Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಹುಬ್ಬಳ್ಳಿ: ನೈಋತ್ಯ ರೈಲ್ವೆ ಇಂದು ಗದಗ ರಸ್ತೆಯಲ್ಲಿರುವ ಹುಬ್ಬಳ್ಳಿ ರೈಲು ವಸ್ತುಸಂಗ್ರಹಾಲಯದಲ್ಲಿ ವಿಶೇಷ ಪರಂಪರಾ ನಡಿಗೆಯೊಂದಿಗೆ ವಿಶ್ವ ಪರಂಪರಾ ದಿನವನ್ನು ಆಚರಿಸಿತು. ಈ ಕಾರ್ಯಕ್ರಮಕ್ಕೆ ನೈಋತ್ಯ ರೈಲ್ವೆ ವಲಯದ ಮಹಾಪ್ರಬಂಧಕರಾದ ಮುಕುಲ್ ಸರನ್ ಮಾಥುರ್ ಮುಖ್ಯ ಅತಿಥಿಗಳಾಗಿ ಭಾಗಿಯಾಗಿದ್ದರು. ಈ ಆಚರಣೆಯ ಅಂಗವಾಗಿ ಮಾಥುರ್ ಅವರು ರೈಲು ವಸ್ತುಸಂಗ್ರಹಾಲಯವನ್ನು ವೀಕ್ಷಿಸಿ, ಭಾರತೀಯ ರೈಲ್ವೆಯ ಶ್ರೀಮಂತ ಪರಂಪರೆ ಮತ್ತು ಸಂರಕ್ಷಿತ ಇತಿಹಾಸವನ್ನು ಮೆಚ್ಚಿದರು. ರೈಲ್ವೆ ಪರಂಪರೆಯನ್ನು ಕಾಪಾಡುವಲ್ಲಿ ಮತ್ತು ಪ್ರದರ್ಶಿಸುವಲ್ಲಿ ಕಾರ್ಯಾಗಾರದ ಸಿಬ್ಬಂದಿಯ ಸೃಜನಶೀಲತೆ ಮತ್ತು ಸಮರ್ಪಣೆಯನ್ನು ಅವರು ಶ್ಲಾಘಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ  ಮಾಥುರ್, “ರೈಲ್ವೆಯು ತನ್ನದೇ ಆದ ಇತಿಹಾಸವನ್ನು ಹೊಂದಿರುವ ಏಕೈಕ ಸಂಸ್ಥೆಯಾಗಿದ್ದು, ಪರಂಪರೆಯ ಸ್ಮಾರಕಗಳು ಮತ್ತು ಉಪಕರಣಗಳ ಮೂಲಕ ಅದು ಪ್ರತಿನಿಧಿಸಲ್ಪಡುತ್ತದೆ. ಇವುಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ. ಭವಿಷ್ಯದ ಪೀಳಿಗೆಗಾಗಿ ಈ ಪರಂಪರೆಯನ್ನು ನಾವು ಕಾಪಾಡಬೇಕು” ಎಂದು ಹೇಳಿದರು. ಪರಂಪರೆ ಸಂರಕ್ಷಣೆಯಲ್ಲಿ ಸಾರ್ವಜನಿಕ ಆಸಕ್ತಿಯನ್ನು ಉತ್ತೇಜಿಸುವ ಕ್ರಮವಾಗಿ, ವಸ್ತುಸಂಗ್ರಹಾಲಯಕ್ಕೆ ಇಡೀ ದಿನ ಉಚಿತ ಪ್ರವೇಶವನ್ನು ನೀಡಲಾಗಿತ್ತು. ಇದು ಅನೇಕ ಸಂದರ್ಶಕರು ಮತ್ತು…

