Author: kannadanewsnow09

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ಸಾರಿಗೆ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಲಾಗಿದೆ ಅಂತ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಲಾಗಿದೆ. 2020ರಂದು ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೂ ಟಿಕೆಟ್ ದರ ಹೆಚ್ಚಳ ಮಾಡಿರಲಿಲ್ಲ ಎಂದರು. ಐದು ವರ್ಷಗಳ ನಂತ್ರ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುತ್ತಿದೆ. ನೀವೇ ಊಹಿಸಿ ಐದು ವರ್ಷಗಳಿಂದ ಎಷ್ಟು ಡೀಸೆಲ್ ದರ ಹೆಚ್ಚಳವಾಗಿದೆ ಅಂತ ಎಂದ ಅವರು, ಖರ್ಚು ವೆಚ್ಚ ಕೂಡ ಹೆಚ್ಚಳ ಆಗಿದೆ ಅಂತ ತಿಳಿಸಿದರು. ಅಂದಹಾಗೇ ರಾಜ್ಯ ಸರ್ಕಾರಕ್ಕೆ ನಾಲ್ಕು ಸಾರಿಗೆ ನಿಗಮಗಳಿಂದ ಶೇ.42ರಷ್ಟು ಬಸ್ ಟಿಕೆಟ್ ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಈ ಬಗ್ಗೆ ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಶೇ.15ರಷ್ಟು ಸಾರಿಗೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ 2023, 2024ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. 2023ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಅ.ಚ ಶಿವಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. 2024ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿಯನ್ನು ಮಂಗಳೂರಿನ ವಾರ್ತಾಭಾರತಿಯ ಅಬ್ದುಸ್ಸಲಾಂ ಪುತ್ತಿಗೆ ಅವರಿಗೆ ನೀಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೆಷಾ ಖಾನುಂ ಅವರು ಮಾಹಿತಿ ಹಂಚಿಕೊಂಡಿದ್ದು, ಮಾಧ್ಯಮ ಅಕಾಡೆಮಿಯ 2023, 2024 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭದ ದಿನಾಂಕವನ್ನು ಸದ್ಯದಲ್ಲೇ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ. ಹೀಗಿದೆ 2023, 2024ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ, ವಿವಿಧ ದತ್ತಿ ಪ್ರಶಸ್ತಿ ಪುರಸ್ಕೃತರ ಪಟ್ಟಿ https://kannadanewsnow.com/kannada/shivamogga-power-outages-in-these-areas-of-the-district-on-january-4/ https://kannadanewsnow.com/kannada/in-yet-another-big-shock-to-the-people-of-the-state-cabinet-approves-15-hike-in-bus-ticket-prices/ https://kannadanewsnow.com/kannada/isro-to-launch-us-satellite-to-enable-voice-calls-via-smartphones-from-space/

Read More

ಶಿವಮೊಗ್ಗ : ಜ.4 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಎಂಸಿಎಫ್-1, ಎಂಸಿಎಫ್-3 ಎಂಸಿಎಫ್-4, ಎಂಸಿಎಫ್-14 ಎಂಸಿಎಫ್-17, ಎಂಸಿಎಫ್-18, ಎಂಸಿಎಫ್-20 ಮತ್ತು ಎಂಸಿಎಫ್-27 ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆಯಲ್ಲಿ ಕರೆಂಟ್ ಇರೋದಿಲ್ಲ. ಮೆ|| ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕೊಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್‌ಆರ್‌ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಕೆಎಂಎಫ್ ಡೈರಿ ಹಾಗೂ ಸುತ್ತಮುತ್ತನಲ್ಲಿ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪಾಲನೆ ಮತ್ತು ನಿರ್ವಹಣೆ ಗ್ರಾಮೀಣ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಈ ಮೂಲಕ ಕೋರಿದ್ದಾರೆ. https://kannadanewsnow.com/kannada/narayanasamy-writes-to-cm-kharge-rahul-gandhi-asks-him-to-sack-priyank-kharge-from-cabinet/ https://kannadanewsnow.com/kannada/isro-to-launch-us-satellite-to-enable-voice-calls-via-smartphones-from-space/

