Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮೈಸೂರು ಹೊರ ವಲಯದಲ್ಲಿ ರೇವ್ ಪಾರ್ಟಿ ನಡೆಸಿದಂತ ವಿಚಾರ ಗಮನಕ್ಕೆ ಬಂದಿದೆ. ಈ ಬಗ್ಗೆ ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮೈಸೂರಿನಲ್ಲಿ ರೇವ್ ಪಾರ್ಟಿ ಆಯೋಜನೆ ವಿಚಾರವನ್ನು ಮೈಸೂರು ಎಸ್ಪಿಯಿಂದ ಮಾಹಿತಿ ಪಡೆದಿದ್ದೇನೆ. ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ರೇವ್ ಪಾರ್ಟಿ ವಿರುದ್ಧ ಕಾನೂನು ರೀತಿಯಲ್ಲಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದರು. ಅಂದಹಾಗೆ ಮೈಸೂರು ಹೊರ ವಲಯದಲ್ಲಿ ರೇವ್ ಪಾರ್ಟಿಯನ್ನು ನಿನ್ನೆ ಆಯೋಜಿಸಲಾಗಿತ್ತು. ಈ ಖಚಿತ ಮಾಹಿತಿಯ ಮೇರೆಗೆ ಮೈಸೂರು ಹೆಚ್ಚುವರಿ ಎಸ್ಪಿ, ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. 150ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿತ್ತು. ತಲಾ 2000ದಂತೆ ವಸೂಲಿ ಮಾಡಿ ರೇವ್ ಪಾರ್ಟಿ ಆಯೋಜಿಸಲಾಗಿದೆ ಎನ್ನಲಾಗಿತ್ತು. ಆದರೇ ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸರಬರಾಜು, ಸೇವನೆಯ ಬಗ್ಗೆ ಮಾದರಿ ಸಂಗ್ರಹಿಸಿದ್ದು, ವರದಿಯ ಬಳಿಕ ತಿಳಿಯಲಿದೆ. https://kannadanewsnow.com/kannada/bengaluru-two-wheeler-owners-get-crucial-information-from-city-police/ https://kannadanewsnow.com/kannada/rape-case-sit-raids-11-locations-belonging-to-munirathna-seizes-crucial-documents/
ಬೆಂಗಳೂರು: ನಗರದಲ್ಲಿ ದಿನೇ ದಿನೇ ವಾಹನಗಳ ಕಳವು ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹೊತ್ತಿನಲ್ಲಿಯೇ ಬೆಂಗಳೂರು ನಗರ ಪೊಲೀಸರಿಂದ ಮಹತ್ವದ ಮನವಿಯನ್ನು ಮಾಲೀಕರಿಗೆ ಮಾಡಲಾಗಿದೆ. ಅದೇನು ಅಂತ ಮುಂದೆ ಓದಿ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ನಗರದಲ್ಲಿ ಸುಮಾರು 80 ಲಕ್ಷ ದ್ವಿಚಕ್ರ ವಾಹನಗಳು ನೋಂದಣಿಯಾಗಿವೆ. ಪ್ರತಿದಿನ ಸುಮಾರು 1500 ರಿಂದ 2000 ಹೊಸ ವಾಹನಗಳು ನೋಂದಣಿಯಾಗುತ್ತಿವೆ. ಕಳೆದ 3 ವರ್ಷಗಳಿಂದ ಪ್ರತಿದಿನ ಸರಾಸರಿ 14 ರಿಂದ 16 ವಾಹನಗಳು ಕಳ್ಳತನವಾಗುತ್ತಿವೆ. ಆದ್ದರಿಂದ ನಗರದಲ್ಲಿ ದ್ವಿಚಕ್ರ ವಾಹನ ಕಳ್ಳತನವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾರ್ವಜನಿಕರಿಗೆ ಈ ಕೆಳಗಿನ ಸೂಚನೆಗಳನ್ನು ನೀಡಿದ್ದಾರೆ. ದ್ವಿಚಕ್ರ ವಾಹನಗಳ ಕಳ್ಳತನಕ್ಕೆ ಕಾರಣಗಳು 1. ವಾಹನಗಳನ್ನು ಅಜಾಗರೂಕತೆಯಿಂದ ನಿಲ್ಲಿಸುವುದು. 