Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರದಿಂದ ಅಂತರ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿದಂತ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ನೌಕರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಒಂದು ಬಾರಿಗೆ ಅಂತರ ಜಿಲ್ಲಾ ವರ್ಗಾವಣೆಗೆ ಶೀಘ್ರವೇ ಮಾರ್ಗಸೂಚಿ ಪ್ರಕಟಿಸುವುದಾಗಿ ಸರ್ಕಾರ ತಿಳಿಸಿದೆ. ಈ ಸಂಬಂಧ ಮಾಹಿತಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನೀಡಲಾಗಿದೆ. ಎನ್ಎಚ್ಎಂ ನೇರ ಗುತ್ತಿಗೆ ಸಿಬ್ಬಂದಿಗಳು ಸಾಮಾನ್ಯವಾಗಿ ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗುತ್ತಿದ್ದು, ಅವರು ತಮ್ಮ ಸಂಪೂರ್ಣ ಕರ್ತವ್ಯದ ಅವಧಿಯುದ್ದಕ್ಕೂ ಆಯಾ ಜಿಲ್ಲೆಯಲ್ಲಿಯೇ ಕೆಲಸ ಮಾಡಬೇಕಾಗಿರುತ್ತದೆ. ಸದರಿ ಸಿಬ್ಬಂದಿಗಳ ಬಹುದಿನದ ಬೇಡಿಕೆಗೆ ಸ್ಪಂದಿಸಿ, ರಾಜ್ಯ ಸರ್ಕಾರವು ಸೇವಾ ಅವಧಿಯಲ್ಲಿ ಒಂದು ಬಾರಿ ಅಂತರ್ಜಿಲ್ಲಾ ವರ್ಗಾವಣೆಗೆ ಅವಕಾಶ ಕಲ್ಪಿಸುವ ನಿರ್ಧಾರ ಕೈಗೊಂಡಿದೆ. ಈ ಸಂಬಂಧ ಅತಿ ಶೀಘ್ರದಲ್ಲಿ ಮಾರ್ಗಸೂಚಿಯನ್ನು ಹೊರಡಿಸಲಾಗುವುದು ಅಂತ ತಿಳಿಸಿದೆ. https://kannadanewsnow.com/kannada/good-news-for-nhm-employees-of-state-health-department-social-security-insurance-scheme-launched/
ಬೆಂಗಳೂರು: ಅಂಗನವಾಡಿ ಫಲಾನುಭವಿಗಳಿಗೆ ವಿತರಿಸುವ ಪೌಷ್ಠಿಕ ಸಾಮಗ್ರಿಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಧಾರವಾಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಹುಲಿಗೆವ್ವ ಹೆಚ್ ಕುಕನೂರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಮುತ್ತಣ್ಣ ಸಿ.ಎ ಅವರನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸೂಚನೆ ಮೇರೆಗೆ ಅಮಾನತುಗೊಳಿಸಲಾಗಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ-ಧಾರವಾಡ ಯೋಜನಾ ವ್ಯಾಪ್ತಿಯ ಹಳೇ ಹುಬ್ಬಳಿ ವಲಯದ ಸಮೀಪವಿರುವ ಗಬ್ಬೂರು ಕ್ರಾಸ್ ಬಳಿ ಇರುವ ಆಹಾರ ಗೋದಾಮಿನಲ್ಲಿ ಅಂಗನವಾಡಿ ಫಲಾನುಭವಿಗಳಿಗೆ ವಿತರಿಸುವ ಪೌಷ್ಠಿಕ ಸಾಮಗ್ರಿಗಳಾದ ತೊಗರಿ ಬೇಳೆ, ಹೆಸರು ಕಾಳು, ಬೆಲ್ಲ, ಸಕ್ಕರೆ, ಗೋಧಿಹಿಟ್ಟನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು. ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಧಾರವಾಡ ಜಿಲ್ಲೆಯ ಉಪ ನಿರ್ದೇಶಕರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ಪೌಷ್ಠಿಕ ಸಾಮಗ್ರಿಗಳನ್ನು ಅಕ್ರಮವಾಗಿ ದಾಸ್ತಾನು ಮಾಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ…
