Subscribe to Updates
Get the latest creative news from FooBar about art, design and business.
Author: kannadanewsnow09
ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಅಶ್ವಿನಿ ಕುಮಾರರ ಹೆಸರನ್ನು ಕೇಳಿರುತ್ತೀರಿ ಇವರು ವೈದ್ಯ ದೇವತೆಗಳು ಋಗ್ವೇದದಲ್ಲಿ ದೈವಿಕ ಅವಳಿ ಕುದುರೆ ಸವಾರರು, ಮೋಡಗಳ ದೇವತೆಗಳು ಇವರು ಸೂರ್ಯೋದಯ ಮತ್ತು ಸೂರ್ಯಾಸ್ತದ ಹೊಳಪನ್ನು ಸಂಕೇತಿಸುತ್ತಾರೆ, ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಸೂರ್ಯೋದಯಕ್ಕೆ ಮುಂಚೆ ಆಕಾಶದಲ್ಲಿ ಸುವರ್ಣ ರಥದಲ್ಲಿ ಕಾಣಿಸಿಕೊಳ್ಳುತ್ತಾರೆ ಮತ್ತು ಮನುಷ್ಯರಿಗೆ ಸಂಪತ್ತನ್ನು ದಯಪಾಲಿಸುತ್ತಾರೆ ಮತ್ತು…
ಬೆಂಗಳೂರು: ಗ್ರೇಟರ್ ಬೆಂಗಳೂರು ರಚಿಸುವ ಮೂಲಕ ಬೆಂಗಳೂರನ್ನು ಒಡೆಯುವ ಕೆಲಸಕ್ಕೆ ಕೈ ಹಾಕಿರುವುದು ಖಂಡಿತ ಸರಿಯಲ್ಲ ಎಂಬುದು ಎಲ್ಲರ ಒಮ್ಮತದ ಅಭಿಪ್ರಾಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯ ಸರಕಾರ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೃಹತ್ ಬೆಂಗಳೂರು ಮಹಾನಗರಪಾಲಿಕೆಯನ್ನು ಗ್ರೇಟರ್ ಬೆಂಗಳೂರು ಮಾಡಲು ಹೊರಟಿದ್ದಾರೆ. ಈ ತೀರ್ಮಾನದ ಕುರಿತ ಸಾಧಕ- ಬಾಧಕಗಳ ವಿಷಯದಲ್ಲಿ ನಗರದ ಪ್ರಮುಖರ ಜೊತೆ ಚರ್ಚೆ ಮಾಡಿದ್ದೇವೆ ಎಂದರು. ಬೆಂಗಳೂರನ್ನು ಒಡೆಯುವುದು ನಗರದ ಅಭಿವೃದ್ಧಿಯ ದೃಷ್ಟಿಯಿಂದಲೂ ಒಳ್ಳೆಯದಲ್ಲ ಎಂದ ಅವರು, ಯಾವುದೇ ಕಾರಣಕ್ಕೆ ಇದಕ್ಕೆ ಅವಕಾಶ ಕೊಡಬಾರದು ಎಂದು ಸಭೆಯಲ್ಲಿ ಚರ್ಚೆ ಆಗಿದೆ ಎಂದು ವಿವರಿಸಿದರು. ಮಾರ್ಚ್ 3ರಿಂದ ಅಧಿವೇಶನ ಆರಂಭ ಆಗಲಿದೆ. ಬಜೆಟ್ ಮಂಡನೆ ಆಗಲಿದೆ. ಸದನದಲ್ಲಿ ಯಾವ ವಿಚಾರ ಕೈಗೆತ್ತಿಕೊಳ್ಳಬೇಕು, ಯಾವ ವಿಷಯಗಳನ್ನು ಚರ್ಚಿಸಬೇಕೆಂಬ ನಿಟ್ಟಿನಲ್ಲಿ ಕೂಡ ನಮ್ಮೆಲ್ಲ ಶಾಸಕರು, ವಿಪಕ್ಷ ನಾಯಕರು ಚರ್ಚೆ ಮಾಡಿದ್ದೇವೆ ಎಂದು…
ಶಿವಮೊಗ್ಗ: ಜಿಲ್ಲೆಯ ಸಾಗರದ ವಕೀಲರ ಸಂಘದ ಪದಾಧಿಕಾರಿಗಳ ಆಯ್ಕೆಗಾಗಿ ಚುನಾವಣೆ ನಡೆಯಿತು. ಇಂದಿನ ಅಧ್ಯಕ್ಷೀಯ ಚುನಾವಣೆಯಲ್ಲಿ ವಕೀಲ ಗಿರೀಶ್ ಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದ ವಕೀಲರ ಸಂಘಕ್ಕೆ ಇಂದು ಚುನಾವಣೆ ನಡೆಯಿತು. ಅಧ್ಯಕ್ಷರ ಹುದ್ದೆಗೆ ರವೀಶ್ ಕುಮಾರ್.ಡಿ, ಹೆಚ್.ಎನ್ ದಿವಾಕರ್ ಹಾಗೂ ಬಿ.ಗಿರೀಶ್ ಗೌಡ ಸ್ಪರ್ಧಿಸಿದ್ದರು. ಬಿ.ಗಿರೀಶ್ ಗೌಡ 87 ಮತಗಳನ್ನು ಪಡೆಯುವ ಮೂಲಕ ಪ್ರತಿ ಸ್ಪರ್ದಿ ರವೀಶ್ ಕುಮಾರ್.ಡಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನೂ ಕಾರ್ಯದರ್ಶಿ ಸ್ಥಾನಕ್ಕೆ ಸತೀಶ್ ಕುಮಾರ್.ಡಿ, ವಾಸು.