Author: kannadanewsnow09

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಉದ್ದೇಶಿತ ಕನ್ಯಾಕುಮಾರಿ ಧ್ಯಾನ ಭೇಟಿಯು ಲೋಕಸಭಾ ಚುನಾವಣೆಯ ಮಧ್ಯೆ ಮಾದರಿ ನೀತಿ ಸಂಹಿತೆಯನ್ನು (ಎಂಸಿಸಿ) ಉಲ್ಲಂಘಿಸಿದೆ ಎಂದು ಕಾಂಗ್ರೆಸ್ ಭಾರತದ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಮೇ 30 ರಂದು ಲೋಕಸಭಾ ಚುನಾವಣಾ ಪ್ರಚಾರದ ಮುಕ್ತಾಯದ ನಂತರ ಕನ್ಯಾಕುಮಾರಿಯಲ್ಲಿ ಸ್ವಾಮಿ ವಿವೇಕಾನಂದರಿಗೆ ಗೌರವ ಸಲ್ಲಿಸಲು ನಿರ್ಮಿಸಲಾದ ಸ್ಮಾರಕವಾದ ರಾಕ್ ಮೆಮೋರಿಯಲ್ ನಲ್ಲಿ ಮೋದಿ ಧ್ಯಾನ ಮಾಡಲಿದ್ದಾರೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ. “30.05.2024 ರಂದು ನಿಗದಿಯಾಗಿದ್ದ ಧ್ಯಾನ ಪ್ರವಾಸವನ್ನು ಕೈಗೊಳ್ಳುವ ಮೂಲಕ ಶ್ರೀ ನರೇಂದ್ರ ಮೋದಿಯವರು ಮೌನ ಅವಧಿಯನ್ನು ಉಲ್ಲಂಘಿಸಿದ್ದಾರೆ. ಇದು ಮಾದರಿ ನೀತಿ ಸಂಹಿತೆ ಮತ್ತು ಜನ ಪ್ರಾತಿನಿಧ್ಯ ಕಾಯ್ದೆ, 1951 ರ ನಿಬಂಧನೆಗಳ ಉಲ್ಲಂಘನೆಯಾಗಿದೆ. ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ನೀಡಿದ ದೂರಿನಲ್ಲಿ ತಿಳಿಸಿದೆ. ಕಾಂಗ್ರೆಸ್ ನೀಡಿರುವಂತ ದೂರಿನಲ್ಲಿ ದಿನಾಂಕ 28.05.2024 ರಂದು ನರೇಂದ್ರ ಮೋದಿ ಅವರು ಕನ್ಯಾಕುಮಾರಿಗೆ ತೆರಳಿಲಿದ್ದಾರೆ ಎಂದು ಹಲವಾರು ಹೊಸ ಏಜೆನ್ಸಿಗಳು ವರದಿ ಮಾಡಿವೆ. ಅಲ್ಲಿ ಅವರು 30.05.2024…

Read More

ಪಶ್ಚಿಮ ಬಂಗಾಳ: ಪೌರತ್ವ (ತಿದ್ದುಪಡಿ) ನಿಯಮಗಳು, 2024 ರ ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳನ್ನು ನೀಡುವ ಪ್ರಕ್ರಿಯೆಯು ಪಶ್ಚಿಮ ಬಂಗಾಳದಲ್ಲಿ ಪ್ರಾರಂಭವಾಗಿದೆ ಎಂದು ಗೃಹ ಸಚಿವಾಲಯ ಬುಧವಾರ ತಿಳಿಸಿದೆ. ರಾಜ್ಯದ ಮೊದಲ ಅರ್ಜಿಗಳಿಗೆ ಪಶ್ಚಿಮ ಬಂಗಾಳದ ಉನ್ನತಾಧಿಕಾರ ಸಮಿತಿ ಇಂದು ಪೌರತ್ವ ನೀಡಿದೆ. ಅಂತೆಯೇ, ಹರಿಯಾಣ ಮತ್ತು ಉತ್ತರಾಖಂಡ ರಾಜ್ಯಗಳ ಸಶಕ್ತ ಸಮಿತಿಗಳು ಪೌರತ್ವ (ತಿದ್ದುಪಡಿ) ನಿಯಮಗಳು, 2024 ರ ಅಡಿಯಲ್ಲಿ ಆಯಾ ರಾಜ್ಯಗಳಲ್ಲಿನ ಮೊದಲ ಗುಂಪಿನ ಅರ್ಜಿದಾರರಿಗೆ ಇಂದು ಪೌರತ್ವವನ್ನು ನೀಡಿವೆ. ದೆಹಲಿಯ ಸಶಕ್ತ ಸಮಿತಿಯು ಮಂಜೂರು ಮಾಡಿದ ಪೌರತ್ವ (ತಿದ್ದುಪಡಿ) ನಿಯಮಗಳು, 2024 ರ ಅಧಿಸೂಚನೆಯ ನಂತರ ಮೊದಲ ಸೆಟ್ ಪೌರತ್ವ ಪ್ರಮಾಣಪತ್ರಗಳನ್ನು ಕೇಂದ್ರ ಗೃಹ ಕಾರ್ಯದರ್ಶಿ 2024 ರ ಮೇ 15 ರಂದು ನವದೆಹಲಿಯಲ್ಲಿ ಅರ್ಜಿದಾರರಿಗೆ ಹಸ್ತಾಂತರಿಸಿದರು. ಭಾರತ ಸರ್ಕಾರವು 2024 ರ ಮಾರ್ಚ್ 11 ರಂದು ಪೌರತ್ವ (ತಿದ್ದುಪಡಿ) ನಿಯಮಗಳು, 2024 ಅನ್ನು ಅಧಿಸೂಚನೆ ಹೊರಡಿಸಿತ್ತು. ಈ ನಿಯಮಗಳು ಅರ್ಜಿ ನಮೂನೆಯ ವಿಧಾನ, ಜಿಲ್ಲಾ ಮಟ್ಟದ ಸಮಿತಿ (ಡಿಎಲ್ಸಿ)…