Read More

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಜೆಇಇ ಮೇನ್ 2025 ಸೆಷನ್ 2 ರ ಅಂತಿಮ ಕೀ ಉತ್ತರಗಳನ್ನು ಇಂದು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಏಪ್ರಿಲ್ 2 ಮತ್ತು ಏಪ್ರಿಲ್ 9 ರ ನಡುವೆ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಈಗ ಅಧಿಕೃತ ವೆಬ್ಸೈಟ್ – jeemain.nta.nic.in ಮೂಲಕ ಕೀ ಉತ್ತರಗಳನ್ನು ಪ್ರವೇಶಿಸಬಹುದು. ಅಲ್ಲದೇ ನಾಳೆ ಜೆಇಇ ಮೇನ್ 2025 ಸೆಷನ್ 2ರ ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಿದೆ. ಇತ್ತೀಚಿನ ನವೀಕರಣದ ಪ್ರಕಾರ, ಜೆಇಇ ಮೇನ್ ಸೆಷನ್ 2 ಫಲಿತಾಂಶವನ್ನು ಏಪ್ರಿಲ್ 19 ರೊಳಗೆ ಪ್ರಕಟಿಸಲಾಗುವುದು ಎಂದು ಎನ್ಟಿಎ ತನ್ನ ಅಧಿಕೃತ ಹ್ಯಾಂಡಲ್ನಲ್ಲಿ ಪೋಸ್ಟ್ ಮೂಲಕ ದೃಢಪಡಿಸಿದೆ. ಫಲಿತಾಂಶಗಳು ಹೊರಬಂದ ನಂತರ, ಅಭ್ಯರ್ಥಿಗಳು ತಮ್ಮ ಸ್ಕೋರ್ ಕಾರ್ಡ್ಗಳು, ಅಖಿಲ ಭಾರತ ಶ್ರೇಯಾಂಕಗಳು (ಎಐಆರ್), ವರ್ಗವಾರು ಕಟ್-ಆಫ್ ಮತ್ತು ಎರಡೂ ಸೆಷನ್ಗಳಿಗೆ ಟಾಪರ್ಗಳ ಪಟ್ಟಿಯನ್ನು ಪರಿಶೀಲಿಸಲು ಸಾಧ್ಯವಾಗುತ್ತದೆ. https://twitter.com/NTA_Exams/status/1913097332104613960 ಅಂತಿಮ ಉತ್ತರ ಕೀಲಿಯು ವಿದ್ಯಾರ್ಥಿಗಳಿಗೆ ತಮ್ಮ ನಿರೀಕ್ಷಿತ ಅಂಕಗಳನ್ನು ಲೆಕ್ಕಹಾಕಲು ಸಹಾಯ ಮಾಡುವಲ್ಲಿ…

Read More

ಬೆಂಗಳೂರು: ಸಿಇಟಿ ಪರೀಕ್ಷೆಯ ವೇಳೆಯಲ್ಲಿ ಮಾರ್ಗಸೂಚಿ ಹೊರತಾಗಿಯೂ ಬ್ರಾಹ್ಮಣ ಸಮುದಾಯಕ್ಕೆ ಸೇರಿದಂತ ಅಭ್ಯರ್ಥಿಯೊಬ್ಬರಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು ಜನಿವಾರ ತೆಗೆದಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಘಟನೆಯು ವಿವಾದಕ್ಕೂ ಕಾರಣವಾಗಿ ಬ್ರಾಹ್ಮಣ ಸಮುದಾಯದವರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಸಿಬ್ಬಂದಿಯ ಪರವಾಗಿ ಕ್ಷಮೆಯಾಚಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿಗಳು ಅಭ್ಯರ್ಥಿಗೆ ಜನಿವಾರ ತೆಗೆಯಬೇಕು ಎಂಬುದಾಗಿ ಹೇಳಿದ್ದು ತಪ್ಪು. ಇದನ್ನು ಕೆಇಎ ಒಪ್ಪುವುದಿಲ್ಲ. ಇಂತಹ ಯಾವುದೇ ಮಾರ್ಗಸೂಚಿಯನ್ನು ಕೆಇಎ ನೀಡಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು. ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆದ ಘಟನೆಯ ಬಗ್ಗೆ ವಿಷಾದ ವ್ಯಕ್ತ ಪಡಿಸುತ್ತೇನೆ. ನಾನೇ ಈ ಘಟನೆಯ ಸಂಬಂಧ ಕ್ಷಮೆ ಕೇಳ್ತೀನಿ. ಮುಂದೆ ಇಂತಹ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗುತ್ತದೆ. ಜೊತೆಗೆ ಮಾರ್ಗಸೂಚಿಯಲ್ಲೂ ಪ್ರಕಟ ಮಾಡುವುದಾಗಿ ತಿಳಿಸಿದರು. ನಾವು ಯಾವುದೇ ಜಾತಿ, ಧರ್ಮದ ವಿರುದ್ಧ ಮಾರ್ಗಸೂಚಿ ಪ್ರಕಟಿಸಿಲ್ಲ. ಈಗ ತಪ್ಪು ಆಗಿದೆ. ಮುಂದೆ ಇಂತಹ ತಪ್ಪು ಆಗದಂತೆ…

