ್ಟಿಯೊಂದಿಗೆ ಮುನ್ನಡೆದಿದ್ದಾರೆ. ಅದರಂತೆ, ಪಾಲಿಕೆಯು ಆನ್‌ಲೈನ್ ವ್ಯವಸ್ಥೆಯನ್ನು ಜಾರಿ ಮಾಡಿದ್ದು, ನಾಗರೀಕರುಗಳು ಹೊಸ ಖಾತಾ ಪಡೆಯುವ ಸಲುವಾಗಿ ತಮ್ಮ (i) ಮಾರಾಟ/ನೋಂದಣಿ ಪತ್ರ (ii) ಆಧಾರ್ (iii) ಇಸಿ ಪ್ರಮಾಣ ಪತ್ರ (iv) ಆಸ್ತಿ ಫೋಟೊ (v) ಬೆಸ್ಕಾಂ ಐಡಿಗಳನ್ನು ಸಲ್ಲಿಸಬಹುದಾಗಿದೆ. ನೀವು ಬಿಬಿಎಂಪಿಯ ಖಾತೆಯನ್ನು ಹೊಂದಿರದಿದ್ದಲ್ಲಿ ದಯವಿಟ್ಟು ಆನ್‌ಲೈನ್ ಮೂಲಕ ಅರ್ಜಿಯನ್ನು ಬಿಬಿಎಂಪಿಯ ಜಾಲತಾಣವಾದ @ https://bbmp.karnataka.gov.in/newkhata ರಲ್ಲಿ ಸಲ್ಲಿಸಬಹುದು. (ಸೂಚನೆ: ಒಂದು…

Read More

ನವದೆಹಲಿ: ಪೊಂಗಲ್ ಮತ್ತು ಮಕರ ಸಂಕ್ರಾಂತಿ ಹಬ್ಬಗಳ ಕಾರಣ ಬುಧವಾರ (ಜನವರಿ 15, 2025)ದ ನಾಳೆ ನಿಗದಿಯಾಗಿದ್ದ ಯುಜಿಸಿ-ನೆಟ್ ಪರೀಕ್ಷೆಯನ್ನು ( UGC-NET examination ) ಮುಂದೂಡಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency – NTA) ಪ್ರಕಟಿಸಿದೆ. ಪರೀಕ್ಷೆಯ ಹೊಸ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಎನ್ಟಿಎ ತಿಳಿಸಿದೆ. 2025 ರ ಜನವರಿ 15 ರಂದು ಪೊಂಗಲ್, ಮಕರ ಸಂಕ್ರಾಂತಿ ಮತ್ತು ಇತರ ಹಬ್ಬದ ಕಾರಣದಿಂದಾಗಿ ಯುಜಿಸಿ – ನೆಟ್ ಡಿಸೆಂಬರ್ 2024 ಪರೀಕ್ಷೆಯನ್ನು ಮುಂದೂಡಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ಮನವಿ ಬಂದಿದೆ ಎಂದು ಎನ್ಟಿಎ ಹೇಳಿಕೆಯಲ್ಲಿ ತಿಳಿಸಿದೆ. “ಆಕಾಂಕ್ಷಿಗಳ ಹಿತದೃಷ್ಟಿಯಿಂದ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) 2025 ರ ಜನವರಿ 15 ರಂದು ನಿಗದಿಯಾಗಿದ್ದ ಯುಜಿಸಿ-ನೆಟ್ ಡಿಸೆಂಬರ್ 2024 ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಿದೆ. ಪರೀಕ್ಷೆಯ ಹೊಸ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು” ಎಂದು ಅದು ಹೇಳಿದೆ.

