Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿನ ಕಾಮಾಗಾರಿಗಳಿಗೆ ಹಾಗೂ ಗುತ್ತಿಗೆದಾರರರಿಗೆ ಪಾರದರ್ಶಕವಾಗಿ ಹಣ ಬಿಡುಗಡೆ ಮಾಡಲಾಗಿದೆ. ಅನುದಾನ ಬಿಡುಗಡೆಗೆ ಮೊದಲ ಬಾರಿಗೆ ಹೊಸ ಪ್ರಯತ್ನ ಮಾಡಲಾಗಿದ್ದು, ಕಳೆದ ಎರಡು ಆರ್ಥಿಕ ವರ್ಷದಲ್ಲಿ 1566 ಕಾಮಗಾರಿಗಳಿಗೆ ಸಂಪೂರ್ಣ ಬಾಕಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಇಲಾಖೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿ/ಗುತ್ತಿಗೆದಾರರಿಗೂ ಹಣ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ತಾರತಮ್ಯ ಹಾಗೂ ಹಸ್ತಕ್ಷೇಪ ಹೇಗೆ ಸಾಧ್ಯ? ಈ ನಿಟ್ಟಿನಲ್ಲಿ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಆಧಾರ ರಹಿತ ಆರೋಪ ಮಾಡಿದ್ದಾರೆ. ನಿನ್ನೆ ನಡೆದ ಸಭೆಯಲ್ಲಿ, ರಾಜ್ಯ ಗುತ್ತಿಗೆದಾರರಲ್ಲಿ ಉಂಟಾಗಿದ್ದ ಗೊಂದಲಗಳನ್ನು ಪರಿಹರಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದರು. ಗುರುವಾರ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರ ಬಗ್ಗೆ ಇಂದು ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದರು. 2023 – 24 ನೇ ಆರ್ಥಿಕ ವರ್ಷದಲ್ಲಿ ಬಿಡುಗಡೆಯಾದ ಅನುದಾನದ ವಿವರ: 2023-24 ನೇ ಆರ್ಥಿಕ ವರ್ಷದಲ್ಲಿ…

Read More

ನವದೆಹಲಿ: ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ತಮ್ಮ ನವಜಾತ ಮಗಳನ್ನು ಅಧಿಕೃತವಾಗಿ ಜಗತ್ತಿಗೆ ಪರಿಚಯಿಸಿದ್ದಾರೆ, ಅವಳ ಹೆಸರನ್ನು ಎವಾರಾ ಎಂದು ಬಹಿರಂಗಪಡಿಸಿದ್ದಾರೆ. ಮಗಳ ಹೆಸರು ಬಹಿರಂಗಪಡಿಸಿದ ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಹೃದಯಸ್ಪರ್ಶಿ ಜಂಟಿ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ, ದಂಪತಿಗಳು ಹೃದಯಸ್ಪರ್ಶಿ ಕಪ್ಪು-ಬಿಳುಪು ಫೋಟೋವನ್ನು ಹಂಚಿಕೊಂಡಿದ್ದಾರೆ. ಕೆಎಲ್ ರಾಹುಲ್ ತಮ್ಮ ಹೆಣ್ಣು ಮಗುವನ್ನು ಮೃದುವಾಗಿ ಹಿಡಿದಿದ್ದರೆ, ಅಥಿಯಾ ಪ್ರೀತಿಯಿಂದ ತುಂಬಿದ ನಗುವಿನೊಂದಿಗೆ ನೋಡುತ್ತಿದ್ದಾರೆ. ಶೀರ್ಷಿಕೆ ಸರಳವಾಗಿ ಹೀಗಿತ್ತು: “ನಮ್ಮ ಹೆಣ್ಣು ಮಗು, ನಮ್ಮ ಎಲ್ಲವೂ. ಎವಾರಾ ~ ದೇವರ ಉಡುಗೊರೆ ಎಂದಿದ್ದಾರೆ. ಅವರು ಇನ್ಸ್ಟಾಗ್ರಾಮ್ ಸ್ಟೋರೀಸ್ನಲ್ಲಿ ಅವರ ಪೂರ್ಣ ಹೆಸರನ್ನು ಹಂಚಿಕೊಂಡಿದ್ದಾರೆ. ಎವಾರಾ ವಿ.ಆರ್ (ಎವಾರಾ ವಿಪುಲಾ ರಾಹುಲ್) ಮತ್ತು ಅದರ ಅರ್ಥವನ್ನು ವಿವರಿಸುತ್ತಾರೆ. “ಇವಾರಾಹ್, ಅಂದರೆ ದೇವರ ಉಡುಗೊರೆ. ವಿಪುಲಾ, ತನ್ನ ಮಹಾನ್ ನಾನಿ ಮತ್ತು ರಕ್ಷಕನ ಗೌರವಾರ್ಥವಾಗಿ. ರಾಹುಲ್, ಅವಳ ತಂದೆ.” ಎಂದಿದ್ದಾರೆ. ಮಾರ್ಚ್ 24, 2025 ರಂದು ಜನಿಸಿದ ಎವಾರಾ ದಂಪತಿಗಳ ಮೊದಲ ಮಗು. ಅವರ…

