Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಜುಲೈ.15ರವರೆಗೆ ಅವಧಿ ವಿಸ್ತರಿಸಿ ಆದೇಶಿಸಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ 2024-25ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ಮಾರ್ಗಸೂಚಿ ಸಂಬಂಧ ಅಧಿಸೂಚನೆ ಹೊರಡಿಸಿದ್ದಾರೆ. 2024-25ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ದಿನಾಂಕ: 09.07.2024ರವರೆಗೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶಿಸಲಾಗಿತ್ತು. ಸದರಿ ವರ್ಗಾವಣೆ ಅವಧಿಯನ್ನು ವಿಸ್ತರಿಸುವುದು ಅವಶ್ಯವೆಂದು ಸರ್ಕಾರವು ಪರಿಗಣಿಸಿ ಈ ಕೆಳಕಂಡಂತೆ ಆದೇಶಿಸಿದೆ ಎಂದಿದ್ದಾರೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ದಿನಾಂಕ: 25.06,2024ರ ಸರ್ಕಾರಿ ಆದೇಶದಲ್ಲಿ ವಿವರಿಸಿರುವ ಷರತ್ತಿಗೊಳಪಟ್ಟು, 2024-25ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದ್ದ ಅವಧಿಯನ್ನು ದಿನಾಂಕ:15.07.2024 ರವರೆಗೆ ವಿಸ್ತರಿಸಿ ಆದೇಶಿಸಿದ್ದಾರೆ. https://kannadanewsnow.com/kannada/good-news-for-job-seekers-notification-for-recruitment-of-2000-linemen-to-be-issued-in-15-days/ https://kannadanewsnow.com/kannada/valmiki-scam-former-minister-b-nagendra-likely-to-be-arrested-any-moment/

Read More

ರಾಯಚೂರು : ಇಂಧನ ಇಲಾಖೆಗೆ ಸದ್ಯದಲ್ಲೇ 2000 ಲೈನ್‌ಮೆನ್‌ಗಳ ನೇಮಕ ಆಗಲಿದ್ದು, ಈ ಸಂಬಂಧ 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ. ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿ ನಡೆಸಿದ ಇಂಧನ ಸಚಿವರು, “ಲೈನ್‌ಮೆನಗಳ ಹುದ್ದೆಗೆ ರಾಜ್ಯಾದ್ಯಂತ ಒಂದೇ ದಿನ ನೇಮಕ ಪ್ರಕ್ರಿಯೆ ನಡೆಯಲಿದ್ದು,ಪಾರದರ್ಶಕತೆಗೆ ಒತ್ತು ನೀಡಲಾಗುತ್ತದೆ,” ಎಂದರು. “ವೈಟಿಪಿಎಸ್ ಹುದ್ದೆಗಳನ್ನು ಭರ್ತಿ ಮಾಡುವಾವಾಗ ಸ್ಥಳಿಯರಿಗೆ ಆದ್ಯತೆ ನೀಡಬೇಕು ಮತ್ತು 371 ಜೆ ಅನ್ವಯ ಮೀಸಲು ನೀಡಬೇಕು. ಆದರೆ ನುರಿತ ಕೆಲಸಗಾರರು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಸ್ಥಳೀಯರ ನೇಮಕ ಆಗುತ್ತಿಲ್ಲ ಎಂಬ ಮಾತು ಕೇಳಿಬಂದಿದೆ. ಆದ್ದರಿಂದ ಎಷ್ಟು ಜನ ಬೇಕು ಅಂತ ನಿರ್ಧರಿಸಿ, ಅವರಿಗೆ ಕೆಪಿಸಿಎಲ್‌ನಿಂದ ಅಗತ್ಯ ತರಬೇತಿ ಕೊಡಿಸಲು ಅಗತ್ಯ ಕ್ರಮ ವಹಿಸಲಾಗುವುದು. ನಮ್ಮ ರಾಜ್ಯದ ಯುವ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಜತೆಗೆ, ಆ ಉದ್ಯೋಗಕ್ಕೆ ಪೂರಕವಾದ ಕೌಶಲ್ಯ ತರಬೇತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ…

Read More

ಪಾವಗಡ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಗ್ರಾಮೀಣ ನೀರು ಸರಬರಾಜು ಇಲಾಖೆ ಹಮ್ಮಿಕೊಂಡಿರುವ ಪಾವಗಡ ಬಹುಗ್ರಾಮ ನೀರು ಪೂರೈಕೆ ಕಾರ್ಯಕ್ರಮದಡಿ ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿನ 1,138 ಗ್ರಾಮಗಳು ಹಾಗೂ 2 ಪಟ್ಟಣಗಳಿಗೆ ಶೀಘ್ರದಲ್ಲಿಯೇ ಕುಡಿಯುವ ನೀರು ಸರಬರಾಜು ಮಾಡುವ ಪ್ರಕ್ರಿಯೆಗೆ ಚಾಲನೆ ಸಿಗಲಿದ್ದು, ಈ ಭಾಗದ ಜನರ ಬಹು ದಿನಗಳ ಕನಸು ನನಸಾಗಲಿದೆ. ತುಮಕೂರು ಜಿಲ್ಲೆಯ ಪಾವಗಡ ಹಾಗೂ ಕ್ವಾದಿಗುಂಟೆ ಬಳಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಬಹುಗ್ರಾಮ ನೀರು ಸರಬರಾಜು ಯೋಜನೆ ಮೂಲಕ ತುಂಗಭದ್ರ ಹಿನ್ನೀರು ಬಳಸಿ ಚಿಲಕನಹಟ್ಟಿ, ಕೂಡ್ಲಿಗಿ, ಮೊಳಕಾಲ್ಮೂರು, ಚಳ್ಳಕೆರೆ, ತುರವನೂರು ತಾಲ್ಲೂಕುಗಳ 1,138 ಗ್ರಾಮಗಳು ಹಾಗೂ ಎರಡು ಪಟ್ಟಣಗಳ 17.21 ಲಕ್ಷ ಜನಕ್ಕೆ ನೀರು ಪೂರೈಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಚಿಲಕನಹಟ್ಟಿ ಮತ್ತು 14 ಗ್ರಾಮೀಣ ವಸತಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಕೃಷಿ ಇಲಾಖೆಯಲ್ಲಿ ಖಾಲಿ ಇರುವಂತ 961 ಹುದ್ದೆಗಳ ಭರ್ತಿಗೆ ಮುಂದಾಗಿದೆ. ಇದಕ್ಕಾಗಿ ಕೆಪಿಎಸ್ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರವೇ ಅಧಿಸೂಚನೆ ಹೊರ ಬೀಳಲಿದೆ. ಕೃಷಿ ಸಚಿವ ಚಲುವರಾಯಸ್ವಾಮಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಕೃಷಿ ಇಲಾಖೆಯಲ್ಲಿ ಆಡಳಿತ ಸುಧಾರಣೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದುವರೆದು ಕೃಷಿ ಇಲಾಖೆಯಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ಭರ್ತಿಗೂ ಕ್ರಮ ವಹಿಸಲಾಗುತ್ತಿದೆ ಎಂದರು. ಮೊದಲ ಹಂತದಲ್ಲಿ ಕೃಷಿ ಇಲಾಖೆಯಲ್ಲಿ ಖಾಲಿ ಇರುವಂತ 961 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಇದಕ್ಕೆ ಆರ್ಥಿಕ ಇಲಾಖೆಯಿಂದ ಅನುಮೋದನೆ ಕೂಡ ದೊರೆತಿದೆ. ಹೀಗಾಗಿ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಭರ್ತಿಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು. ಹುದ್ದೆಗಳ ವಿವರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೃಷಿ ಅಧಿಕಾರಿ 34 ಹುದ್ದೆಗಳು ಸಹಾಯಕ ಕೃಷಿ ಅಧಿಕಾರಿ 223 ಹುದ್ದೆಗಳು ದ್ವಿತೀಯ ದರ್ಜೆ ಸಹಾಯಕರು 17 ಹುದ್ದೆಗಳು ಬೆರಳಚ್ಚುಗಾರರು 17…

