Author: kannadanewsnow09

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳ ಕರಡು ವಾರ್ಡ್ ವಾರು ಕ್ಷೇತ್ರ ಪುನರ್ ವಿಂಗಡಣೆಯ ಅಧಿಸೂಚನೆ ಪ್ರಕಟಿಸಲಾಗಿದೆ. ಅಲ್ಲದೇ ನಾಗರೀಕರಿಂದ ಆಕ್ಷೇಪಣೆಗಳು ಹಾಗೂ ಸಲಹೆಗಳನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟಿಸಿದ್ದು, ದಿನಾಂಕ: 14- 05-2025 ರಲ್ಲಿ ಗ್ರೇಟರ್ ಬೆಂಗಳೂರು ಆಡಳತ ಅಧಿನಿಯಮ, 2024 ಅನ್ನು ಸರ್ಕಾರವು ದಿನಾಂಕ: 15-05-2025 ರಿಂದ ಜಾರಿಗೆ ತಂದಿರುತ್ತದೆ ಎಂದಿದೆ. ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 183 ಬಿಬಿಎಸ್ 2025, ದಿನಾಂಕ:02-09- 2025ರಲ್ಲಿ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ 1) ಬೆಂಗಳೂರು ಕೇಂದ್ರ ನಗರ ಪಾಲಿಕೆ, 2) ಬೆಂಗಳೂರು ಪೂರ್ವ ನಗರ ಪಾಲಿಕೆ, 3) ಬೆಂಗಳೂರು ಪಶ್ಚಿಮ ನಗರ ಪಾಲಿಕೆ, 4) ಬೆಂಗಳೂರು ಉತ್ತರ ನಗರ ಪಾಲಿಕೆ, 5) ಬೆಂಗಳೂರು ದಕ್ಷಿಣ ನಗರ ಪಾಲಿಕೆಗಳಿಗೆ ಸಂಬಂಧಿಸಿದಂತೆ, ಸದರಿ ಕಾಯ್ದೆಯ ಪ್ರಕರಣ 29ರ ಉಪ ಪ್ರಕರಣ (1) ಮತ್ತು (3) ಗಳನ್ವಯ ವಾರ್ಡ್‌ಗಳ ಪುನರ್ ವಿಂಗಡಣೆಗಾಗಿ…

Read More

ಬೆಂಗಳೂರು: ಶಿವಮೊಗ್ಗದ ಲಕ್ಕಿಕೊಪ್ಪ ಅರಣ್ಯ ಪ್ರದೇಶದಲ್ಲಿ ಕಳ್ಳಬೇಟೆ, ಮರಗಳವು ಪ್ರಕರಣವನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಕುರಿತಂತೆ ಮೂರು ದಿನಗಳಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದಾರೆ. ಇಂದು ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಶಿವಮೊಗ್ಗ ಜಿಲ್ಲೆ, ಶಿವಮೊಗ್ಗ ತಾಲೂಕು ಲಕ್ಕಿನಕೊಪ್ಪ ಅರಣ್ಯ ಪ್ರದೇಶದಲ್ಲಿ ನಿರಂತರವಾಗಿ ಕಳ್ಳ ಬೇಟೆ ನಡೆಯುತ್ತಿದೆ, ಮರಗಳವು ಆಗುತ್ತಿದೆ ಎಂದು ಮಾಧ್ಯಮದಲ್ಲಿ ವರದಿ ಆಗಿದ್ದು, ಈ ಬಗ್ಗೆ ಸಿಸಿಎಫ್ ದರ್ಜೆಯ ಅಧಿಕಾರಿಯಿಂದ ಖುದ್ದು ಪರಿಶೀಲನೆ ನಡೆಸಿ, ಮೂರು ದಿನಗಳ ಒಳಗಾಗಿ ವರದಿ ಸಲ್ಲಿಸುವಂತೆ ದಿ.28.09.2025ರ ಟಿಪ್ಪಣಿ ಸಂಖ್ಯೆ ಅಜೀಪ/1725/2025-26ರಲ್ಲಿ ಸೂಚಿಸಿದ್ದಾರೆ. ಈ ಮಧ್ಯೆ ಲಕ್ಕಿನಕೊಪ್ಪ ಪ್ರದೇಶದಲ್ಲಿ ಕೆಲವು ಪ್ರಭಾವಿಗಳು ಅರಣ್ಯ ಭೂಮಿ ಒತ್ತುವರಿ ಮಾಡಿರುವುದಾಗಿ ಈ ಕಚೇರಿಗೆ ಸ್ಪಷ್ಟ ಮಾಹಿತಿ ಬಂದಿದ್ದು, ಕಳ್ಳಬೇಟೆ ತನಿಖೆಯ ಜೊತೆಗೆ ಒತ್ತುವರಿ ಕುರಿತಂತೆಯೂ ಸಮಗ್ರ ತನಿಖೆ ನಡೆಸಿ ಒತ್ತುವರಿ ಆಗಿದ್ದಲ್ಲಿ ಅಥವಾ ಅರಣ್ಯ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದ್ದಲ್ಲಿ ಸೂಕ್ತ ಕ್ರಮ ಜರುಗಿಸಲು ಮತ್ತು ಒತ್ತುವರಿಯ…

Read More

ಮಂಡ್ಯ: ದಸರಾ ಹೇಗೆ ವಿಶ್ವವಿಖ್ಯಾತವಾಗಿದೆ ಹಾಗೆಯೇ ಕಾವೇರಿ ಆರತಿ ವಿಶ್ವವಿಖ್ಯಾತವಾನ್ನಾಗಿಸುವುದು ನಮ್ಮ ಕನಸು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು. ಅವರು ಇಂದು ಸಾಂಕೇತಿಕ ಕಾವೇರಿ ಆರತಿ ಉದ್ಘಾಟಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಭಾರತ ದೇಶದಲ್ಲಿ ಉತ್ತರ ಭಾಗದಲ್ಲಿ ಹೇಗೆ ಗಂಗಾ ಆರತಿ ನಡೆಯುತ್ತದೆ ಹಾಗೆ ನಮ್ಮ ದಕ್ಷಿಣ ಭಾಗದಲ್ಲಿ ಕಾವೇರಿ ನಡೆಸಲು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದರು. ಕಾವೇರಿ ಆರತಿ ಯೋಜನೆಯಿಂದ ಅನೇಕ ಯುವಕರಿಗೆ ಉದ್ಯೋಗ ಅವಕಾಶ ದೊರೆಯಲಿದೆ ಮತ್ತು ಅನೇಕ ಪ್ರವಾಸಿಗರನ್ನು ಆಕರ್ಷಸಲಿದೆ. ಮುಂದಿನ ದಿನಗಳಲ್ಲಿ ಪ್ರತಿ ವರ್ಷ ಕಾವೇರಿ ನಡೆಸಲು ಕ್ರಮಗಳನ್ನು ಕೈಗೊಳ್ಳಲಾಗುವುದು. ಕಾವೇರಿ ಮಾತೆಯನ್ನು ಧಾರ್ಮಿಕವಾಗಿ ಗೌರವಸಲು ಕಾವೇರಿ ಆರತಿ ನಡೆಸಲಾಗುತ್ತಿದೆ ಎಂದು ಹೇಳಿದರು. ಮೈಸೂರಿನಿಂದ ತಮಿಳುನಾಡಿನವರೆಗೂ ಕುಡಿಯುವ ನೀರಿನಿಂದ ಹಿಡಿದು ಕೃಷಿ ಹಾಗೂ ಇತರೆ ಜೀವನೋಪಾಯಕ್ಕೆ ಅನುಕೂಲವಾಗುತ್ತಿರುವ ನಮ್ಮ ರಾಜ್ಯದ ಹೆಮ್ಮೆ ಕಾವೇರಿ ನದಿಗೆ ಆರತಿ ಸಲ್ಲಿಸಿ ಗೌರವಿಸಲಾಗುತ್ತಿದೆ ಎಂದರು. ಪ್ರಾರಂಭಿಕವಾಗಿ ಈ ಭಾರಿ ಕಾವೇರಿ ಆರತಿ ನಡೆಸಿದ್ದು ಸಮಸ್ಯೆಗಳ ಪರಿಹಾರದ…

