Author: kannadanewsnow09

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ಆದೇಶವನ್ನು ದೆಹಲಿ ನ್ಯಾಯಾಲಯ ಜೂನ್ 5 ಕ್ಕೆ ಕಾಯ್ದಿರಿಸಿದೆ. ಅವರ ಮಧ್ಯಂತರ ಜಾಮೀನು ಅವಧಿ ಇಂದು ಕೊನೆಗೊಳ್ಳುವುದರಿಂದ, ಕೇಜ್ರಿವಾಲ್ ನಾಳೆ ತಿಹಾರ್ ಜೈಲಿಗೆ ಮರಳಲಿದ್ದಾರೆ. ರೂಸ್ ಅವೆನ್ಯೂ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ಸಮಯದಲ್ಲಿ, ಇಡಿ ಪ್ರತಿನಿಧಿಗಳು ಸುಪ್ರೀಂ ಕೋರ್ಟ್ನ ಆದೇಶವು ಮಧ್ಯಂತರ ಜಾಮೀನು ವಿಸ್ತರಣೆ ಅರ್ಜಿಯನ್ನು ಸಲ್ಲಿಸುವುದನ್ನು ನಿಷೇಧಿಸಿದೆ. ಸಾಮಾನ್ಯ ಜಾಮೀನು ಅರ್ಜಿಯನ್ನು ಮಾತ್ರ ಅನುಮತಿಸುತ್ತದೆ ಎಂದು ಪ್ರತಿಪಾದಿಸಿದರು. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ವ್ಯಕ್ತಿಯು ಕಸ್ಟಡಿಯಲ್ಲಿದ್ದರೆ ಮಾತ್ರ ಜಾಮೀನು ಅನ್ವಯಿಸುತ್ತದೆ ಎಂದು ಎಎಸ್ಜಿ ರಾಜು ಎತ್ತಿ ತೋರಿಸಿದರು. ಸಿಎಂ ಪ್ರಸ್ತುತ ಕಸ್ಟಡಿಯಲ್ಲಿಲ್ಲದ ಕಾರಣ ಮಧ್ಯಂತರ ಜಾಮೀನು ಅರ್ಜಿಯನ್ನು ಅಮಾನ್ಯಗೊಳಿಸುತ್ತದೆ. ಕೇಜ್ರಿವಾಲ್ ಅವರು ಒಳಗಾಗಬೇಕಾದ ವೈದ್ಯಕೀಯ ಪರೀಕ್ಷೆಯ ಸ್ವರೂಪದ ಬಗ್ಗೆ ಸತ್ಯಗಳನ್ನು ಮರೆಮಾಚಿದ್ದಾರೆ ಮತ್ತು ಅವರು ಸುಪ್ರೀಂ ಕೋರ್ಟ್ನಲ್ಲಿ ಇದೇ ರೀತಿಯ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ಇಡಿ ಹೇಳಿದೆ. ಹೆಚ್ಚುವರಿಯಾಗಿ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ಗೆ ಮೀಸಲಾಗಿರುವ ವಿಶೇಷಾಧಿಕಾರವಾದ ಮನಿ…