ಶಿವಮೊಗ್ಗ: ಸಾಗರ ತಾಲ್ಲೂಕು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ( NSUI ) ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಶಿವಮೊಗ್ಗದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ವಿಜಯ ಕುಮಾರ್ ಎಸ್ ಎನ್ನ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನೊಂದಿಗೆ ಜಿಲ್ಲಾ ಯುವ ನಾಯಕರ ಸೂಚನೆಯಂತೆ ಸಿಎಂ ಚಿನ್ಮಯ್ ಬಿನ್ ಎ ಸಿ ಮಂಜುನಾಥ್ ಅವರನ್ನು ಸಾಗರ ವಿಧಾನಸಭಾ ಕ್ಷೇತ್ರದ ಎನ್ ಎಸ್ ಯು ಐ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಿಸಿರುವುದಜಾಗಿ ತಿಳಿಸಿದ್ದಾರೆ. ಈ ಜವಾಬ್ದಾರಿಯನ್ನು ತಾವು ವಹಿಸಿಕೊಂಡು, ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಬರುವ ಸ್ಥಳೀಯ ನಾಯಕರೊಡನೆ ಸೇರಿಕೊಂಡು, ಪಕ್ಷ ಸಂಘಟನೆಯನ್ನು ಮಾಡುತ್ತಾ, ಪಕ್ಷವನ್ನು ಬಲ ಪಡಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯಲ್ಲಿ ಶ್ರಮಿಸುವಂತೆ ಕೋರಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ https://kannadanewsnow.com/kannada/shivamogga-power-outages-in-these-areas-of-sagar-taluk-tomorrow-2/ https://kannadanewsnow.com/kannada/breaking-news-state-govt-decides-to-give-rice-instead-of-annabhagya-rice/
ಶಿವಮೊಗ್ಗ: ದಿನಾಂಕ: 20.02.2025 ರ ಗುರುವಾರದ ನಾಳೆ 110/33/11 ಕೆವಿ ಸಾಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸನಗರ ಮಾರ್ಗಕ್ಕೆ 20 ಎಂ.ವಿ.ಎ ಶಕ್ತಿ ಪರಿವರ್ತಕ ಅಳವಡಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ನಾಳೆ ಬೆಳಿಗ್ಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ನಾಳೆ ಸಾಗರ ತಾಲ್ಲೂಕು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ದಿನಾಂಕ 20.02.2025 ರಂದು ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್, ಎಫ್-7 ಮಂಗಳಬೀಸು ಇಂಡಸ್ಟ್ರಿಯಲ್ ಏರಿಯಾ, ಎಫ್-8 ಮಾರಿಕಾಂಬ, ಎಫ್-15 ಆರ್.ಎಂ.ಸಿ, ಎಫ್-17 ಎಸ್.ಎನ್.ನಗರ ಮತ್ತು ಗ್ರಾಮೀಣ ವ್ಯಾಪ್ತಿಯ ಎಫ್-2 ಮಾಲ್ವೆ ಎಫ್-3 ಹೆಗ್ಗೋಡು, ಎಫ್-4 ಆವಿನಹಳ್ಳಿ, ಎಫ್-5 ವರದಹಳ್ಳಿ, ಎಫ್-6 ಬೊಮ್ಮತ್ತಿ, ಎಫ್-9 ಮಾಸೂರು, ಎಫ್-14 ಹಿರೇನೆಲ್ಲೂರು ಹಾಗೂ ಎಫ್-16 ಲಿಂಗದಹಳ್ಳಿ ಮಾರ್ಗದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಸಾಗರ ಪಟ್ಟಣ, ಆವಿನಹಳ್ಳಿ, ಹೆಗ್ಗೋಡು, ಭೀಮನಕೋಣೆ, ಯಡಜಿಗಳಮನೆ, ಕಲ್ಮನೆ ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ. ಮಾಲ್ವೆ, ಭೀಮನೇರಿ, ಕೆಳದಿ, ಮಾಸೂರು, ಹಿರೇನೆಲ್ಲೂರು,…