Read More

ಬೆಂಗಳೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆ ಬೆಂಗಳೂರು ಕಂಟೋನ್ಮೆಂಟ್ ಮತ್ತು ಬೀದರ್ ನಡುವೆ ಪ್ರತಿ ದಿಕ್ಕಿನಲ್ಲಿ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಒದಗಿಸಲಿದೆ. ರೈಲು ಸಂಖ್ಯೆ 07063 ಬೀದರ್ – ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ಪ್ರೆಸ್ ರೈಲು 2025ರ ಅಕ್ಟೋಬರ್ 4ರಂದು (ಶನಿವಾರ) ಬೀದರ್ ನಿಂದ ಮಧ್ಯಾಹ್ನ 2:40ಕ್ಕೆ ಹೊರಟು, ಮರುದಿನ ಬೆಳಿಗ್ಗೆ 5:00ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ಹಿಂತಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 07064 ಬೆಂಗಳೂರು ಕಂಟೋನ್ಮೆಂಟ್ – ಬೀದರ್ ವಿಶೇಷ ಎಕ್ಸ್ಪ್ರೆಸ್ ರೈಲು 2025ರ ಅಕ್ಟೋಬರ್ 5ರಂದು (ಭಾನುವಾರ) ರಾತ್ರಿ 10:30ಕ್ಕೆ ಬೆಂಗಳೂರು ಕಂಟೋನ್ಮೆಂಟ್ ನಿಂದ ಹೊರಟು, ಮರುದಿನ ಮಧ್ಯಾಹ್ನ 2:40ಕ್ಕೆ ಬೀದರ್ ತಲುಪಲಿದೆ. ಮಾರ್ಗಮಧ್ಯೆ ರೈಲುಗಳಿಗೆ ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಯಾದಗಿರಿ, ವಾಡಿ, ಶಹಾಬಾದ್, ಕಲಬುರಗಿ, ಕಮಲಾಪುರ ಮತ್ತು ಹುಮನಾಬಾದ್ ನಿಲ್ದಾಣಗಳಲ್ಲಿ ನಿಲುಗಡೆಗಳನ್ನು ಕಲ್ಪಿಸಲಾಗಿದೆ. ಈ ವಿಶೇಷ ರೈಲು 24 ಬೋಗಿಗಳ ಸಂಯೋಜನೆಯೊಂದಿಗೆ ಓಡಲಿದೆ. ಇದರಲ್ಲಿ — 1…