Read More

ನವದೆಹಲಿ: ಮೊಬೈಲ್ ಬಳಕೆದಾರರಿಗೆ ಬಿಗ್ ಶಾಕ್ ಎನ್ನುವಂತೆ ಶೀಘ್ರವೇ ಕರೆ, ಡೇಟಾ ಪ್ಯಾಕ್ ದರಗಳನ್ನು ಶೇ.10ರಿಂದ 20ರಷ್ಟು ಹೆಚ್ಚಳ ಮಾಡಲು ಟೆಲಿಕಾಂ ಆಪರೇಟರ್ ಗಳು ಸಜ್ಜಾಗಿದ್ದಾರೆ. ಭಾರತದ ಟೆಲಿಕಾಂ ವಲಯವು 2025 ರ ಅಂತ್ಯದ ವೇಳೆಗೆ ಮತ್ತೊಂದು ಗಮನಾರ್ಹ ಮೊಬೈಲ್ ಪ್ಯಾಕ್ ದರ ಹೆಚ್ಚಳಕ್ಕೆ ಸಜ್ಜಾಗುತ್ತಿದೆ. ಉದ್ಯಮ ವಿಶ್ಲೇಷಕರು ಪ್ರಿಪೇಯ್ಡ್ ಮತ್ತು ಪೋಸ್ಟ್ಪೇಯ್ಡ್ ಯೋಜನೆಗಳಲ್ಲಿ 10 ರಿಂದ 20 ಪ್ರತಿಶತದಷ್ಟು ಹೆಚ್ಚಳವನ್ನು ಊಹಿಸಿದ್ದಾರೆ. ನವೆಂಬರ್-ಡಿಸೆಂಬರ್ 2025 ರ ಸುಮಾರಿಗೆ ನಿರೀಕ್ಷಿಸಲಾದ ಈ ಮುಂಬರುವ ಬೆಲೆ ಪರಿಷ್ಕರಣೆಯು ಆರು ವರ್ಷಗಳಲ್ಲಿ ನಾಲ್ಕನೇ ಪ್ರಮುಖ ದರ ಹೆಚ್ಚಳವನ್ನು ಸೂಚಿಸುತ್ತದೆ ಮತ್ತು ಹೆಚ್ಚುತ್ತಿರುವ ವೆಚ್ಚಗಳು ಮತ್ತು 5 ಜಿ ಮೂಲಸೌಕರ್ಯವನ್ನು ವಿಸ್ತರಿಸುವ ನಡುವೆ ದರಗಳನ್ನು ಸರಿಪಡಿಸಲು ಮತ್ತು ಆದಾಯವನ್ನು ಸುಧಾರಿಸಲು ಟೆಲಿಕಾಂ ಕಂಪನಿಗಳು ನಡೆಸುತ್ತಿರುವ ಪ್ರಯತ್ನಗಳನ್ನು ಪ್ರತಿಬಿಂಬಿಸುತ್ತದೆ. ಪ್ರಮುಖ ಟೆಲಿಕಾಂ ಆಪರೇಟರ್ಗಳಾದ ಭಾರ್ತಿ ಏರ್ಟೆಲ್, ರಿಲಯನ್ಸ್ ಜಿಯೋ ಮತ್ತು ವೊಡಾಫೋನ್ ಐಡಿಯಾ (ವಿ) ನೆಟ್ವರ್ಕ್ ವಿಸ್ತರಣೆ, ಸ್ಪೆಕ್ಟ್ರಮ್ ಸ್ವಾಧೀನ ಮತ್ತು ನಿಯಂತ್ರಕ ಶುಲ್ಕಗಳಲ್ಲಿ ಭಾರಿ ಹೂಡಿಕೆಯಿಂದಾಗಿ…

