Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ದೊಡ್ಡ ಹೋರ್ಡಿಂಗ್ಗಳನ್ನು ಹಾಕುವ ಮೂಲಕ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಎಎಪಿ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಇಲ್ಲಿನ ನ್ಯಾಯಾಲಯ ಮಂಗಳವಾರ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದೆ. 156(3) ಸಿಆರ್ಪಿಸಿ ಅಡಿಯಲ್ಲಿ ಅರ್ಜಿಯನ್ನು ಅನುಮತಿಸಲು ಅರ್ಹವಾಗಿದೆ ಎಂದು ಈ ನ್ಯಾಯಾಲಯವು ಪರಿಗಣಿಸುತ್ತದೆ. ಅದರಂತೆ, ದೆಹಲಿ ಆಸ್ತಿ ವಿರೂಪಗೊಳಿಸುವಿಕೆ ತಡೆ ಕಾಯ್ದೆ, 2007 ರ ಸೆಕ್ಷನ್ 3 ರ ಅಡಿಯಲ್ಲಿ ಮತ್ತು ಪ್ರಕರಣದ ಸಂಗತಿಗಳಿಂದ ಎಸಗಲಾಗಿದೆ ಎಂದು ಕಂಡುಬರುವ ಯಾವುದೇ ಅಪರಾಧದ ಅಡಿಯಲ್ಲಿ ತಕ್ಷಣವೇ ಎಫ್ಐಆರ್ ದಾಖಲಿಸಲು ಸಂಬಂಧಪಟ್ಟ ಎಸ್ಎಚ್ಒಗೆ ನಿರ್ದೇಶಿಸಲಾಗಿದೆ ಎಂದು ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನೇಹಾ ಮಿತ್ತಲ್ ಹೇಳಿದರು. 2019 ರಲ್ಲಿ ಸಲ್ಲಿಸಲಾದ ದೂರಿನಲ್ಲಿ ಕೇಜ್ರಿವಾಲ್, ಆಗಿನ ಮಟಿಯಾಲ ಶಾಸಕ ಗುಲಾಬ್ ಸಿಂಗ್ (ಎಎಪಿ) ಮತ್ತು ಆಗಿನ ದ್ವಾರಕಾ ಎ ವಾರ್ಡ್ ಕೌನ್ಸಿಲರ್ ನಿತಿಕಾ ಶರ್ಮಾ ಈ ಪ್ರದೇಶದ ವಿವಿಧ ಸ್ಥಳಗಳಲ್ಲಿ ದೊಡ್ಡ…
ಬೆಂಗಳೂರು: ಸರ್ಕಾರಕ್ಕೆ 11 ಕೋಟಿ ರೂ.ಗೂ ಹೆಚ್ಚು ನಷ್ಟ ಉಂಟು ಮಾಡಿದ ಆರೋಪದ ಮೇಲೆ ಬೆಂಗಳೂರು ಮೂಲದ ಸಬ್ ರಿಜಿಸ್ಟ್ರಾರ್ ಒಬ್ಬರನ್ನು ಮುದ್ರಾಂಕ ಮತ್ತು ನೋಂದಣಿ ಇಲಾಖೆ ಕಡ್ಡಾಯ ನಿವೃತ್ತಿಯ ಮೇಲೆ ಕಳುಹಿಸಿದೆ. 100 ಎಕರೆಗಿಂತ ಹೆಚ್ಚಿನ ಆಸ್ತಿಯನ್ನು ನೋಂದಣಿ ಮಾಡುವಾಗ ಇಲಾಖೆಗೆ ಭಾರಿ ನಷ್ಟವನ್ನುಂಟು ಮಾಡಿದ ಆರೋಪದ ಮೇಲೆ ರಾಘವೇಂದ್ರ ಒಡೆಯರ್ ತಪ್ಪಿತಸ್ಥರು ಎಂದು ಇಲಾಖಾ ತನಿಖೆಯಲ್ಲಿ ಕಂಡುಬಂದ ನಂತರ ಮಾರ್ಚ್ 6 ರಂದು ಈ ಆದೇಶ ಹೊರಡಿಸಲಾಗಿದೆ. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಕೆಲಸ ಮಾಡಿದ ನಂತರ ಒಡೆಯರ್ ಕಂದಾಯ ಇಲಾಖೆಗೆ ಸೇರಿ ಕೇವಲ ಎರಡು ವರ್ಷಗಳಾಗಿವೆ ಎಂದು ಮೂಲಗಳು ತಿಳಿಸಿವೆ. ‘ಕಾಚರನಹಳ್ಳಿ ರಿಜಿಸ್ಟ್ರಾರ್ ಕಚೇರಿಯಲ್ಲಿ (ಮಾನ್ಯತಾ ಟೆಕ್ ಪಾರ್ಕ್ ಬಳಿ) ಸಬ್ ರಿಜಿಸ್ಟ್ರಾರ್ ಆಗಿ ಕೆಲಸ ಮಾಡುತ್ತಿದ್ದಾಗ ಒಡೆಯರ್ ಅವರು ಅನುಭವಿಸಿದ ನಿಖರ ನಷ್ಟ 11,15,80,000 ರೂ. ಆಸ್ತಿ ನೋಂದಣಿಗೆ ಬಂದಾಗ ಕಡ್ಡಾಯವಾದ ಸರ್ಕಾರಕ್ಕೆ ಸ್ಟ್ಯಾಂಪ್ ಡ್ಯೂಟಿ ಸಂಗ್ರಹಿಸದೆ ಅವರು ಇದನ್ನು…