Read More

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಕೈಗಾರಿಕಾ ಬೆಳವಣಿಗೆ ಮತ್ತು ಜನಸಂಖ್ಯೆಯ ದೃಷ್ಟಿಯಿಂದ ಅತ್ಯಂತ ಕ್ಷಿಪ್ರವಾಗಿ ಬೆಳೆಯುತ್ತಿರುವ ಬೆಂಗಳೂರು ನಗರಕ್ಕೆ ವಾರ್ಷಿಕವಾಗಿ 100 ಮಿಲಿಯನ್ ಪ್ರಯಾಣಿಕರನ್ನು ನಿರ್ವಹಿಸುವ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ. ಇದಕ್ಕಾಗಿ 4,500-5,000 ಎಕರೆ ಭೂಮಿ ಬೇಕಾಗಲಿದ್ದು, ಹಲವು ಅಂಶಗಳನ್ನು ಪರಿಗಣಿಸಿ ಇದನ್ನು ಉನ್ನತ ಮಟ್ಟದ ಸಮಿತಿಯು ಆಖೈರು ಮಾಡಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಬುಧವಾರ ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ದೇಶದ ತಂತ್ರಜ್ಞಾನ ಮತ್ತು ನವೋದ್ಯಮಗಳ ರಾಜಧಾನಿಯೂ ಆಗಿದ್ದು, ಈಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ದೆಹಲಿ ಮತ್ತು ಮುಂಬೈ ನಂತರ ಅತಿದಟ್ಟಣೆಯಿಂದ ಕೂಡಿರುವ ಮೂರನೇ ಏರ್-ಪೋರ್ಟ್ ಆಗಿದೆ. ಸದ್ಯಕ್ಕೆ ಇಲ್ಲಿ ವರ್ಷಕ್ಕೆ 52 ಮಿಲಿಯನ್ ಪ್ರಯಾಣಿಕರ ಮತ್ತು 0.71 ಮಿಲಿಯನ್ ಟನ್ ಸರಕು ಸಾಗಣೆ ನಿರ್ವಹಣೆ ಆಗುತ್ತಿದೆ. ಇವುಗಳನ್ನು ಕ್ರಮವಾಗಿ 110 ಮಿಲಿಯನ್ ಮತ್ತು 1.10 ಮಿಲಿಯನ್ ಟನ್ ತನಕ ವಿಸ್ತರಿಸಬಹುದಾಗಿದ್ದು, 2035ರ ವೇಳೆಗೆ ಇದು ಗರಿಷ್ಠ…

Read More

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧ ಕೇಳಿ ಬಂದಿರುವಂತ ಮುಡಾ ಹಗರಣದ ವಿರುದ್ಧ ಕರ್ನಾಟಕ ಬಿಜೆಪಿ ಸಿಡಿದೆದ್ದಿದೆ. ಈ ಸಂಬಂಧ ಜುಲೈ.12ರಂದು ಮೈಸೂರಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸೋದಕ್ಕೆ ನಿರ್ಧರಿಸಿದೆ. ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು,ಮೈಸೂರಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮೂಡಾ) ಅವ್ಯವಹಾರಕ್ಕೆ ಸಂಬಂಧಿಸಿ ಬಿಜೆಪಿ ವತಿಯಿಂದ ಇದೇ 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದರು. ಬಿಜೆಪಿ ಈ ಹಗರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಇದೇ 12ರಂದು ನಾನು, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಬಿಜೆಪಿ ಶಾಸಕರು, ಕಾರ್ಯಕರ್ತರು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ತಿಳಿಸಿದರು. ಮುಖ್ಯಮಂತ್ರಿಗಳು ಬಡವರ ಬಗ್ಗೆ ಮೊಸಳೆಕಣ್ಣೀರು ಹಾಕುತ್ತಿದ್ದಾರೆ. ಬಡವರಿಗೆ ನಿವೇಶನ ಹಂಚಬೇಕು. ಈಗಾಗಲೇ ನಡೆದ ನಿವೇಶನ ಹಂಚಿಕೆಯನ್ನು ರದ್ದು ಮಾಡಬೇಕು. ಸಿಎಂ, ಅವರ ಪತ್ನಿ ಮೇಲೆ ಆರೋಪ ಇರುವ ಕಾರಣ ಮತ್ತೊಂದು ಎಸ್‍ಐಟಿ ಮಾಡಿ ತನಿಖೆ ನಡೆಸುವುದು ಸೂಕ್ತವಲ್ಲ; ಈ ಭಾರಿ ಮೊತ್ತದ…

Read More

ಚಾಮರಾಜನಗರ : ನನ್ನ ಮತ್ತು ನಿಮ್ಮ ಸಂಬಂಧ 40 ವರ್ಷಗಳಷ್ಟು ಹಳೆಯದು ಮತ್ತು ಗಟ್ಟಿತನದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ತಂದುಕೊಟ್ಟ ಚಾಮರಾಜನಗರ ಕ್ಷೇತ್ರದ ಮತದಾರರಿಗೆ ಆಯೋಜಿಸಿದ್ದ ಕೃತಜ್ಞತಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಕೇಂದ್ರದಲ್ಲಿ ರಾಜ್ಯದ ಪರವಾಗಿ ನಿರಂತರ ಹೋರಾಟ ಮುಂದುವರೆಸಿ ಎಂದು ರಾಜ್ಯದ ಸಂಸದರಿಗೆ ಚಾಮರಾಜನಗರದ ವೇದಿಕೆಯಲ್ಲಿ ನಿಂತು ಸಿಎಂ ಕರೆ ನೀಡಿದರು. ನೆಹರೂ ಅವಧಿಯಿಂದ ಇವತ್ತಿನವರೆಗೆ ಕಾಂಗ್ರೆಸ್ ನಿರಂತರವಾಗಿ ಸಮಾಜದ ಸಮಗ್ರ ಅಭಿವೃದ್ಧಿಗೆ, ಸರ್ವ ಜನರ ಪ್ರಗತಿ ಮತ್ತು ಸಾಮರಸ್ಯಕ್ಕಾಗಿ ಶ್ರಮಿಸುತ್ತಿದೆ. ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದರು. ಅಂಬೇಡ್ಕರ್ ಅವರ ಸಂವಿಧಾನದ ಅಡಿಯಲ್ಲಿ ದಲಿತರು, ಮಹಿಳೆಯರು, ಹಿಂದುಳಿದವರು, ಎಲ್ಲಾ ಜಾತಿಯ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿಯನ್ನು ಕೊಡಬೇಕು ಎನ್ನುವುದು ನನ್ನ ಗುರಿಯಾಗಿದೆ. ಇದೇ ಕಾಂಗ್ರೆಸ್ ಪಕ್ಷದ ಆಧ್ಯತೆಯೂ ಆಗಿದೆ ಎಂದರು. ಈ ದೇಶದ ಸ್ವಾತಂತ್ರ್ಯಕ್ಕಾಗಿ ಅತಿ ಹೆಚ್ಚು ಪ್ರಾಣ, ಆಸ್ತಿ, ಪಾಸ್ತಿ ಕಳೆದುಕೊಂಡವರು ನಾವು ಕಾಂಗ್ರೆಸ್ಸಿಗರು. ಬ್ರಿಟಿಷರೇ ಭಾರತ…

Read More

ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ, ಅಕ್ರಮ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಮಹತ್ವದ ದಾಖಲೆಗಳು ಕೂಡ ಪತ್ತೆಯಾಗಿದ್ದಾವೆ ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ಇಂದು ಇಡಿ ಅಧಿಕಾರಿಗಳಿಂದ ನಾಗೇಂದ್ರ ಅವರನ್ನು ಬಂಧಿಸೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿವಾಸ, ಆಪ್ತರ ಮನೆಗಳ ಮೇಲೆ ಇಂದು ದಾಳಿ ನಡೆಸಿದ್ದಾರೆ. ನಾಗೇಂದ್ರ ಅವರ ಮನೆಯಲ್ಲಿ ಆಸ್ತಿ ಪತ್ರಗಳು ದೊರೆತಿದ್ದು, ಅವುಗಳನ್ನು ಹಗರಣದಲ್ಲಿ ಬಂದ ಹಣದಿಂದಲೇ ಖರೀದಿಸಲಾಗಿದ್ಯಾ ಅನ್ನೋ ಬಗ್ಗೆ ತನಿಖೆಯನ್ನು ಇಡಿ ಅಧಿಕಾರಿಗಳು ನಡೆಸುತ್ತಿದ್ದಾರೆ. ಇದರ ನಡುವೆ ಮಾಜಿ ಸಚಿವ ಬಿ.ನಾಗೇಂದ್ರ ಅವರ ಪಿಎ ಹರೀಶ್ ಅವರ ವೀಡಿಯೋ ಆಧಾರಿತ ಹೇಳಿಕೆಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಪಿಎ ಹರೀಶ್ ನೀಡಿದಂತ ಹೇಳಿಕೆಯ ಆಧಾರದ ಮೇಲೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು…

