Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ಬಿಡದಿಯ ಬಳಿಯಲ್ಲಿ ಮಾಜಿ ಭೂಗತ ದೊರೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಈ ದಾಳಿಯಲ್ಲಿ ಗಾಯಗೊಂಡು ರಿಕ್ಕಿ ರೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂತಹ ಪ್ರಕರಣವನ್ನು ರದ್ದುಗೊಳಿಸುವಂತೆ ಮುತ್ತಪ್ಪ ರೈ ಪತ್ನಿ ಅನುರಾಧಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಆಸ್ತಿಯ ವಿಚಾರವಾಗಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಆಸ್ಪತ್ರೆಗೆ ದಾಖಲಾಗಿರುವಂತ ರಿಕ್ಕಿ ರೈ, ಅಲ್ಲಿಂದಲೇ ಹೇಳಿಕೆ ನೀಡಿ, ಈ ಘಟನೆಗೆ ನನ್ನ ಚಿಕ್ಕಮ್ಮನೇ ಕಾರಣ ಎಂಬುದಾಗಿ ಆರೋಪಿಸಿದ್ದರು. ಅವರ ಹೇಳಿಕೆ ಆಧರಿಸಿ, ಮುತ್ತಪ್ಪ ರೈ ಪತ್ನಿ ಅನುರಾಧ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣಕ್ಕೆ ಮಧ್ಯಂತ ತಡೆ ನೀಡುವಂತೆ, ಪ್ರಕರಣ ರದ್ದು ಮಾಡುವಂತೆ ಮುತ್ತಪ್ಪ ರೈ ಪತ್ನಿ ಅನುರಾಧ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದಂತ ಹೈಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ. https://kannadanewsnow.com/kannada/gold-price-touches-rs-1-lakh-mark-for-jewellery-lovers/ https://kannadanewsnow.com/kannada/complaint-to-lokayukta-to-probe-smart-meter-scam-dr-cn-ashwathnarayan/
ನವದೆಹಲಿ: ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ 10 ಗ್ರಾಂಗೆ 1 ಲಕ್ಷ ರೂಪಾಯಿ ಮಾನಸಿಕ ಗಡಿಯನ್ನು ತಲುಪಿದ್ದು, ಬೆಲೆಬಾಳುವ ಹಳದಿ ಲೋಹದ ಬೆಲೆ ಭಾರತದಲ್ಲಿ ಏರಿಕೆಯಾಗುತ್ತಲೇ ಇದೆ. ಅಖಿಲ ಭಾರತ ಸರಾಫಾ ಅಸೋಸಿಯೇಷನ್ ಪ್ರಕಾರ, 99.9 ಪ್ರತಿಶತ ಶುದ್ಧತೆಯ ಹಳದಿ ಲೋಹವು 1,650 ರೂಪಾಯಿಗಳಷ್ಟು ಏರಿಕೆಯಾಗಿ 10 ಗ್ರಾಂಗೆ 99,800 ರೂಪಾಯಿಗಳನ್ನು ತಲುಪಿದೆ. ಶುಕ್ರವಾರ ಇದರ ಮೌಲ್ಯ 20 ರೂಪಾಯಿಗಳಷ್ಟು ಇಳಿಕೆಯಾಗಿ 98,150 ರೂಪಾಯಿಗಳಿಗೆ ತಲುಪಿತ್ತು. ಅದೇ ರೀತಿ, 99.5 ಪ್ರತಿಶತ ಶುದ್ಧತೆಯ ಚಿನ್ನವು ಸ್ಥಳೀಯ ಮಾರುಕಟ್ಟೆಗಳಲ್ಲಿ 10 ಗ್ರಾಂಗೆ 1,600 ರೂಪಾಯಿಗಳಷ್ಟು ಏರಿಕೆಯಾಗಿ 99,300 ರೂಪಾಯಿಗಳ ಹೊಸ ಗರಿಷ್ಠ ಮಟ್ಟವನ್ನು ತಲುಪಿತ್ತು. ಹಿಂದಿನ ಮಾರುಕಟ್ಟೆ ಮುಕ್ತಾಯದಲ್ಲಿ ಇದು ಸ್ವಲ್ಪ ಕುಸಿದು 10 ಗ್ರಾಂಗೆ 97,700 ರೂಪಾಯಿಗಳಿಗೆ ತಲುಪಿತ್ತು. ಬೆಳ್ಳಿ ಬೆಲೆಯೂ ಸಹ ಏರಿಕೆ ಬೆಳ್ಳಿ ಬೆಲೆಯೂ ಸಹ 500 ರೂಪಾಯಿಗಳಷ್ಟು ಏರಿಕೆಯಾಗಿ ಪ್ರತಿ ಕೆಜಿಗೆ 98,500 ರೂಪಾಯಿಗಳಿಗೆ ತಲುಪಿದೆ. ಶುಕ್ರವಾರ ಬಿಳಿ ಲೋಹವು ಪ್ರತಿ ಕೆಜಿಗೆ 98,000 ರೂ.ಗೆ ಸ್ಥಿರವಾಗಿ ವಹಿವಾಟು…
ಬೆಂಗಳೂರು: ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಬಹಳ ಆಳವಾದ ಅನುಭವ ಹೊಂದಿರುವ ರಾಜ್ಯ ಸರ್ಕಾರದ ಪ್ರತಿಷ್ಠಿತ ಸಂಸ್ಥೆ ಪೋರ್ಟಲ್ ಮೂಲಕ ರಾಜ್ಯ ಹಾಗೂ ದೇಶಕ್ಕೆ ಹೊಸ ಮುನ್ನುಡಿ ಬರೆಯಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಕಿಯೋನಿಕ್ಸ್ ಸಮಸ್ಯೆ ರೂಪಿಸಿರುವ ಇ-ಕಾಮರ್ಸ್ ಪೋರ್ಟಲ್ ಅನ್ನು ಲೋಕಾರ್ಪಣೆಗೊಳಿಸಿ ಮಾತನಾಡುತ್ತಿದ್ದರು. ತಂತ್ರಜ್ಞಾನದ ಮೂಲಕವೇ ಈಗ ಅಭಿವೃದ್ಧಿ ಸಾಧ್ಯ, ತಂತ್ರಜ್ಞಾನದಿಂದಲೇ ಸಂಪತ್ತು, ಏಳ್ಗೆ ಎಂದು ಹೇಳಿದ ಉಪ ಮುಖ್ಯಮಂತ್ರಿಗಳು ಗ್ರಾಮೀಣ ಪ್ರದೇಶದ ಯುವಕರನ್ನು ತಂತ್ರಜ್ಞಾನ ಕ್ಷೇತ್ರಕ್ಕೆ ಹೆಚ್ಚು ಸಂಖ್ಯೆಯಲ್ಲಿ ತರುವ ಮೂಲಕ ಗ್ರಾಮೀಣ ಯುವಕರಲ್ಲಿ ತಂತ್ರಜ್ಞಾನದ ವೃತ್ತಿ ಕೌಶಲ್ಯದ ಅರಿವು ಮೂಡಿಸಬೇಕಾದ ಅವಶ್ಯಕತೆಯಿದೆ ಎಂದು ಹೇಳಿದರು. ಕಿಯೊನಿಕ್ಸ್ ಎದುರಿಸುತ್ತಿದ್ದ ಸಮಸ್ಯೆಗಳಿಗೆಹೊಸ ಇ-ಕಾಮರ್ಸ್ ಪೋರ್ಟಲ್ ಮೂಲಕ ಪರಿಹಾರ: ಪ್ರಿಯಾಂಕ್ ಖರ್ಗೆ ಸರ್ಕಾರದ ವಿವಿಧ ಇಲಾಖೆಗಳು ತಮಗೆ ಅವಶ್ಯವಾಗುವ ಸಾಮಗ್ರಿಗಳನ್ನು ಜಾಗತಿಕ ಸ್ಪರ್ಧಾತ್ಮಕ ದರಗಳಲ್ಲಿ ಹೊಂದಲು ಅನುಕೂಲವಾಗುವಂತೆ ಕಿಯೋನಿಕ್ಸ್ ಹೊಸ ಇ-ಕಾಮರ್ಸ್ ಪೋರ್ಟಲ್ನ್ನು ಸಿದ್ಧಪಡಿಸಲಾಗಿದೆ, ಕಳೆದ ಎರಡು ವರ್ಷಗಳಿಂದ ಕಿಯೊನಿಕ್ಸ್ ಸಂಸ್ಥೆ ಎದುರಿಸುತ್ತಿದ್ದ ಹಲವಾರು ಸಮಸೈೆಗಳಿಗೆ ಈ ಪೋರ್ಟಲ್ ಪರಿಹಾರ…
