Subscribe to Updates
Get the latest creative news from FooBar about art, design and business.
Author: kannadanewsnow09
ಅದ್ಭುತ ದಿನ ಎಂದು ಹೇಳಬಹುದು. ಪಂಚಮಿ ತಿಥಿ ವರಗಿಯು ತಾಯಿಯ ಪರಿಪೂರ್ಣ ಅನುಗ್ರಹವನ್ನು ತರಬಲ್ಲದು. ಒಟ್ಟಿನಲ್ಲಿ ತಿಥಿಯನ್ನು ವಸಂತ ಪಂಚಮಿ ಎಂದೂ ಕರೆಯುತ್ತಾರೆ. ಈ ತಿಥಿ ಮಾತೆ ಸರಸ್ವತಿಗೆ ಅತ್ಯಂತ ಮಂಗಳಕರವಾಗಿದೆ. ಸರಸ್ವತಿ ದೇವಿಯು ಕಲಿಕೆಯ ಅಧಿದೇವತೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ…
ಜಮ್ಮು: ಪಾಕಿಸ್ತಾನ ರೇಂಜರ್ಸ್ ಬುಧವಾರ ಸಂಜೆ ಅಂತರರಾಷ್ಟ್ರೀಯ ಗಡಿಯ ಗಡಿ ಹೊರಠಾಣೆಯ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಮೂಲಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದಾರೆ. ಹೊರಠಾಣೆಯನ್ನು ನಿರ್ವಹಿಸುತ್ತಿರುವ ಗಡಿ ಭದ್ರತಾ ಪಡೆ (ಬಿಎಸ್ಎಫ್) ಸಿಬ್ಬಂದಿ ಸೂಕ್ತ ರೀತಿಯಲ್ಲಿ ಪ್ರತೀಕಾರ ತೀರಿಸಿಕೊಂಡರು ಮತ್ತು ಸಂಜೆ 6 ಗಂಟೆ ಸುಮಾರಿಗೆ ಪ್ರಾರಂಭವಾದ ಉಭಯ ಕಡೆಗಳ ನಡುವಿನ ಗುಂಡಿನ ಚಕಮಕಿ 15 ನಿಮಿಷಕ್ಕೂ ಹೆಚ್ಚು ಕಾಲ ಮುಂದುವರಿಯಿತು. ಎಎಂಕೆ ಮತ್ತು ಖಾರ್ಕೋಲಾ ಗಡಿ ಹೊರಠಾಣೆಯ ನಡುವೆ ಬರುವ ಪ್ರದೇಶದಲ್ಲಿ ಚೆನಾಬ್ ರೇಂಜರ್ಸ್ ಗುಂಡು ಹಾರಿಸಿದರು. ಪಾಕಿಸ್ತಾನ ರೇಂಜರ್ಗಳು ಐಬಿ ಉದ್ದಕ್ಕೂ ತಮ್ಮ ಬಂದೂಕುಗಳ ಸದ್ದು ಮಾಡುವ ಮೂಲಕ ಸಮಸ್ಯೆಗಳ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ತೋರುತ್ತದೆ. ಭಾರತದ ಯಾವುದೇ ಯೋಧರು ವೀರಮರಣ ಅಪ್ಪಿರುವ ಬಗ್ಗೆ ವರದಿಯಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರು ಫೆಬ್ರವರಿ.16ರಂದು ಬೆಳಿಗ್ಗೆ 10.15ಕ್ಕೆ 15ನೇ ಬಾರಿ ತಮ್ಮ ಚೊಚ್ಚಲ ರಾಜ್ಯ ಬಜೆಟ್-2024-25 ( Karnataka Budget 2024-25 ) ಅನ್ನು ಮಂಡಿಸಲಿದ್ದಾರೆ. ಈ ಬಜೆಟ್ ನಲ್ಲಿ ಯಾವೆಲ್ಲ ಘೋಷಣೆಯನ್ನು ಲೋಕಸಭಾ ಚುನಾವಣೆಯ ವೇಳೆಯಲ್ಲಿ ಮಾಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಇದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಶೇಷ ಸಚಿವ ಸಂಪುಟ ಸಭೆಯನ್ನು ನಡೆಸಲಿದ್ದಾರೆ. ಫೆ.16ರಂದು ಬೆಳಿಗ್ಗೆ ನಡೆಯುವಂತ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತಮ್ಮ 15ನೇ ಬಾರಿ ಮಂಡಿಸುತ್ತಿರುವಂತ ರಾಜ್ಯ ಬಜೆಟ್ ಗೆ ಅನುಮೋದನೆಯನ್ನು ಪಡೆಯಲಿದ್ದಾರೆ. ವಿಶೇಷ ರಾಜ್ಯಸಚಿವ ಸಂಪುಟದಲ್ಲಿ ಬಜೆಟ್ ಗೆ ಅನುಮೋದನೆ ಪಡೆದ ನಂತ್ರ, ಅವರು ಅಲ್ಲಿಂದ ನೇರವಾಗಿ ವಿಧಾನಸೌಧಕ್ಕೆ ಆಗಮಿಸಲಿದ್ದು, ಫೆ.16ರಂದು ಬೆಳಿಗ್ಗೆ 10.15ಕ್ಕೆ ರಾಜ್ಯ ಬಜೆಟ್ ಅನ್ನು ಸದನದಲ್ಲಿ ಮಂಡಿಸಲಿದ್ದಾರೆ. ಶುಕ್ರವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸುತ್ತಿರುವಂತ ರಾಜ್ಯ ಬಜೆಟ್ ಬಗ್ಗೆ ತೀವ್ರತರವಾದಂತ ನಿರೀಕ್ಷೆಗಳಿದ್ದು, ಯಾವ ಯಾವ ಕ್ಷೇತ್ರಗಳಿಗೆ ಅನುದಾನ, ಯಾರಿಗೆಲ್ಲ ಬಂಫರ್ ಗಿಫ್ಟ್…
ಬೆಂಗಳೂರು: ಫೆಬ್ರವರಿ.16, 2024ರಂದು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಅಂದು ಶಿಕ್ಷಕರು ಮತದಾನದಲ್ಲಿ ಪಾಲ್ಗೊಳ್ಳೋದಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ, ರಾಜ್ಯ ಸರ್ಕಾರದಿಂದ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಣೆ ಮಾಡಿ ಆದೇಶಿಸಿದೆ. ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ದಿನಾಂಕ:16.02.2024ರ ಶುಕ್ರವಾರದಂದು ಕರ್ನಾಟಕ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರಕ (ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿಬಿಎಂಪಿ ಹಾಗೂ ರಾಮನಗರ ಜಿಲ್ಲೆ) ಉಪ ಚುನಾವಣೆಯನ್ನು ನಡೆಸಲು ಘೋಷಿಸಲಾಗಿರುತ್ತದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಉಪ ಚುನಾವಣೆ ನಡೆಯುತ್ತಿರುವ ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತದ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕ ಮತದಾರರು, ಮತದಾನ ಮಾಡಲು ಅನುಕೂಲವಾಗುವಂತ ದಿನಾಂಕ : 16.02.2024ರ ಶುಕ್ರವಾರದಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಆದೇಶಿಸಿದ್ದಾರೆ. ಈ ಉಪ ಚುನಾವಣೆಯ…
ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲೂ ವೈರಲ್ ಆಗಿರುವಂತ ಏನಿಲ್ಲ, ಏನಿಲ್ಲ ಹಾಡು ಸದ್ದು ಮಾಡಿದೆ. ಇದನ್ನು ಸದನದಲ್ಲೇ ಹಾಡಿದಂತ ವಿಪಕ್ಷ ನಾಯಕ ಆರ್ ಅಶೋಕ್ ಅವರು, ಸೋಷಿಯಲ್ ಮೀಡಿಯದಲ್ಲಿ ಏನಿಲ್ಲ ಹಾಡು ಟ್ರೆಂಡ್ ಆಗಿದೆ. ಹಾಗೆ ಇಲ್ಲಿ ನೀರಿಲ್ಲ ನೀರಿಲ್ಲ ಎನ್ನುವಂತೆ ಆಗಿದೆ ಎಂಬುದಾಗಿ ರಾಜ್ಯ ಸರ್ಕಾರವನ್ನು ಕಾಲು ಎಳೆದರು. ಇಂದು ವಿಧಾನಸಭೆಯಲ್ಲಿ ಮಾತನಾಡಿದಂತ ಅವರು, ನಾನು ಸರ್ಕಾರ ಸರಿಯಾದ ದಾರಿಯಲ್ಲಿ ನಡೆಯುತ್ತಿಲ್ಲ. ಸರ್ಕಾರ ಎಲ್ಲೋ ಒಂದು ಕಡೆ ಕೆಟ್ಟೋಗಿರೋ ಬಸ್ ತರ ನಿಂತು ಹೋಗಿದೆ. ಇದು ಮುಂದೆ ಹೋಗುತ್ತೋ ಇಲ್ವೋ ಗೊತ್ತಿಲ್ಲ ಎಂದರು. ನೀವು ಸೋಷಿಯಲ್ ಮೀಡಿಯಾದಲ್ಲಿ ನೋಡಬೇಕು. ಏನಿಲ್ಲ ಏನಿಲ್ಲ ಅಂತ ಹಾಡೊಂದು ಟ್ರೆಂಡ್ ಆಗಿದೆ. ಇಲ್ಲಿ ನೀರಿಲ್ಲ. ನೀರಿಲ್ಲ. ಮೇವಿಲ್ಲ. ಅಕ್ಕಿಯಿಲ್ಲ. ಕೊನೆಗೆ ಏನು ಹಾಕಿದ್ದಾರೆ ಅಂದರೇ ಸರ್ಕಾರದ ಬೊಕ್ಕಸದಲ್ಲಿ ಹಣವಿಲ್ಲ. ಈ ಸರ್ಕಾರ ಸತ್ತೋಗಿದೆ ಅಂತ ಹಾಡಿನಲ್ಲಿ ಹಾಕಿದ್ದಾರೆ. ಅದನ್ನು ನಾನು ಇಲ್ಲಿ ಹೇಳುತ್ತಿದ್ದೇನೆ ಎಂಬುದಾಗಿ ಹೇಳಿದರು. ರಾಜ್ಯದಲ್ಲಿ ಕುಡಿಯುವ ನೀರಿಗೆ ಆಹಾಹಾಕಾರ ಇದೆ. ಕಾನೂನು ಸುವ್ಯವಸ್ಥೆ…
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಮೂಲಕ ಮಹತ್ವದ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಹಂಚಿಕೆಯ ಅನುಮೋದನೆಯನ್ನು ನೀಡಲಿದ್ದಾರೆ. ಈ ಕುರಿತಂತೆ ಸಚಿವ ಸಂಪುಟ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಮಾಹಿತಿ ಬಿಡುಗಡೆ ಮಾಡಿದ್ದು, ದಿನಾಂಕ 15-02-2024ರ ಗುರುವಾರ ಸಂಜೆ 6 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 5ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ. ರಾಜ್ಯ ಬಜೆಟ್ ಮಂಡನೆಗೂ ಮುನ್ನವೇ ನಾಳೆ ಮಹತ್ವದ ಸಚಿವ ಸಂಪುಟ ಸಭೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನಡೆಸಲಿದ್ದಾರೆ. ಈ ಸಂಪುಟ ಸಭೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡೋ ಸಾಧ್ಯತೆ ಇದೆ. https://kannadanewsnow.com/kannada/list-of-candidates-for-rajya-sabha-elections-from-karnataka-announced/ https://kannadanewsnow.com/kannada/upsc-recruitment-2019-heres-the-direct-link-to-apply-for-1056-vacancies/
ಬೆಂಗಳೂರು: ರಾಜ್ಯದ ಅಂಗಡಿ-ಮುಂಗಟ್ಟುಗಳಿಗೆ ಶೇ.60ರಷ್ಟು ನಾಮಫಲಕವನ್ನು ಕನ್ನಡದಲ್ಲೇ ಹಾಕುವಂತೆ ಕಡ್ಡಾಯಗೊಳಿಸಲಾಗಿದೆ. ಇದನ್ನು ಈಗ ಮಸೂದೆಯಾಗಿ ಜಾರಿಗೊಳಿಸೋದಕ್ಕಾಗಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರದಿಂದ ಮಂಡಿಸಲಾಗಿದೆ. ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಬಳಕೆ ಮಾಡುವುದನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲಾಗಿತ್ತು. ಇದಕ್ಕೆ ರಾಜ್ಯಪಾಲರಿಗೆ ಅಂಕಿತ ಸೂಚಿಸೋದಕ್ಕೂ ಕಾಯ್ದೆಯನ್ನು ಕಳುಹಿಸಲಾಗಿತ್ತು. ಆದ್ರೇ ರಾಜ್ಯಪಾಲರು ಇದನ್ನು ವಾಪಾಸ್ ಕಳುಹಿಸಿದ್ದರು. ಇದೀಗ ಕೈಗಾರಿಕೆಗಳು, ವಾಣಿಜ್ಯ, ಚಟುವಟಿಕೆ ಕೇಂದ್ರಗಳು, ಆಸ್ಪತ್ರೆ, ಪ್ರಯೋಗಾಲಯಗಳು ಸೇರಿದಂತೆ ರಾಜ್ಯದಲ್ಲಿನ ಎಲ್ಲ ವಹಿವಾಟು ಕೇಂದ್ರಗಳ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಕೆಯಾಗಿರುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರ ನೀಡುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಮಸೂದೆ 2024 ಅನ್ನು ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವರ ಪರವಾಗಿ ಗೃಹ ಸಚಿವ ಜಿ.ಪರಮೇಶ್ವರ ಮಸೂದೆಯನ್ನು ಮಂಡಿಸಿದರು. ಮನರಂಜನಾ ಕೇಂದ್ರಗಳು, ಹೋಟೆಲ್ಗಳು, ಪ್ರಯೋಗಾಲಯಗಳು, ಟ್ರಸ್ಟ್ಗಳು, ಸಮಾಲೋಚನಾ ಕೇಂದ್ರಗಳು ಸೇರಿದಂತೆ ಎಲ್ಲ ಬಗೆಯ ಸಂಸ್ಥೆಗಳಿಗೂ ಈ ತಿದ್ದುಪಡಿ ಅನ್ವಯವಾಗಲಿದೆ. 2022ರ ಕಾಯ್ದೆಗೆ ಈ ತಿದ್ದುಪಡಿಯನ್ನು ತರಲಾಗುತ್ತಿದೆ. https://kannadanewsnow.com/kannada/former-corporator-padmaraj-arrested-for-threatening-to-kill-bjp-mla-k-gopalaiah/ https://kannadanewsnow.com/kannada/list-of-candidates-for-rajya-sabha-elections-from-karnataka-announced/
ಬೆಂಗಳೂರು: ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಅವರಿಗೆ ಜೀಪ ಬೆದರಿಕೆ ಹಾಕಿದ ಆರೋಪದಲ್ಲಿ ಮಾಜಿ ಕಾರ್ಪೋರೇಟರ್ ಪದ್ಮರಾಜ್ ಅವರನ್ನು ಬಂಧಿಸಲಾಗಿದೆ. ಈ ಕುರಿತಂತೆ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಮಾಜಿ ಕಾರ್ಪೊರೇಟರ್ ಪದ್ಮರಾಜ್ ಅವರ ವಿರುದ್ಧ ದೂರು ದಾಖಲಾಗಿತ್ತು. ಮಹಾರಲಕ್ಷ್ಮೀ ಲೇಔಟ್ ಶಾಸಕ ಕೆ.ಗೋಪಾಲಯ್ಯ ಅವರಿಗೆ ನಿಂದಿಸಿ, ಪ್ರಾಣ ಬೆದರಿಕೆ ಹಾಕಿದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿತ್ತು. ಈ ದೂರಿನ ಹಿನ್ನಲೆಯಲ್ಲಿ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಮಾಜಿ ಕಾರ್ಪೊರೇಟರ್ ಪದ್ಮರಾಜ್ ಅವರನ್ನು ಬಂಧಿಸಿದ್ದಾರೆ. ಆ ನಂತ್ರ ಅವರು ದೂರಿನ ಸಂಬಂಧ ವಿಚಾರಣೆ ನಡೆಸುತ್ತಿರೋದಾಗಿ ತಿಳಿದು ಬಂದಿದೆ.ಟ ನಾನು ಧರ್ಮಸ್ಥಳ ಮಂಜುನಾಥನ ಮೇಲಾಣೆ ಬೆದರಿಕೆ ಹಾಕಿಲ್ಲ ಬೆಂಗಳೂರು: ನಾನು ಧರ್ಮಸ್ಥಳದ ಮಂಜುನಾಥನ ಮೇಲೆ ಆಣೆ ಮಾಡಿ ಹೇಳುತ್ತೇನೆ ಬಿಜೆಪಿ ಶಾಸಕ ಕೆ.ಗೋಪಾಲಯ್ಯಗೆ ಬೆದರಿಕೆ ಹಾಕಿಲ್ಲ. ಕೊಟ್ಟ ಹಣ ವಾಪಾಸ್ ಕೇಳುವ ವೇಳೆಯಲ್ಲಿ ವಾಗ್ವಾದ ಆಗಿದೆ ಎಂಬುದಾಗಿ ಮಾಜಿ ಕಾರ್ಪೋರೇಟರ್ ಪದ್ಮರಾಜ್ ಸ್ಪಷ್ಟ ಪಡಿಸಿದ್ದಾರೆ. ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಅವರಿಗೆ ಜೀವ ಬೆದರಿಕೆ ಹಾಕಿದ…
