Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡಿದೆ. ಇಂದಿನ ಪ್ರಕಟಿತ ಪರೀಕ್ಷೆ ಫಲಿತಾಂಶದ ದತ್ತಾಂಶದಂತೆ 69,275 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಳಿಕ ಎಸ್ ಎಸ್ ಎಲ್ ಸಿ ಪರೀಕ್ಷೆ-3ಕ್ಕೆ ನೋಂದಾಯಿಸಿಕೊಳ್ಳುವ ಬಗ್ಗೆ ಪರೀಕ್ಷಾ ಮಂಡಳಿ ಮಹತ್ವದ ಮಾಹಿತಿ ನೀಡಿದೆ. ಆ ಬಗ್ಗೆ ಮುಂದೆ ಓದಿ. ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ-2 ಪ್ರಕಟವಾದ ಬೆನ್ನಲ್ಲೇ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-3ಕ್ಕೆ ನೋಂದಾಯಿಸಿಕೊಳ್ಳುವ ಬಗ್ಗೆ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ. ಅದರಂತೆ ದಿನಾಂಕ 10-07-2024ರಿಂದ 17-07-2024ರವರೆಗೆ ಅವಕಾಶ ನೀಡಲಾಗಿದೆ ಅಂತ ತಿಳಿಸಿದೆ. ಇನ್ನೂ ಎಸ್ ಎಸ್ ಎಲ್ ಸಿ ಪರೀಕ್ಷೆ-3ರ ಪರೀಕ್ಷೆಗಳು ದಿನಾಂಕ 02-08-2024ರಿಂದ 09-08-2024ರವರೆಗೆ ನಡೆಸಲಾಗುತ್ತದೆ ಅಂತ ಮಾಹಿತಿ ನೀಡಿದೆ. SSLC ಪರೀಕ್ಷೆ-3ಕ್ಕೆ ಸಂಬಂಧಿಸಿದಂತೆ ಸ್ಕ್ಯಾನ್ ಪ್ರತಿ, ಮರುಎಣಿಕೆಗೆ ಮತ್ತು ಮರು ಮೌಲ್ಯ ಮಾಪನಕ್ಕೆ ಮಂಡಳಿಯಿಂದ ಮಹತ್ವದ ಮಾಹಿತಿ ದಿನಾಂಕ 10-07-2024ರಿಂದ 15-07-2024ರವರೆಗೆ ಉತ್ತರ ಪತ್ರಿಕೆಗಳ…
ಬೆಂಗಳೂರು: ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಈ ಪರೀಕ್ಷೆಗೆ ಹಾಜರಾದಂಧ 2,23,293 ವಿದ್ಯಾರ್ಥಿಗಳಲ್ಲಿ 69,275 ಮಂದಿ ಉತ್ತೀರ್ಣರಾಗಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ 14-06-2024ರಿಂದ 22-06-2024ರವರೆಗೆ 724 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯಾಧ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ-2 ನಡೆಸಲಾಯಿತು ಅಂತ ತಿಳಿಸಿದೆ. ಈ ಪರೀಕ್ಷೆಗೆ ಒಟ್ಟು 2,23,292 ಮಂದಿ ನೋಂದಾಯಿಸಿಕೊಂಡಿದ್ದರು, ಇವರಲ್ಲಿ 69,275 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಸರ್ಕಾರಿ ಶಾಲೆಯ 32,570 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೇ, ಅನುದಾನಿತ ಶಾಲೆಯ 19,154, ಅನುದಾನ ರಹಿತ ಶಾಲೆಯ 17,551 ವಿದ್ಯಾರ್ಥಿಗಳು ಸೇರಿದಂತೆ 69,275 ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ-2ರಲ್ಲಿ ಉತ್ತೀರ್ಣರಾಗಿದ್ದಾರೆ ಅಂತ ಮಾಹಿತಿ ನೀಡಿದೆ. ಸ್ಕ್ಯಾನ್ ಪ್ರತಿ, ಮರುಎಣಿಕೆಗೆ ಮತ್ತು ಮರು ಮೌಲ್ಯ ಮಾಪನಕ್ಕೆ ಮಂಡಳಿಯಿಂದ ಮಹತ್ವದ ಮಾಹಿತಿ ದಿನಾಂಕ 10-07-2024ರಿಂದ 15-07-2024ರವರೆಗೆ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಆನ್…
ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ನಿವಾಸದ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯ ವೇಳೆಯಲ್ಲಿ ಬಿ.ನಾಗೇಂದ್ರ ಅವರ ನಿವಾಸದಲ್ಲಿ ಮಹತ್ವದ ಆಸ್ತಿ ಪತ್ರಗಳು ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವಂತ ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿವಾಸದ ಮೇಲೆ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಸಂಬಂಧ ದಾಳಿ ನಡೆಸಿದ್ದರು. ಬೆಳಿಗ್ಗೆಯಿಂದಲೂ ನಾಗೇಂದ್ರ ಅವರ ನಿವಾಸದಲ್ಲಿ ಪರಿಶೀಲನೆ ನಡೆಸುತ್ತಿರುವಂತ ಇಡಿ ಅಧಿಕಾರಿಗಳಿಗೆ ಆಸ್ತಿ ಪತ್ರಗಳ ಮಹತ್ವದ ದಾಖಲೆಗಳು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಪತ್ತೆಯಾದಂತ ಆಸ್ತಿ ಪತ್ರಗಳ ಪರಿಶೀಲನೆಯನ್ನು ಇಡಿ ಅಧಿಕಾರಿಗಳು ನಡೆಸುತ್ತಿದ್ದು, ಅವುಗಳನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರದಿಂದ ಬಂದಂತ ಹಣದಿಂದಲೇ ಖರೀದಿ ಮಾಡಲಾಗಿದ್ಯ ಅಂತನೂ ತನಿಖೆಯನ್ನು ಇಡಿ ಅಧಿಕಾರಿಗಳು ನಡೆಸುತ್ತಿದ್ದಾರೆ. ನಾಗೇಂದ್ರ ನಿವಾಸದಲ್ಲಿನ ಕಂಪ್ಯೂಟರ್ ಕೂಡ ಶೋಧ ಮಾಡುತ್ತಿದ್ದಾರೆ. ಹೈದ್ರಾಬಾದ್ ಟು ಬಳ್ಳಾರಿಗೆ ಅಕೌಂಟ್ ಲಿಂಕ್ ಆಗಿದ್ಯಾ ಅನ್ನುವ ಬಗ್ಗೆಯೂ ಇಡಿ…
