Author: kannadanewsnow09

ಬೆಂಗಳೂರು: ಕನ್ನಡದ ಪ್ರಖ್ಯಾತ ವಾಗ್ಮಿ, ಹಾಸ್ಯ ಕಲಾವಿಧೆ ಸುಧಾ ಬರಗೂರು ಅವರ ಪತಿ ಜಯಪ್ರಕಾಶ್ ಬರಗೂರು (67) ಅವರು ಅನಾರೋಗ್ಯದಿಂದ ನಿಧನರಾಗಿರುವುದಾಗಿ ತಿಳಿದು ಬಂದಿದೆ. ಕೆಲ ವರ್ಷಗಳಿಂದ ಅನಾರೋಗ್ಯದಿಂದ ಸುಧಾ ಬರಗೂರು ಅವರ ಪತಿ ಜಯಪ್ರಕಾಶ್ ಬರಗೂರು ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ ಜಯಪ್ರಕಾಶ್ ಬರಗೂರು ನಿಧನರಾಗಿದ್ದಾರೆ. ಅಂದಹಾಗೇ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದಂತ ಜಯಪ್ರಕಾಶ್ ಬರಗೂರು ಜಯದೇವ ಆಸ್ಪತ್ರೆಗೆ ದಾಖಲಾಗಿ ಕೆಲ ವರ್ಷಗಳ ಹಿಂದೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಈ ಬಗ್ಗೆ ಸುಧಾ ಬರಗೂರು ಅವರು ವಿಕೇಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ತಾವೇ ಮಾಹಿತಿ ಹಂಚಿಕೊಂಡಿದ್ದರು. ಇಂದು ಅನಾರೋಗ್ಯದಿಂದ ಖ್ಯಾತ ಹಾಸ್ಯ ಕಲಾವಿಧೆ ಸುಧಾ ಬರಗೂರು ಅವರ ಪತಿ ಜಯಪ್ರಕಾಶ್ ಬರಗೂರು ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ. ಅವರು ಓರ್ವ ಪತ್ನಿ, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಅವರ ಪಾರ್ಥೀವ ಶರೀರವನ್ನು ಕತ್ರಿಗುಪ್ಪೆಯ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಬಳಿ ಇರುವ ಸುಧಾ…

Read More

ಬೆಂಗಳೂರು: ಬೆಳಗಾವಿಯ ವಿಧಾನ ಪರಿಷತ್ ಕಲಾಪದ ವೇಳೆಯಲ್ಲೇ ಪೊಲೀಸರ ಬಂಧನ, ಆ ಬಳಿಕ ಹೈಡ್ರಾಮಾ ಕುರಿತಂತೆ ಡಿಜಿಪಿ ಕರೆದು ಸ್ಪಷ್ಟನೆ ಕೇಳುವಂತೆ ರಾಜ್ಯಪಾಲರಿಗೆ ಸಿ.ಟಿ ರವಿ ಅವರು 8 ಪುಟಗಳ ದೂರು ನೀಡಿದ್ದಾರೆ. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದಂತ ಎಂಎಲ್ಸಿ ಸಿ.ಟಿ ರವಿಯನ್ನು ಒಳಗೊಂಡಂತ ಬಿಜೆಪಿ ಮುಖಂಡರು, ಬೆಳಗಾವಿ ಚಳಿಗಾಲದ ಅಧಿವೇಶನದ ವೇಳೆ ಬಂಧನದ ಹೈಡ್ರಾಮಾ ಕುರಿತಂತೆ ದೂರು ನೀಡಿದರು. ಸಿ.ಟಿ ರವಿ ಸಲ್ಲಿಸಿರುವಂತ 8 ಪುಟಗಳ ದೂರಿನಲ್ಲಿ ಡಿಸೆಂಬರ್.19ರ ರಾತ್ರಿ ಪೊಲೀಸರ ವರ್ತನೆ ಬಗ್ಗೆ ಇಂಚಿಂಚೂ ಮಾಹಿತಿಯನ್ನು ವಿವರಿಸಲಾಗಿದೆ. ಈ ಘಟನೆ ಸಂಬಂಧ ಡಿಜಿಪಿಯನ್ನು ಕರೆದು ಸ್ಪಷ್ಟೀಕರಣ ಕೇಳುವಂತೆ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ. ಇದಲ್ಲದೇ ತಮ್ಮ ಮೇಲೆ ಪೊಲೀಸರ ದೌರ್ಜನ್ಯದ ಬಗ್ಗೆಯೂ ವಿವರಿಸಲಾಗಿದೆ. ಇದೀಗ ರಾಜ್ಯಪಾಲರು ಸಿಟಿ ರವಿ ಅವರಿಂದ ದೂರು ಪಡೆದಿದ್ದು, ಡಿಜಿಪಿ ಅವರನ್ನು ಕರೆದು, ಸ್ಪಷ್ಟೀಕರಣವನ್ನು ಘಟನೆ ಸಂಬಂಧ ಪಡೆಯುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. https://kannadanewsnow.com/kannada/no-need-for-priyank-kharge-to-resign-home-minister-dr-g-parameshwara/ https://kannadanewsnow.com/kannada/bigg-news-here-is-the-complete-list-of-state-general-holiday-days-for-the-year-2025-holiday-list-2025/ https://kannadanewsnow.com/kannada/shocking-couple-dies-of-suffocation-while-sleeping-in-the-cold/

