Author: kannadanewsnow09

ವಾಸ್ತು, ಇತ್ತೀಚೆಗೆ ನಾವು ಈ ವಾಸ್ತು ಬಗ್ಗೆ ಹೆಚ್ಚು ಮಾತನಾಡುತ್ತಿದ್ದೇವೆ. ಆದರೆ ವಾಸ್ತು ಇಂದು ನಿನ್ನೆಯದಲ್ಲ. ವಾಸ್ತು ರಾಜರ ಕಾಲದಿಂದಲೂ ಇದೆ. ವಾಸ್ತುವನ್ನು ನಂಬುವವರು ಈ ಪರಿಹಾರವನ್ನು ಅನುಸರಿಸಬಹುದು. ಅನೇಕರ ಮನೆಯಲ್ಲಿ ವಾಸ್ತು ಸರಿಯಾಗಿ ಹೊಂದಿಸದೇ ಇರುವುದರಿಂದ ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವರಿಗೆ ಮನೆಯಲ್ಲಿ ನೆಮ್ಮದಿ ಕಳೆದುಕೊಳ್ಳಬಹುದು, ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು, ಕೆಲವರಿಗೆ ಮನೆಯಲ್ಲಿ ಜಗಳಗಳು ಕೂಡ ಬರಬಹುದು. ಕೆಲವು ಮನೆಗಳಲ್ಲಿ ವಾಸ್ತು ಸರಿಯಿಲ್ಲದ ಕಾರಣ ಕುಟುಂಬ ಎರಡು ಹೋಳಾಗುತ್ತದೆ. ಸಣ್ಣಪುಟ್ಟ ವಾಸ್ತು ಸಮಸ್ಯೆಯಾಗಿದ್ದರೆ ಅದನ್ನು ಸುಲಭವಾಗಿ ಸರಿಪಡಿಸಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…