ಬೆಂಗಳೂರು: ರಾಮನಗರದಲ್ಲಿ ‘ರಾಮ’ನಿದ್ದಾನೆ ಎಂಬ ದ್ವೇಷವೂ ಅಥವಾ ರಿಯಲ್ ಎಸ್ಟೇಟ್ ಕುಬೇರರಾಗುವ ದುರಾಸೆಯೋ? ರಾಮನಗರದಲ್ಲೂ ರಿಯಲ್ ಎಸ್ಟೇಟ್ ದಂಧೆ ಶುರು ಮಾಡಲು ಹೊರಟಿದ್ದೀರಾ ಅಂತ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡುವ ಕಾಂಗ್ರೆಸ್ ಸರ್ಕಾರದ ಸಂಚಿನ ಹಿಂದೆ ರಾಮ ದ್ವೇಷ, ರಿಯಲ್ ಎಸ್ಟೇಟ್ ಲಾಲಸೆ ಅಡಗಿರುವುದು ಸುಸ್ಪಷ್ಟವಾಗಿದೆ ಅಂತ ಕಿಡಿಕಾರಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ, ಬ್ರ್ಯಾಂಡ್ ಬೆಂಗಳೂರು ಮಾಡುತ್ತೇವೆ ಎಂದು ಬೆಂಗಳೂರಿನ ಜನತೆಗೆ ಮೋಸ ಮಾಡಿದ್ದಾಯ್ತು. ಈಗ ಹೆಸರು ಬದಲಾವಣೆ ಮಾಡುವ ಮೂಲಕ ರಾಮನಗರದ ಜನತೆಯ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತೀದ್ದೀರಲ್ಲ ಇನ್ನೆಷ್ಟು ದಿನ ಹೀಗೆ ಜನರ ದಿಕ್ಕು ತಪ್ಪಿಸಿ ಕಾಲಹರಣ ಮಾಡುತ್ತೀರಿ? ಹೆಸರು ಬದಲಾವಣೆ ಮಾಡಿದ ಮಾತ್ರಕ್ಕೆ ಅಭಿವೃದ್ಧಿ ಆಗಿಬಿಡುತ್ತಾ? ಅಂತ ಪ್ರಶ್ನಿಸಿದ್ದಾರೆ. 2007ರಲ್ಲಿ ರಾಮನಗರವನ್ನ ಪ್ರತ್ಯೇಕ ಜಿಲ್ಲೆ ಮಾಡಿದ್ದು ಅಂದಿನ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ. ತಮ್ಮ ತಮ್ಮನನ್ನ ಸೋಲಿಸಿದ ಬಿಜೆಪಿ -…
ಬೆಂಗಳೂರು: ಮೈಸೂರಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮೂಡಾ) ಅವ್ಯವಹಾರಕ್ಕೆ ಸಂಬಂಧಿಸಿ ಬಿಜೆಪಿ ವತಿಯಿಂದ ಇದೇ 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಖುಷಿ ಬಂದಂತೆ ನಿವೇಶನ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಈ ಹಗರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಇದೇ 12ರಂದು ನಾನು, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಬಿಜೆಪಿ ಶಾಸಕರು, ಕಾರ್ಯಕರ್ತರು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ತಿಳಿಸಿದರು. ಮುಖ್ಯಮಂತ್ರಿಗಳು ಬಡವರ ಬಗ್ಗೆ ಮೊಸಳೆಕಣ್ಣೀರು ಹಾಕುತ್ತಿದ್ದಾರೆ. ಬಡವರಿಗೆ ನಿವೇಶನ ಹಂಚಬೇಕು. ಈಗಾಗಲೇ ನಡೆದ ನಿವೇಶನ ಹಂಚಿಕೆಯನ್ನು ರದ್ದು ಮಾಡಬೇಕು. ಸಿಎಂ, ಅವರ ಪತ್ನಿ ಮೇಲೆ ಆರೋಪ ಇರುವ ಕಾರಣ ಮತ್ತೊಂದು ಎಸ್ಐಟಿ ಮಾಡಿ ತನಿಖೆ ನಡೆಸುವುದು ಸೂಕ್ತವಲ್ಲ; ಈ ಭಾರಿ ಮೊತ್ತದ ಹಗರಣದ ತನಿಖೆಯನ್ನು ತಕ್ಷಣವೇ ಸಿಬಿಐಗೆ…
ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರ ನೇತೃತ್ವದಲ್ಲಿನ ಕರ್ನಾಟಕದ ಉನ್ನತ ಮಟ್ಟದ ನಿಯೋಗವು ಜಪಾನ್ ಮತ್ತು ದಕ್ಷಿಣ ಕೊರಿಯಾದ ಎರಡು ವಾರಗಳ ಭೇಟಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ₹6,450 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಬದ್ಧತೆ ಪಡೆದುಕೊಂಡಿದೆ. ಈ ಬದ್ಧತೆ ಹಾಗೂ ಒಪ್ಪಂದಗಳ ಫಲವಾಗಿ ರಾಜ್ಯದಲ್ಲಿ 1,000 ಉದ್ಯೋಗ ಅವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ. ಉಭಯ ದೇಶಗಳ ಭೇಟಿಯ ಫಲಶ್ರುತಿ ಬಗ್ಗೆ ಬುಧವಾರ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ಹಂಚಿಕೊಂಡ ಸಚಿವ ಪಾಟೀಲ ಅವರು, ‘ಜೂನ್ 24ರಿಂದ ಜುಲೈ 5ರವರೆಗಿನ ಉಭಯ ದೇಶಗಳ ಎರಡು ವಾರಗಳ ಭೇಟಿಯ ಸಮಯದಲ್ಲಿ, ಕರ್ನಾಟಕದ ನಿಯೋಗವು ಅಲ್ಲಿನ ಪ್ರಮುಖ ಬಹುರಾಷ್ಟ್ರೀಯ ಕಂಪನಿಗಳ ಮುಖ್ಯಸ್ಥರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗಾಗಿ (ಎಸ್ಎಂಇ) ಬಂಡವಾಳ ಹೂಡಿಕೆ ರೋಡ್ಷೋಗಳನ್ನು ನಡೆಸಿತು. ತಯಾರಿಕಾ ವಲಯಕ್ಕೆ ರಾಜ್ಯದಲ್ಲಿ ಇರುವ ಉತ್ತೇಜಕರ ಪೂರಕ ಸೌಲಭ್ಯಗಳ ಮಾಹಿತಿ ವಿನಿಮಯ ಮಾಡಿಕೊಂಡಿತುʼ ಎಂದು…
ಬೆಂಗಳೂರು: ವಿದ್ವತ್ ವಲಯದಲ್ಲಿರುವ ಸಾಹಿತ್ಯ ಅಕಾಡೆಮಿಯನ್ನು ಶ್ರೀಸಾಮಾನ್ಯರ ಕಡೆಗೆ ಕೊಂಡೊಯ್ಯುವುದು ನಮ್ಮ ಉದ್ದೇಶವಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಎಲ್.ಎನ್. ಮುಕುಂದರಾಜ್ ಅವರು ತಿಳಿಸಿದರು. ಕನ್ನಡ ಭವನದ ಸಭಾಂಗಣದಲ್ಲಿಂದು ತಿಳಿ ಬೆಳಕು ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾದ ಔಪಚಾರಿಕ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಪಂಪ, ಕುಮಾರವ್ಯಾಸನ ವಿಚಾರಧಾರೆಗಳನ್ನು ಸಾಮಾನ್ಯ ನಾಗರಿಕರಿಗೂ ತಿಳಿಸುವುದು ಅವಶ್ಯವಾಗಿದೆ. ಹಾಗಾಗಿ ಶಾಲಾ-ಕಾಲೇಜುಗಳಲ್ಲದೆ ಸಂತೆ, ಜಾತ್ರೆಗಳಲ್ಲಿಯೂ ಈ ಕುರಿತು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ಹೇಳಿದರು. ಕುವೆಂಪು ಪ್ರಚಾರೋಪನ್ಯಾಸ ಮಾಲಿಕೆ ಮಾದರಿಯಲ್ಲಿ ಇತಿಹಾಸ, ಸಾಹಿತ್ಯ, ಕೃಷಿ, ಸಮಾಜ ಸೇವೆ ಇತ್ಯಾದಿ ಕ್ಷೇತ್ರಗಳ ಸಾಧಕರ ಸ್ಪೂರ್ತಿದಾಯಕ ವ್ಯಕ್ತಿತ್ವಗಳನ್ನು ಪರಿಚಯಿಸುವ ಕಿರು ಹೊತ್ತಿಗೆಗಳನ್ನು ಪ್ರಕಟಿಸಿ ಯುವಜನತೆಗೆ, ವಿದ್ಯಾರ್ಥಿಗಳಿಗೆ ಸುಲಭವಾಗಿ ಸಿಗುವಂತೆ ಹಂಚಿಕೆ ಮಾಡುವ ಮೂಲಕ ಯುವಜನರಲ್ಲಿ ಚೈತನ್ಯ ತುಂಬುವುದು ಅಕಾಡೆಮಿಯ ಉದ್ದೇಶವಾಗಿದೆ ಎಂದು ವಿವರಿಸಿದರು. ವಿಜ್ಞಾನ, ತಂತ್ರಜ್ಞಾನ, ವೈಚಾರಿಕ ಮತ್ತು ಜಾತ್ಯತೀತ ಪ್ರಜ್ಞೆಯನ್ನು ತಿಳಿಸುವ ಹೊಸ ಮಾದರಿಯ ಕಾವ್ಯಕಮ್ಮಟಗಳನ್ನು ಹಮ್ಮಿಕೊಳ್ಳಲಾಗುವುದು. ಸಂಘ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಇದೇ ಮಾದರಿ ಕಾರ್ಯಾಗಾರ ನಡೆಸುವ…
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564. ಹಿಂದೂ ಸಂಪ್ರದಾಯದಲ್ಲಿ ಅನ್ನಪೂರ್ಣೇಶ್ವರಿ ದೇವರಿಗೆ ಒಂದು ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಯಾಕೆಂದರೆ ಅನ್ನ ನೀಡುವ ತಾಯಿಯಾಗಿದ್ದಾಳೆ ಅನ್ನಪೂರ್ಣೇಶ್ವರಿ. ಅನ್ನಪೂರ್ಣೇಶ್ವರಿ ಸಾಮಾನ್ವಾಗಿ ಯಾವ ಭಕ್ತರ ಮೇಲೂ ಕೋಪ ಮಾಡಿಕೊಳ್ಳುವುದಿಲ್ಲ . ಒಂದು ವೇಳೆ ನೀವು ತಪ್ಪು ಮಾಡಿದರು ಸಾಮಾನ್ಯವಾಗಿ ಅನ್ನಪೂರ್ಣೇಶ್ವರಿ ದೇವಿ ಮುನಿಸಿಕೊಳ್ಳುವುದಿಲ್ಲ. ನೀವೇನಾದರೂ ಗಣ ಘೋರವಾದ ತಪ್ಪು…
ಮಂಡ್ಯ: ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿರುವ ಮದ್ದೂರು ಪಟ್ಟಣದ ಪೇಟೆಬೀದಿಯ (ಎಂಸಿ ರಸ್ತೆ) ಅಗಲೀಕರಣ ಕಾಮಗಾರಿಯನ್ನು ಶೀಘ್ರದಲ್ಲೆ ಕೈಗೊಳ್ಳಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಮಂಗಳವಾರ ಹೇಳಿದರು. ಮದ್ದೂರು ಪಟ್ಟಣದ ಪುರಸಭೆಯ ಎಸ್.ಎಂ.ಕೃಷ್ಣ ಸಭಾಂಗಣದಲ್ಲಿ ಉಪ ವಿಭಾಗಾಧಿಕಾರಿ ಶಿವಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಪೇಟೆ ಬೀದಿ ಅಗಲೀಕರಣ ಸಂಬಂಧ ಪುರಸಭೆ ಸದಸ್ಯರಾದ ಎಂ.ಬಿ.ಸಚಿನ್, ಟಿ.ಆರ್. ಪ್ರಸನ್ನಕುಮಾರ್ ಸೇರಿದಂತೆ ಹಲವು ಸದಸ್ಯರು ಪ್ರಸ್ತಾಪ ಮಾಡಿದರು. ಇದಕ್ಕೆ ಪಕ್ಷಾತೀತವಾಗಿ ಎಲ್ಲಾ ಸದಸ್ಯರು ಬೆಂಬಲ ಸೂಚಿಸಿದರು. ಪಟ್ಟಣದ ಪೇಟೆಬೀದಿ ಈ ಹಿಂದೆ ವ್ಯಾಪಾರ ವಹಿವಾಟು ಜನಸಂಖ್ಯೆ, ವಾಹನಗಳು ಸೇರಿದಂತೆ ಇತ್ಯಾದಿ ಅಂಶಗಳ ಆಧಾರದ ಮೇಲೆ ರಸ್ತೆ ನಿರ್ಮಾಣ ಮಾಡಲಾಗಿತ್ತು. ಈಗ ಜನಸಂಖ್ಯೆ ವ್ಯಾಪಾರ ವಹಿವಾಟು ಅಭಿವೃದ್ಧಿ ಜತೆಗೆ ವಾಹನಗಳ ಸಂಚಾರವು ಹೆಚ್ಚಳವಾಗಿದೆ ಹೀಗಾಗಿ ಮೂಲ ಸೌಲಭ್ಯ ಕಲ್ಪಿಸಲು ತೊಂದರೆಯಾಗಿದೆ ಹೀಗಾಗಿ ಪಟ್ಟಣದ ಅಭಿವೃದ್ದಿ ದೃಷ್ಟಿಯಿಂದ ಈ ಕೂಡಲೇ ಪೇಟೆಬೀದಿಯ ರಸ್ತೆಯ ಅಗಲೀಕರಣ ಕೈಗೊಂಡು 100 ರಿಂದ 120 ಅಡಿಗೆ ವಿಸ್ತರಣೆ ಮಾಡುವ ಮೂಲಕ ಪಟ್ಟಣವನ್ನು ಅಭಿವೃದ್ಧಿ…
ಚಿಕ್ಕಮಗಳೂರು: ಜಿಲ್ಲೆಯ ಪ್ರವಾಸಿ ತಾಣಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಧೂಮಪಾನ ನಿಷೇಧಿಸಲಾಗಿದೆ. ಹೀಗಿದ್ದರೂ ನಿಯಮ ಮೀರಿದಂತ ಪ್ರವಾಸಿಗರಿಗೆ ಪೊಲೀಸರು ಕೇಸ್, ವಾಹನ ಸೀಜ್ ಮಾಡಿ ಬಿಸಿ ಮುಟ್ಟಿಸಿದ್ದಾರೆ. ಹೌದು.. ಪ್ರವಾಸಿ ಸ್ಥಳದಲ್ಲಿ ಮದ್ಯಪಾನ ಮತ್ತು ಧೂಮಪಾನ ಮಾಡಿ ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟು ಮಾಡಿದ ಆರೋಪದ ಮೇಲೆ ಪೊಲೀಸರು ಚಿಕ್ಕಮಗಳೂರಲ್ಲಿ ಹಲವರ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವರಮನೆಗೆ ಆಗಮಿಸಿದ್ದ ಕೆಲವರು ಮದ್ಯಪಾನ ಮಾಡಿ ನಡು ರಸ್ತೆಯಲ್ಲಿ ಕುಣಿದಾಡುತ್ತಿದ್ದ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗಿ ತೀವ್ರ ಟೀಕೆಗೆ ಗುರಿಯಾಗಿತ್ತು. ಅಲ್ಲದೇ ಪ್ರವಾಸಿ ತಾಣದಲ್ಲೇ ಹೀಗೆ ಮಾಡಿದ್ದರೂ ತಡೆಯದಂತ ಪೊಲೀಸರ ವಿರುದ್ಧ ಸಾರ್ವಜನಿಕರು ಆಕ್ರೋಶವನ್ನು ಹೊರ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ ಬಣಕಲ್ ಪೊಲೀಸರು ಹಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇದಲ್ಲದೇ ಪ್ರಕರಣ ದಾಖಲಿಸಿದ ಲಿಂಗದಹಳ್ಳಿ ಪೊಲೀಸರು ಕಾರೊಂದನ್ನು ವಶಕ್ಕೆ ಪಡೆದಿದ್ದಾರೆ. https://kannadanewsnow.com/kannada/ration-cards-of-ineligible-people-cancelled-benefits-only-for-eligible-ones-cm-siddaramaiah/ https://kannadanewsnow.com/kannada/here-are-the-key-highlights-of-cm-siddaramaiahs-press-conference-today/