Read More

ಬೆಂಗಳೂರು: ಶಾಸಕ ಹರೀಶ್ ಪೂಂಜಾ ಅವರೇ ಕಾನೂನಿನ ಅಡಿಯಲ್ಲಿ ಎಲ್ಲರೂ ಸಮಾನರು. ನೀವು ಏನೂ ಕಾನೂನು ಚೌಕಟ್ಟಿನಿಂದ ಹೊರತಾಗಿಲ್ಲ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಶಾಸಕ ಸ್ಥಾನವನ್ನು ಅಹಂಕಾರಿ ಪ್ರವೃತ್ತಿಯಲ್ಲಿ ತೋರ್ಪಡಿಸುತ್ತಿರುವ ಹರೀಶ್ ಪೂಂಜಾ ಅವರಿಗೆ ಮಾನ್ಯ ನ್ಯಾಯಾಲಯ ಚೆನ್ನಾಗಿಯೇ ಚಾಟಿ ಬೀಸಿದೆ.‌ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಕ್ಕೆ, ಪೊಲೀಸರಿಗೇ ಬೆದರಿಕೆ ಹಾಕುವ ಹರೀಶ್ ಪೂಂಜಾ ಅವರೇ, ನೀವು ಕಾನೂನು ಚೌಕಟ್ಟಿನಿಂದ ಏನು ಹೊರತಾಗಿಲ್ಲ ಅಂತ ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಿದರೆ ಶಾಸಕರಾದವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಬಹುದೇ.. ಕ್ರಿಮಿನಲ್ ಪ್ರಕರಣಗಳ ಪರ ನಿಂತು ಶಾಸಕರಾದವರು ಪ್ರತಿಭಟನೆ ನಡೆಸುವುದು ಎಷ್ಟು ಸರಿ ಎಂದು ಘನ ನ್ಯಾಯಾಲಯ ಪ್ರಶ್ನಿಸಿದೆ.‌ ಪೂಂಜಾ ಅವರೇ ಪುಡಿ ರೌಡಿ ರೀತಿ ವರ್ತಿಸದೆ, ಇನ್ಮದೆ ಆದರೂ ಶಾಸಕ ಸ್ಥಾನದ ಘನತೆ, ಗೌರವಕ್ಕೆ ತಕ್ಕಂತೆ ನಡೆದುಕೊಳ್ಳಿ ಅಂತ ಹೇಳಿದ್ದಾರೆ. https://twitter.com/dineshgrao/status/1796841522526126177 https://kannadanewsnow.com/kannada/d-v-sadananda-gowda-accuses-rahul-gandhi-of-being-involved-in-illegal-money-of-valmiki-development-corporation/ https://kannadanewsnow.com/kannada/alert-mobile-user-note-government-warns-against-accepting-these-calls/

Read More

ಬೆಂಗಳೂರು: ರಾಹುಲ್ ಗಾಂಧಿಯವರಿಗೆ ಹಣ ಕಳುಹಿಸಿದ ವಿಚಾರ ಹೊರಕ್ಕೆ ಬರಬಹುದೆಂಬ ಕಾರಣಕ್ಕೆ ಸಿದ್ದರಾಮಯ್ಯನವರು ಸಿಬಿಐ ತನಿಖೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‍ಐಟಿಗಳು ರಾಜ್ಯ ಸರಕಾರ ನೀಡುವ ಆದೇಶ ಪಾಲಿಸುವ ಏಜೆನ್ಸಿಗಳು ಎಂದರು. ಸತ್ಯಾಂಶ ಹೊರಕ್ಕೆ ಬರಲು ಸಿಬಿಐ ತನಿಖೆ ಮಾಡಿಸಿ ಎಂದು ಆಗ್ರಹಿಸಿದರು. ಇಷ್ಟು ದೀರ್ಘ ಕಾಲ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯನವರಿಗೆ ನಾಗೇಂದ್ರರನ್ನು ವಜಾ ಮಾಡುವ ಧೈರ್ಯ ಇಲ್ಲ ಮತ್ತು ಭ್ರಷ್ಟಾಚಾರಕ್ಕೆ ಪುಷ್ಟಿ ಕೊಡುವ ದಾರಿಯಲ್ಲಿ ಮುಂದೆ ಮುಂದೆ ಹೋಗುತ್ತಿದ್ದಾರೆ ಎಂದು ಟೀಕಿಸಿದರು. ನಾನು ಮುಖ್ಯಮಂತ್ರಿ ಆಗಿದ್ದರೆ ಇಂಥ ಸಚಿವನನ್ನು ಮರುದಿನವೇ ವಜಾ ಮಾಡುತ್ತಿದ್ದೆ ಎಂzರಲ್ಲದೆ, ಚಂದ್ರಶೇಖರರ ಆತ್ಮಹತ್ಯೆ ನಡೆದಿದೆ. ಈ ಹಗರಣ ಭ್ರಷ್ಟಾಚಾರಕ್ಕೆ ಒಂದು ಜ್ವಲಂತ ಸಾಕ್ಷಿ ಎಂದು ಟೀಕಿಸಿದರು. ಹಲವು ಖಾಸಗಿ ವ್ಯಕ್ತಿಗಳಿಗೆ ಹಣ ವರ್ಗಾವಣೆ ಆಗಿದ್ದು, ಸರಕಾರ ಮಾಹಿತಿ ಕೊಡುತ್ತಿಲ್ಲ ಎಂದು ಟೀಕಿಸಿದರು. ನಿಗಮದ…