2. ನಿಲ್ಲಿಸಿರುವ ವಾಹನದಲ್ಲಿ ಕೀಲಿಯನ್ನು ಬಿಡುವುದು. 3. ಸುಲಭವಾಗಿ ಒಡೆಯಬಹುದಾದ ಹ್ಯಾಂಡಲ್ ಲಾಕ್ ಗಳನ್ನು ಹೊಂದಿರುವ ವಾಹನಗಳನ್ನು ಬಳಸುವುದು. 4. ಸರಿಯಾದ ಲಾಕಿಂಗ್ ವ್ಯವಸ್ಥೆಗಳಿಲ್ಲದ ಹಳೆಯ ವಾಹನಗಳನ್ನು ಬಳಸುವುದು. 5.…
ನವದೆಹಲಿ: ಮುಂಬರುವ ಹಬ್ಬಗಳ ಸಂದರ್ಭದಲ್ಲಿ ‘ಮೇಡ್ ಇನ್ ಇಂಡಿಯಾ’ ಉತ್ಪನ್ನಗಳನ್ನು ಖರೀದಿಸುವಂತೆ ಪ್ರಧಾನಿ ಮೋದಿ ಜನತೆಗೆ ಮನವಿ ಮಾಡಿದ್ದಾರೆ. ಇಂದು ಮನ್ ಕೀ ಬಾತ್ ನ 114ನೇ ಎಪಿಸೋಡ್ ನಲ್ಲಿ ಮಾತನಾಡಿದಂತ ಅವರು, ಮನ್ ಕೀ ಬಾತ್ ಗೆ 10 ವರ್ಷ ಆಗಿದ್ದನ್ನು ನೆನೆದು ಭಾವುಕರಾದರು. ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ರೇಡಿಯೋ ಕಾರ್ಯಕ್ರಮ ಹತ್ತು ವರ್ಷಗಳನ್ನು ಪೂರೈಸಿದೆ. ಜಲ ಸಂರಕ್ಷಣೆಗೆ ಮಹಿಳಾ ರೈತರು ನೀಡಿದ ಕೊಡುಗೆಯನ್ನು ಪ್ರಧಾನಿ ಶ್ಲಾಘಿಸಿದರು. ಪ್ರತಿ ತಿಂಗಳು ಕಾರ್ಯಕ್ರಮಕ್ಕಾಗಿ ಪತ್ರಗಳು ಮತ್ತು ಸಲಹೆಗಳನ್ನು ಕಳುಹಿಸುವ ಅಸಂಖ್ಯಾತ ಜನರಿಗೆ ಪ್ರಧಾನಿ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತಾರೆ. ಕಳೆದ ಕೆಲವು ವಾರಗಳಿಂದ, ದೇಶದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ, ಈ ಮಳೆಗಾಲವು ‘ಜಲ ಸಂರಕ್ಷಣೆ’ ಎಷ್ಟು ಮುಖ್ಯ ಎಂಬುದನ್ನು ನಮಗೆ ನೆನಪಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಪ್ರತಿಭೆ ಮತ್ತು ಸೃಜನಶೀಲತೆಯನ್ನು ಪೋಷಿಸಲು…
ಮೈಸೂರು: ಜಿಲ್ಲೆಯ ಹೊರ ವಲಯದಲ್ಲಿ ರೇವ್ ಪಾರ್ಟಿ ನಡೆಸುತ್ತಿದ್ದಂತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ನೂರಾರು ಜನರನ್ನು ಪೊಲೀಸರು ವಶಕ್ಕೆ ಪಡೆದು, ಅವರ ರಕ್ತದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ. ಮೈಸೂರು ಹೊರ ವಲಯದಲ್ಲಿ ನಿನ್ನೆ ತಡರಾತ್ರಿ ರೇವ್ ಪಾರ್ಟಿ ನಡೆಸಲಾಗಿದೆ. ಈ ವಿಷಯ ತಿಳಿದಂತ ಮೈಸೂರು ಜಿಲ್ಲಾ ಪೊಲೀಸರು ಅಲರ್ಟ್ ಆಗಿ ಪಾರ್ಟಿಯ ಮೇಲೆ ದಾಳಿಯನ್ನು ನಡೆಸಿದ್ದಾರೆ. ಮೈಸೂರು ಹೆಚ್ಚುವರಿ ಎಸ್ಪಿ ನಾಗೇಶ್, ಡಿವೈಎಸ್ಪಿ ಕರೀಮ್ ನೇತೃತ್ವದಲ್ಲಿ ರೇವ್ ಪಾರ್ಟಿಯ ಮೇಲೆ ದಾಳಿ ನಡೆಸಲಾಗಿದೆ. ತಡರಾತ್ರಿ ನಡೆಯುತ್ತಿದ್ದ ಪಾರ್ಟಿಯಲ್ಲಿ ನೂರಾರು ಜನರು ಭಾಗಿಯಾಗಿದ್ದರು ಎನ್ನಲಾಗಿದೆ. ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದಂತ 150ಕ್ಕೂ ಹೆಚ್ಚು ಯುವತಿ, ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕಾರ್ಯಾಚರಣೆಯ ವೇಳೆಯಲ್ಲಿ ಪೊಲೀಸರ ಮೇಲೆ ಹಲ್ಲೆಯನ್ನು ನಡೆಸಿದಂತ ಆರೋಪ ಕೂಡ ಕೇಳಿ ಬಂದಿದೆ. ಮೈಸೂರು ಹೊರ ವಲಯದ ರೇವ್ ಪಾರ್ಟಿಯಲ್ಲಿ ಭಾಗಿಯಾದವರಿಂದ ತಲಾ 2000 ಹಣವನ್ನು ವಸೂಲಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.…
ಬೆಂಗಳೂರು: ರಾಜ್ಯದ ಶೈಕ್ಷಣಿಕ ಚಟುವಟಿಕೆಯ ಮಾದರಿಯಿಂದಾಗಿ ಪ್ರೌಢ ಶಾಲಾ ಶಿಕ್ಷಕರ ಮೇಲೆ ಹೆಚ್ಚಿನ ಒತ್ತಡ ಬಿದ್ದಿದೆ. ವರ್ಷಕ್ಕೆ ಮೂರು ಬಾರಿ ಪರೀಕ್ಷೆ ಸೇರಿದಂತೆ ಹಲವು ಅವೈಜ್ಞಾನಿಕ ಶೈಕ್ಷಣಿಕ ವೇಳಾಪಟ್ಟಿಯಿಂದಾಗಿ ಶಿಕ್ಷಕರು ಒತ್ತಡದಲ್ಲೇ ಬೋಧನಾ ವೃತ್ತಿಯಲ್ಲಿ ತೊಡಗಿದ್ದಾರೆ. ಈ ಬಗ್ಗೆ ಶಿಕ್ಷಣ ಇಲಾಖೆ ಗಮನಿಸಿ ಸಮಸ್ಯೆ ನಿವಾರಿಸುತ್ತಾ ಎನ್ನುವ ಬಗ್ಗೆ ಮುಂದೆ ಓದಿ. ಕನಿಷ್ಠ ಕಲಿಕಾಂಶಗಳ ಕಲಿಕೆ ಇಲ್ಲದೆ ಸ್ಪಷ್ಟವಾಗಿ ಓದಲು, ಶುದ್ಧವಾಗಿ ಬರೆಯಲು ಗಣಿತದ ಮೂಲ ಕಲಿಕಾಂಶಗಳು ಬಾರದ, ಮೂಲ ಸಾಮರ್ಥ್ಯಗಳ ಜ್ಞಾನವಿಲ್ಲದ ವಿದ್ಯಾರ್ಥಿಗಳು ಪ್ರೌಢ ಶಾಲೆಗೆ ದಾಖಲಾಗುತ್ತಿದ್ದಾರೆ. ಪ್ರೌಢಶಾಲೆಗಳಲ್ಲಿ ಸೇತುಬಂಧದ ಪೂರ್ವ ಪರೀಕ್ಷೆಯ ವಿಶ್ಲೇಷಣೆ ಗಮನಿಸಿದರೆ ಇದು ತಿಳಿಯುತ್ತದೆ. ಇಂಥ ವಿದ್ಯಾರ್ಥಿಗಳಿಗೆ 8 9ನೇ ತರಗತಿಯ ಪಠ್ಯ ವಸ್ತು ಬೋಧಿಸಬೇಕೋ ಅಥವಾ ವರ್ಣಮಾಲೆ, ಕಾಗುಣಿತ, ಒತ್ತಕ್ಷರಗಳು, ಓದುವುದು, ಬರೆಯುವುದು ಕಲಿಸಬೇಕೋ ಗೊತ್ತಾಗುತ್ತಿಲ್ಲ. ಒಂದರಿಂದ ಎಂಟನೇ ತರಗತಿಯವರೆಗೆ ಕಲಿಯಬೇಕಾದ ಮೂಲ ಕಲಿಕಾಂಶಗಳನ್ನು ಸೇತುಬಂಧದ 15 ದಿನಗಳಲ್ಲಿ ಕಲಿಸಬೇಕು. ಈ 15 ದಿನಗಳಲ್ಲಿ ಕಲಿಯಲು ವಿಫಲನಾದರೆ ಅವರನ್ನು ಪರಿಹಾರ ಬೋಧನೆಗೆ ಒಳಪಡುವ ವಿಶೇಷ ಅಗತ್ಯವುಳ್ಳ ಮಕ್ಕಳು…
