Author: kannadanewsnow09

ಕೆಎನ್‌ಎನ್‌ ಡಿಜಿಟಲ್‌ ಡೆಸ್ಕ್‌ :  ಸ್ತನ ಕ್ಯಾನ್ಸರ್ ಬಗ್ಗೆ ಮಹಿಳೆಯರ ಸುತ್ತಲೂ ಇಂತಹ ಅನೇಕ ಮಿಥ್ಯೆಗಳಿವೆ, ಅದನ್ನು ಅವರು ಕುರುಡಾಗಿ ನಂಬುತ್ತಾರೆ. ಅದೇ ಸಮಯದಲ್ಲಿ, ನೀವು ಬಿಗಿಯಾದ ಬ್ರಾವನ್ನು ಧರಿಸಿದರೆ ಅಥವಾ ಕಪ್ಪು ಬ್ರಾ ಧರಿಸಿದರೆ, ಅದು ಸ್ತನ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಹೇಳುವುದನ್ನು ನೀವು ಕೇಳಿರಬಹುದು. ಆದಾಗ್ಯೂ, ಇದರಲ್ಲಿ ಎಷ್ಟು ಸತ್ಯವಿದೆ ಎಂದು ಕಂಡುಹಿಡಿಯುವುದು ಅಗತ್ಯವಾಗಿದೆ.  ಸ್ತನ ಕ್ಯಾನ್ಸರ್ ಹಿಂದೆ ಬ್ರಾ ಕಾರಣವೇ ಅಥವಾ ಇಲ್ಲವೇ ಎಂಬುದನ್ನು ಇಂದು ನಾವು ಈ ಲೇಖನದ ಮೂಲಕ ನಿಮಗೆ ತಿಳಿಸಲಿದ್ದೇವೆ. ಇದಕ್ಕಾಗಿ ನಾವು ಎನ್ಐಐಎಂಎಸ್ನ ಸ್ತ್ರೀರೋಗ ತಜ್ಞೆ ಡಾ. ಮೋನಿಕಾ ಸಿಂಗ್ ಅವರೊಂದಿಗೂ ಮಾತನಾಡಿದ್ದೇವೆ. ಸ್ತನ ಕ್ಯಾನ್ಸರ್ ಎಂದರೇನು? ಡಬ್ಲ್ಯುಎಚ್ಒ ಪ್ರಕಾರ, ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಸಮಸ್ಯೆ ಹೆಚ್ಚು ಸಾಮಾನ್ಯವಾಗುತ್ತಿದೆ. ಈ ಕ್ಯಾನ್ಸರ್ ಪ್ರತಿ ವರ್ಷ ವಿಶ್ವದಾದ್ಯಂತ 2.1 ಮಿಲಿಯನ್ ಮಹಿಳೆಯರನ್ನು ಬಾಧಿಸುತ್ತದೆ. ಈ ಸ್ಥಿತಿಯಲ್ಲಿ, ಜೀನ್ಗ‌ಳ ಬದಲಾವಣೆಯಿಂದಾಗಿ, ಸ್ತನ ಕೋಶಗಳು ವಿಭಜನೆಯಾಗಲು ಪ್ರಾರಂಭಿಸುತ್ತವೆ ಮತ್ತು ಅವು ಅನಿಯಂತ್ರಿತವಾಗಿ ಬೆಳೆಯಲು ಅಥವಾ…