Read More

ಮುಂಬೈ: ಮುಂಬೈನ ಡೊಂಬಿವ್ಲಿಯ ಆಹಾರ ಮಳಿಗೆಯಲ್ಲಿ ಬುಧವಾರ ಸಿಲಿಂಡರ್ ಸ್ಫೋಟಗೊಂಡು ಕನಿಷ್ಠ ಒಂಬತ್ತು ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ಎಎನ್ಐ ವರದಿ ಮಾಡಿದೆ. ಸ್ಟಾಲ್ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸಿಲಿಂಡರ್ ಸ್ಫೋಟ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ತಿಳಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಮತ್ತಷ್ಟು ಅಪ್ ಡೇಟ್ ಗಾಗಿ ಇದೇ ಪುಟಕ್ಕೆ ಭೇಟಿ ನೀಡಿ. https://twitter.com/ANI/status/1795820661920899123 https://kannadanewsnow.com/kannada/thief-tries-to-flee-after-stealing-old-womans-goods-on-bike-see-what-bus-driver-did/ https://kannadanewsnow.com/kannada/link-pan-with-aadhaar-card-by-may-31-income-tax-department-to-taxpayers/

Read More

ಹರಿಯಾಣ: ಹರ್ಯಾಣದಲ್ಲಿ ಬಸ್ ಚಾಲಕನೊಬ್ಬ ಸರಗಳ್ಳನ ಬೈಕ್ ಗೆ ಬಸ್ ಡಿಕ್ಕಿ ಹೊಡೆದು ಪರಾರಿಯಾಗುವ ಪ್ರಯತ್ನವನ್ನು ವಿಫಲಗೊಳಿಸಿದ್ದಾನೆ. ಇಡೀ ಘಟನೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಆ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪಾದಚಾರಿಯೊಬ್ಬರಿಂದ ಕಳ್ಳತನ ಮಾಡಿದ ನಂತರ ಸರಗಳ್ಳರು ಬೈಕ್ ನಲ್ಲಿ ಪರಾರಿಯಾಗುತ್ತಿರುವುದನ್ನು ಬಸ್ ಚಾಲಕ ಗಮನಿಸಿದ್ದಾನೆ. ಯಾವುದೇ ಹಿಂಜರಿಕೆಯಿಲ್ಲದೆ, ಬಸ್ ಚಾಲಕ ಸಮಯ ಪ್ರಜ್ಞೆ ಎಂಬಂತೆ ಬೈಕಿಗೆ ಬಸ್ ಡಿಕ್ಕಿ ಹೊಡೆದನು. ಇದರಿಂದಾಗಿ ಕಳ್ಳರು ಸಮತೋಲನ ಕಳೆದುಕೊಂಡು ಕೆಳಗೆ ಬಿದ್ದರು. ಆದಾಗ್ಯೂ ಕಳ್ಳರು ಘಟನಾ ಸ್ಥಳದಿಂದ ಕಾಲ್ನಡಿಗೆಯಲ್ಲಿ ಓಡಿಹೋದರು. ಅವರು ಸಿಕ್ಕಿಬಿದ್ದಿದ್ದಾರೆಯೇ ಎಂಬುದು ಇನ್ನೂ ತಿಳಿದುಬಂದಿಲ್ಲ. ನಾಟಕೀಯ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಈಗ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೀಡಿಯೋ ವೈರಲ್ ಆಗಿದೆ. ವೀಡಿಯೋ ನೋಡಿದಂತ ನೆಟ್ಟಿಗರು, ಬಸ್ ಚಾಲಕನ ಸಮಯ ಪ್ರಜ್ಞೆ ಮತ್ತು ಧೈರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸುತ್ತಿದ್ದಾರೆ. https://twitter.com/TrueStoryUP/status/1795671585028030874 https://kannadanewsnow.com/kannada/the-state-government-has-granted-special-leave-to-teachers-on-june-3/ https://kannadanewsnow.com/kannada/link-pan-with-aadhaar-card-by-may-31-income-tax-department-to-taxpayers/