ನವದೆಹಲಿ: ದೆಹಲಿ ಬಿಜೆಪಿ ಶಾಸಕರು ರೇಖಾ ಗುಪ್ತಾ ಅವರನ್ನು ಶಾಸಕಾಂಗ ಪಕ್ಷದ ನಾಯಕಿ ಮತ್ತು ಕೇಂದ್ರಾಡಳಿತ ಪ್ರದೇಶದ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ. ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ಉಪ ಮುಖ್ಯಮಂತ್ರಿಯಾಗಲಿದ್ದಾರೆ. ಈ ಇಬ್ಬರು ನಾಳೆ ಬೆಳಿಗ್ಗೆ 11 ಗಂಟೆಗೆ ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ದೆಹಲಿ ಬಿಜೆಪಿ ಶಾಸಕರಾದ ವಿಜೇಂದರ್ ಗುಪ್ತಾ ಮತ್ತು ಸತೀಶ್ ಉಪಾಧ್ಯಾಯ ಅವರು ಗುಪ್ತಾ ಅವರ ಹೆಸರನ್ನು ಪ್ರಸ್ತಾಪಿಸಿದರು. ರೇಖಾ ಗುಪ್ತಾ ಮಾಜಿ ಕೌನ್ಸಿಲರ್ ಮತ್ತು ಉಪ ಮೇಯರ್ ಆಗಿದ್ದು, ಶಾಲಿಮಾರ್ ಬಾಗ್ ವಿಧಾನಸಭಾ ಸ್ಥಾನದಿಂದ ಎಎಪಿಯ ಬಂದನಾ ಕುಮಾರಿ ಅವರನ್ನು ಸೋಲಿಸಿ ವಿಜಯಶಾಲಿಯಾಗಿ ಹೊರಹೊಮ್ಮಿದರು. ಪರ್ವೇಶ್ ವರ್ಮಾ ಅವರು ನವದೆಹಲಿ ಕ್ಷೇತ್ರದಿಂದ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ್ದಾರೆ. ಸುಷ್ಮಾ ಸ್ವರಾಜ್, ಶೀಲಾ ದೀಕ್ಷಿತ್ ಮತ್ತು ಅತಿಶಿ ನಂತರ ರೇಖಾ ಗುಪ್ತಾ ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಲಿದ್ದಾರೆ. ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಮತ್ತು ಆರು…
ನವದೆಹಲಿ: ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿ, ಶಾಸಕರಾದಂತ ಪರ್ವೇಶ್ ವರ್ಮಾ ಅವರಿಗೆ ದೆಹಲಿ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಇಂದು ದೆಹಲಿ ನೂತನ ಮುಖ್ಯಮಂತ್ರಿ ಆಯ್ಕೆಗಾಗಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಈ ಸಭೆಯಲ್ಲಿ ದೆಹಲಿ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರನ್ನು ಆಯ್ಕೆ ಮಾಡಲಾಯಿತು. https://twitter.com/ANI/status/1892224292940640529 ಇನ್ನೂ ದೆಹಲಿಯ ನೂತನ ಉಪ ಮುಖ್ಯಮಂತ್ರಿಯನ್ನಾಗಿ ಪರ್ವೇಶ್ ವರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ. ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಮತ್ತು ಆರು ಕ್ಯಾಬಿನೆಟ್ ಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಮುಖ್ಯಮಂತ್ರಿ ಮತ್ತು ಹೊಸ ಕ್ಯಾಬಿನೆಟ್ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ದೆಹಲಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿ ಈ ಹಿಂದೆ ರವಿಶಂಕರ್ ಪ್ರಸಾದ್ ಮತ್ತು ಓಂ ಪ್ರಕಾಶ್ ಧಂಕರ್ ಅವರನ್ನು ಪಕ್ಷದ ಕೇಂದ್ರ ವೀಕ್ಷಕರಾಗಿ ನೇಮಿಸಿತ್ತು. https://kannadanewsnow.com/kannada/breaking-news-state-govt-decides-to-give-rice-instead-of-annabhagya-rice/ https://kannadanewsnow.com/kannada/transfer-of-joga-division-mescom-praveen-niranjan-farmer-leader-m-b-manjappa-hirenellur/
ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರನ್ನು ಬಿಜೆಪಿ ಬುಧವಾರ ಘೋಷಿಸಿದೆ. ಹಾಗಾದ್ರೇ ರೇಖಾ ಗುಪ್ತಾ ಯಾರು ಅಂತ ಮುಂದೆ ಓದಿ. ರೇಖಾ ರಾಣಿ ಎಂದೂ ಕರೆಯಲ್ಪಡುವ ದೆಹಲಿಯ ಅನುಭವಿ ರಾಜಕಾರಣಿಯಾಗಿದ್ದು, ವಿದ್ಯಾರ್ಥಿ ನಾಯಕತ್ವದಲ್ಲಿ ಹಿನ್ನೆಲೆಯನ್ನು ಹೊಂದಿದ್ದಾರೆ. ಪ್ರಸ್ತುತ, ಅವರು ದೆಹಲಿ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಸ್ಥಾನವನ್ನು ಹೊಂದಿದ್ದಾರೆ. ಅವರ ಹಿಂದಿನ ಪಾತ್ರಗಳಲ್ಲಿ ಬಿಜೆಪಿಯ ಮಹಿಳಾ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ರೇಖಾ ಗುಪ್ತಾ ಅವರ ರಾಜಕೀಯ ಜೀವನವು 1996 ರಿಂದ 1997 ರವರೆಗೆ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (ಡಿಯುಎಸ್ಯು) ಅಧ್ಯಕ್ಷರಾಗಿ ಆಯ್ಕೆಯಾದಾಗ ವಿದ್ಯಾರ್ಥಿ ರಾಜಕೀಯದಲ್ಲಿ ಪ್ರಾರಂಭವಾಯಿತು. ನಂತರ ಅವರು 2007 ರಲ್ಲಿ ಉತ್ತರಿ ಪಿತಾಂಪುರ (ವಾರ್ಡ್ 54) ನಿಂದ ದೆಹಲಿ ಕೌನ್ಸಿಲರ್ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಮುಖ್ಯವಾಹಿನಿಯ ರಾಜಕೀಯಕ್ಕೆ ಪ್ರವೇಶಿಸಿದರು ಮತ್ತು 2012 ರಲ್ಲಿ ಮರು ಆಯ್ಕೆಯಾದರು. ಅವರ ಅನುಭವವು ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಶನ್ನ ಮೇಯರ್ ಆಗಿ ಸೇವೆ ಸಲ್ಲಿಸುವುದನ್ನು ಒಳಗೊಂಡಿದೆ. 2025 ರ ದೆಹಲಿ…
ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರನ್ನು ಬಿಜೆಪಿ ಘೋಷಿಸಿದೆ. ಈ ಮೂಲಕ ದೆಹಲಿ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ದೆಹಲಿ ನೂತನ ಮುಖ್ಯಮಂತ್ರಿ ಆಯ್ಕೆ ಸಂಬಂಧ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಈ ಸಭೆಯಲ್ಲಿ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕಿ ರೇಖಾ ಗುಪ್ತಾ ಆಯ್ಕೆಯಾಗಿದ್ದಾರೆ. ಬುಧವಾರ ಸಂಜೆ ಪಕ್ಷದ ದೆಹಲಿ ಘಟಕದ ಕಚೇರಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಈ ಪ್ರಕಟಣೆ ಹೊರಬಿದ್ದಿದೆ. ಶಾಲಿಮಾರ್ ಬಾಗ್ ಕ್ಷೇತ್ರದ ಶಾಸಕರಾಗಿರುವ 50 ವರ್ಷದ ಗುಪ್ತಾ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ನಾಯಕಿ ಬಂದನಾ ಕುಮಾರಿ ಅವರನ್ನು ಸೋಲಿಸಿದ್ದರು. ರೇಖಾ ಗುಪ್ತಾ ಹೊರತುಪಡಿಸಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ ಪರ್ವೇಶ್ ವರ್ಮಾ; ದೆಹಲಿ ಬಿಜೆಪಿ ಮಾಜಿ ಅಧ್ಯಕ್ಷರಾದ ವಿಜೇಂದರ್ ಗುಪ್ತಾ ಮತ್ತು ಸತೀಶ್ ಉಪಾಧ್ಯಾಯ; ಪವನ್ ಶರ್ಮಾ, ಆಶಿಶ್ ಸೂದ್ ಮತ್ತು ಶಿಖಾ ರಾಯ್ ಅವರಂತಹ…
