Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಅಫ್ಘಾನಿಸ್ತಾನ: ಇಲ್ಲಿನ ಗಡಿಯಲ್ಲಿ ಶನಿವಾರ 5.8 ತೀವ್ರತೆಯ ಭೂಕಂಪನ ಸಂಭವಿಸಿದ್ದು, ದೆಹಲಿ-ಎನ್ಸಿಆರ್ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ನಡುಕ ಉಂಟಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಪ್ರಕಾರ, ಮಧ್ಯಾಹ್ನ 12:17 ಕ್ಕೆ ಮೇಲ್ಮೈಯಿಂದ 86 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನ-ತಜಿಕಿಸ್ತಾನ್ ಗಡಿ ಪ್ರದೇಶದಲ್ಲಿದೆ, ಇದು ಟೆಕ್ಟೋನಿಕ್ ಚಲನೆಯಿಂದಾಗಿ ಭೂಕಂಪನ ಚಟುವಟಿಕೆಗೆ ಗುರಿಯಾಗುವ ಪ್ರದೇಶವಾಗಿದೆ. “ಇಕ್ಯೂ ಆಫ್ ಎಂ: 5.8, ಆನ್: 19/04/2025 12:17:53 IST, Lat: 36.10 N, ಉದ್ದ: 71.20 E, ಆಳ: 130 ಕಿ.ಮೀ, ಸ್ಥಳ: ಅಫ್ಘಾನಿಸ್ತಾನ” ಎಂದು ಎನ್ಸಿಎಸ್ ಎಕ್ಸ್ನಲ್ಲಿ ಬರೆದಿದೆ. https://twitter.com/NCS_Earthquake/status/1913488138472763402 ಕಾಶ್ಮೀರದ ಪೂಂಚ್ನಿಂದ ದೃಶ್ಯಗಳು ಅಭಿಮಾನಿಗಳು ಅಲುಗಾಡುತ್ತಿರುವುದನ್ನು ತೋರಿಸಿದೆ. ನೆಲ ನಡುಗಲು ಪ್ರಾರಂಭಿಸಿದ ಕೆಲವೇ ಕ್ಷಣಗಳಲ್ಲಿ ಜನರು ಕಟ್ಟಡದಿಂದ ಹೊರಗೆ ಧಾವಿಸುತ್ತಿದ್ದಾರೆ. https://twitter.com/ANI/status/1913490788958249057 ಈ ವರದಿಯ ಪ್ರಕಟಣೆಯ ಪ್ರಕಾರ, ಗಡಿಯ ಎರಡೂ ಬದಿಗಳಿಂದ ಸಾವುನೋವುಗಳು ಅಥವಾ ದೊಡ್ಡ…

Read More

ಬಿಳಾಗಿ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಬಿಳಾಗಿ ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ನವರು ಇಂದು ಶನಿವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ತಮ್ಮ ಸರ್ಕಾರದ ಬದ್ಧತೆಯನ್ನು ವ್ಯಕ್ತಪಡಿಸಿದರು. ಆರೋಗ್ಯದ ದೃಷ್ಟಿಯಿಂದ ಹೊಸ ಅಡುಗೆ ಪಾತ್ರೆಗಳು: ಮಕ್ಕಳ ಆರೋಗ್ಯದ ದೃಷ್ಟಿಯಿಂದ ಶಾಲಾ ಅಡುಗೆಯಲ್ಲಿ ಅಲ್ಯೂಮಿನಿಯಂ ಪಾತ್ರೆಗಳ ಬಳಕೆಯನ್ನು ನಿಲ್ಲಿಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ಈ ನಿಟ್ಟಿನಲ್ಲಿ ರಾಜ್ಯದ 16,500 ಸರ್ಕಾರಿ ಶಾಲೆಗಳಿಗೆ ಹೊಸ ಅಡುಗೆ ಪಾತ್ರೆಗಳನ್ನು ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು. ಮಕ್ಕಳಿಗೆ ಮೊಟ್ಟೆ ಮತ್ತು ಬಾಳೆಹಣ್ಣುಗಳನ್ನು ನೀಡಿ ಅಲ್ಯೂಮಿನಿಯಂ ಪಾತ್ರೆಗಳಲ್ಲಿ ಆಹಾರ ತಯಾರಿಸುವುದು ಒಳ್ಳೆಯದಲ್ಲ, ಹಾಗಾಗಿ ಹಳೆಯ ಪಾತ್ರೆಗಳನ್ನ ಬದಲಾಯಿಸಲಾಗುವುದು ಎಂದು ಹೇಳಿದರು. ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಆಕರ್ಷಿಸುವ ಪ್ರಯತ್ನ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಓದಿಸುವ ಮನೋಭಾವವನ್ನು ಹೆಚ್ಚಿಸುವ ಅಗತ್ಯವನ್ನು ಸಚಿವರು ಒತ್ತಿ ಹೇಳಿದರು. ದೇವಸ್ಥಾನಗಳಲ್ಲಿ ಪ್ರಾರಂಭವಾದ ಸರ್ಕಾರಿ…

