Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯದ ವೀಡಿಯೋ ವೈರಲ್ ಆದ ಬೆನ್ನಲ್ಲೇ, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಅಲ್ಲದೇ ನಟ ದರ್ಶನ್ ಆಪ್ತ, ನಟ ಧನ್ವೀರ್ ಅವರ ಮೊಬೈಲ್ ಜಪ್ತಿ ಮಾಡಿದ್ದಾರೆ. ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯದ ವಿಚಾರವಾಗಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ನಟ ಧನ್ವೀರ್ ವಿಚಾರಣೆ ನಡೆಸಲಾಗುತ್ತಿದೆ. ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ನಾರಾಯಣ ಅವರು ನಟ ಧನ್ವೀರ್ ವಿಚಾರಣೆ ನಡೆಸುತ್ತಿದ್ದಾರೆ. ಈ ವಿಚಾರಣೆಯ ವೇಳೆಯಲ್ಲಿ ನಟ ಧನ್ವೀರ್ ನನಗೆ ಪರಪ್ಪನ ಅಗ್ರಹಾರ ಜೈಲಿನ ಒಳಗಿನ ವೀಡಿಯೋಗಳನ್ನು ಆತ್ಮೀಯರೊಬ್ಬರು ಕಳುಹಿಸಿದ್ದರು. ನನಗೆ ಕಳುಹಿಸಿದ್ದ ವೀಡಿಯೋವನ್ನು ನಾನು ಯಾರಿಗೂ ಶೇರ್ ಮಾಡಿಲ್ಲ ಎಂಬುದಾಗಿ ತಿಳಿಸಿದ್ದಾರೆ. ವೀಡಿಯೋ ವೈರಲ್ ಹಿನ್ನಲೆಯಲ್ಲಿ ಕೊಲೆ ಆರೋಪಿ ದರ್ಶನ್ ಆಪ್ತ, ನಟ ಧನ್ವೀರ್ ಮೊಬೈಲ್ ಜಪ್ತಿ ಮಾಡಿದ್ದಾರೆ. ಆ ಬಳಿಕ ಧನ್ವೀರ್ ಮೊಬೈಲ್ ರಿಟ್ರೀವ್ ಮಾಡಲು ಎಫ್ ಎಸ್ ಎಲ್ ಗೆ ಪೊಲೀಸರು ರವಾನಿಸಿದ್ದಾರೆ. ಸದ್ಯ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲೇ ನಟ ಧನ್ವೀರ್…
ಶಿವಮೊಗ್ಗ: ನಾಡಿದ್ದು ಸಾಗರ ತಾಲ್ಲೂಕಿನ ಜನತೆಯ ಸಮಸ್ಯೆ ನಿವಾರಿಸಲು ಶಾಸಕ ಗೋಪಾಲಕೃಷ್ಣ ಬೇಳೂರು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಅದೇ ನವೆಂಬರ್.12ರ ನಾಡಿದ್ದು ಬೆಳಗ್ಗೆ 11 ಗಂಟೆಯಿಂದ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಎದುರು ಜನಸಂಪರ್ಕ ಸಭೆಯನ್ನು ನಡೆಸಲಿದ್ದಾರೆ. ಈ ಜನಸಂಪರ್ಕ ಸಭೆಯಲ್ಲಿ ಸಾಗರ ತಾಲ್ಲೂಕಿನ ಜನತೆಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವಂತ ಕೆಲಸವನ್ನು ಮಾಡಲಿದ್ದಾರೆ. ಈ ಬಗ್ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಕಚೇರಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ: 12-11-2025ರ ನಾಡಿದ್ದು ಬೆಳಿಗ್ಗೆ 11 ಗಂಟೆಗೆ ಕಲ್ಮನೆ ಗ್ರಾಮ ಪಾಂಚಾಯಿತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎದುರು ಜನಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿರುತ್ತದೆ ಎಂದು ತಿಳಿಸಿದೆ. ಕಂದಾಯ ಇಲಾಖೆಯಿಂದ ಪೌತಿ ಖಾತೆ ಆಂದೋಲನ ಮಾಡಿ, ಪೌತಿ ಖಾತೆ ಅರ್ಜಿ ಸ್ವೀಕೃತಿ ಹಾಗೂ ಕಡತಗಳ ತಯಾರಿಕೆ ಕಾರ್ಯ ಮಾಡಲಾಗುತ್ತದೆ. 94ಸಿ ಮನೆ ಹಕ್ಕುಪತ್ರ ಅರ್ಜಿಗಳ ಪರಿಶೀಲನೆ ಮಾಡಲಾಗುವುದು. ಸಾಗರ ಉಪವಿಭಾಗಾಧಿಕಾರಿಗಳು, ತಹಶೀಲ್ದಾರ್ ಹಾಗೂ ಕಂದಾಯ ಇಲಾಖಾ…