Read More

ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಬಿಜೆಪಿಯವರು ಮಾಡಿರುವ ಆರೋಪ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.‌ ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಮೇಲೆ ಅನವಶ್ಯಕವಾಗಿ ಆಪಾದನೆ ಮಾಡುವುದು ಯಾವುದೇ ಸರ್ಕಾರಕ್ಕು ಸರಿ ಇರುವುದಿಲ್ಲ.‌ ಡೆತ್‌ನೋಟ್‌ನಲ್ಲಿ ಅವರ ಹೆಸರು ಕೂಡ ಇಲ್ಲ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ. ಸಚಿವರ ಹೆಸರನ್ನು ತಂದು, ಸರ್ಕಾರಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಸತ್ಯಾಸತ್ಯತೆ ಹೊರಬರಲಿ ಎಂಬ ದೃಷ್ಟಿಯಿಂದ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಸಿಐಡಿಗೆ ವಹಿಸಲಾಗಿದೆ ಎಂದು ಹೇಳಿದರು. ತನಿಖೆಯ ವರದಿ ಬಂದ ನಂತರ ಏನು‌ ಎಂಬುದನ್ನು ಹೇಳೋಣ. ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ಕೊಡುವ ಅಗತ್ಯ ಇಲ್ಲ. ಅನವಶ್ಯಕವಾಗಿ ಅವರ ಹೆಸರನ್ನು ತೆಗೆದುಕೊಂಡು ರಾಜೀನಾಮೆ ಕೊಡುವಂತೆ ಒತ್ತಾಯ ಮಾಡುತ್ತಿದ್ದಾರೆ ಎಂದರು ಸಿಬಿಐಗೆ ವಹಿಸುವಂತೆ ಬಿಜೆಪಿಯವರು ಒತ್ತಾಯಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಎಲ್ಲ ಪ್ರಕರಣಗಳನ್ನು ಸಿಬಿಐಗೆ ವಹಿಸಲು ಆಗುವುದಿಲ್ಲ. ಸಿಐಡಿ ಸಮರ್ಥವಾಗಿದೆ.‌ ಅನೇಕ ಪ್ರಕರಣಗಳಲ್ಲಿ…