Read More

ಬೆಂಗಳೂರು: ಪ್ರಿಯಾಂಕ್ ಖರ್ಗೆ ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾ ಮಾಡಲು ಮುಖ್ಯಮಂತ್ರಿ, ಖರ್ಗೆಜೀ, ರಾಹುಲ್ ಗಾಂಧಿ ಅವರನ್ನು ಮನವಿ ಮಾಡುವುದಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಚಿನ್ ಡೆತ್ ನೋಟ್ ಪ್ರದರ್ಶಿಸಿದರು. ಖರ್ಗೆಜೀ ಎಂದರೆ ಮಲ್ಲಿಕಾರ್ಜುನ ಖರ್ಗೆಯವರು. ಪ್ರಿಯಾಂಕ್ ಖರ್ಗೆ ಅಲ್ಲ ಎಂದು ಇದೇವೇಳೆ ಸ್ಪಷ್ಟಪಡಿಸಿದರು. ಸಚಿನ್ ಡೆತ್ ನೋಟಿನಲ್ಲಿ ಎಲ್ಲ ವಿವರ ಬಂದಿದೆ. ಇದಕ್ಕೆ ಸರಕಾರ ಉತ್ತರಿಸಬೇಕು. ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೆಲಸ ಮಾಡದಿರಿ ಎಂದು ಎಚ್ಚರಿಸಿದರು. ಒಬ್ಬರು ಜೀವತ್ಯಾಗ ಮಾಡಿದ್ದು, ಅವರಿಗೆ ಬೆದರಿಕೆ ಹಾಕಿರುವಾಗ ಅವರಿಗೆ ನ್ಯಾಯ ಬೇಕೇ ಬೇಡವೇ? ಇದರ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗಲಿ ಎಂದು ಆಗ್ರಹಿಸಿದರು. ಸಿದ್ದರಾಮಯ್ಯನವರ ಸರಕಾರ ತಪ್ಪು ಮಾಡಿದವರನ್ನು ರಕ್ಷಿಸುತ್ತಿದೆ ಎಂದು ಅವರು ಆರೋಪಿಸಿದರು. ಪ್ರಿಯಾಂಕ್ ಖರ್ಗೆ ಪರವಾಗಿ ದೆಹಲಿಯಿಂದ ಫೋನ್ ಕರೆಗಳು ಬರುತ್ತಿವೆ. ಅವರ ಪರವಾಗಿ 3 ಜನರು ಮಾತನಾಡಿದ್ದಾರೆ. ಒಂದನೆಯದಾಗಿ…