Read More

ಮಾಸ್ಕೋ: ಎರಡು ದಶಕಗಳಿಗೂ ಹೆಚ್ಚು ಕಾಲ ಭಯೋತ್ಪಾದಕ ಸಂಘಟನೆ ಎಂದು ಹೆಸರಿಸಿದ್ದ ತಾಲಿಬಾನ್ ಮೇಲಿನ ನಿಷೇಧವನ್ನು ರಷ್ಯಾ ಗುರುವಾರ ರದ್ದುಗೊಳಿಸಿದೆ. ಇದು ಅಫ್ಘಾನಿಸ್ತಾನದ ನಾಯಕತ್ವದೊಂದಿಗಿನ ಸಂಬಂಧವನ್ನು ಸಾಮಾನ್ಯಗೊಳಿಸಲು ಮಾಸ್ಕೋಗೆ ದಾರಿ ಮಾಡಿಕೊಡುತ್ತದೆ. 20 ವರ್ಷಗಳ ಯುದ್ಧದ ನಂತರ ಅಮೆರಿಕ ನೇತೃತ್ವದ ಪಡೆಗಳು ಅಫ್ಘಾನಿಸ್ತಾನದಿಂದ ಅಸ್ತವ್ಯಸ್ತವಾಗಿ ಹಿಂದೆ ಸರಿಯುತ್ತಿದ್ದಂತೆ ಆಗಸ್ಟ್ 2021 ರಲ್ಲಿ ಅಧಿಕಾರವನ್ನು ವಶಪಡಿಸಿಕೊಂಡ ತಾಲಿಬಾನ್ ಸರ್ಕಾರವನ್ನು ಪ್ರಸ್ತುತ ಯಾವುದೇ ದೇಶವು ಗುರುತಿಸುವುದಿಲ್ಲ. ಆದರೆ ಕಳೆದ ವರ್ಷ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಂತೆ ಭಯೋತ್ಪಾದನೆಯ ವಿರುದ್ಧ ಹೋರಾಡುವಲ್ಲಿ ಮಿತ್ರರಾಷ್ಟ್ರವಾಗಿದೆ ಎಂದು ಹೇಳಲಾದ ಚಳುವಳಿಯೊಂದಿಗೆ ರಷ್ಯಾ ಕ್ರಮೇಣ ಸಂಬಂಧಗಳನ್ನು ನಿರ್ಮಿಸುತ್ತಿದೆ. 2003 ರಲ್ಲಿ ರಷ್ಯಾ ತಾಲಿಬಾನ್ ಅನ್ನು ಭಯೋತ್ಪಾದಕ ಚಳುವಳಿ ಎಂದು ನಿಷೇಧಿಸಿತು. ಸುಪ್ರೀಂ ಕೋರ್ಟ್ ಗುರುವಾರ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧವನ್ನು ತೆಗೆದುಹಾಕಿದೆ ಎಂದು ರಾಜ್ಯ ಮಾಧ್ಯಮಗಳು ತಿಳಿಸಿವೆ. ಅಫ್ಘಾನಿಸ್ತಾನದಿಂದ ಮಧ್ಯಪ್ರಾಚ್ಯದವರೆಗಿನ ಹಲವಾರು ದೇಶಗಳಲ್ಲಿ ನೆಲೆಗೊಂಡಿರುವ ಇಸ್ಲಾಮಿ ಉಗ್ರಗಾಮಿ ಗುಂಪುಗಳಿಂದ ಪ್ರಮುಖ ಭದ್ರತಾ ಬೆದರಿಕೆಯನ್ನು ಎದುರಿಸುತ್ತಿರುವ ಕಾರಣ ತಾಲಿಬಾನ್ ಜೊತೆ ಕೆಲಸ…

