Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ಎದ್ದಿದೆ. ಈ ಹೊತ್ತಿನಲ್ಲಿಯೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜುಲೈ.30ರಂದು ದೆಹಲಿಗೆ ದೌಡಾಯಿಸುತ್ತಿದ್ದಾರೆ. ಹೀಗಾಗಿ ಸಿಎಂ ಸಿದ್ಧರಾಮಯ್ಯ ನಡೆ ತೀವ್ರ ಕುತೂಹಲ ಮೂಡಿಸಿದೆ. ಸಿಎಂ ಸಿದ್ಧರಾಮಯ್ಯ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಜುಲೈ.30ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದೆಹಲಿಗೆ ತೆರಳುತ್ತಿರುವುದಾಗಿ ತಿಳಿದು ಬಂದಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ಸಿಎಂ ಸಿದ್ಧರಾಮಯ್ಯ ದೆಹಲಿಗೆ ತೆರಳಿದ್ದರು. ಕೇಂದ್ರದ ಸಚಿವರನ್ನು ಭೇಟಿಯಾಗಿ ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿದ್ದರು. ಅನುಮತಿ, ಅನುಮೋದನೆ, ಅನುದಾನದ ಬಗ್ಗೆಯೂ ಕೇಂದ್ರ ಸಚಿವರೊಂದಿಗೆ ಚರ್ಚಿಸಿ ಮನವಿ ಮಾಡಿ ವಾಪಾಸ್ ಆಗಿದ್ದರು. https://kannadanewsnow.com/kannada/cm-siddaramaiah-will-not-participate-in-the-inauguration-program-of-the-sigandur-bridge-tomorrow-minister-satish-jarkiholi/ https://kannadanewsnow.com/kannada/english-teacher-minister-dr-sharanprakash-patil-video-goes-viral/
ಚಿತ್ರದುರ್ಗ: ನಾಳೆ ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ತಡವಾಗಿ ಮಾಹಿತಿ ನೀಡಲಾಗಿದೆ. ಈ ಹಿನ್ನಲೆಯಲ್ಲಿ ನಾಳೆ ಅವರು ಭಾಗಿಯಾಗುತ್ತಿಲ್ಲ ಎಂಬುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಗಂದೂರು ಸೇತುವೆ ಉದ್ಘಾಟನೆ ಬಗ್ಗೆ ಸಿಎಂಗೆ ತಡವಾಗಿ ಮಾಹಿತಿ ನೀಡಲಾಗಿದೆ. ಅದೇ ದಿನ ಇಂಡಿಯಲ್ಲಿ ಸಿಎಂ ಸಿದ್ಧರಾಮಯ್ಯ ಅವರ ಕಾರ್ಯಕ್ರಮ ಫಿಕ್ಸ್ ಆಗಿದೆ. ಹೀಗಾಗಿ ಸಿಎಂ ಸಿದ್ಧರಾಮಯ್ಯ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ ಎಂದರು. ಸಿಎಂ ಸಿದ್ಧರಾಮಯ್ಯ ಪರವಾಗಿ ನಾನು ಕಾರ್ಯಕ್ರಮಕ್ಕೆ ಹೋಗುತ್ತೇನೆ. ಕರೆದಿದ್ದಾರೋ ಬಿಟ್ಟಿದ್ದಾರೋ ಬೇರೆ ಪ್ರಶ್ನೆ. ರಾಜ್ಯದಲ್ಲಿ ಆಗುತ್ತಿದೆ. ಕೇಂದ್ರ ಸಚಿವರು ಬರುತ್ತಿದ್ದಾರೆ. ಗೌರವಿಸಲು ನಾವು ಭಾಗಿಯಾಗುತ್ತೇವೆ ಎಂದರು. https://kannadanewsnow.com/kannada/follow-these-tips-to-avoid-heart-attack/ https://kannadanewsnow.com/kannada/english-teacher-minister-dr-sharanprakash-patil-video-goes-viral/
ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಘಾತಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವುದು ಜನರಲ್ಲಿ ಆತಂಕ ಮೂಡುವಂತೆ ಮಾಡಿದೆ.ವೇಗವಾಗಿ ಬೆಳೆಯುತ್ತಿರುವ ಆಧುನಿಕ ಬದುಕಿಗೆ ಹೊಂದಿಕೊಳ್ಳುತ್ತಾ, ಎಲ್ಲರ ಜೀವನಶೈಲಿ ಹಾಗೂ ಆಹಾರ ಪದ್ಧತಿ ಬದಲಾಗಿರುವ ಪರಿಣಾಮ ಮನುಷ್ಯನ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಸದ್ದಿಲ್ಲದೆ ದುಷ್ಪರಿಣಾಮಿಸುತ್ತಿದೆ. ಹೆಚ್ಚುತ್ತಿರುವ ಹೃದಯಘಾತಕ್ಕೆ ಕಾರಣಗಳನ್ನು ಗಮನಿಸಿದಾಗ ಬಹು ಮುಖ್ಯವಾಗಿ ಮಾದಕ ವಸ್ತುಗಳ ಸೇವನೆಯು( ಸಿಗರೇಟ್,ಗುಟಕ ಇತ್ಯಾದಿ) ಎದ್ದು ತೋರುತ್ತಿದ್ದರು,ಆಧುನಿಕ ಜೀವನ ಶೈಲಿ ಮತ್ತು ಆಹಾರ ಪದ್ಧತಿ ತೆರೆಮರೆಯಲ್ಲಿ ಇರುವ ಕಾರಣಗಳು. ಆಹಾರ ಪದ್ಧತಿ : “ಆಹಾರ ಸಂಭವೋ ದೇಹಃ” ಅಂದರೆ ದೇಹವು ಆಹಾರದಿಂದ ರಚನೆಯಾಗಿದೆ. ಹೀಗಿದ್ದಲ್ಲಿ ಪಾಶ್ಚಿಮಾತ್ಯ ಜೀವನಶೈಲಿಯ ಅನುಕರಣೆಯಿಂದ ಅತಿಯಾದ ಜಂಕ್ ಫುಡ್ಗ / ಫಾಸ್ಟಪುಡ್ ಗಳ ಸೇವನೆಯಿಂದ, ಅಪರೂಪವಾಗಿದ್ದಂತಹ ಸಕ್ಕರೆ ಕಾಯಿಲೆ,ರಕ್ತದೊತ್ತಡ ಹಾಗೂ ಹೃದಯ ಸಂಬಂಧಿ ಕಾಯಿಲೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿವೆ. ಕೇವಲ ಆಕರ್ಷಣೆ ಮತ್ತು ರುಚಿಕರವಾದಂತಹ ಈ ಪದಾರ್ಥಗಳು ಕಡಿಮೆ ಪೌಷ್ಟಿಕತೆ, ಅತಿಯಾದ ಕ್ಯಾಲೋರಿಗಳಿಂದ ಕೂಡಿವೆ.ಹಲವಾರು ಸಂಶೋಧನೆಗಳ ಪ್ರಕಾರ ಇಂತಹ ಪದಾರ್ಥಗಳ ಸೇವನೆಯಿಂದ ಅತಿಯಾದ…