Read More

ಬೆಂಗಳೂರು: ಸಚಿನ್ ಸಾವಿನ ಪ್ರಕರಣದ ಸಂಬಂಧ ಸಚಿವ ಪ್ರಿಯಾಂಕ ಖರ್ಗೆಯವರ ರಾಜೀನಾಮೆ ಪಡೆದು, ದುರ್ಘಟನೆಯ ಸಿಬಿಐ ತನಿಖೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಕ್ಕಾಗಿ ಸಿಬಿಐ ತನಿಖೆಗೆ ಸಚಿನ್ ಕುಟುಂಬವೂ ಒತ್ತಾಯಿಸಿದೆ ಎಂದರು. ಹಿಂದೆ, ಇದೇ ಸರಕಾರದ ಸಚಿವ ನಾಗೇಂದ್ರ ಅವರೂ ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಲುಕಿ ರಾಜೀನಾಮೆ ಕೊಟ್ಟಿದ್ದಾರೆ. ಒಂದು ಕ್ಷಣವೂ ತಡ ಮಾಡದೆ, ಪ್ರಿಯಾಂಕ ಖರ್ಗೆಯವರ ರಾಜೀನಾಮೆ ಪಡೆದುಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಆಗ್ರಹಿಸಿದರು. ಯಾರನ್ನೋ ಉಳಿಸುವ, ರಕ್ಷಿಸುವ ದುಸ್ಸಾಹಸ ಬೇಡ ಎಂದು ಎಚ್ಚರಿಸಿದರು. ಮೇಧಾವಿ ಪ್ರಿಯಾಂಕ್ ಖರ್ಗೆಯವರಿಗೆ ಮರೆವು ಜಾಸ್ತಿ. ಹಿಂದೆ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಈಶ್ವರಪ್ಪ ಅವರ ಮೇಲೆ ಆರೋಪ ಬಂದಾಗ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟದ್ದನ್ನು ಪ್ರಿಯಾಂಕ್ ಮರೆಯಬಾರದು. ಮಡಿಕೇರಿಯಲ್ಲಿ ಪೊಲೀಸ್ ಅಧಿಕಾರಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೇ ಸಿದ್ದರಾಮಯ್ಯನವರು…

Read More

ಬೆಂಗಳೂರು: ವರಾಹಿ ಜ್ಯುವೆಲ್ಲರಿ ಮಾಲಕಿಗೆ ವಂಚನೆ ಪ್ರಕರಣ ಸಂಬಂಧ ಸೂಕ್ತ ತನಿಖೆ ನಡೆಸಿ, ತಪ್ಪಿ ತಸ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಗೆ ಮಾಜಿ ಸಂಸದ ಡಿ.ಕೆ ಸುರೇಶ್ ಪತ್ರ ಬರೆದು ಆಗ್ರಹಿಸಿದ್ದಾರೆ. ಈ ಕುರಿತಂತೆ ಪತ್ರ ಬರೆದಿರುವಂತ ಅವರು, ಐಶ್ವರ್ಯಗೌಡ ಉರುಫ್ ನವ್ಯಶ್ರೀ ಎಂಬುವವರು ನನ್ನ ಹೆಸರನ್ನು ದುರುಪಯೋಗಪಡಿಸಿಕೊಂಡು ಹಲವಾರು ಜನರಿಗೆ ಚಿನ್ನದ ಆಭರಣ ಹಾಗೂ ಹಣವನ್ನು ವಂಚಿಸುತ್ತಿರುವುದಾಗಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದು, ಸದರಿ ವಿಷಯಕ್ಕೆ ಸಂಬಂಧಿಸಿದಂತೆ, ವಂಚನೆಯನ್ನು ಮಾಡಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳುವುದು. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಇಂತಹ ಅನ್ಯಾಯಗಳು ಆಗದಂತೆ ಕ್ರಮಗಳನ್ನು ಕೈಗೊಳ್ಳುವಂತೆ ಕೋರಿದ್ದಾರೆ. ಅಂದಹಾಗೆ ಆರೋಪಿ ಐಶ್ವರ್ಯಾಗೌಡ ಎಂಬುವರು ವರಾಹಿ ಜ್ಯುವೆಲ್ಲರ್ ಮಾಲಕಿಗೆ ಚಿನ್ನ ಪಡೆದು ಕೋಟಿ ಕೋಟಿ ವಂಚನೆ ಮಾಡಿದ್ದಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು. ಈ ದೂರಿನ ವೇಳೆ ಮಾಜಿ ಸಂಸದ ಡಿ.ಕೆ ಸುರೇಶ್ ಅವರ ಹೆಸರು ಕೂಡ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಪ್ರಕರಣ…

