Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಾಳೆ ಬೆಳಗ್ಗೆ 11.30ಕ್ಕೆ ಕೆಲ ದಿನಗಳ ಹಿಂದೆ ನಡೆದಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ( SSLC Exam 2 ) ಫಲಿತಾಂಶ ಪ್ರಕಟವಾಗಲಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ( Karnataka School Examination and Evaluation Board-KSEEB) ಅಧ್ಯಕ್ಷರು ಮಾಹಿತಿ ನೀಡಿದ್ದಾರೆ. 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಫಲಿತಾಂಶವನ್ನು ( SSLC Exam-2 Results ದಿನಾಂಕ 10-07-2024ರ ಬೆಳಿಗ್ಗೆ 11.30ಕ್ಕೆ NICಯ ಜಾಲತಾಣ https://karresults.nic.in ನಲ್ಲಿ ಪ್ರಕಟಿಸಲಾಗುತ್ತದೆ ಅಂತ ತಿಳಿಸಿದ್ದಾರೆ. ಅಂದಹಾಗೇ ದಿನಾಂಕ 14-06-2024ರಿಂದ 22-06-2024ರವರೆಗೆ 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ -2 ಅನ್ನು ನಡೆಸಲಾಯಿತು. 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-2ರ ವಿಜ್ಞಾನ, ದ್ವಿತೀಯ ಭಾಷೆ ಇಂಗ್ಲಿಷ್ ಮತ್ತು ದ್ವಿತೀಯ ಭಾಷೆ ಕನ್ನಡ ವಿಷಯದ ಕೀ ಉತ್ತರಗಳನ್ನು ದಿನಾಂಕ:21.06.2024 ರಂದು ಮಂಡಲಿಯ ಜಾಲತಾಣದಲ್ಲಿ http://kseeb.karnataka.gov.inನಲ್ಲಿ ಪ್ರಕಟಿಸಲಾಗಿದೆ. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು https://kannadanewsnow.com/kannada/main-sed-in-mumbai-bmw-hit-and-run-case-mihir-shah-arrested/…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 9 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೆಳಕಂಡ ಕೆಎಎಸ್ ಅಧಿಕಾರಿಗಳನ್ನು ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಲಾಗುತ್ತಿದೆ ಅಂತ ತಿಳಿಸಿದೆ. ಅಂದಹಾಗೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಹುದ್ದೆಗೆ ಕೆಎಎಸ್ ಅಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರನ್ನು ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ವಿಶೇಷ ಕಾರ್ಯದರ್ಶಿಯಾಗಿ ರಮೇಶ್ ದೇಸಾಯಿ ವರ್ಗಾಯಿಸಿದ್ರೇ, ವಿಜಯಪುರ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ಡಂಡಾಧಿಕಾರಿಯನ್ನಾಗಿ ಸೋಮಲಿಂಗಗೋಪಾಲ ಗೆಣ್ಣೂರ ಅವರನ್ನು ನೇಮಿಸಿದೆ. ರಾಮನಗರ ಅಪರ ಜಿಲ್ಲಾಧಿಕಾರಿಯನ್ನಾಗಿ ಚಂದ್ರಯ್ಯ ಆರ್, ಬಿಬಿಎಂಪಿ ಆಸ್ತಿಗಳ ಉಪ ಆಯುಕ್ತರನ್ನಾಗಿ ಎಸ್ ಎಂ ಶಿವಕುಮಾರ್, ಶಿರಸಿ ಉಪ ವಿಭಾಗಾಧಿಕಾರಿಯನ್ನಾಗಿ ಕಾವ್ಯಾರಾಣಿ ಕೆ.ವಿ, ಯಾದಗಿರಿಯ ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ನವೀನ್ ಹೆಚ್.ವಿ ಅವರನ್ನು ನೇಮಕ ಮಾಡಿ ಆದೇಶಿಸಿದೆ. ಹೀಗಿದೆ…