Read More

ಬೆಂಗಳೂರು: ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ದಾಖಲಿಸಿರುವ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಹರ್ಷವರ್ದಿನಿ ರನ್ಯಾ ರಾವ್ ಮತ್ತು ತರುಣ್ ಕೊಂಡೂರು ರಾಜು ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ಏಪ್ರಿಲ್ 21 ಕ್ಕೆ ಮುಂದೂಡಿದೆ. ಮುಂದಿನ ವಿಚಾರಣೆಯ ದಿನಾಂಕದೊಳಗೆ ಆಕ್ಷೇಪಣೆಗಳ ಹೇಳಿಕೆಯನ್ನು ತಪ್ಪದೆ ಸಲ್ಲಿಸುವಂತೆ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಡಿಆರ್‌ಐಗೆ ಸೂಚಿಸಿದರು. ವಿಚಾರಣೆಯಲ್ಲಿ, ಡಿಆರ್‌ಐ ಪರ ವಕೀಲರು ಆಕ್ಷೇಪಣೆಗಳ ಹೇಳಿಕೆಯನ್ನು ಸಲ್ಲಿಸಲು ಸ್ವಲ್ಪ ಸಮಯ ಕೋರಿದರು. ತನಿಖಾ ಅಧಿಕಾರಿಯ ಸಹಿಯನ್ನು ಪಡೆಯಲು ಸಾಧ್ಯವಾಗದ ಕಾರಣ ಆಕ್ಷೇಪಣೆಗಳ ಹೇಳಿಕೆಯನ್ನು ಸಲ್ಲಿಸಲಾಗಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು. ಕಸ್ಟಮ್ಸ್ ಕಾಯ್ದೆಯ ಸೆಕ್ಷನ್ 102 ರ ನಿಬಂಧನೆಗಳನ್ನು ಪಾಲಿಸದ ಕಾರಣ ಚಿನ್ನ ವಶಪಡಿಸಿಕೊಳ್ಳುವಿಕೆ ಮತ್ತು ಅರ್ಜಿದಾರರ ಬಂಧನವು ದುರ್ಬಲವಾಗಿದೆ ಎಂದು ರನ್ಯಾ ರಾವ್ ಪರವಾಗಿ ಹಾಜರಾದ ಹಿರಿಯ ವಕೀಲ ಸಂದೇಶ್ ಚೌಟ ವಾದಿಸಿದರು. ಸಾಕ್ಷಿಗಳ ವಶಪಡಿಸಿಕೊಳ್ಳುವಿಕೆ, ಬಂಧನ ಮತ್ತು ಸಹಿಯ ಕುರಿತು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮತ್ತು ಸೆಷನ್ಸ್ ನ್ಯಾಯಾಲಯದ ಮುಂದೆ ಸಲ್ಲಿಸಲಾದ…

Read More

ಮಂಗಳೂರು: ನಗರದಲ್ಲಿ ನಡೆದಿದ್ದಂತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಕೃತ್ಯ ನಡೆದ 24 ಗಂಟೆಯಲ್ಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಿನ್ನೆ ರಾತ್ರಿ ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಈ ಸಂಬಂಧ ರಾತ್ರಿ 1.30ರ ಸುಮಾರಿಗೆ 112ಗೆ ಕರೆ ಮಾಡಿ ಮಾಹಿತಿ ನೀಡಲಾಗಿತ್ತು. ಈ ಪ್ರಕರಣ ಸಂಬಂಧ ಕ್ಷಿಪ್ರ ಕಾರ್ಯಾಚರಣೆ ನಡೆಸಿದಂತ ಉಳ್ಳಾಲ ಠಾಣೆಯ ಪೊಲೀಸರು ಕೃತ್ಯ ನಡೆದ 24 ಗಂಟೆಯೊಳಗೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಅಂತ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮುಲ್ಕಿ ಮೂಲದ ಆಟೋ ಚಾಲಕ ಪ್ರಭುರಾಜ್(38), ಮಣಿ, ಕುಂಪಲದ ಮಿಥುನ್ (30) ಎಂಬುದಾಗಿ ಗುರುತಿಸಲಾಗಿದೆ. ಈ ಸಂಬಂಧ ತನಿಖೆ ಮುಂದುವರೆದಿದೆ. https://kannadanewsnow.com/kannada/cabinet-to-take-final-decision-on-caste-census-report-on-may-2-siddaramaiah/ https://kannadanewsnow.com/kannada/good-news-good-news-for-women-in-the-state-aadhaar-card-no-longer-required-for-free-travel-by-bus/