ನವದೆಹಲಿ: ಆಭರಣ ಪ್ರಿಯರಿಗೆ ಬಿಗ್ ಶಾಕ್ ಎನ್ನುವಂತೆ ಚಿನ್ನದ ಬೆಲೆ ಗಗನಕ್ಕೇರಿದೆ. ಹೊಸ ದಾಖಲೆ ಎನ್ನುವಂತೆ ಇದೇ ಮೊದಲ ಬಾರಿದೆ ಚಿನ್ನದ ಬೆಲೆಯು 1 ಲಕ್ಷ ರೂಪಾಯಿಗೆ ತಲುಪಿದೆ. ದಿನೇ ದಿನೇ ಚಿನ್ನದ ಬೆಲೆ ಏರುಗತಿಯಲ್ಲಿ ಸಾಗುತ್ತಿದೆ. ಆಭರಣ ಖರೀದಿ ಮಾಡೋರಿಗೆ ಬಿಗ್ ಶಾಕ್ ಎನ್ನುವಂತೆ ಇದೀಗ ಚಿನ್ನದ ಬೆಲೆ ಮತ್ತಷ್ಟು ಏರಿಕೆಯಾಗಿದೆ. ಇಂದು 10 ಗ್ರಾಂ ಚಿನ್ನದ ಬೆಲೆಯು ಬರೋಬ್ಬರಿ ರೂ.99,800 ತಲುಪಿದೆ. ಚಿನ್ನದ ಬೆಲೆಯು ಮಾರುಕಟ್ಟೆಯಲ್ಲಿ 10 ಗ್ರಾಂಗೆ ರೂ.99,800 ತಲುಪಿದ್ದು ಇದೇ ಮೊದಲಾಗಿದೆ. ಈ ಹಿಂದೆ ಇದಕ್ಕಿಂತ ಕಡಿಮೆ ಧಾರಣೆಯನ್ನು ಚಿನ್ನ ಹೊಂದಿತ್ತು. ಇಂದು ಇದೇ ಮೊದಲ ಬಾರಿಗೆ ಎನ್ನುವಂತೆ ಲಕ್ಷ ರೂಪಾಯಿಗೆ ಚಿನ್ನದ ಬೆಲೆ ತಲುಪಿದೆ. ಗುಡ್ ರಿಟರ್ನ್ಸ್ ವೆಬ್ಸೈಟ್ ಪ್ರಕಾರ, 24 ಕ್ಯಾರೆಟ್ ಚಿನ್ನದ ಬೆಲೆ ಸೋಮವಾರದ ಆರಂಭಿಕ ವಹಿವಾಟಿನಲ್ಲಿ 10 ರೂಪಾಯಿ ಇಳಿಕೆಯಾಗಿದ್ದು, 10 ಗ್ರಾಂ ಅಮೂಲ್ಯ ಲೋಹದ ವಹಿವಾಟು 97,570 ರೂ. ಬೆಳ್ಳಿ ಬೆಲೆ 100 ರೂಪಾಯಿ ಇಳಿಕೆಯಾಗಿದ್ದು, 1 ಕೆಜಿ…
ಬೆಂಗಳೂರು : “ದೇವರು ಹಾಗೂ ನಮ್ಮ ಮಧ್ಯೆ ಅರ್ಚಕ ಇರುತ್ತಾನೆ. ಅದೇ ರೀತಿ ಸರ್ಕಾರ ಹಾಗೂ ಜನರ ನಡುವೆ ಸರ್ಕಾರಿ ನೌಕರರು ಇರುತ್ತಾರೆ. ನೀವು ಕೆಲಸಕ್ಕಾಗಿ ಜನರನ್ನು ಪದೇ, ಪದೇ ಕಚೇರಿಗೆ ತಿರುಗಿಸುವ ಕೆಲಸ ಮಾಡಬಾರದು. ಧನಾತ್ಮಕವಾಗಿ ಕೆಲಸ ಮಾಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ನೌಕರರಿಗೆ ಕಿವಿಮಾತು ಹೇಳಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಸೋಮವಾರ ನಡೆದ ರಾಜ್ಯ ಸರಕಾರಿ ನೌಕರರ ದಿನಾಚರಣೆ- 2025 ಮತ್ತು ರಾಜ್ಯ ಮಟ್ಟದ ʼಸರ್ವೋತ್ತಮ ಸೇವಾʼ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. “ಸರ್ಕಾರಿ ನೌಕರನಿಗೆ ಕೆಲಸವಾಗುವ ಬಗ್ಗೆ ತಿಳಿದಿರುತ್ತದೆ. ಆದರೂ ಸಾರ್ವಜನಿಕರನ್ನು ತಿರುಗಿಸುತ್ತಾರೆ. ಕೆಲವರಿಗೆ ಬರೀ ಕೊಕ್ಕೆ ಹಾಕುವುದೇ ಕೆಲಸ. ಕೆಲಸ ಆಗುವಂತಿದ್ದರೂ ಆ ದಾಖಲೆ, ಈ ದಾಖಲೆ ತೆಗೆದುಕೊಂಡು ಬಾ ಎಂದು ತಿರುಗಿಸುತ್ತಾರೆ. ಸಾರ್ವಜನಿಕರು ಸಲಾಂ ಹೊಡೆಯಬೇಕು, ಕಡಲೆ ಕಾಯಿ, ಹಣ್ಣು, ಕೋಳಿ ತಂದುಕೊಡಬೇಕು ಎನ್ನುವ ಧೋರಣೆ ಹೊಂದಿರುತ್ತಾರೆ. ಇಂತಹ ಸನ್ನಿವೇಶಗಳನ್ನು ಈ ಹಿಂದೆ ಗ್ರಾಮೀಣ ಭಾಗದಲ್ಲಿ…
