Author: kannadanewsnow09

ಗದಗ: ಸೋಮವಾರದಿಂದ ಬುಧವಾರದವರೆಗೆ ಮೂರು ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುವುದು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗದಗ ಜಿಲ್ಲೆಯ ರೋಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ವಕ್ಫ್ ವಿಚಾರದಲ್ಲಿ ಬಿ.ವೈ.ವಿಜಯೇಂದ್ರ 150 ಕೋಟಿ ಆ ಮಿಷದ ಒಡ್ಡಿದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮಾನಪ್ಪಾಡಿ ಅವರು ಅವರದೇ ವಿಡಿಯೊದಲ್ಲಿ ನೀಡಿದ ಹೇಳಿಕೆ ಆಧಾರದ ಮೇಲೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ ಎಂದರು. ಸಿಬಿಐ ತನಿಖೆಗೆ ಕೊಟ್ಟರೆ ಕಾಂಗ್ರೆಸ್ಸಿನವರೇ ಸಿಕ್ಕಿ ಬೀಳ್ತಾರೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಹಾಗಿದ್ರೆ CBI ತನಿಖೆಗೆ ಕೊಡ್ಲಿ ಎಂದರು. ವಿಡಿಯೊದಲ್ಲಿರುವ ಧ್ವನಿ ಮಾನಪ್ಪಾಡಿ ಅವರದ್ದೋ ಅಲ್ವೋ ಎಂದು ಮಾಧ್ಯಮದವರಿಗೇ ಚೆನ್ನಾಗಿ ಗೊತ್ತಿರತ್ತೆ ತಾನೇ ಎಂದು ಸಿಎಂ ಪ್ರಶ್ನಿಸಿದರು. https://kannadanewsnow.com/kannada/kas-officer-who-became-ascetic-crowned-as-successor-of-vishwa-vokkaliga-mahasamsthana/ https://kannadanewsnow.com/kannada/breaking-bengaluru-mobile-thieves-on-the-rise-ex-corporator-chases/

Read More

ಚಳಿಗಾಲವು ರೋಗನಿರೋಧಕ ಶಕ್ತಿ ಮತ್ತು ಉಷ್ಣತೆಯನ್ನು ಹೆಚ್ಚಿಸುವ ಪೌಷ್ಟಿಕ ಸೂಪರ್ಫುಡ್ಗಳ ಶ್ರೇಣಿಯನ್ನು ನೀಡುತ್ತದೆ. ಮೂಲಂಗಿ, ಋತುಮಾನದ ಚಳಿಗಾಲದ ತರಕಾರಿ ವಿಶೇಷವಾಗಿ ಗಮನಾರ್ಹವಾಗಿದೆ. ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಮೂಲಂಗಿ ವಿಟಮಿನ್ ಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೇರಳವಾಗಿ ಒದಗಿಸುತ್ತದೆ. ಚಳಿಗಾಲದ ಆಹಾರದಲ್ಲಿ ಮೂಲಂಗಿಯನ್ನು ಸೇರಿಸುವುದರಿಂದ ಪೋಷಣೆ ಮತ್ತು ಪೋಷಣೆ ಸಿಗುತ್ತದೆ. ಆಗಾಗ್ಗೆ ಹಸಿಯಾಗಿ ಅಥವಾ ಬೇಯಿಸಿ ಸೇವಿಸುವ ಮೂಲಂಗಿ ವಿವಿಧ ಭಕ್ಷ್ಯಗಳಿಗೆ ಪರಿಮಳ ಮತ್ತು ವಿನ್ಯಾಸವನ್ನು ನೀಡುತ್ತದೆ. ಇದರ ಬಹುಮುಖತೆಯು ಸೂಪ್ಗಳು, ಸಲಾಡ್ಗಳು ಮತ್ತು ಸೈಡ್ ಡಿಶ್ಗಳಲ್ಲಿ ಜನಪ್ರಿಯ ಘಟಕಾಂಶವಾಗಿದೆ. ಮೂಲಂಗಿಗಳಂತಹ ಕಾಲೋಚಿತ ಉತ್ಪನ್ನಗಳನ್ನು ಅಳವಡಿಸಿಕೊಳ್ಳುವುದು ಒಟ್ಟಾರೆ ಯೋಗಕ್ಷೇಮವನ್ನು ಬೆಂಬಲಿಸುತ್ತದೆ ಮತ್ತು ಚಳಿಗಾಲದ ಪಾಕಪದ್ಧತಿಯ ರುಚಿಯನ್ನು ಹೆಚ್ಚಿಸುತ್ತದೆ. ಚಳಿಗಾಲದಲ್ಲಿ ನಿಮ್ಮ ಊಟದೊಂದಿಗೆ ಮೂಲಂಗಿ ಅಥವಾ ಮೂಲಿ ತಿನ್ನುವುದರಿಂದ ಐದು ಪ್ರಯೋಜನಗಳು ಇಲ್ಲಿವೆ. ಚಳಿಗಾಲದಲ್ಲಿ ಮೂಲಂಗಿಯ ಪ್ರಯೋಜನಗಳು ಜೀರ್ಣಕ್ರಿಯೆ ಮತ್ತು ನಿರ್ವಿಷೀಕರಣಕ್ಕೆ ಸಹಾಯ ಮಾಡುತ್ತದೆ ಮೂಲಂಗಿಯನ್ನು ಊಟದೊಂದಿಗೆ ತಿನ್ನುವುದು ಜೀರ್ಣಕ್ರಿಯೆ ಮತ್ತು ನಿರ್ವಿಷೀಕರಣಕ್ಕೆ ಸಹಾಯ ಮಾಡುತ್ತದೆ. ಇದರ ಫೈಬರ್ ಅಂಶವು ಜೀರ್ಣಕಾರಿ ಕಿಣ್ವಗಳನ್ನು…