Read More

ನವದೆಹಲಿ: ಭಾರತದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು 2024 ರ ಸ್ಮರಣೀಯ ಪ್ರದರ್ಶನದ ನಂತರ ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಬುಮ್ರಾ ಅವರಲ್ಲದೆ, ಇಂಗ್ಲೆಂಡ್ನ ಸಮೃದ್ಧ ಬ್ಯಾಟ್ಸ್ಮನ್ ಜೋ ರೂಟ್ ಸಹ ಸಹ ಆಟಗಾರ ಹ್ಯಾರಿ ಬ್ರೂಕ್ ಅವರೊಂದಿಗೆ ನಾಮನಿರ್ದೇಶನಗೊಂಡಿದ್ದರೆ, ಶ್ರೀಲಂಕಾದ ಕಮಿಂಡು ಮೆಂಡಿಸ್ ಕೂಡ ಸ್ಥಾನ ಪಡೆದಿದ್ದಾರೆ. ಬುಮ್ರಾ ಕಳೆದ ಎರಡು ವರ್ಷಗಳಿಂದ ತಮ್ಮ ಅತ್ಯುತ್ತಮ ಪ್ರದರ್ಶನವನ್ನು ನೀಡುತ್ತಿದ್ದಾರೆ ಮತ್ತು ಟೆಸ್ಟ್ ಕ್ರಿಕೆಟ್ನಲ್ಲಿ ಚೆಂಡಿನೊಂದಿಗೆ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಅವರು ಆಡಿದ 13 ಟೆಸ್ಟ್ ಪಂದ್ಯಗಳಲ್ಲಿ 14.92 ಸರಾಸರಿ ಮತ್ತು 30.16 ಸ್ಟ್ರೈಕ್ ರೇಟ್ನಲ್ಲಿ 71 ವಿಕೆಟ್ಗಳನ್ನು ಪಡೆದರು, ಇದು ದೀರ್ಘ ಸ್ವರೂಪದಲ್ಲಿ ಯಾವುದೇ ಬೌಲರ್ಗೆ ಅತ್ಯುತ್ತಮ ಅಂಕಿಅಂಶವಾಗಿದೆ. ಬಲಗೈ ವೇಗಿ ಪ್ರಸ್ತುತ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಮೊದಲ ನಾಲ್ಕು ಪಂದ್ಯಗಳಲ್ಲಿ 30 ವಿಕೆಟ್ಗಳೊಂದಿಗೆ ಅತ್ಯುತ್ತಮ ಬೌಲರ್ ಆಗಿದ್ದಾರೆ. “2023 ರಲ್ಲಿ ಬೆನ್ನುನೋವಿನಿಂದ ಚೇತರಿಸಿಕೊಂಡ ನಂತರ ಟೆಸ್ಟ್ ಅಖಾಡಕ್ಕೆ ಮರಳಿದ ಬುಮ್ರಾ 2024 ರಲ್ಲಿ…