Read More

ಶಿವಮೊಗ್ಗ: ಬೆಂಗಳೂರಿನ ನವರತ್ನ ಜ್ಯೂವೆಲ್ಲರಿ ಮಾಲೀಕರಿಗೆ ಕೋಟಿ ಕೋಟಿ ವಂಚಿಸಿದ ರೀತಿಯಲ್ಲೇ ಚಾಲಾಕಿ ಶ್ವೇತಾಗೌಡ ಅವರು, ಸಾಗರದ ಜ್ಯುವೆಲ್ಲರಿ ಅಂಗಡಿ ಮಾಲೀಕರಿಗೂ ಬಂಗಾರದ ಆಭರಣ ಪಡೆದು ಲಕ್ಷ ಲಕ್ಷ ವಂಚಿಸಿದ್ದಾರೆ. ಈ ಸಂಬಂಧ ಜ್ಯೂವೆಲ್ಲರಿ ಮಾಲೀಕರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಶ್ವೇತಾಗೌಡ ವಿರುದ್ಧ FIR ದಾಖಲಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಸಾಗರದ ಪ್ರಗತಿ ಜ್ಯೂವೆಲ್ಲರ್ ಮಾಲೀಕ ಬಾಲರಾಜ್ ಶೇಟ್ ಅವರು, ಬೆಂಗಳೂರಿನ ನವರತ್ನ ಜ್ಯೂವೆಲ್ಲರ್ ಮಾಲೀಕರಾದಂತ ಸಂಜಯ್ ಬಾಪ್ನ ಅವರ ಮೂಲಕ ಶ್ವೇತಾಗೌಡ ಪರಿಚಯವಾಗಿತ್ತು. ಪರಿಚಯವಾದ 15 ದಿನಗಳ ನಂತ್ರ ಕಾಫಿ ಡೇನಲ್ಲಿ ಅವರನ್ನು ಭೇಟಿ ಮಾಡಲಾಗಿತ್ತು. ಆಗ 250 ಗ್ರಾಂ ಚಿನ್ನಾಭರಣ ಬೇಕು ಎಂಬುದಾಗಿ ಆರ್ಡರ್ ನೀಡಿದ್ದರು. ಇದಾದ ಬಳಿಕ ಅವರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ ಎಂದು ತಿಳಿಸಿದರು. ಬೆಂಗಳೂರಿಗೆ ಆರ್ಡರ್ ಒಂದು ಇದ್ದ ಕಾರಣ 285 ಗ್ರಾಂ ಆಭರಣಗಳೊಂದಿಗೆ ತನ್ನ ಸಹೋದರನನ್ನು ಕಳುಹಿಸಿ ಕೊಡಲಾಗಿತ್ತು. ಆದರೇ ಆ ಪಾರ್ಟಿ ಸಿಗದ ಕಾರಣ,…

Read More

ಬೆಂಗಳೂರು: ಬಿಬಿಎಂಪಿ ಅಡಿಯಲ್ಲಿ ಇರುವ ಬೆಂಗಳೂರು ಹವಾಮಾನ ಕ್ರಿಯಾ ಕೋಶದ ವತಿಯಿಂದ ಬ್ಲೂಗ್ರೀನ್ ಪ್ರಶಸ್ತಿ(BluGreen Awards)ಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರೀತ್ಯ ನಿರ್ವಹಣೆಯ ವಿಶೇಷ ಆಯುಕ್ತರು ಹಾಗೂ ಹವಾಮಾನ ಕ್ರಿಯಾ ಕೋಶದ ಮುಖ್ಯಸ್ಥರಾದ ಶ್ರೀಮತಿ ಪ್ರೀತಿ ಗೆಹ್ಲೋಟ್ ರವರು ತಿಳಿಸಿದರು. ಬೆಂಗಳೂರನ್ನು ಹೆಚ್ಚು ಹಸಿರೀಕರಣ, ಪರಿಸರ ಸ್ನೇಹಿ ನಗರವನ್ನಾಗಿ ಮಡುವ, ಹಾವಾಮಾನ ಉಪ ಕ್ರಮದಲ್ಲಿ ಪಾಲ್ಗೊಳ್ಳುವ ವ್ಯಕ್ತಿಗಳು, ಸಮುದಾಯಗಳು, ಸಂಸ್ಥೆಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುವುದು. ನೀವು ಬೆಂಗಳೂರಲ್ಲಿ ಹವಾಮಾನ ಬದಲಾವಣೆಗಾಗಿ ನವೀನ ಪರಿಹಾರ ಜಾರಿಗೊಳಿಸುತ್ತಿದ್ದೀರಾ.? ಇಲ್ಲಿದೆ ಪ್ರಶಸ್ತಿ ಪಡೆಯಲು ಅವಕಾಶ ಹವಾಮಾನ ಬದಲಾವಣೆಯನ್ನು ಎದುರಿಸಲು ನೀವು ನವೀನ ಪರಿಹಾರಗಳನ್ನು ಜಾರಿಗೊಳಿಸುತ್ತಿದ್ದೀರಾ?, ನೀವು ಸಮರ್ಥನೀಯತೆಯಲ್ಲಿ ಪರಿಣಾಮಕಾರಿ ಅಭ್ಯಾಸಗಳನ್ನು ಮುನ್ನಡೆಸುತ್ತಿದ್ದೀರಾ ? ಹೌದು ಎಂದಾದರೆ, ಗುರುತಿಸಿಕೊಳ್ಳಲು ಇದು ನಿಮ್ಮ ಸದಾವಕಾಶ. ಬ್ಲೂಗ್ರೀನ್ ಪ್ರಶಸ್ತಿಗಳು ಬೆಂಗಳೂರಿನ ಹವಾಮಾನ ಕ್ರಮದ ಗುರಿಗಳನ್ನು ಮುನ್ನಡೆಸುವವರಿಗೆ ಸ್ಪೂರ್ತಿ ಮತ್ತು ಗೌರವವನ್ನು ನೀಡುವ ಗುರಿಯನ್ನು ಹೊಂದಿವೆ. ಯಶಸ್ಸಿನ ಕಥೆಗಳನ್ನು ಪ್ರದರ್ಶಿಸುವ ಮೂಲಕ, ಈ ಪ್ರಶಸ್ತಿಗಳು ಹಸಿರು ಮತ್ತು ಹೆಚ್ಚು…