Read More

ಪಡ್ಡೆಹುಲಿ ಖ್ಯಾತಿಯ ಶ್ರೇಯಸ್ ಮಂಜು ನಟಿಸಿರುವ ಚಿತ್ರ `ದಿಲ್ ದಾರ್’. ಆರಂಭಿಕವಾಗಿ ಕೆಲ ಮಾಹಿತಿ ನೀಡಿದ್ದ ಚಿತ್ರತಂಡ ಯಾವ ಭರಾಟೆಗಳೂ ಇಲ್ಲದೆ ತಣ್ಣಗೆ ಈ ಚಿತ್ರದ ಚಿತ್ರೀಕರಣ ಮುಗಿಸಿಕೊಂಡಿದೆ. ಮಧು ಗೌಡ ಗಂಗೂರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಹಾಡೊಂದು ಮಾತ್ರವೇ ಸದ್ಯ ಬಾಕಿ ಉಳಿದುಕೊಂಡಿದೆ. ಈ ಹಂತ ದಾಟಿಕೊಂಡರೂ ಸದರಿ ಸಿನಿಮಾ ನಾಯಕಿಯ ಬಗ್ಗೆ ಚಿತ್ರತಂಡ ಗೌಪ್ಯತೆ ಕಾಪಾಡಿಕೊಂಡಿತ್ತು. ಕಡೆಗೂ ಕೀರ್ತಿ ಕೃಷ್ಣ ಶ್ರೇಯಸ್ ಗೆ ನಾಯಕಿಯಾಗಿ ನಟಿಸಿದ್ದಾರೆಂಬ ಅಧಿಕೃತ ಮಾಹಿತಿಯನ್ನು ಇದೀಗ ಜಾಹೀರು ಮಾಡಲಾಗಿದೆ! ಕೀರ್ತಿ ಕೃಷ್ಣ ಇತ್ತೀಚೆಗಷ್ಟೇ ಚಿತ್ರರಂಗದಲ್ಲಿ ಮೆಲುವಾಗಿ ಕೇಳಿಸುತ್ತಿರೋ ಹೆಸರು. ವಿಶೇಷವೆಂದರೆ, ಈಕೆ ನಟ ಶರಣ್ ಅವರ ಸೊಸೆ. ಅವರ ತಂಗಿ ಉಷಾ ಕೃಷ್ಣ ಅವರ ಮಗಳು ಕೀರ್ತಿ ಕೃಷ್ಣ. ಸಿಂಪಲ್ ಸುನಿ ಮುಂಬರುವ ಚಿತ್ರಕ್ಕೂ ನಾಯಕಿಯಾಗಿ ಆಯ್ಕೆಯಾಗಿರುವ ಕೀರ್ತಿ, ಈಗಾಗಲೇ ದಿಲ್ ದಾರ್ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ಒಂದೊಳ್ಳೆ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆಂಬ ಮೆಚ್ಚುಗೆ ಚಿತ್ರತಂಡದಲ್ಲಿದೆ. ಒಂದು ವಿರಳ ಪ್ರೇಮ ಕಥೆಗೆ…