ಹಾವೇರಿ: 40% ಕಮಿಷನ್ ಆರೋಪದ ತನಿಖೆ ವಿಚಾರದಲ್ಲಿ ಸರ್ಕಾರ ಕಾಲ ಹರಣ ಮಾಡುತ್ತಿರುವುದನ್ನು ಕೋರ್ಟ್ ಗಮನಿಸಿದ್ದು, ಸರಕಾರದ ಬೊಕ್ಕಸ ಖಾಲಿಯಾಗಿದೆ ಎನ್ನುವುದು ಸ್ಪಷ್ಟವಾಗಿದೆ. ನ್ಯಾಯಾಲಯವು ಸಹ ಇದನ್ನು ಹೇಳಲು ಶುರು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದ 40% ಕಮಿಷನ್ ಕುರಿತ ತನಿಖೆಯನ್ನು ಅನಗತ್ಯ ವಿಳಂಬ ಮಾಡಿತ್ತಿರುವ ಬಗ್ಗೆ ಹೈಕೋರ್ಟ್ ಗಮನಿಸಿ ಆರು ವಾರದಲ್ಲಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದೆ. ಸರ್ಕಾರದಲ್ಲಿ ಹಣ ಇಲ್ಲದಿರುವುದಕ್ಕೆ ಈ ರೀತಿಯ ಕಮಿಷನ್ ಮಾಡಿಕೊಂಡು ಕುಳಿತಿದ್ದೀರಿ, ಆರು ವಾರದಲ್ಲಿ ವರದಿ ನೀಡದಿದ್ದರೆ, ಹಣ ಬಿಡುಗಡೆಗೆ ನಾವೇ ನಿರ್ದೇಶನ ನೀಡಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ. ಸರಕಾರ ಈಗಲಾದರೂ ನಾಚಿಕೆ ಬಿಟ್ಟು ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಮೇಲೆ ಒತ್ತಡ ಇದ್ದು, ಅವರ ಮೇಲೆ ಸರ್ಕಾರ ಒತ್ತಡ ಹೇರುತ್ತಿದೆ. ಹೀಗಾಗಿ ಅವರು ಸರ್ಕಾರದ ಪರವಾಗಿ ಮಾತನಾಡುತ್ತಿದ್ದಾರೆ. ಆ…
ನವದೆಹಲಿ: ದೆಹಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಮತ್ತೆ ಸಂಕಷ್ಟ ಶುರುವಾಗಿದೆ. ಇದೀಗ 6ನೇ ಬಾರಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಈ ಕುರಿತಂತೆ ಇಡಿಯಿಂದ ಸಮನ್ಸ್ ಜಾರಿಗೊಳಿಸಲಾಗಿದ್ದು, ಫೆಬ್ರವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಆರನೇ ಸಮನ್ಸ್ ನೀಡಿದೆ. ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಹೊಸ ಮತ್ತು ಆರನೇ ಸಮನ್ಸ್ ಜಾರಿ ಮಾಡಿದೆ. ಮಾಹಿತಿಯ ಪ್ರಕಾರ, ಫೆಬ್ರವರಿ 19 ರಂದು ಇಡಿ ಮುಂದೆ ಹಾಜರಾಗುವಂತೆ ಕೇಜ್ರಿವಾಲ್ ಅವರಿಗೆ ಸೂಚಿಸಲಾಗಿದೆ. https://kannadanewsnow.com/kannada/list-of-candidates-for-rajya-sabha-elections-from-karnataka-announced/ https://kannadanewsnow.com/kannada/upsc-recruitment-2019-heres-the-direct-link-to-apply-for-1056-vacancies/