Read More

ಕೆಎನ್‌ಎನ್‌ ಡಿಜಿಟಲ್‌ ಡೆಸ್ಕ್‌ :  ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಎಲ್ಲರೂ ಹೇಳುತ್ತಾರೆ, ಆದರೆ ಯಾರೂ ಫಾಲೋ ಮಾಡುವುದಿಲ್ಲ. ಹಾಗಾಗಿ ಇಂದು ಧೂಮಪಾನ ಮಾಡುವವರ ಬಗ್ಗೆ ಯಾರು ತಲೆ ಕೆಡಿಸಿಕೊಳ್ಳು ವುದಿಲ್ಲ. ಇಂದಿನ ಯುವ ಜನತೆಯಲ್ಲಿ ಇದೊಂದು ಟ್ರೆಂಡ್ ಆಗಿದೆ. ಪುರುಷರಷ್ಟೇ ಮಹಿಳೆಯರು ಕೂಡ ಈ ಒಂದು ಚಟಕ್ಕೆ ಬಲಿಯಾಗುತ್ತಿರುವುದು ವಿಶೇಷ. ಕೆಲವರಿಗಂತು ಗಂಟೆಕೊಮ್ಮೆ ಟೀ ಕುಡಿಯುವ ಹಾಗೆ ಸಿಗರೇಟ್ ಕೂಡ ಸೇವನೆ ಮಾಡುವ ಅಭ್ಯಾಸ ಇರುತ್ತದೆ. ಅಂದರೆ ಅವರು ಧೂಮಪಾನ ಮಾಡುವುದಕ್ಕೆ ಲೆಕ್ಕವೇ ಇರುವುದಿಲ್ಲ. ದಿನಕ್ಕೆ ಹತ್ತಕ್ಕಿಂತ ಹೆಚ್ಚು ಸಿಗರೇಟ್ ಸೇವನೆ ಮಾಡುತ್ತಾರೆ. ಇದರಿಂದ ಆರೋಗ್ಯಕ್ಕೆ ತೊಂದರೆ ಕಟ್ಟಿಟ್ಟ ಬುತ್ತಿ. ಇಂತಹವರು ಬಹಳ ಬೇಗನೆ ಸಾವಿಗೆ ಹತ್ತಿರವಾಗುತ್ತಾರೆ ಎಂದು ವೈದ್ಯ ಲೋಕ ಹೇಳುತ್ತದೆ. ಹಾಗಾದರೆ ಬನ್ನಿ ಒಂದು ದಿನಕ್ಕೆ 10 ಅಥವಾ ಅದಕ್ಕಿಂತ ಹೆಚ್ಚು ಸಿಗರೇಟ್ ಸೇದುವವರ ಕಥೆ ಏನಾಗುತ್ತದೆ ನೋಡೋಣ. ಒಳಗಿನ ಅಂಗಾಂಗಗಳು ಹಾನಿ * ಧೂಮಪಾನ ಮಾಡುವವರು ನೀವೆಲ್ಲ ಗಮನಿಸಿರುವ ಹಾಗೆ ಕಾಯಿಲೆ ಇಲ್ಲದೆ ಬದುಕಲು ಸಾಧ್ಯವೇ…

Read More

ಕೆಎನ್‌ಎನ್‌ ಡಿಜಿಟಲ್‌ ಡೆಸ್ಕ್‌ :  ಇಂದು ಬೆನ್ನು ನೋವು ಮತ್ತು ವಿಶೇಷವಾಗಿ ಕೆಳ ಬೆನ್ನು ನೋವು ಭಾರತದಲ್ಲಿ ದೀರ್ಘಕಾಲದ ಕಾಯಿಲೆಯಾಗಿ ಮಾರ್ಪಟ್ಟಿದೆ. ಇನ್ನು ಈ ರೋಗ ಕೇವಲ ವೃದ್ಧರಿಗೆ ಮಾತ್ರ ಸೀಮಿತವಾಗದೆ ಯುವಕರಲ್ಲೂ ಹೆಚ್ಚಾಗುತ್ತಿದೆ. ಜಡ ಜೀವನಶೈಲಿಯೊಂದಿಗೆ ಸುದೀರ್ಘ ಕೆಲಸದ ಸಮಯವು ನಮ್ಮ ಬೆನ್ನುಮೂಳೆಯ ಡಿಸ್ಕ್ಗಳು ​​ಮತ್ತು ಬೆನ್ನಿನ ಸ್ನಾಯುಗಳ ಮೇಲೆ ಹೆಚ್ಚು ಒತ್ತಡವನ್ನು ಉಂಟುಮಾಡುತ್ತದೆ. ಮಾದಕ ವ್ಯಸನವು ಹದಿಹರೆಯದವರು ಬೆನ್ನು ನೋವನ್ನು ಅನುಭವಿಸಲು ಕಾರಣವಾಗಬಹುದು. ಇತ್ತೀಚಿನ ಹಲವಾರು ಅಧ್ಯಯನಗಳ ಪ್ರಕಾರ, ಹದಿಹರೆಯದವರು ಸಿಗರೇಟ್ ಸೇದುವ, ಮದ್ಯಪಾನ ಮಾಡುವ ಮತ್ತು ಖಿನ್ನತೆ ಮತ್ತು ಆತಂಕದಂತಹ ಮಾನಸಿಕ ಆರೋಗ್ಯ ಸ್ಥಿತಿಗಳಿಂದ ಬಳಲುತ್ತಿರುವವರು ಹೆಚ್ಚಾಗಿ ಬೆನ್ನುನೋವಿನಿಂದ ಬಳಲುತ್ತಿದ್ದಾರೆ ಎಂದು ಕಂಡುಬಂದಿದೆ. ಉದಾಹರಣೆಗೆ, 14-15 ವರ್ಷ ವಯಸ್ಸಿನವರು ಆಲ್ಕೋಹಾಲ್ ಸೇವಿಸುವ ಮತ್ತು ಧೂಮಪಾನ ಮಾಡುವುದು, ತಂಬಾಕು ಸೇವನೆ ಮಾಡೋದ್ರಿಂದ ಎಂದಿಗೂ ನೋವು ಕಾಣಿಸದ ವ್ಯಕ್ತಿಗಳಲ್ಲಿ ವಾರಕ್ಕೆ ಒಂದಕ್ಕಿಂತ ಹೆಚ್ಚು ಬಾರಿ ಬೆನ್ನು ನೋವನ್ನು ಅನುಭವಿಸುತ್ತಾರೆ ಎಂದು ತಿಳಿದುಬಂದಿದೆ ಬೆನ್ನುನೋವಿಗೆ ಕಾರಣವಾಗುವ ಅಂಶಗಳೇನು? – ದೇಹದಲ್ಲಿ ಕ್ಯಾಲ್ಸಿಯಂ…