Read More

ಬೆಂಗಳೂರು: ಜೂನ್.3ರಂದು ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಮತದಾನಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಜೂನ್.3ರಂದು ಪದವೀಧರರಿಗೆ, ಶಾಲಾ ಶಿಕ್ಷಕರಿಗೆ ವಿಶೇಷ ರಜೆ ಮಂಜೂರು ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಶಿಷ್ಟಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 03-06-2024ರ ಸೋಮವಾರದಂದು ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಅಂದು ವಿಶೇಷ ಸಾಂದರ್ಭಿಕ ರಜೆ ಘೋಷಣೆ ಮಾಡಲಾಗಿದೆ ಅಂತ ತಿಳಿಸಿದ್ದಾರೆ. ಯಾವ ಯಾವ ಜಿಲ್ಲೆಯ ಪದವೀಧರರು ಹಾಗೂ ಶಿಕ್ಷಕರಿಗೆ ಜೂನ್.3ರಂದು ರಜೆ.? ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರವ್ಯಾಪ್ತಿಯ ಬೀದರ್, ಗುಲ್ಬರ್ಗ, ರಾಯಚೂರು, ಕೊಪ್ಪಳ, ಬಳ್ಳಾರಿ, ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕು ವ್ಯಾಪ್ತಿಯ ಪದವೀಧರರು, ಶಾಲಾ ಶಿಕ್ಷಕರಿಗೆ ರಜೆ. ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ವ್ಯಾಪ್ತಿಯ ಶಿವಮೊಗ್ಗ, ದಾವಣಗೆರೆ ಜಿಲ್ಲೆಯ ಚೆನ್ನಗಿರಿ, ಹೊನ್ನಾಳಿ ತಾಲೂಕು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು…

Read More

ಶಿವಮೊಗ್ಗ: ನಾನು ನೈರುತ್ಯ ಪದವೀಧರ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳಲ್ಲಿ ಮತಯಾಚನೆ ಮಾಡಿದ್ದೇನೆ. ಬಹುತೇಕ ಮತದಾರರು ಸಕಾರಾತ್ಮಕವಾಗೇ ಪ್ರತಿಸ್ಪಂದಿಸಿದ್ದಾರೆ. ನಾನು ಮೊದಲ ಹಂತದಲ್ಲೇ ಗೆಲುವು ಸಾಧಿಸಲಿದ್ದೇನೆ ಎಂಬುದಾಗಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ್ ಸರ್ಜಿ ವಿಶ್ವಾಸ ವ್ಯಕ್ತ ಪಡಿಸಿದರು. ಅಲ್ಲದೇ ನಿಮ್ಮ ಧ್ವನಿಯಾಗಿ ಕೆಲಸ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ವಾಸವಿ ಕಲ್ಯಾಣ ಮಂಟಪದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ವೈದ್ಯಕೀಯ ಸೇವೆ ಸಲ್ಲಿಸುತ್ತಾ, 65 ಬಾರಿ ರಕ್ತದಾನ ಮಾಡಿದ್ದೇನೆ. ಈಗ ಪದವೀಧರ ಕ್ಷೇತ್ರದಲ್ಲಿ ಸೇವೆ ಸಲ್ಲಿಸೋದಕ್ಕೆ ಬಂದಿದ್ದೇನೆ ಎಂದರು. ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ತುರ್ತು ಚಿಕಿತ್ಸಾ ವಿಭಾಗದಲ್ಲಿ ಬೆಂಕಿ ಅವಘಡ ಸಂಭವಿಸಿದಂತ ವೇಳೆ, 33 ಮಕ್ಕಳನ್ನು ಆಸ್ಪತ್ರೆಯಿಂದ ಸರ್ಜಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. 13 ದಿನಗಳ ಕಾಲ ಆ ಎಲ್ಲಾ ಮಕ್ಕಳಿಗೆ ಉಚಿತವಾಗಿ ಚಿಕಿತ್ಸೆ ನೀಡಿದ್ದೇನೆ ಎಂಬುದಾಗಿ ತಮ್ಮ ಸಾಮಾಜಿಕ ಸೇವೆಯನ್ನು ವಿವರಿಸಿದರು. ಒಳ್ಳೆಯ ಸೇವೆ ಮಾಡೋದಕ್ಕೆ ಬಂದಿದ್ದೇನೆ.…