ಮೈಸೂರು: ಜಿಲ್ಲೆಯಲ್ಲಿ ಜುಲೈ.19ರಂದು ರಾಜ್ಯ ಸರ್ಕಾರದ ಸಾಧನಾ ಸಮಾವೇಶವನ್ನು ನಿಗದಿಪಡಿಸಲಾಗಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಜುಲೈ.19ರಂದು ರಾಜ್ಯ ಸರ್ಕಾರದಿಂದ ಬೃಹತ್ ಸಾಧನಾ ಸಾಮಾವೇಶವನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ 2,600 ಕೋಟಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ಮತ್ತು ಲೋಕಾರ್ಪಣೆಯನ್ನು ಸಿಎಂ ಸಿದ್ಧರಾಮಯ್ಯ ನೆರವೇರಿಸಲಿದ್ದಾರೆ. ಜುಲೈ.19ರಂದು ಸಾಧನಾ ಸಮಾವೇಶದ ಮೂಲಕ ಹಳಏ ಮೈಸೂರು ಭಾಗದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ಶಕ್ತಿ ಪ್ರದರ್ಶನ ನಡೆಸಲಾಗುತ್ತಿದೆ. ಈ ಸಮಾವೇಶದ ಜವಾಬ್ದಾರಿಯನ್ನು ಸಿಎಂ ಆಪ್ತ ಮತ್ತು ಸಚಿವ ಡಾ.ಹೆಚ್.ಸಿ ಮಹಾದೇವಪ್ಪ ಅವರಿಗೆ ನೀಡಲಾಗಿದೆ. ಮೈಸೂರಿನ ಸಾಧನಾ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 3 ದಿನ ಮೊದಲೇ ಮೈಸೂರಿಗೆ ತೆರಳಲಿದ್ದಾರೆ. ಈಗಾಗಲೇ ಮೈಸೂರು, ಚಾಮರಾಜನಗರ ಜಿಲ್ಲೆ ಶಾಸಕರ ಜೊತೆ ಸಭೆ ನಡೆಸಲಾಗಿದೆ. ಸರ್ಕಾರದ ಸಾಧನಾ ಸಮಾವೇಶಕ್ಕೆ ಹೆಚ್ಚಿನ ಜನರನ್ನು ಕರೆತರಲು ಪ್ಲಾನ್ ಕೂಡ ಮಾಡಲಾಗಿದೆ. 1 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಸಾಧ್ಯತೆ ಇದೆ. https://kannadanewsnow.com/kannada/mla-doddanagoudas-personal-assistant-died-of-a-heart-attack/ https://kannadanewsnow.com/kannada/english-teacher-minister-dr-sharanprakash-patil-video-goes-viral/
ಕೊಪ್ಪಳ: ಜಿಲ್ಲೆಯ ಶಾಸಕ ದೊಡ್ಡನಗೌಡ ಆಪ್ತ ಸಹಾಯಕರಾಗಿದ್ದಂತ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕುಷ್ಟಗಿಯಲ್ಲಿ ಹೃದಯಾಘಾತದಿಂದ ಶಾಸಕ ದೊಡ್ಡನಗೌಡ ಅವರ ಆಪ್ತ ಸಹಾಯಕ ಚಂದ್ರು ವಡಗೇರಿ(46) ಸಾವನ್ನಪ್ಪಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ಶಾಸಕ ದೊಡ್ಡನಗೌಡ ಆಪ್ತ ಸಹಾಯಕರಾಗಿ ಚಂದ್ರು ವಡಗೇರಿ ಕಳೆದ 20 ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಪುರಸಭೆಯ ಮಾಜಿ ಸದಸ್ಯರೂ ಕೂಡ ಆಗಿದ್ದರು. ಸಣ್ಣ ಕರುಳಿನ ಆಪರೇಷನ್ ಗೆ ಒಳಗಾಗಿದ್ದಂತ ಅವರು ಕುಷ್ಟಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಅವರು ಹೃದಯಾಘಾತದಿಂದ ಚಂದ್ರು