Author: kannadanewsnow09

ನವದೆಹಲಿ: ತಿಂಗಳ ಕೊನೆಯ ವಹಿವಾಟಿನ ದಿನದಂದು ಬೆಂಚ್‌ಮಾರ್ಕ್ ಷೇರು ಮಾರುಕಟ್ಟೆ ಸೂಚ್ಯಂಕಗಳು ಮಾರಾಟದ ಭರಾಟೆಯನ್ನು ಕಂಡವು ಮತ್ತು 1% ಕ್ಕಿಂತ ಹೆಚ್ಚು ಕುಸಿತ ಕಂಡವು. ದಲಾಲ್ ಸ್ಟ್ರೀಟ್ ಆಟೋ ಮತ್ತು ಹಣಕಾಸು ವಲಯದ ಷೇರುಗಳಿಂದ ವ್ಯಾಪಕ ಕುಸಿತ ಕಂಡಿತು, ಐಟಿ ಷೇರುಗಳು ಹಸಿರು ಬಣ್ಣದಲ್ಲಿ ಕೊನೆಗೊಂಡಿತು. ಎಸ್ & ಪಿ ಬಿಎಸ್‌ಇ ಸೆನ್ಸೆಕ್ಸ್ 961.42 ಪಾಯಿಂಟ್‌ಗಳ ಕುಸಿತದೊಂದಿಗೆ 81,287.19 ಕ್ಕೆ ಮುಕ್ತಾಯವಾಯಿತು, ಆದರೆ ಎನ್‌ಎಸ್‌ಇ ನಿಫ್ಟಿ 50 317.90 ಪಾಯಿಂಟ್‌ಗಳ ಕುಸಿತದೊಂದಿಗೆ 25,178.65 ಕ್ಕೆ ಕೊನೆಗೊಂಡಿತು. ಜಿಯೋಜಿತ್ ಇನ್ವೆಸ್ಟ್‌ಮೆಂಟ್ಸ್ ಲಿಮಿಟೆಡ್‌ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್, ದುರ್ಬಲ ಜಾಗತಿಕ ಸೂಚನೆಗಳು ಮತ್ತು ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಅಪಾಯಗಳ ನಡುವೆಯೂ ಮಾರುಕಟ್ಟೆಗಳು ಏಕೀಕರಣಗೊಳ್ಳುತ್ತಲೇ ಇವೆ ಎಂದು ಹೇಳಿದರು. ಹೂಡಿಕೆದಾರರ ಭಾವನೆಗಳು ಹೆಚ್ಚು ಜಾಗರೂಕತೆಯಿಂದ ಕೂಡಿವೆ. “ಯುಎಸ್-ಇರಾನ್ ಪರಮಾಣು ಮಾತುಕತೆಗಳಲ್ಲಿ ಪ್ರಗತಿಯ ಕೊರತೆಯು ಮಧ್ಯಪ್ರಾಚ್ಯ ಉದ್ವಿಗ್ನತೆಗಳು ಮತ್ತಷ್ಟು ಹೆಚ್ಚಾಗುವ ಬಗ್ಗೆ ಕಳವಳಗಳನ್ನು ತೀವ್ರಗೊಳಿಸಿದೆ, ಆದರೆ ನಿರಂತರ AI ಸಂಬಂಧಿತ ಅನಿಶ್ಚಿತತೆಯು ಸುರಕ್ಷಿತ ಹರಿವುಗಳನ್ನು ಬೆಂಬಲಿಸುತ್ತಿದೆ.…

Read More

ಬೆಂಗಳೂರು: ನೀವು ವಾಟ್ಸಾಪ್ (WhatsApp) ಅಥವಾ ಟೆಲಿಗ್ರಾಂ (Telegram) ಅಪ್ಲಿಕೇಶನ್‌ಗಳನ್ನು ಹೆಚ್ಚಾಗಿ ಬಳಸುತ್ತೀರಾ? ಹಾಗಿದ್ದಲ್ಲಿ, ಮಾರ್ಚ್ 1 ರಿಂದ ಜಾರಿಗೆ ಬರಲಿರುವ ಹೊಸ ನಿಯಮಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು. ಕೇಂದ್ರ ದೂರಸಂಪರ್ಕ ಇಲಾಖೆಯು (DoT) ಸೈಬರ್ ಸುರಕ್ಷತೆಯನ್ನು ಹೆಚ್ಚಿಸಲು ಹೊಸ ‘ಸಿಮ್ ಬೈಂಡಿಂಗ್’ (SIM Binding) ನಿಯಮವನ್ನು ಜಾರಿಗೆ ತರುತ್ತಿದೆ. ಏನಿದು ಹೊಸ ‘ಸಿಮ್ ಬೈಂಡಿಂಗ್’ ನಿಯಮ? ಇಲ್ಲಿಯವರೆಗೆ, ನಾವು ಒಮ್ಮೆ ವಾಟ್ಸಾಪ್ ಅಥವಾ ಟೆಲಿಗ್ರಾಂ ಅಕೌಂಟ್ ಅನ್ನು ಫೋನ್ ನಂಬರ್ ಮೂಲಕ ಆಕ್ಟಿವೇಟ್ ಮಾಡಿದರೆ, ಆ ನಂತರ ಫೋನ್‌ನಿಂದ ಸಿಮ್ ಕಾರ್ಡ್ ತೆಗೆದರೂ ಅಥವಾ ಬೇರೆ ಫೋನ್‌ಗಳಲ್ಲಿ ಲಿಂಕ್ ಮಾಡಿದರೂ ಅಪ್ಲಿಕೇಶನ್ ಕೆಲಸ ಮಾಡುತ್ತಿತ್ತು. ಆದರೆ ಮಾರ್ಚ್ 1 ರಿಂದ ಈ ವ್ಯವಸ್ಥೆ ಇರುವುದಿಲ್ಲ. ಹೊಸ ನಿಯಮದ ಪ್ರಕಾರ, ನೀವು ಯಾವ ಮೊಬೈಲ್ ಸಂಖ್ಯೆಯ ಮೂಲಕ ವಾಟ್ಸಾಪ್ ಅಥವಾ ಟೆಲಿಗ್ರಾಂ ಬಳಸುತ್ತಿದ್ದೀರೋ, ಆ ಸಿಮ್ ಕಾರ್ಡ್ ಕಡ್ಡಾಯವಾಗಿ ಅದೇ ಮೊಬೈಲ್‌ನಲ್ಲಿ ಇರಬೇಕು. ಒಂದು ವೇಳೆ ನೀವು ಸಿಮ್ ಕಾರ್ಡ್ ಅನ್ನು…

Read More

ಬೆಂಗಳೂರು: ರಾಜ್ಯದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ ಹಾಗೂ ಮಾರ್ಗದರ್ಶನ ನೀಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಕೆ ಸಿ ರೆಡ್ಡಿ ಯವರ ಪುಣ್ಯ ತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ದಿವಂಗತ ಕೆ ಸಿ ರೆಡ್ಡಿ ಯವರಿಗೆ ಇಂದು ಗೌರವ ಅರ್ಪಿಸಲಾಗಿದೆ. ಅವರು ಸ್ವತಂತ್ರ ಭಾರತದ ರಾಜ್ಯದ ಮೊದಲ ಮುಖ್ಯಮಂತ್ರಿ. ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯರಾಗಿದ್ದ ಅವರು ಅನೇಕ ಬಾರಿ ಜೈಲುವಾಸ ಅನುಭವಿಸಿದ್ದಾರೆ. ಮೈಸೂರು ಸಂಸ್ಥಾನವನ್ನು ಒಗ್ಗೂಡಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ರಾಜ್ಯಪಾಲರಾಗಿ ಜನಸೇವೆಯನ್ನು ಮಾಡಿದ್ದರು, ಕರ್ನಾಟಕದಲ್ಲಿ ಕಾರ್ಖಾನೆಗಳ ಸ್ಥಾಪನೆಗೆ ಶ್ರಮಿಸಿದ ಕೆ.ಸಿ.ರೆಡ್ಡಿಯವರು ರಾಜ್ಯ ಅಭಿವೃದ್ಧಿಗೆ ಮಹತ್ತರ ಕೊಡುಗೆ ಪ್ರಾಮಾಣಿಕ ರಾಜಕೀಯ ನಾಯಕರಾಗಿದ್ದರು. ಅವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ನೀಡಲಿ ಹಾಗೂ ಅವರ ಆದರ್ಶಗಳು ಸದಾ ನಮಗೆ ಮಾರ್ಗದರ್ಶನ ನೀಡಿದೆ…

