Subscribe to Updates
Get the latest creative news from FooBar about art, design and business.
Author: kannadanewsnow09
ದಾವಣಗೆರೆ : ಜಾತಿ ವ್ಯವಸ್ಥೆ ಬೇರೂರಲು ವೈಚಾರಿಕ ಶಿಕ್ಷಣದ ಕೊರತೆ ಕಾರಣ. ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನ ಸ್ಥಗಿತಗೊಳಿಸೋದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಜಗದ್ಗುರು ಶ್ರೀ ಡಾ: ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳ ಪಟ್ಟಾಭಿಷೇಕ ರಜತ ಮಹೋತ್ಸವ ಮತ್ತು ರಾಷ್ಟ್ರೀಯ ಭಗೀರಥ ಮಹೋತ್ಸವ ಹಾಗೂ ಉಪ್ಪಾರರ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಚಲನರಹಿತವಾದ ಜಾತಿ ವ್ಯವಸ್ಥೆ ಬಲವಾಗಿ ಬೇರು ಬಿಟ್ಟಿರುವುದರಿಂದ ಬದಲಾವಣೆ ತರಲು ಇಂದಿಗೂ ಸಾಧ್ಯವಾಗಿಲ್ಲ. ದಾರ್ಶನಿಕರ ಪ್ರಯತ್ನದಿಂದಾಗಿ ಸ್ವಲ್ಪ ಸರಿಹೋಗುವ ಜಾತಿ ವ್ಯವಸ್ಥೆ ಮತ್ತೆ ಯಥಾಸ್ಥಿತಿಗೆ ಮರಳುತ್ತದೆ. ಬಸವಾದಿ ಶರಣರು’ ಇವನಾರವ, ಎನ್ನದೇ ಇವ ನಮ್ಮವ ಎಂದು ಭಾವಿಸುವಂತೆ ಹೇಳಿದ್ದರು ಎಂದರು. ಆರ್ಥಿಕ, ಸಮಾಜಿಕ ಅಸಮಾನತೆ ನಮ್ಮ ದೇಶದ ಜಾತಿ ವ್ಯವಸ್ಥೆ ಕಾರಣ ಉಪ್ಪಾರರು ಆರ್ಥಿಕವಾಗಿ , ಸಮಾಜಿಕವಾಗಿ ಹಿಂದುಳಿದಿರುವ ಸಮಾಜ. ಉಪ್ಪು ತಯಾರಿಸಿ ಮಾರಾಟ ಮಾಡುವ ವೃತ್ತಿಯಾಗಿದ್ದು, ಕೈಗಾರೀಕರಣವಾದ ನಂತರ ಅವರ ವೃತ್ತಿ ಬಿಡಬೇಕಾದ ಪರಿಸ್ಥಿತಿ ಉಂಟಾಗಿದೆ. ಇವರ ಕಸುಬಿಗೆ ಧಕ್ಕೆಯುಂಟಾದ ಮೇಲೆ ಸಮಾಜ ಆರ್ಥಿಕವಾಗಿ,…
ದಾವಣಗೆರೆ : ನವದೆಹಲಿಯಲ್ಲಿ ತೆರಿಗೆ ಹಂಚಿಕೆಯ ಬಗ್ಗೆ ರಾಜ್ಯದ ಪ್ರತಿಭಟನೆಯನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪವರು ಟೀಕಿಸಿರುವುದಕ್ಕೆ ಪ್ರತಿಕ್ರಯಿಸಿ, ರಾಜ್ಯಕ್ಕೆ ಕೇಂದ್ರದ ಅನ್ಯಾಯ ವಿರೋಧಿಸುವುದು ತಪ್ಪೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅಲ್ಲದೇ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ ಆಗಿರೋದು ಸತ್ಯ. ಒಂದು ವೇಳೆ ಸುಳ್ಳು ಅಂತ ಸಾಭೀತು ಪಡಿಸಿದ್ರೇ, ತಾನು ರಾಜಕೀಯ ನಿವೃತ್ತಿ ಆಗೋದಾಗಿಯೂ ಸವಾಲು ಹಾಕಿದರು. ಅವರು ಇಂದು ಹರಿಹರದಲ್ಲಿ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ಮುಖ್ಯಮಂತ್ರಿಯಾಗಿದ್ದಾಗ ಯಡಿಯೂರಪ್ಪನವರು ಕೇಂದ್ರದ ವಿರುದ್ಧ ಧ್ವನಿ ಎತ್ತಲಿಲ್ಲ. ಕರ್ನಾಟಕದಿಂದ ನೀಡಲಾಗಿರುವ ತೆರಿಗೆಯನ್ನು ನಮಗೆ ನೀಡುತ್ತಿಲ್ಲ. 100 ರೂ.