Subscribe to Updates
Get the latest creative news from FooBar about art, design and business.
Author: kannadanewsnow09
ಮೈಸೂರು: ಮೈಸೂರಿನಲ್ಲಿ ಸುಸಜ್ಜಿತವಾದ ಕರ್ನಾಟಕ ಪೊಲೀಸ್ ವಸ್ತು ಸಂಗ್ರಹಾಲಯ (ಮ್ಯೂಸಿಯಂ) ಮಾಡಲಾಗುವುದು ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ತಿಳಿಸಿದರು. ಮೈಸೂರು ಜಿಲ್ಲಾ ಪ್ರವಾಸದ ವೇಳೆ ಕೆಎಸ್ಆರ್ಪಿ ಆಶ್ವಾರೋಹಿ ದಳ ಕಂಪನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ಮಾಹಿತಿ ಪಡೆದರು. ಆರಕ್ಷಕ ಅಶ್ವದಳದ ವಸ್ತು ಸಂಗ್ರಹಾಲಯವನ್ನು ವೀಕ್ಷಿಸಿದರು. ನಜರ್ಬಾದ್ ಪೊಲೀಸ್ ಠಾಣೆಗೆ ದೀಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಆರಂಭದಿಂದ ಇಲ್ಲಿಯವರೆಗೆ ಬೆಳೆದುಬಂದ ರೀತಿ ಹಾಗೂ ಇಲಾಖೆಗೆ ಸಂಬಂಧಿಸಿದ ನೆನಪಿನಲ್ಲಿ ಉಳಿಯುವಂತಹ ವಸ್ತುಗಳನ್ನು ಕಾಪಾಡಬೇಕಿದೆ. ಈ ನಿಟ್ಟಿನಲ್ಲಿ ಪ್ರಸಿದ್ಧವಾದ ಸುಸಜ್ಜಿತ ಪೊಲೀಸ್ ಮ್ಯೂಸಿಯಂ ಮಾಡಲಾಗುವುದು ಎಂದು ವಿವರಿಸಿದರು. ನಜರ್ಬಾದ್ ಪೊಲೀಸ್ ಠಾಣೆ ಮೈಸೂರಿನಲ್ಲಿ ಅತ್ಯಂತ ಹಳೆಯ ಪೊಲೀಸ್ ಠಾಣೆ. ಬಹಳ ದಿನದಿಂದ ಭೇಟಿ ನೀಡಬೇಕು ಎಂದುಕೊಂಡಿದೆ. ಪೊಲೀಸ್ ಠಾಣೆಯ ಕಾರ್ಯವೈಖರಿಯನ್ನು ಪರಿಶೀಲಿಸಲು ದಿಢೀರ್ ಭೇಟಿ ನೀಡಿದ್ದೇನೆ. ರೆಕಾರ್ಡ್, ಸಶಸ್ತ್ರಗಳನ್ನು ಇಟ್ಟುಕೊಳ್ಳುವುದು ಸೇರಿದಂತೆ ಪರಿಶೀಲನೆ ನಡೆಸಿದ್ದೇನೆ. ನ್ಯೂನತೆಗಳನ್ನು…
ಮಂಡ್ಯ: ಮಂಡ್ಯ ಕೃಷಿ ವಿಶ್ವವಿದ್ಯಾನಿಲಯ ಸ್ಥಾಪನೆಯಾದ ಮೊದಲು ವರ್ಷದಲ್ಲೇ ಮೂಲಸೌಕರ್ಯ ಕಲ್ಪಿಸಲು ಸುಮಾರು 100 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಈಗಾಗಲೇ ಕ್ಯಾಬಿನೆಟ್ ನಲ್ಲಿ ಮಾಡಿ ಚರ್ಚೆ 23 ಕೋಟಿ ಮಂಜೂರು ಮಾಡಲಾಗಿದೆ ಶೀಘ್ರವೇ ಕಾಮಗಾರಿ ಪ್ರಾರಂಭವಾಗುತ್ತದೆ ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. ಇಂದು ಮಂಡ್ಯ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿ 4 ಕೃಷಿ ವಿಶ್ವವಿದ್ಯಾಲಯಗಳು ಇವೆ 5 ನೇ ಯದಾಗಿ ಮಂಡ್ಯ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಯಾಗಿದೆ. ಮಂಡ್ಯ ಜಿಲ್ಲೆಗೆ ಕೃಷಿ ವಿಶ್ವವಿದ್ಯಾಲಯ ತಂದಿದ್ದು ಒಳ್ಳೆಯದು ಎಂಬ ಭಾವನೆ ಉಳಿದವರಿಗಿಲ್ಲ ಎಂದು ಹೇಳಿದರು. ನಾನೊಬ್ಬ ಸಾಮಾನ್ಯ ವ್ಯಕ್ತಿಯೆ ಆದರೆ ನಾನು ಮಂತ್ರಿಯಾಗಿ ಮಾಡಿರುವ ಅಭಿವೃದ್ಧಿ ಕೆಲಸಗಳು ಸಾಮಾನ್ಯ ಅಲ್ಲ. ಜಿಲ್ಲೆಗೆ ಅನೇಕ ಉಪಯುಕ್ತವಾಗುವ ಕೆಲಸವನ್ನು ಮಾಡಿದ್ದೇನೆ. ಕೃಷಿ ವಿಶ್ವವಿದ್ಯಾನಿಲಯ ಸ್ಥಾಪನೆಯಾದ ಮೊದಲನೇ ವರ್ಷದಲ್ಲೇ ಇಷ್ಟು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿಗೆ ಆರ್ಥಿಕ ನೆರವು ನೀಡಿರುವ…
ಮಂಡ್ಯ: ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆಯ ಧಾರ್ಮಿಕ ಪವಿತ್ರ ಆಚರಣೆಯ ಯಶಸ್ಸಿಗೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಲಿದ್ದು, ಈ ವೇಳೆ ಇತರೆ ಧರ್ಮಗಳ ಧಾರ್ಮಿಕ ಭಾವನೆಗೆ ಧಕ್ಕೆ ಬಾರದಂತೆ ನಡೆದುಕೊಳ್ಳುವುದು ಎಲ್ಲರ ಆದ್ಯ ಕರ್ತವ್ಯ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು. ಪಟ್ಟಣದ ಶ್ರೀರಂಗನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಹನುಮಮಾಲಾಧಾರಿಗಳ ಸಂರ್ಕಿತನಾ ಯಾತ್ರೆ ಹಿನ್ನಲೆ ಪೂರ್ವಭಾವಿಯಾಗಿ ಜಿಲ್ಲಾಡಳಿತದ ವತಿಯಿಂದ ಕರೆಯಲಾಗಿದ್ದ ಕೋಮುಸೌರ್ಹದ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಧಾರ್ಮಿಕ ಆಚರಣೆಗಳನ್ನು ಶಾಂತಿಯುತವಾಗಿ ಆಚರಿಸಲು ಸಂಪೂರ್ಣ ಅನುಮತಿಯಿದ್ದು, ಸಮಾಜದಲ್ಲಿನ ಶಾಂತಿ-ಸುವ್ಯವಸ್ಥೆ ಧಕ್ಕೆ ತರುವಂತೆ ನಡೆದುಕೊಳ್ಳದಿರಿ. ಜಿಲ್ಲೆಯಲ್ಲಿ ಈ ಹಿಂದೆ ನಡೆದ ಎರಡು ಘಟನೆಗಳು ಹೊರತುಪಡಿಸಿ ಇನ್ಯಾವುದು ನಡೆಯದಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸಾಕಷ್ಟು ಎಚ್ಚರಿಕೆ ವಹಿಸಿದ್ದು, ಈ ಆಚರಣೆಯ ವೇಳೆ ಕಾನೂನಿನ ಹಲವು ಕ್ರಮಗಳನ್ನು ಸಮಾಜ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು. ಧಾರ್ಮಿಕ ಆಚರಣೆ ಕಾರ್ಯಕ್ರಮ ಆಯೋಜಕರು ಹಾಗೂ ಆಚರಣೆಯಲ್ಲಿ ಭಾಗಿಯಾಗುವವರು ಕಾನೂನು ಉಲ್ಲಂಘಿಸಿದಂತೆ ಜಾಗೃತಿ ಮೂಡಿಸುವುದು ಹಾಗೂ ವಹಿಸುವುದು…
ಬೆಂಗಳೂರು: ಬಿ.ಡಿ.ಎ.ದಿಂದ ಮೇಜರ್ ಆರ್ಟೀರಿಯಲ್ ರಸ್ತೆಯ ತ್ರಿಪಥ ಯೋಜನೆ(3-ಲೇನಿಂಗ್) ಕಾಮಗಾರಿಗೆ ಸಂಬಂಧಿಸಿದಂತೆ ಹೆಜ್ಜಾಲ ಮತ್ತು ಕೆಂಗೇರಿ ನಿಲ್ದಾಣಗಳ ನಡುವೆ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಗೆ ಅನುಮತಿ ನೀಡಿರುವುದರಿಂದ ಈ ಕೆಳಕಂಡ ರೈಲು ಸೇವೆಗಳನ್ನು ಅವುಗಳ ಮುಂದೆ ನೀಡಲಾಗಿರುವ ವಿವರದಂತೆ ರದ್ದುಗೊಳಿಸಲಾಗುವುದು/ಭಾಗಶಃ ರದ್ದುಗೊಳಿಸಲಾಗುವುದು/ನಿಯಂತ್ರಿಸಲಾಗುವುದು ಎಂಬುದಾಗಿ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರನೀಶ್ ಕೆ.ಎನ್ ತಿಳಿಸಿದ್ದಾರೆ. ರೈಲುಗಳ ರದ್ದತಿ: 1. ರೈಲು ಸಂಖ್ಯೆ 56265 ಅರಸೀಕೆರೆ-ಮೈಸೂರು ಪ್ಯಾಸೆಂಜರ್ ಸೇವೆಯನ್ನು ದಿನಾಂಕ 27.11.2025, ದಿನಾಂಕ 04.12.2025, ದಿನಾಂಕ 22.01.2026, ದಿನಾಂಕ 29.01.2026, ದಿನಾಂಕ 05.02.2026 ಹಾಗೂ ದಿನಾಂಕ 26.03.2026 ರಂದು ರದ್ದುಗೊಳಿಸಲಾಗುವುದು. 2. ರೈಲು ಸಂಖ್ಯೆ 56266 ಮೈಸೂರು-ಅರಸೀಕೆರೆ ಪ್ಯಾಸೆಂಜರ್ ಸೇವೆಯನ್ನು ದಿನಾಂಕ 28.11.2025, ದಿನಾಂಕ 05.12.2025, ದಿನಾಂಕ 23.01.2026, ದಿನಾಂಕ 30.01.2026, ದಿನಾಂಕ 06.02.2026 ಮತ್ತು ದಿನಾಂಕ 27.03.2026 ರಂದು ರದ್ದುಗೊಳಿಸಲಾಗುವುದು 3. ರೈಲು ಸಂಖ್ಯೆ 06269 ಮೈಸೂರು–ಎಸ್.ಎಂ.ವಿ.ಟಿ. ಬೆಂಗಳೂರು ಪ್ಯಾಸೆಂಜರ್ ಸೇವೆಯನ್ನು ದಿನಾಂಕ 27.11.2025, ದಿನಾಂಕ…