Read More

ಬೆಂಗಳೂರು: ನಗರದ ಕೆಂಗೇರಿ ಬಳಿಯಲ್ಲಿ ಇರುವಂತ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನೂತನ ಉತ್ತರಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಡಾ.ಹೆಚ್.ಎಲ್ ನಾಗರಾಜು ಅವರು ಸನ್ಯಾಸತ್ವ ಸ್ವೀಕರಿಸುವ ಮೂಲಕ, ಪಟ್ಟಾಭಿಷೇಕಕ್ಕೇರಿದ್ದಾರೆ. ಕೆಂಗೇರಿಯ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠಕ್ಕೆ ಶ್ರೀ ಕುಮಾರ ಚಂದ್ರಶೇಖರ ಸ್ವಾಮೀಜಿ ನಂತ್ರ, ಕೆಎಎಸ್ ಅಧಿಕಾರಿ ಡಾ.ಹೆಚ್.ಎಲ್ ನಾಗರಾಜು ಪೀಠಾಧಿಪತಿಯಾಗಿ ಆಯ್ಕೆ ಮಾಡಲಾಗಿತ್ತು. ಇವರು ಪಟ್ಟಾಧಿಕಾರದ ವೇಳೆಯಲ್ಲಿ ಸನ್ಯಾಸತ್ವ ಸ್ವೀಕರಿಸಬೇಕಿತ್ತು. ಅದರಂತೆ ಇಂದು ನೂರಾರು ಶ್ರೀಗಳ ಸಮ್ಮುಖದಲ್ಲಿ ಸನ್ಯಾಸತ್ವ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದಂತ ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಶ್ರೀಗಳು, ಎರಡು ಮಠಗಳ ನಡುವೆ ಒಂದು ಸಮಸ್ಯೆ ಇದೆ ಎಂದು ನಿಡುಮಾಮಿಡಿ ಶ್ರೀಗಳು ಹೇಳಿದಾಗ ಎಲ್ಲರಿಗೂ ಅನ್ನಿಸಿತ್ತು. ಆದರೇ ಮಠಗಳ ನಡುವೆ ಯಾವುದೇ ಸಮಸ್ಯೆ ಇಲ್ಲ. ಒಂದೇ ಗುರು, ಒಂದೇ ಸಮುದಾಯ, ಒಂದೇ ತಾಯಿ ಎಂದು ಪೂಜ್ಯರು ಹೇಳಿದ್ದಾರೆ ಎಂದರು. ನಾಗರಾಜ್ ಅವರು ನಿಶ್ಚಲಾನಂದನಾಥರಾಗಿ ಬದಲಾಗುವ ಸಂದರ್ಭದಲ್ಲಿ ಇಷ್ಟು ಜನ ಸೇರಿರುವುದು ಖುಷಿಯ ವಿಚಾರವಾಗಿದೆ. ನಾವೆಲ್ಲರೂ ಒಂದೇ ಗುರು ಪರಂಪರೆಯವರು. ಇಂದು ನಾಗರಾಜ್…