Read More

ಶಿವಮೊಗ್ಗ : ರಾಷ್ಟಮಟ್ಟದ ದಸರಾ ಕುಸ್ತಿ ಪಂದ್ಯಾವಳಿ ಅಕ್ಟೋಬರ್.1 ಮತ್ತು 2ರಂದು ಸಾಗರದ ಗಾಂಧಿನಗರದ ಸಂಗೊಳ್ಳಿ ರಾಯಣ್ಣ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2 ಗಂಟೆಯಿoದ ನಡೆಯಲಿದೆ ಎಂದು ಗಾಂಧಿನಗರ ಯುವಜನ ಸಂಘದ ಅಧ್ಯಕ್ಷ ಸಂತೋಷ್  ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕರ್ನಾಟಕ ಕರ‍್ಯನಿರತ ಪತ್ರಕರ್ತರ ಭವನದಲ್ಲಿ ಮಂಗಳವಾರ ಕರೆಯಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಂಘದ ಸುವರ್ಣ ಮಹೋತ್ಸವ ಅಂಗವಾಗಿ ಬಂಗಾರದ ಬೆಡಗು ಶೀರ್ಷಿಕೆಯಡಿ ಎರಡು ದಿನಗಳ ಕುಸ್ತಿ ಪಂದ್ಯಾವಳಿ ನಡೆಯಲಿದೆ ಎಂದರು. ಕಳೆದ 49 ವರ್ಷಗಳಿಂದ ಗಾಂಧಿನಗರ ಯುವಜನ ಸಂಘ ಕಲೆ, ಸಾಹಿತ್ಯ, ಸಾಂಸ್ಕೃತಿಕ, ಜಾನಪದ ಸೇರಿ ಹತ್ತು ಹಲವು ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು ಪ್ರತಿ ವರ್ಷ ದಸರಾ ಕುಸ್ತಿ ನಡೆಸುವ ಮೂಲಕ ದೇಶಾದ್ಯಂತ ಪ್ರಸಿದ್ದಿಯನ್ನು ಪಡೆದಿದೆ. ಸಂಘವು ಸುವರ್ಣ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಎರಡು ದಿನ ವಿಶೇಷ ಕುಸ್ತಿ ಪಂದ್ಯಾವಳಿ ಹಮ್ಮಿಕೊಂಡಿದ್ದು, ಬೆಳ್ಳಿಗದೆ, ಬಂಗಾರದ ಬಳೆ, ಅಖಾಡ ಬಳೆ, ಪರ್ಸಿ ಬಳೆ ಸೇರಿ ಆಕರ್ಷಕ ನಗದು ಬಹುಮಾನ ಇರುತ್ತದೆ ಎಂದು…

Read More

ನವದೆಹಲಿ: ಬಿಡದಿ ಟೌನ್‌ ಶಿಪ್‌ ಹೆಸರಿನಲ್ಲಿ ಏನೆಲ್ಲಾ ದಂಧೆ ನಡೆಯುತ್ತಿದೆ ಎನ್ನುವುದು ಗೊತ್ತಿದೆ. ಬಡರೈತರಿಂದ ಭೂಮಿ ಕಿತ್ತುಕೊಂಡು ಬೇಕು ಬೇಕಾದವರಿಗೆ ಹಂಚಿಕೊಳ್ಳಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ನವದೆಹಲಿಯಲ್ಲಿ ಸೋಮವಾರ ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು; ಈಗಾಗಲೇ 2-3 ಸಾವಿರ ಎಕರೆ ಭೂಮಿ ಏನೇನ್ ಆಗಿದೆ ಅಂಥ ಗೊತ್ತು. ಕರ್ನಾಟಕದ ಸಂಪತ್ತು ಲೂಟಿ ಹೊಡೆಯುವುದನ್ನು ತಡೆಯಲು ಐದು ವರ್ಷ ಜನ ಅಧಿಕಾರ ಕೊಡಬೇಕು. ಆಗ ನನ್ನ ಶಕ್ತಿ ಏನೆಂದು ತೋರಿಸುತ್ತೇನೆ. ಇಲ್ಲವಾದರೆ ಈಗಿರುವ ವ್ಯವಸ್ಥೆಯಲ್ಲಿ ನಿಮ್ಮ ಕರ್ಮಗಳನ್ನು ತೊಳೆಯಲು ಸಾಧ್ಯವಿಲ್ಲ ಎಂದು ಹೇಳಿದರು. 2006 ರಲ್ಲಿ ನಾನು ಐದು ಟೌನ್ ಶಿಪ್ ಮಾಡುವ ನಿರ್ಧಾರ ಮಾಡಿದ್ದು ನಿಜ. ಬಿಡದಿಯ ಬಳಿ ಟೌನ್ ಶಿಫ್ ಮಾಡುವುದು ನನ್ನ ಕಾರ್ಯಕ್ರಮವೇ ಆಗಿತ್ತು. ಡಿಕೆಶಿ ಅವರನ್ನೇ ಕೇಳಬಯಿಸುತ್ತೇನೆ. ಆ ಯೋಜನೆ ವಿರುದ್ಧ ಕಾಂಗ್ರೆಸ್ ನಾಯಕರೇ ಆಗಿದ್ದ ಹೆಚ್.ಡಿ. ಪಾಟೀಲ್‌, ಉಗ್ರಪ್ಪ ಅವರ ನೇತೃತ್ವದಲ್ಲಿ ರಚನೆ…