Read More

ನವದೆಹಲಿ: ಡ್ರಗ್ಸ್ ಕೇಸಿನಲ್ಲಿ ಮಲಯಾಳಂ ನಟ ಶೈನ್ ಟಾಮ್ ಚಾಕೋ ಅವರನ್ನು ಕೇರಳ ಪೊಲೀಸರು ಶನಿವಾರ ಬಂಧಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಅವರ ವಿರುದ್ಧ ಮಾದಕ ದ್ರವ್ಯಗಳು ಮತ್ತು ಮನೋವಿಕೃತ ವಸ್ತುಗಳ (NDPS) ಕಾಯ್ದೆಯ ಸೆಕ್ಷನ್ 27 (ಮಾದಕ ದ್ರವ್ಯಗಳು ಅಥವಾ ಮನೋವಿಕೃತ ವಸ್ತುಗಳ ಸೇವನೆ) ಮತ್ತು 29 (ಪ್ರೇರಣೆ ಮತ್ತು ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶೀಘ್ರದಲ್ಲೇ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗುವುದು ಮತ್ತು ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಪೊಲೀಸ್ ಮೂಲಗಳ ಪ್ರಕಾರ, ಶೈನ್ ತನ್ನ ವಕೀಲರೊಂದಿಗೆ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಎರ್ನಾಕುಲಂ ಉತ್ತರ ಪೊಲೀಸ್ ಠಾಣೆಗೆ ಬಂದರು. ಇತ್ತೀಚಿನ ಪೊಲೀಸ್ ಶೋಧದ ಸಮಯದಲ್ಲಿ ಹೋಟೆಲ್‌ನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪದ ಸುತ್ತಲಿನ ಸಂದರ್ಭಗಳನ್ನು ನಿರ್ಧರಿಸಲು ನಟನನ್ನು ಪ್ರಶ್ನಿಸಲಾಯಿತು. ಪೊಲೀಸರು ಶುಕ್ರವಾರ ನಟನಿಗೆ ನೋಟಿಸ್ ನೀಡಿದ್ದು, ಶನಿವಾರ ಬೆಳಿಗ್ಗೆ 10 ಗಂಟೆಗೆ ಎರ್ನಾಕುಲಂ ಉತ್ತರ…

Read More

ಬೆಳಗಾವಿ: ಮುಸ್ಲಿಂ ಯುವಕನ ಕಿರುಕುಳಕ್ಕೆ ಬೇಸತ್ತು ದಲಿತ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಬೆಳಗಾವಿಯಲ್ಲಿ ನಡೆದಿದೆ.  ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಚಿಕ್ಕಮಲ್ಲೂರು ಗ್ರಾಮದ ಶಿಲ್ಪಾ(22) ಎಂಬುವರೇ ಆತ್ಮಹತ್ಯೆಗೆ ಶರಣಾದಂತ ವಿದ್ಯಾರ್ಥಿನಿಯಾಗಿದ್ದಾರೆ. ಈಕೆ ಬೆಳಗಾವಿಯಲ್ಲಿ ಬಿಸಿಎ ಓದುತ್ತಿದ್ದರು. ಶಿಗ್ಗಾಂವಿಯ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಂತ ನವೀನ್ ಎಂಬಾತನನ್ನು ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಈ ವಿಷಯ ಅಂಗಡಿಯ ಮಾಲೀಕನಿಗೆ ಗೊತ್ತಾಗಿ ಟಾರ್ಚರ್ ಕೊಡೋದಕ್ಕೆ ಶುರು ಮಾಡಿದ್ದರು. ಶಿಗ್ಗಾಂವಿಯ ಫರ್ನಿಚರ್ ಅಂಗಡಿಯ ಮಾಲೀಕ ರಂಜಾನ್ ನದಾಫ್ ಎಂಬಾತ ಶಿಲ್ಪಾಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದನಂತೆ. ಈ ಕಾರಣದಿಂದ ಮನನೊಂದು ಯುವತಿ ಶಿಲ್ಪಾ ಬೆಳಗಾವಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಂದಹಾಗೇ ಕಳೆದ ವಾರ ನಡೆದಂತ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನವೀನ್ ಕೆಲಸ ಮಾಡ್ತಿದ್ದಂತ ಅಂಗಡಿ ಮಾಲೀಕನ ಟಾರ್ಚರ್ ಗೆ ಶಿಲ್ಪಾ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. https://kannadanewsnow.com/kannada/man-cuts-off-mans-genitals-and-brings-him-to-police-station-for-having-illicit-relationship-with-wife/ https://kannadanewsnow.com/kannada/check-website-avoid-unknown-links-mha-advisory-on-scams-targeting-pilgrims-tourists/