ಮೈಸೂರು: ಇಂದು ಚಾಮುಂಡಿ ಚಲೋ ಹಮ್ಮಿಕೊಳ್ಳಲಾಗಿತ್ತು. ಆದರೇ ಜಿಲ್ಲಾಡಳಿತ ಇದಕ್ಕೆ ಅವಕಾಶ ನೀಡದೇ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಚಲೋ ರದ್ದುಗೊಳಿಸಲಾಗಿದೆ. ಇದರ ನಡುವೆ ಚಾಮುಂಡಿ ತಾಯಿ ದರ್ಶನಕ್ಕೆ ಇಂದು ಭಕ್ತರಿಗೆ ನಿರ್ಬಂಧ ಕೂಡ ವಿಧಿಸಲಾಗಿದೆ. ಹೌದು ಸಾರ್ವಜನಿಕರಿಗೆ ಯಾರಿಗೂ ಇಂದು ಚಾಮುಂಡಿ ತಾಯಿ ದರ್ಶನ ಪಡೆಯಲು ಅವಕಾಶವಿಲ್ಲ. ಅಲ್ಲದೇ ಚಾಮುಂಡಿ ತಪ್ಪಲಿನಲ್ಲಿ ನಿಷೇಧಾಜ್ಞೆ ಜಾರಿಗೊಂಡಿರುವ ಕಾರಣ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇಂದು ಮಹಿಷಾ ದಸರಾ ಆಚರಣಾ ಸಮಿತಿಯು ಮಹಿಷ ದರಸ ಆಚರಣೆಗೆ ಕರೆ ನೀಡಿತ್ತು. ಇಂದು ಬೆಳಿಗ್ಗೆ 10.30ಕ್ಕೆ ಚಾಮುಂಡಿ ಬೆಟ್ಟದಲ್ಲಿ ಮಹಿಷಾಸುರ ಪ್ರತಿಮೆಗೆ ಪುಷ್ಪಾರ್ಚನೆ, ಪುರಭವನದ ಹೊರಾಂಗಣದಲ್ಲಿ ಮಹಿಷ ಮಂಡಲೋತ್ಸವ ಕಾರ್ಯಕ್ರಮ ಕೂಡ ಹಮ್ಮಿಕೊಳ್ಳಲಾಗಿತ್ತು. ಆದರೇ ಇದಕ್ಕೆ ಜಿಲ್ಲಾಡಳಿತ ಅವಕಾಶ ನೀಡಿರಲಿಲ್ಲ. ಮುಂಜಾಗ್ರತಾ ಕ್ರಮವಾಗಿ ಚಾಮುಂಡಿ ಬೆಟ್ಟದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿಗಳು ಹೊರಡಿಸಿದ್ದಾರೆ. ಹೀಗಾಗಿ ಐವರು ಜನರಿಗಿಂತ ಹೆಚ್ಚು ಮಂದಿ ಗುಂಪು ಗೂಡುವುದು, ಸಭೆ, ಸಮಾರಂಭ ನಡೆಸುವುದು ನಿಷೇಧಿಸಲಾಗಿದೆ. https://kannadanewsnow.com/kannada/5-year-old-boy-dies-of-suspected-dengue-fever-in-ballari/…
ಬಳ್ಳಾರಿ: ಜಿಲ್ಲೆಯಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಶಂಕಿತ ಡೆಂಗ್ಯೂ ಜ್ವರಕ್ಕೆ 5 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವಂತ ಘಟನೆ ಕುರುಗೋಡು ತಾಲ್ಲೂಕಿನಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲ್ಲೂಕಿನ ಸಿದ್ದಮ್ಮನಹಳ್ಳಿಯ 5 ವರ್ಷದ ಬಾಲಕ ಪ್ರದೀಪ್ ಆಚಾರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿತ್ತು. ಚಿಕಿತ್ಸೆಗಾಗಿ ಆಸ್ಪತ್ರೆಗೂ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಪುಟಾಣಿ ಬಾಲಕ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಸಿದ್ದಮ್ಮನಹಳ್ಳಿ ಗ್ರಾಮದ 20ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. ಬಳ್ಳಾರಿಯ ವಿಮ್ಸ್, ಜಿಲ್ಲಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಜನರು ಪಡೆದಿದ್ದರೇ, ಕೆಲವರು ಚಿಕಿತ್ಸೆಯ ನಂತ್ರ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಇನ್ನೂ ಕೆಲವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಆರೋಗ್ಯ ಇಲಾಖೆಯಿಂದ ಸಿದ್ದಮ್ಮನಹಳ್ಳಿ ಗ್ರಾಮದಲ್ಲಿನ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ವಹಿಸಲಾಗಿದೆ. ಸೊಳ್ಳೆನಿಯಂತ್ರಣಕ ಔಷಧ ಸೇರಿದಂತೆ ಡೆಂಗ್ಯೂ ನಿಯಂತ್ರಣ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/technical-snag-at-whitefield-metro-station-in-bengaluru-traffic-on-purple-line-suspended/ https://kannadanewsnow.com/kannada/rape-case-sit-raids-11-locations-belonging-to-munirathna-seizes-crucial-documents/
ಬೆಂಗಳೂರು: ನಗರದ ವೈಟ್ ಫೀಲ್ಡ್ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ದೋಷ ಉಂಟಾಗಿದ್ದೂ, ಈ ಕಾರಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತಗೊಂಡಿರುವುದಾಗಿ ಬಿಎಂಆರ್ ಸಿಎಲ್ ತಿಳಿಸಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ವೈಟ್ಫೀಲ್ಡ್ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ದೋಷದಿಂದಾಗಿ ನೇರಳೆ ಮಾರ್ಗದ ವೈಟ್ಫೀಲ್ಡ್ (ಕಾಡುಗೋಡಿ) ಮತ್ತು ಐಟಿಪಿಎಲ್ ನಡುವೆ 08.25 ಗಂಟೆಯಿಂದ 8.55 ಗಂಟೆಯವರೆಗೆ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು ಎಂದಿದೆ. ನೇರಳೆ ಮಾರ್ಗದಲ್ಲಿ ಈ ಸಮಯದಲ್ಲಿ ಚಲ್ಲಘಟ್ಟದಿಂದ ಐಟಿಪಿಎಲ್ ಮೆಟ್ರೋ ನಿಲ್ದಾಣಗಳ ನಡುವೆ ಶಾರ್ಟ್ ಲೂಪ್ ರೈಲು ಸೇವೆಗಳು ನಡೆಸಲಾಯಿತು. ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ ಎಂದಿದೆ. 8.55 ಗಂಟೆಯಿಂದ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆ ಎಂದಿನಂತೆ ನಡೆಯುತ್ತಿವೆ. ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ಯಾವುದೇ ವ್ಯತ್ಯಾಯವಾಗಿಲ್ಲ ಎಂಬುದಾಗಿ ಹೇಳಿದೆ. https://kannadanewsnow.com/kannada/another-good-news-for-the-people-of-the-state-eye-treatment-vaccination-for-children-in-our-clinic/ https://kannadanewsnow.com/kannada/rape-case-sit-raids-11-locations-belonging-to-munirathna-seizes-crucial-documents/