Read More

ಕೆಎನ್‌ ಎನ್‌ ನ್ಯೂಸ್‌ ಡೆಸ್ಕ್‌ : ಪ್ರತಿಯೊಬ್ಬರು ಹತ್ರನೂ ಇಯರ್‌ ಬಡ್ಸ್‌ ಇದ್ದೆ ಇರುತ್ತದೆ. ಕಿವಿಯಲ್ಲಿ ಉತ್ಪತ್ತಿಯಾಗುವ ವ್ಯಾಕ್ಸ್ ಹೊರತೆಗೆಯಲು ಹೆಚ್ಚಿನವರು ಇದನ್ನು ಬಳಸುತ್ತಾರೆ. ಇನ್ನೂ ಕೆಲವರಿಗೆ, ಸ್ನಾನ ಮಾಡಿ ಬಂದ ತಕ್ಷಣ ಕಿವಿಗೆ ಬಡ್ಸ್‌ ಹಾಕದಿದ್ದರೆ ಸಮಾಧಾನ ಇರೋದೆ ಇಲ್ಲ. ಇನ್ನೂ ಕೆಲವರು ಕಿವಿಗೆ ಸೀರೆಯ ಪಿನ್, ಹೇರ್ ಪಿನ್, ಪೇಪರ್ ಕ್ಲಿಪ್, ಟೂತ್ ಪಿಕ್ಸ್, ಪೆನ್ ಸೇರಿದಂತೆ ಬೆರಳುಗಳನ್ನು ಕೂಡಾ ತುರುಕುತ್ತಾರೆ. ಇದು ಅಭ್ಯಾಸವಾದ ಮೇಲಂತೂ, ಕೈಗೆ ಸಿಕ್ಕ ಕಡ್ಡಿಯಂತಹ ಸಾಧನಗಳನ್ನು ಕಿವಿಗೆ ಹಾಕಿ ಮೇಣದಂತಹ ವಸ್ತುವನ್ನು ಕಿವಿಯಿಂದ ತೆಗೆಯುತ್ತಾರೆ. ಆದರೆ ಇದು ಯಾವುದೂ ಸುರಕ್ಷಿತವಲ್ಲ ಎಂದು ತಜ್ಞರು ಹೇಳುತ್ತಾರೆ.ಪ್ರತಿಯೊಬ್ಬರೂ ಕಿವಿಯಲ್ಲಿರುವ ಮೇಣದಂತಹ ಅಂಶವನ್ನು ಹೊರತೆಗೆಯುವ ಅಗತ್ಯವಿಲ್ಲ. ಇದು ದೊಡ್ಡ ಪ್ರಮಾಣದಲ್ಲಿ ಕಿವಿಯಲ್ಲಿ ಸಂಗ್ರಹವಾದಾಗ, ಕಿವಿ ನೋವು ಮತ್ತು ಸಾಂಕ್ರಾಮಿಕ ರೋಗಗಳ ಅಪಾಯವನ್ನು ಉಂಟುಮಾಡುತ್ತದೆ. ತಾತ್ಕಾಲಿಕ ಶ್ರವಣದೋಷ ಮತ್ತು ಖಿನ್ನತೆಯ ಸಾಧ್ಯತೆಯಿದೆ. ಆದರೆ, ಹೆಚ್ಚಿನ ಸಂದರ್ಭಗಳಲ್ಲಿ ಇಯರ್‌ ವ್ಯಾಕ್ಸ್ ಅನ್ನು ಹೊರ ತೆಗೆಯುವ ಅಗತ್ಯವಿಲ್ಲ. ಏಕೆಂದರೆ ಅದನ್ನು ಕಿವಿಯೇ…