ಮುಂಬೈ: ವರ್ಲಿ ಬಿಎಂಡಬ್ಲ್ಯು ಹಿಟ್ ಅಂಡ್ ರನ್ ಪ್ರಕರಣದ ಪ್ರಮುಖ ಆರೋಪಿ ಮಿಹಿರ್ ಶಾನನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಥಾಣೆಯ ಶಹಪುರದಿಂದ ಆತನನ್ನು ಬಂಧಿಸಲಾಗಿದ್ದು, ವರ್ಲಿ ಪೊಲೀಸ್ ಠಾಣೆಗೆ ಕರೆತರಲಾಗುವುದು. ಈ ಪ್ರಕರಣದಲ್ಲಿ ಪೊಲೀಸರು ಇತರ 12 ಜನರನ್ನು ಸಹ ಬಂಧಿಸಿದ್ದಾರೆ. ಶಿವಸೇನೆ ಮುಖಂಡ ರಾಜೇಶ್ ಶಾ ಅವರ ಪುತ್ರ ಮಿಹಿರ್ ಶಾ (24) ಬಿಎಂಡಬ್ಲ್ಯು ಕಾರನ್ನು ಚಲಾಯಿಸುತ್ತಿದ್ದು, ಕಾವೇರಿ ನಖ್ವಾ (45) ಎಂಬ ಮಹಿಳೆಗೆ ಮಾರಣಾಂತಿಕವಾಗಿ ಡಿಕ್ಕಿ ಹೊಡೆದು, ಪತಿ ಪ್ರದೀಪ್ ಗಾಯಗೊಂಡಿರುವ ಘಟನೆ ಭಾನುವಾರ ಬೆಳಿಗ್ಗೆ ಮುಂಬೈನ ವರ್ಲಿ ಪ್ರದೇಶದಲ್ಲಿ ನಡೆದಿದೆ. ಅಂದಿನಿಂದ ಮಿಹಿರ್ ಶಾ ತಲೆಮರೆಸಿಕೊಂಡಿದ್ದ. ಆತನನ್ನು ಬಂಧಿಸಲು ಮುಂಬೈ ಪೊಲೀಸರು ಆರು ತಂಡಗಳನ್ನು ರಚಿಸಿದ್ದರು. ಅವರು ದೇಶದಿಂದ ಪಲಾಯನ ಮಾಡುವುದನ್ನು ತಡೆಯಲು ಲುಕ್ ಔಟ್ ಸುತ್ತೋಲೆ (ಎಲ್ಒಸಿ) ಸಹ ಹೊರಡಿಸಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಯ ತಂದೆ, ಶಿವಸೇನೆ ಮುಖಂಡ ರಾಜೇಶ್ ಶಾ ಅವರಿಗೆ ಜಾಮೀನು ದೊರೆತ ಒಂದು ದಿನದ ನಂತರ ಈ ಬಂಧನ ನಡೆದಿದೆ. ಅಪಘಾತಕ್ಕೀಡಾದ…
ಬೆಂಗಳೂರು: ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ಈಗಾಗಲೇ ಅಧ್ಯಕ್ಷರು, ಉಪಾಧ್ಯಕ್ಷರುಗಳನ್ನು ನೇಮಸಿಲಾಗಿದೆ. ಇನ್ನೂ ಬಾಕಿ ಉಳಿದಂತ ನಿರ್ದೇಶಕರು, ಸದಸ್ಯರುಗಳನ್ನು ಆಯ್ಕೆ ಮಾಡುವುದಕ್ಕೆ ಸಮಿತಿ ರಚಿಸಿ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಡವಳಿಯನ್ನು ಹೊರಡಿಸಿದ್ದು, ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ಈಗಾಗಲೇ ಅಧ್ಯಕ್ಷರು, ಉಪಾಧ್ಯಕ್ಷರುಗಳನ್ನು ನೇಮಿಸಲಾಗಿದೆ. ಆದರೇ ನಿರ್ದೇಶಕರು, ಸದಸ್ಯರುಗಳನ್ನು ನೇಮಿಸಬೇಕಾಗಿರುತ್ತದೆ ಅಂತ ತಿಳಿಸಿದ್ದಾರೆ. ಆದ್ದರಿಂದ ನಿರ್ದೇಶಕರು, ಸದಸ್ಯರುಗಳನ್ನು ಆಯ್ಕೆ ಮಾಡಲು ಈ ಕೆಳಕಂಡ ಸಚಿವರ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದೆ ಅಂತ ಆದೇಶದಲ್ಲಿ ತಿಳಿಸಿದ್ದಾರೆ. ಅಂದಹಾಗೇ ನಿಗಮ ಮಂಡಳಿಗಳಿಗೆ ನಿರ್ದೇಶಕರು, ಸದಸ್ಯರುಗಳನ್ನು ಆಯ್ಕೆ ಮಾಡುವಂತ ಸಮಿತಿಯ ಅಧ್ಯಕ್ಷರನ್ನಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ನೇಮಕ ಮಾಡಲಾಗಿದೆ. ಸದಸ್ಯರನ್ನಾಗಿ ರಾಮಲಿಂಗಾರೆಡ್ಡಿ, ಕೆಜೆ ಜಾರ್ಜ್, ಸತೀಶ್ ಜಾರಕಿಹೊಳಿ, ಸಂತೋಷ್ ಲಾಡ್, ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್, ವಿಧಾನಸಭಾ ಸದಸ್ಯರಾದಂತ ಡಾ.ರೂಪಕಲಾ ಎಂ, ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ಸದಸ್ಯ ವಿಆರ್ ಸುದರ್ಶನ್, ಮಾಜಿ…
ಶಿವಮೊಗ್ಗ : ಆಲ್ಕೋಳ ವಿದ್ಯುತ್ ಕೇಂದ್ರದ ವ್ಯಾಪ್ತಿಯ ಎಎಫ್-05ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯ ಗೋಪಾಳಗೌಡ ಬಡಾವಣೆ ಎಫ್ ಬ್ಲಾಕ್ ಸುತ್ತಮುತ್ತಲಿನ ಪ್ರದೇಶದಲ್ಲಿ ಜು. 11 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನರಿಕ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಜುಲೈ.11ರಂದ ಮೆಸ್ಕಾಂ ಜನಸಂಪರ್ಕ ಸಭೆ ಶಿವಮೊಗ್ಗ ನಗರ ಉಪವಿಭಾಗ -3, ಸಹಾಯಕ ಕಾರ್ಯನಿರ್ವಾಯಕ ಇಂಜಿನಿಯರ್ ಕಚೇರಿ, ಗುಡ್ಲಕ್ ಸರ್ಕಲ್ ಹತ್ತಿರ, ಎಸ್.ವಿ.ಬಡಾವಣೆ, ಮೆಸ್ಕಾಂ ಕಚೇರಿಯಲ್ಲಿ ದಿ: 11.07.2024ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.;08182-251556 ನ್ನು ಸಂಪರ್ಕಿಸುವುದು. https://kannadanewsnow.com/kannada/good-news-for-forest-dwellers-of-the-state-resolution-to-ensure-land-rights-introduced-in-session/ https://kannadanewsnow.com/kannada/hdk-meets-union-highways-minister-nitin-gadkari-in-delhi-discusses-pending-projects-in-karnataka/
ನವದೆಹಲಿ: ಇಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯನ್ನು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದರು. ಈ ವೇಳೆ ಕರ್ನಾಟಕದ ಬಾಕಿ ಯೋಜನೆಗಳನ್ನು ಕಾರ್ಯಗತಗೊಳಿಸೋ ಬಗ್ಗೆ ಮಹತ್ವದ ಚರ್ಚೆ ನಡೆಸಿರೋದಾಗಿ ತಿಳಿದು ಬಂದಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕರ್ನಾಟಕದಲ್ಲಿ ಬಾಕಿ ಇರುವ ಸಾರಿಗೆ, ಹೆದ್ದಾರಿ ಯೋಜನೆಗಳನ್ನು ಶೀಘ್ರವೇ ಕಾರ್ಯಗತಗೊಳಿಸಿವುದು, ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಬಗ್ಗೆ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಾಯಿತು ಎಂದಿದ್ದಾರೆ. ಮಂಡ್ಯ ನಗರದ ಹೊರ ವರ್ತುಲ ರಸ್ತೆ ಹಾಗೂ ಹಲಗೂರು – ಕೆ.ಎಂ.ದೊಡ್ಡಿ ರಸ್ತೆಯನ್ನು ಮೇಲ್ದರ್ಜೆಗೇರಿಸಿ ರಾಷ್ಟ್ತ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಯೋಜನೆಯ ಬಗ್ಗೆಯೂ ಚರ್ಚಿಸಲಾಯಿತು. ಮಾನ್ಯ ಸಚಿವರು ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ತಿಳಿಸಿದ್ದಾರೆ. ಕೋಲಾರ ಸಂಸದರಾದ ಮಲ್ಲೇಶ್ ಬಾಬು ಅವರು ನನ್ನ ಜತೆಯಲ್ಲಿದ್ದರು. https://twitter.com/hd_kumaraswamy/status/1810615690182680678 https://kannadanewsnow.com/kannada/good-news-for-forest-dwellers-of-the-state-resolution-to-ensure-land-rights-introduced-in-session/ https://kannadanewsnow.com/kannada/big-news-cm-siddaramaiah-orders-cancellation-of-ineligible-bpl-card/
