Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಬಲಿಯಾದಂತ ಕರ್ನಾಟಕದ ಭರತ್ ಭೂಷಣ್ ಹಾಗೂ ಮಂಜುನಾಥ್ ಮೃತದೇಹ ಇಂದು ಬೆಂಗಳೂರಿಗೆ ಆಗಮಿಸಲಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಮೃತದೇಹವನ್ನು ತಾಯ್ನಾಡಿಗೆ ಮರಳಿ ತರಲು ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಂಡಿದೆ ಎಂದಿದ್ದಾರೆ. ವಿಮಾನದ ಮೂಲಕ ಭರತ್‌ ಭೂಷಣ್‌ ಅವರ ಮೃತದೇಹ ಇಂದು ಮಧ್ಯಾಹ್ನ 3 ಗಂಟೆಗೆ ಮುಂಬೈ ಮಾರ್ಗವಾಗಿ ಬೆಂಗಳೂರಿಗೆ ಹಾಗೂ ಮಂಜುನಾಥ್‌ ರಾವ್‌ ಅವರ ಮೃತದೇಹ ಸಂಜೆ 6 ಗಂಟೆಗೆ ದೆಹಲಿ, ಬೆಂಗಳೂರು ಮಾರ್ಗವಾಗಿ ಶಿವಮೊಗ್ಗ ತಲುಪಲಿದೆ ಎಂಬುದಾಗಿ ತಿಳಿಸಿದ್ದಾರೆ. https://twitter.com/siddaramaiah/status/1914961726594039908 https://kannadanewsnow.com/kannada/breaking-pahalgam-terror-attack-union-minister-amit-shah-meets-families-of-deceased-watch-video/ https://kannadanewsnow.com/kannada/good-news-good-news-for-farmers-cultivating-government-land-before-2015-an-important-decision-will-be-made-soon/

Read More

ಬೆಂಗಳೂರು : ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ ಮುಖ್ಯಮಂತ್ರಿಗಳು, ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ಹಾಗೂ ಭರತ್ ಭೂಷಣ್ ಎಂಬುವರು ಮೃತರಾಗಿರುವ ಬಗ್ಗೆ ಮಾಹಿತಿ ನೀಡಿದರು.. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದರು. ಕಾಶ್ಮೀರದ ಪಹಲ್ಗಾಮ್ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ…

Read More

ನವದೆಹಲಿ: ಶ್ರೀನಗರದಿಂದ ಹೆಚ್ಚಳವಾದ ವಿಮಾನ ದರಗಳ ಬಗ್ಗೆ ಸಾಮಾಜಿಕ ಮಾಧ್ಯಮ ಬಳಕೆದಾರರು ವಾಹಕಗಳನ್ನು ತರಾಟೆಗೆ ತೆಗೆದುಕೊಂಡ ನಂತರ, ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಬುಧವಾರ ಹೆಚ್ಚಿನ ವಿಮಾನಗಳನ್ನು ಸೇರಿಸಲು ಮತ್ತು ಸಿಕ್ಕಿಬಿದ್ದ ಪ್ರಯಾಣಿಕರಿಗೆ ಹೆಚ್ಚುವರಿ ದಂಡವಿಲ್ಲದೆ ಮನೆಗೆ ಮರಳಲು ಸಹಾಯ ಮಾಡುವಂತೆ ಒತ್ತಾಯಿಸಿದೆ. ಶ್ರೀನಗರದಿಂದ ದೆಹಲಿಯಂತಹ ಪ್ರಮುಖ ನಗರಗಳಿಗೆ ಅತಿಯಾದ ವಿಮಾನಯಾನ ದರಗಳನ್ನು ತೋರಿಸುವ ಸ್ಕ್ರೀನ್ಶಾಟ್ಗಳು ಆನ್ಲೈನ್ನಲ್ಲಿ ಕಾಣಿಸಿಕೊಂಡವು. ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ದಾಳಿಯ ನಂತರ ಅನೇಕರು ಈ ಪ್ರದೇಶದಿಂದ ನಿರ್ಗಮಿಸಲು ಪ್ರಯತ್ನಿಸುತ್ತಿರುವಾಗ, ಬಳಕೆದಾರರು ಪ್ರಯಾಣಿಕರಿಗೆ ಸಾಮಾನ್ಯ ಬೆಲೆಗಿಂತ ಎರಡರಿಂದ ಮೂರು ಪಟ್ಟು ಶುಲ್ಕ ವಿಧಿಸಿದ್ದಕ್ಕಾಗಿ ವಿಮಾನಯಾನ ಸಂಸ್ಥೆಗಳನ್ನು ತರಾಟೆಗೆ ತೆಗೆದುಕೊಂಡರು. ಪಹಲ್ಗಾಮ್ನಲ್ಲಿ ನಡೆದ ಘಟನೆಯ ನಂತರ, ತಮ್ಮ ಮನೆಗಳಿಗೆ ಮರಳಲು ಬಯಸುವ ಪ್ರವಾಸಿಗರಿಂದ ಅನಿರೀಕ್ಷಿತ ಬೇಡಿಕೆ ಬಂದಿದೆ ಎಂದು ಡಿಜಿಸಿಎ ತಿಳಿಸಿದೆ. ವಿಮಾನಗಳ ಸಂಖ್ಯೆಯನ್ನು ತ್ವರಿತವಾಗಿ ಹೆಚ್ಚಿಸುವಂತೆ ಮತ್ತು ಶ್ರೀನಗರದಿಂದ ದೇಶದ ಪ್ರಮುಖ ನಗರಗಳಿಗೆ ತಡೆರಹಿತ ಸೇವೆಗಳನ್ನು ನಿರ್ವಹಿಸುವಂತೆ ಅದು ವಿಮಾನಯಾನ ಸಂಸ್ಥೆಗಳನ್ನು ಒತ್ತಾಯಿಸಿದೆ. ಆವರ್ತನವನ್ನು ಹೆಚ್ಚಿಸುವುದರ ಜೊತೆಗೆ, ವಿಮಾನಯಾನ…