Read More

ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ತಿಳಿಸಿದ್ದಾರೆ. ಅಬಕಾರಿ‌ ಇಲಾಖೆಯ ವರ್ಗಾವಣೆ ನಿಯಮಗಳನ್ನು ಮಾರ್ಪಾಡು ಮಾಡುವ ಮೂಲಕ ಪಾರದರ್ಶಕ ಮತ್ತು ನಿಯಮಾಧಾರಿತ ವರ್ಗಾವಣೆ ಪದ್ದತಿಯನ್ನು ಜಾರಿಗೊಳಿಸುವುದರಿಂದ ಇತರೆ ಪ್ರಭಾವಗಳಿಗೆ ಒಳಗಾಗುವುದನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಸಚಿವ ತಿಮ್ಮಾಪೂರ ಅವರು ತಿಳಿಸಿದ್ದಾರೆ. ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು, 2025 ಅನುಮೋದನೆ ನೀಡಲಾಗಿದ್ದು, ಅನುಬಂಧದಲ್ಲಿ ನೀಡಲಾದ ಕರಡನ್ನು ಹೊರಡಿಸಿ, ಸಂಬಂಧಪಟ್ಟವರಿಂದ ಆಕ್ಷೇಪಣೆ ಅಥವಾ ಸಲಹೆಗಳನ್ನು ಆಹ್ವಾನಿಸುವುದು. ಹಾಗೂ ಸ್ವೀಕೃತವಾಗಬಹುದಾದ ಆಕ್ಷೇಪಣೆ ಅಥವಾ ಸಲಹೆಗಳನ್ನು ಪರಿಗಣಿಸಿದ ನಂತರ ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು, 2025 ನ್ನು ಅಂತಿಮಗೊಳಿಸಲು ಸಚಿವ…

Read More

ಶಿವಮೊಗ್ಗ: ಅಡಿಕೆಯಿಂದ ಕ್ಯಾನ್ಸರ್ ಬರುತ್ತೆ ಎಂಬುದು ಭ್ರಾಂತಿ ಮಾತ್ರವೇ ಆಗಿದೆ. ಇದನ್ನು ತೊಡೆದು ಹಾಕಲು ಐಐಎಸ್ಸಿ, ಏಮ್ಸ್, ಸಿಸಿಎಂಬಿಯಂತಹ ರಾಷ್ಟ್ರೀಯ ಮಟ್ಟದ 17 ಸಂಶೋಧನಾ ಸಂಸ್ಥೆಗಳಿಗೆ ಜವಾಬ್ದಾರಿಯನ್ನು ವಹಿಸಲಾಗಿದೆ. ಅಡಿಕೆ ಕ್ಯಾನ್ಸರ್ ಕಾರಕವಲ್ಲ ಎಂಬುದನ್ನು ಸಂಶೋಧಿಸಿ, ಅದರ ಸತ್ಯಾಸತ್ಯತೆಯ ವರದಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸುವುದಾಗಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಸಾಗರದಲ್ಲಿ ನಡೆದಂತ ಪ್ರಾಂತ ಅಡಿಕೆ ಬೆಳಗಾರರ ಸಂಘದ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದಂತ ಅವರು, ಅಡಿಕೆ ಕ್ಯಾನ್ಸರ್ ಕಾರಕ ಎಂಬ ವಿಶ್ವಸಂಸ್ಥೆಯ ವರದಿ ಆಶ್ಚರ್ಯ ಮೂಡಿಸಿದೆ. ಅದರ ಸತ್ಯಾಸತ್ಯತೆ ಸಂಶೋಧನೆ ನಡೆಸಿ, ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಸುವಂತೆ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ. ಫಲದಲ್ಲಿ ವಿಷ ಸೇರಿಸಿ( ಗುಟ್ಕಾ) ತಿಂದಲ್ಲಿ ಅಡಿಕೆಯದ್ದು ಏನು ದೋಷ ಎಂಬುದಾಗಿ ಪ್ರಶ್ನಿಸಿದರು. ಅಡಿಕೆಗೆ ಬಾಧಿಸುತ್ತಿರುವ ಎಲೆಚುಕ್ಕಿ ರೋಗ, ಹಳದಿ ರೋಗ ಹಾಗೂ ಕೊಳೆ ರೋಗಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಷ್ಟ್ರಮಟ್ಟದಲ್ಲಿ ವಿಜ್ಞಾನಿಗಳ ಸಮಿತಿ ರಚಿಸಲಾಗಿದೆ. ಸಮಿತಿಯ ಶಿಫಾರಸುಗಳನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲು…