Read More

ಬೆಂಗಳೂರು: ನಿನ್ನೆ ನಿಧನರಾದಂತ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆಯನ್ನು ಇಂದು ಅವರ ಹುಟ್ಟೂರು ಮದ್ಧೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಇಂದು ಪಾರ್ಥೀವ ಶರೀರವನ್ನು ಕೊಂಡೊಯ್ಯಲಿರುವಂತ ರೂಟ್ ಮ್ಯಾಪ್ ಈ ಕೆಳಗಿನಂತಿದೆ. ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿದ್ದು, ಇಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮಧ್ಯಾಹ್ನ 3 ಗಂಟೆಯ ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಒಕ್ಕಲಿಗರ ಸಂಪ್ರದಾಯದಂತೆ ನೆರವೇರಿಸಲಾಗುತ್ತದೆ ಎಂದರು. ಇಂದು ಬೆಳಿಗ್ಗೆ 10.30ಕ್ಕೆ ಮದ್ಧೂರು ಪಟ್ಟಣವನ್ನು ಮಾಜಿ ಸಿಎಂ ಎಸ್ ಎಂ ಕೃಷ್ಣ ಪಾರ್ಥೀವ ಶರೀರ ತಲುಪಲಿದೆ. ಟೌನ್ ಹಾಲ್ ನಿಂದ ಸಾಗಲಿರುವಂತ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರವು, ಮೈಸೂರು ಬ್ಯಾಂಕ್ ಸರ್ಕಲ್, ಕೆ ಆರ್ ಆರ್ಚ್, ಕೆಂಗೇರಿ, ಬಿಡದಿ ಮೂಲಕ ಸಾಗಲಿದೆ. ರಾಮನಗರ, ಚನ್ನಪಟ್ಟಣದಲ್ಲೂ ಅಭಿಮಾನಿಗಳು, ಹಿತೈಶಿಗಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಎನ್ ಪಿ ಎಸ್ ನೌಕರರ ಕುಟುಂಬ ಪಿಂಚಣಿ ಪ್ರಸ್ತಾವನೆಯೊಂದಿಗೆ ಪರಿಶೀಲನಾ ಪಟ್ಟಿಯನ್ನು ಸಲ್ಲಿಸಲು ಮಹತ್ವದ ಆದೇಶ ಹೊರಡಿಸಿದೆ. ಈ ಸಂಬಂಧ ಖಜಾನೆ ಆಯುಕ್ತಾಲಯದ ಆಯುಕ್ತರು ರಾಜ್ಯದ ಎಲ್ಲಾ ಖಜಾನೆಯ ಪ್ರಭಾರಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಎನ್.ಪಿ.ಎಸ್. ನೌಕರರ ಕುಟುಂಬ ಪಿಂಚಣಿ ಪರಿವರ್ತನೆಯ ಪ್ರಸ್ತಾವನೆಗಳನ್ನು ರಾಜ್ಯದ ಖಜಾನೆಗಳಿಂದ ಎನ್.ಪಿ.ಎಸ್. ಘಟಕಕ್ಕೆ ಸಲ್ಲಿಸುತ್ತಿರುವುದು ಸರಿಯಷ್ಟೇ, ಸದರಿ ಪುಸ್ತಾವನೆಗಳಲ್ಲಿ ಡಿ.ಡಿ.ಓ.ರವರು ಅಪೂರ್ಣ ಮಾಹಿತಿ ಹಾಗೂ ಅಪೂರ್ಣ ದಾಖಲೆಗಳನ್ನು ನೀಡುತ್ತಿದ್ದು, ಅವುಗಳನ್ನು ಗಮನಿಸದ ಖಜಾನಾಧಿಕಾರಿಗಳು ನೇರವಾಗಿ ಎನ್.ಪಿ.ಎಸ್. ಘಟಕಕ್ಕೆ ಪುಸ್ತಾವನಗಳನ್ನು ಸಲ್ಲಿಸುತ್ತಿರುವುದು ಕಂಡುಬರುತ್ತಿದೆ. ಇದರಿಂದಾಗಿ ಎನ್.ಪಿ.ಎಸ್. ಘಟಕದಲ್ಲಿ ಪ್ರಸ್ತಾವನೆಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಲು ಸಾಧ್ಯವಾಗದೇ, ಪೂರಕ ದಾಖಲೆಗಳ ಕೊರತೆಯಿಂದ ಪುಸ್ತಾವನೆಗಳನ್ನು ಹಿಂದಿರುಗಿಸಲಾಗುತ್ತಿದೆ ಎಂದಿದೆ. ಈ ಸಂಬಂಧ ಪತ್ರದೊಂದಿಗೆ ಲಗತ್ತಿಸಲಾಗಿರುವ ಹೊಸ ಪರಿಶೀಲನಾ ಪಟ್ಟಿ (Check List) ಯಂತ ದಾಖಲೆಗಳನ್ನು ಸಿದ್ಧಪಡಿಸಿ, ದೃಢೀಕರಿಸಿ ಕಡ್ಡಾಯವಾಗಿ ಸಲ್ಲಿಸುವಂತೆ ತಿಳಿಸಿ ಪರಿಶೀಲನಾ ಪಟ್ಟಿ (Check List) ಯನ್ನು ಡಿಡಿಓಗಳಿಗೆ ನೀಡುವುದು ಹಾಗೂ…

Read More

ಚಿತ್ರದುರ್ಗ: ಕೊಪ್ಪಳದ ಬಳಿಕ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲೂ ಮಂಗಳವಾರ ಸಂಜೆ ಬಾಣಂತಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಸಾವು ಹಲವು ಅನುಮಾನಗಳಿಗೂ ಕಾರಣವಾಗಿದೆ. ಚಿತ್ರದುರ್ಗ ನಗರದ ಜಿಲ್ಲಾಸ್ಪತ್ರೆಗೆ ಚಳ್ಳಕೆರೆ ತಾಲ್ಲೂಕಿನ ಜಾಗನೂರುಹಟ್ಟಿಯ ಟಿ.ಬಿ ರೋಜಾ(27) ಎಂಬುವರು ಡಿಲವರಿಗಾಗಿ ದಾಖಲಾಗಿದ್ದರು. ಇವರಿಗೆ ಅಕ್ಟೋಬರ್.30ರಂದು ಜಿಲ್ಲಾಸ್ಪತ್ರೆಯಲ್ಲಿ ಸಿಜೇರಿಯನ್ ಆಗಿ ಗಂಡು ಮಗು ಜನಿಸಿತ್ತು. ಡಿಲವರಿ ಆದ 5 ದಿನಗಳ ಬಳಿಕ ಮನೆಗೆ ರೋಜಾ ತೆರಳಿದ್ದರು. ಮಂಗಳವಾರ ಬೆಳಿಗ್ಗೆ ಐದಾರು ಬಾರಿ ವಾಂತಿ ಕಾಣಿಸಿಕೊಂಡಿತ್ತು. ಕೂಡಲೇ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯ ಬಳಿಕ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಇಂತಹ ಬಾಣಂತಿ ರೋಜಾ ಅವರಿಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೇ ಮಂಗಳವಾರ ಸಂಜೆ ಚಿಕಿತ್ಸೆ ಫಲಿಸದೇ ಅಸುನೀಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. https://kannadanewsnow.com/kannada/big-relief-for-common-man-prices-of-tomatoes-onions-soar/ https://kannadanewsnow.com/kannada/kea-recruitment-exams-scheduled-to-be-held-today-postponed-to-tomorrow/

