Subscribe to Updates
Get the latest creative news from FooBar about art, design and business.
Author: kannadanewsnow09
ಮಹಾರಾಷ್ಟ್ರ: ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಸಂಪುಟ ವಿಸ್ತರಣೆಯ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಭಾನುವಾರ ನಾಗ್ಪುರದಲ್ಲಿ ಪ್ರಾರಂಭವಾಗಿದ್ದು, 39 ಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಿದರು. ಸಂಪುಟ ವಿಸ್ತರಣೆಯಲ್ಲಿ ಬಿಜೆಪಿಗೆ 19, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ 11 ಮತ್ತು ಅಜಿತ್ ಪವಾರ್ ಅವರ ಎನ್ಸಿಪಿಗೆ 9 ಸಚಿವ ಸ್ಥಾನಗಳು ಸಿಕ್ಕಿವೆ. 33 ಶಾಸಕರು ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಆರು ಶಾಸಕರು ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು ಡಿಸೆಂಬರ್ 16 ರಿಂದ 21 ರವರೆಗೆ ನಾಗ್ಪುರದಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದ ಮುನ್ನಾದಿನದಂದು ನಡೆದ ಸಮಾರಂಭದಲ್ಲಿ ರಾಜ್ಯಪಾಲ ಪಿ.ಸಿ.ರಾಧಾಕೃಷ್ಣನ್ ಹೊಸ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಡಿಸೆಂಬರ್ 5 ರಂದು ಮುಂಬೈನಲ್ಲಿ ಪ್ರಮಾಣವಚನ ಸ್ವೀಕರಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಉಪಸ್ಥಿತರಿದ್ದರು. ರಾಧಾಕೃಷ್ಣ ವಿಖೆ ಪಾಟೀಲ್ ಮತ್ತು ಹಸನ್ ಮುಶ್ರಿಫ್ ಅವರೊಂದಿಗೆ ಬಿಜೆಪಿ ಮುಖ್ಯಸ್ಥ ಚಂದ್ರಶೇಖರ್ ಬವಾನ್ಕುಲೆ…
ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಬೆಂಬಲಿತ ಕೆಂಚಪ್ಪಗೌಡರು ಆಯ್ಕೆಯಾಗಿದ್ದಾರೆ. ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮೇಲುಗೈ ಸಾಧಿಸಿದ್ದಾರೆ. ಆದರೇ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಭಾರೀ ಹಿನ್ನಡೆಯಾಗಿದೆ. ಈ ಮೂಲಕ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿಕೆಶಿ ಬೆಂಬಲಿತ ಕೆಂಚಪ್ಪಗೌಡ ಆಯ್ಕೆಯಾಗಿದ್ದಾರೆ. ಇನ್ನೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಡಾ. ಅಂಜಿನಪ್ಪಗೆ ಸೋಲು ಕಂಡಿದ್ದಾರೆ. ಡಿಕೆ ಶಿವಕುಮಾರ್ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಕೆಂಚಪ್ಪಗೌಡಗೆ 21 ಸದಸ್ಯರ ಬೆಂಬಲದೊಂದಿಗೆ ಗೆಲುವು ಸಾಧಿಸಿದ್ದಾರೆ. ಇನ್ನೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಬೆಂಬಲಿತ ಅಭ್ಯರ್ಥಿ ಆಂಜಿನಪ್ಪ ಅವರು ಕೇವಲ 14 ಸದಸ್ಯರ ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. https://kannadanewsnow.com/kannada/dali-dhananjaya-and-dhanyas-wedding-invitation-card-goes-viral-netizens-go-gaga-over-it/ https://kannadanewsnow.com/kannada/breaking-bengaluru-mobile-thieves-on-the-rise-ex-corporator-chases/