Read More

ಮಂಡ್ಯ : ಮುಂಬರುವ 2028 ರ ವಿಧಾನ ಸಭಾ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಜೆಡಿಎಸ್ ಪಕ್ಷದ ನಾನೇ ಅಭ್ಯರ್ಥಿಯಾಗಿ ನಾನೇ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಶನಿವಾರ ಹೇಳಿದರು. ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಕೆಲವರು ಈಗಾಗಲೇ ಮದ್ದೂರು ಕ್ಷೇತ್ರದಲ್ಲಿ ಹಲವಾರು ಕಡೆ ಡಿ.ಸಿ.ತಮ್ಮಣ್ಣರಿಗೆ ವಯಸ್ಸಾಗಿದೆ ಆದ್ದರಿಂದ ಮುಂದಿನ ಚುನಾವಣೆಯಲ್ಲಿ ನಾನೇ ಎನ್ ಡಿಎ ಅಭ್ಯರ್ಥಿ ಎಂದು ಹೇಳಿಕೊಂಡು ಓಡಾಡುತ್ತಿರುವುದು ನನಗೆ ಬೇಸರ ತಂದಿದೆ ಎಂದು ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ರವರ ವಿರುದ್ಧ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದರು. ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ 94 ವರ್ಷ ವಯಸ್ಸಾಗಿದ್ದರೂ ಮುಂದೆ ನಡೆಯುವ ಚುನಾವಣೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತೇನೆ ಎಂದಿದ್ದಾರೆ. ಹೀಗಿರುವಾಗ ನಾನು ಏಕೆ ಮತ್ತೆ ಸ್ಪರ್ಧಿಸಬಾರದು. ಇಷ್ಟಕ್ಕೂ ಮೀರಿ ನನ್ನ ಕುಟುಂಬದಲ್ಲೇ ಸ್ಪರ್ಧಿಸಲು ಇಬ್ಬರು ವ್ಯಕ್ತಿಗಳಿದ್ದಾರೆ ಎಂದರು. ಇನ್ನು ಫೆಬ್ರವರಿ 2 ರಂದು ನಡೆಯುವ ಮನ್ ಮುಲ್…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣದ ಅವಧಿಯನ್ನು ಡಿಸೆಂಬರ್ 31, 2025ರವರೆಗೆ ಸರ್ಕಾರ ವಿಸ್ತರಿಸಿ ಆದೇಶಿಸಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ (14) 8ನೇ ಪ್ರಕರಣದೊಂದಿಗೆ ಓದಲಾದಂತೆ, 3ನೇ ಪ್ರಕರಣದ (1)ನೇ ಉಪ-ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ರಚಿಸಿರುವ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ಕ್ಕೆ ತಿದ್ದುಪಡಿ ಮಾಡುವ ಸಲುವಾಗಿ ಈ ಕೆಳಗಿನ ಕರ್ನಾಟಕ ನಾಗರಿಕ ಸೇವಾ ನಿಯಮಗಳ ಕರಡನ್ನು, ಸದರಿ ಅಧಿನಿಯಮದ 3ನೇ ಪುಕರಣದ (2)ನೇ ಉಪ ಪ್ರಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಲಾದಂತೆ ಇದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ, ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಹದಿನೈದು ದಿನಗಳ…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಬಡ್ತಿ, ಮುಂಬಡ್ತಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ. ಈ ಪರೀಕ್ಷೆಯನ್ನು ಉತ್ತೀರ್ಣರಾಗುವಂತ ಅವಧಿಯನ್ನು ದಿನಾಂಕ 31-12-2025ರವರೆಗೆ ವಿಸ್ತರಿಸಿ ಸರ್ಕಾರ ಆದೇಶಿಸಿದೆ. ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ (14) 8ನೇ ಪ್ರಕರಣದೊಂದಿಗೆ ಓದಲಾದಂತೆ, 3ನೇ ಪ್ರಕರಣದ (1)ನೇ ಉಪ-ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ರಚಿಸಿರುವ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ಕ್ಕೆ ತಿದ್ದುಪಡಿ ಮಾಡುವ ಸಲುವಾಗಿ ಈ ಕೆಳಗಿನ ಕರ್ನಾಟಕ ನಾಗರಿಕ ಸೇವಾ ನಿಯಮಗಳ ಕರಡನ್ನು, ಸದರಿ ಅಧಿನಿಯಮದ 3ನೇ ಪುಕರಣದ (2)ನೇ ಉಪ ಪ್ರಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಲಾದಂತೆ ಇದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ, ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಹದಿನೈದು ದಿನಗಳ…