Read More

ರಾಮನಗರ: ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿದ್ದಾನೆ. ಕನಕಪುರದ ಹೆಗ್ಗನೂರು ದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಹೆಗ್ಗನೂರು ದೊಡ್ಡಿ ಗ್ರಾಮದಲ್ಲಿ ಇಂದು ಮುಂಜಾನೆ 4 ಗಂಟೆಗೆ ಜಮೀನಿನಲ್ಲಿ ಹಾಕಿದ್ದಂತ ಮೆದೆ ನೋಡಲು ತೆರಳುತ್ತಿದ್ದಂತ ವೇಳೆಯಲ್ಲಿ ರೈತ ಕರಿಯಪ್ಪ(65) ಎಂಬುವರ ಮೇಲೆ ಕಾಡಾನೆ ದಾಳಿ ನಡೆಸಿದೆ. ಕಾಡಾನೆ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದಂತ ಕರಿಯಪ್ಪ ಅವರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುತ್ತಿದ್ದಂತ ಸಂದರ್ಭದಲ್ಲಿ ಕೊನೆಯುಸಿರು ಎಳೆದಿದ್ದಾರೆ. ಈ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/over-15-injured-as-tourist-bus-overturns-in-shivamogga/ https://kannadanewsnow.com/kannada/digital-arrest-elderly-woman-loses-rs-80-lakh-due-to-digital-arrest/ https://kannadanewsnow.com/kannada/breaking-bengaluru-mobile-thieves-on-the-rise-ex-corporator-chases/

Read More

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಬಳಿಯಲ್ಲಿ ಮಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದಂತ ಖಾಸಗಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಪರಿಣಾಮ ಬಸ್ಸಿನಲ್ಲಿದ್ದಂತ 15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಂಗಳೂರಿನಿಂದ ಖಾಸಗಿ ಬಸ್ ನಲ್ಲಿ ಸಾಗರದ ಜೋಗದ ಜಲಪಾತ ವೀಕ್ಷಣೆಗಾಗಿ 55 ಜನರು ಆಗಮಿಸುತ್ತಿದ್ದರು. ಈ ಬಸ್ ಅರಳಗೋಡು ಗ್ರಾಮ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಬಸ್ ಪಲ್ಟಿಯಾಗಿ ಉಂಟಾಗದಂತ ಅಪಘಾತದಲ್ಲಿ ಗಾಯಗೊಂಡಿರುವಂತ ಗಾಯಾಳುಗಳನ್ನು ಕಾರ್ಗಲ್ ಹಾಗೂ ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಕಾರ್ಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಮೂರ್ತಿ ಸಾಥ್ ನೀಡಿದ್ದಾರೆ. ಅಪಘಾತದ ಸಂದರ್ಭದಲ್ಲಿ 55 ಪ್ರಯಾಣಿಕರು ಬಸ್ಸಿನಲ್ಲಿ ಇದ್ದರು ಎಂಬುದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದು ಕಾರ್ಗಲ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ,…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಮಂಗಳೂರಿನಿಂದ ಶಿವಮೊಗ್ಗದ ಜೋಗದ ಜಲಪಾತಕ್ಕೆ ಪ್ರವಾಸಕ್ಕೆ ಬಂದಿದ್ದಂತ ಪ್ರವಾಸಿಗರ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ಮಂಗಳೂರಿನಿಂದ ಶಿವಮೊಗ್ಗದ ಸಾಗರ ಬಳಿಯ ಜೋಗದ ಜಲಪಾತ ವೀಕ್ಷಣೆಗಾಗಿ ಖಾಸಗಿ ಬಸ್ ನಲ್ಲಿ ಪ್ರವಾಸಕ್ಕೆ ಮಂಗಳೂರಿನ 55 ಮಂದಿ ತೆರಳಿದ್ದರು. ಈ ಬಸ್ ಅರಳಗೋಡು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಪಲ್ಟಿ ಹೊಡೆದಿದೆ. ಈ ಸಂದರ್ಭದಲ್ಲಿ ಪ್ರವಾಸಿ ಬಸ್ಸಿನಲ್ಲಿ 55 ಜನರು ಇದ್ದರು ಎಂಬುದಾಗಿ ತಿಳಿದು ಬಂದಿದೆ. ಇವರಲ್ಲಿ 15 ಮಂದಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಕಾರ್ಗಲ್ ಹಾಗೂ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/national-energy-conservation-2024-karnataka-ranks-second-energy-development-corporations-achievement-award/ https://kannadanewsnow.com/kannada/digital-arrest-elderly-woman-loses-rs-80-lakh-due-to-digital-arrest/

Read More

ಬೆಂಗಳೂರು: ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕವು ರಾಷ್ಟ್ರಮಟ್ಟದಲ್ಲಿ ಎರಡನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ದೆಹಲಿಯ ವಿಜ್ಞಾನ ಭವನದಲ್ಲಿ ಡಿಸೆಂಬರ್‌ 14ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಈ ಪ್ರಶಸ್ತಿ ಸ್ವೀಕರಿಸಿದರು. ವಿವಿಧ ರಾಜ್ಯಗಳಲ್ಲಿ ಇಂಧನ ದಕ್ಷತೆಗೆ ರಾಜ್ಯಗಳಲ್ಲಿ ಜಾರಿಗೊಳಿಸಿರುವ ಕಾರ್ಯಕ್ರಮಗಳ ಕುರಿತಂತೆ ಆಯಾ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಈ ಪ್ರಶಸ್ತಿ ನೀಡಲಾಗುತ್ತದೆ. ಇಂಧನ ದಕ್ಷತೆಯಲ್ಲಿ ಉತ್ತಮ ಸಾಧನೆ ಮಾಡಿರುವ ಕರ್ನಾಟಕಕ್ಕೆ ಈ ಬಾರಿ ಎರಡನೇ ಸ್ಥಾನ ದೊರೆತಿದೆ. ರಾಜ್ಯಾದ್ಯಂತ ಸುಸ್ಥಿರ ಇಂಧನ ಪದ್ಧತಿಗಳನ್ನು ಉತ್ತೇಜಿಸುವ ಕ್ರೆಡಲ್‌, ಈ ನಿಟ್ಟಿನಲ್ಲಿ ಅನುಷ್ಠಾನಗೊಳಿಸಿರುವ ಇಂಧನ ದಕ್ಷತೆ ಯೋಜನೆಗಳನ್ನು ಗುರುತಿಸಿ ಕೇಂದ್ರ ಇಂಧನ ಸಚಿವಾಲಯ ಈ ಪ್ರಶಸ್ತಿ ನೀಡಿದೆ. ಸಂತಸ ವ್ಯಕ್ತಪಡಿಸಿದ ಇಂಧನ ಸಚಿವ ಕೆ.ಜೆ. ಜಾರ್ಜ್‌ ಇಂಧನ ಸಂರಕ್ಷಣೆಯಲ್ಲಿ ರಾಜ್ಯಕ್ಕೆ ರಾಷ್ಟ್ರಮಟ್ಟದಲ್ಲಿ ಎರಡನೇ ಪ್ರಶಸ್ತಿ ಸಂದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಇಂಧನ ಸಚಿವ ಕೆ.ಜೆ. ಜಾರ್ಜ್‌,…