Read More

ತುಮಕೂರು: ಕಾಲೇಜಿಗೆ ಹೋಗಿ ಸಂಜೆ ಮನೆಗೆ ವಾಪಾಸ್‌ ಬರುವ ವೇಳೆ ವಿದ್ಯಾರ್ಥಿನಿಯನ್ನು ಎಳೆದಾಡಿ ಬಲವಂತಾಗಿ ಮುತ್ತಿಟ್ಟು ಅಸಭ್ಯವಾಗಿ ವರ್ತಿಸಿದ ಯುವಕನ ಬಗ್ಗೆ ದೂರು ನೀಡಿದರೆ,ಆ ಠಾಣೆ ಪೊಲೀಸರು ಮಾತ್ರ ವಿದ್ಯಾರ್ಥಿನಿ ತಂದೆ ಯಿಂದ ಪ್ರಕರಣಕ್ಕೆ ಸಂಪೂರ್ಣ ವಿರುದ್ಧವಾದ ಹೇಳಿಕೆ ಪಡೆದು ಎನ್‌ಆರ್ ದಾಖಲಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಗಡಿ ಠಾಣೆಗಳಲ್ಲಿ ಹುಳಿಯಾರು ಪೊಲೀಸ್ ಠಾಣೆಯಲ್ಲಿರುವ ಪೊಲೀಸರು ವಿದ್ಯಾರ್ಥಿನಿಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೇ ಯುವಕನ ಪ್ರಭಾವಕ್ಕೆ ಒಳಗಾಗಿ ಯುವಕನು ಏನು ಮಾಡಿಲ್ಲವೆಂಬದಂತೆ ಸಣ್ಣಪುಟ್ಟಸಬೂಬುಗಳನ್ನು ಉಲ್ಲೇಖಿಸಿ ಎನ್ ಸಿಆರ್ ಮಾಡಿರುವುದು ಎಷ್ಟು ಸರಿ ಎನ್ನುವ ಪ್ರಶ್ನೆಯನ್ನು ಸಾರ್ವಜನಿಕರು ಎತ್ತಿದ್ದಾರೆ. ಪ್ರಕರಣವೇನು..? ಬುಕ್ಕಾಪಟ್ಟಣ ಅರಣ್ಯದಂಚಿನ ಅಂಬಾರಪುರದಿಂದ ಗ್ರಾಮದಿಂದ ಬೆಳ್ಳಾರ ಗ್ರಾಮಕ್ಕೆ ಕಾಡಲ್ಲಿ ನಡೆದುಕೊಂಡು ಹೋಗಿ ಅಲ್ಲಿಂದಬುಕ್ಕಾಪಟ್ಟಣದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಇದೇ ಫೆ.25ರಂದು ಬೆಳಿಗ್ಗೆ 9ರ ಸರಿಸುಮಾರಿಗೆ ಊರಿಂದ ಕಾಡಿನಲ್ಲಿ ನಡೆದುಕೊಂಡು ಬೆಳ್ಳಾರ ಗ್ರಾಮಕ್ಕೆ ಬರುವವೇಳೆಗೆ ಬುಕ್ಕಾಪಟ್ಟಣಕ್ಕೆ ಹೋಗುವ ಬಸ್ ಮಿಸ್ ಆಗಿದೆ. ಲೈಂಗಿಕ ದೌರ್ಜನ್ಯ ಎಸಗಿದ ಗಿರೀಶ್…