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ನನಗೆ ಕೆಲ ಕ್ರಿಕೆಟಿಗರು ನಗ್ನ ಚಿತ್ರಗಳನ್ನು ಕಳಿಸುತ್ತಿದ್ದಾರೆ ಎಂಬುದಾಗಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗನ ಪುತ್ರಿ ಗಂಭೀರ ಆರೋಪವನ್ನು ಮಾಡಿದ್ದಾರೆ. ಈ ಬಗ್ಗೆ ಖಾಸಗಿ ವಾಹಿನಿಗೆ ನೀಡಿರುವಂತ ಸಂದರ್ಶನದಲ್ಲಿ ಮಾಜಿ ಕ್ರಿಕೆಟಿಗ ಸಂಜಯ್ ಬಂಗಾರ್ ಪುತ್ರಿ ಅನನ್ಯಾ ಬಂಗಾರ್ ಮಾತನಾಡಿರುವಂತ ಅವರು ನನಗೆ ಕೆಲ ಕ್ರಿಕೆಟಿಗರು ನಗ್ನ ಚಿತ್ರಗಳನ್ನು ಕಳಿಸಿದ್ರು. ಕ್ರಿಕೆಟ್ ಗೆ ಸಂಬಂಧಪಟ್ಟವರಿಂದಲೇ ಮಾನಸಿಕ ಕಿರುಕುಳ ಅನುಭವಿಸಿದ್ದೇನೆ ಎಂಬುದಾಗಿ ಗಂಭೀರ ಆರೋಪಿ ಮಾಡಿದ್ದಾರೆ. ಅಂದಹಾಗೇ ಮಾಜಿ ಕ್ರಿಕೆಟಿಗ ಸಂಜಯ್ ಬಂಗಾರ್ ಪುತ್ರಿ ಅನನ್ಯಾ ಬಂಗಾರ್ ಅವರು ಲಿಂಗ ಬದಲಾವಣೆ ಮೂಲಕ ಹೆಣ್ಣಾಗಿ ಬದಲಾಗಿದ್ದರು. ಇಂತಹ ಅವರಿಗೆ ಕೆಲ ಕ್ರಿಕೆಟಿಗರು ತಮ್ಮ ನಗ್ನ ಪೋಟೋಗಳನ್ನು ಕಳುಹಿಸುತ್ತಿರೋ ಆರೋಪ ಮಾಡಿದ್ದಾರೆ. https://kannadanewsnow.com/kannada/bjp-worker-praveen-commits-suicide-by-posting-video/ https://kannadanewsnow.com/kannada/good-news-cm-great-good-news-for-the-students-of-the-state-vidyasiri-yojana-money-increased-to-rs-2000/

Read More

ಬೆಂಗಳೂರು: ವೀಡಿಯೋ ಪೋಸ್ಟ್ ಮಾಡಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಆನೇಕಲ್ ನಲ್ಲಿ ನಡೆದಿದೆ. ಬೆಂಗಳೂರಿನ ಆನೇಕಲ್ ನ ಎಸ್ ವಿ ಎಂ ಸ್ಕೂಲ್ ಬಳಿಯಲ್ಲಿ ವೀಡಿಯೋ ಪೋಸ್ಟ್ ಮಾಡಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಈ ಹಿನ್ನಲೆಯಲ್ಲಿ ಘಟನಾ ಸ್ಥಳಕ್ಕೆ ಹೆಚ್ಚುವರಿ ಎಸ್ ಪಿ ನಾಗರಾಜ್ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಪಟ್ಟಣದ ಎಸ್ ವಿ ಎಂ ಸ್ಕೂಲ್ ಗೆ ಭೇಟಿ ನೀಡಿ ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ಪ್ರವೀಣ್ ಸಾವಿಗೆ ಕಾರಣರಾದವರನ್ನು ಬಂಧಿಸಬೇಕೆಂದು ಮನವಿಯನ್ನು ಹೆಚ್ಚುವರಿ ಎಸ್ ಪಿ ನಾಗರಾಜ್ ಅವರಿಗೆ ಪ್ರವೀಣ್ ಸಹೋದರಿ ಮನವಿ ಮಾಡಿದರು. https://kannadanewsnow.com/kannada/mysore-railway-museum-celebrates-world-heritage-day/ https://kannadanewsnow.com/kannada/attention-parents-applications-invited-for-kendriya-vidyalaya-2nd-class-admission/

Read More

ಬೆಂಗಳೂರು: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು (ಪಂ.ರಾಜ್) ಇವರ ಅಧ್ಯಕ್ಷತೆಯಲ್ಲಿ 12 ಮಂದಿಯನ್ನು ಒಳಗೊಂಡ ಇ-ಸ್ವತ್ತು ಕಾರ್ಯನಿರ್ವಹಣಾ ಸಮಿತಿ ರಚನೆ ಮಾಡಲಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ಪ್ರಕರಣ 199 ಕ್ಕೆ ತರಲು ಉದ್ದೇಶಿಸಿರುವ ತಿದ್ದುಪಡಿಗಳಿಗೆ ಅನುಗುಣವಾಗಿ ಇ-ಸ್ವತ್ತುಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉದ್ಭವಿಸುವ ಸಮಸ್ಯೆಗಳ ಹಾಗೂ ಸದರಿ ಸಮಸ್ಯೆಗಳ ಪರಿಹಾರದ ಭಾಗವಾಗಿ ಇ-ಸ್ವತ್ತು ಸುಧಾರಣೆಗೆ ಸಂಬಂಧಿಸಿದಂತೆ ಅಧ್ಯಯನ ಮಾಡಿ ವರದಿಯನ್ನು ಸಲ್ಲಿಸುವ ಹೊಣೆಗಾರಿಕೆಯನ್ನು ಈ ಸಮಿತಿಗೆ ವಹಿಸಲಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ಆಯವ್ಯಯ ಮತ್ತು ಲೆಕ್ಕಪತ್ರಗಳು) ನಿಯಮಗಳು, 2006 ರ ನಿಯಮ 28 ಮತ್ತು 30 ಕ್ಕೆ ತಿದ್ದುಪಡಿ ತಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕ್ರಮಬದ್ಧ ಆಸ್ತಿಗಳಿಗೆ ನಮೂನೆ-9, 11ಎ ಮತ್ತು ಕ್ರಮಬದ್ಧವಲ್ಲದ ಆಸ್ತಿಗಳಿಗೆ ನಮೂನೆ-11ಬಿ ಅನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಡಿಜಿಟಲ್ ಸಹಿಯ ಮೂಲಕ ವಿತರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು…

Read More

ಮೈಸೂರು: ಮೈಸೂರು ರೈಲ್ವೆ ವಸ್ತುಸಂಗ್ರಹಾಲಯವು ನೈಋತ್ಯ ರೈಲ್ವೆ (ಎಸ್‌ಡಬ್ಲ್ಯೂಆರ್), ಮೈಸೂರು ವಿಭಾಗದ ಅಡಿಯಲ್ಲಿ, ಇಂದು ವಿಶ್ವ ಪರಂಪರೆ ದಿನ 2025 ಅನ್ನು ವಿಪತ್ತು ಮತ್ತು ಸಂಘರ್ಷ-ನಿರೋಧಕ ಪರಂಪರೆ ಸಂರಕ್ಷಣೆಯನ್ನು ಒತ್ತಿಹೇಳುವ ಉತ್ಸಾಹಭರಿತ ಕಾರ್ಯಕ್ರಮದೊಂದಿಗೆ ಆಚರಿಸಿತು. ಈ ಸಂದರ್ಭದಲ್ಲಿ ಶಾಲಾ ಮಕ್ಕಳು ಉತ್ಸಾಹದಿಂದ ಭಾಗವಹಿಸಿ, ಈ ವರ್ಷದ ಥೀಮ್ “ವಿಪತ್ತು ಮತ್ತು ಸಂಘರ್ಷ-ನಿರೋಧಕ ಪರಂಪರೆ: ಪರಂಪರೆ ಸಂರಕ್ಷಣೆಗೆ ಸಂಬಂಧಿಸಿದ ಕ್ರಿಯೆಗಳು” ಕೇಂದ್ರೀಕರಿಸಿದ ಪೋಸ್ಟರ್ ತಯಾರಿಕೆ, ಚಿತ್ರಕಲೆ ಮತ್ತು ವರ್ಣಚಿತ್ರ ಸ್ಪರ್ಧೆಯಲ್ಲಿ ತೊಡಗಿದರು. ಮುದಿತ್ ಮಿತ್ತಲ್, ವಿಭಾಗೀಯ ರೈಲ್ವೆ ವ್ಯವಸ್ಥಾಪಕ (ಡಿಆರ್‌ಎಂ), ಮೈಸೂರು ವಿಭಾಗ, ಕಾರ್ಯಕ್ರಮವನ್ನು ಉದ್ಘಾಟಿಸಿ, ಸೇರಿದ್ದ ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು. ತಮ್ಮ ಭಾಷಣದಲ್ಲಿ, ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವಲ್ಲಿ ಯುವಜನರ ಪ್ರಮುಖ ಪಾತ್ರವನ್ನು ಒತ್ತಿಹೇಳಿದರು. “ಈ ಧನಸಂಪತ್ತು ವಿಪತ್ತುಗಳು ಮತ್ತು ಸಂಘರ್ಷಗಳನ್ನು ಎದುರಿಸಿ ಭವಿಷ್ಯದ ಪೀಳಿಗೆಗೆ ಉಳಿಯುವಂತೆ ಯುವ ಪೀಳಿಗೆಯು ಪರಂಪರೆ ಸಂರಕ್ಷಣೆಯ ಚಾಂಪಿಯನ್‌ಗಳಾಗಬೇಕು,” ಎಂದು ಡಿಆರ್‌ಎಂ ಮಿತ್ತಲ್ ಹೇಳಿದರು. ಅವರು ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಶ್ಲಾಘಿಸಿದರು ಮತ್ತು ಅವರನ್ನು ಪರಂಪರೆ ಜಾಗೃತಿಯ…

