Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಕೇಂದ್ರ ಬಜೆಟ್ ರೈತರ ಬೇಡಿಕೆ ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿಂದು ಮಂಡಿಸಿದ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ರೈತರು ಬೆಳೆದ ಬೆಳೆಗೆ ನಿಶ್ಚಿತ ಬೆಲೆ ಬರಬೇಕು. ಇಂದು ಅನ್ನದಾತರ ಸ್ಥಿತಿ ಅನಿಶ್ಚಿತತೆಯಿಂದ ಕೂಡಿದೆ. ಎಲ್ಲ ವಸ್ತುಗಳಿಗೂ ಎಂ.ಎಸ್.ಪಿ. ಇರುವಾಗ ರೈತರ ಕಷ್ಟಾರ್ಜಿತಕ್ಕೆ ನಿರ್ದಿಷ್ಟ ಬೆಲೆ ನೀಡುವ ಎಂ.ಎಸ್.ಪಿ. ಕಾಯಿದೆ ಬಗ್ಗೆ ಪ್ರಕಟಿಸದ ಬಜೆಟ್ ಇದಾಗಿದೆ ಎಂದು ತಿಳಿಸಿದ್ದಾರೆ. ರೈತರು ಪ್ರಕೃತಿ ವಿಕೋಪದಿಂದ ತತ್ತರಿಸಿದ್ದು, ಸಾಲದ ಹೊರೆ ತಾಳದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತರ ಕೃಷಿ ಸಾಲ ಮನ್ನಾ ಬಗ್ಗೆ ಈ ಬಜೆಟ್ ನಲ್ಲಿ ಯಾವುದೇ ಘೋಷಣೆ ಮಾಡಿಲ್ಲ ಎಂದೂ ತಿಳಿಸಿದ್ದಾರೆ. ಬಜೆಟ್ ನಲ್ಲಿ ಬಿಜೆಪಿ ಮತ್ತು ಎನ್.ಡಿ.ಎ.ಯೇತರ ರಾಜ್ಯಗಳಿಗೆ ಘೋರ ಅನ್ಯಾಯ ಮಾಡಲಾಗಿದೆ. ಒಕ್ಕೂಟ ವ್ಯವಸ್ಥೆಯ ಭಾರತದಲ್ಲಿ ಇಂತಹ ತಾರತಮ್ಯ ಸರ್ವತ ಸಮರ್ಥನೀಯವಲ್ಲ. ಇಂತಹ ಒಂದು ಕೆಟ್ಟ ಸಂಪ್ರದಾಯಕ್ಕೆ ಬಜೆಟ್…
ಬೆಂಗಳೂರು: ಬಿಎಂಟಿಸಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಕೆನರಾ ಬ್ಯಾಂಕ್ ನೊಂದಿಗೆ ರೂ.1.5೦ಕೋಟಿ ಅಪಘಾತ ಪರಿಹಾರ ವಿಮಾ ಯೋಜನೆಯ ಒಡಂಬಡಿಕೆಯನ್ನು ರಾಜ್ಯ ಸರ್ಕಾರ ಮಾಡಿಕೊಂಡಿದೆ. ಇದಲ್ಲದೇ ಮೃತಾವಲಂಬಿತರಿಗೆ ರೂ.1 ಕೋಟಿ ವಿಮಾ ಪರಿಹಾರ ಮೊತ್ತದ ಚೆಕ್ ವಿತರಣೆಯನ್ನು ಮಾಡಲಾಯಿತು. ಬೆಂ.ಮ.ಸಾ.ಸಂಸ್ಥೆಯು ಒಟ್ಟು 51 ಘಟಕಗಳನ್ನು ಹೊಂದಿದೆ. ಪ್ರತಿದಿನ 5861 ಅನುಸೂಚಿಗಳಿಂದ 61536 ಸುತ್ತುವಳಿಗಳನ್ನು 12.04 ಲಕ್ಷ ಕಿ.ಮೀ.ಗಳಲ್ಲಿ ಆಚರಣೆಗೊಳಿಸಲಾಗುತ್ತಿದೆ. ಪ್ರತಿ ದಿನ ಸರಾಸರಿ 40 ಲಕ್ಷ ಪ್ರಯಾಣಿಕರು ಸಂಸ್ಥೆಯ ಸಾರಿಗೆಗಳ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ. ನಗರದಲ್ಲಿ ವಾಯುಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ಪ್ರಸ್ತುತ 1279 ಎಲೆಕ್ನಿಕ್ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ ಹಾಗೂ ಮುಂದಿನ ದಿನಗಳಲ್ಲಿ 352 ಎಲೆಕ್ನಿಕ್ ಬಸ್ಸುಗಳನ್ನು ಸೇರ್ಪಡೆಗೊಳಿಸಲು ಯೋಜಿಸಲಾಗಿದೆ. ಪ್ರಸ್ತುತ ಒಟ್ಟು 6158 ವಾಹನಗಳನ್ನು