Read More

ಬೆಂಗಳೂರು: ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳನ್ನು ಮರು ವಿಂಗಡಣೆ ಮಾಡಿ ಕರಡು ವಾಡ್೯ ವಾರು ಕ್ಷೇತ್ರ ಪುನರ್ ವಿಂಗಡಣೆಯ ಅಧಿಸೂಚನೆಯನ್ನು ಇಂದು ಹೊರಡಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯಪತ್ರ ಹೊರಡಿಸಲಾಗಿದ್ದು, ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 183 ಬಿಬಿಎಸ್ 2025, ದಿನಾಂಕ:02-09-2025ರಲ್ಲಿ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ 1) ಬೆಂಗಳೂರು ಕೇಂದ್ರ ನಗರ ಪಾಲಿಕೆ, 2) ಬೆಂಗಳೂರು ಪೂರ್ವ ನಗರ ಪಾಲಿಕೆ, 3) ಬೆಂಗಳೂರು ಪಶ್ಚಿಮ ನಗರ ಪಾಲಿಕೆ, 4) ಬೆಂಗಳೂರು ಉತ್ತರ ನಗರ ಪಾಲಿಕೆ, 5) ಬೆಂಗಳೂರು ದಕ್ಷಿಣ ನಗರ ಪಾಲಿಕೆಗಳಿಗೆ ಸಂಬಂಧಿಸಿದಂತೆ, ಸದರಿ ಕಾಯ್ದೆಯ ಪ್ರಕರಣ 29ರ ಉಪ ಪ್ರಕರಣ (1) ಮತ್ತು (3) ಗಳನ್ವಯ ವಾರ್ಡ್‌ಗಳ ಪುನರ್ ವಿಂಗಡಣೆಗಾಗಿ 03 ತಿಂಗಳ ಅವಧಿಗೆ ಸೀಮಿತವಾಗಿ, ಮುಖ್ಯ ಆಯುಕ್ತರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ ವಾರ್ಡ್‌ಗಳ ಪುನರ್ ವಿಂಗಡಣಾ ಆಯೋಗವನ್ನು ರಚಿಸಲಾಗಿತ್ತು. ಹಾಗೂ ಸರ್ಕಾರದ ಆದೇಶ ಸಂಖ್ಯೆ: ನಅಇ…