ಕೆಎನ್ಎನ್ ಡಿಜಿಟಲ್ ಡೆಸ್ಕ್: ಕನ್ನಡ ನ್ಯೂಸ್ ನೌ ವೆಬ್ ಸೈಟ್ ಗೆ ಜಿಲ್ಲಾ ಹಾಗೂ ತಾಲ್ಲೂಕು ವರದಿಗಾರರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪತ್ರಕರ್ತರಾಗಿ ಕೆಲಸ ಮಾಡಿದ, ಮಾಡುತ್ತಿರುವ ಅನುಭವ ಇರುವವರಿಗೆ ಮೊದಲ ಆದ್ಯತೆಯಾಗಿದೆ. ಕನ್ನಡ ನ್ಯೂಸ್ ನೌ ವೆಬ್ ಸೈಟ್, ಕನ್ನಡದ ಮುಂಚೂಣಿಯಲ್ಲಿರುವಂತ ನ್ಯೂಸ್ ಪೋರ್ಟಲ್ ಆಗಿದೆ. ಡೈಲಿ ಹಂಟ್ ನಲ್ಲಿ 1.8 ಮಿಲಿಯನ್ ಫಾಲೋವರ್ಸ್ ಹೊಂದಿರುವಂತ ಕನ್ನಡ ನ್ಯೂಸ್ ನೌ, ಒಂದು ದಿನದ ಪೇಜ್ ಹಿಡ್ಸ್ ಸಂಖ್ಯೆಯೇ ಲಕ್ಷಾಂತರವಾಗಿದೆ. ಇಂತಹ ಕನ್ನಡ ನ್ಯೂಸ್ ನೌ ವೆಬ್ ಸೈಟ್ ಗೆ ಕೆಲಸ ಮಾಡಲು ಜಿಲ್ಲಾ ಹಾಗೂ ತಾಲ್ಲೂಕು ವರದಿಗಾರರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಇಲ್ಲವೇ ಪತ್ರಿಕೋದ್ಯಮದಲ್ಲಿ ಪದವಿಯನ್ನು ಪಡೆದಿರುವವರು, ಹಾಲಿ ವೃತ್ತಿ ನಿರತರು ಅರ್ಜಿ ಸಲ್ಲಿಸಬಹುದು. ಕನ್ನಡ ಓದೋದಕ್ಕೆ, ಬರೆಯೋದಕ್ಕೆ ಉತ್ತಮವಾಗಿ ಬರಬೇಕು. ಅನುಭವ ಪತ್ರಿಕೆ ಅಥವಾ ಟಿವಿ ಮಾಧ್ಯಮ ಕ್ಷೇತ್ರದಲ್ಲಿ 2 ರಿಂದ 5 ವರ್ಷಗಳ ಕಾಲ ವರದಿಗಾರರಾಗಿ ಕಾರ್ಯ…
ಬೆಂಗಳೂರು : ರೋಹಿತ್ ವೆಮುಲಾ ಕಾಯ್ದೆಯ ಕರಡು ಸಿದ್ಧಪಡಿಸುವಂತೆ ಕಾನೂನು ಸಲಹೆಗಾರರಿಗೆ ಸೂಚನೆ ನೀಡಲಾಗಿದೆ ಎಂದು ಪಕ್ಷದ ವರಿಷ್ಠ ರಾಹುಲ್ ಗಾಂಧಿಯವರಿಗೆ ಪತ್ರ ಬರೆಯಲಾಗಿದ್ದು, ಈ ಕುರಿತು ಪರಿಶೀಲಿಸಿ ಕಾಯ್ದೆ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸಿ. ಇ.ಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿರುವ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸೋಣ: ಸಿ.ಎಂ ಸಿದ್ದರಾಮಯ್ಯ ಕರೆ ಬೆಂಗಳೂರು : ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ. ನಿಮ್ಮ ಕಾರಣದಿಂದ ರಾಜ್ಯ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದರು. ಸಿಬ್ಬಂದಿ ಮತ್ತು ಆಡಳಿತಾ ಸುಧಾರಣಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ…