Read More

ಶಿವಮೊಗ್ಗ: ಸಾಗರ ತಾಲ್ಲೂಕಿನ ಸಾರ್ವಜನಿಕರ ಸಮಸ್ಯೆ ಬಗ್ಗೆ ದೇಶಿ ಸೇವಾ ಬ್ರಿಗೆಡ್ ಸಂಘಟನೆ ಮೂಲಕ ಉಪ ವಿಭಾಗಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ ಸಮಸ್ಯೆ ಪರಿಹಾರವಾಗಿಲ್ಲ. ಹೀಗಾಗಿ ದೇಶಿ ಸೇವಾ ಬ್ರಿಗೇಡ್ ಮೂಲಕ ಪ್ರತಿಭಟನೆಯ ಹೋರಾಟಕ್ಕೆ ಇಳಿಯುವುದಾಗಿ ಅಧ್ಯಕ್ಷ ಶ್ರೀಧರ್ ಮೂರ್ತಿ ಎಚ್ಚರಿಸಿದ್ದಾರೆ. ಇಂದು ಸಾಗರ ನಗರದ ಅಣಲೆಕೊಪ್ಪದಲ್ಲಿರುವಂತ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಸಾರ್ವಜನಿಕರ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ದೇಶಿ ಸೇವಾ ಬ್ರಿಗೇಡ್ ಸಂಘಟನೆಯನ್ನು ಹುಟ್ಟು ಹಾಕಲಾಗಿದೆ. ಈ ಸಂಘಟನೆಯ ಮೂಲಕ ಸರ್ಕಾರಿ ಕಚೇರಿಯಲ್ಲಿನ ಲಂಚಾವತಾರ, ಜನರ ಸಮಸ್ಯೆಗಳ ಬಗ್ಗೆ ಧ್ವನಿಯಾಗುವ ಕೆಲಸ ಮಾಡಲಾಗುತ್ತದೆ. ಆ ನಿಟ್ಟಿನಲ್ಲಿ ನಾವು ಸ್ವಯಂ ಸೇವಕರಂತೆ ಕೆಲಸ ಮಾಡುವುದಾಗಿ ಹೇಳಿದರು. ಸಾಗರದ ಎಸಿ ಅವರ ಮೂಲಕ ಈಗಾಗಲೇ ಬಹಳಷ್ಟು ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಮಾಡಲಾಗಿತ್ತು. ಆದರೇ ಈವರೆಗೆ ಅನೇಕ ಸಮಸ್ಯೆ ಪರಿಹರಿಸುವಂತ ಕೆಲಸವನ್ನು ಸಾಗರದ ಉಪವಿಭಾಗಾಧಿಕಾರಿಗಳು ಮಾಡಿಲ್ಲ. ಸಾಗರದ ಆಡಳಿತ ವ್ಯವಸ್ಥೆ ಅಸಾಯಕವಾಗಿದೆ. ಹೀಗಾಗಿ ಇದಕ್ಕೆ ಚುರುಕು ಮುಟ್ಟಿಸುವ ಕೆಲಸವನ್ನು…

Read More

ಬೆಂಗಳೂರು: ಎಲ್ಲಾ ಪಕ್ಷದ ಶಾಸಕರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಂಫರ್ ಗಿಫ್ಟ್ ನೀಡಿದ್ದಾರೆ. ಶಾಸಕರಿಗೆ ತಲಾ 10 ಕೋಟಿ ಅನುದಾವನವನ್ನು ಘೋಷಣೆ ಮಾಡಿದ್ದಾರೆ. ಕಳೆದ ಬೆಳಗಾವಿಯಲ್ಲಿ ನಡೆದಂತ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಶಾಸಕರಿಗೆ ಅನುದಾನ ಬಿಡುಗಡೆಯ ಬಗ್ಗೆ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತ ಪಡಿಸಿದ್ದರು. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಿಎಲ್ ಪಿ ಸಭೆಯಲ್ಲಿ ಶಾಸಕರಿಗೆ ಅನುದಾನವನ್ನು ನೀಡುವ ಘೋಷಣೆ ಮಾಡಿದ್ದಾರೆ. ಎಲ್ಲಾ ಪಕ್ಷದ ಶಾಸಕರಿಗೂ ತಲಾ 10 ಕೋಟಿ ಅನುದಾನವನ್ನು ನೀಡಿದ್ದೇವೆ. ಬಿಜೆಪಿ, ಜೆಡಿಎಸ್ ಶಾಸಕರಿಗೂ 10 ಕೋಟಿ ಅನುದಾನ ಕೊಡ್ತಿರೋದಾಗಿ ಘೋಷಿಸಿದರು. https://kannadanewsnow.com/kannada/tushar-girinath-asks-people-to-file-fir-against-those-who-put-up-unauthorised-advertisements-in-bengaluru/ https://kannadanewsnow.com/kannada/breaking-big-shock-for-investors-sensex-plunges-over-1100-points-plunges-over-rs-14-lakh-crore-loss/