Read More

ಮಧ್ಯಪ್ರದೇಶ: ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಂತ ವ್ಯಕ್ತಿಗೆ ಎಷ್ಟೇ ಎಚ್ಚರಿಕೆ ನೀಡಿದರೂ, ತನ್ನ ಚಾಳಿಯನ್ನು ಮುಂದುವರೆಸಿದ್ದನು. ಈ ಸಿಟ್ಟಿನಿಂದ ಪತ್ನಿಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಂತ ಬಾಯ್ ಫ್ರೆಂಡ್ ಜನನಾಂಗವನ್ನೇ ಕತ್ತರಿಸಿ ಠಾಣೆಗೆ ತಂದಂತ ಪತಿಯೊಬ್ಬ, ಪೊಲೀಸರ ಮುಂದೆ ಶರಣಾಗಿದ್ದಾನೆ. ಮಧ್ಯಪ್ರದೇಶದ ಇಂದೋರ್ ನ ದೆಹರಿ ಗ್ರಾಮದಲ್ಲಿ ಇಂತಹ ಘಟನೆ ನಡೆದಿದೆ. ಈಶ್ವರ್ ಸಿಂಗ್ ಎಂಬಾತ ಕಾಲು ಸಿಂಗ್ ಎಂಬುವರ ಪತ್ನಿಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದನು. ಈ ಕಾರಣಕ್ಕೆ ಇಬ್ಬರ ನಡುವೆ ಜಗಳ ಉಂಟಾಗಿ, ಎಚ್ಚರಿಕೆಯನ್ನು ನೀಡಲಾಗಿತ್ತು. ಆದರೇ ಇದಕ್ಕೂ ಡೋಂಟ್ ಕೇರ್ ಎನ್ನುವಂತೆ ಕಾಲು ಸಿಂಗ್ ಪತ್ನಿಯೊಂದಿಗೆ ಅಕ್ರಮ ಸಂಬಂಧ ಮುಂದುವರೆಸಿದ್ದನು. ಇಂದು ಕಾಲು ಸಿಂಗ್ ತನ್ನ ನಾಲ್ವರು ಸ್ನೇಹಿತರೊಂದಿಗೆ ಈಶ್ವರ್ ಸಿಂಗ್ ಹಿಡಿದು, ಆತನ ಜನನಾಂಗವನ್ನೇ ಕತ್ತರಿಸಿದ್ದಾನೆ. ಕತ್ತರಿಸಿದಂತ ಜನನಾಂಗದೊಂದಿಗೆ ಬರೋಡ್ ಪೊಲೀಸ್ ಠಾಣೆಗೆ ತೆರಳಿ ಕಾಲು ಸಿಂಗ್ ಪೊಲೀಸರ ಮುಂದೆ ಶರಣಾಗಿದ್ದಾನೆ. ಇನ್ನೂ ಜನನಾಂಗ ಕತ್ತರಿಸಿದ್ದರಿಂದ ಗಾಯಗೊಂಡಿದ್ದಂತ ಈಶ್ವರ್ ಸಿಂಗ್ ನನ್ನು ಆಸ್ಪತ್ರೆಗೆ ದಾಖಲಿಸಿ…