ನವದೆಹಲಿ: ಭಾರತದಲ್ಲಿ ಸ್ಟಾರ್ಲಿಂಕ್ನ ಹೈ-ಸ್ಪೀಡ್ ಇಂಟರ್ನೆಟ್ ಸೇವೆಗಳನ್ನು ಗ್ರಾಹಕರಿಗೆ ತಲುಪಿಸಲು ಭಾರ್ತಿ ಏರ್ಟೆಲ್ ಸ್ಪೇಸ್ಎಕ್ಸ್ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಇದು ಮೊದಲ ಒಪ್ಪಂದವಾಗಿದೆ. ಇದು ಸ್ಪೇಸ್ಎಕ್ಸ್ ಭಾರತದಲ್ಲಿ ಸ್ಟಾರ್ಲಿಂಕ್ ಅನ್ನು ಮಾರಾಟ ಮಾಡಲು ಅಧಿಕಾರವನ್ನು ಪಡೆಯುವುದಕ್ಕೆ ಒಳಪಟ್ಟಿರುತ್ತದೆ. ಏರ್ಟೆಲ್ ಮತ್ತು ಸ್ಪೇಸ್ಎಕ್ಸ್ ಎರಡೂ ಕಂಪನಿಗಳು ವ್ಯವಹಾರ ಕೊಡುಗೆಗಳನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಮತ್ತಷ್ಟು ಅನ್ವೇಷಿಸಲು ಈ ಒಪ್ಪಂದವು ವೇದಿಕೆಯನ್ನು ಸಿದ್ಧಪಡಿಸುತ್ತದೆ. “ಭಾರತದಲ್ಲಿ ಏರ್ಟೆಲ್ ಗ್ರಾಹಕರಿಗೆ ಸ್ಟಾರ್ಲಿಂಕ್ ನೀಡಲು ಸ್ಪೇಸ್ಎಕ್ಸ್ನೊಂದಿಗೆ ಕೆಲಸ ಮಾಡುವುದು ಮಹತ್ವದ ಮೈಲಿಗಲ್ಲು ಮತ್ತು ಮುಂದಿನ ಪೀಳಿಗೆಯ ಉಪಗ್ರಹ ಸಂಪರ್ಕಕ್ಕೆ ನಮ್ಮ ಬದ್ಧತೆಯನ್ನು ಮತ್ತಷ್ಟು ಪ್ರದರ್ಶಿಸುತ್ತದೆ” ಎಂದು ಭಾರ್ತಿ ಏರ್ಟೆಲ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಉಪಾಧ್ಯಕ್ಷ ಗೋಪಾಲ್ ವಿಟ್ಟಲ್ ಹೇಳಿದರು. https://kannadanewsnow.com/kannada/fire-breaks-out-at-shop-on-bh-road-in-sagar/ https://kannadanewsnow.com/kannada/bengaluru-international-airport-state-government-orders-probe-into-breach-of-protocol/
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಅವರನ್ನು ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಅವರು ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ನಾಳೆಗೆ ಮುಂದೂಡಿಕೆ ಮಾಡಲಾಗಿದೆ. ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ ಸಂಬಂಧ ನಟಿ ರನ್ಯಾ ರಾವ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಕೋರ್ಟ್ ನಡೆಸಿತು. ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ಕೋರ್ಟ್, ನಾಳೆಗೆ ನಟಿ ರನ್ಯಾ ರಾವ್ ಜಾಮೀನು ಅರ್ಜಿಯನ್ನು ಮುಂದೂಡಿಕೆ ಮಾಡಲಾಗಿದೆ. ನಾಳೆ ನಟಿ ರನ್ಯಾ ರಾವ್ ಅವರಿಗೆ ಜಾಮೀನು ನೀಡುತ್ತಾ ಎಂಬುದನ್ನು ಕಾದು ನೋಡಬೇಕಿದೆ. https://kannadanewsnow.com/kannada/fire-breaks-out-at-shop-on-bh-road-in-sagar/ https://kannadanewsnow.com/kannada/bengaluru-international-airport-state-government-orders-probe-into-breach-of-protocol/
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಬಿಹೆಚ್ ರಸ್ತೆಯಲ್ಲಿನ ಅಂಗಡಿಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಕ್ಷಣಾರ್ಧದಲ್ಲಿ ಇಡೀ ಮಳಿಗೆಗೆ ಆವರಿಸಿದ್ದರಿಂದಾಗಿ ಧಗಧಗಿಸಿ ಹೊತ್ತಿ ಉರಿದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಬಿಹೆಚ್ ರಸ್ತೆಯ ಕೋಯಾ ಶಾಲೆಯ ಎದುರು ಭಾಗದ ಕಾಂಪ್ಲೆಕ್ಸನಲ್ಲೀ ಬೆಂಕಿ ದುರಂತ ನಡೆದಿದೆ. ಬೆಂಕಿಗೆ ಕಾರಣ ಆಯಿಲ್ ಶೇಖರಣ ಎಂಬುದಾಗಿ ಹೇಳಲಾಗುತ್ತಿದೆ. ಇದಷ್ಟೇ ಅಲ್ಲದೇ ಅಂಗಡಿಯಲ್ಲಿ ರೆಫ್ರಿಜರೇಟರ್, ವಾಷಿಂಗ್ ಮಿಷಿನ್ ರಿಪೇರಿ ಮಾಡಿ, ಅಂಗಡಿಯ ಮಹಡಿ ಮೇಲೆ ಶೇಖರಣೆ ಮಾಡಲಾಗಿತ್ತು. ಇದೇ ಬಿಲ್ಡಿಂಗ್ ನಲ್ಲಿ ವೇಲ್ಡಿಂಗ್ ಮಾಡುತ್ತಿದ್ದರಿಂದ ಕಿಡಿ ತಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಂಡಿರುವಂತ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ನಿಯಂತ್ರಣಕ್ಕೆ ತಂದಿದ್ದಾರೆ. ಸದ್ಯ ಅಗ್ನಿಶಾಮಕ ಸಿಬ್ಬಂದಿಯ ಹರಹಾಸದ ನಂತ್ರ ಬೆಂಕಿಯ ಕೆನ್ನಾಲಿಗೆ ನಿಯಂತ್ರಣಕ್ಕೆ ಬಂದಿದೆ. ಬೆಂಕಿಗೆ ನಿಖರ ಕಾರಣ ಏನೆಂದು ತನಿಖೆಯ ನಂತ್ರ ತಿಳಿಯಬೇಕಿದೆ. ವರದಿ: ವಸಂತ ಬಿ ಈಶ್ವರಗೆರೆ https://kannadanewsnow.com/kannada/crucial-state-cabinet-meeting-scheduled-for-march-13/ https://kannadanewsnow.com/kannada/attention-public-these-10-blood-tests-must-be-done-at-least-once-a-year/ https://kannadanewsnow.com/kannada/good-news-chinese-scientists-discover-vaccine-for-heart-attack-stroke-heart-attack-stroke-vaccine/