ಗೆ ಕೇವಲ 13 ರೂ. ರಾಜ್ಯಕ್ಕೆ ವಾಪಸ್ಸು ಬರುತ್ತಿದೆ. ರಾಜ್ಯದಿಂದ 4,30,000 ಕೋಟಿ ತೆರಿಗೆ ಬರುತ್ತಿದ್ದರೆ, ನಮಗೆ ಕೇವಲ 50,257 ಕೋಟಿ ರೂ.ಮಾತ್ರ ರಾಜ್ಯಕ್ಕೆ ಬರುತ್ತಿದೆ. ಕೇಂದ್ರದ ಈ ಧೋರಣೆಯನ್ನು ವಿರೋಧಿಸಲಾಗುತ್ತಿದೆ ಎಂದರು. ರಾಜ್ಯಸರ್ಕಾರದಿಂದ 34 ಲಕ್ಷ ರೈತರಿಗೆ 650 ಕೋಟಿ ರೂ. ತಾತ್ಕಾಲಿಕ ಬರ ಪರಿಹಾರ ಬರನಿರ್ವಹಣೆಗೆ ಸರ್ಕಾರದ ಕ್ರಮಗಳ ಬಗೆಗಿನ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ,…
ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳಲ್ಲಿ ಒಂದು ಗೃಹಲಕ್ಷ್ಮಿ ಯೋಜನೆಯಾಗಿದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಯರಿಗೆ 2000 ಪ್ರತಿ ತಿಂಗಳು ಸಹಾಯಧನವನ್ನು ಸರ್ಕಾರ ನೀಡಲಾಗುತ್ತದೆ. ಆದ್ರೇ ಈವರೆಗೆ ಕೆಲವರಿಗೆ ಹಣ ಬಂದಿಲ್ಲ. ಹಾಗಾದ್ರೇ ಗೃಹಲಕ್ಷ್ಮಿ ಯೋಜನೆಗೆ ಅರ್ಹರಾಗಿರದೇ ಇಲ್ಲದಿರುವಂತ ಅನರ್ಹರ ಲೀಸ್ಟ್ ಇಲ್ಲಿದೆ. ಚೆಕ್ ಮಾಡೋದು ಹೇಗೆ ಅಂತ ಮುಂದೆ ಓದಿ. ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯೂ ಒಂದಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರೋ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ನೀಡಲಾಗುತ್ತಿದೆ. ಈಗಾಗಲೇ ಅರ್ಜಿ ಸಲ್ಲಿಕೆಯಾದ ನಂತ್ರ, ಅನೇಕರು ಅರ್ಹರಿದ್ದು, 2000 ಹಣ ಕೂಡ ಪಡೆಯುತ್ತಿದ್ದಾರೆ. ಆದ್ರೇ ಕೆಲವರಿಗೆ ಹಣ ಬಂದಿಲ್ಲ. ಇನ್ನೂ ಯಾರು ಬಿಪಿಎಲ್ ಕಾರ್ಡ್ ಅರ್ಹರು, ಯಾರು ಅಲ್ಲ ಎನ್ನುವ ಬಗ್ಗೆಯೂ ಆಹಾರ ಇಲಾಖೆಯಿಂದ ಪರಿಶೀಲನೆ ನಡೆಸಲಾಗುತ್ತಿದೆ. ಜೊತೆಗೆ ಅನರ್ಹರ ವಿರುದ್ಧ ಕಾನೂನು ಕ್ರಮವನ್ನು ಕೂಡ ಕೈಗೊಳ್ಳಲಾಗುತ್ತಿದೆ. ಇದರ ನಡುವೆ ಗೃಹಲಕ್ಷ್ಮಿ ಯೋಜನೆಗೆ ಅರ್ಹರಲ್ಲದವರ ಪಟ್ಟಿಯನ್ನು ಕೂಡ ಆಹಾರ ಇಲಾಖೆ ತಯಾರಿಸಿದೆ.…
ಉತ್ತರಾಖಂಡ: ರಾಜ್ಯದ ಹಲ್ದ್ವಾನಿಯಲ್ಲಿ ಅಕ್ರಮವಾಗಿ ನಿರ್ಮಿಸಲಾದ ಮದರಸಾ ಮತ್ತು ಪಕ್ಕದ ಮಸೀದಿಯನ್ನು ನೆಲಸಮಗೊಳಿಸಿದ ನಂತರ ನಡೆದ ಹಿಂಸಾಚಾರದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ಘರ್ಷಣೆಗಳನ್ನು ನಿಯಂತ್ರಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಈ ಹಿಂದೆ, ಗಲಭೆಯ ಸಮಯದಲ್ಲಿ ನಿವಾಸಿಗಳು ವಾಹನಗಳು ಮತ್ತು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದರು. ಅಲ್ಲದೇ ಕಲ್ಲುಗಳನ್ನು ಎಸೆದ ನಂತರ ಅಧಿಕಾರಿಗಳು ಕರ್ಫ್ಯೂ ವಿಧಿಸಲಾಗಿದೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಆಸ್ಪತ್ರೆಗೆ ದಾಖಲಾದವರಲ್ಲಿ ಹೆಚ್ಚಿನವರು ಪೊಲೀಸ್ ಸಿಬ್ಬಂದಿ. ಉಳಿದವರು ಸ್ಥಳೀಯ ಮದರಸಾ ಮತ್ತು ಅದರ ಸಂಕೀರ್ಣದಲ್ಲಿರುವ ಮಸೀದಿಯನ್ನು ನೆಲಸಮಗೊಳಿಸುವಲ್ಲಿ ಭಾಗಿಯಾಗಿದ್ದ ಪುರಸಭೆಯ ಕಾರ್ಮಿಕರು ಆಗಿದ್ದಾರೆ. ಸದ್ಯ ಪರಿಸ್ಥಿತಿ ಉತ್ತರಾಖಂಡದಲ್ಲಿ ಬೂದಿ ಮುಚ್ಚಿದ ಕೆಂಡದಂತಿದ್ದು, ಹಿಂಸಾಚಾರವನ್ನು ನಿಯಂತ್ರಿಸೋ ಕೆಲಸದಲ್ಲಿ ಪೊಲೀಸರು ನಿರತರಾಗಿದ್ದಾರೆ. ಎಲ್ಲೆಲ್ಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. https://kannadanewsnow.com/kannada/india-snapchat-server-down/ https://kannadanewsnow.com/kannada/pratap-reddy-resigns-from-ips-post-says-goodbye-with-2-months-to-go-for-retirement/
ಶಿವಮೊಗ್ಗ : ನಗರದ ಮುಖ್ಯ ರಸ್ತೆಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 10ರ ನಾಳೆ ಬೆಳಗ್ಗೆ 10.00 ರಿಂದ ಮಧ್ಯಾಹ್ಯ 2.00 ರವರೆಗೆ ಜಯನಗರ, ಜಯನಗರ ಮುಖ್ಯರಸ್ತೆ, ನೆಹರು ಕ್ರೀಡಾಂಗಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ವಿದ್ಯುಚ್ಛಕ್ತಿ ದರ ಪರಿಷ್ಕರಣೆ- ಸಾರ್ವಜನಿಕ ಸಭೆ ವಿದ್ಯುಚ್ಛಕ್ತಿ ದರ ಪರಿಷ್ಕರಣೆ ಸಲುವಾಗಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಮ.ವಿ.ಸ.ಕಂಪೆನಿಯು ಅರ್ಜಿ ಸಲ್ಲಿಸಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲು ಆಯೋಗವು ‘ಸಾರ್ವಜನಿಕ ವಿಚಾರಣೆ’ಯನ್ನು ದಿನಾಂಕ 12.02.2024ರಂದು ಸೋಮವಾರ ಬೆಳಿಗ್ಗೆ 10.00 ಗಂಟೆಯಿಂದ ಮೆಸ್ಕಾಂ ಕಾರ್ಪೊರೇಟ್ ಕಛೇರಿ ಸಭಾಂಗಣ, ಮೆಸ್ಕಾಂ ಭವನ, ಬಿಜೈ, ಮಂಗಳೂರು ಇಲ್ಲಿನಡೆಸಲಿರುವುದು. ಆಸಕ್ತ ಸಾರ್ವಜನಿಕರು ವಿಚಾರಣೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸಾಗರದ ಪಡವಗೋಡಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಪಡವಗೋಡು ಗ್ರಾ.ಪಂ ಯಲ್ಲಿ ಇಂದು ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಸಂವಿಧಾನ ಜಾಗೃತಿ ಜಾಥಾ ರಥವನ್ನು…