Read More

ಬೆಂಗಳೂರು: ಬೆಂಗಳೂರು ಮೂಲದ ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವವಿದ್ಯಾಲಯವು ನಕಲಿ ಸಂಸ್ಥೆಯಾಗಿದೆ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗ ಎಚ್ಚರಿಸಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರವೇಶ ಪಡೆಯದಂತೆ ಸೂಚಿಸಿದೆ. ಏಕೆಂದರೆ ಅಲ್ಲಿ ನೀಡಲಾಗುವ ಯಾವುದೇ ಪದವಿಗಳು ಅಥವಾ ಡಿಪ್ಲೊಮಾಗಳು ಉನ್ನತ ಶಿಕ್ಷಣ ಅಥವಾ ಸರ್ಕಾರಿ ಉದ್ಯೋಗಕ್ಕೆ ಅಮಾನ್ಯವಾಗಿವೆ. ನಿಯಂತ್ರಕರ ಪ್ರಕಾರ, ಸಂಸ್ಥೆಯು ಬೆಂಗಳೂರಿನ ರಾಜಾಜಿನಗರದ ಡಾ. ರಾಜ್‌ಕುಮಾರ್ ರಸ್ತೆಯಲ್ಲಿರುವ ಗೋಲ್ಡನ್ ಹೈಟ್ಸ್ ಬಳಿಯ #1035, 4 ನೇ ಬ್ಲಾಕ್‌ನಿಂದ ಕಾರ್ಯನಿರ್ವಹಿಸುತ್ತದೆ, ಆದರೆ ಯುಜಿಸಿ ಕಾಯ್ದೆ, 1956 ರ ಸೆಕ್ಷನ್ 2(ಎಫ್) ಅಥವಾ ಸೆಕ್ಷನ್ 3 ರ ಅಡಿಯಲ್ಲಿ ಮಾನ್ಯತೆಯನ್ನು ಹೊಂದಿಲ್ಲ ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಅಥವಾ ಯಾವುದೇ ಇತರ ಶಾಸನಬದ್ಧ ಪ್ರಾಧಿಕಾರದಿಂದ ಅನುಮೋದಿಸಲ್ಪಟ್ಟಿಲ್ಲ. ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವವಿದ್ಯಾಲಯ ಯುಜಿಸಿ ಸ್ಥಿತಿ ಮತ್ತು ಮಾನ್ಯತೆ ಎಚ್ಚರಿಕೆ ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವವಿದ್ಯಾಲಯವು ಅಸ್ತಿತ್ವದಲ್ಲಿರುವ ಕಾನೂನನ್ನು ಉಲ್ಲಂಘಿಸಿ ಪದವಿಗಳು ಮತ್ತು ಡಿಪ್ಲೊಮಾಗಳನ್ನು ನೀಡುತ್ತಿದೆ ಎಂದು ಯುಜಿಸಿ ಅಧಿಕಾರಿಗಳು ಹೇಳಿದ್ದಾರೆ, ಅಂದರೆ…