Read More

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಿದ್ದು, ಸದನದಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದರು. ಬಿಜೆಪಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಾದ ಭ್ರಷ್ಟಾಚಾರದ ವಿರುದ್ಧ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಭಾಗಿಯಾದ ಮುಡಾ ಹಗರಣದ ಬಗ್ಗೆ ಮಾತನಾಡಲು ಸದನದಲ್ಲಿ ಬಿಜೆಪಿಯಿಂದ ನಿಲುವಳಿ ಸೂಚನೆ ಮಂಡಿಸಲಾಗುವುದು. ಜುಲೈ 15 ರಿಂದ ನಡೆಯಲಿರುವ ಸದನವನ್ನು ಇನ್ನೂ ಒಂದು ವಾರ ವಿಸ್ತರಣೆ ಮಾಡಬೇಕೆಂದು ಆಗ್ರಹಿಸಲಾಗುವುದು ಎಂದರು. ಝೀಕಾ ವೈರಸ್‌, ಡೆಂಘೀ ರೋಗಗಳು ಹೆಚ್ಚಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಬೇಕೆಂದು ಆಗ್ರಹಿಸಿದ್ದರೂ ಅದರ ಬಗ್ಗೆ ಸರ್ಕಾರ ತಲೆ ಕೆಡಿಸಿಕೊಂಡಿಲ್ಲ. ದರಗಳ ಏರಿಕೆಯಿಂದಾಗಿ ರೈತರ ಆತ್ಮಹತ್ಯೆ ಹೆಚ್ಚಿದೆ. ಹಿಂದೂಗಳ ಮೇಲೆ ಹಲ್ಲೆಗಳು ನಡೆಯುತ್ತಿದೆ. ಇಲಾಖೆಗಳ ಅನುದಾನ ಕಡಿತ, 700 ಕೋಟಿ ರೂ. ಹಾಲು ಪ್ರೋತ್ಸಾಹಧನ ಬಾಕಿ ಮೊದಲಾದ ಸಮಸ್ಯೆಗಳು ಕಂಡುಬಂದಿದೆ. ಒಂದೇ ವರ್ಷದಲ್ಲಿ ಕಾಂಗ್ರೆಸ್‌…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ನಗರಸಭೆಯಿಂದ 2024-25ನೇ ಸಾಲಿನ ಆಸ್ತಿ ತೆರಿಗೆ ವಾಪತಿಗೆ ನೀಡಲಾಗುತ್ತಿರುವ ಶೇ.5ರಷ್ಟು ರಿಯಾಯಿತಿ ಅವಧಿಯನ್ನು ವಿಸ್ತರಣೆ ಮಾಡಿ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆಯ ಪೌರಾಯುಕ್ತ ಹೆಚ್.ಕೆ.ನಾಗಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆ ಪಾವತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ 204-25ನೇ ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿ ಮಾಡಿದ್ದಲ್ಲಿ ಶೇ.5ರಷ್ಟು ರಿಯಾಯಿತಿ ನೀಡಲು ಕಲ್ಪಿಸಲಾಗಿರುತ್ತದೆ ಎಂದಿದ್ದಾರೆ. ಶೇ.5ರಷ್ಟು ಆಸ್ತಿ ತೆರಿಗೆಯಲ್ಲಿ ರಿಯಾಯಿತಿ ಪಡೆಯುವ ಅವಧಿಯನ್ನು ದಿನಾಂಕ 31-07-2024ರ ಈ ತಿಂಗಳ ಕೊನೆಯ ವರೆಗೆ ಅವಕಾಶ ನೀಡಲಾಗಿದೆ. ಸಾಗರದ ಆಸ್ತಿ ತೆರಿಗೆ ಪಾವತಿದಾರರು ಸದುಪಯೋಗ ಪಡಿಸಿಕೊಳ್ಳುವಂತೆ ಸಾಗರ ನಗರಸಭೆಯ ಪೌರಾಯುಕ್ತ ಹೆಚ್.ಕೆ.ನಾಗಪ್ಪ ಅವರು ಮನವಿ ಮಾಡಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ https://kannadanewsnow.com/kannada/important-information-for-students-about-registering-for-sslc-exam-3/ https://kannadanewsnow.com/kannada/valmiki-scam-former-minister-b-nagendra-likely-to-be-arrested-any-moment/

Read More