Read More

ಬೆಂಗಳೂರು: ನಿನ್ನೆ ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನರಾದ ಹಿನ್ನಲೆಯಲ್ಲಿ ಇಂದು ಸರ್ಕಾರಿ ರಜೆಯನ್ನು ಘೋಷಿಸಲಾಗಿದೆ. ಹೀಗಾಗಿ ಸಾರ್ವತ್ರಿಕ ರಜೆ ಇರುವ ಕಾರಣ ಇಂದು ನಡೆಯಬೇಕಿದ್ದಂತ ಕೆಇಎ ನೇಮಕಾತಿ ಪರೀಕ್ಷೆಗಳನ್ನು ಡಿಸೆಂಬರ್.12ಕ್ಕೆ ಮುಂದೂಡಿಕೆ ಮಾಡಲಾಗಿದೆ. ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 10-12-2024ರಂದು ಮಾಜಿ ಸಿಎಂ ಮತ್ತು ಕೇಂದ್ರ ಸಚಿವರಾಗಿದ್ದಂತ ಎಸ್ ಎಂ ಕೃಷ್ಣ ಅವರು ನಿಧನರಾಗಿರುವ ಕಾರಣ ದಿನಾಂಕ 11-12-2024ರಂದು ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಸಾರ್ವಜನಿಕ ರಜೆ ಘೋಷಿಸಲಾಗಿರುತ್ತದೆ ಎಂದಿದ್ದಾರೆ. ಆದುದ್ದರಿಂದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿನ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ದಿನಾಂಕ 11-12-2024ರಂದು ನಿಗದಿಪಡಿಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 12-12-2024ಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದೆ.