Read More

ಬೆಂಗಳೂರು: ಕಾಂಗ್ರೆಸ್‌ ನಾಯಕರು ಮಹಿಳೆಯರಿಗೆ 2 ಸಾವಿರ ರೂ. ನೀಡುವ ಬದಲು, ಬಾಣಂತಿಯರ ಬದುಕಿಗೆ ಗ್ಯಾರಂಟಿ ನೀಡಿದರೆ ಸಾಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಮಹಿಳಾ ಸಬಲೀಕರಣದ ಬಗ್ಗೆ ಮಾತಾಡುತ್ತಾರೆ. 2 ಸಾವಿರ ರೂ. ನೀಡುವ ಬದಲು ಮಹಿಳೆಯರ ಜೀವ ಉಳಿಸಿದರೆ ಸಾಕಿತ್ತು. ಬಾಣಂತಿಯರಿಗೆ ಬದುಕುವ ಗ್ಯಾರಂಟಿಯನ್ನು ಮೊದಲು ನೀಡಬೇಕು. ಸಚಿವ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಬಾಣಂತಿಯರ ಮರಣ ಮೃದಂಗ ಇನ್ನೂ ನಿಂತಿಲ್ಲ. ಒಟ್ಟು 736 ತಾಯಂದಿರು ಮೃತಪಟ್ಟಿದ್ದಾರೆ. ಇದು ಸರ್ಕಾರದ ಪ್ರಾಯೋಜಿತ ಕೊಲೆಯಾಗಿದ್ದು, ಸರ್ಕಾರವೇ ನೇರ ಹೊಣೆಯಾಗಿದೆ. ಹುಬ್ಬಳ್ಳಿಯಲ್ಲಿ ಬಾಣಂತಿ ಸತ್ತಿದ್ದಕ್ಕೆ ಅವರ ಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಿಪಟೂರಿನಲ್ಲೂ ಒಬ್ಬ ಬಾಣಂತಿ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಪೂರೈಸಿದ ಐವಿ ದ್ರಾವಣದಿಂದಾಗಿ ಬಾಣಂತಿಯರು ಮೃತರಾಗುತ್ತಿದ್ದಾರೆ. ಕಾಂಗ್ರೆಸ್‌ನ ಸಮಾವೇಶ ನಡೆದಾಗಲೇ ಬಾಣಂತಿಯರು ಮೃತಪಟ್ಟಿದ್ದರೂ ಅಲ್ಲಿಗೆ ಹಿರಿಯ ನಾಯಕರು ಭೇಟಿ ನೀಡಿಲ್ಲ ಎಂದು ದೂರಿದರು. ಸರ್ಕಾರ ಎಲ್ಲವನ್ನೂ…