Read More

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ರಾಷ್ಟ್ರೀಯ ಹಾಗೂ ನಾಡಹಬ್ಬಗಳಂದು ಬಿಸಿಯೂಟ ನೀಡುವಂತೆ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಪಿಎಂ ಪೋಷಣ್ ನಿರ್ದೇಶಕರು ನೆನಪೋಲೆಯನ್ನು ರಾಜ್ಯ ಎಲ್ಲಾ ಶಿಕ್ಷಣಾಧಿಕಾರಿಗಳಿಗೆ ಹೊರಡಿಸಿದ್ದಾರೆ. ಅದರಲ್ಲಿ ಪ್ರತಿ ವರ್ಷದಂತ ಪಿ ಎಂ ಪೋಷಣ್ (ಮಧ್ಯಾಹ್ನ ಬಿಸಿಯೂಟ ಯೋಜನ) ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಪ್ರತಿ ಶೈಕ್ಷಣಿಕ ವರ್ಷದ ಕೆಲಸದ ದಿನಗಳನ್ನು ಲೆಕ್ಕಿಸುವ ಸಂದರ್ಭದಲ್ಲಿ ರಾಷ್ಟ್ರೀಯ ಹಾಗೂ ನಾಡಹಬ್ಬಗಳನ್ನು(ಕನ್ನಡ ರಾಜ್ಯೋತ್ಸವ) ಶಾಲಾ ಕೆಲಸದ ದಿನಗಳೆಂದು ಪರಿಗಣಿಸಲಾಗಿರುತ್ತದೆ ಹಾಗೂ ಪಿ ಎಂ ಪೋಷಣ್ ಯೋಜನ ಅಡಿಯಲ್ಲಿ ಬಿಸಿಯೂಟ ಯೋಜನೆಯನ್ನು ಅನುಷ್ಠಾನ ಮಾಡಲು (ಯೋಜನಾ ಅನುಮೋದನಾ ಮಂಡಳಿ) ಪಿಎಬಿ ಯಿಂದ ಅನುಮೋದನೆಯನ್ನು ಪಡೆಯಲಾಗಿರುತ್ತದೆ ಎಂದಿದ್ದಾರೆ. ಆದ್ದರಿಂದ ಎಲ್ಲಾ ರಾಷ್ಟ್ರೀಯ ಹಾಗೂ ನಾಡಹಬ್ಬಗಳಂದು ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಬಿಸಿಯೂಟ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಸೂಚಿಸಲಾಗಿರುತ್ತದ. ಆದ್ದರಿಂದ 2025 ಜನವರಿ 26 ಗಣರಾಜ್ಯೋತ್ಸವ…

Read More