Read More

ಬೆಂಗಳೂರು : ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಗೆ ರಾಜ್ಯಾದ್ಯಂತ 5,14,000 ನೋಂದಣಿಯಾಗಿದ್ದು ಈ ಪೈಕಿ 1,17,000 ಅರ್ಜಿಗಳು ಸ್ವೀಕೃತವಾಗಿವೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. “ಪಿಎಮ್‌ ಸೂರ್ಯ ಘರ್‌ ಯೋಜನೆಗೆ ಈವರೆಗೆ 5.14 ಲಕ್ಷ ನೋಂದಣಿಯಾಗಿದ್ದು, ಈ ಪೈಕಿ ಸುಮಾರು 1,17,000 ಅರ್ಜಿಗಳು ಸ್ವೀಕೃತವಾಗಿವೆ. ಈ ಯೋಜನೆಯನ್ನು ಕಾರ್ಯಗತಗೊಳಿಸಲು, ಎಮ್ಎನ್‌ಆರ್‌ ಇ ಪೋರ್ಟಲ್‌ ನಲ್ಲಿ 353 ಖಾಸಗಿ ಏಜೆನ್ಸಿಗಳು ನೋಂದಾಯಿಸಿಕೊಂಡಿವೆ” ಎಂದು ಬೆಸ್ಕಾಂ ಎಂಡಿ ವಿವರಿಸಿದರು. “ರಾಜ್ಯಾದ್ಯಂತ ಮನೆಗಳಲ್ಲಿ ಸೌರಶಕ್ತಿಯ ಬಳಕೆಯನ್ನು ಉತ್ತೇಜಿಸಲು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಸಮರ್ಥ ನಾಯಕತ್ವದಲ್ಲಿ ಯೋಜನೆಯನ್ನು ಉತ್ತೇಜಿಸುವ ಗುರಿ ಹೊಂದಿದ್ದೇವೆ. ಈ ಮೂಲಕ ಸಾಂಪ್ರದಾಯಿಕ ಇಂಧನ ಮೂಲಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ ಮತ್ತು ನವೀಕರಿಸಬಹುದಾದ ಇಂಧನದ ರಾಷ್ಟ್ರೀಯ ಗುರಿ ಸಾಧಿಸಲು ಕೊಡುಗೆ ನೀಡುತ್ತೇವೆ” ಎಂದು‌ ಅವರು ಹೇಳಿದರು. “ಗ್ರಿಡ್ ಸಂಪರ್ಕಿತ ಮೇಲ್ಛಾವಣಿ ಸ್ಥಾವರಗಳಿಗೆ ಕೇಂದ್ರ ಸರ್ಕಾರವು 30,000 ರೂ. ರಿಂದ 78,000ರೂ. ವರೆಗೆ ಸಹಾಯಧನ…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಆಯ್ಕೆ ಚುನಾವಣೆ ಗರಿಗೆದರಿದೆ. ಹಾಲಿ ಅಧ್ಯಕ್ಷ ಸಿಎಸ್ ಷಡಕ್ಷರಿ ಅವರು ಮತ್ತೊಂದು ಅವಧಿಗೆ ನೇಮಕ್ಕಾಗಿ ತಮ್ಮ ಉಮೇಧುವಾರಿಕೆಯನ್ನು ಸಲ್ಲಿಸಿದ್ದಾರೆ. 2024-2029ನೇ ಅವಧಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಚುಕ್ಕಾಣಿ ಹಿಡಿಯಲು ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಸಿಎಸ್ ಷಡಕ್ಷರಿ ನಾಮಪತ್ರವನ್ನು ಸಲ್ಲಿಸಿದದಾರೆ. ಹಲವಾರು ಜಿಲ್ಲೆಗಳ ಅಧ್ಯಕ್ಷರು, ತಾಲ್ಲೂಕು ಅಧ್ಯಕ್ಷರು, ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರು ಈ ಚುನಾವಣೆಯಲ್ಲಿ ಭಾಗಿಯಾಗಲಿದ್ದಾರೆ. ಡಿಸೆಂಬರ್.27, 2024ರಂದು ಮತದಾನದಲ್ಲಿ ಪಾಲ್ಗೊಂಡು, ಮತ ಚಲಾಯಿಸಲಿದ್ದಾರೆ. ಡಿಸೆಂಬರ್.8ರಂದು ಬೆಂಗಳೂರಲ್ಲಿ ನಡೆದಿದ್ದ ಸಮಾಲೋಚನಾ ಸಭೆಯಲ್ಲಿ ಹಾಜರಿದ್ದಂತ 850ಕ್ಕೂ ಹೆಚ್ಚು ಮತದಾರರು ಅಧ್ಯಕ್ಷ ಸ್ಥಾನಕ್ಕೆ ಸಿಎಸ್ ಷಡಕ್ಷರಿ ಹಾಗೂ ರಾಜ್ಯ ಖಜಾಂಚಿ ಸ್ಥಾನಕ್ಕೆ ಕೊಪ್ಪಳ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮನ್ನವರ ಹೆಸರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದರು ಎನ್ನಲಾಗುತ್ತಿದೆ. ಆದರೇ ಡಿ.27ರಂದು ನಡೆಯಲಿರುವಂತ ಚುನಾವಣೆಯಲ್ಲಿ ಯಾರು ಗೆಲುವು ಎಂಬುದು ನಿರ್ಧಾರವಾಗಲಿದೆ. https://kannadanewsnow.com/kannada/good-news-for-bagar-hukum-cultivation-farmers-in-the-state-rejected-application-to-be-considered-for-reconsideration/ https://kannadanewsnow.com/kannada/big-relief-for-common-man-prices-of-tomatoes-onions-soar/

Read More

ನವದೆಹಲಿ : ಭಾರಿ ಮಳೆಯಿಂದಾಗಿ ತರಕಾರಿ ಉತ್ಪಾದನೆಗೆ ಅಡ್ಡಿಯುಂಟಾಗಿ, ಬೆಲೆ ಏರಿಕೆಯಾಗಿದ್ದ ಟೊಮೆಟೊ, ಈರುಳ್ಳಿ ಬೆಲೆ ಇಳಿಕೆಯಾಗಿದೆ. ಈ ಮೂಲಕ ಸಾಮಾನ್ಯ ಜನರಿಗೆ ರಿಲೀಫ್ ಸಿಕ್ಕಂತಾಗಿದೆ. ಅಂದ್ಹಾಗೆ, ಈ ಹಿಂದೆ 80 ರೂಪಾಯಿಗೆ ಕೆಜಿಯಿದ್ದ ಟೊಮೆಟೊ ಬೆಲೆ ಕೆ.ಜಿ.ಗೆ 20-30 ರೂ.ಗೆ ಇಳಿದಿದ್ದು, ಮಾರಾಟಗಾರರು 100 ರೂಪಾಯಿಗೆ 5 ಕೆಜಿಯಂತೆ ಮಾರಾಟ ಮಾಡುತ್ತಿದ್ದಾರೆ. ಇನ್ನು 100 ರೂಪಾಯಿಗೆ ಕೆ.ಜಿ ಇದ್ದ ಈರುಳ್ಳಿ ಕೂಡ ಹೆಚ್ಚಿದ ಪೂರೈಕೆಯಿಂದಾಗಿ ಬೆಲೆ ಕಡಿಮೆಯಾಗಿದೆ. ಕೊಯಂಬೇಡು ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಕಡಿಮೆಯಾಗಿದೆ. ಈರುಳ್ಳಿ, ಟೊಮೆಟೊ, ಹಸಿರು ಮೆಣಸಿನಕಾಯಿ, ಬೀಟ್ರೂಟ್, ಆಲೂಗಡ್ಡೆ ಮತ್ತು ಇತರ ತರಕಾರಿಗಳ ಬೆಲೆಯಲ್ಲಿ ಇಳಿಕೆಯಾಗಿದೆ. ಸೋರೆಕಾಯಿ, ಬೀನ್ಸ್, ಎಲೆಕೋಸು, ಕ್ಯಾರೆಟ್ ಮತ್ತು ನುಗ್ಗೆಕಾಯಿಗಳಂತಹ ವಿವಿಧ ತರಕಾರಿಗಳ ಬೆಲೆಗಳು ಇಳಿದಿವೆ. ಅಂದ್ಹಾಗೆ, ಈರುಳ್ಳಿ ಕೆ.ಜಿ.ಗೆ 100 ರೂ., ಟೊಮೆಟೊ ಕೆ.ಜಿ.ಗೆ 80 ರೂ. ಹೆಚ್ಚಿನ ಟೊಮೆಟೊ ಬೆಲೆಗಳು ಗ್ರಾಹಕರನ್ನು ಖರೀದಿಯನ್ನ ಕಡಿಮೆ ಮಾಡಲು ಒತ್ತಾಯಿಸಿತು. ಮನೆಗಳು ಮತ್ತು ರೆಸ್ಟೋರೆಂಟ್ ಗಳು ಬಳಕೆಯನ್ನು ಸೀಮಿತಗೊಳಿಸಿದವು, ಇದು ಟೊಮೆಟೊ…

Read More

ಬೆಳಗಾವಿ : ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಲು ನಮೂನೆ 50, 53, 57 ರಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲಾಗುತ್ತಿದೆ ಎಂದು ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ನಮೂನೆ 57ರ ಅಡಿ ಸಲ್ಲಿಕೆಯಾದ ಒಟ್ಟು 2.23 ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ರಾಜ್ಯಾದ್ಯಂತ ತಿರಸ್ಕೃತಗೊಳಿಸಲಾಗಿದೆ. ಒಂದು ವೇಳೆ ರೈತರು ಇದರಿಂದ ಬಾಧಿತರಾಗಿದ್ದರೆ, ಉಪವಿಭಾಗಾಧಿಕಾರಿಗೆ ಮೇಲ್ಮನವಿ ಸಲ್ಲಿಸಬಹುದು. ಪ್ರಕರಣಗಳನ್ನು ಮರು ಪರಿಶೀಲಿಸುವಂತೆ ಉಪವಿಭಾಗಾಧಿಕಾರಿಗಳು ಸೂಚಿಸಿದರೆ, ಬಗರ್ ಹುಕುಂ ಸಮಿತಿಗಳಲ್ಲಿ ತಿರಸ್ಕೃತಗೊಂಡ ನಮೂನೆ 57ರ ಅರ್ಜಿಗಳನ್ನು ಪುನರ್ ಪರಿಶೀಲನೆಗೆ ಪರಿಗಣಿಸಲಾಗುವುದು. https://twitter.com/KarnatakaVarthe/status/1866357481666212181 ಬಗರ್ ಹುಕುಂ ಅಡಿ ಅರ್ಜಿ ಸಲ್ಲಿಸಲು ಕನಿಷ್ಟ 18 ವರ್ಷವಾಗಿರಬೇಕು. ಆದರೆ, 7000 ಅರ್ಜಿದಾರರಿಗೆ 18 ವರ್ಷ ಆಗೇ ಇಲ್ಲ. 3273 ಜನ ಅರ್ಜಿದಾರರು ಕೃಷಿಕರೇ ಅಲ್ಲ. ಸ್ಮಶಾನ, ರಸ್ತೆ, ಕೆರೆ, ಗುಂಡುತೋಪು ಮಂಜೂರಾತಿ ಕೋರಿ 27,452 ಜನ ಅರ್ಜಿ ಸಲ್ಲಿಸಿದ್ದಾರೆ. ನಗರ ವ್ಯಾಪ್ತಿಯಲ್ಲಿ 33,000…