Read More

ಧಾರವಾಡ : 2025-26ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜನವರಿ 25, 2025 ರೊಳಗಾಗಿ ಹತ್ತಿರದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447201 ಗೆ ಅಥವಾ ಇಲಾಖೆಯ ವೆಬಸೈಟ್ http://kea.kar.nic.in ಮತ್ತು http://kreis.kar.nic.in ಭೇಟಿ ನೀಡಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/state-minor-irrigation-department-recruitment-message-is-false-department/ https://kannadanewsnow.com/kannada/tushar-girinath-asks-people-to-file-fir-against-those-who-put-up-unauthorised-advertisements-in-bengaluru/

Read More

ನವದೆಹಲಿ: ಪಾಟ್ನಾ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕಳೆದ ವಾರವಷ್ಟೇ ಸುಪ್ರೀಂ ಕೋರ್ಟ್ ಕೊಲಿಜಿಯಂ ನ್ಯಾಯಮೂರ್ತಿ ವಿನೋದ್ ಚಂದ್ರನ್ ಅವರ ಪದೋನ್ನತಿಗೆ ಶಿಫಾರಸು ಮಾಡಿತ್ತು. “ಭಾರತದ ಸಂವಿಧಾನವು ನೀಡಿರುವ ಅಧಿಕಾರಗಳನ್ನು ಚಲಾಯಿಸಿ, ರಾಷ್ಟ್ರಪತಿಗಳು, ಭಾರತದ ಮುಖ್ಯ ನ್ಯಾಯಮೂರ್ತಿಯೊಂದಿಗೆ ಸಮಾಲೋಚಿಸಿದ ನಂತರ, ಪಾಟ್ನಾ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಕೃಷ್ಣನ್ ವಿನೋದ್ ಚಂದ್ರನ್ ಅವರನ್ನು ಭಾರತದ ಸುಪ್ರೀಂ ಕೋರ್ಟ್ನ ನ್ಯಾಯಾಧೀಶರಾಗಿ ನೇಮಕ ಮಾಡಲು ಸಂತೋಷಪಡುತ್ತಾರೆ” ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ. https://twitter.com/arjunrammeghwal/status/1878803707149877546 ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರನ್ನು 08 ನವೆಂಬರ್ 2011 ರಂದು ಕೇರಳ ಹೈಕೋರ್ಟ್ನ ನ್ಯಾಯಾಧೀಶರಾಗಿ ನೇಮಿಸಲಾಯಿತು ಮತ್ತು 2023 ರ ಮಾರ್ಚ್ 29 ರಂದು ಪಾಟ್ನಾದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದರು ಮತ್ತು ಅಂದಿನಿಂದ ಆ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಹೆಸರನ್ನು…