ಬೆಂಗಳೂರು : ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಂಜಾ ಮತ್ತು ಮಾದಕ ಪದಾರ್ಥಗಳ ಹಾವಳಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಸಂಬಂಧ ಶಾಸಕ ದಿನೇಶ್ ಗೂಳಿಗೌಡ ಬರೆದಿದ್ದ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದನೆ ನೀಡಿ, ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ. ಮಾದಕ ವ್ಯಸನಗಳಿಗೆ ಹೆಚ್ಚಿನ ಸಂಖ್ಯೆಯ ಮಕ್ಕಳು ಬಲಿಯಾಗುತ್ತಿರುವ ಬಗ್ಗೆ ಗಮನ ಸೆಳೆದಿದ್ದ ಶಾಸಕ ದಿನೇಶ್ ಗೂಳಿಗೌಡ ಅವರು, ತಕ್ಷಣ ಎಚ್ಚೆತ್ತುಕೊಳ್ಳದಿದ್ದರೆ ಆತಂಕಕಾರಿ ಪರಿಸ್ಥಿತಿ ನಿರ್ಮಾಣ ಆಗುತ್ತದೆ ಎಂದು ಎಚ್ಚರಿಸಿದ್ದರು. ಗಾಂಜಾ ಮತ್ತು ಮಾದಕವಸ್ತುಗಳ ಹಾವಳಿ ನಿಯಂತ್ರಣಕ್ಕೆ ಜಿಲ್ಲಾ ಮಟ್ಟದಲ್ಲಿ ವಿಶೇಷ ದಳ ರಚನೆ ಸೇರಿ ಹಲವು ಕ್ರಮ ಕೈಗೊಳ್ಳಲು ಪತ್ರದಲ್ಲಿ ಮನವಿ ಮಾಡಿದ್ದರು. ಶಿಕ್ಷಣ ಸಂಸ್ಥೆಗಳ ಸಮೀಪ ಸೇರಿದಂತೆ ರಾಜ್ಯದಲ್ಲಿ ಗಾಂಜಾ ಮಾರಾಟ ಮತ್ತು ಸೇವನೆ ಹೆಚ್ಚುತ್ತಿರುವ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್ ಮಹಾ ನಿರ್ದೇಶಕರು, ಈ ಬಗ್ಗ ಪರಿಶೀಲನೆ ನಡೆಸಿ ಸೂಕ್ತ ಕ್ರಮ ವಹಿಸಬೇಕು ಎಂದು ಸಿಎಂ…
ಬೆಂಗಳೂರು: ವಿವಿಧ ಕಾರಣಗಳಿಂದಾಗಿ ನಮ್ಮ ಮೆಟ್ರೋ ಸಂಚಾರವು ( Namma Metro Service ) ಫೆಬ್ರವರಿ.11ರಂದು ಸ್ಥಗಿತಗೊಳ್ಳಲಿದೆ. ಟ್ರಿನಿಟಿ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ದಿನಾಂಕ 11.02.2024 ರಂದು ವಾಣಿಜ್ಯ ಸೇವೆ ಭಾಗಶಃ ಸ್ಥಗಿತಗೊಳ್ಳಲಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ( BMRCL ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ಮೆಟ್ರೋ ರೈಲು ನಿಗಮವು ದಿನಾಂಕ 11.02.2024 ರಂದು (ಭಾನುವಾರ) ಟ್ರಿನಿಟಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳನಡುವೆ ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದೆ. ಈ ಕಾಮಗಾರಿಯನ್ನು ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ. ರಸ್ತೆ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳನಡುವೆ ವಾಣಿಜ್ಯ ಸೇವೆಯನ್ನು ಬೆಳಿಗ್ಗೆ 07.00 ಗಂಟೆಯಿಂದ 9.00 ಗಂಟೆಯವರೆಗೆ (ಎರಡು ಗಂಟೆಗಳ ಅವಧಿಗೆ) ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಈ ಅವಧಿಯಲ್ಲಿ ರೈಲುಗಳು ಎಂ.