Read More

ಬೆಂಗಳೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬಳಸಿ ಸ್ಪೋಟಗೊಳಿಸಿದಂತ ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ಡ್ರೋನ್ ಪ್ರತಾಪ್ ನನ್ನು ಬಂಧಿಸಿದ್ದರು. ಡ್ರೋನ್ ಪ್ರತಾಪ್ ಗೆ ಸಹಾಯ ಮಾಡಿದಂತ ಆತನ ಇಬ್ಬರು ಸ್ನೇಹಿತರನ್ನು ಪೊಲೀಸರು ಈಗ ಬಂಧಿಸಿದ್ದಾರೆ. ಕೃಷಿ ಹೊಂಡ ಒಂದರದಲ್ಲಿ ಸೋಡಿಯಂ ಬಳಸಿ ಡ್ರೋನ್ ಪ್ರತಾಪ್ ಸ್ಪೋಟಗೊಳಿಸಿದ್ದನು. ಈ ಸಂಬಂಧ ಕೇಸ್ ದಾಖಲಾಗಿತ್ತು. ಆನಂತ್ರ ಆತನನ್ನು ಮಿಡಿಗೇಶಿ ಪೊಲೀಸರು ಬಂಧಿಸಿದ್ದರು. ಇದೀಗ ಈ ಪ್ರಕರಣದಲ್ಲಿ ಡ್ರೋನ್ ಪ್ರತಾಪ್ ವೀಡಿಯೋ ಮಾಡಿದ್ದಂತ ಕ್ಯಾಮೆರಾಮ್ಯಾನ್ ವಿನಯ್ ಹಾಗೂ ಆತನಿಗೆ ಸ್ಟೂಡಿಯೋ ಕೊಡಿಸಿದ್ದಂತ ಗೆಳೆಯ ಪ್ರಜ್ವಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇದಲ್ಲದೇ ಡ್ರೋನ್ ಪ್ರತಾಪ್ ಕರೆದೊಯ್ದು ಪೊಲೀಸರು ಸ್ಥಳ ಮಹಜರು ನಡೆಸಿದರು. ಅವೆನ್ಯೂ ರಸ್ತೆಯಲ್ಲಿ ಸೋಡಿಯಂ ಖರೀದಿಸಿದಂತ ಮಾಹಿತಿ ಪಡೆದು ಅಂಗಡಿಗೂ ಕರೆದೊಯ್ದು ಸ್ಥಳ ಮಹಜರು ಮಾಡಿದರು. ಅಲ್ಲದೇ ಡ್ರೋನ್ ಪ್ರತಾಪ್ ಮನೆ, ಕಚೇರಿಗೂ ಕರೆದೊಯ್ದು ಸ್ಥಳ ಮಹಜರು ಮಾಡಿದರು.