Read More

ಬೆಂಗಳೂರು: ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳು ಜನಿವಾರ ತೆಗೆಯಬೇಕು ಎಂಬ ಪರೀಕ್ಷಾ ಕೇಂದ್ರದ ಅಧಿಕಾರಿಗಳ ಅತಿರೇಖದ ವರ್ತನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಜನಿವಾರ ತೆಗೆಯಬೇಕೆಂಬ ಯಾವುದೇ ಮಾರ್ಗಸೂಚಿಯನ್ನೂ ಸರ್ಕಾರ ಹೊರಡಿಸಿಲ್ಲ. ಈ ಬಗ್ಗೆ ಕೆಇಎ ಅಧಿಕಾರಿಗಳು ಹಾಗು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ ಸುಧಾಕರ್ ಅವರು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದಾರೆ. ಇಂತಹ ಅತಿರೇಖದ ವರ್ತನೆ ತೋರಿ, ವಿದ್ಯಾರ್ಥಿಗಳಿಗೆ ಹಾಗು ಬ್ರಾಹ್ಮಣ ಸಮುದಾಯಕ್ಕೆ ಅಪಚಾರ ಎಸಗಿದ ಅಧಿಕಾರಿಯ ವಿರುದ್ಧ ಸರ್ಕಾರ ಶಿಸ್ತುಕ್ರಮ ಕೈಗೊಳ್ಳಲಿದೆ. ಕಾನೂನು ನಿರ್ವಹಿಸುವ ವೇಳೆ ಅಧಿಕಾರಿಗಳು ವಿವೇಚನೆಯಿಂದ ವರ್ತಿಸಬೇಕು ಮತ್ತು ಅನಗತ್ಯ ಗೊಂದಲಗಳಿಗೆ ಆಸ್ಪದ ಮಾಡಿಕೊಡಬಾರದು ಎಂದಿದ್ದಾರೆ. ಈ ಕಾರ್ಯನಿರ್ವಹಣೆಯಲ್ಲಿ ಯಾವುದೇ ಗೊಂದಲಗಳಿದ್ದರೆ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಬೇಕೇ ವಿನಃ ಮನಸೋ ಇಚ್ಛೆ ವರ್ತಿಸಿ ಸಮಾಜದ ಸ್ವಾಸ್ತ್ಯ ಕೆಡಿಸಿದರೆ ಅದಕ್ಕೆ ತಕ್ಕ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ. https://twitter.com/dineshgrao/status/1913195005487010114 https://kannadanewsnow.com/kannada/shimoga-dc-orders-suspension-of-two-home-guards-for-removing-janivara/ https://kannadanewsnow.com/kannada/shocking-man-chops-off-wifes-lovers-genitals-brings-him-to-police-station/

Read More

ಶಿವಮೊಗ್ಗ: ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ ನಡೆದ ಜನಿವಾರ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಇಬ್ಬರು ಗೃಹ ರಕ್ಷಕ ದಳದ ಸಿಬ್ಬಂದಿಯನ್ನು  ಅಮಾನತು ಮಾಡಿರುವುದಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಜನಿವಾರ ಪ್ರಕರಣದ ಕುರಿತು ಸಂಬಂಧ ಪಟ್ಟ ಅಧಿಕಾರಿಗಳ ವಿಚಾರಣೆ ಹಾಗೂ ಸಿಸಿ ಟಿವಿ ವಿಡಿಯೋವನ್ನು ಸಂಪೂರ್ಣವಾಗಿ ಪರಿಶೀಳಿಸಲಾಗಿದೆ. ಸಿಸಿ ಟಿವಿ ವಿಡಿಯೋದಲ್ಲಿ ಒಬ್ಬ ವಿದ್ಯಾರ್ಥಿ ಬರುತ್ತಾರೆ, ಇಬ್ಬರು ಸೆಕ್ಯೂರಿಟಿಗಳಿಗೆ ಆ ವಿದ್ಯಾರ್ಥಿಯೇ ಜನಿವಾರ ತೆಗೆದು ತೋರಿಸುತ್ತಾರೆ. ಇದಕ್ಕೆ ಅನುಮತಿ ಇದೆಯೇ ಎಂದಾಗ, ಆಗ ಸೆಕ್ಯೂರಿಟಿರವರು ಇಲ್ಲ ಎನ್ನುತ್ತಾರೆ. ಆ ವಿದ್ಯಾರ್ಥಿಯೇ ಪಕ್ಕಕ್ಕೆ ಹೋಗಿ ಜನಿವಾರ ತೆಗೆದುಕೊಂಡು ಬರುತ್ತಾರೆ. ಇನ್ನೂರ್ವ ವಿದ್ಯಾರ್ಥಿ ಬಂದಾಗ  ಸೆಕ್ಯೂರಿಟಿರವರು ಜನಿವಾರ ಹಾಕಿಕೊಂಡು ಪರೀಕ್ಷಾ ಕೊಠಡಿಗೆ ಅವಕಾಶ ಇಲ್ಲ ಎಂದಾಗ, ವಿದ್ಯಾರ್ಥಿ ಇಲ್ಲ ನಾನು ಜನಿವಾರ ತೆಗೆಯುವುದಿಲ್ಲ ಎಂದು ಪರೀಕ್ಷಾರ್ಥಿಯನ್ನು ಸೆಕ್ಯೂರಿಟಿರವರು ಪರೀಕ್ಷಾ ಕೇಂದ್ರದ ಒಳಗೆ ಬಿಡದೆ ಅಲ್ಲೆ ಕೂರಿಸುತ್ತಾರೆ.  ಆಗ ಕಾಲೇಜಿನ ಪ್ರಾಂಶುಪಾಲರು ಅಲ್ಲಿ ಬಂದು ವಿದ್ಯಾರ್ಥಿ ಕುಳಿತು ಕೊಂಡಿರುವ ಕುರಿತು ವಿಚಾರಿಸಿದಾಗ ಜನಿವಾರದ…