ಕೆಎನ್ಎನ್ ಸಿನಿಮಾ ಡೆಸ್ಕ್: ನಟ ಡಾಲಿ ಧನಂಜಯ್ ಹಾಗೂ ಧನ್ಯತ ಮದುವೆ ಫಿಕ್ಸ್ ಆಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿರುವಂತ ಇಬ್ಬರೂ ತಮ್ಮ ಮದುವೆಗೆ ಆಮಂತ್ರಣ ನೀಡಿದ್ದಾರೆ. ಈ ಬೆನ್ನಲ್ಲೇ ಅವರ ಆಮಂತ್ರಣ ಪತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಪತ್ರಕ್ಕೆ ನೆಟ್ಟಿಗರು ಮಾತ್ರ ಸೂಪರ್ ಎಂದಿದ್ದಾರೆ. ದಿನಾಂಕ 15-02-2025ರಂದು ಆರತಕ್ಷತೆ, ದಿನಾಂಕ 16-02-2025ರಂದು ಮುಹೂರ್ತದೊಂದಿಗೆ ನಟ ಡಾಲಿ ಧನಂಜಯ ಹಾಗೂ ಧನ್ಯತ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಇವರ ಆಮಂತ್ರಣ ಪತ್ರ ಮಾತ್ರ ಎಲ್ಲರನ್ನು ಗಮನ ಸೆಳೆಯುತ್ತಿದೆ. ಕೈಬರಹದ ಕನ್ನಡದ ಜೊತೆಗೆ ಇಂಗ್ಲೀಷ್ ಬಳಸಿ ಆಮಂತ್ರಣ ಪತ್ರಿಕೆಯನ್ನು ಮಾಡಿಸಲಾಗಿದೆ. ಈ ಹಿಂದಿನ ಇನ್ ಲೇಂಡ್ ಲೆಟರ್ ಮಾದರಿಯಲ್ಲಿ ಇರುವಂತ ಆಮಂತ್ರಣ ಪತ್ರಿಕೆಯಲ್ಲಿ ಆಕ್ಟರ್, ಡಾಕ್ಟರ್ ಮದುವೆಗೆ ಬಂದು ಆಶೀರ್ವದಿಸಿ ಎಂಬುದರಿಂದ ಆರಂಭಗೊಳ್ಳುತ್ತಿದೆ. ಜೊತೆಗೆ ಸುಸ್ವಾಗತವನ್ನು ಕೋರಲಾಗಿದೆ. ಆಮಂತ್ರಣ ಪತ್ರ ಎಂಬುದಾಗಿ ಪತ್ರದ ಎಡ ತುದಿಯಲ್ಲಿದ್ದು, ಒಳಗಿನ ಪುಟ ತೆರೆದು ನೋಡಿದರೇ ನಟ ಡಾಲಿ ಧನಂಜಯ್ ಅವರೇ ಕೈ ಬರಹದಲ್ಲಿ…
ಗದಗ : ನಮ್ಮ ಸರ್ಕಾರ ಜಾರಿ ಮಾಡಿರುವ ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದ 200 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ, ಸಿರಿ ದಾನ್ಯ ಉತ್ಪಾದನೆಯ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 1,20,000 ಕೋಟಿ ಹಣವನ್ನು ಈ ವರ್ಷ ರಾಜ್ಯ ಸರ್ಕಾರ ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಇದಲ್ಲದೆ 52000 ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ರಾಜ್ಯದ ಜನರ ಜೇಬಿಗೆ ನೇರವಾಗಿ ಹಾಕುತ್ತಿದ್ದೇವೆ. ಹೀಗಿದ್ದೂ ಬಿಜೆಪಿ ಬುರುಡೆ ಬಿಡುತ್ತಿದೆ. ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಪದೇ ಪದೇ ಸುಳ್ಳು ಹೇಳಿ ಅವರ ಸುಳ್ಳನ್ನು ಸತ್ಯ ಎಂದು ಬಿಂಬಿಸಲು ಯತ್ನಿಸುತ್ತಿದ್ದಾರೆ. ಆದರೆ ರಾಜ್ಯದ ಜನತೆ ಇವರ ಸುಳ್ಳು ನಂಬುವಷ್ಟು ಮೂರ್ಖರಲ್ಲ ಎಂದರು. ರಾಜ್ಯದ 4.5 ಕೋಟಿ ಮಂದಿ ಗ್ಯಾರಂಟಿ ಯೋಜನೆಗಳ ನೇರ ಲಾಭ ಪಡೆಯುತ್ತಿದ್ದಾರೆ. ಇದಲ್ಲದೆ ರಸ್ತೆ, ನೀರು, ಕೃಷಿ,…