Read More

ಬೆಂಗಳೂರು: ಆರೋಗ್ಯಕರ ಕುಟುಂಬಗಳು ಆರೋಗ್ಯಕರ ರಾಷ್ಟ್ರವನ್ನು ನಿರ್ಮಿಸುತ್ತವೆ. ಆರೋಗ್ಯಕರ ರಾಷ್ಟ್ರವು ಶಕ್ತಿಶಾಲಿ ಭವಿಷ್ಯವನ್ನು ನಿರ್ಮಿಸುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಶುಕ್ರವಾರ ನಡೆದ ಮಹಿಳಾ ಮಾನಸಿಕ ಆರೋಗ್ಯ ಶೃಂಗಸಭೆಯನ್ನು (Mpowering Minds 2026, women’s Mental health summit) ಉದ್ಘಾಟಿಸಿ ಮಾತನಾಡಿದ ಸಚಿವರು, ಆರೋಗ್ಯಕರ ಮಹಿಳೆಯರು ಆರೋಗ್ಯಕರ ಕುಟುಂಬಗಳನ್ನು ನಿರ್ಮಿಸುತ್ತಾರೆ ಎಂದರು. ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಹತ್ತು ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ Mpower ಸಂಸ್ಥೆಗೆ ಹೃತ್ಪೂರ್ವಕ ಅಭಿನಂದನೆಗಳು. ನಾವು ಇಂದು ಇರುವ ಬೆಂಗಳೂರು, ಆಲೋಚನೆಗಳ, ಹೊಸತನದ ಮತ್ತು ವಿಭಿನ್ನವಾಗಿ ಯೋಚಿಸುವ ಧೈರ್ಯದ ನಗರ. ಮಹಿಳೆಯರ ಮಾನಸಿಕ ಆರೋಗ್ಯಕ್ಕೂ ಇಂದು ಇದೇ ಬೇಕಾಗಿದೆ, ಮಾತನಾಡುವ ಧೈರ್ಯ, ಕೇಳುವ ಧೈರ್ಯ ಮತ್ತು ಕಾರ್ಯಗತಗೊಳಿಸುವ ಧೈರ್ಯ. ಮಾನಸಿಕ ಆರೋಗ್ಯ ನಿರ್ಲಕ್ಷಿಸುವ ವಿಷಯವಲ್ಲ, ಅದು ಜೀವನದ ವಿಷಯ ಎಂದು ಹೇಳಿದರು. ‌ ಮಹಿಳೆಯರು ಕುಟುಂಬಗಳ, ಸಮುದಾಯಗಳ ಮತ್ತು ಉದ್ಯೋಗ ಕ್ಷೇತ್ರಗಳ ಬೆನ್ನೆಲುಬು.…

Read More

ರಾಮನಗರ: ತನ್ನ ಲವರ್ ಬಾಯ್ ಬೇರೆ ಹುಡುಗಿ ಜೊತೆಗೆ ಸಂಪರ್ಕದಲ್ಲಿ ಇರೋದನ್ನು ಸಹಿಸದಂತ ಪ್ರಿಯತಮೆಯೊಬ್ಬಳು ಜಿಮ್ ಟ್ರೈನರ್ ಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವಂತ ಘಟನೆ ರಾಮನಗರದಲ್ಲಿ ನಡೆದಿದೆ. ರಾಮಗರದ ಸಿಲ್ಕ್ ಫಾರ್ಮ್ ಕ್ವಾಟ್ರಸ್ ಬಳಿಯಲ್ಲಿ ಪ್ರಿಯಕರ ಬೇರೆ ಹುಡುಗಿ ಜೊತೆಗೆ ಸಂಪರ್ಕದಲ್ಲಿ ಇದ್ದದ್ದರಿಂದ ಕೋಪಗೊಂಡು ಪ್ರೇಯರಿ ಸುಧಾ ಎಂಬುವರು, ಪ್ರಿಯಕರ, ಜಿಮ್ ಟ್ರೈನರ್ ವೇಣುಗೋಪಾಲ್ ಎಂಬಾತನಿಗೆ ಚಾಕುವಿನಿಂದ ಇರಿದಿದ್ದಾರೆ. ಸುಧಾ ಹಾಗೂ ವೇಣುಗೋಪಾಲ್ 5-6 ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೇ ವೇಣುಗೋಪಾಲ್ ಕೆಲ ದಿನಗಳಿಂದ ಸುಧಾಳಿಂದ ಅಂತರ ಕಾಯ್ದುಕೊಂಡಿದ್ದನು. ಇದಷ್ಟೇ ಅಲ್ಲದೇ ಬೇರೆ ಯುವತಿ ಜೊತೆಗೆ ವೇಣುಗೋಪಾಲ್ ಸಂಪರ್ಕದಲ್ಲಿ ಇದ್ದಾನೆ ಅಂತ ಸುಧಾ ಕೋಪಗೊಂಡಿದ್ದರು. ಈ ಕಾರಣದಿಂದಾಗಿ ವೇಣುಗೋಪಾಲ್ ನನ್ನು ತನ್ನ ಮನೆ ಬಳಿಗೆ ಸುಧಾ ಕರೆಸಿಕೊಂಡಿದ್ದರು. ಅಲ್ಲಿಗೆ ಬಂದಂತ ವೇಣುಗೋಪಾಲ್ ಗೆ ಚಾಕುವಿನಿಂದ ಇರಿದಿದ್ದಾಳೆ. ಆ ಬಳಿಕ ಬಿಡದಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾಳೆ. ಚಾಕು ಇರಿತಕ್ಕೆ ಒಳಗಾಗಿದ್ದಂತ ವೇಣುಗೋಪಾಲ್ ನನ್ನು ಬಿಡದಿ ಸಮೀಪದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಸದ್ಯ…