Read More

ಹುಬ್ಬಳ್ಳಿ: ನೈಋತ್ಯ ರೈಲ್ವೆ ಇಂದು ಗದಗ ರಸ್ತೆಯಲ್ಲಿರುವ ಹುಬ್ಬಳ್ಳಿ ರೈಲು ವಸ್ತುಸಂಗ್ರಹಾಲಯದಲ್ಲಿ ವಿಶೇಷ ಪರಂಪರಾ ನಡಿಗೆಯೊಂದಿಗೆ ವಿಶ್ವ ಪರಂಪರಾ ದಿನವನ್ನು ಆಚರಿಸಿತು. ಈ ಕಾರ್ಯಕ್ರಮಕ್ಕೆ ನೈಋತ್ಯ ರೈಲ್ವೆ ವಲಯದ ಮಹಾಪ್ರಬಂಧಕರಾದ ಮುಕುಲ್ ಸರನ್ ಮಾಥುರ್ ಮುಖ್ಯ ಅತಿಥಿಗಳಾಗಿ ಭಾಗಿಯಾಗಿದ್ದರು. ಈ ಆಚರಣೆಯ ಅಂಗವಾಗಿ ಮಾಥುರ್ ಅವರು ರೈಲು ವಸ್ತುಸಂಗ್ರಹಾಲಯವನ್ನು ವೀಕ್ಷಿಸಿ, ಭಾರತೀಯ ರೈಲ್ವೆಯ ಶ್ರೀಮಂತ ಪರಂಪರೆ ಮತ್ತು ಸಂರಕ್ಷಿತ ಇತಿಹಾಸವನ್ನು ಮೆಚ್ಚಿದರು. ರೈಲ್ವೆ ಪರಂಪರೆಯನ್ನು ಕಾಪಾಡುವಲ್ಲಿ ಮತ್ತು ಪ್ರದರ್ಶಿಸುವಲ್ಲಿ ಕಾರ್ಯಾಗಾರದ ಸಿಬ್ಬಂದಿಯ ಸೃಜನಶೀಲತೆ ಮತ್ತು ಸಮರ್ಪಣೆಯನ್ನು ಅವರು ಶ್ಲಾಘಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ  ಮಾಥುರ್, “ರೈಲ್ವೆಯು ತನ್ನದೇ ಆದ ಇತಿಹಾಸವನ್ನು ಹೊಂದಿರುವ ಏಕೈಕ ಸಂಸ್ಥೆಯಾಗಿದ್ದು, ಪರಂಪರೆಯ ಸ್ಮಾರಕಗಳು ಮತ್ತು ಉಪಕರಣಗಳ ಮೂಲಕ ಅದು ಪ್ರತಿನಿಧಿಸಲ್ಪಡುತ್ತದೆ. ಇವುಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ. ಭವಿಷ್ಯದ ಪೀಳಿಗೆಗಾಗಿ ಈ ಪರಂಪರೆಯನ್ನು ನಾವು ಕಾಪಾಡಬೇಕು” ಎಂದು ಹೇಳಿದರು. ಪರಂಪರೆ ಸಂರಕ್ಷಣೆಯಲ್ಲಿ ಸಾರ್ವಜನಿಕ ಆಸಕ್ತಿಯನ್ನು ಉತ್ತೇಜಿಸುವ ಕ್ರಮವಾಗಿ, ವಸ್ತುಸಂಗ್ರಹಾಲಯಕ್ಕೆ ಇಡೀ ದಿನ ಉಚಿತ ಪ್ರವೇಶವನ್ನು ನೀಡಲಾಗಿತ್ತು. ಇದು ಅನೇಕ ಸಂದರ್ಶಕರು ಮತ್ತು…