Read More

ಬೆಂಗಳೂರು: ನಗರದಲ್ಲಿನ ಬಿಬಿಎಂಪಿ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆಯಲ್ಲಿ ಬಹುದೊಡ್ಡ ಕರ್ಮಕಾಂಡವೇ ಬೆಳಕಿಗೆ ಬಂದಿದೆ. ಆ ಇಂಚಿಂಚೂ ವರದಿಯನ್ನು ಕರ್ನಾಟಕ ಲೋಕಾಯುಕ್ತದಿಂದ ಬಿಡುಗಡೆ ಮಾಡಲಾಗಿದೆ. ಆ ಸಂಪೂರ್ಣ ವರದಿ ಮುಂದಿದೆ ಓದಿ. ಈ ಕುರಿತಂತೆ ಕರ್ನಾಟಕ ಲೋಕಾಯುಕ್ತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿನ ವಿವಿಧ ಕಚೇರಿಗಳಲ್ಲಿ ಕೈಗೊಂಡ ಶೋಧನಾ ಕಾರ್ಯಾಚರಣೆಯನ್ನು ಮಾಡಲಾಗಿದೆ ಎಂದಿದೆ. ಈ ಕೆಳಕಂಡಂತಿದೆ ಬಿಬಿಎಂಪಿ ಕಚೇರಿಯಲ್ಲಿನ ಕರ್ಮಕಾಂಡದ ಮಾಹಿತಿ ಸಾರ್ವಜನಿಕರಿಂದ ಸ್ವೀಕೃತವಾದ ಹಲವು ದೂರುಗಳ ಆಧಾರದ ಮೇಲೆ ಹಾಗೂ ಬಾತ್ಮೀದಾರರಿಂದ ಬಂದ ಮಾಹಿತಿಗಳ ಮೇರೆಗೆ ಬಿ.ಬಿ.ಎಂ.ಪಿ ಗೆ ಸೇರಿದ ಕಾರ್ಯಪಾಲಕ ಅಭಿಯಂತರರ ಕಛೇರಿ, ಸಹಾಯಕ ಕಾರ್ಯಪಾಲಕ ಅಭಿಯಂತರರ ಕಛೇರಿ, ಸಹಾಯಕ ಕಂದಾಯಾಧಿಕರಿಗಳ ಕಛೇರಿ ಮತ್ತು ಇತರೆ ಕಛೇರಿಗಳಲ್ಲಿ ಕೈಗೊಂಡ ಶೋಧನೆಯಿಂದ ಈ ಕೆಳಕಂಡ ನ್ಯನ್ಯತೆಗಳು ಕಂಡುಬಂದಿರುತ್ತವೆ. ಅಧಿಕಾರಿಗಳು ಕಛೇರಿಗೆ ಕರ್ತವ್ಯಕ್ಕೆ ಹಾಜರಾದಾಗ ಪ್ರತಿ ನಿತ್ಯ ಹಾಜರಾತಿ ಪುಸ್ತಕಕ್ಕೆ ಸಹಿ ಮಾಡಬೇಕಾಗಿದ್ದು, ಸಹಿಯನ್ನು ಮಾಡದೇ ಹಾಜರಾತಿ ಪುಸ್ತಕವನ್ನು ನಿರ್ವಹಣೆ ಮಾಡದೇ ಇರುವುದು…

Read More

ಲಡಾಖ್ : ರಿಲಯನ್ಸ್ ಜಿಯೋ ತನ್ನ 5 ಜಿ ಸೇವೆಯನ್ನು ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ ಗ್ಲೇಸಿಯರ್‌ನಲ್ಲಿ ಪ್ರಾರಂಭಿಸಿದೆ. ಭಾರತೀಯ ಸೇನೆಯ ‘ಫೈರ್ ಅಂಡ್ ಫ್ಯೂರಿ ಕಾರ್ಪ್ಸ್’ ಟ್ವೀಟ್ ಮೂಲಕ ಈ ಮಾಹಿತಿಯನ್ನು ನೀಡಿದೆ. ಸಿಯಾಚಿನ್ ಹಿಮನದಿಯಲ್ಲಿ ಸೇವೆಯನ್ನು ಪ್ರಾರಂಭಿಸಿದ ದೇಶದ ಮೊದಲ ಆಪರೇಟರ್ ಎಂಬ ಹೆಗ್ಗಳಿಕೆಗೆ ಜಿಯೋ ಇದೀಗ ಪಾತ್ರವಾಗಿದೆ. ಸೇನೆಯ ಪ್ರಕಾರ, ಜಿಯೋ ಟೆಲಿಕಾಂ ಮತ್ತು ಭಾರತೀಯ ಸೇನೆಯು ವಿಶ್ವದ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ ಗ್ಲೇಸಿಯರ್‌ನಲ್ಲಿ ಮೊದಲ 5 ಜಿ ಮೊಬೈಲ್ ಟವರ್ ಅನ್ನು ಯಶಸ್ವಿಯಾಗಿ ಸ್ಥಾಪಿಸಿದೆ. ಹಿಮಾಲಯದ ಕಾರಕೋರಂ ಶ್ರೇಣಿಯಲ್ಲಿ 16,000 ಅಡಿ ಎತ್ತರದಲ್ಲಿ ಈ 5ಜಿ ಸಂಪರ್ಕ ಸಾಧ್ಯವಾಗಿದೆ. ಜನವರಿ 15 ರಂದು ಸೇನಾ ದಿನಾಚರಣೆಯ ಮೊದಲು ಸಿಯಾಚಿನ್ ಗ್ಲೇಸಿಯರ್‌ನಲ್ಲಿ 4 ಜಿ ಮತ್ತು 5 ಜಿ ಸೇವೆಗಳನ್ನು ಪ್ರಾರಂಭಿಸುವ ಮೂಲಕ ಜಿಯೋ ಅಭೂತಪೂರ್ವ ಮೈಲಿಗಲ್ಲನ್ನು ಸಾಧಿಸಿದೆ. ‘ಸವಾಲಿನ ಪರಿಸ್ಥಿತಿಗಳನ್ನು ಧೈರ್ಯದಿಂದ ಎದುರಿಸಿದ ನಮ್ಮ ಧೈರ್ಯಶಾಲಿ ಸೈನಿಕರಿಗೆ ಈ ಸಾಧನೆಯನ್ನು ಅರ್ಪಿಸಲಾಗಿದೆ’ ಎಂದು…

Read More

ಬೆಂಗಳೂರು: ಆ ಮೂಕಪ್ರಾಣಿಗಳ (ಹಸುಗಳ) ಕೆಚ್ಚಲು ಕೊಯ್ಯುವ ಘನಂದಾರಿ ಕೆಲಸ ಯಾರು ಮಾಡಿದ್ದಾರೆ ಎಂಬುದನ್ನು ಮೊದಲು ಬಯಲಿಗೆ ತರಬೇಕು. ಇವತ್ತು ಯಾರೋ ಒಬ್ಬನನ್ನು ಅರೆಸ್ಟ್ ಮಾಡಿದ್ದಾಗಿ ಹೇಳುತ್ತಿದ್ದಾರೆ. ಇದು ಕೇಸನ್ನು ಮುಚ್ಚಿ ಹಾಕುವ ಕೆಲಸದಂತೆ ಅನಿಸುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಡೆದ ಘಟನೆಗಳನ್ನು ಪ್ರಸ್ತಾಪ ಮಾಡಿದರೆ ಅದರಲ್ಲಿ ರಾಜಕೀಯ ಏನಿದೆ ಎಂದು ಮುಖ್ಯಮಂತ್ರಿಗಳನ್ನು ಕೇಳಿದರು. ಜಮೀರ್ ಅಹ್ಮದ್ ಅವರೇ ನೀವು 3 ಹಸುಗಳನ್ನು ಕೊಡಿಸದಿದ್ದರೂ ಪರವಾಗಿಲ್ಲ. ನೀವು 100 ಹಸುಗಳನ್ನು ಕೊಟ್ಟರೂ ಪಾಪ ತೊಳೆದುಕೊಳ್ಳಲು ಸಾಧ್ಯವಿಲ್ಲ ಎಂದು ಟೀಕಿಸಿದರು. ಇದಕ್ಕೆ ಪ್ರೇರಣೆ ಯಾರು? ಓಲೈಕೆ ರಾಜಕಾರಣದಿಂದ ಈ ರಾಜ್ಯದಲ್ಲಿ ಏನಾಗುತ್ತಿದೆ? ಇವುಗಳನ್ನು ನಾವು ಗಮನಿಸಬೇಕಿದೆ. ಇದೊಂದು ಕೆಟ್ಟ ಪರಂಪರೆಗೆ ಕಾಂಗ್ರೆಸ್ ಸರಕಾರ ನಾಂದಿ ಹಾಕಿದೆ. ಇಲ್ಲಿ ಸಂಪೂರ್ಣವಾಗಿ ಕಾನೂನು- ಸುವ್ಯವಸ್ಥೆ ಕೆಟ್ಟು ಹೋಗಿದೆ. ತಮ್ಮ ತಮ್ಮ ಅಧಿಕಾರಕ್ಕಾಗಿ ಕಾದಾಟದಲ್ಲಿ ಈ…

Read More