Read More

ಬೆಂಗಳೂರು : ವಿಲಾಸಿ ಸೀರೆಗಳಿಗೆ ಹೆಸರುವಾಸಿಯಾದ ವಿಆರ್‌ಕೆ ಹೆರಿಟೇಜ್ ನಿಂದ ಇದೀಗ “ಥ್ರೆಡ್ಸ್ ಆಫ್ ಹೆರಿಟೇಜ್” ಆಯೋಜಿಸಲಾಗಿದೆ. ಇದು ಭಾರತೀಯ ಕರಕುಶಲ ಮತ್ತು ಜವಳಿ ಸಂಪ್ರದಾಯದ ಕಲೆಯ ಎಕ್ಸ್ ಕ್ಲೂಸಿವ್ ಆದಂಥ ಪ್ರದರ್ಶನವಾಗಿದೆ. ಒಟ್ಟಾರೆಯಾಗಿ ಈ ಪ್ರದರ್ಶನದಲ್ಲಿ ದೇಶದಾದ್ಯಂತದ ಒಂಬತ್ತು ವಿಶಿಷ್ಟ ಸೀರೆ ನೇಯ್ಗೆಗಳನ್ನು ಒಂದೆಡೆ ಕಲೆ ಹಾಕಲಾಗಿದೆ. ಅದರಲ್ಲಿ ಕಾಂಜೀವರಂ, ಬನಾರಸಿ, ಗದ್ವಾಲ್, ಪೈಥಾಣಿ, ಪರಾಣ್ ಪಠೋಲ, ಝರಿ ಕೋಟಾ, ಕಲಾಂಕರಿ, ಮೈಸೂರು ರೇಷ್ಮೆ ಹಾಗೂ ಬಾಂಧನಿ ಒಳಗೊಂಡಿದೆ. ಇದರಲ್ಲಿ ಪ್ರತಿಯೊಂದು ಸಹ ಭಾರತದ ಸಾಂಸ್ಕೃತಿಕ ಶ್ರೀಮಂತಿಕೆ ಹಾಗೂ ಕುಸುರಿಗಾರಿಕೆಯ ಗಾಥೆಯನ್ನು ಹೇಳುವ ರೀತಿಯಲ್ಲಿ ಇದೆ. ಈ ಪ್ರದರ್ಶನವನ್ನು ಉದ್ಘಾಟಿಸಿದವರು ಅದ್ಭುತ ನೇಯ್ಗೆಗೆ ಹೆಸರಾದ- ಗುಜರಾತ್ ನ ಅಹಮದಾಬಾದ್ ನವರಾದ ಪ್ರವೀಣ್ ಭಾಯ್ ಸಿ ಪಠೋಲ್ ವಾಲಾ. ಪರಂಪರೆಯ ಮಾತಿನ ಮೂಲಕವಾಗಿ ಅವರು ಪ್ರೇಕ್ಷಕರನ್ನು ಆಕರ್ಷಿಸಿದರು. ತುಂಬ ಒಳನೋಟಗಳನ್ನು ಹೊಂದಿದ್ದಂಥ ಸೆಷನ್ ಅವರದಾಗಿತ್ತು. ಅದರಲ್ಲಿ ಝರಿ ಕೋಟಾದ ನೇಯ್ಗೆಯ ಸೂಕ್ಷ್ಮ ತಂತ್ರಗಳು ಹಾಗೂ ಅದರ ಪರಂಪರೆಯ ಬಗ್ಗೆ ತುಂಬ ಚೆನ್ನಾಗಿ…