Read More

ಕಲಬುರ್ಗಿ: ಬಾಲಕಿಯ ಜೊತೆಗೆ ಅನುಚಿತವಾಗಿ ವರ್ತಿಸಿದ್ದ ಕಾರಣ ಪೋಕ್ಸೋ ಕೇಸ್ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಾಗಿತ್ತು. ಈ ಪ್ರಕರಣ ರದ್ದುಗೊಳಿಸುವಂತೆ ಕಲಬುರ್ಗಿಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮಲ್ಲಿಕಾರ್ಜುನ ಮುತ್ಯಾ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಸೋಷಿಯಲ್ ಮೀಡಿಯಾದಲ್ಲಿ ಬಾಲಕಿಯೊಂದಿಗೆ ಮಲ್ಲಿಕಾರ್ಜುನ ಮುತ್ಯಾ ಅವರು ಅನುಚಿತವಾಗಿ ವರ್ತಿಸಿದ್ದ ವೀಡಿಯೋ ವೈರಲ್ ಬಗ್ಗೆ ದೂರು ದಾಖಲಿಸಿತ್ತು. ಈ ಸಂಬಂಧ ಯಾದಗಿರಿ ಎಸ್ಪಿ ಅವರಿಗೆ ಬರೆಯಲಾಗಿದ್ದಂತ ಪತ್ರದಡಿ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಯಾದಗಿರಿಯ ಗೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಇದೀಗ ಮಲ್ಲಿಕಾರ್ಜುನ ಮುತ್ಯಾ ಅವರು ಈ ಪ್ರಕರಣ ರದ್ದುಗೊಳಿಸುವಂತೆ ಕಲಬುರ್ಗಿಯ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅವರು ಸಲ್ಲಿಸಿರುವಂತ ಅರ್ಜಿಯಲ್ಲಿ ಪೋಷಕರೇ ದೂರು ನೀಡಿಲ್ಲ. ಹೀಗಿದ್ದರೂ ನನ್ನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ಹಿನ್ನಲೆಯಲ್ಲಿ ಪ್ರಕರಣ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮಾರ್ಚ್.2ಕ್ಕೆ ನಿಗದಿ ಪಡಿಸಿದೆ.