Read More

ಬೆಂಗಳೂರು: ರಾಜ್ಯಾಧ್ಯಂತ ನಡೆಯುತ್ತಿದ್ದಂತ ಲಾರಿ ಮುಷ್ಕರ ಅಂತ್ಯಗೊಂಡಿದೆ. ಕೇವಲ ಎರಡು ದಿನಗಳೊಳಗೆ ಮುಷ್ಕರಕ್ಕೆ ತೆರೆಬಿದ್ದಿದೆ. ಹೀಗೆ ತೆರೆ ಬೀಳೋದರ ಹಿಂದಿನ ಗುಟ್ಟೇನು ಎಂಬುದೇ ಈಗ ಹಾಟ್ ಟಾಪಿಕ್. ಅಲ್ಲದೇ ಸಚಿವ ರಾಮಲಿಂಗಾರೆಡ್ಡಿ ಚಾಣಾಕ್ಯತೆಯೇ ಇದಕ್ಕೆ ಕಾರಣವೆಂದೇ ಹೇಳಲಾಗುತ್ತಿದೆ. ಆ ಬಗ್ಗೆ ಮುಂದೆ ಓದಿ. ಮೂರು ದಿನಗಳಿಂದ ನಡೆಯುತ್ತಿದ್ದ ಲಾರಿ ಮುಷ್ಕರವನ್ನು ರಾಜ್ಯ ಲಾರಿ ಮಾಲೀಕರ ಹಾಗೂ ಏಜೆಂಟರ ಸಂಘ ಗುರುವಾರ ವಾಪಸ್‌ ಪಡೆಯಲಾಗಿದೆ. ಮೊದಲನೇ ದಿನ ಸುಮಾರು ಸ್ವಲ್ಪಮಟ್ಟಿಗೆ ಯಶಸ್ಸು ಕಂಡಿದ್ದ ಮುಷ್ಕರ, ಆದರೆ ಚೆನ್ನಾರೆಡ್ಡಿ ಲಾರಿ ಮಾಲೀಕರ ಮತ್ತೊಂದು ಬಣ ಬಹಿರಂಗವಾಗಿ ಸದರಿ ಮುಷ್ಕರಕ್ಕೆ ಬೆಂಬಲ ನೀಡದೇ ಇದ್ದ ಕಾರಣದಿಂದಾಗಿ ಎರಡನೇ ದಿನಕ್ಕೆ ಮುಷ್ಕರವು ತನ್ನ ವೇಗವನ್ನು ಕಳೆದುಕೊಂಡು ಸಹಜ ಸ್ಥಿತಿಗೆ ಬರಲು ಪ್ರಾರಂಭವಾದ ಕಾರಣ. .ಜಿ.ಆರ್ ಷಣ್ಮುಖಪ್ಪರವರು ಸಾರಿಗೆ ಸಚಿವರನ್ನು ತಮ್ಮ ಬೇಡಿಕೆಗಳ ಬಗ್ಗೆ ಚರ್ಚಿಸಲು ಭೇಟಿ ಮಾಡಿದರು. ಹೇಗಿದ್ದರೂ ಮಾರನೆ ದಿನ ಮತ್ತಷ್ಟು ಸಹಜ ಸ್ಥಿತಿಗೆ ಬರುತ್ತಿದ್ದ ಮುಷ್ಕರವು ತಮ್ಮ ಕೈತಪ್ಪಲಿದೆ ಎಂಬುದನ್ನು ಅರಿತ ಸಂಘಟಕರು ಮಾತುಕತೆಗೆ…