ಬೆಂಗಳೂರು: ರಾಜ್ಯದ ಜಿಲ್ಲಾ ಕೇಂದ್ರ ಸೇರಿದಂತೆ ತಾಲ್ಲೂಕು ಕೇಂದ್ರಗಳಲ್ಲಿಯೂ ನಮ್ಮ ಕ್ಲಿನಿಕ್ ತೆರೆಯಲಾಗಿದೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯ ವಾರ್ಡ್ ಮಟ್ಟದಲ್ಲಿಯೂ ನಮ್ಮ ಕ್ಲಿನಿಕ್ ಓಪನ್ ಮಾಡಲಾಗಿದೆ. ಈ ನಮ್ಮ ಕ್ಲಿನಿಕ್ ನಲ್ಲಿ ಇನ್ಮುಂದೆ ನೇತ್ರ ಚಿಕಿತ್ಸೆ, ಮಕ್ಕಳಿಗೆ ವಿವಿಧ ಲಸಿಕೆ ಹಾಕುವಂತ ನಿರ್ಧಾರಕ್ಕೂ ಸರ್ಕಾರ ಮುಂದಾಗಿದೆ. ಪ್ರಾಯೋಗಿಕ ಎನ್ನುವಂತೆ ರಾಜ್ಯದ ರಾಜಧಾನಿ ಬೆಂಗಳೂರಿನ ನಮ್ಮ ಕ್ಲಿನಿಕ್ ನಲ್ಲಿ ಶೀಘ್ರದಲ್ಲೇ ಕಣ್ಣಿನ ಪರೀಕ್ಷೆ ಹಾಗೂ ಅದಕ್ಕೆ ಚಿಕಿತ್ಸೆಯಂತ ಸೌಲಭ್ಯಗಳು ದೊರೆಯಲಿದ್ದಾವೆ. ಅಲ್ಲದೇ ಮಕ್ಕಳಿಗೆ ವಿವಿಧ ಲಸಿಕಾಕರಣ ಕೂಡ ನಡೆಯಲು ತಯಾರಿ ನಡೆಸಲಾಗಿದೆ. ಇನ್ನೂ ನಾಯಿ ಕಡಿತಕ್ಕೆ ಚುಚ್ಚುಮದ್ದು ಸೇರಿದಂತೆ ಇನ್ನೂ ಕೆಲವು ಸೇವೆಗಳನ್ನು ಆರಂಭಿಸುವ ಮೂಲಕ ನಮ್ಮ ಕ್ಲಿನಿಕ್ ಗಳನ್ನು ಮೇಲ್ದರ್ಜೆಗೆ ಏರಿಸೋದಕ್ಕೆ ಬಿಬಿಎಂಪಿ ಮುಂದಾಗಿದೆ. ಈ ಸೇವೆಯನ್ನು ರಾಜ್ಯಾಧ್ಯಾಂತ ಇರುವಂತ ನಮ್ಮ ಕ್ಲಿನಿಕ್ ಗಳಲ್ಲಿಯೂ ಪ್ರಾರಂಭಿಸುವಂತ ಆಲೋಚನೆ ಇದೆ. ಅಂದಹಾಗೇ ಕಳೆದ ಎರಡು ವರ್ಷಗಳ ಹಿಂದೆ ನಗರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ದೆಹಲಿಯ ಮೊಹಲ್ಲಾ ಕ್ಲಿನಿಕ್ ಮಾದರಿಯಲ್ಲೇ ಕರ್ನಾಟಕದಲ್ಲೂ…
ಪೂರ್ವಜರ ಆರಾಧನೆಯನ್ನು ಅತ್ಯಂತ ವಿಶೇಷವಾದ ಆರಾಧನೆ ಎಂದು ಪರಿಗಣಿಸಲಾಗಿದೆ. ಕುಲದೇವತೆಯ ಕೃಪೆಯಿಂದಲೇ ನಮ್ಮ ಜೀವನದಲ್ಲಿ ಪ್ರತಿಯೊಂದು ಶುಭ ಕಾರ್ಯಗಳು ನಡೆಯುತ್ತವೆ ಎಂಬುದು ಹಲವರ ಅನುಭವಕ್ಕೆ ಬಂದಿರುವ ಸತ್ಯ. ಆದುದರಿಂದಲೇ ಇಂದಿನ ಕಾಲದಲ್ಲಿ ಕುಲದೇವತಾ ಆರಾಧನೆಯು ಬಹಳ ವಿಶೇಷವಾಗಿದೆ. ಅಂತಹ ಕುಲದೇವತೆಗೆ ನಾವು ಮಾಡುವ ಪ್ರತಿಯೊಂದು ರೀತಿಯ ಪೂಜೆಯು ವಿಭಿನ್ನ ಪ್ರಯೋಜನಗಳನ್ನು ಹೊಂದಿದೆ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ಯಶಸ್ಸನ್ನು ಸಾಧಿಸಲು ಮತ್ತು ಅಡೆತಡೆಗಳನ್ನು ಕಡಿಮೆ ಮಾಡಲು ಕುಲದೈವವನ್ನು ಯೋಚಿಸಿ ಬೆಳಗಬೇಕಾದ ದೀಪದ ಬಗ್ಗೆ ನಾವು ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ಅಡೆತಡೆಗಳನ್ನು…