ಬೆಂಗಳೂರು: ರಾಜ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡುವ ಸಂಬಂಧ ಮಾರ್ಚ್.13ರಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿ ಪಡಿಸಲಾಗಿದೆ. ದಿನಾಂಕ 13-03-2025ರಂದು ಗುರುವಾರ ಸಂಜೆ 7 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 6ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ನಿಗದಿ ಪಡಿಸಲಾಗಿದೆ. ಮಾರ್ಚ್.13ರ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡಲಿದ್ದಾರೆ. ಅಂದು ಸಿಎಂ ಸಿದ್ಧರಾಮಯ್ಯ ಅವರು ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯೂ ಅಸ್ತು ಎನ್ನಲಿದ್ದಾರೆ. https://kannadanewsnow.com/kannada/special-programme-on-youtube-to-boost-morale-on-march-15/ https://kannadanewsnow.com/kannada/bengaluru-international-airport-state-government-orders-probe-into-breach-of-protocol/
ಪಾಕಿಸ್ತಾನದಲ್ಲಿ ಜಾಫರ್ ಎಕ್ಸ್ಪ್ರೆಸ್ ರೈಲನ್ನು ಅಪಹರಿಸಿದ ಬಲೂಚ್ ಲಿಬರೇಶನ್ ಆರ್ಮಿ | Jaffar Express Train Hijack
ನವದೆಹಲಿ: ಜಾಫರ್ ಎಕ್ಸ್ ಪ್ರೆಸ್ ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರನ್ನೂ ಒತ್ತೆಯಾಳುಗಳನ್ನಾಗಿ ತೆಗೆದುಕೊಂಡಿರುವುದಾಗಿ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ ಹೇಳಿಕೊಂಡಿದೆ. ಕ್ವೆಟ್ಟಾದಿಂದ ಬಲೂಚಿಸ್ತಾನದ ಪೇಶಾವರಕ್ಕೆ ಪ್ರಯಾಣಿಸುತ್ತಿದ್ದ ಜಾಫರ್ ಎಕ್ಸ್ಪ್ರೆಸ್ ರೈಲಿಗೆ ಬಿಎಲ್ಎ ಭಾರಿ ಬೆಂಕಿ ಹಚ್ಚಿದೆ. ರೈಲಿನಲ್ಲಿ 400ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ. ಪಾಕಿಸ್ತಾನದ ಭದ್ರತಾ ಪಡೆಗಳು ಈ ಪ್ರದೇಶದತ್ತ ಸಾಗುತ್ತಿವೆ. ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಮಂಗಳವಾರ ಪ್ರತ್ಯೇಕತಾವಾದಿ ಭಯೋತ್ಪಾದಕರು ಪ್ಯಾಸೆಂಜರ್ ರೈಲಿನ ಮೇಲೆ ದಾಳಿ ನಡೆಸಿದ್ದು, ರೈಲು ಚಾಲಕ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮತ್ತು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಈ ರೈಲು ಬಲೂಚಿಸ್ತಾನ ಪ್ರಾಂತ್ಯದ ಕ್ವೆಟ್ಟಾದಿಂದ ಖೈಬರ್ ಪಖ್ತುನ್ಖ್ವಾದ ಪೇಶಾವರಕ್ಕೆ ತೆರಳುತ್ತಿತ್ತು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್ಎ) ಎಂಬ ಉಗ್ರಗಾಮಿ ಪ್ರತ್ಯೇಕತಾವಾದಿ ಗುಂಪು ಈ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಭದ್ರತಾ ಪಡೆಗಳು ಸೇರಿದಂತೆ ರೈಲಿನಿಂದ ಒತ್ತೆಯಾಳುಗಳನ್ನು ತೆಗೆದುಕೊಂಡಿದೆ ಎಂದು ಹೇಳಿದೆ. https://kannadanewsnow.com/kannada/cid-dysp-arrested-in-lawyer-jeevas-suicide-case/ https://kannadanewsnow.com/kannada/bengaluru-international-airport-state-government-orders-probe-into-breach-of-protocol/
ಬೆಂಗಳೂರು: ನಟಿ ರನ್ಯಾ ರಾವ್ ಸ್ಮಗ್ಲಿಂಗ್ ಕೇಸ್ ಪ್ರಕರಣದ ನಂತ್ರ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ದುರ್ಬಳಕೆಯ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದಿಂದ ತನಿಖೆಗೆ ಆದೇಶಿಸಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಕಳೆದ ವಾರದಿಂದ ಮಾಧ್ಯಮಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ವರದಿಯಾಗಿರುವಂತೆ ರನ್ಯರಾವ್ ಎಂಬ ಚಿತ್ರನಟಿಯವರು ಚಿನ್ನದ ಗಟ್ಟಿಗಳನ್ನು ಅಕ್ರಮವಾಗಿ ದುಬೈನಿಂದ ಬೆಂಗಳೂರಿಗೆ ಸಾಗಣೆಮಾಡುತ್ತಿದ್ದ ಸಮಯದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದು, ಪ್ರಕರಣದ ವಿಚಾರಣೆಯ ಸಮಯದಲ್ಲಿ ಬಂಧಿತ ಶ್ರೀಮತಿ ರನ್ಯರಾವ್ ಇವರು ಶಿಷ್ಟಾಚಾರ ಸೌಲಭ್ಯಗಳನ್ನು ದುರ್ಬಳಕೆ ಮಾಡಿಕೊಂಡು, ಈ ಅಕ್ರಮವನ್ನು ಮಾಡಿರುವ ಬಗ್ಗೆ ವರದಿಯಾಗಿರುತ್ತದೆ. ಅಲ್ಲದೇ, ಉನ್ನತ ಅಧಿಕಾರಿಗಳಿಗೆ ವಿಮಾನ ನಿಲ್ದಾಣಗಳಲ್ಲಿ ನೀಡಲಾಗುವ ಶಿಷ್ಟಾಚಾರಗಳನ್ನು ತಮ್ಮ ತಂದೆಯವರ ರಾಜ್ಯ ಐಪಿಎಸ್ ವೃಂದದ ಪೊಲೀಸ್ ಮಹಾನಿರ್ದೇಶಕರು, ಕರ್ನಾಟಕ ರಾಜ್ಯ ಪೊಲೀಸ್ ಗೃಹ ನಿರ್ಮಾಣ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಕೆ. ರಾಮಚಂದ್ರರಾವ್,…
ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದ ವಿವಿಧ ಪ್ರವಾಸಿ ತಾಣಗಳಲ್ಲಿ ನಡೆಸಲಾಗುತ್ತಿರುವ ರೆಸಾರ್ಟ್, ಹೋಮ್ ಸ್ಟೇಗಳಲ್ಲಿ ಬರುವ ಪ್ರವಾಸಿಗರ ಭದ್ರತೆ ಮತ್ತು ಸುರಕ್ಷತೆಗೆ ಮಹತ್ವದ ಕ್ರಮ ಕೈಗೊಂಡಿದೆ. ಇದಕ್ಕಾಗಿ ರಾಜ್ಯ ಸರ್ಕಾರದಿಂದ ಕೆಲ ಮಾರ್ಗಸೂಚಿ ಕ್ರಮಗಳನ್ನು ಹೊರಡಿಸಿದೆ. ಅವುಗಳನ್ನು ಪಾಲನೆ ಮಾಡುವಂತೆಯೂ ಖಡಕ್ ಸೂಚನೆ ನೀಡಿದೆ. ಈ ಸಂಬಂಧ ಒಳಾಡಳಿತ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 06.03.2025 ರಂದು ಗಂಗಾವತಿ ತಾಲ್ಲೂಕಿನ ಆನೆಗುಂದಿ ಗ್ರಾಮದಲ್ಲಿ ಹಾರ್ಟ್ ಲ್ಯಾಂಡ್ ಹೋಂ ಸ್ಟೇನಲ್ಲಿ ವಾಸವಿದ್ದ ಎರಡು ವಿದೇಶಿಯರು, ಎರಡು ಭಾರತೀಯರನ್ನು ಹೋಮ್ ಮಾಲೀಕರು ರಾತ್ರಿ ಭೋಜನದ ನಂತರ ನಿರ್ಜನ ಪ್ರದೇಶದಲ್ಲಿ ನಕ್ಷತ್ರ ವೀಕ್ಷಣೆಗೆಂದು ಕರೆದುಕೊಂಡು ಹೋದ ಸಂದರ್ಭದಲ್ಲಿ ಮೂರು ದುಷ್ಕರ್ಮಿಗಳು ಪುರುಷ ಪವಾಸಿಗರೊಂದಿಗೆ ವಾಗ್ವಾದ ಮಾಡಿ ಅವರುಗಳನ್ನು ಸಮೀಪದಲ್ಲಿಯೇ ತುಂಗಾಭದ್ರ ಎಡದಂಡೆ ಕಾಲುವೆಗೆ ನೂಕಿರುತ್ತಾರೆಂದು ವರದಿ ಮಾಡಿರುತ್ತಾರೆ. ಮುಂದುವರೆದು, ಹೋಮ್ಸ್ಯೆ ಮಾಲೀಕಳು ಹಾಗೂ ಮತ್ತೊಬ್ಬ ಇಸ್ರೇಲ್ ಪ್ರಜೆಯ ಮೇಲೆ ಹಲ್ಲೆ ಮಾಡಿ ಅತ್ಯಾಚಾರ ಎಸಗಿರುವುದಾಗಿ ತಿಳಿಸಿರುತ್ತಾರೆ. ಕಾಲುವೆಯ ನೀರಿನಲ್ಲಿ ಕೊಚ್ಚಿ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕು ಕಚೇರಿಯಾದಂತ ತಾಲ್ಲೂಕು ಆಡಳಿತ ಸೌಧದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಸಾಗರ ಪಟ್ಟದ ಸಮೀಪದ ಸರ್ವೆ ನಂ.12ರ ಸರ್ಕಾರಿ ಭೂಮಿಯನ್ನೇ ಭೂಗಳ್ಳರಿಗೆ ನಕಲಿ ದಾಖಲೆ ಸೃಷ್ಠಿಸಿ ಸಂಬಂಧ ಪಿನ್ ಟು ಪಿನ್ ದಾಖಲೆಗಳನ್ನು ಪರಿಶೀಲಿಸಿರುವುದಾಗಿ ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಸಮೀಪದಲ್ಲೇ ಸರ್ವೇ ನಂ.12ರಲ್ಲಿ ನಕಲಿ ದಾಖಲೆ ಸೃಷ್ಠಿಸಿ ಸರ್ಕಾರಿ ಭೂಮಿ ಕಬಳಿಕೆ ಬಗ್ಗೆ ನಿಮ್ಮ ಕನ್ನಡ ನ್ಯೂಸ್ ನೌನಲ್ಲಿ ರಾಜ್ಯದಲ್ಲೊಂದು ಬಹುದೊಡ್ಡ ಹಗರಣ: ಸರ್ಕಾರಿ ಭೂಮಿಗೆ ಸರ್ಕಾರಿ ಅಧಿಕಾರಿಗಳೇ ನಕಲಿ ದಾಖಲೆ ಸೃಷ್ಠಿಸಿ ಕಬಳಿಕೆಗೆ ಯತ್ನ ಎಂಬುದಾಗಿ ಸುದ್ದಿಯನ್ನು ಪ್ರಕಟಿಸಲಾಗಿತ್ತು. ಇದಕ್ಕೂ ಮೊದಲು ಹಿರಿಯ ಪತ್ರಕರ್ತ ಮಹೇಶ್ ಹೆಗಡಿ ಅವರು ಸಂಯುಕ್ತ ಕರ್ನಾಟಕ ಹಾಗೂ ಜನ ಹೋರಾಟ ಪತ್ರಿಕೆಯಲ್ಲಿ ವಿಸ್ತೃತವಾದಂತ ವರದಿಯನ್ನು ಪ್ರಕಟಿಸಿದ್ದರು. ಈ ಸುದ್ದಿಯ ಫಲಶೃತಿ ಎನ್ನುವಂತೆ ಇಂದು ದಿಢೀರ್ ಶಿವಮೊಗ್ಗ ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ಅವರ ನೇತೃತ್ವದಲ್ಲಿ ಸಾಗರ ತಾಲ್ಲೂಕು ಕಚೇರಿಯ ಮೇಲೆ ದಾಳಿಯನ್ನು ನಡೆಸಲಾಗಿದೆ.…