ಬಿ ಹಾಗೂ ಶೇಖರಪ್ಪ ಕಣದಲ್ಲಿದ್ದರು. ಶೇಖರಪ್ಪ ಅವರು 83 ಮತಗಳನ್ನು ಗಳಿಸುವ ಮೂಲಕ ಸತೀಶ್ ಕುಮಾರ್.ಡಿ ವಿರುದ್ಧ ಗೆಲುವು ಸಾಧಿಸಿದರು. ಖಜಾಂಚಿ ಸ್ಥಾನಕ್ಕೆ ನಡೆದಂತ ಚುನಾವಣೆಯಲ್ಲಿ ಪರಿಮಳ.ಎ ಅವರು 90 ಮತಗಳನ್ನು ಪಡೆದು, ಪ್ರತಿ ಸ್ಪರ್ಧಿ ಪ್ರಕಾಶ್ ವಿರುದ್ಧ ಗೆಲುವು ಸಾಧಿಸಿದ್ದಾರೆ. ಹೀಗಿದೆ ಸಾಗರ ವಕೀಲರ ಸಂಘದ ಚುನಾವಣೆಯ ಫಲಿತಾಂಶದ ಅಂಕಿ ಅಂಶಗಳ ವಿವರ ಅಧ್ಯಕ್ಷೀಯ ಚುನಾವಣೆ 1.ಎಂ. ಬಿ. ಗಿರೀಶ ಗೌಡ,…
ಬೆಂಗಳೂರು: ನಗರದ ಕೋರಮಂಗಲ ವ್ಯಾಪ್ತಿಯ ಹೋಟೆಲ್ ಮಹಡಿಯ ಮೇಲೆ ಮಹಿಳೆಯೊಬ್ಬರ ಮೇಲೆ ನಾಲ್ವರು ಯುವಕರಿಂದ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿರುವುದಾಗಿ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಮೇಲೆ ನಾಲ್ವರು ಆರೋಪಿಗಳಿಂದ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ನಮಗೆ ಬೆಳಿಗ್ಗೆ 7 ರಿಂದ 8 ಗಂಟೆಯ ಹೊತ್ತಿಗೆ ಮಾಹಿತಿ ಸಿಕ್ಕಿತು. ಈಗಾಗಲೇ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ ಎಂದರು. ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದಂತ ಫ್ರೆಂಡ್ಸ್ ಮಾತನಾಡಿಸಲು ಮಹಿಳೆ ತೆರಳಿದಾಗ ಈ ಕೃತ್ಯ ಎಸಗಲಾಗಿದೆ. ಎಲ್ಲರೂ ಉತ್ತರ ಭಾರತದವರು. ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ. ಗ್ಯಾಂಗ್ ರೇಪ್ ಪ್ರಕರಣದ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ. ಸಂತ್ರಸ್ತ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬುದಾಗಿ ಬೆಂಗಳೂರಿನ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಮಾಹಿತಿ ನೀಡಿದ್ದಾರೆ. https://kannadanewsnow.com/kannada/gujarat-five-killed-over-23-injured-in-bus-accident/ https://kannadanewsnow.com/kannada/big-news-nps-abolished-cm-dycm-clear-message-for-implementation-of-ops-cs-shadakshari-2/
ಭುಜ್: ಗುಜರಾತ್ನ ಕಚ್ ಜಿಲ್ಲೆಯಲ್ಲಿ ಶುಕ್ರವಾರ ಖಾಸಗಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 23 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆದ್ದಾರಿಯ ಕೇರಾ ಗ್ರಾಮದ ಬಳಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಗಾಯಗೊಂಡವರನ್ನು ಭುಜ್ನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಮುಂದ್ರಾದಿಂದ ಭುಜ್ಗೆ ಬರುತ್ತಿದ್ದ ಟ್ರಕ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಓರ್ವ ಪ್ರಯಾಣಿಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಒಟ್ಟು ಐದು ಜನರು ಸಾವನ್ನಪ್ಪಿದ್ದಾರೆ ಎಂದು ಕಚ್ ಪಶ್ಚಿಮ ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಸುಂಡಾ ತಿಳಿಸಿದ್ದಾರೆ. ಅಪಘಾತದಲ್ಲಿ 23 ಜನರು ಗಾಯಗೊಂಡಿದ್ದು, ಭುಜ್ನ ಜೆಕೆ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಜಿಲ್ಲಾಧಿಕಾರಿ ಅಮಿತ್ ಅರೋರಾ ತಿಳಿಸಿದ್ದಾರೆ. https://kannadanewsnow.com/kannada/shivamogga-power-outages-in-these-areas-of-the-district-tomorrow-aads/ https://kannadanewsnow.com/kannada/there-will-be-no-electricity-in-these-areas-from-10-am-tomorrow/
ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯಲ್ಲಿ ಎನ್.ಟಿ.ರಸ್ತೆ ನ್ಯಾಷನಲ್ ಹೈವೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 22 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹರಕೆರೆ, ಹಳೇ ಮಂಡ್ಲಿ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಮಂಜುನಾಥ ರೈಸ್ಮಿಲ್, ಬೆನಕೇಶ್ವರ ರೈಸ್ಮಿಲ್, ರಾಮಿನಕೊಪ್ಪ ಅನ್ನಪೂರ್ಣೇಶ್ವರಿ ಬಡಾವಣೆ, ಹೊಸಹಳ್ಳಿ, ಲಕ್ಷ್ಮೀಪುರ, ಹೊಸೂರು, ಐಹೊಳೆ, ಭಾರತಿನಗರ, ಶಾರದನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಫೆ. 24ರಂದು ವಿದ್ಯುತ್ ವ್ಯತ್ಯಯ ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಹತ್ತಿರದ ಶಿವಾಜಿ ರಸ್ತೆಯಲ್ಲಿ ವಿದ್ಯುತ್ ಕಂಬಗಳನ್ನು ಬದಲಿಸುವ ಕಾಮಗಾರಿ ಇರುವುದರಿಂದ ಫೆ.24 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ಗಾಂಧಿಬಜಾರ್, ಎಲೆರೇವಣ್ಣ ಕೇರಿ, ಯಾಲಕಪ್ಪಕೇರಿ, ಬೇಡರಕೇರಿ, ಅಶೋಕರಸ್ತೆ, ಅನವೇರಪ್ಪ ಕೇರಿ, ರಾಮಣ್ಣಶ್ರೇಷ್ಠಿ ಪಾರ್ಕ್, ಎಸ್ಪಿಎಂ ರಸ್ತೆ, ಮೀನು ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. https://kannadanewsnow.com/kannada/do-you-know-how-many-people-from-karnataka-travelled-by-train-to-the-maha-kumbh-mela-here-are-the-details/ https://kannadanewsnow.com/kannada/big-news-nps-abolished-cm-dycm-clear-message-for-implementation-of-ops-cs-shadakshari-2/
ಬೆಂಗಳೂರು: ಇದೇ ಫೆಬ್ರವರಿ 26, 2025ಕ್ಕೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವಂತ ಮಹಾ ಕುಂಭಮೇಳಕ್ಕೆ ತೆರೆ ಬೀಳಲಿದೆ. ಇಂತಹ ಮಹಾ ಕುಂಭಮೇಳಕ್ಕೆ ಇದುವರೆಗೆ ಕರ್ನಾಟಕದಿಂದ ಹೋಗಿ ಬಂದವರೆಷ್ಟು ಅನ್ನೋ ಅಂಕಿ ಅಂಶ ಮುಂದಿದೆ ಓದಿ. ನೈಋತ್ಯ ರೈಲ್ವೆ ಕುಂಭಮೇಳಕ್ಕೆ ತನ್ನ ಮೂರು ವಿಭಾಗಗಳಿಂದ 20 ಟ್ರಿಪ್ ಗಳೊಂದಿಗೆ ಗಮನಾರ್ಹ ಕಾರ್ಯಕ್ಷಮತೆಯನ್ನು ಸಾಧಿಸಿ, 45,568 ಕ್ಕೂ ಹೆಚ್ಚು ಪ್ರಯಾಣಿಕರನ್ನು ಸಾಗಿಸಿದೆ. (26 ಡಿಸೆಂಬರ್ 2024 ರಿಂದ 24 ಫೆಬ್ರವರಿ 2025 ವರಗೆ) ನೈಋತ್ಯ ರೈಲ್ವೆ ತನ್ನ ಮೂರು ವಿಭಾಗಗಳಾದ ಹುಬ್ಬಳ್ಳಿ, ಬೆಂಗಳೂರು ಮತ್ತು ಮೈಸೂರಿನಿಂದ 20 ಪ್ಯಾಸೆಂಜರ್ ಟ್ರಿಪ್ ಗಳನ್ನು ಯಶಸ್ವಿಯಾಗಿ ನಿರ್ವಹಿಸಿ, ಒಟ್ಟು 45,568 ಪ್ರಯಾಣಿಕರನ್ನು ಸಾಗಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ. ಈ ವಿಶೇಷ ಟ್ರಿಪ್ ಗಳಿಂದ ರೈಲ್ವೆ 4,95,14,078 ರೂಪಾಯಿಗಳ ಆದಾಯವನ್ನು ಗಳಿಸಿದೆ. ಇದು ದಕ್ಷತೆಯನ್ನು ಮತ್ತು ಉತ್ತಮ ಕಾರ್ಯಾಚರಣೆಯನ್ನು ಪ್ರತಿಬಿಂಬಿಸುತ್ತದೆ. ಈ ರೈಲುಗಳು ಅತ್ಯಂತ ಜನಪ್ರಿಯವಾಗಿದ್ದು, ಸರಾಸರಿ 143.8% ಸೀಟ್ ಬರ್ತಿಯೊಂದಿಗೆ ರೈಲುಗಳ ಬಲವಾದ…
BREAKING: ರಾಜ್ಯದ ವಾಹನ ಸವಾರರಿಗೆ ಬಿಗ್ ರಿಲೀಫ್: ‘HSRP ನಂಬರ್ ಪ್ಲೇಟ್’ ಅಳವಡಿಕೆ ಗಡುವು ಮಾ.31ರವರೆಗೆ ವಿಸ್ತರಣೆ.!
ಬೆಂಗಳೂರು: ರಾಜ್ಯ ಸರ್ಕಾರದಿಂದ ವಾಹನ ಮಾಲೀಕರಿಗೆ ಬಿಗ್ ರಿಲೀಫ್ ಎನ್ನುವಂತೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯ ಗಡುವನ್ನು ಮತ್ತೆ ವಿಸ್ತರಣೆ ಮಾಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸದ್ದು, ದಿನಾಂಕ 01-04-2019ಕ್ಕಿಂತ ಪೂರ್ವದಲ್ಲಿ ನೋಂದಣಿಯಾಗಿರುವ ಎಲ್ಲಾ ವರ್ಗದ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ಸರ್ಕಾರ ದಿನಾಂಕ 17-08-2023ರಲ್ಲಿ ಅಧಿಸೂಚನೆ ಹೊರಡಿಸಿತ್ತು. ಅಲ್ಲದೇ ಕಾಲಮಿತಿಯನ್ನು ನಿಗದಿ ಪಡಿಸಿತ್ತು ಎಂದಿದೆ. ಇನ್ನೂ ಅನೇಕ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ದಿನಾಂಕ 31-03-2025ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಉಳಿದಂತೆ ದಿನಾಂಕ 17-08-2023ರಲ್ಲಿ ಹೊರಡಿಸಿದಂತ ಆದೇಶದಲ್ಲಿ ಬೇರೆ ಯಾವುದೇ ಬದಲಾವಣೆ ಇರುವುದಿಲ್ಲ ಅಂತ ತಿಳಿಸಿದೆ. https://kannadanewsnow.com/kannada/ias-officer-rohini-sindhuri-gets-temporary-relief-in-defamation-case/ https://kannadanewsnow.com/kannada/rowdy-sheeter-shot-in-the-leg-by-police-in-shivamogga-arrested/