ಸಾವನ್ನಪ್ಪಿದ್ದಾರೆ. https://kannadanewsnow.com/kannada/food-is-the-answer-in-this-village-villagers-launch-food-is-ours-water-is-yours-campaign-on-festivals/ https://kannadanewsnow.com/kannada/english-teacher-minister-dr-sharanprakash-patil-video-goes-viral/
ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಹಬ್ಬ ಹರಿದಿನಗಳಲ್ಲಿ ನೀರಿಗಾಗಿ ಪರದಾಟ ತಪ್ಪಿಲ್ಲದಂತಾಗಿದೆ. ಗ್ರಾಮದಲ್ಲಿ ಇದೇ ಜುಲೈ 14ರಂದು ಸೋಮವಾರ ಭೂತಪ್ಪನ ಜಾತ್ರೆ ನಡೆಯಲಿದೆ. ಆದರೆ ಕುಡಿಯುವ ನೀರಿನ ಇಲ್ಲಾದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹಬ್ಬಕ್ಕೆ ಬರುವ ನೆಂಟರಿಷ್ಟರು, ಸ್ನೇಹಿತರು ಹಾಗೂ ಬಂಧುಗಳು ಬರುವವರಿಗೆ ಊಟ ನಮ್ದು!ನೀರು ನಿಮ್ಮದು! ಎಂದು ಅಭಿಯಾನ ಆರಂಭಿಸಿದ್ದಾರೆ. ಹಬ್ಬ ಇದ್ದರೂ ಗ್ರಾಮದಲ್ಲಿ ನೀರಿನ ಸಮಸ್ಯೆ ಪೂರೈಸದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಹರಿಬಿಟ್ಟು ಅಸಮಾಧಾನ ಹೊರಹಾಕಿದ್ದಾರೆ. ನೀರಿನ ತೀವ್ರ ಅಭಾವದ ನಡುವೆಯೂ ದಿಂಡಾವರ ಪಂಚಾಯತ್ ಪಿ.ಡಿ. ಓ.ರವರ ಫೋನ್ ಸ್ವಿಚ್ ಆಫ್ ಆಗಿದೆ. ಸೆಕ್ರೆಟರಿ ಅವರನ್ನು ಕೇಳಿದರೂ ಸಹ ಅವರು ನಮಗೆ ನೀರು ಬಿಡಲು ಸ್ಪಂದಿಸುತ್ತಿಲ್ಲ ಎಂದು ಭಾರತೀಯ ಕಿಸಾನ್ ಸಂಘದ ಚಂದ್ರಗಿರಿ ಗಂಭೀರ ಆರೋಪ ಮಾಡಿದ್ದಾರೆ. ಇನ್ನು ಗ್ರಾಮ ಪಂಚಾಯಿತಿ ಸದಸ್ಯರನ್ನು ಕೇಳಿದರು ಸಹ ಅವರು…
ರಾಯಚೂರು: ಜಿಲ್ಲೆಯ ಕಳೆದ ಮೂರು ತಿಂಗಳಿನಿಂದ ಚಿರತೆಯೊಂದು ಕಾಣಿಸಿಕೊಂಡು ನಾಯಿ, ಪ್ರಾಣಿಗಳನ್ನು ತಿಂದು ಆತಂಕ ಮೂಡಿಸಿತ್ತು. ಹೀಗೆ ಮೂರು ತಿಂಗಳಿನಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದಂತ ಚಿರತೆಯನ್ನು ಕೊನೆಗೂ ಅರಣ್ಯ ಇಲಾಖೆಯ ಸಿಬ್ಬಂದಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ರಾಯಚೂರು ತಾಲ್ಲೂಕಿನ ಡಿ.ರಾಂಪುರ ಬಳಿಯ ಬೆಟ್ಟದಲ್ಲಿ ಚಿರತೆ ಸೆರೆ ಹಿಡಿಯಲಾಗಿದೆ. ಈ ಚಿರತೆ 20ಕ್ಕೂ ಹೆಚ್ಚು ನಾಯಿಗಳು, ಮೇಕೆಗಳನ್ನು ತಿಂದು ಹಾಕಿತ್ತು. ಈ ಚಿರತೆ ಓಡಾಡುವಂತ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ ಹಿನ್ನಲೆಯಲ್ಲಿ ಆತಂಕ ಸೃಷ್ಠಿಸಿದ್ದಂತ ಚಿರತೆಯ ಸೆರೆಗಾಗಿ ಬೆಟ್ಟದಲ್ಲಿ ಎರಡು ಬೋನುಗಳನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಇರಿಸಿದ್ದರು. ಹೀಗೆ ಡಿ.