ಜಿ ರಸ್ತೆ ಮತ್ತು ಚಲ್ಲಘಟ್ಟ ಹಾಗೂ ಇಂದಿರಾನಗರ ಮತ್ತು ವೈಟ್ಫೀಲ್ಡ್ (ಕಾಡುಗೋಡಿ) ನಡುವೆ ಮಾತ್ರ ಬೆಳಿಗ್ಗೆ 07.00 ಗಂಟೆಯಿಂದ ಚಲಿಸುತ್ತವೆ…
ನವದೆಹಲಿ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಈ ಹಿಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಂತ ಸುಮಲತಾ, ಈಗ ರಾಜಕೀಯ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯೋ ಕಸರತ್ತು ನಡೆಸುತ್ತಿದ್ದಾರೆ. ಈ ಸಲುವಾಗಿಯೇ ಪ್ರಧಾನಿ ನರೇಂದ್ರ ಮೋದಿಯ ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸಂಸದೆ ಸುಮಲತಾ ಅಂಬರೀಶ್ ಭೇಟಿಯಾಗಿದ್ದಾರೆ. ಅವರೊಂದಿಗೆ ಕೆಲ ಕಾಲ ಮಂಡ್ಯ ರಾಜಕೀಯ, ಲೋಕಸಭಾ ಚುನಾವಣೆಯ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತಂತೆ ಎಕ್ಸ್ ಮಾಡಿರುವಂತ ಅವರು, ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ ನನಗೆ ಸಮಯ ನೀಡಿದ್ದಕ್ಕಾಗಿ, ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರಿಗೆ ನನ್ನ ಧನ್ಯವಾದಗಳು ಅಂತ ತಿಳಿಸಿದ್ದಾರೆ. ನರೇಂದ್ರ ಮೋದಿರವರು ವಿಶ್ವದ ಮಹಾನ್ ನಾಯಕರಾಗಿದ್ದು, ಭಾರತದಂತಹ ಬೃಹತ್ ದೇಶವನ್ನು ಕಳೆದ ಹತ್ತು ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಸುತ್ತಾ, ಭಾರತವನ್ನು ಮುಂದುವರೆದ ರಾಷ್ಟ್ರಗಳ ಸಾಲಿಗೆ ಸೇರಿಸಲು ಪಡುತ್ತಿರುವ ಶ್ರಮ ನಿಜಕ್ಕೂ…
ಬಾಗಲಕೋಟೆ: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ.40ರಷ್ಟು ಕಮೀಷನ್ ಆರೋಪ ಮಾಡಿದ್ದರು. ಈಗ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಕಮೇಷನ್ ಆರೋಪ ಮಾಡಿದ್ದಾರೆ. ನಮ್ಮ ಮೇಲೆ ಹರಿಹಾಯ್ದ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಈಗ ಕಮೀಷನ್ ಆರೋಪದ ಹಿನ್ನಲೆಯಲ್ಲಿ ರಾಜೀನಾಮೆ ನೀಡಬೇಕು ಎಂಬುದಾಗಿ ಬಿಜೆಪಿ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ ಕಾಂಗ್ರೆಸ್ ಸರ್ಕಾದ ಅವಧಿಯಲ್ಲೂ ಗುತ್ತಿಗೆ ಕಮೀಷನ್ ದಂಧೆ ನಡೆಯುತ್ತಿರೋದಾಗಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಿಸಿದ್ದಾರೆ. ಹೀಗಾಗಿ ನಮ್ಮ ವಿರುದ್ಧ ಹರಿಹಾಯ್ದ ಸಿಎಂ, ಡಿಸಿಎಂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ನಮಗೆ ಹೇಳಿದ್ರಲ್ಲ ನೀವು ಈಗ ರಾಜೀನಾಮೆ ಕೊಡಬೇಕು. ರಾಜೀನಾಮೆ ನೀಡಿ, ಈ ರಾಜ್ಯದ ಜನರ ಕ್ಷಮೆ ಕೇಳಬೇಕು. ನಮ್ಮ ಮೇಲೆ ಆರೋಪ ಮಾಡಿದಷ್ಟು ಆರೋಪ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದೆ ಎಂಬುದಾಗಿ ವಾಗ್ಧಾಳಿ ನಡೆಸಿದರು. https://kannadanewsnow.com/kannada/india-snapchat-server-down/ https://kannadanewsnow.com/kannada/pratap-reddy-resigns-from-ips-post-says-goodbye-with-2-months-to-go-for-retirement/
ದಾವಣಗೆರೆ: ದೇಶದ್ರೋಹಿ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂಬುದಾಗಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸಂಸದ ಡಿ.ಕೆ ಸುರೇಶ್ ಗುಂಡಿಕ್ಕಿ ಕೊಲ್ಲಬೇಕು ಎಂಬುದಾಗಿ ಹೇಳಿಕೆ ನೀಡಿದ್ದಾರೆ. ದಾವಣಗೆರೆಯಲ್ಲಿ ನಡೆದಂತ ಬಿಜೆಪಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ದೇಶದ್ರೋಹ ಮಾಡುವವರು, ದೇಶದ್ರೋಹದ ಹೇಳಿಕೆ ನೀಡೋರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಯಾಗಲಿ ಎಂಬುದಾಗಿ ಹೇಳಿದ್ದರು. ಕಾಂಗ್ರೆಸ್ ಪಕ್ಷದಲ್ಲಿರುವಂತ ವಿನಯ್ ಕುಲಕರ್ಣಿ, ಡಿ.ಕೆ ಸುರೇಶ್ ಇಬ್ಬರೂ ದೇಶದ್ರೋಹಿಗಳು. ತಾಕತ್ತು ಇದ್ದರೇ ದೇಶದ್ರೋಹ ಹೇಳಿಕೆ ನೀಡಿದ ಈ ಇಬ್ಬರನ್ನು ಪಕ್ಷದಿಂದ ಹೊರಹಾಕಿ ಎಂಬುದಾಗಿ ಆಗ್ರಹಿಸಿದರು. ಇನ್ನೂ ಈ ರೀತಿ ದೇಶದ್ರೋಹದ ಹೇಳಿಕೆ ನೀಡುವ, ದೇಶ ದ್ರೋಹ ಕೆಲಸ ಮಾಡುವವರನ್ನು ಗುಂಡಿಕ್ಕಿ ಕೊಲ್ಲುವಂತ ಕಾನೂನು ದೇಶದಲ್ಲಿ ಜಾರಿಯಾಗಬೇಕು. ಈ ಮೂಲಕ ಇಂತಹ ಹೇಳಿಕೆಗಳಿಗೆ ಖಡಿವಾಣ ಬೀಳಬೇಕು ಎಂದರು. https://kannadanewsnow.com/kannada/india-snapchat-server-down/ https://kannadanewsnow.com/kannada/pratap-reddy-resigns-from-ips-post-says-goodbye-with-2-months-to-go-for-retirement/