Read More

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ನಡೆಸಿದ್ದು, ಈ ಬಗ್ಗೆ ಮತ್ತಷ್ಟು ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ತಿಳಿಸಿದರು. ಅವರು ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಂಪುಟ ಸಭೆಯ ಬಳಿಕ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್ .ತಂಗಡಗಿ ಅವರೊಂದಿಗೆ ಮಾಧ್ಯಮಗೋಷ್ಠಿ ನಡೆಸಿ, ಸಚಿವ ಸಂಪುಟದ ಸಭೆಯ ನಿರ್ಣಯಗಳ ಕುರಿತು ಮಾಹಿತಿ ನೀಡಿದರು. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ಮಾಡಿದ್ದು ಇನ್ನಷ್ಟು ಮಾಹಿತಿ, ತಾಂತ್ರಿಕ ವಿವರಗಳು ಚರ್ಚೆಗೆ ಅಗತ್ಯ ಎನಿಸಿ, ಅವುಗಳನ್ನು ಒದಗಿಸಲು ಹಿರಿಯ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 27 ಪಿಐ, 7 ಡಿವೈಎಸ್ಪಿ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ಆದೇಶ ಹೊರಡಿಸಿರುವಂತ ರಾಜ್ಯ ಸರ್ಕಾರವು, ಸ್ಥಳ ನಿರೀಕ್ಷೆಯಲ್ಲಿದ್ದಂತ ಡಿವೈಎಸ್ಪಿ ರಾಮಕೃಷ್ಣ ಕೆಜಿ ಅವರನ್ನು ಬಿಡಿಎಗೆ ವರ್ಗಾವಣೆ ಮಾಡಿದೆ. ಡಾ.ವೀರಯ್ಯ ಹಿರೇಮಠ ಅವರನ್ನು ಬೆಳಗಾವಿಯ ಬೈಲಹೊಂಗಲ ಉಪ ವಿಭಾಗಕ್ಕೆ, ಡಾ.ಸಂತೋಷ್ ಕೆ.ಎಂ ಅವರನ್ನು ಪೊಲೀಸ್ ಪ್ರಧಾನ ಕಚೇರಿಯ ಕಾನೂನು ಶಾಖೆಗೆ, ಚಂದ್ರಶೇಖರ್.ಪಿ ಅವರನ್ನು ಕೊಡಗಿನ ಸೋಮವಾರಪೇಟೆ ಉಪ ವಿಭಾಗಕ್ಕೆ, ಪ್ರಕಾಶ್ ಕೆ.ಸಿ ಅವರನ್ನು ಮಂಗಳೂರು ದಕ್ಷಿಣ ಉಪ ವಿಭಾಗಕ್ಕೆ, ವೆಂಕಟೇಶ್ ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ ಹಾಗೂ ಮಹಾನಂದ ಹೆಚ್.ಕೆ ಅವರನ್ನು ಬೆಂಗಳೂರು ನಗರದ ಸಿಸಿಬಿಗೆ ವರ್ಗಾವಣೆ ಮಾಡಿ ಆದೇಶಿಸಿದೆ. ಇನ್ನೂ ಪೊಲೀಸ್ ಇನ್ಸ್ ಪೆಕ್ಟರ್ ಆಗಿರುವ ರಕ್ಷಿತ್ ಎ.ಕೆ ಅವರನ್ನು ಬೆಂಗಳೂರು ನಗರ ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ಹಂಸವೇಣಿ ಎ ವಿ ಅವರನ್ನು ಬೆಂಗಳೂರಿನ ಉತ್ತರ ವಿಭಾಗದ ಮಹಿಳಾ ಪೊಲೀಸ್ ಠಾಣೆಗೆ, ವಸೀಮುಲ್ಲಾ.ಎಸ್ ಅವರನ್ನು ಬೆಂಗಳೂರಿನ ಸಿಇಎನ್ ಪೊಲೀಸ್…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ 2025-26ನೇ ಸಾಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಗೆ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಆ ಮಾರ್ಗಸೂಚಿಯಂತೆ ಪಿಡಿಓ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಅಂತ ತಿಳಿಸಿದೆ. ಈ ಸಂಬಂಧ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಿಂದ ಅಧಿಸೂಚನೆ ಹೊರಡಿಸಲಾಗಿದ್ದು, 2024-25ನೇ ಸಾಲಿನಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು 2 ಹಾಗೂ ದ್ವಿತೀಯ ದರ್ಜೆ- ಲೆಕ್ಕ ಸಹಾಯಕರ ವರ್ಗಾವಣೆಗಳನ್ನು ಕೌನ್ಸಿಲಿಂಗ್ ಮೂಲಕ ಮಾಡಲಾಗುವುದೆಂದು ತಿಳಿಸಲಾಗಿದೆ. ಅದರಂತ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆಗಳನ್ನು ನಿಯಂತ್ರಿಸುವ ಸಲುವಾಗಿ ಉಲ್ಲೇಖ (2) ರ ಸರ್ಕಾರದ ಅಧಿಸೂಚನೆಯಲ್ಲಿ ಕರ್ನಾಟಕ ರಾಜ್ಯ ನಾಗರೀಕ ಸೇವೆಗಳು (ಹಿರಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) ನಿಯಮಗಳು, 2024 ನ್ನು ರೂಪಿಸಿ ಅಧಿಸೂಚಿಸಲಾಗಿರುತ್ತದೆ ಎಂದು ಹೇಳಿದೆ.…