ನವದೆಹಲಿ: ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸುಧಾರಣೆಗಳ ಅನುಷ್ಠಾನವು ಮಧ್ಯಮ ಅವಧಿಯಲ್ಲಿ ಭಾರತದ ಕಾರ್ಮಿಕ ಮಾರುಕಟ್ಟೆಯಲ್ಲಿ ಉದ್ಯೋಗ ಮತ್ತು ಔಪಚಾರಿಕೀಕರಣವನ್ನು ಗಮನಾರ್ಹವಾಗಿ ಹೆಚ್ಚಿಸಬಹುದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ವರದಿಯನ್ನು ಎತ್ತಿ ತೋರಿಸಿದೆ. ಹೊಸ ಕಾರ್ಮಿಕ ಸಂಹಿತೆಗಳು ನಿರುದ್ಯೋಗವನ್ನು ಶೇಕಡಾ 1.3 ರಷ್ಟು ಕಡಿಮೆ ಮಾಡಬಹುದು. ಇದು 77 ಲಕ್ಷ ಜನರಿಗೆ ಹೆಚ್ಚುವರಿ ಉದ್ಯೋಗ ಸೃಷ್ಟಿಗೆ ಕಾರಣವಾಗುತ್ತದೆ ಎಂದು ವರದಿ ಹೇಳಿದೆ. ಭಾರತದ ಹೊಸ ಕಾರ್ಮಿಕ ಸಂಹಿತೆಗಳು ಮಧ್ಯಮ ಅವಧಿಯಲ್ಲಿ ನಿರುದ್ಯೋಗವನ್ನು ಶೇಕಡಾ 1.3 ರಷ್ಟು ಕಡಿಮೆ ಮಾಡಬಹುದು. ಇದು 77 ಲಕ್ಷ ಜನರ ಹೆಚ್ಚುವರಿ ಉದ್ಯೋಗ ಸೃಷ್ಟಿಯನ್ನು ಸೂಚಿಸುತ್ತದೆ ಎಂದು ಅದು ಹೇಳಿದೆ. ಈ ಮೌಲ್ಯಮಾಪನವು 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವ್ಯಕ್ತಿಗಳ ಪ್ರಸ್ತುತ ಕಾರ್ಮಿಕ ಬಲ ಭಾಗವಹಿಸುವಿಕೆಯ ದರವು ಶೇಕಡಾ 60.1 ರಷ್ಟಿದೆ ಮತ್ತು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸರಾಸರಿ ದುಡಿಯುವ ವಯಸ್ಸಿನ ಜನಸಂಖ್ಯೆಯು ಶೇಕಡಾ 70.7 ರಷ್ಟಿದೆ. ವರದಿಯ ಪ್ರಕಾರ,…
ಬೆಂಗಳೂರು: ಕಹಾಮವು ಪ್ರಸ್ತುತ ದುಬೈ, ಖತಾರ್, ಬ್ರುನೈ, ಮಾಲ್ಡೀವ್ಸ್ ಹಾಗೂ ಸಿಂಗಾಪೂರ್ ದೇಶಗಳು ಸೇರಿದಂತೆ ಭಾರತೀಯರು, ವಿಶೇಷವಾಗಿ ಕನ್ನಡಿಗರು ಹೆಚ್ಚಾಗಿ ನೆಲೆಸಿರುವ ನೆರೆಯ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡು ನಂದಿನಿ ಯುಹೆಚ್ಟಿ ಟೆಟ್ರಾಪ್ಯಾಕ್ ಹಾಲು, ತುಪ್ಪ, ಚೀಸ್, ಡೇರಿ ವೈಟ್ನರ್, ಬೆಣ್ಣೆ, ಐಸ್ಕ್ರೀಂ, ಸುವಾಸಿತ ಹಾಲು, ಸಿಹಿ ಉತ್ಪನ್ನ, ಸೇವರೀಸ್ ಅನ್ನು ರಫ್ತು ಮಾಡಲಾಗುತ್ತಿದ್ದು, ಜಾಗತಿಕ ಮಟ್ಟದಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟವನ್ನು ಅಭಿವೃದ್ಧಿಪಡಿಸಲು ಕ್ರಮವಿಡಲಾಗುತ್ತಿದೆ. ಈ ಬಗ್ಗೆ ಕೆಎಂಎಫ್ ಮಾಹಿತಿ ನೀಡಿದ್ದು, ಕಹಾಮವು ದಿನಾಂಕ:09.09.2023 ರಂದು ಫ್ರಾಂಚೈಸಿದಾರರ ಮೂಲಕ ಯುನೈಟೆಡ್ ಅರಬ್ ಎಮಿರೇಟ್ಸ್ (ದುಬೈ)ನಲ್ಲಿ ಅಂತರರಾಷ್ಟ್ರೀಯ ಮಟ್ಟದ ಮೊದಲ ‘ನಂದಿನಿ ಕೆಫೆ ಮೂ’ ಅನ್ನು ಪ್ರಾರಂಭಿಸಿ ತುಪ್ಪ, ಬೆಣ್ಣೆ, ಚೀಸ್, ಯುಹೆಚ್ಟಿ ಹಾಲು, ಐಸ್ಕ್ರೀಂ, ಸಿಹಿ ಉತ್ಪನ್ನ ಹಾಗೂ ಖಾರದ ಉತ್ಪನ್ನಗಳನ್ನು ರಫ್ತು ಮಾಡಿ ಮಾರಾಟ ವಹಿವಾಟನ್ನು ವಿಸ್ತರಿಸಲಾಗಿದೆ. ಜೊತೆಗೆ, ದಿನಾಂಕ:29.08.2025 ರಿಂದ 31.08.2025 ರವರೆಗೆ ಯುಎಸ್ಎಯಲ್ಲಿನ ಲೇಕ್ಲ್ಯಾಂಡ್ ಫ್ಲೋರಿಡಾದಲ್ಲಿ ಆಯೋಜಿಸಲಾಗಿದ್ದ ನಾವಿಕ (ನಾವು ವಿಶ್ವ ಕನ್ನಡಿಗರು) ವಿಶ್ವ ಕನ್ನಡ ಸಮಾವೇಶ-2025ದಲ್ಲಿ ಕಹಾಮದ…
ನವದೆಹಲಿ: ಕಸ್ಟಡಿ ಹಿಂಸಾಚಾರ ಮತ್ತು ಸಾವು ವ್ಯವಸ್ಥೆಯು ಕಪ್ಪು ಚುಕ್ಕೆಯಾಗಿದೆ. ದೇಶ ಇದನ್ನು ಸಹಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿಗಳ ಕೊರತೆಯ ಕುರಿತು ಸ್ವಯಂಪ್ರೇರಿತ ಪ್ರಕರಣದ ವಿಚಾರಣೆ ನಡೆಸುವಾಗ, ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಈ ವಿಷಯದಲ್ಲಿ ಹೊರಡಿಸಲಾದ ತನ್ನ ಆದೇಶವನ್ನು ಉಲ್ಲೇಖಿಸಿ, ರಾಜಸ್ಥಾನದಲ್ಲಿ ಎಂಟು ತಿಂಗಳಲ್ಲಿ ಪೊಲೀಸ್ ಕಸ್ಟಡಿಯಲ್ಲಿ 11 ಸಾವುಗಳು ವರದಿಯಾಗಿವೆ ಎಂದು ಹೇಳಿದೆ. ಈ ದೇಶ ಇದನ್ನು ಸಹಿಸುವುದಿಲ್ಲ. ಇದು ವ್ಯವಸ್ಥೆಯ ಮೇಲೆ ಒಂದು ಕಳಂಕ. ಕಸ್ಟಡಿಯಲ್ಲಿ ಸಾವುಗಳ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕಸ್ಟಡಿ ಸಾವುಗಳನ್ನು ಯಾರೂ ಸಮರ್ಥಿಸಲು ಅಥವಾ ಸಮರ್ಥಿಸಲು ಪ್ರಯತ್ನಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಈ ವಿಷಯದಲ್ಲಿ ಅನುಸರಣಾ ಅಫಿಡವಿಟ್ ಅನ್ನು ಏಕೆ ಸಲ್ಲಿಸಿಲ್ಲ ಎಂದು ಪೀಠವು ಕೇಂದ್ರವನ್ನು ಪ್ರಶ್ನಿಸಿತು. ಕೇಂದ್ರವು ಈ ನ್ಯಾಯಾಲಯವನ್ನು ತುಂಬಾ ಲಘುವಾಗಿ ಪರಿಗಣಿಸುತ್ತಿದೆ. ಏಕೆ? ನ್ಯಾಯಮೂರ್ತಿ ನಾಥ್ ಕೇಳಿದರು.…
ಹಿಂದೂ ಧರ್ಮದಲ್ಲಿ ಹಾವುಗಳಿಗೆ ವಿಶೇಷ ಸ್ಥಾನ ಹಾಗೂ ಗೌರವವನ್ನು ನೀಡಲಾಗುತ್ತದೆ. ಹಾವುಗಳನ್ನು ದೇವರಂತೆ ಪೂಜಿಸಲಾಗುತ್ತದೆ. ಹಾವುಗಳು ದೇವತೆಗಳೊಂದಿಗೆ ನಿಕಟ ಸಂಬಂಧವನ್ನು ಪಡೆದುಕೊಂಡಿವೆ. ನಾಗರ ಹಾವು ಮತ್ತು ಕಾಳ ಸರ್ಪವು ಅತ್ಯಂತ ಶಕ್ತಿಯುತವಾದ ಹಾಗೂ ದೈವ ಶಕ್ತಿಯನ್ನು ಪಡೆದಿರುವ ಸರೀಸೃಪ. ಇವುಗಳನ್ನು ಸಾಯಿಸುವುದು ಅಥವಾ ಹಿಂಸಿಸುವುದು ಮಾಡಿದರೆ ನಮ್ಮ ಜನ್ಮಕ್ಕೆ ಕಳಂಕ ಹಾಗೂ ಮಹಾ ಪಾಪ ಅಂಟಿಕೊಳ್ಳುವುದು. ಒಮ್ಮೆ ಹಾವು ದ್ವೇಷವನ್ನು ಹೊಂದಿದ್ದರೆ 12 ವರ್ಷಗಳ ಕಾಲ ಕಾಯುವುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ,…
ಬೆಂಗಳೂರು: 2025ನೇ ಸಾಲಿನ ಬಿ.ಇಡಿ ದಾಖಲಾತಿಗೆ ಮೊದಲ ಸೀಟು ಹಂಚಿಕೆ ಪಟ್ಟಿಯನ್ನು ಕೇಂದ್ರೀಕೃತ ದಾಖಲಾತಿ ಘಟಕವು ಬಿಡುಗಡೆ ಮಾಡಿದೆ. ಈ ಕುರಿತಂತೆ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಬಿ.ಇಡಿ ದಾಖಲಾತಿ ಸಂಬಂಧ ಮೊದಲ ಸೀಟು ಹಂಚಿಕೆ ಪಟ್ಟಿಯನ್ನು https://schooleducation.karnataka.gov.in/ ಜಾಲತಾಣದಲ್ಲಿ ಬಿಡುಗಡೆಗೊಳಿಸಲಾಗಿದೆ ಎಂದಿದ್ದಾರೆ. ಈ ಪಟ್ಟಿಯನ್ನು ವೀಕ್ಷಿಸಿ ಅಭ್ಯರ್ಥಿಗಳು ಹಂಚಿಕೆಯಾದ ಕಾಲೇಜುಗಳಿಗೆ ಸೇರ ಬಯಸಿದಲ್ಲಿ ಯೂಸರ್ ಐಟಿ ಮತ್ತು ಪಾಸ್ ವರ್ಡ್ ಅನ್ನು ಬಳಸಿ ದಿನಾಂಕ 25-11-2025ರ ಇಂದಿನಿಂದ 05-12-2025ರವರೆಗೆ ನಿಗದಿತ ಶುಲ್ಕದ ಚಲನ್ ಅನ್ನು ಮುದ್ರಿಸಿಕೊಂಡು ಎಸ್ ಬಿ ಐ ಬ್ಯಾಂಕಿನ ಯಾವುದೇ ಶಾಖೆಯಲ್ಲಿ ಪಾವತಿಸಬಹುದು. ಅದರ ಮೂಲ ಪ್ರತಿ ಹಾಗೂ ಇತರೆ ಎಲ್ಲಾ ಮೂಲ ದಾಖಲೆಗಳೊಂದಿಗೆ ಸಂಬಂಧಿಸಿದ ಜಿಲ್ಲಾ ನೋಡಲ್ ಕೇಂದ್ರಕ್ಕೆ ತೆರಳಿ, ದಾಖಲಾತಿ ಪತ್ರವನ್ನು ಪಡೆದುಕೊಳ್ಳಬೇಕು ಎಂದಿದ್ದಾರೆ. ಇನ್ನೂ ಮೊದಲ ಸುತ್ತಿನ ಆಯ್ಕೆಯಲ್ಲಿ ಹಂಚಿಕೆಯಾದ ಕಾಲೇಜಿಗೆ ಸೇರಲು ಬಯಸದೇ ಇರುವ ಅಭ್ಯರ್ಥಿಗಳು ತಮ್ಮ ಯೂಸರ್ ಐಡಿ ಮತ್ತು ಪಾಸ್…
ಶಿವಮೊಗ್ಗ: ಕನ್ನಡ ಸಾಹಿತ್ಯವನ್ನು ಉಳಿಸಿ ಬೆಳೆಸುವಲ್ಲಿ ಆಚರಣೆಗಿಂತ ಕಾರ್ಯಾಚರಣೆ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ ಎಂಬುದಾಗಿ ಕುವೆಂಪು ವಿವಿಯ ಕನ್ನಡ ಭಾರತಿಯ ಹಿರಿಯ ಪ್ರಾಧ್ಯಾಪಕರಾದಂತ ಡಾ.ಜಿ ಪ್ರಶಾಂತ್ ನಾಯಕ ಹೇಳಿದ್ದಾರೆ. ಇಂದು ಕುವೆಂಪು ವಿಶ್ವವಿದ್ಯಾಲಯ ಶ್ರೀಮದ್ ರಂಭಾಪುರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಡಾ. ಜಿ ಪ್ರಶಾಂತ್ ನಾಯಕ, ಹಿರಿಯ ಪ್ರಾಧ್ಯಾಪಕರು, ಕನ್ನಡ ಭಾರತಿ, ಕುವೆಂಪು ವಿಶ್ವವಿದ್ಯಾಲಯ, ಇವರು ಕನ್ನಡ ಸಾಹಿತ್ಯವನ್ನು ಉಳಿಸಿ ಬೆಳೆಸುವಲ್ಲಿ ಆಚರಣೆಗಿಂತ ಕಾರ್ಯಾಚರಣೆ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಕನ್ನಡ ನಾಡು ನುಡಿಗಾಗಿ ನಾವೆಲ್ಲರೂ ಬದ್ಧವಾಗಿ ಮಾಡಬೇಕಾದ ಕಾರ್ಯಗಳು ಯಾವುವು ಎಂಬುದನ್ನು ಅತ್ಯಂತ ಮಾರ್ಮಿಕವಾಗಿ ಉದಾಹರಣೆಗಳ ಮೂಲಕ ಕನ್ನಡದ ಪ್ರಜ್ಞೆಯನ್ನು ಮೂಡಿಸುವ ತಮ್ಮ ವಿಶಿಷ್ಟ ಮಾತುಗಳನ್ನು ಆಡಿ ವಿದ್ಯಾರ್ಥಿಗಳಿಗೆ ಸ್ಪೂರ್ತಿ ತುಂಬಿದರು. ಅಧ್ಯಕ್ಷತೆ ವಹಿಸಿದ್ದ ಶ್ರೀಮದ್ ರಂಭಾಪುರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಕಾಲೇಜಿನ ಪ್ರಾಂಶುಪಾಲರಾದ ಡಾ. ಮುತ್ತಯ್ಯ ಎಸ್.ಎಂ ಅವರು ಮಾತನಾಡಿ…