ಬೆಂಗಳೂರು: ಕಾಡಿನಿಂದ ಹೊರಬಂದು ಜಾನುವಾರಗಳ ಮೇಲೆ ದಾಳಿ ಮಾಡುತ್ತಿತ್ತು ಎನ್ನಲಾದ 5 ವರ್ಷದ ಹೆಣ್ಣು ಹುಲಿ ಹಾಗೂ ಅದರ 3 ಮರಿಗಳನ್ನು ಸೆರೆ ಹಿಡಿದಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಕಲ್ಲಹಳ್ಳಿ ಬಳಿ ಮೂರು ಮರಿಗಳ ರಕ್ಷಣೆಯೊಂದಿಗೆ ಸೆರೆ ಹಿಡಿಯಲಾಗಿರುವ ಈ ಹೆಣ್ಣು ಹುಲಿ ವಸತಿ ಪ್ರದೇಶಗಳಿಗೆ ಬಂದು ಹಲವು ಜಾನುವಾರಗಳ ಮೇಲೆ ದಾಳಿ ಮಾಡಿತ್ತು ಎಂಬುದನ್ನು ಖಚಿತಪಡಿಸಿಕೊಂಡು ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾಗಿ ಸಚಿವರು ವಿವರಿಸಿದರು. ಪ್ರಸ್ತುತ ಸೆರೆ ಹಿಡಿಲಾದ ಹೆಣ್ಣು ಹುಲಿ ಮತ್ತು ರಕ್ಷಿಸಲಾದ ಮೂರು ಮರಿಗಳು ಪಶುವೈದ್ಯರ ನಿಗಾದಲ್ಲಿವೆ. ಕಾಡಿನ ಹೊರಗೆ ಸಂಚರಿಸುತ್ತಿರುವ ಹುಲಿಗಳ ಕಾರ್ಯಾಚರಣೆ ಮುಂದುವರಿದಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಇತ್ತೀಚೆಗೆ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವಸತಿ ಪ್ರದೇಶಗಳಲ್ಲಿ ಹುಲಿಗಳು ಕಾಣಿಸಿಕೊಂಡು ಜನ, ಜಾನುವಾರುಗಳ ಮೇಲೆ ಪದೇಪದೇ ದಾಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಅಂತಹ…
ಬೆಂಗಳೂರು: ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರ ಆಯ್ಕೆ ಗೊಂದಲಕ್ಕೆ ತೆರೆ ಎಳೆಯಲಾಗಿದೆ. ಜೆಡಿಎಸ್ ಕೋರ್ ಕಮಿಟಿ ನೂತನ ಅಧ್ಯಕ್ಷರಾಗಿ ಕೃಷ್ಣಾರೆಡ್ಡಿ ನೇಮಕ ಮಾಡಲಾಗಿದೆ. ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಜಿ.ಟಿ ದೇವೇಗೌಡಗೆ ಕೋಕ್ ನೀಡಲಾಗಿದೆ. ಈ ಬಗ್ಗೆ ಜೆಡಿಎಸ್ ಪಕ್ಷದಿಂದ ಮಾಹಿತಿ ನೀಡಲಾಗಿದ್ದು, ಜೆಡಿಎಸ್ ಕೋರ್ ಕಮಿಟಿ ನೂತನ ಅಧ್ಯಕ್ಷರಾಗಿ ಕೃಷ್ಣಾರೆಡ್ಡಿ ನೇಮಕ ಮಾಡಲಾಗಿದೆ. ಡೆಪ್ಯೂಟಿ ಸ್ವೀಕರ್, ಚಿಂತಾಮಣಿ ಕ್ಷೇತ್ರದ ಮಾಜಿ ಶಾಸಕ ಕೃಷ್ಣಾರೆಡ್ಡಿ ಆಗಿದ್ದಾರೆ ಎಂದಿದೆ. https://kannadanewsnow.com/kannada/committee-formed-under-adgp-leadership-to-rein-in-prisoners-in-parappana-agrahara-jail/ https://kannadanewsnow.com/kannada/attention-people-of-the-state-today-is-the-last-chance-to-participate-in-the-caste-census-survey/
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಿ, ಮುಕ್ತಾಯಗೊಳಿಸಲಾಗಿತ್ತು. ಆ ಬಳಿಕ ಆನ್ ಲೈನ್ ಮೂಲಕ ಭಾಗವಹಿಸದೇ ಇರುವವರಿಗೆ ಅವಕಾಶ ನೀಡಲಾಗಿತ್ತು. ಆ ಅವಕಾಶವು ಇಂದೇ ಕೊನೆಯಾಗಲಿದೆ. ಸೆಪ್ಟೆಂಬರ್ 22 ರಿಂದ ಆರಂಭಿಸಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಇಂದು ಮುಕ್ತಾಯಗೊಳ್ಳಲಿದೆ. ಹೀಗಾಗಿ ಆದಷ್ಟು ಬೇಗ ಜಾತಿಗಣತಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳದವರು ಆನ್ ಲೈನ್ ಮೂಲಕ ದಾಖಲಿಸುವಂತೆ ಹಿಂದುಳಿದ ವರ್ಗಗಳ ಆಯೋಗವು ಮನವಿ ಮಾಡಿದೆ. ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದಿದ್ದಲ್ಲಿ, ಆನ್ಲೈನ್ ಮೂಲಕವೂ ನಿಮ್ಮ ವಿವರಗಳನ್ನು ದಾಖಲಿಸಲು ಇಂದೇ ಕೊನೆಯ ದಿನವಾಗಿದೆ. ಈ ಕೂಡಲೇ https://kscbcselfdeclaration.karnataka.gov.in ಲಿಂಕ್ಗೆ ಭೇಟಿ ನೀಡಿ, ಕೇಳಿರುವ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುವ ಮೂಲಕ ಸಮೀಕ್ಷೆ ಯಶಸ್ವಿಯಾಗುವಲ್ಲಿ ನಮ್ಮೊಂದಿಗೆ ಸಹಕರಿಸಿ. https://twitter.com/KarnatakaVarthe/status/1987823615954632830 https://kannadanewsnow.com/kannada/man-shoots-himself-dead-in-broad-dyalight-at-crowded-jantar-mantar/ https://kannadanewsnow.com/kannada/committee-formed-under-adgp-leadership-to-rein-in-prisoners-in-parappana-agrahara-jail/
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹತದಲ್ಲಿ ಕೈದಿಗಳಿಗೆ ರಾಜಾತಿಥ್ಯದ ವೀಡಿಯೋ ವೈರಲ್ ಆಗಿದ್ದವು. ಈ ಬೆನ್ನಲ್ಲೇ ಕೈದಿಗಳಿಗೆ ಲಗಾಮು ಹಾಕಲು ಎಡಿಜಿಪಿ ನೇತೃತ್ವದಲ್ಲಿ ಸಮಿತಿ ರಚನೆಯನ್ನು ಮಾಡಿರುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಇಂದು ಈ ಸಂಬಂಧ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಸಭೆಯನ್ನು ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ನಿಯಮ ಮೀರಿ ವಿಶೇಷ ಸವಲತ್ತು ನೀಡಿರುವ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇನ್ನು ಮುಂದೆ ಈ ರೀತಿಯ ಪ್ರಕರಣ ಮರುಕಳಿಸದೆ ಇರಲು ಎಡಿಜಿಪಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದೇವೆ ಎಂದು ಹೇಳಿದರು. https://twitter.com/KarnatakaVarthe/status/1987830707625070717 https://kannadanewsnow.com/kannada/man-shoots-himself-dead-in-broad-dyalight-at-crowded-jantar-mantar/ https://kannadanewsnow.com/kannada/a-9th-grade-girl-in-bengaluru-committed-suicide-after-hearing-heartbreaking-news-of-her-friends-death/