ರಾಂಪುರ ಬಳಿ ಬೆಟ್ಟದ ತಪ್ಪಲಿನಲ್ಲಿ ಇರಿಸಿದ್ದಂತ ಬೋನಿಗೆ ಚಿರತೆ ಬಿದ್ದಿದೆ. https://kannadanewsnow.com/kannada/thieves-have-stolen-the-waste-disposal-vehicle-in-raichur/ https://kannadanewsnow.com/kannada/thieves-have-stolen-the-waste-disposal-vehicle-in-raichur/
ರಾಯಚೂರು: ಜಿಲ್ಲೆಯಲ್ಲಿ ಕಸ ವಿಲೇವಾರಿ ವಾಹನಗಳನ್ನು ಬಿಡದೇ ಕಳ್ಳರು ಕದ್ದೊಯ್ದಿರುವಂತ ಅಚ್ಚರಿಯ ಘಟನೆ ನಡೆದಿದೆ. ರಾಯಚೂರಿನ ಸಿರಿವಾರ ತಾಲ್ಲೂಕಿನ ಕವಿತಾಳದಲ್ಲಿ ಗೇಟ್ ಬೀಗ ಮುರಿದು ಕಸ ವಿಲೇವಾರಿ ವಾಹನಗಳನ್ನು ಕಳ್ಳರು ಕದ್ದುಕೊಂಡು ಹೋಗಿದ್ದಾರೆ. ಡೀಸೆಲ್ ಸಮಸ್ಯೆಯಿಂದಾಗಿ ಕವಿತಾಳ ಪಟ್ಟಣ ಪಂಚಾಯ್ತಿ ಕಚೇರಿ ಆವರಣದಲ್ಲಿ ಕಸವಿಲೇವಾರಿ ವಾಹನಗಳನ್ನು ನಿಲ್ಲಿಸಲಾಗಿತ್ತು. ಇತ್ತೀಚಿಗಷ್ಟೇ ಅದಕ್ಕೆ ಹಣ ಬಿಡುಗಡೆಯಾಗಿತ್ತು. ಇನ್ಸೂರೆನ್ಸ್ ಕೂಡ ರಿನೀವಲ್ ಮಾಡಿಸಲಾಗಿತ್ತು. ನಾಲ್ಕು ಕಸ ವಿಲೇವಾರಿ ವಾಹನಗಳಲ್ಲಿ ಒಂದು ಗಾಡಿಯನ್ನು ಕಳ್ಳರು ಕದ್ದೊಯ್ದಿದ್ದಾರೆ. ಈ ವಾಹನದ ಬೆಲೆ ಸುಮಾರು 8 ಲಕ್ಷ ಎನ್ನಲಾಗುತ್ತಿದೆ. ನಿನ್ನೆ ಎರಡನೇ ಶನಿವಾರದಂದು ರಜೆ ಇದ್ದ ಸಂದರ್ಭದಲ್ಲೇ ಈ ಕಳ್ಳತನ ನಡೆದಿದೆ. ಈ ಸಂಬಂಧ ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/final-decision-on-the-land-acquisition-crisis-in-devanahalli-by-the-chief-minister-on-tuesday-minister-m-b-patil/ https://kannadanewsnow.com/kannada/english-teacher-minister-dr-sharanprakash-patil-video-goes-viral/