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ 45 ಗಂಟೆಗಳ ಸುದೀರ್ಘ ಧ್ಯಾನವನ್ನು ಪೂರ್ಣಗೊಳಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತಮಿಳುನಾಡಿನ ಕನ್ಯಾಕುಮಾರಿಯ ಪ್ರಶಾಂತ ತೀರದಲ್ಲಿ ತಮ್ಮ ಅಭೂತಪೂರ್ವ 45 ಗಂಟೆಗಳ ಧ್ಯಾನ ಅಧಿವೇಶನವನ್ನು ಮುಕ್ತಾಯಗೊಳಿಸಿದರು. ಪ್ರಧಾನಿಯವರು ಆಧ್ಯಾತ್ಮಿಕ ಭೇಟಿಗಾಗಿ ಕನ್ಯಾಕುಮಾರಿಗೆ ಆಗಮಿಸಿದ್ದರು. ಪೂಜ್ಯ ಹಿಂದೂ ತತ್ವಜ್ಞಾನಿ ಸ್ವಾಮಿ ವಿವೇಕಾನಂದರು ‘ಭಾರತ ಮಾತೆ’ ಬಗ್ಗೆ ದೈವಿಕ ದರ್ಶನ ಹೊಂದಿದ್ದರು ಎಂದು ನಂಬಲಾದ ಧ್ಯಾನ ಮಂಟಪದಲ್ಲಿ ಅವರು ಧ್ಯಾನ ಮಾಡುತ್ತಿದ್ದರು. ಇದು ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನದ ಮುಕ್ತಾಯದೊಂದಿಗೆ ಹೊಂದಿಕೆಯಾಗುತ್ತದೆ. ಇದಕ್ಕೂ ಮುನ್ನ ಅವರು ವಿವೇಕಾನಂದ ರಾಕ್ ಮೆಮೋರಿಯಲ್ ನಲ್ಲಿ ಸೂರ್ಯೋದಯದ ಸಮಯದಲ್ಲಿ ‘ಸೂರ್ಯ ಅರ್ಘ್ಯ’ ಮಾಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಿಎಂ ಮೋದಿ ಅವರು ಸೂರ್ಯನ ರೂಪದಲ್ಲಿ ಪ್ರಕಟವಾದ ಸರ್ವಶಕ್ತನಿಗೆ ನಮಸ್ಕರಿಸುವ ಆಧ್ಯಾತ್ಮಿಕ ಅಭ್ಯಾಸಕ್ಕೆ ಸಂಬಂಧಿಸಿದ ‘ಸೂರ್ಯ ಅರ್ಘ್ಯ’ ಆಚರಣೆಯನ್ನು ಕೈಗೊಂಡರು. ಸಾಂಪ್ರದಾಯಿಕ, ಬೀಕರ್ ತರಹದ ಸಣ್ಣ ಪಾತ್ರೆಯಿಂದ ಸ್ವಲ್ಪ ನೀರನ್ನು ಸಮುದ್ರಕ್ಕೆ ಅರ್ಘ್ಯವಾಗಿ (ಅರ್ಘ್ಯ)…

Read More

ಬೆಂಗಳೂರು : ಸಿಎಂ ಹಾಗೂ ತಮ್ಮ ವಿರುದ್ಧ ಕೇರಳದ ದೇವಸ್ಥಾನದ ಸಮೀಪದ ಖಾಸಗಿ ಜಾಗದಲ್ಲಿ ಶತ್ರು ಭೈರವಿ ಯಾಗ ನಡೆಯುತ್ತಿರುವುದಾಗಿ ಹೇಳಿದ್ದೇನೆಯೇ ಹೊರತು ಕೇರಳದ ದೇವಸ್ಥಾನದಲ್ಲಿ ನಡೆಯುತ್ತಿರುವುದಾಗಿ ಹೇಳಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದರು. ನಗರದ ಸಿವಿಲ್ ಕೋರ್ಟ್ ಮುಂಭಾಗದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು. ಕೇರಳದ ದೇವಾಲಯಗಳಲ್ಲಿ ವಾಮಾಚಾರ, ಪ್ರಾಣಿಬಲಿ ನಡೆಯುತ್ತಿಲ್ಲ ಎಂಬ ಕೇರಳ ಸಚಿವೆಯ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ, “ನಾನು ದೇವಾಲಯದಲ್ಲಿ ವಾಮಾಚಾರ ನಡೆಯುತ್ತಿದೆ ಎಂದು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಕೇರಳ ದೇವರ ನಾಡು. ಅಲ್ಲಿನ ದೇವಾಲಯಗಳ ಬಗ್ಗೆ ನನಗೆ ಅಪಾರ ಗೌರವಿದೆ. ನಾನು ಯಾರ ಭಾವನೆಗಳಿಗೂ ಧಕ್ಕೆಯಾಗುವಂತೆ ನಡೆದುಕೊಂಡಿಲ್ಲ” ಎಂದರು. “ಇತ್ತೀಚೆಗೆ ರಾಜರಾಜೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದೆ. ನಾನು ರಾಜರಾಜೇಶ್ವರ ದೇವರ ಭಕ್ತ. ಎಲ್ಲಿ ವಾಮಾಚಾರ ನಡೆಯುತ್ತಿದೆ ಎನ್ನುವ ಬಗ್ಗೆ ಮಾಹಿತಿ ನೀಡಲು ಆ ದೇವಾಲಯದ ಹೆಸರು ಬಳಸಿದೆ. ಅದರ ಆಸುಪಾಸಿನ ಖಾಸಗಿ ಜಾಗದಲ್ಲಿ ನಡೆದಿದೆ…