ಬೆಂಗಳೂರು: ಕೆಲ ದಿನಗಳ ಹಿಂದೆ ಮುರುಡೇಶ್ವರಕ್ಕೆ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದಂತ ಶಾಲಾ ಮಕ್ಕಳು ಸಮುದ್ರಪಾಲಾಗಿ ಹೋಗಿದ್ದರು. ನೀವು ಸಮುದ್ರ ದಂಡೆಗೆ ಪ್ರವಾಸಕ್ಕೆ ತೆರಳುತ್ತಿದ್ದರೇ ಅದಕ್ಕೂ ಮುನ್ನಾ ಈ ಕೆಳಗಿನ ವಿಷಯಗಳು ತಿಳಿದಿರಲಿ. ಅದೇನು ಅಂತ ಮುಂದೆ ಓದಿ. ಈ ಮಾಹಿತಿಯನ್ನು ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಅವರು ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಶೇರ್ ಮಾಡಿದ್ದಾರೆ. ಅದರಲ್ಲಿ ಶಿಕ್ಷಣ ಇಲಾಖೆಯ ಒಂದು ಭಾಗವಾದ ಡಯಟ್ ನ ಮಂಗಳೂರು ಜಿಲ್ಲೆಯ ನಿವೃತ್ತ ಪ್ರವಾಚಕರಾದ (Reader) ದಿವಾಕರ್ ಶೆಟ್ಟಿ ಎಂಬುವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಒಂದು ಮಹತ್ವದ ಮಾಹಿತಿ ಇದು ಎಂದು ಹೇಳಿದ್ದಾರೆ. ಕರ್ನಾಟಕದ ಶಿಕ್ಷಣ ಇಲಾಖೆ ಎಲ್ಲಾ ಶಾಲೆಗಳಿಗೆ ಮತ್ತು ಕಾಲೇಜುಗಳಿಗೆ ಈ ಮಾಹಿತಿಯನ್ನು ಕಳಿಸಿ ಎಲ್ಲರಿಗೂ ಈ ಕುರಿತು ತಿಳುವಳಿಕೆ ಕೊಡುವುದು ಅತ್ಯಗತ್ಯ. ನಾನು ಈ ಮಾಹಿತಿಯನ್ನು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಿಕ್ಷಣ ಇಲಾಖೆಯ ಆಯುಕ್ತರ ಜೊತೆಯೂ ಹಂಚಿಕೊಂಡಿದ್ದೇನೆ ಎಂದಿದ್ದಾರೆ. ಸಮುದ್ರ ದಂಡೆಗೆ ಭೇಟಿ ನೀಡುವ ಎಲ್ಲರಿಗೂ ಈ…
ಚಿಕ್ಕಮಗಳೂರು : ಚಿಕ್ಕಮಗಳೂರು, ಕೊಡಗು, ಹಾಸನ ಸೇರಿದಂತೆ ರಾಜ್ಯದ ನಾನಾ ಭಾಗದಲ್ಲಿನ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಪ್ರಯತ್ನ ಮಾಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದರು. ಬಾಳೆ ಹೊನ್ನೂರಿನ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಫಲವಾಗಿ ಕರ್ನಾಟಕದಲ್ಲಿ 6395 ಆನೆಗಳಿದ್ದು. ಆನೆಗಳ ಸಂಖ್ಯೆಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದರೆ, ಹುಲಿಯ ಸಂಖ್ಯೆಯಲ್ಲಿ 2ನೇ ಸ್ಥಾನದಲ್ಲಿದೆ. ಆದರೆ ಅರಣ್ಯ ಪ್ರದೇಶ ಕಡಿಮೆ ಆಗುತ್ತಿರುವುದರಿಂದ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳವಾಗಿದ್ದು ಇದರ ನಿಯಂತ್ರಣಕ್ಕೆ ಸರ್ಕಾರ ಮತ್ತು ಅರಣ್ಯ ಇಲಾಖೆ ಹಗಲಿರುಳು ಶ್ರಮಿಸುತ್ತಿದೆ ಎಂದರು. ಆನೆಗಳು ನಾಡಿಗೆ ಬರುವುದನ್ನು ತಡೆಯಲು ರೈಲ್ವೆ ಬ್ಯಾರಿಕೇಡ್, ಕಂದಕ, ಸೌರ ಬೇಲಿ ಹಾಕಲಾಗುತ್ತಿದೆ. ತುರ್ತು ಸ್ಪಂದನ ಪಡೆ, ಆನೆ ಕಾರ್ಯಪಡೆಯನ್ನು ರಚಿಸಿದ್ದು, ಜನರಿಗೆ ಆನೆಗಳ ಚಲನವಲನದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಇದರ ಜೊತೆಗೆ 2 ಸಾವಿರ ಹೆಕ್ಟೇರ್ ಕಾನನ ಪ್ರದೇಶದಲ್ಲಿ…
ಶಿವಮೊಗ್ಗ: ಜೋಗಕ್ಕೆ ಪ್ರವಾಸಕ್ಕೆ ಬರುತ್ತಿದ್ದಂತ ಮಂಗಳೂರಿನ ಜನರಿದ್ದಂತ ಬಸ್ ಅಪಘಾತಗೊಂಡು, 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿತ್ತು. ಈ ವಿಷಯ ತಿಳಿದಂತ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಗಾಯಾಳುಗಳು ದಾಖಲಾಗಿದ್ದಂತ ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಿ, ಖುದ್ದು ಮುಂದೆ ನಿಂತು ತುರ್ತು ಚಿಕಿತ್ಸೆಯ ವ್ಯವಸ್ಥೆ ಮಾಡಿಸಿ, ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದ ಜೋಗ-ಕಾರ್ಗಲ್ ಸಮೀಪದ ಅರಳಗೋಡು ರಸ್ತೆಯ ತಿರುವಿನಲ್ಲಿ ಮಂಗಳೂರಿನಿಂದ ಜೋಗದ ಜಲಪಾತ ವೀಕ್ಷಣೆಗಾಗಿ ಬರುತ್ತಿದ್ದಂತ ಪ್ರವಾಸಿಗರ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಈ ಅಪಘಾತದಲ್ಲಿ 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು ಕಾರ್ಗಲ್ ಹಾಗೂ ಸಾಗರದ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಈ ವಿಷಯ ತಿಳಿದಂತ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡಲೇ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಿ, ಬಸ್ ಅಪಘಾತದಲ್ಲಿ ಗಾಯಗೊಂಡಿದ್ದಂತ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು. ಅಲ್ಲದೇ ಆಸ್ಪತ್ರೆಯಲ್ಲೇ ಬೀಡು ಬಿಟ್ಟು ವೈದ್ಯರು, ವೈದ್ಯಕೀಯ…
ದಾವಣಗೆರೆ: ಜಿಲ್ಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬಣವು ಮತ್ತೊಂದು ಶಕ್ತಿ ಪ್ರದರ್ಶನ ನೀಡಲು ಮುಂದಾಗಿದೆ. ಫೆಬ್ರವರಿ.27ರಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಜನ್ಮದಿನವನ್ನು ಅದ್ಧೂರಿಯಾಗಿ ಕಾರ್ಯಕ್ರಮ ಆಯೋಜಿಸಿ ಆಚರಿಸಲು ನಿರ್ಧರಿಸಲಾಗಿದೆ. ಇಂದು ಬಿವೈ ವಿಜಯೇಂದ್ರ ಅವರನ್ನು ಬೆಂಬಲಿಸುವಂತ ಬಣವೊಂದು ಸಭೆಯನ್ನು ನಡೆಸಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ಸಭೆಯ ಬಳಿಕ ಮಾಜಿ ಸಚಿವ ಎಸ್ ಎ ರವೀಂದ್ರನಾಥ್ ಅವರು ಮಾಹಿತಿ ನೀಡಿದ್ದೂ, ಫೆಬ್ರವರಿ 27ರಂದು ದಾವಣಗೆರೆಯಲ್ಲಿ ಬಿಎಸ್ ಯಡಿಯೂರಪ್ಪ ಜನ್ಮದಿನ ಆಚರಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಈ ಸಭೆಯ ವೇಳೆಯಲ್ಲಿ ಹತ್ತು ಜನರ ಒಂದು ಸಮಿತಿ ಮಾಡಲಾಗಿದೆ. ಈ ಸಮಿತಿ ರಾಜ್ಯಾಧ್ಯಂತ ಪ್ರವಾಸ ಮಾಡಲಿದೆ ಎಂಬುದಾಗಿ ಮಾಜಿ ಶಾಸಕ ರೇಣುಕಾಚಾರ್ಯ ತಿಳಿಸಿದ್ದಾರೆ. ಅಲ್ಲದೇ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಮುಂದಿನ ಚುನಾವಣೆಯಲ್ಲಿ 140 ಸ್ಥಾನ ಗೆಲ್ಲುವುದಾಗಿ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. https://kannadanewsnow.com/kannada/high-drama-near-jamia-masjid-in-srirangapatna-mandya-tension-prevails-at-the-site/ https://kannadanewsnow.com/kannada/digital-arrest-elderly-woman-loses-rs-80-lakh-due-to-digital-arrest/ https://kannadanewsnow.com/kannada/breaking-bengaluru-mobile-thieves-on-the-rise-ex-corporator-chases/