Read More

ನವದೆಹಲಿ : ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ-ಪದವಿಪೂರ್ವ (CUET UG) 2025ರಿಂದ ಗಮನಾರ್ಹ ಬದಲಾವಣೆಗಳಿಗೆ ಒಳಗಾಗುತ್ತಿದೆ. ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್ ಅವರ ಪ್ರಕಾರ, ವಿದ್ಯಾರ್ಥಿಗಳು ಈಗ 12ನೇ ತರಗತಿಯಲ್ಲಿ ಅಧ್ಯಯನ ಮಾಡದಿದ್ದರೂ ಸಹ ಪರೀಕ್ಷೆಗೆ ಯಾವುದೇ ವಿಷಯವನ್ನ ಆಯ್ಕೆ ಮಾಡಬಹುದು. ಈ ಕ್ರಮವು ಉನ್ನತ ಶಿಕ್ಷಣದಲ್ಲಿ ಕಠಿಣ ಶಿಸ್ತಿನ ಗಡಿಗಳನ್ನ ಮುರಿಯುವ ಗುರಿ ಹೊಂದಿದೆ. 2025ರಿಂದ, CUET UGಯನ್ನ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮೋಡ್ನಲ್ಲಿ ಪ್ರತ್ಯೇಕವಾಗಿ ನಡೆಸಲಾಗುವುದು, ಇದು 2024 ರಲ್ಲಿ ಬಳಸಿದ ಹೈಬ್ರಿಡ್ ಮಾದರಿಯಿಂದ ದೂರ ಸರಿಯುತ್ತದೆ. ಲಭ್ಯವಿರುವ ವಿಷಯಗಳ ಸಂಖ್ಯೆಯನ್ನ 63 ರಿಂದ 37ಕ್ಕೆ ಇಳಿಸಲಾಗಿದ್ದು, ಜನರಲ್ ಆಪ್ಟಿಟ್ಯೂಡ್ ಟೆಸ್ಟ್ (GAT) ಅಂಕಗಳ ಆಧಾರದ ಮೇಲೆ ಕೈಬಿಡಲಾದ ವಿಷಯಗಳಿಗೆ ಪ್ರವೇಶವನ್ನ ನೀಡಲಾಗಿದೆ. ವಿದ್ಯಾರ್ಥಿಗಳು ಈಗ ಪರೀಕ್ಷೆಗೆ ಐದು ವಿಷಯಗಳನ್ನು ಆಯ್ಕೆ ಮಾಡಬಹುದು, ಇದು ಹಿಂದಿನ ಆರು ಮಿತಿಯಿಂದ ಕಡಿಮೆಯಾಗಿದೆ. ಹೆಚ್ಚುವರಿಯಾಗಿ, ಪರೀಕ್ಷೆಯ ಅವಧಿಯನ್ನು ಪ್ರತಿ ವಿಷಯಕ್ಕೆ 60 ನಿಮಿಷಗಳಿಗೆ ಪ್ರಮಾಣೀಕರಿಸಲಾಗಿದೆ, ಮತ್ತು ಎಲ್ಲಾ ಪ್ರಶ್ನೆಗಳು ಕಡ್ಡಾಯವಾಗಿರುತ್ತವೆ,…

Read More