ಸೇಡಂ: ಸೇಡಂ ತಾಲೂಕಿನ ಮುಧೋಳ ಗ್ರಾಮದಲ್ಲಿರುವ ಇಂದಿರಾಗಾಂಧಿ ವಸತಿ ಶಾಲೆಗೆ ರವಿವಾರ ದಿಢೀರನೆ ಭೇಟಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ವಸತಿ ಶಾಲೆಯ ಮಕ್ಕಳೊಂದಿಗೆ ಕೆಲ ಕಾಲ ಸಮಾಲೋಚನೆ ನಡೆಸಿದರು. ವಸತಿ ಶಾಲೆಯ ವ್ಯವಸ್ಥೆ ಹಾಗೂ ಬೋಧನೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಪ್ರಶ್ನೆ ಕೇಳಿದ ಸಚಿವರು ದಿನನಿತ್ಯ ಬೆಳಿಗ್ಗೆ ದೈಹಿಕ ವ್ಯಾಯಾಮ ಜೊತೆಗೆ ದಿನಪತ್ರಿಕೆ ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು. ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಭಾಷೆಯ ಹಿಡಿತ ಬಗ್ಗೆ ಪ್ರಶ್ನೆ ಕೇಳಿ, ತಾವು ತಿಳಿಸಿದ ಪದಗಳನ್ನು ಬೋರ್ಡ್ ಮೇಲೆ ಬರೆಯುವಂತೆ ಮಕ್ಕಳಿಗೆ ತಿಳಿಸಿ, ಕೆಲ ಸಮಯ ಮೇಷ್ಟ್ರಾಗಿ ಬೋಧನೆ ಮಾಡಿದರು. ಈ ಸಂದರ್ಭದಲ್ಲಿ ಶಾಲೆಯ ಸಿಬ್ಬಂದಿಗಳು, ತಾಲೂಕಾಡಳಿತ ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಇದ್ದರು
ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಹೈಟೆಕ್ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್ ಸ್ಥಾಪನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 15ರಂದು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಒಟ್ಟಿನಲ್ಲಿ ಕೃಷಿ ಮತ್ತು ಕೈಗಾರಿಕೆ ಎರಡನ್ನೂ ಸರಿದೂಗಿಸಿಕೊಂಡು ಹೋಗಬೇಕೆನ್ನುವುದು ತಮ್ಮ ಕಳಕಳಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಭಾನುವಾರ ಹೇಳಿದ್ದಾರೆ. ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ʻಅಲ್ಲಿ ಕೆಲವರು ಭೂಸ್ವಾಧೀನ ಬೇಡವೆಂದು ಹೋರಾಟ ಮಾಡುತ್ತಿದ್ದಾರೆ. ಮತ್ತೆ ಕೆಲವರು 449 ಎಕರೆ ಜಮೀನನ್ನು ಬಿಟ್ಟುಕೊಡಲು ಸಿದ್ಧವಾಗಿದ್ದು, ಎಕರೆಗೆ 3.5 ಕೋಟಿ ರೂ. ಪರಿಹಾರ ಕೇಳುತ್ತಿದ್ದಾರೆ. ರೈತರಲ್ಲೇ ಈ ಬಗ್ಗೆ ಬೇರೆಬೇರೆ ಅಭಿಪ್ರಾಯಗಳಿವೆ. ಸರಕಾರವು ಎಲ್ಲಾ ರೀತಿಯ ಸಾಧಕ-ಬಾಧಕಗಳನ್ನೂ ಪರಿಶೀಲಿಸುತ್ತಿದೆʼ ಎಂದಿದ್ದಾರೆ. ಶನಿವಾರದಂದು ʻಚನ್ನರಾಯಪಟ್ಟಣ ಹೋಬಳಿ ರೈತ ಹೋರಾಟ ಸಮಿತಿʼ ಹೆಸರಿನಲ್ಲಿ ಕೆಲವು ರೈತರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, 449 ಎಕರೆಯನ್ನು ಸರಕಾರಕ್ಕೆ ಕೊಡುವುದಾಗಿ ಹೇಳಿದ್ದಾರೆ. ಯೋಜನೆಗೆ ಸಂಬಂಧಿಸಿದಂತೆ ಮೊದಲು ಅಧಿಸೂಚನೆ…