ಹೊಂದಿದ್ದು, ಪರಿಸರಸ್ನೇಹಿ ಹಾಗೂ ವಾಯುಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲೆಕ್ನಿಕ್ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಕೆನರಾ ಬ್ಯಾಂಕ್ ವೇತನ ಖಾತೆ ಯೋಜನೆ ಸಂಸ್ಥೆಯು ಕೆನರಾ ಬ್ಯಾಂಕ್ನೊಂದಿಗೆ ಮೂರು ವರ್ಷಗಳ ಅವಧಿಗೆ ಒಡಂಬಡಿಕೆಯನ್ನು ಮಾಡಿಕೊಂಡಿದ್ದು, ಈ ಒಡಂಬಡಿಕೆಯನ್ವಯ ಬ್ಯಾಂಕ್ ನಲ್ಲಿ…
ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2025-26ನೇ ಸಾಲಿನ ಬಜೆಟ್ ನಿರಾಶದಾಯಕವಾದ ಬಜೆಟ್ ಆಗಿದ್ದು, ಬಜೆಟ್ ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡಲಾಗಿದೆ ಎಂಬುದಾಗಿ ಸಚಿವ ಶಿವರಾಜ್ ತಂಡರಗಿ ಹೇಳಿದ್ದಾರೆ. ಇಂದು ಕೇಂದ್ರ ಬಜೆಟ್ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಗ್ರಾಮೀಣ ಭಾಗದಲ್ಲಿ ಯಾರ ಬಳಿಯೂ ಹಣವಿಲ್ಲ. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯಾವುದೇ ಯೋಜನೆಗಳನ್ನು ಘೋಷಣೆ ಮಾಡಿಲ್ಲ. ಈ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರು ಕಣ್ಣೀರು ಹಾಕುವಂತಾಗಿದೆ. ವಿಪರ್ಯಾಸವೆಂದರೆ ದೇಶದಲ್ಲಿ ಅಂದಾಜು ಶೇ.45ರಿಂದ 50ರಷ್ಟು ನಿರುದ್ಯೋಗ ತಾಂಡವವಾಡುತ್ತಿದೆ. ಆದರೆ ಉದ್ಯೋಗ ಸೃಷ್ಟಿ ಬಗ್ಗೆ ಯಾವುದೇ ಪ್ರಸ್ತಾಪ ಮಾಡದಿರುವುದು ನಿಜಕ್ಕೂ ನಮ್ಮ ದುರ್ದೈವ ಎಂದಿದ್ದಾರೆ. ನಮ್ಮರಾಜ್ಯಗಳಿಗೆ ಅನ್ಯಾಯ ಬಜೆಟ್ ನಿಂದ ಸಣ್ಣ ಕೈಗಾರಿಕೆಗಳಿಗೆ ಯಾವುದೇ ಅನುಕೂಲವಾಗಿಲ್ಲ. ರೈಲ್ವೆ, ಶಿಕ್ಷಣ, ಮೂಲಸೌಲಭ್ಯ ಯೋಜನೆಗೆ ಯಾವುದೇ ಪ್ರಸ್ತಾಪ ಮಾಡಿಲ್ಲ. ಇದು ರೈತರ, ಮಹಿಳೆಯರ, ದಲಿತರ ವಿರೋಧಿ ಬಜೆಟ್ ಆಗಿದೆ. ಅಕ್ಟೋಬರ್ ನಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಿಹಾರ ರಾಜ್ಯಕ್ಕೆ ವಿಶೇಷವಾದ ಯೋಜನೆಗಳನ್ನು…
ನವದೆಹಲಿ: ಕೇಂದ್ರ ಬಜೆಟ್ 2025 ಅನ್ನು ಭಾರತದ ಅಭಿವೃದ್ಧಿಯ ಪ್ರಯಾಣದಲ್ಲಿ ಪ್ರಮುಖ ಕ್ಷಣ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ, 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಈಡೇರಿಸುವಲ್ಲಿ ಅದರ ಪಾತ್ರವನ್ನು ಒತ್ತಿಹೇಳಿದ್ದಾರೆ. ಸಾಮಾನ್ಯ ನಾಗರಿಕರ ಅಗತ್ಯತೆಗಳನ್ನು ಕೇಂದ್ರೀಕರಿಸಿ ಮತ್ತು ಅಂತರ್ಗತ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳಲು ರಚಿಸಲಾದ ಬಜೆಟ್ ಅನ್ನು “ಆಕಾಂಕ್ಷೆಗಳ ಬಜೆಟ್” ಎಂದು ಮೋದಿ ತಮ್ಮ ಹೇಳಿಕೆಯಲ್ಲಿ ಬಣ್ಣಿಸಿದ್ದಾರೆ. “ಭಾರತದ ಅಭಿವೃದ್ಧಿಯ ಪಯಣದಲ್ಲಿ ಇಂದು ಒಂದು ಪ್ರಮುಖ ಮೈಲಿಗಲ್ಲು. ಇದು 140 ಕೋಟಿ ಭಾರತೀಯರ ಆಕಾಂಕ್ಷೆಗಳ ಬಜೆಟ್. ಇದು ಪ್ರತಿಯೊಬ್ಬ ಭಾರತೀಯನ ಕನಸುಗಳನ್ನು ಈಡೇರಿಸುವ ಬಜೆಟ್” ಎಂದು ಅವರು ಹೇಳಿದರು. ಯುವಕರಿಗೆ ಹೊಸ ಕ್ಷೇತ್ರಗಳನ್ನು ತೆರೆಯಲು ವಿಶೇಷ ಒತ್ತು ನೀಡಿ, ದೇಶದ ಭವಿಷ್ಯದ ಬೆಳವಣಿಗೆಯನ್ನು ಮುನ್ನಡೆಸಲು ಅವರನ್ನು ಸಶಕ್ತಗೊಳಿಸುವ ಮೂಲಕ ಬಜೆಟ್ ಗಮನಾರ್ಹ ಸುಧಾರಣೆಗಳಿಗೆ ದಾರಿ ಮಾಡಿಕೊಟ್ಟಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. “ಸಾಮಾನ್ಯ ನಾಗರಿಕರು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ವಿಕ್ಷಿತ್ ಭಾರತ್ ಮಿಷನ್ ಅನ್ನು ಮುನ್ನಡೆಸಲಿದ್ದಾರೆ” ಎಂದು ಅವರು…
2025 ರ ಬಜೆಟ್ನಲ್ಲಿ ಹೊಸ ತೆರಿಗೆ ವ್ಯವಸ್ಥೆಯಡಿ 12 ಲಕ್ಷ ರೂ.ವರೆಗಿನ ಆದಾಯದ ಮೇಲಿನ ಆದಾಯ ತೆರಿಗೆಯನ್ನು ಮನ್ನಾ ಮಾಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು. ಈ ನಿರ್ಧಾರದ ನಂತರ, ಸಾಮಾಜಿಕ ಮಾಧ್ಯಮದಲ್ಲಿ ಸಂಭ್ರಮದ ವಾತಾವರಣವಿತ್ತು. ನೆಟ್ಟಿಗರು ಅದನ್ನು ತಮಾಷೆಯ ಮೀಮ್ ಗಳಿಂದ ತುಂಬಿದರು. ‘ಕಭಿ ಖುಷಿ ಕಭಿ ಗಮ್’ ಚಿತ್ರದ ಬಾಲಿವುಡ್ ನಟಿ ಜಯಾ ಬಚ್ಚನ್ ಅವರ ಪ್ರಸಿದ್ಧ ದೃಶ್ಯಕ್ಕೆ ನಿರ್ಮಲಾ ಸೀತಾರಾಮನ್ ಅವರ ಮುಖವನ್ನು ಮಾರ್ಫಿಂಗ್ ಮಾಡಿದ ಚಿತ್ರವನ್ನು ಬಳಕೆದಾರರು ಹಂಚಿಕೊಂಡಿದ್ದಾರೆ. ಈ ನಿರ್ಧಾರವನ್ನು ಸ್ವಾಗತಿಸುವ “ಈಗ ಜೀವನವು ಸಿದ್ಧವಾಗಿದೆ” ಮತ್ತು “ಹಣಕಾಸು ಮಂತ್ರಿ, ನೀವು ಶ್ರೇಷ್ಠರು!” ಎಂಬಂತಹ ತಮಾಷೆಯ ಶೀರ್ಷಿಕೆಗಳೊಂದಿಗೆ ಬಳಕೆದಾರರು ಮೀಮ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ. https://twitter.com/sarphiribalika_/status/1885579853019197795 https://twitter.com/Harsh_humour/status/1885582596039663759 https://twitter.com/Akash03893128/status/1885582580919263704 https://kannadanewsnow.com/kannada/no-one-has-the-right-to-tell-me-to-leave-the-party-former-minister-b-sriramulu/ https://kannadanewsnow.com/kannada/breaking-govt-announces-special-announcement-for-automobile-sector-to-reduce-prices-of-electric-cars/