Read More

ಹುಬ್ಬಳ್ಳಿ: “ಉತ್ತರ ಕರ್ನಾಟಕದ ಯಾವುದೇ ವಿಚಾರಗಳ ಬಗ್ಗೆ ಚರ್ಚೆ ಮಾಡಲು ಬಿಜೆಪಿಯವರಿಗೆ ಆಸಕ್ತಿ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯಿಸಿದರು. ಅಧಿವೇಶನದಲ್ಲಿ ನಾಲ್ಕು ದಿನ ಬಾಕಿ ಇದ್ದು, ಉತ್ತರ ಕರ್ನಾಟಕದ ವಿಚಾರ ಚರ್ಚೆ ಬಗ್ಗೆ ಕೇಳಿದಾಗ, “ಅವರಿಗೆ ರಾಜಕಾರಣ ಹೊರತಾಗಿ ಬೇರೆ ವಿಚಾರ ಬೇಕಿಲ್ಲ. ಅವರ ಪಕ್ಷದಲ್ಲಿ ಒಗ್ಗಟ್ಟಿಲ್ಲ” ಎಂದು ತಿಳಿಸಿದರು. ಉತ್ತರ ಕರ್ನಾಟಕದ ಉತ್ತರ ಕರ್ನಾಟಕದ ನೀರಾವರಿ ವಿಚಾರವಾಗಿ ಚರ್ಚೆಯಾಗಬೇಕು ಎಂಬ ಪ್ರಶ್ನೆಗೆ, “ನೀರಾವರಿ ವಿಚಾರವಾಗಿ ಚರ್ಚೆ ಮಾಡಲು ನಾನು ಸಿದ್ಧ. ನೀರಾವರಿ ಜತೆಗೆ ಬೇರೆ ವಿಚಾರಗಳೂ ಚರ್ಚೆಯಾಗಲಿ” ಎಂದು ಉತ್ತರಿಸಿದರು. ಶೆಟ್ಟರ್- ಜೋಷಿ ನೇತೃತ್ವ ವಹಿಸಿ ಅನುಮತಿ ಕೊಡಿಸಲಿ ಮಹದಾಯಿ ಯೋಜನೆಗೆ ತಾರ್ಕಿಕ ಅಂತ್ಯ ಯಾವಾಗ ಎಂದು ಕೇಳಿದಾಗ, “ಇತ್ತೀಚೆಗಷ್ಟೇ ಕೇಂದ್ರ ಅರಣ್ಯ ಸಚಿವರನ್ನು ಭೇಟಿ ಮಾಡಿದ್ದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನೂ ಭೇಟಿ ಮಾಡಿ ಚರ್ಚೆ ಮಾಡಿದೆ. ಅವರು ಕೂಡ ಅರಣ್ಯ ಸಚಿವರ ಜತೆ ಚರ್ಚೆ…

Read More

ಬೆಂಗಳೂರು: ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆಯ 52.25 ಕೋಟಿ ರೂ. ವಿದ್ಯುತ್ ಬಿಲ್ ಬಾಕಿಯಲ್ಲಿ 37.74 ಕೋಟಿ ರೂ. ವಿದ್ಯುತ್ ಬಾಕಿಯನ್ನು ಸರಕಾರದ ವತಿಯಿಂದಲೇ ಪಾವತಿಸುವುದು ಹಾಗೂ 15.71 ಕೋಟಿ ಬಾಕಿ ಬಡ್ಡಿ ಮನ್ನಾ ಮಾಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ತಮ್ಮ ಮನವಿಗೆ ಸಚಿವ ಸಂಪುಟ ಸ್ಪಂದಿಸಿರುವುದಕ್ಕೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸಂತಸ ವ್ಯಕ್ತಪಡಿಸಿದ್ದಾರೆ. ಸುವರ್ಣಸೌಧದಲ್ಲಿ ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಮೈಶುಗರ್ ಕಾರ್ಖಾನೆ ಪಾವತಿಸಿಬೇಕಿದ್ದ 37.74 ಕೋಟಿ ವಿದ್ಯುತ್ ಶುಲ್ಕ ಬಾಕಿಯನ್ನು ಸರಕಾರದ ವತಿಯಿಂದಲೇ ಪಾವತಿಸಲು ಹಾಗೂ 15.71 ಕೋಟಿ ಬಾಕಿ ಬಡ್ಡಿ ಮನ್ನಾ ಮಾಡಲು ನಿರ್ಣಯಿಸಿದೆ. ಹೀಗಾಗಿ 52.25 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಸಮಸ್ಯೆ ನಿವಾರಣೆ ಆಗಿದೆ. ಆರ್ಥಿಕವಾಗಿ ತೊಂದರೆಯಲ್ಲಿದ್ದ ಸರಕಾರಿ ಸ್ವಾಮ್ಯದ ಈ ಕಾರ್ಖಾನೆಯನ್ನು ಉಳಿಸಿ, ರೈತರು ಬೆಳೆದಿರುವ ಕಬ್ಬು ನುರಿಸುವ ಕಾರ್ಯ ಆರಂಭಿಸಲು ಸಾಧ್ಯವಾಗುವಂತೆ ಚಾಮುಂಡೇಶ್ವರಿ ವಿದ್ಯುತ್ ಕಂಪನಿಗೆ ವಿದ್ಯುತ್ ಬಾಕಿ ಪಾವತಿಸಲು ನೆರವಾಗುವಂತೆ ಕಳೆದ…

Read More