Read More

ತುಮಕೂರು: ಎಟಿಎಂ ಮೆಷಿನ್ನಿಗೆ ಸ್ಕಿಮ್ಮಿಂಗ್ ಮಿಷಿನ್ ಹಾಗೂ ಕ್ಯಾಮರಾ ಅಳವಡಿಸಿ ಸಾರ್ವನಿಕರ ಡೆಟಾ ಕದ್ದು, ಹಣ ವಂಚಿಸಿದ್ದಂತ ಇಬ್ಬರು ವಿದೇಶಿ ಪ್ರಜೆಗಳಿಗೆ 8 ವರ್ಷ ಜೈಲು ಹಾಗೂ ತಲಾ ಐದು ಲಕ್ಷ ದಂಡವನ್ನು ವಿಧಿಸಿ ತುಮಕೂರು ಜಿಲ್ಲಾ ನ್ಯಾಯಾಲಯ ಆದೇಶಿಸಿದೆ. ತುಮಕೂರಿನಲ್ಲಿ 2022ರ ಅಕ್ಟೋಬರ್ 31ರಂದು ಎಟಿಎಂಗಳಿಗೆ ಸ್ಕಿಮ್ಮಿಂಗ್ ಮಿಷನ್ ಹಾಗೂ ಕ್ಯಾಮಾರಾ ಅಳಡವಿಡಿಸಿದ್ದಂತ ಕೀನ್ಯಾದ ವಾನ್ ಕಂಬೋಡಜಿ ಹಾಗೂ ನೈಜೀರಿಯಾದ ಲಾರೆನ್ಸ್ ಮೊಕೆಮೋ ಅವರು ಎಟಿಎಂ ಕಾರ್ಡ್ ದಾರರ ಡೆಟಾ ಕದ್ದು ನಕಲಿ ಕಾರ್ಡ್ ಬಳಸಿ ಹಣ ಡ್ರಾ ಮಾಡಿದ್ದರು. ಈ ಸಂಬಂಧ ತುಮಕೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಪಿಐ ಶೇಷಾದ್ರಿ ಅವರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಪ್ರಕರಣ ಸಂಬಂಧ ಸರ್ಕಾರಿ ಅಭಿಯೋಜಕರಾದಂತ ವಿಎ ಕವಿತಾ ಅವರು ವಾದ ಮಂಡಿಸಿದ್ದರು. ಸುಧೀರ್ಘ ವಿಚಾರಣೆಯ ಬಳಿಕ ನ್ಯಾಯಾಲಯವು ಇಂದು ತೀರ್ಪು ಪ್ರಕಟಿಸಿದೆ. ಕೀನ್ಯಾದ ವಾನ್ ಕಂಬೋಡಜಿ, ನೈಜೀರಿಯಾದ ಲಾರೆನ್ಸ್ ಮೊಕೆಮೋಗೆ 8 ವರ್ಷ ಜೈಲು ಶಿಕ್ಷೆ…

Read More

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಮೂಡುಗೊಪ್ಪ ನೀಲಕಂಠೇಶ್ವರ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಾಸ್ಥಿ ಕಟ್ಟೆ ಸುಬ್ರಹ್ಮಣ್ಯ ಮತ್ತು ಕರುಣಾಕರ ಶೆಟ್ಟಿ ನೇತೃತ್ವದ ತಂಡವು ಭರ್ಜರಿ ಗೆಲುವು ಸಾಧಿಸಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮೂಡುಗೊಪ್ಪದಲ್ಲಿ ಇರುವಂತ ನೀಲಕಂಠೇಶ್ವರ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆ ಭಾನುವಾರ ನಡೆಯಿತು. ಈ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ನ ಭರವಸೆಯ ಯುವ ಮುಖಂಡ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ನೇತೃತ್ವದ ತಂಡಕ್ಕೆ ಭರ್ಜರಿ ಜಯ ಸಾಧಿಸಿದೆ. ಭಾನುವಾರ ನಡೆದ ನಿಲಕಂಠೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ನಗರ ಹೋಬಳಿಯ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಅವರ ಸಾರಥ್ಯದ ಕಾಂಗ್ರೆಸ್ ಬೆಂಬಲಿತ 7 ಸದಸ್ಯರು ಆಯ್ಕೆಯಾಗಿದ್ದಾರೆ. ಈ ಮೂಲಕ ಆಡಳಿತ ಚುಕ್ಕಾಣಿ ಹಿಡಿಯುವತ್ತ ಹೆಜ್ಜೆ ಇರಿಸಿದ್ದಾರೆ. ಗೆದ್ದ ಕ್ಷೇತ್ರವಾರು ಅಭ್ಯರ್ಥಿಗಳು 1. ಅಂಡಗ ದೂದೂರು ಆದರ್ಶ ಹೆರಟೆ ಗಗನ್ ಗೌಡ…