Read More

ಬೆಂಗಳೂರು: ಕಟ್ಟಡ ಕಲ್ಲುಗಣಿ ಗುತ್ತಿಗೆ, ಲೈಸೆನ್ಸ್ ಪ್ರದೇಶಗಳಲ್ಲಿ ಹಾಗೂ ಸದರಿ ಗುತ್ತಿಗೆ, ಲೈಸೆನ್ಸ್ ಪ್ರದೇಶಗಳಲ್ಲಿ ಒತ್ತುವರಿ ಮಾಡಿ ಗಣಿಗಾರಿಕೆ ನಡೆಸಿ ಸಾಗಾಣಿಕೆ ಮಾಡಿರುವ ಉಪ ಖನಿಜದ ಪ್ರಮಾಣಕ್ಕೆ ವಿಧಿಸುವ ದಂಡವನ್ನು One Time Settlement( OTS) ಮೂಲಕ ಪಾವತಿಸಲು ಅವಕಾಶ ನೀಡಿದೆ. ಆ ಮೂಲಕ ಕಲ್ಲು ಗಣಿಗಾರಿಕೆ ಗುತ್ತಿಗೆದಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕಟ್ಟಡ ಕಲ್ಲುಗಣಿ ಗುತ್ತಿಗೆ / ಲೈಸೆನ್ಸ್ ವುದೇಶಗಳಲ್ಲಿ ( (2006-07)ನೇ ಸಾಲಿನಿಂದ ಸಂಚಿತ ಆಡಿಟ್ ಪ್ರಮಾಣಕ್ಕಿಂತ ಹೆಚ್ಚುವರಿಯಾಗಿ ಉಪಖನಿಜವನ್ನು ತೆಗೆದು ರಾಜಧನವನ್ನು ಪಾವತಿಸದೇ, ಖನಿಜ ಸಾಗಾಣಿಕೆ ಪರವಾನಿಗೆ ಪಡೆಯದೇ ಕಟ್ಟಡ ಕಲ್ಲು ಸಾಗಾಣಿಕೆ ಮಾಡಿರುವ ಸಂಬಂಧ) ಹಾಗೂ ಕಟ್ಟಡ ಕಲ್ಲು ಗಣಿ ಗುತ್ತಿಗೆ / ಲೈಸೆನ್ಸ್ ಪದೇಶವನ್ನು ಒತ್ತುವರಿ ಮಾಡಿರುವ ಕಲ್ಲು ಗಣಿ ಗುತ್ತಿಗೆದಾರರು / ಲೈಸೆನ್ಸ್ ದಾರರುಗಳಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ವಿಧಿಸಿರುವ ದಂಡವನ್ನು One Time Settlement (OTS) ಮೂಲಕ ಅನುಷ್ಠಾನಗೊಳಿಸಿ ಇತ್ಯರ್ಥಪಡಿಸಲು ಉಲ್ಲೇಖಿತ…

Read More

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಮಾರಾಟವಾಗುತ್ತಿದೆ ಎಂಬುದಾಗಿ ಸುದ್ದಿ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿದ್ದವು. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈ ಕೆಳಗಿನಂತೆ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಮಾರಾಟವಾಗುತ್ತಿದೆ ಎಂಬುದು ಸುಳ್ಳು. ಆ ರೀತಿಯ ಯಾವುದೇ ಪೂರಕ ಪುರಾವೆಗಳು ಇರೋದಿಲ್ಲ. ಇದು ತಪ್ಪು ಮಾಹಿತಿ. ವಿದ್ಯಾರ್ಥಿಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ದಾರಿ ತಪ್ಪಿಸೋ ಹುನ್ನಾರವಾಗಿದೆ. ಇಂತಹ ಸುಳ್ಳು ಸುದ್ದಿ ಹರಡೋರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವದಾಗಿ ತಿಳಿಸಿದೆ. ಸಾರ್ವಜನಿಕರು, ಮಕ್ಕಳ ಪಾಲಕ-ಪೋಷಕರು, ವಿದ್ಯಾರ್ಥಿಗಳು ಇವುಗಳಿಗೆ ಕಿವಿಗೊಡಬಾರದು. ವಿದ್ಯಾರ್ಥಿಗಳು ಪರೀಕ್ಷೆಯ ಕಾರಣ ವ್ಯಾಸಂಗದ ಕಡೆಗೆ ಗಮನ ಕೇಂದ್ರೀಕರಿಸಿ. ಪೋಷಕರು ಅವರಿಗೆ ಪ್ರೋತ್ಸಾಹಿಸಿ ಎಂದಿದೆ. ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ kseab.karnataka.gov.in ಜಾಲತಾಣದಲ್ಲಿ ಮಕ್ಕಳ ಪರೀಕ್ಷಾ ಸಿದ್ಧತೆಗಾಗಿ ಅಗತ್ಯವಿರುವಂತ ಸಮಗ್ರ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಒದಗಿಸಲಾಗಿದೆ ಎಂಬುದಾಗಿ ತಿಳಿಸಿದೆ.…

Read More