Read More

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಜೆಇಇ ಮೇನ್ 2025 ಸೆಷನ್ 2 ರ ಅಂತಿಮ ಕೀ ಉತ್ತರಗಳನ್ನು ಇಂದು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಏಪ್ರಿಲ್ 2 ಮತ್ತು ಏಪ್ರಿಲ್ 9 ರ ನಡುವೆ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಈಗ ಅಧಿಕೃತ ವೆಬ್ಸೈಟ್ – jeemain.nta.nic.in ಮೂಲಕ ಕೀ ಉತ್ತರಗಳನ್ನು ಪ್ರವೇಶಿಸಬಹುದು. ಅಲ್ಲದೇ ನಾಳೆ ಜೆಇಇ ಮೇನ್ 2025 ಸೆಷನ್ 2ರ ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಿದೆ. ಇತ್ತೀಚಿನ ನವೀಕರಣದ ಪ್ರಕಾರ, ಜೆಇಇ ಮೇನ್ ಸೆಷನ್ 2 ಫಲಿತಾಂಶವನ್ನು ಏಪ್ರಿಲ್ 19 ರೊಳಗೆ ಪ್ರಕಟಿಸಲಾಗುವುದು ಎಂದು ಎನ್ಟಿಎ ತನ್ನ ಅಧಿಕೃತ ಹ್ಯಾಂಡಲ್ನಲ್ಲಿ ಪೋಸ್ಟ್ ಮೂಲಕ ದೃಢಪಡಿಸಿದೆ. ಫಲಿತಾಂಶಗಳು ಹೊರಬಂದ ನಂತರ, ಅಭ್ಯರ್ಥಿಗಳು ತಮ್ಮ ಸ್ಕೋರ್ ಕಾರ್ಡ್ಗಳು, ಅಖಿಲ ಭಾರತ ಶ್ರೇಯಾಂಕಗಳು (ಎಐಆರ್), ವರ್ಗವಾರು ಕಟ್-ಆಫ್ ಮತ್ತು ಎರಡೂ ಸೆಷನ್ಗಳಿಗೆ ಟಾಪರ್ಗಳ ಪಟ್ಟಿಯನ್ನು ಪರಿಶೀಲಿಸಲು ಸಾಧ್ಯವಾಗುತ್ತದೆ. https://twitter.com/NTA_Exams/status/1913097332104613960 ಅಂತಿಮ ಉತ್ತರ ಕೀಲಿಯು ವಿದ್ಯಾರ್ಥಿಗಳಿಗೆ ತಮ್ಮ ನಿರೀಕ್ಷಿತ ಅಂಕಗಳನ್ನು ಲೆಕ್ಕಹಾಕಲು ಸಹಾಯ ಮಾಡುವಲ್ಲಿ…

Read More

ಬೆಂಗಳೂರು: ಸಿಇಟಿ ಪರೀಕ್ಷೆಯ ವೇಳೆಯಲ್ಲಿ ಮಾರ್ಗಸೂಚಿ ಹೊರತಾಗಿಯೂ ಬ್ರಾಹ್ಮಣ ಸಮುದಾಯಕ್ಕೆ ಸೇರಿದಂತ ಅಭ್ಯರ್ಥಿಯೊಬ್ಬರಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು ಜನಿವಾರ ತೆಗೆದಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಘಟನೆಯು ವಿವಾದಕ್ಕೂ ಕಾರಣವಾಗಿ ಬ್ರಾಹ್ಮಣ ಸಮುದಾಯದವರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಸಿಬ್ಬಂದಿಯ ಪರವಾಗಿ ಕ್ಷಮೆಯಾಚಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿಗಳು ಅಭ್ಯರ್ಥಿಗೆ ಜನಿವಾರ ತೆಗೆಯಬೇಕು ಎಂಬುದಾಗಿ ಹೇಳಿದ್ದು ತಪ್ಪು. ಇದನ್ನು ಕೆಇಎ ಒಪ್ಪುವುದಿಲ್ಲ. ಇಂತಹ ಯಾವುದೇ ಮಾರ್ಗಸೂಚಿಯನ್ನು ಕೆಇಎ ನೀಡಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು. ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆದ ಘಟನೆಯ ಬಗ್ಗೆ ವಿಷಾದ ವ್ಯಕ್ತ ಪಡಿಸುತ್ತೇನೆ. ನಾನೇ ಈ ಘಟನೆಯ ಸಂಬಂಧ ಕ್ಷಮೆ ಕೇಳ್ತೀನಿ. ಮುಂದೆ ಇಂತಹ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗುತ್ತದೆ. ಜೊತೆಗೆ ಮಾರ್ಗಸೂಚಿಯಲ್ಲೂ ಪ್ರಕಟ ಮಾಡುವುದಾಗಿ ತಿಳಿಸಿದರು. ನಾವು ಯಾವುದೇ ಜಾತಿ, ಧರ್ಮದ ವಿರುದ್ಧ ಮಾರ್ಗಸೂಚಿ ಪ್ರಕಟಿಸಿಲ್ಲ. ಈಗ ತಪ್ಪು ಆಗಿದೆ. ಮುಂದೆ ಇಂತಹ ತಪ್ಪು ಆಗದಂತೆ…

Read More