Read More

ಶ್ರೀನಗರ: ಮಂಗಳವಾರ ಭಯೋತ್ಪಾದಕರು ಪಹಲ್ಗಾಮ್ ನ ಪ್ರಮುಖ ಪ್ರವಾಸಿ ತಾಣದ ಮೇಲೆ ದಾಳಿ ಮಾಡಿ ಇಬ್ಬರು ವಿದೇಶಿಯರು ಮತ್ತು ಇಬ್ಬರು ಸ್ಥಳೀಯರು ಸೇರಿದಂತೆ 28 ಜನರನ್ನು ಕೊಂದ ನಂತರ ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಪೊಲೀಸರು ಸಹಾಯ ಕೇಂದ್ರ ಮತ್ತು ವಾಟ್ಸಾಪ್ ಸಂಖ್ಯೆಯನ್ನು ಸ್ಥಾಪಿಸಿದ್ದಾರೆ. “ಪ್ರವಾಸಿಗರಿಗೆ 24/7 ತುರ್ತು ಸಹಾಯ ಕೇಂದ್ರ – ಅನಂತನಾಗ್ ಪೊಲೀಸ್ ನಿಯಂತ್ರಣ ಕೊಠಡಿ. ಸಹಾಯ ಅಥವಾ ಮಾಹಿತಿ ಅಗತ್ಯವಿರುವ ಪ್ರವಾಸಿಗರಿಗೆ ಸಹಾಯ ಮಾಡಲು ಅನಂತನಾಗ್ ಪೊಲೀಸ್ ನಿಯಂತ್ರಣ ಕೊಠಡಿಯಲ್ಲಿ ಮೀಸಲಾದ ಸಹಾಯ ಕೇಂದ್ರವನ್ನು ಸ್ಥಾಪಿಸಲಾಗಿದೆ” ಎಂದು ಅನಂತನಾಗ್ ಪೊಲೀಸರು X ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಸಂಪರ್ಕ ವಿವರಗಳು – 9596777669 – 01932225870 – ವಾಟ್ಸಾಪ್: 9419051940 ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ, & ಕೆ ಹಂಚಿಕೊಂಡ ಸಂಪರ್ಕ ಸಂಖ್ಯೆಗಳು – 01932222337 – 7780885759 – 9697982527 – 6006365245 ತುರ್ತು ನಿಯಂತ್ರಣ ಕೊಠಡಿ – ಶ್ರೀನಗರ – 0194-2457543 – 0194-2483651 ಆದಿಲ್…

Read More

ಬೆಂಗಳೂರು: ಖಾಸಗಿಯವರಿಂದ ಕೆರೆ ಒತ್ತುವರಿಯಾಗಿರುವ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ. ಖಾಸಗಿಯವರಿಂದ ಒತ್ತುವರಿಯಾಗಿರುವ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯದಲ್ಲಿ ಒಟ್ಟು ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಅಂದಾಜು 10710  ಕೆರೆಗಳ ಅಳತೆ ಬಾಕಿ ಇದ್ದು ಎರಡು ತಿಂಗಳ ಒಳಗೆ ಸರ್ವೇ ಕಾರ್ಯ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲು ಅಭಿವೃದ್ಧಿ ಆಯುಕ್ತರಿಗೆ ಸೂಚಿಸಿದರು ವಿವಿಧ ಇಲಾಖಾವಾರು ವ್ಯಾಪ್ತಿಗೆ ಬರುವ ಕೆರೆಗಳ ಸರ್ವೆ ಕಾರ್ಯ, ಒತ್ತುವರಿ ತೆರವುಗೊಳಿಸಿರುವ ಹಾಗೂ ತೆರವಿಗೆ ಬಾಕಿ ಇರುವ ಕೆರೆಗಳ ಮಾಹಿತಿ ಪಡೆದರು. ಗ್ರಾಮೀಣಾಭಿವೃದ್ಧಿ, ಸಣ್ಣ ನೀರಾವರಿ, ಬಿಬಿಎಂಪಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ, ಬೃಹತ್ ನೀರಾವರಿ ಇಲಾಖೆ, ಅರಣ್ಯ, ಕಂದಾಯ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಾಜ್ಯದಲ್ಲಿರುವ  41875 ಕೆರೆಗಳ ಪೈಕಿ 31033 ಕೆರೆಗಳು  ಅಳತೆ ಯಾಗಿವೆ. 11212 ಒತ್ತುವರಿ…