ಬೆಂಗಳೂರು: ರಾಜ್ಯದ ಅರಣ್ಯ ನಿವಾಸಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಮುಂದಿನ ಅಧಿವೇಶನದಲ್ಲಿ ಭೂಮಿ ಹಕ್ಕು ಖಾತ್ರಿಪಡಿಸಲು ನಿರ್ಣಯ ಮಂಡನೆ ಮಾಡುವಂತೆ ಸಿಎಂ ಸಿದ್ಧರಾಮಯ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಇಂದು ಕಾರ್ಯದರ್ಶಿಗಳ ಸಭೆ ನಡೆಸಿ ಮಾತನಾಡಿದಂತ ಅವರು, ರಾಜ್ಯದಲ್ಲಿ ಅನುಸೂಚಿತ ಬುಡಕಟ್ಟುಗಳ ಮತ್ತು ಇತರ ಪಾರಂಪರಿಕ ಅರಣ್ಯ ವಾಸಿಗಳ ಅಧಿನಿಯಮದಡಿ 298798 ಅರ್ಜಿ ಸ್ವೀಕೃತಗೊಂಡಿದ್ದು, 258086 ಅರ್ಜಿಗಳು ತಿರಸ್ಕೃತಗೊಂಡಿವೆ ಎಂದರು. 24186 ಅರ್ಜಿಗಳು ಇತ್ಯರ್ಥವಾಗದೇ ಬಾಕಿಯಿವೆ. ಇದುವರೆಗೆ 16426 ಹಕ್ಕುಪತ್ರಗಳನ್ನು ವಿತರಿಸಲಾಗಿದ್ದು, 56479 ಎಕ್ರೆ ಭೂಮಿ ಮಂಜೂರು ಮಾಡಲಾಗಿದೆ. ಅರಣ್ಯವಾಸಿಗಳಿಗೆ ಭೂಮಿ ಹಕ್ಕು ಖಾತ್ರಿಪಡಿಸಲು ಮುಂದಿನ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದರು. ಬುಡಕಟ್ಟು ಸಮುದಾಯ ಅಭಿವೃದ್ಧಿ ರಾಜ್ಯದ 5ಜಿಲ್ಲೆಗಳ ಹಾಡಿಗಳಲ್ಲಿ ವಾಸಿಸುತ್ತಿರುವ ಜೇನುಕುರುಬ ಹಾಗೂ ಕೊರಗ ಜನಾಂಗದವರಿಗೆ ಸೌಲಭ್ಯಗಳನ್ನು ಕಲ್ಪಿಸಲು ಪಿಎಂ ಜನಮನ್ ಯೋಜನೆ ಜಾರಿಯಲ್ಲಿದೆ. ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ 44040 ಜೇನುಕುರುಬ ಹಾಗೂ 13007 ಕೊರಗರು ಇದ್ದಾರೆ. ಈ ಜನಾಂಗದ 19 ಸಾವಿರ ಕುಟುಂಬಗಳಿದ್ದು,…
ಬೆಂಗಳೂರು: ನಗರದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇವುಗಳನ್ನು ನಿಯಂತ್ರಣ ಮಾಡೋದಕ್ಕೆ ಬಿಬಿಎಂಪಿ ಆರೋಗ್ಯ ಇಲಾಖೆ ಕ್ರಮವಹಿಸಿದೆ. ಇದರ ನಡುವೆ ಎಲ್ಲೆಂದರಲ್ಲಿ ಕಸ ಎಸೆಯೋದಕ್ಕೆ ಬ್ರೇಕ್ ಕೂಡ ಹಾಕೋ ಕೆಲಸ ಮಾಡಿದೆ. ಅದಕ್ಕಾಗಿ ನಗರದೆಲ್ಲೆಡೆ ಹೆಚ್ಚುವರಿ ಸಿಸಿಟಿವಿ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗಿದ್ದು, ಎಲ್ಲೆಂದರಲ್ಲಿ ಕಸ ಎಸೆದವರನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸೋದಕ್ಕೆ ಮುಂದಾಗಿದೆ. ಇಂದು ವಿಧಾನಸೌಧದಲ್ಲಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಮುಖಂಡರನ್ನು ಒಳಗೊಂಡ ಡಿಸಿಎಂ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಜಿಲ್ಲೆಯ ಮರುನಾಮಕರಣ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ಮಂಗಳವಾರ ನೀಡಿದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ಡಿಸಿಎಂ ಡಿ.