ಮಂಡ್ಯ: ಜಿಲ್ಲೆಯಲ್ಲಿ ಹನುಮ ಸಂಕೀರ್ತನಾ ಯಾತ್ರೆ ತೆರಳುತ್ತಿದ್ದಂತ ಸಂದರ್ಭದಲ್ಲಿ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಬಳಿಯಲ್ಲಿ ಭಾರೀ ಹೈಡ್ರಾಮಾವೇ ನಡೆದಿದೆ. ಇದೀಗ ಸ್ಥಳದಲ್ಲಿ ಬಿಗುವಿನ ವಾತಾವರಣ ಇರುವುದಾಗಿ ಹೇಳಲಾಗುತ್ತಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಬಳಿಯಲ್ಲಿ ಹನುಮ ಸಂಕೀರ್ತನಾ ಯಾತ್ರೆ ತೆರಳುತ್ತಿದ್ದ ಸಂದರ್ಭದಲ್ಲಿ ಪೊಲೀಸರು, ಹನುಮ ಮಾಲಾಧಾರಿಗಳ ನಡುವೆ ತಳ್ಳಾಟ ನೂಕಾಟ ನಡೆದಿದೆ. ಈ ಮೂಲಕ ಹೈಡ್ರಾಮಾವೇ ನಡೆದಿದೆ. ಬ್ಯಾರಿಕೇಡ್ ಹಾಕಿದ್ದನ್ನು ಲೆಕ್ಕಿಸದೇ ಹನುಮ ಮಾಲಾಧಾರಿಗಳು ನುಗ್ಗಲು ಯತ್ನಿಸಿದ್ದಾರೆ. ಅವರನ್ನು ತಡೆದು ಪೊಲೀಸರು ನಿಲ್ಲಿಸಿದ್ದಾರೆ. ಇದೀಗ ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/digital-arrest-elderly-woman-loses-rs-80-lakh-due-to-digital-arrest/ https://kannadanewsnow.com/kannada/breaking-bengaluru-mobile-thieves-on-the-rise-ex-corporator-chases/
ನವದೆಹಲಿ: ದಕ್ಷಿಣ ಮಧ್ಯ ರೈಲ್ವೆ (ಎಸ್ಸಿಆರ್) ಶಬರಿಮಲೆ ಯಾತ್ರಾರ್ಥಿಗಳಿಗಾಗಿ ವಿಶೇಷ ರೈಲುಗಳನ್ನು ಓಡಿಸುತ್ತಿದೆ, ಇದು ಮಾರ್ಗದುದ್ದಕ್ಕೂ ಪ್ರಮುಖ ಧಾರ್ಮಿಕ ಸ್ಥಳಗಳನ್ನು ಒಳಗೊಂಡಿದೆ. ತೆಲಂಗಾಣ ಮತ್ತು ಆಂಧ್ರಪ್ರದೇಶದಿಂದ ಪ್ರಯಾಣಿಸುವ ಅಯ್ಯಪ್ಪ ಭಕ್ತರಿಗೆ ಸಹಾಯ ಮಾಡಲು ಈ ರೈಲುಗಳನ್ನು ವಿನ್ಯಾಸಗೊಳಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಈ ವಿಶೇಷ ಸೇವೆಗಳ ಪ್ರಯಾಣಿಕರು ದಾರಿಯುದ್ದಕ್ಕೂ ಕೇರಳದ ಪ್ರಮುಖ ದೇವಾಲಯಗಳಿಗೆ ಅನುಕೂಲಕರವಾಗಿ ಭೇಟಿ ನೀಡಬಹುದು. ಪಂದಲಂ, ಕುಲತುಪುಳ, ಆರ್ಯನ್ಕಾವು, ಅಚಂಕೋವಿಲ್ ಮತ್ತು ಎರುಮೇಲಿಯ ಸಾಸ್ತಾ ದೇವಾಲಯಗಳು ಸರ್ಕ್ಯೂಟ್ನಲ್ಲಿ ಸೇರಿವೆ. ಡಿಸೆಂಬರ್ 19 ಮತ್ತು 26 ರಂದು ಚಲಿಸುವ ಸಿಕಂದರಾಬಾದ್-ಕೊಲ್ಲಂ (07175), ಡಿಸೆಂಬರ್ 21 ಮತ್ತು 28 ರಂದು ಚಲಿಸುವ ಕೊಲ್ಲಂ-ಸಿಕಂದರಾಬಾದ್ (07176), ಜನವರಿ 2, 9 ಮತ್ತು 16 ರಂದು ಚಲಿಸುವ ಸಿಕಂದರಾಬಾದ್-ಕೊಲ್ಲಂ (07175) ಮತ್ತು ಮುಂದಿನ ವರ್ಷ ಜನವರಿ 4, 11 ಮತ್ತು 18 ರಂದು ಚಲಿಸುವ ಕೊಲ್ಲಂ-ಸಿಕಂದರಾಬಾದ್ (07176) ರೈಲು ಸೇವೆಗಳಲ್ಲಿ ಸೇರಿವೆ. ಎಸ್ಸಿಆರ್ ಪ್ರಕಾರ, ಈ ವಿಶೇಷ ರೈಲುಗಳು ಫಸ್ಟ್ ಎಸಿ, 2ಎಸಿ,…