Read More

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ)ಆಹ್ವಾನದ ಮೇರೆಗೆ ಬಂದಿದ್ದ ಶ್ರೀಲಂಕಾ ಮತ್ತು ನೇಪಾಳ ಪತ್ರಕರ್ತರ ನಿಯೋಗ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಚರ್ಚೆ ನಡೆಸಿತು. ರಾಜ್ಯದಲ್ಲಿ ವಿಧಾನಸಭೆ ಕಲಾಪಗಳು ಹೇಗೆ ನಡೆಯುತ್ತವೆ ಎನ್ನುವ ಮಾಹಿತಿಯನ್ನು ತಿಳಿದುಕೊಂಡರು ಮತ್ತು ಅಲ್ಲಿರುವ ವ್ಯವಸ್ಥೆಯ ಬಗ್ಗೆಯೂ ಅವರು ಮಾಹಿತಿ ನೀಡಿದರು. ಎಶಿಯನ್ ಮೀಡಿಯಾ ಕಲ್ಚರಲ್ ಅಸೋಶಿಯೇಶನ್‌ನ ಅಧ್ಯಕ್ಷ ಪುಪಲ್ ಜನಕ ಜಯಸಿಂಗೆ, ಸುಭಾಷಿನಿ ಡಿಸಿಲ್ವಾ, ಶುಭ ರತ್ನಾಯಕೆ, ಬರ್ನಾಡ್, ನೇಪಾಳದ ಹಿರಿಯ ಪತ್ರಕರ್ತರಾದ ಸಂಜೋತಾ ಗೋಡಲ್, ಸರೋಜ ದಹಲ್, ಕೆಯುಡಬ್ಲೂೃಕೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ವಿಧಾನಸಭೆ ಸ್ಪೀಕರ್ ಕಚೇರಿಯ ಸಂಯೋಜಕ ಜ್ಞಾನಶೇಖರ್ ಹಾಜರಿದ್ದರು. https://kannadanewsnow.com/kannada/breaking-harsh-action-against-wing-commander-who-attacked-kannadigas-cm-siddaramaiah-orders/ https://kannadanewsnow.com/kannada/big-news-tahsildar-caught-by-lokayukta-for-accepting-rs-3-50-lakh-bribe-to-get-govt-jobs/

Read More

ನವದೆಹಲಿ: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯ ನಂತ್ರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಅಲ್ಲದೇ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಬಗ್ಗೆ ದೆಹಲಿ ಪೊಲೀಸ್ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೆಹಲಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪ್ರವಾಸಿ ಸ್ಥಳಗಳು ಮತ್ತು ಇತರ ಪ್ರಮುಖ ಸ್ಥಳಗಳ ಮೇಲೆ ತೀವ್ರ ನಿಗಾ ಇಡಲು ದೆಹಲಿ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಮತ್ತೊಂದೆಡೆ ಪಹಲ್ಗಾಮ್ ನಲ್ಲಿ ಉಗ್ರರ ಅಟ್ಟಹಾಸದ ಬೆನ್ನಲ್ಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಮಹತ್ವದ ತುರ್ತು ಸಭೆಯನ್ನು ನಡೆಸಲಾಗುತ್ತಿದೆ. ಈ ಸಭೆಯಲ್ಲಿ ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಗಳು, ಜಮ್ಮು-ಕಾಶ್ಮೀರದ ಭದ್ರತಾ ಅಧಿಕಾರಿಗಳು ಸೇರಿದಂತೆ ವಿವಿಧ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ನಾಳೆ ಘಟನಾ ಸ್ಥಳಕ್ಕೂ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ ಎನ್ನಲಾಗುತ್ತಿದೆ. https://kannadanewsnow.com/kannada/breaking-harsh-action-against-wing-commander-who-attacked-kannadigas-cm-siddaramaiah-orders/ https://kannadanewsnow.com/kannada/big-news-tahsildar-caught-by-lokayukta-for-accepting-rs-3-50-lakh-bribe-to-get-govt-jobs/