Read More

ವಿಜಯಪುರ: ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾದ ಬಳಿಕ ರಾಜ್ಯದಲ್ಲಿರುವ ಎಲ್ಲ ಹಿಂದುಳಿದ ಸಮುದಾಯಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಕಾಂಗ್ರೆಸ್ಸಿನವರು ಮತ್ತು ಸಿದ್ದರಾಮಯ್ಯನವರು ಹಿಂದುಳಿದ ಸಮುದಾಯಗಳನ್ನು ಮರೆತು ಕೇವಲ ಅಲ್ಪಸಂಖ್ಯಾತರ ಹಿಂದೆ ಹೋಗುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಇಲ್ಲಿ ಇಂದು ಜನಾಕ್ರೋಶ ಯಾತ್ರೆಯ ಬೃಹತ್ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು. ಸಿದ್ದರಾಮಯ್ಯನವರು ಈಚೆಗೆ ಬಜೆಟ್ ಮಂಡಿಸಿದರು. ಈ ರಾಜ್ಯದಲ್ಲಿ ಮುಸಲ್ಮಾನರಿಗೆ ಸರಕಾರಿ ಕಾಮಗಾರಿಗಳಲ್ಲಿ ಶೇ 4 ಮೀಸಲಾತಿ ಕೊಡುವುದಾಗಿ ಹೇಳಿದ್ದಾರೆ. ಮುಸಲ್ಮಾನರ ಹೆಣ್ಮಕ್ಕಳಿಗೆ ಮದುವೆಗೆ 50 ಸಾವಿರ ಕೊಡುವುದಾಗಿ ಹೇಳುತ್ತಾರೆ. ಮುಸಲ್ಮಾನ ಯುವಜನರು ವಿದೇಶಕ್ಕೆ ಉನ್ನತ ಶಿಕ್ಷಣ ಪಡೆಯಲು ಹೋಗುವುದಾದರೆ 30 ಲಕ್ಷ ಧನಸಹಾಯ ನೀಡುವುದಾಗಿ ಹೇಳಿದ್ದಾರೆ. ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಗಳೇ ಕೇವಲ ಮುಸಲ್ಮಾನರ ಮುಖ್ಯಮಂತ್ರಿಗಳೇ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಹಿಂದೂ ಬಡ ಹುಡುಗಿಯರು ಇಲ್ಲವೇ? ಹಿಂದೂಗಳಲ್ಲಿ ವಿದೇಶಕ್ಕೆ ಹೋಗಿ ಉನ್ನತ ಶಿಕ್ಷಣ ಪಡೆದುಕೊಳ್ಳುವ ಅವಕಾಶ ಹಿಂದೂ ಬಡ ಯುವಕರಿಗೆ ಇಲ್ಲವೇ ಎಂದು ಕೇಳಿದರು. ಬಿಜೆಪಿ ಮುಸಲ್ಮಾನರ…

Read More