ಬೆಂಗಳೂರು: ಬಿಎಂಟಿಸಿಯಿಂದ 2286 ನಿರ್ವಾಹಕರ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿತ್ತು. ಈ ನೇಮಕಾತಿಯ ಕುರಿತಂತೆ ಬಿಎಂಟಿಸಿ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಹಂಚಿಕೊಂಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂ.ಮ.ಸಾ.ಸಂಸ್ಥೆಯಲ್ಲಿ ನಿರ್ವಾಹಕ (ಉಳಿಕೆ ಮೂಲ ವೃಂದದ) 2286 ಹುದ್ದೆಗಳಿಗೆ ದಿನಾಂಕ:03.12.2024 ರಂದು ಮೂಲ ದಾಖಲೆ/ದೇಹದಾರ್ಢ್ಯತೆ ಪರಿಶೀಲನೆಯನ್ನು ಮುಕ್ತಾಯಗೊಳಿಸಿ, ಅರ್ಹ ಅಭ್ಯರ್ಥಿಗಳ ಸಂಭವನೀಯ ಆಯ್ಕೆಪಟ್ಟಿಯನ್ನು ದಿನಾಂಕ:20.01.2025 ರಂದು ಪ್ರಕಟಿಸಲಾಗಿದೆ ಹಾಗೂ ದಿನಾಂಕ:31.01.2025ರ ಒಳಗಾಗಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು ಎಂದಿದೆ. ಅದರಂತೆ 34 ಅಭ್ಯರ್ಥಿಗಳು 8 ವಿವಿಧ ಅಂಶಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಿರುತ್ತಾರೆ. ಅದರಲ್ಲಿ ಯೋಜನಾ ನಿರಾಶ್ರಿತ ಸಮತಳ ಮೀಸಲಾತಿಗೆ ಸಂಬಂಧಿಸಿದಂತೆ 22 ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸಿದ್ದು, ಸದರಿ ಆಕ್ಷೇಪಣೆ ಕುರಿತು ಸರ್ಕಾರದ ಮಾರ್ಗದರ್ಶನ ಕೋರಿ ದಿನಾಂಕ:12.02.2025 ರಂದು ಪತ್ರ ಬರೆಯಲಾಗಿದೆ ಎಂಬುದಾಗಿ ತಿಳಿಸಿದೆ. ಇನ್ನೂ ಸರ್ಕಾರದಿಂದ ಮಾರ್ಗದರ್ಶನ ದೊರೆತ ಕೂಡಲೇ ಆಯ್ಕೆಪಟ್ಟಿಯನ್ನು ಅಂತಿಮಗೊಳಿಸಿ, ಪ್ರಕಟಿಸಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಯಾವುದೇ ರೀತಿಯ ಗೊಂದಲ ಮತ್ತು ದುರುದ್ದೇಶಪೂರಿತ ಸಂದೇಶಗಳಿಗೆ ಕಿವಿಗೊಡದೇ, ಸಹಕರಿಸಲು ಬಿಎಂಟಿಸಿ ಕೋರಿದೆ. https://kannadanewsnow.com/kannada/minister-madhu-bangarappas-janaspandana-gets-overwhelming-response-applications-pour-in/ https://kannadanewsnow.com/kannada/complaint-to-lokayukta-to-probe-smart-meter-scam-dr-cn-ashwathnarayan/