Read More

ನವದೆಹಲಿ: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾರ್ ನಲ್ಲಿ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿಯನ್ನೇ ನಡೆಸಿದ್ದಾರೆ. ಈ ದಾಳಿಯಲ್ಲಿ ಈವರೆಗೆ 30 ಪ್ರವಾಸಿಗರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದಿಂದ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ. ತುರ್ತು ನಿಯಂತ್ರಣ ಕೊಠಡಿ – ಶ್ರೀನಗರ: 0194-2457543, 0194-2483651 ಆದಿಲ್ ಫರೀದ್, ಎಡಿಸಿ ಶ್ರೀನಗರ – 7006058623. ಪಹಲ್ಗಾಮ್ ಭಯೋತ್ಪಾದಕ ಘಟನೆಯ ಕುರಿತು ಸಹಾಯಕ್ಕಾಗಿ ಸಹಾಯವಾಣಿ ಎಂದು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ. https://twitter.com/ANI/status/1914692106750234857 ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರದ ಶ್ರೀನಗರಕ್ಕೆ ಆಗಮಿಸಿದ್ದಾರೆ. https://twitter.com/ANI/status/1914698972947447897 https://kannadanewsnow.com/kannada/breaking-harsh-action-against-wing-commander-who-attacked-kannadigas-cm-siddaramaiah-orders/ https://kannadanewsnow.com/kannada/pahalgam-one-more-kannadiga-killed-in-terror-attack/

Read More

ಬೆಂಗಳೂರು: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಇಂದು ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಇಂದಿನ ಭಯೋತ್ಪಾದಕರ ದಾಳಿಯಲ್ಲಿ ಶಿವಮೊಗ್ಗ ಮೂಲದ ಮಂಜುನಾಥ್ ಎಂಬುವರು ಬಲಿಯಾಗಿ್ದದಾರೆ. ಇವರಲ್ಲದೇ ಉಗ್ರರ ದಾಳಿಯಲ್ಲಿ ಮತ್ತೊಬ್ಬ ಕನ್ನಡಿಗ ಬಲಿಯಾಗಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಭರತ್ ಭೂಷಣ್ ಎಂಬುವರು ಉಗ್ರರ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸರನ್ ಕಣಿವೆಯಲ್ಲಿ ರಾಜಸ್ಥಾನದ ಪ್ರವಾಸಿಗರ ಗುಂಪಿನ ಮೇಲೆ ದಾಳಿ ನಡೆಸಲಾಯಿತು. ಕಣಿವೆಯ ಮೇಲ್ಭಾಗದಲ್ಲಿ ಗುಂಡಿನ ದಾಳಿ ನಡೆದಿತ್ತು.  ಇದೇ ಗುಂಡಿನ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ. ಹೌದು ಇನ್ನು ಉಗ್ರರ ಗುಂಡಿನ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ನಗರದ ನಿವಾಸಿ ಮಂಜುನಾಥ್ ಇದೀಗ ಸಾವನಪ್ಪಿದ್ದಾರೆ. ಇನ್ನೊರ್ವ ಕನ್ನಡಿಗ ಅಭಿಜ್ಞಾ ರಾವ್ ಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮಂಜುನಾಥ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ ಮೃತ ಮಂಜುನಾಥ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು ಎಂದು…

Read More

ಬೆಂಗಳೂರು: ಇಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ 27ಕ್ಕೂ ಹೆಚ್ಚು ಸಾವನ್ನಪ್ಪಿದ್ದಾರೆ. ಕನ್ನಡಿಗ ಶಿವಮೊಗ್ಗ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಎಂಬುವರು ಉಗ್ರರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಇನ್ನೂ ಹಲವು ಕನ್ನಡಿಗರು ಜಮ್ಮ-ಕಾಶ್ಮೀರದಲ್ಲಿ ಸಿಲುಕಿತ್ತು, ಅವರ ರಕ್ಷಣೆಗಾಗಿ ಐಪಿಎಸ್ ಅಧಿಕಾರಿ ಚೇತನ್.ಆರ್ ನೇತೃತ್ವದ ತಂಡ ತೆರಳುತ್ತಿದೆ. ಈ ಬಗ್ಗೆ ಎಕ್ಸ್ ನಲ್ಲಿ ಟ್ವಿಟ್ ಮಾಡಿ ಸಿಎಂ ಮಾಹಿತಿ ಹಂಚಿಕೊಂಡಿದ್ದು, ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡು, ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದರು. ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂತೆ ದೆಹಲಿಯ ರೆಸಿಡೆಂಟ್ ಕಮಿಷನರ್ ಅವರಿಗೆ ಸೂಚನೆ ನೀಡಲಾಗಿದೆ. IPS ಅಧಿಕಾರಿ ಚೇತನ್…

Read More