Read More

ಎಲ್ಲರ ಮನೆಯೇ ದೇವಸ್ಥಾನ. ಸಂಸಾರದಲ್ಲಿ ಸುಖ-ಸಂತೋಷವಿದ್ದರೆ ತೊಂದರೆಯಿಲ್ಲ. ನಿಮ್ಮ ಬಳಿ ಸ್ವಲ್ಪ ಹಣವಿದ್ದರೂ, ನೀವು ಸಂತೋಷದ ಜೀವನವನ್ನು ನಡೆಸಬಹುದು. ಆದರೆ ಯಾವುದೇ ದಿನವೂ ಕೆಟ್ಟ ಜನರ ಹೊಟ್ಟೆ ಕಿಚ್ಚು ದೃಷ್ಟಿ, ಜನರ ವಕ್ರದೃಷ್ಟಿ ಕಣ್ಣಿನ ಮಾಂತ್ರಿಕ ಶಕ್ತಿ ಯಿಂದ ಕುಟುಂಬದ ನೆಮ್ಮದಿಗೆ ಭಂಗ ಬರಬಾರದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ…

Read More

ದಾವಣಗೆರೆ: ಜಿಲ್ಲೆಯ ಚೆನ್ನಗಿರಿ ಪೊಲೀಸ್ ಠಾಣೆಯಲ್ಲೇ ಆದಿಲ್ ಎಂಬಾತನ ಲಾಕಪ್ ಡೆತ್ ಆಗಿತ್ತು. ಇದು ಪೊಲೀಸರೇ ನಡೆಸಿದಂತ ಕೃತ್ಯ ಎಂಬುದಾಗಿ ಸಿಡಿದೆದ್ದಿದ್ದಂತ ಜನರು ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಆದ್ರೇ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಚೆನ್ನಗಿರಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಸಂಬಂಧ ಮೃತ ಆದಿಲ್ ನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದರ ವರದಿ ಪೊಲೀಸರ ಕೈಸೇರಿದೆ. ಅದರಲ್ಲಿ ಆದಿಲ್ ಲೋಬಿಪಿಯಾಗಿ ಹೃದಯಾಘಾತದಿಂದ ಸಾವನ್ನಪ್ಪಿರೋದಾಗಿ ಉಲ್ಲೇಖಿಸಲಾಗಿದೆ. ವರದಿಯಲ್ಲಿ ಕಾರ್ಡಿಯಾ ಫಲ್ಮನರಿ ಎಂದು ಉಲ್ಲೇಖಿಸಲಾಗಿದೆ. ಈ ವರದಿಯನ್ನು ಸಿಐಡಿ ಅಧಿಕಾರಿಗಳಿಗೆ ಪೊಲೀಸರು ಸಲ್ಲಿಸಿದ್ದಾರೆ. ಅಂದಹಾಗೇ ಮೇ.24ರಂದು ಪೊಲೀಸರ ಕಸ್ಟಡಿಯಲ್ಲಿ ಇದ್ದಾಗಲೇ ಆದಿಲ್ ಮೃತಪಟ್ಟಿದ್ದನು. ಚೆನ್ನಗಿರಿ ಪೊಲೀಸ್ ಠಾಣೆಯಲ್ಲಿ ನಡೆದಂತ ಲಾಕಪ್ ಡೆತ್ ಎಂಬುದಾಗೇ ಹೇಳಲಾಗುತ್ತಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. https://kannadanewsnow.com/kannada/in-a-shocking-incident-a-woman-was-raped-after-being-taken-for-treatment-in-the-state/ https://kannadanewsnow.com/kannada/link-pan-with-aadhaar-card-by-may-31-income-tax-department-to-taxpayers/