ವಿಜಯಪುರ : ನನಗೆ ಕಾಂಗ್ರೆಸ್ ಪಕ್ಷ ಸೇರಿದಂತೆ ಎಲ್ಲಾ ಪಕ್ಷದ ನಾಯಕರು ಸ್ನೇಹಿತರೇ. ನನ್ನ ಬಗ್ಗೆ ಉತ್ತಮ ಅಭಿಪ್ರಾಯ ಕೂಡ ಹೇಳಿದ್ದಾರೆ. ಸಲಹೆಯನ್ನೂ ನೀಡಿದ್ದಾರೆ. ಹಾಗಂತ ನನಗೆ ಪಕ್ಷ ಬಿಡು ಎಂದು ಹೇಳಲು ಯಾರಿಗೂ ಹಕ್ಕಿಲ್ಲ ಎಂಬುದಾಗಿ ಮಾಜಿ ಸಚಿವ ಬಿ.ಶ್ರೀರಾಮುಲು ಸ್ವಪಕ್ಷೀಯ ನಾಯಕರಿಗೆ ಕೌಂಟರ್ ಕೊಟ್ಟಿದ್ದಾರೆ. ಇಂದು ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನನಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ದೆಹಲಿಗೆ ಬರುವಂತೆ ತಿಳಿಸಿದ್ದಾರೆ. ಸದ್ಯಕ್ಕೆ ಸಂಸತ್ ಕಲಾಪ ನಡೆಯುತ್ತಿರುವುದರಿಂದ ಫೆಬ್ರವರಿ.5ರ ನಂತ್ರ ದೆಹಲಿಗೆ ತೆರಳಲಿದ್ದೇನೆ. ಅಲ್ಲಿ ರಾಷ್ಟ್ರದ ನಾಯಕರನ್ನು ಭೇಟಿಯಾಗುತ್ತೇನೆ ಎಂಬುದಾಗಿ ತಿಳಿಸಿದರು. ನಾನು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷವನ್ನು ಬಿಡುವುದಿಲ್ಲ. 2028ರಲ್ಲಿ ಎಲ್ಲರೂ ಒಟ್ಟಾಗಿ ಪಕ್ಷಕ್ಕಾಗಿ ದುಡಿದು ಪಕ್ಷ ಕಟ್ಟುವಂತ ಕೆಲಸ ಮಾಡಲಿದ್ದೇವೆ. ಕೆಲವೆಡೆ ಅಪಸ್ವರ ಎದ್ದಿದೆ. ಎಲ್ಲಾ ಪಕ್ಷದಲ್ಲೂ ಅಸಮಾಧಾನ ಸಾಮಾನ್ಯ. ಅದನ್ನೆಲ್ಲ ಬಿಜೆಪಿ ವರಿಷ್ಠರು ಸರಿ ಪಡಿಸಲಿದ್ದಾರೆ ಎಂಬುದಾಗಿ ಹೇಳಿದರು. https://kannadanewsnow.com/kannada/congress-mla-br-patil-resigns-as-cms-political-advisor/ https://kannadanewsnow.com/kannada/breaking-nirmala-sitharaman-announces-exemption-from-customs-duty-on-36-life-saving-drugs-including-cancer/
ಬೆಂಗಳೂರು: ಮುಖ್ಯಮಂತ್ರಿ ರಾಜಕೀಯ ಸಲಹೆಗಾರರಾಗಿ ಅಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಅವರನ್ನು ನೇಮಿಸಲಾಗಿತ್ತು. ಈ ಹುದ್ದೆಗೆ ಇಂದು ಅವರು ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಸಲ್ಲಿಸಿರುವುದಾಗಿ ತಿಳಿದು ಬಂದಿದೆ. ಈ ಮೂಲಕ ಮುಖ್ಯಮಂತ್ರಿ ರಾಜಕೀಯ ಸಲಹೆಗಾರ ಸ್ಥಾನಕ್ಕೆ ಅಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ರಾಜೀನಾಮೆ ನೀಡಿ ಹೊರ ನಡೆದಿದ್ದಾರೆ. https://kannadanewsnow.com/kannada/breaking-nirmala-sitharaman-announces-exemption-from-customs-duty-on-36-life-saving-drugs-including-cancer/ https://kannadanewsnow.com/kannada/breaking-govt-announces-special-announcement-for-automobile-sector-to-reduce-prices-of-electric-cars/
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಜಿಂಕೆ ಸಾವನ್ನಪ್ಪಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಶಿರಾಳಕೊಪ್ಪ ರಸ್ತೆಯಲ್ಲಿ ಅಪರಿಚಿತವಾಹನವೊಂದು ಡಿಕ್ಕಿಯಾಗಿ ಜಿಂಕೆಯೊಂದು ಸಾವನ್ನಪ್ಪಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ದರು. ಅಂದಹಾಗೇ ಉಳವಿ ಸಮೀಪದ ಶಿರಾಳಕೊಪ್ಪ ರಸ್ತೆಯಲ್ಲಿ ದಟ್ಟ ಕಾಡಿದೆ. ಒಂದು ಬದಿಯಿಂದ ಮತ್ತೊಂದು ಬದಿಗೆ ಜಿಂಕೆಯ ಹಿಂಡು ಇಂದು ಮುಂಜಾನೆ ಸಾಗುತ್ತಿದ್ದಂತ ವೇಳೆಯಲ್ಲಿ ಅಪರಿಚಿತ ವಾಹನ ಜಿಂಕೆಗೆ ಡಿಕ್ಕಿಯಾದ ಪರಿಣಾಮ ತೀವ್ರವಾಗಿ ಗಾಯಗೊಂಡಿತ್ತು. ಹಿಂಬದಿಯ ಕಾಲು ಮುರಿತಕ್ಕೊಳಗಾಗಿದ್ದಂತ ಜಿಂಕೆಯನ್ನು ದಾರಿ ಹೋಕರು ಸತ್ಕರಿಸಿ, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಪಶುವೈದ್ಯರೊಂದಿಗೆ ಆಗಮಿಸುವ ವೇಳೆಗಾಗಲೇ ಗಂಭೀರವಾಗಿ ಗಾಯಗೊಂಡಿದ್ದಂತ ಜಿಂಕೆ ಸಾವನ್ನಪ್ಪಿತ್ತು. ಅದನ್ನು ಮರಣೋತ್ತರ ಪರೀಕ್ಷೆಗಾಗಿ ಸೊರಬಕ್ಕೆ ಕೊಂಡೊಯ್ಯಲಾಗಿದೆ ಎಂಬುದಾಗಿ ಉಳವಿಯ ಉಪ ವಲಯ ಅರಣ್ಯಾಧಿಕಾರಿ ಯೋಗೇಶ್ ಮಾಹಿತಿ ನೀಡಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು https://kannadanewsnow.com/kannada/union-budget-2025-new-income-tax-slab-released-heres-all-you-need-to-know/ https://kannadanewsnow.com/kannada/breaking-nirmala-sitharaman-announces-exemption-from-customs-duty-on-36-life-saving-drugs-including-cancer/