Read More

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮೊದಲು ಪರಿಹಾರ ಘೋಷಣೆ ಮಾಡಿ ನಂತರ ವೈಮಾನಿಕ ಸಮೀಕ್ಷೆ ಮಾಡಬೇಕಿತ್ತು. ಪರಿಹಾರವನ್ನೇ ತಿಳಿಸದೆ ಕೇವಲ ಸಮೀಕ್ಷೆ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ದೂರಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆಗಿರುವ ಪ್ರವಾಹದ ಸ್ಥಿತಿ ವೀಕ್ಷಿಸಲು ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ಮಾಡುತ್ತಿದ್ದಾರೆ. ಎಲ್ಲ ರಸ್ತೆಗಳಲ್ಲಿ ಗುಂಡಿ ಇರುವುದರಿಂದ ಹಾಗೂ ರಸ್ತೆ ತಡೆದು ಜನರು ಪ್ರತಿಭಟಿಸುವುದರಿಂದ ಭಯಗೊಂಡ ಮುಖ್ಯಮಂತ್ರಿ ಹೆಲಿಕಾಪ್ಟರ್‌ನಲ್ಲಿ ವೀಕ್ಷಣೆ ಮಾಡುತ್ತಿದ್ದಾರೆ. ಜೋಳ ತೊಗರಿ ಸೇರಿದಂತೆ ಪ್ರತಿ ಬೆಳೆಗಳ ಹಾನಿ, ಮನೆ ಹಾನಿ, ಶಾಲೆ ಹಾನಿಗೆ ಎಷ್ಟು ಪರಿಹಾರ ನೀಡಲಾಗುತ್ತದೆ ಎಂದು ಸರ್ಕಾರ ಘೋಷಣೆ ಮಾಡಬೇಕಿತ್ತು. ಆದರೆ ಈವರೆಗೆ ಸರ್ಕಾರ ಆದೇಶ ಮಾಡಿಲ್ಲ. ಒಂದು ಕಡೆ ಖಜಾನೆ ಖಾಲಿಯಾಗಿದೆ. ಮತ್ತೊಂದು ಕಡೆ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲು ಸಿದ್ಧತೆ ನಡೆದಿದೆ ಎಂದು ದೂರಿದರು. ಮುಖ್ಯಮಂತ್ರಿಗಳು ಸಚಿವರ ತಂಡ ರಚಿಸಬೇಕಿತ್ತು. ಅಧಿಕಾರಿಗಳ ಸಭೆ ಕರೆದು ನೋಡಲ್‌ ಅಧಿಕಾರಿಗಳನ್ನು ನಿಯೋಜಿಸಬೇಕಿತ್ತು. ಪುನರ್ವಸತಿ ಕೇಂದ್ರಗಳಲ್ಲಿ ಸರಿಯಾಗಿ ಆಹಾರ…

Read More

ಮಂಡ್ಯ: ದೀಪಾವಳಿ ಹಬ್ಬದ ಅಂಗವಾಗಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಜಿಲ್ಲೆಯಲ್ಲಿ ಅವಕಾಶ ನೀಡಲಾಗಿದೆ. ಹಸಿರು ಪಟಾಕಿ ಹೊರತು ಪಡಿಸಿ ಬೇರೆ ಪಟಾಕಿ ಮಾರಾಟ ಮಾಡಿದರೆ ಶಿಸ್ತುಬದ್ಧ ಕ್ರಮ ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು. ಇಂದು (ಸೆ.30) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪಟಾಕಿ ಮಾರಾಟ ಮಾಡಲು ತಾತ್ಕಾಲಿಕ ಪರವಾನಿಗೆ ನೀಡುವ ಸಂಬಂಧ ಆಯೋಜಿಸಲಾಗಿದ್ದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಕ್ಟೋಬರ್ 18 ರಿಂದ 23 ರವರೆಗೆ ಮಾತ್ರ ಪಟಾಕಿ ಮಾರಾಟಗಾರರಿಗೆ ತಾತ್ಕಾಲಿಕ ಪರವಾನಗಿ ನೀಡಲಾಗುವುದು. ಜಿಲ್ಲಾಡಳಿತ ಹಾಗೂ ತಾಲ್ಲೂಕು‌ ಆಡಳಿತ ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ ಮಾಡಲಿದೆ. ನಿಗಧಿಪಡಿಸಿದ ಸ್ಥಳದಲ್ಲಿ ಮಾತ್ರ ಪಟಾಕಿ‌ ಅಂಗಡಿಗಳನ್ನು ತೆರೆಯಬೇಕು ಎಂದು ಹೇಳಿದರು. ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗುವುದು, ತಹಶೀಲ್ದಾರ್ ನೇತೃತ್ವದ ಸಮಿತಿಯು ಆಯಾ ತಾಲೂಕು ಮಟ್ಟದಲ್ಲಿ ಪಟಾಕಿ ಮಾರಾಟಗಾರರಿಗೆ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಸಂದರ್ಭದಲ್ಲಿ ಸೂಕ್ತ ಜಾಗವನ್ನು ಗುರುತಿಸಿ ಅನುಮತಿ…

Read More