Read More

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ಸಾರಿಗೆ ಬಸ್ಸುಗಳ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಳ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಹೀಗಾಗಿ ಶೀಘ್ರವೇ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳದ ಶಾಕ್ ಜನತೆಗೆ ಉಂಟಾಗಲಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಸಾರಿಗೆ ಬಸ್ಸುಗಳ ಟಿಕೆಟ್ ದರ ಹೆಚ್ಚಳದ ಪ್ರಸ್ತಾವನೆ ಕುರಿತಂತೆ ಚರ್ಚೆ ನಡೆಸಲಾಯಿತು. ಅಂತಿಮವಾಗಿ ಶೇ.15ರಷ್ಟು ಪ್ರಯಾಣ ದರ ಏರಿಕೆಗೆ ಸಂಪುಟ ಅನುಮೋದನೆ ನೀಡಿರುವುದಾಗಿ ತಿಳಿದು ಬಂದಿದೆ. ಅಂದಹಾಗೇ ಸಾರಿಗೆ ಬಸ್ಸುಗಳ ಪ್ರಯಾಣದರವನ್ನು ಶೇ.42ರಷ್ಟು ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಸಾರಿಗೆ ನಿಗಮಗಳು ಪ್ರಸ್ತಾವನೆ ಸಲ್ಲಿಸಿದ್ದವು. ಈ ಬಗ್ಗೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ, ಅಂತಿಮವಾಗಿ, ಶೇ.15ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಲಾಯಿತು. ಹೀಗಾಗಿ ಶೀಘ್ರವೇ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಜಾರಿಗೆ ಬರಲಿದೆ. ಆ ಮೂಲಕ ಕೆ ಎಸ್ ಆರ್ ಟಿಸಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಜರಾಯಿ ಆಸ್ತಿ ರಕ್ಷಣೆಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈ ಪರಿಣಾಮ 10,700 ಎಕರೆ ಭೂಮಿಯನ್ನು ತೆರವುಗೊಳಿಸಿ ಸಂರಕ್ಷಣೆ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ಹಂಚಿಕೊಳ್ಳಲಾಗಿದ್ದು, ಮುಜರಾಯಿ ಆಸ್ತಿ ರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಹಲವೆಡೆ ಖಾಸಗಿಯವರು, ವಿವಿಧ ಟ್ರಸ್ಟ್‌ ಹಾಗೂ ಸಂಘಸಂಸ್ಥೆಗಳು ಅತಿಕ್ರಮಿಸಿಕೊಂಡಿದ್ದ ಮುಜರಾಯಿ ಇಲಾಖೆ ಅಧೀನಕ್ಕೆ ಸೇರಿದ್ದ ಸುಮಾರು 10,700 ಎಕರೆ ಭೂಮಿಯನ್ನು ತೆರವುಗೊಳಿಸಿ ಸಂರಕ್ಷಿಸಲಾಗಿದೆ ಎಂದಿದೆ. https://twitter.com/KarnatakaVarthe/status/1874724304031826356 ಇನ್ನೂ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ಹಂಚಿಕೊಂಡಿದ್ದು, ದೇಶದ ಸ್ವಾತಂತ್ರ್ಯದ 77 ವರುಷಗಳ ಸುದೀರ್ಘ ಇತಿಹಾಸದಲ್ಲಿ ಮೊದಲ ಬಾರಿಗೆ ಐತಿಹಾಸಿಕ ಕ್ರಮ- ಹಿಂದೂ ದೇವಾಲಯಗಳ ಆಸ್ತಿ ರಕ್ಷಣೆಗೆ ಮಹತ್ವದ ಕ್ರಮವನ್ನು ಸರ್ಕಾರ ವಹಿಸಿದೆ. ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಧಾರ್ಮಿಕ ಬದ್ಧತೆ – ಉಳಿಯಿತು 10,700 ಎಕರೆ ‘ದೇವರ ಸ್ವತ್ತು ಎಂದಿದ್ದಾರೆ. ಬುಟಾಟಿಕೆ ಮತ್ತು ಪೊಳ್ಳು ಹಿಂದುತ್ವವಾದ ಪ್ರತಿಪಾದಕರಾದ ಬಿ.ಜೆ.ಪಿ ಯವರು ಧರ್ಮ ಧರ್ಮಗಳ‌ ನಡುವೆ ದ್ವೇಷದ ಬೆಂಕಿ…