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-2026ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಐತಿಹಾಸಿಕ ಪ್ರಕಟಣೆಯಲ್ಲಿ, ಹಣಕಾಸು ಸಚಿವರು 12 ಲಕ್ಷ ರೂ.ವರೆಗಿನ ಆದಾಯ ಹೊಂದಿರುವವರಿಗೆ ಯಾವುದೇ ಆದಾಯ ತೆರಿಗೆ ಪಾವತಿಸಬೇಕಾಗಿಲ್ಲ ಎಂದು ಘೋಷಿಸಿದರು. “ತೆರಿಗೆ ದರ ರಚನೆಗಳನ್ನು ಈ ಕೆಳಗಿನಂತೆ ಪರಿಷ್ಕರಿಸಲು ನಾನು ಪ್ರಸ್ತಾಪಿಸುತ್ತೇನೆ: 0 ರಿಂದ 4 ಲಕ್ಷ – ಶೂನ್ಯ, 4 ಲಕ್ಷದಿಂದ 8 ಲಕ್ಷ – 5%, 8 ಲಕ್ಷದಿಂದ 12 ಲಕ್ಷ – 10%, 12 ಲಕ್ಷದಿಂದ 16 ಲಕ್ಷ – 15%, 16 ಲಕ್ಷದಿಂದ 20 ಲಕ್ಷ – 20%, 20 ಲಕ್ಷದಿಂದ 24 ಲಕ್ಷ – 25% ಮತ್ತು 25% ಬಂಡವಾಳ ಲಾಭಗಳಂತಹ ವಿಶೇಷ ದರದ ಆದಾಯವನ್ನು ಹೊರತುಪಡಿಸಿ 12 ಲಕ್ಷ ರೂ.ವರೆಗಿನ ಸಾಮಾನ್ಯ ಆದಾಯದ ತೆರಿಗೆದಾರರಿಗೆ, ಸ್ಲ್ಯಾಬ್ ದರ ಕಡಿತದಿಂದ ಉಂಟಾಗುವ ಪ್ರಯೋಜನದ ಜೊತೆಗೆ ತೆರಿಗೆ ರಿಯಾಯಿತಿಯನ್ನು ನೀಡಲಾಗುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. ತೆರಿಗೆ ಪಾವತಿದಾರರು ಎರಡು…
ಬೆಂಗಳೂರು: ರಾಜ್ಯದಲ್ಲಿನ ಬಡತನ ರೇಖೆಗಿಂತ ಕೆಳಗಿರುವಂತ ಜನರಿಗೆ ತುರ್ತು ಸಂದರ್ಭ ಸೇರಿದಂತೆ ಅನಾರೋಗ್ಯ ಸಮಸ್ಯೆಗೆ, ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಪಡೆಯಬಹುದಾಗಿದೆ. ಈ ಮೊದಲು ಅಫ್ ಲೈನ್ ಮೂಲಕ ಅರ್ಜಿಯೊಂದಿಗೆ ಅಲೆಯ ಬೇಕಿದ್ದಂತ ಪ್ರಕ್ರಿಯೆಯು, ಈಗ ಮತ್ತಷ್ಟು ಸರಳಗೊಳಿಸಲಾಗಿದೆ. ಜಸ್ಟ್ ಕುಳಿತಲ್ಲಿಯೇ ಆನ್ ಲೈನ್ ಮೂಲಕ ಸಲ್ಲಿಕೆ ಮಾಡಬಹುದಾಗಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿ ಬಗ್ಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯು ಸರ್ಕಾರದ ಆದೇಶ ಸಂಖ್ಯೆ ಎಫ್.ಡಿ. 103 ಎ.ಸಿ.ಪಿ 58ರಂತೆ ದಿನಾಂಕ: 3ನೇ ಡಿಸೆಂಬರ್ 1958ರಂತೆ ಸ್ಥಾಪಿತಗೊಂಡಿದ್ದು, ನಿಯಮಗಳು ಸರ್ಕಾರದ ಆದೇಶ ಸಂಖ್ಯೆ: ಎಫ್.ಡಿ. 35 ಬಿ.ಎಂ.ಎಸ್. 78 ದಿನಾಂಕ: 12ನೇ ಸೆಪ್ಟಂಬರ್ 1978 ರಂದು ರಚನೆಗೊಂಡಿರುತ್ತದೆ. ಮುಖ್ಯಮಂತ್ರಿಗಳಿಗೆ ಪ್ರದತ್ತವಾಗಿರುವ ವಿವೇಚನ ಅಧಿಕಾರದಂತೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಮಂಜೂರು ಮಾಡಲಾಗುತ್ತಿದೆ. ಸಾರ್ವಜನಿಕರು, ಸಂಘ-ಸಂಸ್ಥೆಗಳು, ನಿಗಮ-ಮಂಡಳಿಗಳು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಲ್ಲಿಸುವ ದೇಣಿಗೆಯ ಮೊತ್ತವೇ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಆದಾಯ ಮೂಲವಾಗಿದ್ದು, ಸರ್ಕಾರದ ವಾರ್ಷಿಕ ಆಯ-ವ್ಯಯದಲ್ಲಿ ಯಾವುದೇ ಅನುದಾನವು ನಿಗಧಿಯಾಗಿರುವುದಿಲ್ಲ…