Read More

ಹಾಸನ: ಹಾಸನ ಪೆನ್ ಡ್ರೈವ್ ಹಂಚಿಕೆ ವೈರಲ್ ಮಾಡಿದಂತ ಪ್ರಕರಣ ಸಂಬಂಧ ಶಾಸಕ ಎ.ಮಂಜು ಅವರನ್ನು ಪೊಲೀಸರು ಸತತ 1 ಗಂಟೆಯಿಂದ ವಿಚಾರಣೆ ನಡೆಸುತ್ತಿದ್ದಾರೆ. ಈಗಾಗಲೇ ಹಾಸನ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಇಬ್ಬರು ಜೈಲು ಪಾಲಾಗಿದ್ದಾರೆ. ಅಶ್ಲೀಲ ವೀಡಿಯೋ ಕೇಸಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ವಶದಲ್ಲಿದ್ದಾರೆ. ಸಂತ್ರಸ್ತೆ ಕಿಡ್ನ್ಯಾಪ್ ಕೇಸಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಭವಾನಿ ರೇವಣ್ಣ ಬಂಧನದ ಭೀತಿಯಲ್ಲಿದ್ದಾರೆ. ಹೆಚ್.ಡಿ ರೇವಣ್ಣ ಅಂತೂ ಜಾಮೀನು ಪಡೆದು ಹೊರಗಿದ್ದಾರೆ. ಇದರ ನಡುವೆ ಅರಕಲಗೂಡು ಶಾಸಕ ಎ.ಮಂಜು ಅವರನ್ನು ಹಾಸನದ ಸೈಬರ್ ಕ್ರೈಂ ಠಾಣೆಯ ಪೊಲೀಸರು, ಹಾಸನ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ ವಿಚಾರಣೆ ನಡೆಸುತ್ತಿದ್ದಾರೆ. ಹಾಸನ ಸೈಬರ್ ಕ್ರೈಂ ಠಾಣೆಯ ಎಎಸ್ಪಿ ಎಂ.ಕೆ ತಮ್ಮಯ್ಯ ಅವರ ನೇತೃತ್ವದಲ್ಲಿ ಶಾಸಕ ಎ.ಮಂಜು ಅವರನ್ನು ಸತತ 1 ಗಂಟೆಯಿಂದ ವಿಚಾರಣೆ ನಡೆಸಲಾಗುತ್ತಿದೆ. ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/alert-mobile-user-note-government-warns-against-accepting-these-calls/ https://kannadanewsnow.com/kannada/big-news-free-electricity-for-all-government-schools-in-the-state-state-government/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಗುತ್ತಿಗೆ ಕಾಮಗಾರಿಯಲ್ಲಿ ನಡೆಯುತ್ತಿರೋ ಕಳಪೆ ಕಾಮಗಾರಿಯನ್ನು ತಡೆಯಲು ಮಹತ್ವದ ಕ್ರಮ ವಹಿಸಲಾಗಿದೆ. ಈವರೆಗಿನ ಗುತ್ತಿಗೆ ನಿಯಮಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಮೂಲಕ ರಾಜ್ಯ ಸರ್ಕಾರದಿಂದ ಗುತ್ತಿಗೆದಾರರಿಗೆ ಬಿಗ್ ಶಾಕ್ ನೀಡಲಾಗಿದೆ. ಒಂದು ವೇಳೆ ನಿಯಮ ಪಾಲಿಸದೇ ಇದ್ದರೇ ಡಿಬಾರ್ ಮೆಂಟ್ ಮಾಡೋದಾಗಿ ಎಚ್ಚರಿಕೆ ನೀಡಿದೆ. ಈ ಕುರಿತಂತೆ ಲೋಕೋಪಯೋಗಿ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ವಿಜಯಕುಮಾರಿ ಕೆ.ಸಿ ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ನಿಯಮಗಳು 2000ರ ನಿಯಮ 26(ಎ)ರನ್ವಯ ಟೆಂಡರ್‌ದಾರ ಅಥವಾ ಗುತ್ತಿಗೆದಾರ ಅಥವಾ ಸರಬರಾಜುದಾರ ಅಥವಾ ಅವರ ಯಾವುದೇ ಉತ್ತರಾಧಿಕಾರಿಯನ್ನು ಡಿಬಾರ್ ಮಾಡುವ ಕುರಿತು ಸಂಗ್ರಹಣಾ ಸಂಸ್ಥೆಯ ಹಂತದಲ್ಲಿ ಡಿಬಾರ್‌ಮೆಂಟ್ ಸಮಿತಿಯನ್ನು ರಚಿಸುವ ಕುರಿತು ಉಲ್ಲೇಖಿತ ದಿನಾಂಕ:27.07.2022ರ ಸುತ್ತೋಲೆಯಲ್ಲಿ ಸೂಚನೆಗಳನ್ನು ನೀಡಲಾಗಿರುತ್ತದೆ. ಹಾಗೂ ಸಂಗ್ರಹಣಾ ಪ್ರಾಧಿಕಾರಗಳು ಆರ್ಥಿಕ ಇಲಾಖೆಯ ಅಧಿಸೂಚನೆ ಸಂಖ್ಯೆ: FD 884 Exp-12/2019, ದಿನಾಂಕ:07.05.2020 ರಲ್ಲಿ ಹೊರಡಿಸಿರುವ ಕೆಟಿಪಿಪಿ ನಿಯಮ 26A ರನ್ವಯ ಡಿಬಾರ್‌ಮೆಂಟ್‌ ಸಮಿತಿ ರಚಿಸಲು…