ಶಿವಮೊಗ್ಗ: ಜಿಲ್ಲೆಯಲ್ಲಿ ಪೊಲೀಸರ ಗುಂಡಿನ ಸದ್ದು ಕೇಳಿ ಬಂದಿದೆ. ಹಲವು ಪ್ರಕರಣಗಳಲ್ಲಿ ಬೇಕಿದ್ದಂತ ರೌಡಿ ಶೀಟರ್ ಕಾಲಿಗೆ ಗುಂಡೇಟು ನೀಡಿ, ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು ಪ್ರಕರಣಗಳಿಗೆ ಬೇಕಿದ್ದಂತ ರೌಡಿ ಶೀಟರ್ ಗುಂಡಾ ಆಲಿಯಾಸ್ ರವಿ ಎಂಬಾತ ಇರುವ ಖಚಿತ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಈ ಮಾಹಿತಿಯನ್ನು ಹೊಸಮನೆ ಪೊಲೀಸರಿಗೆ ಸಿಕ್ಕಿತ್ತು. ಈ ಕೂಡಲೇ ಅಲರ್ಟ್ ಆದಂತೆ ಪೊಲೀಸರು, ಆರೋಪಿ ರವಿಯನ್ನು ಬಂಧಿಸೋದಕ್ಕೆ ತೆರಳಿದ್ದಾರೆ. ಈ ವೇಳೆಯಲ್ಲಿ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿ, ಪರಾರಿಯಾಗಲೂ ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಪಿಎಸ್ಐ ಕೃಷ್ಣ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಪೊಲೀಸರ ವಾರ್ನಿಂಗ್ ಗೂ ಬಗ್ಗದಂತ ಗುಂಡಾ ಆಲಿಯಾಸ್ ರವಿಯ ಕಾಲಿಗೆ ಗುಂಡು ಹಾರಿಸಿ, ಬಂಧಿಸಿದ್ದಾರೆ. ಗುಂಡಿನಿಂದ ಗಾಯಗೊಂಡಿದ್ದಂತ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಗುಂಡಾ ಆಲಿಯಾಸ್ ರೌಡಿ ಶೀಟರ್…
ಬೆಂಗಳೂರು: ಐಪಿಎಸ್ ಅಧಿಕಾರಿ ರೂಪಾ ದಾಖಲಿಸಿದ್ದಂತ ಮಾನನಷ್ಟ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮಾರ್ಚ್.12ರವರೆಗೆ ಮಾನನಷ್ಟ ಪ್ರಕರಣದಕ್ಕೆ ತಡೆಯಾಜ್ಞೆ ನೀಡಿದೆ. ಇಂದು ಹೈಕೋರ್ಟ್ ನಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ರೂಪಾ ದಾಖಲಿಸಿದ್ದಂತ ಮಾನನಷ್ಟ ಪ್ರಕರಣದ ಅರ್ಜಿಯ ವಿಚಾರಣೆ ನಡೆಯಿತು. ರಾಜೀ ಸಂಧಾನಕ್ಕೆ ಪ್ರಯತ್ನಿಸುವಂತೆ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರು ಅಭಿಪ್ರಾಯ ಪಟ್ಟರು. ಅಲ್ಲಿಯವರೆಗೆ ಮಾರ್ಚ್.12ರವರೆಗೆ ಮಾನನಷ್ಟ ಪ್ರಕಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಕೋರ್ಟ್ ಆದೇಶಿಸಿದೆ. ಅಂದಹಾಗೆ ಬೆಂಗಳೂರಿನ 7ನೇ ಎಸಿಎಂಎಂ ಕೋರ್ಟ್ ಗೆ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಖಾಸಗಿ ದೂರು ದಾಖಲಿಸಿದ್ದರು. ಈ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಕೋರ್ಟ್ ನೋಟಿಸ್ ನೀಡಿತ್ತು. ಫೆಬ್ರವರಿ 19, 2023ರಂದು ಮಾಧ್ಯಮ ಹೇಳಿಕೆ ನೀಡಿದ್ದಾರೆ. ನಂತ್ರ ಅದನ್ನು ಎಕ್ಸ್ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಹೇಳಿಕೆಯಲ್ಲಿ ತಮ್ಮ ವಿರುದ್ಧ ಅವಹೇನಕಾರಿ ಆರೋಪ ಮಾಡಿದ್ದಾರೆ. ಈ ಹೇಳಿಕೆಯನ್ನು 1.8 ಲಕ್ಷ ಜನರು…














