Subscribe to Updates
Get the latest creative news from FooBar about art, design and business.
Author: kannadanewsnow09
ಪಾಟ್ನಾ: ವಿಧಾನಸಭಾ ಚುನಾವಣೆಗೆ ಮುನ್ನ ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ನಂತರ ಚುನಾವಣಾ ಆಯೋಗವು ಮಂಗಳವಾರ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪರಿಷ್ಕೃತ ಪಟ್ಟಿಯನ್ನು ಚುನಾವಣಾ ಸಮಿತಿಯ ಅಧಿಕೃತ ವೆಬ್ಸೈಟ್ನಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ. ಬಿಹಾರದಲ್ಲಿ ವಿಧಾನಸಭಾ ಚುನಾವಣೆಯನ್ನು ಈ ಮತದಾರರ ಪಟ್ಟಿಯನ್ನು ಬಳಸಿಕೊಂಡು ನಡೆಸಲಾಗುವುದು. ಜಿಲ್ಲಾ ಮ್ಯಾಜಿಸ್ಟ್ರೇಟ್ಗಳಾಗಿಯೂ ಸೇವೆ ಸಲ್ಲಿಸುವ ಎಲ್ಲಾ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಪಟ್ಟಿಯ ಭೌತಿಕ ಪ್ರತಿಗಳನ್ನು ವಿತರಿಸಲಾಗುವುದು ಎಂದು ಬಿಹಾರದ ಮುಖ್ಯ ಚುನಾವಣಾ ಅಧಿಕಾರಿ (CEO) ಹೇಳಿದ್ದಾರೆ. ಇದಲ್ಲದೆ, ಅಂತಿಮ ಪಟ್ಟಿಯನ್ನು ಎಲ್ಲಾ ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳೊಂದಿಗೆ ಹಂಚಿಕೊಳ್ಳಲಾಗುತ್ತದೆ. https://kannadanewsnow.com/kannada/shepherds-should-not-be-included-in-st-appeal-from-shri-maharishi-valmiki-welfare-development-association-to-tahsildar-in-sorab/ https://kannadanewsnow.com/kannada/green-signal-for-temporary-selection-of-guest-lecturers-from-the-state-government-these-conditions-apply/
ಶಿವಮೊಗ್ಗ: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್.ಟಿ)ಕ್ಕೆ ಸೇರಿಸಬಾರದು ಎಂದು ಆಗ್ರಹಿಸಿ ಸೊರಬ ತಾಲ್ಲೂಕು ಶ್ರೀ ಮಹರ್ಷಿ ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘದಿಂದ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮಂಜುಳಾ ಬಿ. ಹೆಗಡಾಳ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಘದ ಅಧ್ಯಕ್ಷ ಎಸ್. ಗಣಪತಿ ಮಾತನಾಡಿ, ಕುರುಬ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಸದೃಢವಾಗಿದೆ. ಆದ್ದರಿಂದ, ಸದೃಢ ಸಮುದಾಯವನ್ನು ಹಿಂದುಳಿದಿರುವ ಪರಿಶಿಷ್ಟ ಪಂಗಡಕ್ಕೆ ಸೇರಿಸುವುದು ಸಂವಿಧಾನ ವಿರೋಧಿಯಾಗಿದೆ. ಅನ್ಯ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದು ಸರಿಯಲ್ಲ. ಈ ನಿರ್ಧಾರ ಕೈಬಿಡಬೇಕು. ಇಲ್ಲವಾದಲ್ಲಿರಾಜ್ಯದಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಹಿಂದುಳಿದ ವರ್ಗದ ಪ್ರವರ್ಗ-1ರಲ್ಲಿರುವ ಬೆಸ್ತ, ಅಂಬಿಗ, ಕಬ್ಬಲಿಗ, ಕಬ್ಬೇರ, ಕೂಲಿ ಮುಂತಾದ ಸಮುದಾದವರಿಗೆ ನಕಲಿ ಎಸ್ಟಿ ಪ್ರಮಾಣ ಪತ್ರ ನೀಡುವುದನ್ನು ನಿಲ್ಲಿಸಬೇಕು. ನಾಯಕ ತಳವಾರ ಜಾತಿಗೆ ಸೇರಿಲ್ಲದವರು ವಾಮ ಮಾರ್ಗದಲ್ಲಿ ಪರಿಶಿಷ್ಟ ಪಂಗಡದ…
ಶಿವಮೊಗ್ಗ: ವಿವಿಧ ಸಂಘಟನೆಗಳಲ್ಲಿ ಸೇವೆ ಮಾಡಿದ ಅನುಭವ ತಮಗಿದ್ದು, ಕನ್ನಡ ರಕ್ಷಣಾ ವೇದಿಕೆ ಅಪ್ಪುಸೇನೆ ಮೂಲಕ ಪಟ್ಟಣ ಸೇರಿದಂತೆ ಹಳ್ಳಿಗಳಲ್ಲಿ ಸಂಘಟನೆ ಮಾಡಿ ಕನ್ನಡ ನಾಡು ನುಡಿಯ ಸೇವೆ ಮಾಡಲಾಗುವುದು ಎಂದು ಕನ್ನಡ ರಕ್ಷಣಾ ವೇದಿಕೆ ಅಪ್ಪುಸೇನೆ ತಾಲ್ಲೂಕು ಅಧ್ಯಕ್ಷ ಮಂಜುನಾಥ್ ಉಪ್ಪಳ್ಳಿ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕನ್ನಡ ರಕ್ಷಣಾ ವೇದಿಕೆ ಅಪ್ಪುಸೇನೆಯ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಸಂಘಟನೆಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದಂತ ಅವರು, ಕನ್ನಡ ನಾಡು,ನುಡಿಯ ಬಗ್ಗೆ ಕನ್ನಡಿಗರಾಗಿ ಅಭಿಮಾನವಿರಬೇಕು. ಯಾವುದೇ ವ್ಯಕ್ತಿ ಹೋರಾಡುವ ಜನಪರ ಕಾರ್ಯಗಳಿಗೆ ಇವತ್ತು ಬೆಲೆ ಇದೆ. ಕನ್ನಡದ ನೆಲ,ಜಲದ ಪ್ರಶ್ನೆ ಎದುರಾದಗ ಹೋರಾಟಕ್ಕೆ ಸಿದ್ಧವಿರಬೇಕು ಎಂದರು. ಜಿಲ್ಲಾ ಗೌರವಾಧ್ಯಕ್ಷ ಪ್ರವೀಣ್ ಹಿರೇಇಡಗೋಡು ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿ, ಕನ್ನಡ ರಕ್ಷಣಾ ವೇದಿಕೆ ಅಪ್ಪುಸೇನೆ ವತಿಯಿಂದ ಕನ್ನಡ ಪರ ಕೆಲಸಗಳ ಜತೆಗೆ ಸಮಾಜ ಸೇವೆ, ರಕ್ತದಾನ ಶಿಬಿರ, ವನಮಹೋತ್ಸವ, ರೋಗಿಗಳಿಗೆ ಸಹಾಯಹಸ್ತ ಇನ್ನಿತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ…
ನವದೆಹಲಿ: ಜಿಎಸ್ಟಿ ಕಡಿತ ಜಾರಿಗೆ ಬಂದ ನಂತರವೂ ಕೆಲವು ವಸ್ತುಗಳ ಬೆಲೆಗಳನ್ನು ಹೆಚ್ಚಿಸಿದ್ದಕ್ಕಾಗಿ ಸರ್ಕಾರವು ಕೆಲವು ದೊಡ್ಡ ಇ-ಕಾಮರ್ಸ್ ಕಂಪನಿಗಳನ್ನು ತರಾಟೆಗೆ ತೆಗೆದುಕೊಂಡಿದೆ ಎಂದು ಮೂಲಗಳಿಂದ ತಿಳಿಸಿವೆ. ಸೆಪ್ಟೆಂಬರ್ 22 ರಂದು ಪ್ರಾರಂಭವಾದ ಹೊಸ ಸರಕು ಮತ್ತು ಸೇವಾ ತೆರಿಗೆ ಪದ್ಧತಿಯು ಹಿಂದಿನ ಬಹು-ಶ್ರೇಣಿಯ ರಚನೆಯನ್ನು 5 ಪ್ರತಿಶತ ಮತ್ತು 18 ಪ್ರತಿಶತದ ಎರಡು ಮುಖ್ಯ ಸ್ಲ್ಯಾಬ್ಗಳೊಂದಿಗೆ ಬದಲಾಯಿಸುತ್ತದೆ. ಪರೋಕ್ಷ ತೆರಿಗೆಯ ಅತಿದೊಡ್ಡ ಪರಿಷ್ಕರಣೆಯು ಬೆಲೆಗಳನ್ನು ಕಡಿಮೆ ಮಾಡುವುದು ಮತ್ತು ತೆರಿಗೆ ಹೊರೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. “ಜಿಎಸ್ಟಿ ದರ ಕಡಿತದ ನಂತರ ಇ-ಕಾಮರ್ಸ್ ಪ್ರಮುಖ ಸಂಸ್ಥೆಯು ಹೆಚ್ಚಿನ ಬೆಲೆಗಳನ್ನು ಜಾಹೀರಾತು ಮಾಡಿದೆ… ತಾಂತ್ರಿಕ ದೋಷವನ್ನು ಉಲ್ಲೇಖಿಸಿ ಆದರೆ ಬೆಲೆಗಳನ್ನು ನಂತರ ಸರಿಪಡಿಸಲಾಗಿದೆ” ಎಂದು ಮೂಲಗಳು ತಿಳಿಸಿವೆ. ಸೆಪ್ಟೆಂಬರ್ 26 ರಂದು ಮನಿ ಕಂಟ್ರೋಲ್ ವರದಿ ಮಾಡಿದ್ದು, 50 ಕ್ಕೂ ಹೆಚ್ಚು ಉತ್ಪನ್ನಗಳ ಬೆಲೆಗಳನ್ನು ಸರ್ಕಾರ ಪರಿಶೀಲಿಸುತ್ತಿದೆ. “ಭಾರತದಾದ್ಯಂತ ಕ್ಷೇತ್ರ ರಚನೆಗಳು ಮೇಲ್ವಿಚಾರಣೆ ಮಾಡುತ್ತಿರುವ 50 ಕ್ಕೂ ಹೆಚ್ಚು ವಸ್ತುಗಳ…
ಚೆನ್ನೈ: ಆ ಘಟನೆ ನೋವು ತಂದಿದೆ. ಕಾಲ್ತುಳಿತ ಸಂಭವಿಸಬಾರದಾಗಿತ್ತು ಎಂಬುದಾಗಿ ಕರೂರು ಕಾಲ್ತುಳಿತ ಘಟನೆ ಬಗ್ಗೆ ನಟ ವಿಜಯ್ ಮನ ಮಿಡಿದಿದ್ದಾರೆ. ಅಲ್ಲೇ ಸಂತ್ರಸ್ತರ ಕುಟುಂಬಸ್ಥರನ್ನು ಭೇಟಿಯಾಗುವುದಾಗಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಕರೂರು ಕಾಲ್ತುಳಿತ ಘಟನೆ ಸಂಬಂಧ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಅದು ನೋವಿನ ಪರಿಸ್ಥಿತಿಯಾಗಿದೆ ಎಂಬುದಾಗಿ ಕರೂರ್ ಕಾಲ್ತುಳಿತದ ಬಗ್ಗೆ ಮೌನ ಮುರಿದ ವಿಜಯ್ ಹೇಳಿದ್ದಾರೆ. ಸಂತ್ರಸ್ತರ ಸಂಬಂಧಿಕರನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ. ಕಾಲ್ತುಳಿತ ಸಂಭವಿಸಬಾರದಿತ್ತು. ಆ ಘಟನೆಯಿಂದ ತುಂಬಾ ನೋವಾಗಿದೆ. ಶೀಘ್ರವೇ ಗಾಯಾಳುಗಳನ್ನು ಭೇಟಿಯಾಗಿ ಸಾಂತ್ವಾನ ಹೇಳುತ್ತೇನೆ ಎಂದಿದ್ದಾರೆ. https://twitter.com/Actor_Vijay/status/1972968536919437404 https://kannadanewsnow.com/kannada/green-signal-for-temporary-selection-of-guest-lecturers-from-the-state-government-these-conditions-apply/
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮೊದಲು ಪರಿಹಾರ ಘೋಷಣೆ ಮಾಡಿ ನಂತರ ವೈಮಾನಿಕ ಸಮೀಕ್ಷೆ ಮಾಡಬೇಕಿತ್ತು. ಪರಿಹಾರವನ್ನೇ ತಿಳಿಸದೆ ಕೇವಲ ಸಮೀಕ್ಷೆ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ದೂರಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆಗಿರುವ ಪ್ರವಾಹದ ಸ್ಥಿತಿ ವೀಕ್ಷಿಸಲು ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ಮಾಡುತ್ತಿದ್ದಾರೆ. ಎಲ್ಲ ರಸ್ತೆಗಳಲ್ಲಿ ಗುಂಡಿ ಇರುವುದರಿಂದ ಹಾಗೂ ರಸ್ತೆ ತಡೆದು ಜನರು ಪ್ರತಿಭಟಿಸುವುದರಿಂದ ಭಯಗೊಂಡ ಮುಖ್ಯಮಂತ್ರಿ ಹೆಲಿಕಾಪ್ಟರ್ನಲ್ಲಿ ವೀಕ್ಷಣೆ ಮಾಡುತ್ತಿದ್ದಾರೆ. ಜೋಳ ತೊಗರಿ ಸೇರಿದಂತೆ ಪ್ರತಿ ಬೆಳೆಗಳ ಹಾನಿ, ಮನೆ ಹಾನಿ, ಶಾಲೆ ಹಾನಿಗೆ ಎಷ್ಟು ಪರಿಹಾರ ನೀಡಲಾಗುತ್ತದೆ ಎಂದು ಸರ್ಕಾರ ಘೋಷಣೆ ಮಾಡಬೇಕಿತ್ತು. ಆದರೆ ಈವರೆಗೆ ಸರ್ಕಾರ ಆದೇಶ ಮಾಡಿಲ್ಲ. ಒಂದು ಕಡೆ ಖಜಾನೆ ಖಾಲಿಯಾಗಿದೆ. ಮತ್ತೊಂದು ಕಡೆ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲು ಸಿದ್ಧತೆ ನಡೆದಿದೆ ಎಂದು ದೂರಿದರು. ಮುಖ್ಯಮಂತ್ರಿಗಳು ಸಚಿವರ ತಂಡ ರಚಿಸಬೇಕಿತ್ತು. ಅಧಿಕಾರಿಗಳ ಸಭೆ ಕರೆದು ನೋಡಲ್ ಅಧಿಕಾರಿಗಳನ್ನು ನಿಯೋಜಿಸಬೇಕಿತ್ತು. ಪುನರ್ವಸತಿ ಕೇಂದ್ರಗಳಲ್ಲಿ ಸರಿಯಾಗಿ ಆಹಾರ…
ಬೆಂಗಳೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಸುವಿಧಾ ಯೋಜನೆಯಡಿ ಆಧಾರ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನ ಭತ್ಯೆ, ಮರಣ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿಕ ದ್ವಿಚಕ್ರವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ಸಾಧನ ಸಲಕರಣೆಗಳ ಯೋಜನೆ ಹಾಗೂ ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿಚಾಲಿತ ವ್ಹೀಲ್ಚೇರ್ ಯೋಜನೆಗಳನ್ನು ಡಿ.ಬಿ.ಟಿ ತಂತ್ರಾಂಶದ ಮೂಲಕ ಪಡೆಯಲು ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ವಿಕಲಚೇತನರು ಆನ್ಲೈನ್ ಮೂಲಕ ಗ್ರಾಮಾ ಒನ್, ಕರ್ನಾಟಕ ಒನ್, ಸೇವಾಸಿಂಧು ಪೋರ್ಟಲ್ನಲ್ಲಿ ಅ.15ರೊಳಗಾಗಿ ಅರ್ಜಿ ಸಲ್ಲಿಸಿ ಎಲ್ಲಾ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ದ್ವಿಪ್ರತಿಗಳಲ್ಲಿ ಆಯಾ ತಾಲೂಕು ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು (ಎಂಆರ್. ಡಬ್ಲ್ಯೂ)ಗಳಿಗೆ, ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಮಾಜಿ ಸಚಿವ ಎಂ.ಎಸ್ ಆತ್ಮಾನಂದ ಅವರನ್ನು ನೇಮಕ ಮಾಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಎಂ.ಎಸ್.ಆತ್ಮಾನಂದ, ಮಾಜಿ ಸಚಿವರು, ನಂ.2074, ಶಿವಲೀಲಾ, 1ನೇ ಅಡ್ಡರಸ್ತೆ, ಸುಭಾಷ್ ನಗರ, ಮಂಡ್ಯ ಇವರನ್ನು The Companies Act, 2013 Schedule-I ರಡಿ ರಚಿಸಿರುವ ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತದ Articles of Associationರ ಕಂಡಿಕ-28(i) ರನ್ಮಯ ತಕ್ಷಣದಿಂದ ಜಾರಿಗೆ ಬರುವಂತೆ ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಿದೆ ಎಂದು ತಿಳಿಸಿದೆ. https://kannadanewsnow.com/kannada/green-signal-for-temporary-selection-of-guest-lecturers-from-the-state-government-these-conditions-apply/
ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಕಾಲೇಜುಗಳಲ್ಲಿನ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅತಿಥಿ ಉಪನ್ಯಾಸಕರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲು ಅನುಮತಿಸಿ ಆದೇಶಿಸಿದೆ. ಅಲ್ಲದೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಕೆಲ ಷರತ್ತುಗಳನ್ನು ವಿಧಿಸಿ ಆದೇಶಿಸಿದೆ. ಈ ಕುರಿತು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2025-26ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಅತಿಥಿ ಗ್ರಂಥಪಾಲಕರು ಹಾಗೂ ಅತಿಥಿ ದೈಹಿಕ ಶಿಕ್ಷಣ ಅತಿಥಿ ಉಪನ್ಯಾಸಕರು ಸೇರಿದಂತೆ) ಆನ್ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಿಕೊಳ್ಳಲು ಉಲ್ಲೇಖ-(1) ರಲ್ಲಿ ಸರ್ಕಾರವು ಅನುಮತಿ ನೀಡಿರುತ್ತದೆ ಎಂದಿದ್ದಾರೆ. 2025-26ನೇ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ ಮಾನ್ಯ ರಾಜ್ಯ ಉಚ್ಚ ನ್ಯಾಯಾಲಯದ ವಿಭಾಗೀಯ ಪೀಠಗಳಲ್ಲಿ ದಾಖಲಾಗಿದ್ದ ವಿವಿಧ ರಿಟ್ ಅರ್ಜಿಗಳಲ್ಲಿ ಮಾನ್ಯ ನ್ಯಾಯಾಲಯದ ವಿವಿಧ…
ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಭೀಮಾ ತೀರದಲ್ಲಿ ಭಾರೀ ಮಳೆಯ ಕಾರಣ ಪ್ರವಾಹ ಉಂಟಾಗಿದೆ. ಈ ಭೀಮಾ ತೀರದ ಜಿಲ್ಲೆಗಳಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವೈಮಾನಿಕ ಸಮೀಕ್ಷೆ ನಡೆಸಿ, ಪ್ರವಾಹ ಪರಿಸ್ಥಿತಿಯನ್ನು ವೀಕ್ಷಿಸಿದರು. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿಯ ಬಗ್ಗೆ ಕಲಬುರ್ಗಿ ವಿಮಾನ ನಿಲ್ದಾಣದಲ್ಲಿಯೇ ಕಲಬುರಗಿ, ಬೀದರ್, ಯಾದಗಿರಿ ಹಾಗು ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಜೊತೆ ಪ್ರಾಥಮಿಕ ಸಭೆ ನಡೆಸಿ, ವಿವರವಾದ ಮಾಹಿತಿ ಪಡೆದರು. https://twitter.com/CMofKarnataka/status/1972935321676566784 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನನಿಲ್ದಾಣದಲ್ಲೇ ಪ್ರಾಥಮಿಕ ಸಭೆ ನಡೆಸಿ ವಿವರವಾದ ಮಾಹಿತಿ ಪಡೆದರು. ಕಲಬುರಗಿ, ಬೀದರ್, ಯಾದಗಿರಿ ಹಾಗು ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳು ಸಭೆಯಲ್ಲಿದ್ದು ವಿವರಗಳನ್ನು ನೀಡಿದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಾದ ಎಂ.ಬಿ.ಪಾಟೀಲ್, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್…