Read More

ಮೈಸೂರು: ಕೆ ಆರ್ ಎಸ್ ರಸ್ತೆಗೆ ಅಧಿಕೃತ ಹೆಸರು ನೀಡಿರುವ ಉಲ್ಲೇಖಗಳಿಲ್ಲ ಎಂಬುದಾಗಿ ಹೇಳುತ್ತಿರುವಂತ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ದಾಖಲೆ ಸಹಿತ ಮೈಸೂರು ಒಡೆಯರ್ ಹಾಗೂ ಸಂಸದ ಯಧುವೀರ್ ಈ ಕೆಳಕಂಡಂತೆ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ”ಕೆಆರ್‌ಸ್ ರಸ್ತೆಗೆ ಅಧಿಕೃತ ಹೆಸರು ನೀಡಿರುವ ಉಲ್ಲೇಖಗಆಲ್ಲ ಎಂದು ಹೇಳುತ್ತಿರುವ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರೇ, ಈ ದಾಖಲೆಗಳನ್ನೊಮ್ಮೆ ನೋಡಿ. ಮೈಸೂರು ಸಂಸ್ಥಾನದ ದಿವಾನರಾಗಿದ್ದ ಶ್ರೀ ಮಿರ್ಜಾ ಇಸ್ಮಾಯಿಲ್’ರವರ ದೂರದ ಸಂಬಂಧಿಯೊಬ್ಬರು ಪ್ರಿನ್ಸೆಸ್ ರಸ್ತೆಯಲ್ಲಿ ವಾಸವಿದ್ದರು, ಅವರು ಬರೆದಿರುವಂತಹ at post ಪತ್ರಗಳ ವಿಳಾಸದಲ್ಲಿ ‘ಪ್ರಿನ್ಸೆಸ್ ರಸ್ತೆ’ಯ ಹೆಸರು ಬಳಸಲಾಗಿದೆ. ಕೇಂದ್ರ ಸರ್ಕಾರದ ಭಾರತದ ಮ್ಯಾಪಿಂಗ್ ಮತ್ತು ಸಮೀಕ್ಷೆಯ ಉಸ್ತುವಾರಿ ಹೊಂದಿರುವ ಸರ್ಕಾರಿ ಇಲಾಖೆಯವರ ‘ಮೈಸೂರು ಟೂರ್ ಮ್ಯಾಪ್/ಗೈಡ್’ನಲ್ಲಿರುವ ಮೈಸೂರಿನ ನಕ್ಷೆಯಲ್ಲಿ ‘ಪ್ರಿನ್ಸೆಸ್ ರಸ್ತೆ’ಯನ್ನು ಗುರುತಿಸಿ ಹೆಸರಿಸಲಾಗಿದೆ. ಅಧಿಕೃತವಾಗಿ 1921ರಲ್ಲಿ ಮೈಸೂರು ನಗರಾಭಿವೃದ್ಧಿ ವಿಶ್ವಸ್ಥ ಮಂಡಳಿಯು ಇದೇ ರಸ್ತೆಗೆ ‘ಪ್ರಿನ್ಸೆಸ್ ರಸ್ತೆ’ ಎಂದು ನಾಮಕರಣ…

Read More