ಶಿವಮೊಗ್ಗ : ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು ಮತ್ತು ಆಡಳಿತ ಸುಧಾರಣೆಯಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು. ನಾಗರೀಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸೋಮವಾರ ಈಡಿಗರ ಸಭಾ ಭವನದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ ಮಾಡುವುದರಿಂದ ಎಲ್ಲ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಚುನಾಯಿತ ಪ್ರತಿನಿಧಿಗಳು,ಅಧಿಕಾರಿಗಳು ಇಲ್ಲಿ ಹಾಜರಾಗುವ ಕಾರಣ ಜನರ ಸಮಸ್ಯೆಗಳು ಅರ್ಥ ಆಗುತ್ತವೆ. ಪರಹಾರಕ್ಕೆ ಅನೇಕ ಕಾನೂನು ಇದ್ದು, ಅವುಗಳನ್ನು ಅನ್ವಯಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಎಲ್ಲ ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ ಮಾಡಲಾಗುವುದು. ಮಾನ್ಯ ಮುಖ್ಯಮಂತ್ರಿಗಳು ಸಹ ಬೇರೆ ಬೇರೆ ಜಿಲ್ಲೆಗಳಿಗೆ ತೆರಳಿ ಜನಸ್ಪಂದನ ಸಭೆ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುತ್ತಾರೆ. ಆಡಳಿತ ಸುಧಾರಣೆಯಲ್ಲಿ ಇಂತಹ ಕಾರ್ಯಕ್ರಮಗಳು ಬಹಳ ಮುಖ್ಯ…
ನವದೆಹಲಿ: ಜಾತಿ ಆಧಾರಿತ ತಾರತಮ್ಯವನ್ನು ತೊಡೆದುಹಾಕಲು ಮತ್ತು ಹಿಂದೂಗಳಲ್ಲಿ ಐಕ್ಯತೆಯನ್ನು ಉತ್ತೇಜಿಸಲು, ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು “ಒಂದು ಬಾವಿ, ಒಂದು ದೇವಸ್ಥಾನ ಮತ್ತು ಒಂದು ಸ್ಮಶಾನ” ಎಂಬ ಅಭಿಯಾನಕ್ಕೆ ಕರೆ ನೀಡಿದ್ದಾರೆ. ನಾವು ಒಂದು ಬಾವಿ, ಒಂದು ದೇವಸ್ಥಾನ ಮತ್ತು ಒಂದು ಸ್ಮಶಾನದ ತತ್ವವನ್ನು ಅನುಸರಿಸಿದಾಗ ಮಾತ್ರ ಸಾಮಾಜಿಕ ಸಾಮರಸ್ಯವು ವಾಸ್ತವವಾಗಬಹುದು. ಇದು ಭಿನ್ನಾಭಿಪ್ರಾಯಗಳು, ತಾರತಮ್ಯವನ್ನು ತೆಗೆದುಹಾಕಲು ಮತ್ತು ಸಮಾಜದ ಎಲ್ಲಾ ವರ್ಗಗಳ ನಡುವೆ ಏಕತೆಯನ್ನು ಬೆಳೆಸಲು ಸಹಾಯ ಮಾಡುತ್ತದೆ ಎಂದು ಭಾಗವತ್ ಏಪ್ರಿಲ್ 19 ರ ಶನಿವಾರ ಅಲಿಘರ್ನಲ್ಲಿ ಆರ್ಎಸ್ಎಸ್ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದರು ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಆರ್ಎಸ್ಎಸ್ ಮುಖ್ಯಸ್ಥರು ತಮ್ಮ ಐದು ದಿನಗಳ ನಗರ ಭೇಟಿಯ ಸಂದರ್ಭದಲ್ಲಿ ಎಚ್ಬಿ ಇಂಟರ್ ಕಾಲೇಜು ಆವರಣದಲ್ಲಿರುವ ಸನಾತನ ಶಾಖೆಯಲ್ಲಿ ಮಾತನಾಡುತ್ತಿದ್ದರು. ಸಮಾನತೆಗಾಗಿ ತಮ್ಮ ಕರೆಯ ಜೊತೆಗೆ, ಭಾಗವತ್ ಅವರು ‘ಪಂಚ ಪರಿವರ್ತನ’ ಅಥವಾ ಐದು ರೂಪಾಂತರಗಳ ಮಹತ್ವವನ್ನು ಒತ್ತಿ…