Read More

ಬೆಂಗಳೂರು: ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಡಿ.ಕೆ. ಸುರೇಶ್ ಅವರು ಪೊಲೀಸ್ ಆಯುಕ್ತರಿಗೆ ಭಾನುವಾರ ಪತ್ರ ಬರೆದಿದ್ದಾರೆ. “ಶ್ರೀಮತಿ ಐಶ್ವರ್ಯಾ ಗೌಡ ಉರುಫ್ ನವ್ಯಶ್ರೀ ಎಂಬುವವರು ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗುತ್ತಿವೆ. ಹೀಗಾಗಿ, ನನ್ನ ಹೆಸರು ಬಳಸಿಕೊಂಡು ವಂಚನೆ ನಡೆಸಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಜನರಿಗೆ ಇಂತಹ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳಬೇಕು”‘ ಎಂದು ದೂರು ಪತ್ರದಲ್ಲಿ ಸುರೇಶ್ ಅವರು ಮನವಿ ಮಾಡಿದ್ದಾರೆ. https://kannadanewsnow.com/kannada/important-information-for-differently-abled-persons-applications-invited-for-concessional-transport-bus-passes-renewal/ https://kannadanewsnow.com/kannada/bigg-news-here-is-the-complete-list-of-state-general-holiday-days-for-the-year-2025-holiday-list-2025/

Read More

ಬೆಂಗಳೂರು: 2025ನೇ ಸಾಲಿಗೆ ವಿಕಲಚೇತನರ ರಿಯಾಯಿತಿ ಬಸ್ ಪಾಸ್‌ಗಳ ವಿತರಣೆ/ನವೀಕರಣಕ್ಕೆ “ಸೇವಾ ಸಿಂಧು” ಆನ್‌ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಡಿ.30 ರಿಂದ ಫೆ.28 ರವರೆಗೆ https://serviceonline.gov.in.karnataka/URL ಬಳಸಿ ಅರ್ಜಿ ಸಲ್ಲಿಸುವುದು ಕಡ್ಡಾಯ. ನಿಗದಿಪಡಿಸಿದ ದಿನಾಂಕದ ಒಳಗೆ ಪಾಸ್‌ಗಳ ವಿತರಣೆ/ನವಿಕರಿಸಬೇಕಾಗಿರುತ್ತದೆ. ಹೊಸದಾಗಿ ವಿಕಲಚೇತನರ ಬಸ್‌ಪಾಸ್ ಪಡೆಯಲು ವಿಭಾಗೀಯ ನಿಯಂತ್ರಣಾಧಿಕಾರಿಗಳು ಶಿವಮೊಗ್ಗ ವಿಭಾಗ ಎಂಬ ಕೌಂಟರ್ ಆಯ್ಕೆ ಮಾಡುವುದು ಹಾಗೂ 2024ನೇ ಸಾಲಿನಲ್ಲಿ ಪಾಸ್ ಪಡೆದಿರುವ ಫಲಾನುಭವಿಗಳು ಪಾಸ್ ನವೀಕರಣಕ್ಕಾಗಿ ಘಟಕ ವ್ಯವಸ್ಥಾಪಕರ ಕೌಂಟರ್ ಆಯ್ಕೆ ಮಾಡಲು ಸೂಚಿಸಿದೆ. ಫಲಾನುಭವಿಗಳು ಪಾಸ್ ಪಡೆಯಲು ಬರುವಾಗ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಯವರಿಂದ ದೃಢೀಕರಿಸಿದ ಮಾನ್ಯತೆ ಇರುವ ವಿಕಲಚೇತನರ ಗುರುತಿನ ಚೀಟಿ ಪುಸ್ತಕ ಅಥವಾÀ ಯುಡಿಐಡಿ ಸ್ಮಾರ್ಟ್ ಕಾರ್ಡ್, ಡಿಸೆಬಿಲಿಟಿ ಸರ್ಟಿಫಿಕೇಟ್, ಫಲಾನುಭವಿಗಳ ಇತ್ತೀಚಿನ 3 ಭಾವಚಿತ್ರ, 2024ನೇ ಸಾಲಿನಲ್ಲಿ ಪಡೆದಿರುವ ವಿಕಲಚೇತನರ ಮೂಲ ಪಾಸ್(ನವೀಕರಣಕ್ಕಾಗಿ), ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ನೀಡಬೇಕು. ಪಾಸ್ ಶುಲ್ಕ ರೂ.660 ಗಳನ್ನು ನಗದು ಮೂಲಕ ಪಾವತಿಸಬೇಕೆಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ…

Read More