ಬೆಂಗಳೂರು: ಕಂದಾಯ ಇಲಾಖೆಯ ಒತ್ತಡದ ಕೆಲಸವನ್ನು ಕೂಡಲೇ ಕೆಲಸ ಮಾಡಿ. ನಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ.ಅಮೃತ್ ರಾಜ್ ಮನವಿ ಮಾಡಿದ್ದಾರೆ. ಈ ಕುರಿತಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆದಿರುವಂತ ಸಂಘ ಅಧ್ಯಕ್ಷ ಎ.ಅಮೃತ್ ರಾಜ್ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಂದಾಯ ಇಲಾಖೆ ಕುಂದು ಕೊರತೆಗಳ ಸಭೆಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಸಮೂಖದಲ್ಲಿ ದಿನಾಂಕ: 18.02.2025 ರಂದು ಸಂಜೆ 6:00 ಗಂಟೆಗೆ ಸಂಘದ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದು ಸದರಿ ಸಭೆಯಲ್ಲಿ ಕಂದಾಯ ಅಧಿಕಾರಿಗಳು / ಸಹ ಕಂದಾಯ ಅಧಿಕಾರಿಗಳು ಮಾತ್ರ ಭಾಗವಹಿಸಿ ಸಭೆಯಲ್ಲಿ ಚರ್ಚಿಸಿ/ತೀರ್ಮಾನವನ್ನು ತೆಗೆದುಕೊಂಡು ಈ ಕೆಳಕಂಡ ನ್ಯೂನ್ಯತೆಗಳ ಬಗ್ಗೆ ಕ್ರಮವಹಿಸಲು ಪಾಲಿಕೆಯ ಮುಖ್ಯಸ್ಥರಿಗೆ ನಮ್ಮ ಸಂಘದ ಪತ್ರದ ಮೂಲಕ ಗಮನಕ್ಕೆ ತಂದು ಸಮಸ್ಯೆಯನ್ನು ಬಗೆ ಹರಿಸಿಕೊಳ್ಳಲು ತೀರ್ಮಾನಿಸಲಾಗಿರುತ್ತದೆ.…
ವಿಜಯಪುರ : ಜಿಲ್ಲೆಯಲ ಆಲ್ ಅಮೀನ್ ಮೆಡಿಕಲ್ ಕಾಲೇಜಿನಲ್ಲಿ ರ್ಯಾಗಿಂಗ್ ಘಟನೆ ನಡೆದಿದೆ ಎನ್ನಲಾಗಿತ್ತು. ವಿದ್ಯಾರ್ಥಿಗಳ ಮೇಲೆ ಹಲ್ಲೆ ಕೂಡ ಮಾಡಲಾಗಿ ಎಂಬುದಾಗಿ ವರದಿಯಾಗಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವಂತ ವಿಜಯಪುರ ಜಿಲ್ಲಾಧಿಕಾರಿಗಳು, ಹಲ್ಲೆ ಮಾಡಿದಂತ ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ವಿಜಯಪುರ ಜಿಲ್ಲಾಧಿಕಾರಿ, ತಿಕೋಟಾ ತಾಲೂಕಿನ ನವರಸಪುರ ಗ್ರಾಮದಲ್ಲಿರುವ ಅಲ್-ಅಮೀನ್ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಯೋರ್ವನ ಮೇಲೆ ಅದೇ ಕಾಲೇಜಿನ 04 ಜನ ಎಂಬಿಬಿಎಸ್ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮತ್ತು ದೈಹಿಕ ಹಿಂಸೆ ನೀಡಲಾಗಿದೆ ಎಂಬ ವರದಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ವಿಜಯಪುರ ಮತ್ತು ತಿಕೋಟಾ ತಹಶೀಲ್ದಾರ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು ಹಲ್ಲೆಗೊಳಗಾದ ವಿದ್ಯಾರ್ಥಿ ಹಮೀಮಗೆ ಭೇಟಿ ಮಾಡಿ, ಪರಿಶೀಲಿಸಿ, ಯೋಗಕ್ಷೇಮ ವಿಚಾರಣೆ ನಡೆಸಿದ್ದು, ವಿದ್ಯಾರ್ಥಿಗೆ ಯಾವುದೇ ಗಾಯಗಳಾಗಿರುವುದಿಲ್ಲ ಹಾಗೂ ವಿದ್ಯಾರ್ಥಿಯು ದೈಹಿಕವಾಗಿ ಆರೋಗ್ಯಕರವಾಗಿದ್ದಾನೆ ಎಂದು ವರದಿ ನೀಡಿದ್ದಾರೆ. ಘಟನೆಯ ವಿವರವನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಮೊಹ್ಮದ ಮೊಹಸೀನ್ ಅವರಿಗೆ…