Read More

ಬೆಂಗಳೂರು: ಜಾತಿಗಣತಿ ವರದಿ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಲು ಸಚಿವರಿಗೆ ಹೇಳಿದ್ದಾರೆ. ಮೊನ್ನೆ ನಡೆದ ಕ್ಯಾಬಿನೆಟ್‌ ಸಭೆಯಲ್ಲಿ ಎಲ್ಲರು ಚರ್ಚೆಯಲ್ಲಿ ಭಾಗವಹಿಸಿದ್ದರು. ಚರ್ಚೆ ಮುಂದುವರಿದಿದ್ದು ಅವರವರ ಅಭಿಪ್ರಾಯ ತಿಳಿಸಲಿದ್ದಾರೆ. ಎಲ್ಲರ ಅಭಿಪ್ರಾಯ ಕೇಳಿದ ಬಳಿಕ ಸರ್ಕಾರ ಅಂತಿಮ ತೀರ್ಮಾನ ತಗೆದುಕೊಳ್ಳಲಿದೆ. ಇದು ಒಬ್ಬರ ತೀರ್ಮಾನ ಅಗುವುದಿಲ್ಲ. ಕ್ಯಾಬಿನೆಟ್ ತೀರ್ಮಾನ ಅಗುತ್ತದೆ‌. ಇದು ಮುಖ್ಯಮಂತ್ರಿಯೊಬ್ಬರ ತೀರ್ಮಾನವೂ ಅಗುವುದಿಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಸ್ಪಷ್ಟಪಡಿಸಿದರು. ಪ್ರತಿ ಪಕ್ಷಗಳ ಟೀಕೆಗಳನ್ನು ಗಮನಿಸಿದ್ದೇವೆ. ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲ ಉದ್ದೇಶವಿರುವುದು ಯಾವ ಸಮುದಾಯ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಯಾವ ಸ್ಥಿತಿಯಲ್ಲಿದೆ ಎಂಬುದನ್ನು ಅಧ್ಯಯನ‌ ಮಾಡಿ ಸರ್ಕಾರಕ್ಕೆ ತಿಳಿಸುವುದು. ಸ್ವಾಭಾವಿಕವಾಗಿ ಯಾವ ಸಮುದಾಯ ಎಷ್ಟೆಷ್ಟು ಜನಸಂಖ್ಯೆ ಇದೆ ಎಂಬ ಅಂಕಿ-ಅಂಶಗಳನ್ನು ಸರ್ಕಾರಕ್ಕೆ ಕೊಟ್ಟಿದ್ದಾರೆ‌. ಅದರ ಮೇಲೆ ಚರ್ಚೆಯಾಗುತ್ತಿದೆ. ಅಂತಿಮವಾಗಿ ಸರ್ಕಾರ ಒಪ್ಪಬೇಕು. ಮುಂದೆ ಯೋಜನೆಗಳನ್ನು ಮಾಡಬೇಕು ಎಂದು ಅಭಿಪ್ರಾಯಪಟ್ಟರು. ಕೆಲ ಸಮುದಾಯದವರು ತಮ್ಮ ಆತಂಕವನ್ನು ವ್ಯಕ್ತ ಮಾಡಿದ್ದಾರೆ. ವರದಿಯನ್ನು ನಾನು ಓದಿದ್ದೇನೆ…

Read More

ಬೆಂಗಳೂರು : ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿರುವ ವಿಚಾರ ಗೊತ್ತಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡುವಂತೆ ಅಧಿಕಾರಿಗಳನ್ನು ಕೇಳಿದ್ದೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಾಯಾಳುವನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದರು. ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂಬ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕಳೆದ ವರ್ಷಕ್ಕೆ ಹೋಲಿಸಿದರೆ ಎಲ್ಲ ಪ್ರಕರಣಗಳು ಕಡಿಮೆಯಾಗಿವೆ‌.‌ಸೈಬರ್ ಪ್ರಕರಣಗಳು ಕಡಿಮೆಯಾಗಿದೆ. ಕಾನೂನು ಸುವ್ಯವಸ್ಥೆ ಸರಿ ಇಲ್ಲ ಎಂದರೆ ಯಾವ ಆಧಾರದ ಮೇಲೆ ಹೇಳುವುದು. ಈ ಬಗ್ಗೆ ಆರೋಪ ಮಾಡುವವರು ಸ್ವಲ್ಪ ಯೋಚಿಸಿ ಮಾತನಾಡಬೇಕು‌ ಎಂದು ಎಚ್ಚರಿಸಿದರು

Read More