Read More

ಶಿವಮೊಗ್ಗ: ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಗೆಲುವಿನ ಓಟದಲ್ಲಿ ಮುಂದಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಕಾರಣ ಎನ್ನುವಂತೆ ಭದ್ರಾವತಿ ತಾಲೂಕಿನಲ್ಲಿ ಮತದಾರರು ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಗೆ ಭಾರೀ ಬೆಂಬಲ ವ್ಯಕ್ತ ಪಡಿಸಿರೋದಾಗಿ ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತದಾರರು ಒಲವು ತೋರಿದ್ದಾರೆ ಎನ್ನಲಾಗುತ್ತಿದೆ. ಮತಬೇಟೆಗೆ ಇಳಿದಿರುವಂತ ಕಾಂಗ್ರೆಸ್ ಪಕ್ಷದ ಶಾಸಕರು, ಸಚಿವರು, ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಟೊಂಕಕಟ್ಟಿ ನಿಂತಿದ್ದಾರೆ ಎನ್ನುವಂತೆ ಮತಯಾಚನೆಯಲ್ಲಿ ತೊಡಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಅವರು ತಮ್ಮ ನಿವಾಸದಲ್ಲಿ ಶಿಕ್ಷಕರು, ಶಿಕ್ಷಕರ ಸಂಘಟನೆಯೊಂದಿಗೆ ಸಭೆ ನಡೆಸಿದರು. ಈ ವೇಳೆಯಲ್ಲಿ ವಿಧಾನಪರಿಷತ್ ಚುನಾವಣೆಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ಡಾ.ಕೆ.ಕೆ ಮಂಜುನಾಥ್ ಕುಮಾರ್ ಹಾಗೂ ಪದವೀಧರ ಕ್ಷೇತ್ರದ ಆಯನೂರು ಮಂಜುನಾಥ್ ಗೆ ಮೊದಲ ಪ್ರಾಶಸ್ತ್ಯ ಮತ ನೀಡುವಂತೆ ಮನವಿ ಮಾಡಿದರು. ಶಾಸಕ ಬಿ.ಕೆ ಸಂಗಮೇಶ್…