Read More

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಬೆಚ್ಚಿ ಬೀಳಿಸೋ ಘಟನೆ ಎಂಬಂತೆ ಚಿಕಿತ್ಸೆಗೆ ಎಂದು ಕರೆದುಕೊಂಡು ಬಂದ ಮಹಿಳೆಯ ಮೇಲೆ ಕೀಚಕನೊಬ್ಬ ಅತ್ಯಾಚಾರ ಎಸಗಿರೋದಾಗಿ ತಿಳಿದು ಬಂದಿದೆ. ಅಲ್ಲದೇ ಪ್ರಕರಣದಲ್ಲಿ ಪೊಲೀಸರು ಆರೋಪಿಯನ್ನು ಎಡೆಮುರಿ ಕಟ್ಟಿ ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂತಹ ಘಟನೆ ನಡೆದಿದೆ. ಚಿಕಿತ್ಸೆಗೆಂದು ಮಹಿಳೆಯನ್ನು ಕರೆದುಕೊಂಡು ಬಂದಿದ್ದಂತ ಆರೋಪಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಕೃತ್ಯವೆಸಗಿ ಮಹಿಳೆಯ ಬೆತ್ತಲೆ ಪೋಟೋಗಳನ್ನು ತೆಗೆದುಕೊಂಡು ಬ್ಲಾಕ್ ಮೇಲ್ ಮಾಡಿದ್ದಾನೆ. ಇಲ್ಲಿಗೆ ಸುಮ್ಮನಾಗದಂತ ಕೀಚಕ, ಈ ಪೋಟೋಗಳನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿ, ಬಳಿಕವೂ ಮಹಿಳೆಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಇದರಿಂದ ಬೇಸತ್ತಂತ ಮಹಿಳೆಯು, ಕದ್ರಿ ಠಾಣೆಗೆ ದೂರು ನೀಡಿದ್ದಳು. ಈ ದೂರಿನ ಬೆನ್ನಲ್ಲೇ ಅಲರ್ಟ್ ಆದಂತ ಕದ್ರಿ ಠಾಣೆಯ ಪೊಲೀಸರು, ಕೇರಳ ಮೂಲದ ಆರೋಪಿ ಸಜಿತ್ ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಬಂಧಿತ ಆರೋಪಿ ಸಜಿತ್ ಖಾಸಗಿ ಆಸ್ಪತ್ರೆ ಹಾಗೂ ಹೋಟೆಲ್ ನಲ್ಲಿ ಮಹಿಳೆಯ ಮೇಲೆ ನಿರಂತರವಾಗಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಭಾರಿ ಎಂಡಿಯಾಗಿ ಡಾ.ಕೆಆರ್ ರಾಜ್ ಕುಮಾರ್ ನೇಮಕ ಮಾಡಿ ಆದೇಶಿಸಿದೆ. ಈ ಮೊದಲು ಇದ್ದಂತ ಎಂಡಿ ಜೆ.ಜಿ ಪದ್ಮನಾಭ ಅವರನ್ನು ಅಮಾನತುಗೊಳಿಸಿತ್ತು. ಈ ಬೆನ್ನಲ್ಲೇ ಆ ಖಾಲಿ ಸ್ಥಾನಕ್ಕೆ ಪ್ರಭಾರಿ ಎಂಡಿಯಾಗಿ ಡಾ.ಕೆ ಆರ್ ರಾಜ್ ಕುಮಾರ್ ನೇಮಕ ಮಾಡಿ ಆದೇಶಿಸಿದೆ. ಈ ಕುರಿತಂತೆ ಇಂದು ಪರಿಶಿಷ್ಯ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಭವ್ಯ ಎಂ.ಜೆ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ  ಡಾ|| ಕೆ.ಆರ್ ರಾಜ್‌ಕುಮಾರ್‌, ಜಂಟಿ ನಿರ್ದೇಶಕರು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಬೆಂಗಳೂರು ಇಲ್ಲಿ ಖಾಲಿ ಇರುವ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ಹೆಚ್ಚುವರಿ ಪ್ರಭಾರದಲ್ಲಿರಿಸಿ ಆದೇಶಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಕೇಸ್: ರಾಜ್ಯ ಸರ್ಕಾರದಿಂದ ‘MD, ಅಕೌಂಟ್ ಆಫೀಸರ್’ ಅಮಾನತು…

Read More