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರ ಜನದಟ್ಟಣೆಯ ಜಂತರ್ ಮಂತರ್ನಲ್ಲಿ ವ್ಯಕ್ತಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ನಡೆದಿದೆ. ಮೃತರ ಗುರುತು ಇನ್ನೂ ತಿಳಿದುಬಂದಿಲ್ಲ. ಸುದ್ದಿ ಸಂಸ್ಥೆ ANI ಪ್ರಕಾರ, ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದು, ತನಿಖೆ ನಡೆಸುತ್ತಿದ್ದಾರೆ. ಮಾಹಿತಿ ಪಡೆದ ನಂತರ, ಪೊಲೀಸ್ ತಂಡವು ಅಪರಾಧ ಸ್ಥಳಕ್ಕೆ ಧಾವಿಸಿ ವ್ಯಕ್ತಿಯ ದೇಹವನ್ನು ವಶಪಡಿಸಿಕೊಂಡಿದೆ. ಮೃತರ ಮೃತದೇಹದಲ್ಲಿ ಗುಂಡೇಟಿನ ಗಾಯವಿತ್ತು. https://twitter.com/ANI/status/1987768649541914626 ಅವರನ್ನು ಇನ್ನೂ ಗುರುತಿಸಲಾಗಿಲ್ಲ. ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದಾರೆ ಮತ್ತು ಘಟನಾ ಸ್ಥಳವನ್ನು ಸುತ್ತುವರೆದಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ. https://kannadanewsnow.com/kannada/man-commits-suicide-by-jumping-off-flyover-in-bengaluru/ https://kannadanewsnow.com/kannada/a-9th-grade-girl-in-bengaluru-committed-suicide-after-hearing-heartbreaking-news-of-her-friends-death/
ಬೆಂಗಳೂರು: ನಗರದಲ್ಲಿ ಸ್ನೇಹಿತೆಯ ಸಾವಿನಿಂದ ಮನನೊಂದ ಬಾಲಕಿಯೊಬ್ಬಳು, ತಾನೂ ಆತ್ಮಹತ್ಯೆ ಮಾಡಿಕೊಂಡು ಸಾವಿನ ಹಾದಿ ಹಿಡಿದಿರುವಂತ ಆಘಾತಕಾರಿ ಘಟನೆ ನಡೆದಿದೆ. ಬೆಂಗಳೂರಲ್ಲಿ 9ನೇ ತರಗತಿ ಬಾಲಕಿ ಸೂಸೈಡ್ ಮಾಡಿಕೊಂಡಿದ್ದಾಳೆ. 16 ವರ್ಷದ ಶರ್ಮಿಳಾ ಆತ್ಮಹತ್ಯೆಗೆ ಶರಣಾದಂತ ಬಾಲಕಿಯಾಗಿದ್ದಾಳೆ. ಕಲಾಸಿಪಾಳ್ಯದ ತಮ್ಮ ಮನೆಯಲ್ಲಿ ನಿನ್ನೆ ನೇಣಿಗೆ ಶರಣಾಗಿದ್ದಾಳೆ. 10ನೇ ತರಗತಿ ಗೆಳತಿಯೊಂದಿಗೆ ಶರ್ಮಿಳಾಗೆ ತುಂಬಾನೇ ಸ್ನೇಹವಾಗಿತ್ತು. ಮೃತ ಗೆಳತಿ ಮತ್ತು ಶರ್ಮಿಳಾ ಇಬ್ಬರೂ ಆತ್ಮೀಯರಾಗಿದ್ದರು. 3 ತಿಂಗಳ ಹಿಂದೆ ಗೆಳತಿ ಆತ್ಮಹತ್ಯೆಗೆ ಶರಣಾಗಿದ್ದಳು. ಆಕೆಯ ಸಾವಿನಿಂದ ಮನನೊಂದು ನಿನ್ನೆ ಶರ್ಮಿಳಾ ಮನೆಯಲ್ಲಿ ನೇಣಿಗೆ ಶರಣಾಗಿರುವಂತ ಶಂಕೆ ವ್ಯಕ್ತವಾಗಿದೆ. https://kannadanewsnow.com/kannada/man-commits-suicide-by-jumping-off-flyover-in-bengaluru/ https://kannadanewsnow.com/kannada/5-indian-nationals-abducted-in-mali-embassy-working-for-safe-release/
ಬೆಂಗಳೂರು: ನಗರದಲ್ಲಿ ಮೇಲ್ ಸೇತುವೆಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ನಾಯಂಡಹಳ್ಳಿ ಫ್ಲೈಓವರ್ ಮೇಲಿನಿಂದ ಬಿದ್ದು ಸೂಸೈಡ್ ಮಾಡಿಕೊಳ್ಳಲಾಗಿದೆ. ಮೃತ ವ್ಯಕ್ತಿ ಬಗ್ಗೆ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ. ಬ್ಯಾಟರಾಯನಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಭೇಟಿ ನೀಡಿ, ಪರಿಶೀಲನೆ ಮಾಡುತ್ತಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಗುರುತು ಪತ್ತೆ ಹಚ್ಚುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ. ವ್ಯಕ್ತಿಯದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎನ್ನುವುದು ಪೊಲೀಸರ ತನಿಖೆಯಿಂದ ತಿಳಿಯಬೇಕಿದೆ. https://kannadanewsnow.com/kannada/5-indian-nationals-abducted-in-mali-embassy-working-for-safe-release/ https://kannadanewsnow.com/kannada/hindus-stay-in-bars-during-festivals-former-minister-anjaneyas-controversial-statement/
ನವದೆಹಲಿ: ಪಶ್ಚಿಮ ಆಫ್ರಿಕಾದ ದೇಶದಲ್ಲಿ ನಡೆಯುತ್ತಿರುವ ಅಶಾಂತಿಯ ನಡುವೆ ನವೆಂಬರ್ 6 ರಂದು ಮಾಲಿಯಲ್ಲಿ ಐದು ಭಾರತೀಯ ಪ್ರಜೆಗಳನ್ನು ಶಸ್ತ್ರಸಜ್ಜಿತ ವ್ಯಕ್ತಿಗಳು ಅಪಹರಿಸಿದ ನಂತರ ಬಮಾಕೊದಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಾಲಿಯನ್ ಅಧಿಕಾರಿಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದೆ. ಭಾರತೀಯರು ವಿದ್ಯುತ್ ಯೋಜನೆಗಳಲ್ಲಿ ತೊಡಗಿರುವ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಅವರನ್ನು ಕೊಬ್ರಿ ಬಳಿ ಅಪಹರಿಸಲಾಗಿದೆ ಎಂದು ಭದ್ರತಾ ಅಧಿಕಾರಿಗಳನ್ನು ಉಲ್ಲೇಖಿಸಿ AFP ಈ ಹಿಂದೆ ವರದಿ ಮಾಡಿದೆ. ಕಂಪನಿಯ ಇತರ ಭಾರತೀಯ ಉದ್ಯೋಗಿಗಳನ್ನು ಬಮಾಕೊಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. https://twitter.com/IndianEmbassyML/status/1987415395368681946 ಭಾರತೀಯ ರಾಯಭಾರ ಕಚೇರಿ ಪ್ರತಿಕ್ರಿಯೆ ಏನು? X ನಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ, ಮಾಲಿಯಲ್ಲಿರುವ ಭಾರತೀಯ ರಾಯಭಾರ ಕಚೇರಿಯು, “ನವೆಂಬರ್ 6, 2025 ರಂದು ಮಾಲಿಯಲ್ಲಿ ನಮ್ಮ ಐದು ಪ್ರಜೆಗಳ ಅಪಹರಣದ ದುರದೃಷ್ಟಕರ ಘಟನೆಯ ಬಗ್ಗೆ ರಾಯಭಾರ ಕಚೇರಿಗೆ ತಿಳಿದಿದೆ. ಸಾಧ್ಯವಾದಷ್ಟು ಬೇಗ ಅವರ ಸುರಕ್ಷಿತ ಬಿಡುಗಡೆಯನ್ನು ಖಚಿತಪಡಿಸಿಕೊಳ್ಳಲು ರಾಯಭಾರ ಕಚೇರಿ ಮಾಲಿಯನ್ ಅಧಿಕಾರಿಗಳು ಮತ್ತು…