Read More

ಶಿವಮೊಗ್ಗ: ಜೂನ್.3ರಂದು ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಮತದಾರರನ್ನು ಮನವೊಲಿಸೋ ಕೆಲಸದಲ್ಲಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತೊಡಗಿದ್ದಾರೆ. ಇಂದು ಸಾಗರ ನಗರದ ಜೂನಿಯರ್ ಕಾಲೇಜಿಗೆ ಭೇಟಿ ನೀಡಿದಂತ ಅವರು, ಕಾಲೇಜಿನ ಉಪನ್ಯಾಸಕರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದಂತ ಪದವೀಧರ ಕ್ಷೇತ್ರದ ಆಯನೂರು ಮಂಜುನಾಥ್, ಶಿಕ್ಷಕರ ಕ್ಷೇತ್ರದ ಡಾ.ಕೆ.ಕೆ ಮಂಜುನಾಥ್ ಕುಮಾರ್ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು. ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಮನವಿಗೆ ಸಕಾರಾತ್ಮಕವಾಗಿಯೇ ಸ್ಪಂದಿಸಿರುವಂತ ಮತದಾರರು, ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್, ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಗೆ ಮತ ನೀಡುವಂತ ಭರವಸೆ ನೀಡಿದ್ದಾರೆ. ಇದಲ್ಲದೇ ಸಾಗರ ನಗರದಲ್ಲಿನ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಸೇರಿದಂತೆ ಇತರೆ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿದಂತ ಶಾಸಕ ಬೇಳೂರು ಗೋಪಾಲಕೃಷ್ಣ ಅವರು, ತಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸುವಂತೆ ಮನವಿ ಮಾಡಿಕೊಂಡರು. ಶಾಸಕ…

Read More

ಬೆಂಗಳೂರು: ವಾಲ್ಮೀಕ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಾನು ಸಿ.ಟಿ ರವಿ ಇಬ್ಬರೂ ಪಾಟ್ನರ್ಸ್ ಆಗಿದ್ದೇವೆ. ಸಿಎಂ, ನಾನು ಹಣ ಹಂಚಿಕೊಂಡಿದ್ದಾರೆ ಅಂತ ಹೇಳಿದ್ದಾರೆ. ಆದ್ರೇ ರವಿ ಮತ್ತು ನಾನು ಇಬ್ಬರೂ ಹಂಚಿಕೊಂಡಿದ್ದೇವೆ ಅಂತ ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ನಗರದ ಸಿವಿಲ್ ಕೋರ್ಟ್ ಮುಂಭಾಗದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ರವಿ ಮತ್ತು ನಾನು ಹಣ ಹಂಚಿಕೊಂಡಿದ್ದೇವೆ ಸಿ.ಟಿ. ರವಿ ಆರೋಪದ ಬಗ್ಗೆ ಕೇಳಿದಾಗ “ಯಾರೋ ಒಬ್ಬ ರವಿ ಎನ್ನುವವನು ನನ್ನ ಮೇಲೆ ಹೇಳುತ್ತಿದ್ದಾನೆ. ನಾನು ಮತ್ತು ಅವನು ಇಬ್ಬರೂ ಪಾರ್ಟನರ್ಸ್. ಸಿಎಂ ಮತ್ತು ನಾನು ಹಣ ಹಂಚಿಕೊಂಡಿದ್ದೇವೆ ಎಂದು ಹೇಳಿದ್ದಾನಲ್ಲ. ಆದರೆ ರವಿ ಮತ್ತು ನಾನು ಇಬ್ಬರೂ ಹಂಚಿಕೊಂಡಿದ್ದೇವೆ” ಎಂದು ತಿರುಗೇಟು ನೀಡಿದರು. ಹಗರಣದ ತನಿಖೆಯನ್ನು ಸಿಬಿಐಗೆ ನೀಡಬೇಕು ಎನ್ನುವ ಆಗ್ರಹದ ಬಗ್ಗೆ ಕೇಳಿದಾಗ “ಇಂತಿಷ್ಟು ಕೋಟಿಯ ಬ್ಯಾಂಕ್ ಅವ್ಯವಹಾರ ನೇರವಾಗಿ ಸಿಬಿಐ ತನಿಖೆಗೆ ಹೋಗುತ್ತದೆ. ಅದು ನಿಯಮ. ಇಲ್ಲಿ ಸರ್ಕಾರ…

Read More