ಕೆ ಶಿವಕುಮಾರ್, ಡೆಂಗಿ ಪ್ರಕರಣ ಹೆಚ್ಚಳದ ಬಗ್ಗೆ ಕೇಳಿದಾಗ, “ಎಲ್ಲೆಂದರಲ್ಲಿ ಕಸ ಎಸೆಯುವವವರ ಪ್ರಮಾಣ ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸಲು ಸಿಸಿಟಿವಿ ಕ್ಯಾಮೆರ ಕಣ್ಗಾವಲು ವ್ಯವಸ್ಥೆ ಮಾಡಲಾಗುವುದು. ಜನರು ಮನೆಯ ಬಳಿ ಬರುವ ಕಸ ಸಂಗ್ರಹ ವಾಹನಗಳಿಗೆ ಕಸವನ್ನು ಹಾಕದೆ ರಸ್ತೆ…
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಗಂಭೀರವಾದಂತ ಕೇಸ್ ಆಗಿದೆ. ಹೀಗಾಗಿ ಜಾಮೀನು ನೀಡೋದಕ್ಕೆ ಸಾಧ್ಯವಿಲ್ಲ ಅಂತ ಎಂಎಲ್ಸಿ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಇಂದು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಮೂರ್ತಿ ಕೆಎನ್ ಶಿವಕುಮಾರ್ ಅವರು ನಡೆಸಿದರು. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಗಂಭೀರವಾದಂತ ವಿಚಾರವಾಗಿದೆ ಅಂತ ಅಭಿಪ್ರಾಯ ಪಟ್ಟು, ಜಾಮೀನು ಅರ್ಜಿಯನ್ನು ವಜಾಗೊಳಿಸಿದರು. https://kannadanewsnow.com/kannada/ramanagara-district-to-be-renamed-as-bengaluru-south-proposal-submitted-to-cm/ https://kannadanewsnow.com/kannada/big-news-cm-siddaramaiah-orders-cancellation-of-ineligible-bpl-card/
ಬೆಂಗಳೂರು : “ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ, ಹಾರೋಹಳ್ಳಿ ತಾಲೂಕುಗಳ ಭವಿಷ್ಯ ಹಾಗೂ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ತಮ್ಮ ನೇತೃತ್ವದ ಜಿಲ್ಲೆಯ ನಾಯಕರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ನೀಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಮುಖಂಡರನ್ನು ಒಳಗೊಂಡ ಡಿಸಿಎಂ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಜಿಲ್ಲೆಯ ಮರುನಾಮಕರಣ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ಮಂಗಳವಾರ ನೀಡಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಶಿವಕುಮಾರ್ ಅವರು, “ಬೆಂಗಳೂರು ನಗರ ಸೇರಿದಂತೆ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ಕನಕಪುರ, ರಾಮನಗರ, ಚನ್ನಪಟ್ಟಣ, ಮಾಗಡಿ ಸೇರಿದಂತೆ ನಾವೆಲ್ಲರೂ ಮೂಲತಃ ಬೆಂಗಳೂರು ಜಿಲ್ಲೆಯವರು. ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆ ಎಂದು ಹಿಂದೆ ವಿಭಾಗ ಮಾಡಲಾಯಿತು. ರಾಮನಗರವನ್ನು ಕೇಂದ್ರಾಡಳಿತವಾಗಿಟ್ಟುಕೊಂಡೇ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ…