Author: kannadanewsnow09

ಚಿತ್ರದುರ್ಗ : ರಾಜ್ಯ ಚುನಾವಣಾ ಆಯೋಗವು ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ ಘೋಷಿಸಿದ್ದು, ಮತದಾನ ದಿನದಂದು ಇದೇ ನ.23ರಂದು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಕಾರ್ಮಿಕರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಿದೆ. ಜಿಲ್ಲೆಯ ಚಿತ್ರದುರ್ಗ ನಗರಸಭೆ 15ನೇ ವಾರ್ಡ್, ಚಳ್ಳಕೆರೆ ನಗರಸಭೆ 4ನೇ ವಾರ್ಡ್ ಹಾಗೂ ನಾಯಕನಹಟ್ಟಿ ಪಟ್ಟಣ ಪಂಚಾಯತಿ 1ನೇ ವಾರ್ಡ್‍ನಲ್ಲಿ ಸ್ಥಳೀಯ ಮತದಾನ ನಡೆಯಲಿದ್ದು, ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾನ ದಿನದಂದು ಸ್ಥಳೀಯ ಸಂಸ್ಥೆಗಳಲ್ಲಿ ಬರುವ ಕಾರ್ಖಾನೆಗಳು, ಗಾರ್ಮೆಂಟ್ ಪ್ಯಾಕ್ಟರಿಗಳಲ್ಲಿ, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸುವಂತೆ ಸಂಬಂಧಪಟ್ಟ ಎಲ್ಲಾ ಉದ್ಯೋಗದಾತರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಜಿ.ಇಬ್ರಾಹಿಂ ಸಾಬ್ ತಿಳಿಸಿದ್ದಾರೆ. https://kannadanewsnow.com/kannada/for-liquor-lovers-liquor-will-not-be-available-here-from-november-22-to-24/ https://kannadanewsnow.com/kannada/congress-has-kindergarten-system-too-narendra-swamy-on-ministerial-berth/

Read More

ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆಯ ಅಂಗವಾಗಿ ನ.23 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಮುಕ್ತ ಹಾಗೂ ಶಾಂತಿಯುತ ನಡೆಸುವ ನಿಟ್ಟಿನಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ, 1951ರ ಕಲಂ 135-ಸಿ ಹಾಗೂ ಕರ್ನಾಟಕ ಅಬಕಾರಿ(ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು, 1967ರ ನಿಯಮ 10-ಬಿ ಅಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಬಳ್ಳಾರಿ ಜಿಲ್ಲೆಯಾದ್ಯಂತ ನ.22 ರ ಮಧ್ಯರಾತ್ರಿ 12 ಗಂಟೆಯಿAದ ನ.24 ರ ಬೆಳಿಗ್ಗೆ 06 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ಸಂಡೂರು ವಿಧಾನಸಭೆ ಉಪಚುನಾವಣೆ; ಮತ ಎಣಿಕೆ ದಿನದಂದು ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಿ ಡಿಸಿ ಮಿಶ್ರಾ ಆದೇಶ ಸಂಡೂರು ವಿಧಾನಸಭೆ ಉಪಚುನಾವಣೆ-2024 ರ ಹಿನ್ನಲೆಯಲ್ಲಿ ನ.23 ರಂದು ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆ ಸಂಬAಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನ.22 ರ ಸಂಜೆ 06 ಗಂಟೆಯಿAದ ನ.24 ರ ಬೆಳಿಗ್ಗೆ 06 ಗಂಟೆಯವರೆಗೆ ಭಾರತೀಯ ನಾಗರಿಕ…

Read More

ಚಿಕ್ಕಬಳ್ಳಾಪುರ: ವಕ್ಫ್‌ ಮಂಡಳಿ ಮಾಡುತ್ತಿರುವ ಲ್ಯಾಂಡ್‌ ಜಿಹಾದ್‌ ವಿರುದ್ಧ ಬಿಜೆಪಿ ಇನ್ನಷ್ಟು ಹೋರಾಟ ಮಾಡಲಿದೆ. ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸಂಸದ ಡಾ.ಕೆ.ಸುಧಾಕರ್‌ ಅವರೊಂದಿಗೆ ಆರ್‌.ಅಶೋಕ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಕರ್ನಾಟಕದ ವಕ್ಫ್‌ ಬೋರ್ಡ್‌ ತಿಮಿಂಗಿಲದಂತಿದೆ. ಇದು ದೇವಸ್ಥಾನ, ಶಾಲೆ, ಕೃಷಿ ಜಮೀನುಗಳನ್ನು ನುಂಗಿ ಹಾಕುತ್ತಿದೆ. ಸಂವಿಧಾನದಲ್ಲಿ ಎಲ್ಲರೂ ಒಂದೇ ಎಂದು ಹೇಳಿದ್ದರೂ, ವಕ್ಫ್‌ ಮಂಡಳಿಗೆ ಮಾತ್ರ ಪ್ರತ್ಯೇಕ ಸಂವಿಧಾನವಿದೆ. ಬೌದ್ಧರು, ಕ್ರೈಸ್ತರಿಗೆ ಇಲ್ಲದ ನ್ಯಾಯಾಂಗದ ಅಧಿಕಾರ ವಕ್ಫ್‌ ಮಂಡಳಿಗಿದೆ. ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಕಾಂಗ್ರೆಸ್‌ ವರ್ತಿಸುತ್ತಿದೆ ಎಂದರು. ಕಂದವಾರದಲ್ಲಿ ಸರ್‌ ಎಂ.ವಿಶ್ವೇಶ್ವರಯ್ಯನವರು ಓದಿದ ಶಾಲೆಯ ಆವರಣವನ್ನು ವಕ್ಫ್‌ ಕಬಳಿಸಿದೆ. ಅಲ್ಲಿನ ಮಸೀದಿಯಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡಿದರೆ, ಶಾಲಾ ಮಕ್ಕಳು ಯಾವ ಪ್ರಾರ್ಥನೆ ಮಾಡಬೇಕು? ರಾಷ್ಟ್ರಧ್ವಜ ಹಾರಿಸುವ ಸ್ಥಳದಲ್ಲಿ ಹಸಿರು ಬಾವುಟ ಹಾರಿಸಲಾಗಿದೆ. ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದಾಗ ವಕ್ಫ್‌ ಮಂಡಳಿಗೆ ಇಂತಹ ವಿಶೇಷ ಸ್ಥಾನಮಾನ ಕಲ್ಪಿಸಲಾಗಿದೆ ಎಂದು ದೂರಿದರು.…

Read More

ಭುವನೇಶ್ವರ : ನೈಸರ್ಗಿಕ ವಿಪತ್ತುಗಳ ಸಮಯದಲ್ಲಿ ತ್ವರಿತ ಪ್ರತಿಕ್ರಿಯೆಯನ್ನು ಬಲಪಡಿಸಲು ರಿಲಯನ್ಸ್ ಫೌಂಡೇಶನ್ ಮತ್ತು ವಿಶ್ವಸಂಸ್ಥೆ (ಭಾರತ) ಒಡಿಶಾದಲ್ಲಿ ಸಮ್ಮೇಳನವನ್ನು ಆಯೋಜಿಸಿದೆ. ಸಮ್ಮೇಳನದ ವಿಷಯ ‘ತ್ವರಿತ ಕ್ರಮಕ್ಕೆ ಆರಂಭಿಕ ಎಚ್ಚರಿಕೆ – ಬಹು ವಿಪತ್ತು, ಬಹು ಮಧ್ಯಸ್ಥಗಾರರ ವಿಧಾನ: ಕರಾವಳಿ ಪರಿಸರ ವ್ಯವಸ್ಥೆಗಳಿಂದ ಕಲಿಕೆಗಳು’. ತಜ್ಞರು ಕರಾವಳಿ ಪರಿಸರ ವ್ಯವಸ್ಥೆಯ ಸೂಕ್ಷ್ಮತೆಗಳ ಬಗ್ಗೆ ತಮ್ಮ ಅನುಭವಗಳು ಮತ್ತು ಸಲಹೆಗಳನ್ನು ಹಂಚಿಕೊಂಡರು. ಕಾರ್ಯಕ್ರಮದ ಮುಖ್ಯ ಅತಿಥಿ, ಒಡಿಶಾದ ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಶ್ರೀ ಸುರೇಶ್ ಪೂಜಾರಿ ಮಾತನಾಡಿ ‘ಮುಂಚಿತ ಎಚ್ಚರಿಕೆ ವ್ಯವಸ್ಥೆಯನ್ನು ಬಲಪಡಿಸಲು ನಾವು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ಒಡಿಶಾ ಸರ್ಕಾರವು ವಿವಿಧ ಮಧ್ಯಸ್ಥಗಾರರ ಸಹಯೋಗದೊಂದಿಗೆ ನೈಸರ್ಗಿಕ ವಿಪತ್ತುಗಳ ಪರಿಣಾಮವನ್ನು ತಗ್ಗಿಸುವ ಪ್ರಯತ್ನಗಳನ್ನು ಮಾಡುತ್ತಿದೆ’ ಎಂದರು. ರಿಲಯನ್ಸ್ ಫೌಂಡೇಶನ್‌ನ ಸಿಇಒ ಜಗನ್ನಾಥ್ ಕುಮಾರ್ ಮಾತನಾಡಿ, ‘ಹವಾಮಾನ ಬದಲಾವಣೆಯಿಂದಾಗಿ ಹೆಚ್ಚುತ್ತಿರುವ ವಿಪತ್ತುಗಳ ಪರಿಣಾಮವನ್ನು ತಗ್ಗಿಸಲು ನಿಖರವಾದ ಎಚ್ಚರಿಕೆಗಳ ಅಗತ್ಯವಿದೆ. ಸಮುದಾಯಗಳನ್ನು ರಕ್ಷಿಸಲು ನಾವು ಹೊಸ ಎಚ್ಚರಿಕೆ ವ್ಯವಸ್ಥೆಗಳನ್ನು ಜಾರಿಗೆ ತರುತ್ತಿದ್ದೇವೆ’ ಎಂದು…

Read More

ಬೆಂಗಳೂರು: ನೆಲಮಂಗಲ ಬಳಿಯಲ್ಲಿ ಬೈಕ್ ಹಾಗೂ ಲಾರಿ ನಡುವಿನ ಅಪಘಾತದಲ್ಲಿ ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿಯ ಮಲ್ಲರಬಾಣವಾಡಿ ಕ್ರಾಸ್ ನಲ್ಲಿ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಕೋಲಾರದ ಶ್ರೀನಿವಾಸಪುರದ ನಿವಾಸಿ ಜೀವನ್ ಹಾಗೂ ಆದಿತ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವೇಗವಾಗಿ ಬಂದಂತ ಲಾರಿಯೊಂದು ಬೈಕ್ ಹಿಂಬದಿಗೆ ಡಿಕ್ಕಿಯಾದ ನಂತ್ರ ಈ ಅಪಘಾತ ಸಂಭವಿಸಿದೆ. ಅಪಘಾತದ ನಂತ್ರ ಲಾರಿ ಕೆಳಗೆ ಬೈಕ್ ಸಿಕ್ಕಿ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬೈಕ್ ಸವಾರರಾದಂತ ಜೀವನ್, ಆದಿತ್ಯ ಸ್ಥಳದಲ್ಲೇ ದುರ್ಮಣ ಹೊಂದಿದ್ದಾರೆ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/good-news-for-rural-people-of-karnataka-minister-dinesh-gundu-rao-says-telemedicine-tele-icu-services-are-being-planned/ https://kannadanewsnow.com/kannada/congress-has-kindergarten-system-too-narendra-swamy-on-ministerial-berth/

Read More

ಬೆಂಗಳೂರು : ಗ್ರಾಮೀಣ ಪ್ರದೇಶಗಳಲ್ಲಿ ಎಐ, ಟೆಲಿಮೆಡಿಸಿನ್, ಟೆಲಿ ಐಸಿಯುಗಳ ಮೂಲಕ ಅತ್ಯಾಧುನಿಕ ಗುಣಮಟ್ಟದ ಆರೋಗ್ಯ ಸೇವೆ ನೀಡುವತ್ತ ನಮ್ಮ ಸರ್ಕಾರ ಚಿತ್ತ ಹರಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಸ್ಟಾರ್ಟ್‌ಅಪ್ ಸ್ಪ್ರಿಂಗ್ ಬೋರ್ಡ್ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ದಿನೇಶ್ ಗುಂಡೂರಾವ್ ಅವರು, ಆರೋಗ್ಯ ಕ್ಷೇತ್ರವನ್ನು ಸುಧಾರಿಸುವಲ್ಲಿ ತಂತ್ರಜ್ಞಾನದ ಪಾತ್ರ ಹೆಚ್ಚಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಉತ್ಕೃಷ್ಟ ಗುಣಮಟ್ಟದ ಆರೋಗ್ಯ ಸೇವೆಯ ಅಗತ್ಯತೆ ಇದೆ. ಈ ಕಾರಣಕ್ಕಾಗಿ ಎಐ, ಟೆಲಿಮೆಡಿಸಿನ್ ಮತ್ತು ಟೆಲಿ-ಐಸಿಯುಗಳ ಸಮರ್ಪಕ ಬಳಕೆಯೊಂದಿಗೆ ಅತ್ಯಾಧುನಿಕ ಆರೋಗ್ಯ ಸೇವೆ ನೀಡಲು ನಮ್ಮ ಸರ್ಕಾರ ಶ್ರಮಿಸುತ್ತಿದೆ ಎಂದು ತಿಳಿಸಿದರು. ಲೆಟ್ಸ್ ವೆಂಚರ್‌ನ ಸಂಸ್ಥಾಪಕಿ ಶಾಂತಿ ಮೋಹನ್ ಮಾತನಾಡಿ, ಸ್ಟಾರ್ಟ್‌ಅಪ್‌ಗಳು ಮತ್ತು ಉದ್ಯಮದ ಅಗತ್ಯಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸ್ಟಾರ್ಟ್‌ಅಪ್‌ಗಳು ತಜ್ಞರೊಂದಿಗೆ ಸಂಪರ್ಕಿಸಿ ಮಾರ್ಗದರ್ಶನವನ್ನು ಪಡೆಯಲು ಹಾಗೂ ಆರ್ಥಿಕ ನೆರವು ಪಡೆಯಲು ಇದು ವೇದಿಕೆಯಾಗಿದೆ…

Read More

ಶಿವಮೊಗ್ಗ: ಸಾಗರದ ಡಿಎಫ್ಓ ಮೋಹನ್ ವಿನಾಕಾರಣ ನಮ್ಮ ಹೆಸರನ್ನು ಹೇಳುತ್ತಿದ್ದಾರೆ. ಈ ಮೂಲಕ ಒಬ್ಬರನ್ನೊಬ್ಬರನ್ನು ಎತ್ತಿ ಕಟ್ಟುವಂತ ಕೆಲಸ ಮಾಡುತ್ತಿದ್ದಾರೆ. ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ಬಹಿರಂಗ ಪಡಿಸಬೇಕು. ಒಂದು ವಾರದ ಒಳಗಾಗಿ ಸ್ಪಷ್ಟ ಪಡಿಸಿ, ಬಹಿರಂಗವಾಗಿ ಕ್ಷಮೆ ಕೇಳದೇ ಹೋದರೇ, ಎಸಿ, ಡಿಸಿ ಕಚೇರಿಯ ಮುಂದೆ ಪಕ್ಷಾತೀತವಾಗಿ ಪ್ರತಿಭಟನೆ ಮಾಡಲಾಗುತ್ತದೆ. ಮೇಲಧಿಕಾರಿಗಳಿಗೆ ದೂರು ನೀಡಲಾಗುವುದು ಅಂತ ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ರತ್ನಾಕರ ಹೊನಗೂಡು ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿನ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಅಧಿಕಾರಿಗಳನ್ನು ಬಿಟ್ಟು ಕಿರುಕುಳ, ಅನೇಕ ರೀತಿಯಲ್ಲಿ ಕಿರುಕುಳ ನೀಡಲಾಗುತ್ತಿತ್ತು. ಆದರೇ ಬಿಜೆಪಿಯವರು ಇದಕ್ಕೆಲ್ಲ ಬಗ್ಗಲಿಲ್ಲ. ಈಗ ಹೊಸ ರೀತಿಯಲ್ಲಿ ಕಿರುಕುಳ ಶುರು ಮಾಡಿದ್ದಾರೆ. ಆನಂದಪುರ ಗ್ರಾಮ ಪಂಚಾಯ್ತಿಯ ವ್ಯಾಪ್ತಿಯ ಸಾಗುವಾನಿ ಮರಗಳನ್ನು ಕಡಿದುಕೊಂಡು ಹೋಗಿದ್ದಾರೆ. ಗಾಡಿಯನ್ನು ಸೀಜ್ ಮಾಡಲಾಗಿದೆ. ಊರಿನ ಗ್ರಾಮಸ್ಥರು, ಕಾಂಗ್ರೆಸ್ ಮುಖಂಡರು ಆರ್ ಎಫ್ ಓ, ಡಿಎಫ್ಓ ಬಳಿಯಲ್ಲಿ ಹೋಗಿ ಮಾತುಕತೆ ನಡೆಸಿದ್ದಾರೆ.…

Read More

ಪಾದಚಾರಿ ಮಾರ್ಗದಲ್ಲಿ ವಾಸಿಸುವ ವ್ಯಕ್ತಿಯಿಂದ ಹಿಡಿದು ಬಂಗಲೆಯಲ್ಲಿ ವಾಸಿಸುವ ಶ್ರೀಮಂತ ಉದ್ಯಮಿಯವರೆಗೆ ಎಲ್ಲರಿಗೂ ಸಾಲದ ಸಮಸ್ಯೆ ಇದೆ. ಆ ಸಾಲದ ಸಮಸ್ಯೆಯು ಪ್ರಮಾಣದಲ್ಲಿ ಬದಲಾಗುತ್ತದೆ ಆದರೆ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೂಪದಲ್ಲಿ ಉಳಿಯುತ್ತದೆ. ಕೆಲವು ಜನರು ಪಾವತಿಸದ ಸಾಲಕ್ಕೆ ಬಡ್ಡಿಯನ್ನು ಪಾವತಿಸುವ ಮೂಲಕ ಬಳಲುತ್ತಿದ್ದಾರೆ. ಈ ಸಂಧರ್ಭದಲ್ಲಿ ಎಂತಹ ಸಾಲದ ಹೊರೆಯಿದ್ದರೂ ಆ ಋಣ ತೀರಿಸಲು ನಾವು ಮಾಡಬಹುದಾದ ಉಪಾಯವೇ ಇಳನೇರ್ ದೀಪಂ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಎಳನೀರನ್ನು ಬಳಸಿ ದೀಪವನ್ನು ಹೇಗೆ ಬೆಳಗಿಸಬೇಕು ಎಂದು ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…

Read More

ಬೆಂಗಳೂರು: ನೈರುತ್ಯ ರೈಲ್ವೆಯಿಂದ ವಿವಿಧ ಕಾರಣಗಳಿಂದಾಗಿ ಕೆಲ ರೈಲುಗಳ ಸೇವೆಯಲ್ಲಿ ಬದಲಾವಣೆ ಮಾಡಲಾಗಿದೆ. ಅಲ್ಲದೇ ಸಂಚಾರ ರದ್ದು, ನಿಯಂತ್ರಣ ಕೂಡ ಮಾಡಲಾಗಿದೆ. ರೈಲು ಸೇವೆಯಲ್ಲಿ ಬದಲಾವಣೆ ನಿಡವಂದ ಯಾರ್ಡ್ ನಲ್ಲಿ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಸಲುವಾಗಿ, ಈ ಕೆಳಗಿನ ರೈಲುಗಳ ಸೇವೆಯಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತಿದೆ: ರೈಲು ಸಂಚಾರ ರದ್ದು: ನವೆಂಬರ್ 23 ರಂದು ತುಮಕೂರು-ಬಾಣಸವಾಡಿ ಮೆಮು ವಿಶೇಷ ರೈಲು (ರೈಲು ಸಂಖ್ಯೆ 06512), ಚಿಕ್ಕಮಗಳೂರು-ಯಶವಂತಪುರ ಡೈಲಿ ಎಕ್ಸ್ ಪ್ರೆಸ್ ರೈಲು (ರೈ.ಸಂ. 16239) ಮತ್ತು ಯಶವಂತಪುರ-ಚಿಕ್ಕಮಗಳೂರು ಡೈಲಿ ಎಕ್ಸ್ ಪ್ರೆಸ್ (ರೈ.ಸಂ.16240) ರೈಲುಗಳ ಸಂಚಾರವನ್ನು ರದ್ದು ಮಾಡಲಾಗುತ್ತಿದೆ. ರೈಲು ಸಂಚಾರ ಭಾಗಶಃ ರದ್ದು: ನವೆಂಬರ್ 23 ಮತ್ತು 24 ರಂದು ಕೆಎಸ್ಆರ್ ಬೆಂಗಳೂರು-ತುಮಕೂರು ಮೆಮು ವಿಶೇಷ (06571) ರೈಲು ಸೇವೆಯನ್ನು ದೊಡ್ಡಬೆಲೆ-ತುಮಕೂರು ನಡುವೆ ಮತ್ತು ತುಮಕೂರು-ಕೆಎಸ್ಆರ್ ಬೆಂಗಳೂರು ಮೆಮು ವಿಶೇಷ (06576) ರೈಲು ಸೇವೆಯನ್ನು ತುಮಕೂರು-ದೊಡ್ಡಬೆಲೆ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು. ನವೆಂಬರ್ 23 ರಂದು ಕೆಎಸ್ಆರ್ ಬೆಂಗಳೂರು-ತುಮಕೂರು ಮೆಮು ವಿಶೇಷ…

Read More

ಬೆಂಗಳೂರು: ಪ್ರಾಥಮಿಕ ಕ್ಯಾನ್ಸರ್‌ ಹಾಗೂ ಮರುಕಳಿಸುವ ಕ್ಯಾನ್ಸರ್‌ನನ್ನು ಪೂರ್ವದಲ್ಲಿಯೇ ಪತ್ತೆ ಹಚ್ಚಲು ಇದೇ ಮೊದಲ ಬಾರಿಗೆ ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ಹಾಗೂ ಟ್ರುಕನ್ ಡಯಾಗ್ನೋಸ್ಟಿಕ್ಸ್ ಪ್ರೈವೇಟ್ ಲಿಮಿಟೆಡ್‌ ಸಹಯೋಗದೊಂದಿಗೆ “ನಾವೆಲ್‌-ಬಯೋಮಾರ್ಕರ್‌ ಡಯಾಗ್ನಾಸ್ಟಿಕ್‌” ಟೆಸ್ಟ್‌ನನ್ನು ಸಂಶೋಧಿಸಿದೆ. ಈ ನೂತನ ಸಂಶೋಧನ ಸಹಯೋಗದಿಂದ ಕ್ಯಾನ್ಸರ್‌ ಬರುವ ಮುನ್ನ ಹಾಗೂ ಮರುಕಳಿಸುವ ಕ್ಯಾನ್ಸರ್‌ನನ್ನು ಪೂರ್ವದಲ್ಲಿಯೇ ನಿಖರವಾಗಿ ಪತ್ತೆ ಹಚ್ಚುವ ನಾವೆಲ್‌-ಬಯೋಮಾರ್ಕರ್‌ ಡಯಾಗ್ನಾಸ್ಟಿಕ್‌ ಟೆಸ್ಟ್‌ ಸಹಕಾರಿಯಾಗಲಿದೆ. ಇದಷ್ಟೇ ಅಲ್ಲದೆ, ಯಾವುದೇ ರೀತಿಯ ಕ್ಯಾನ್ಸರ್‌ ಆಗಿದ್ದರೂ ಅದಕ್ಕೆ ನಿಖರವಾದ ಹಾಗೂ ಪರಿಣಾಮಕಾರಿಯ ಚಿಕಿತ್ಸೆಯನ್ನು ಈ ನಾವೆಲ್‌ ಬಯೋಮಾರ್ಕರ್‌ ಡಯಾಗ್ನಾಸ್ಟಿಕ್‌ ಟೆಸ್ಟ್‌ ಮೌಲ್ಯೀಕರಿಸಲಿದೆ. ಈ ಸಹಭಾಗಿತ್ವದ ಅಡಿಯಲ್ಲಿ, ಟ್ರುಕನ್ ಅಭಿವೃದ್ಧಿಪಡಿಸಿದ ಹೊಸ ಕ್ಯಾನ್ಸರ್ ರೋಗನಿರ್ಣಯ ಪರೀಕ್ಷೆಗಳ ಮೇಲೆ ಹೆಚ್ಚು ಮೌಲ್ಯಮಾಪನದ ಅಧ್ಯಯನ ನಡೆಸಲು HCG ಮತ್ತು ಟ್ರುಕನ್ ಒಟ್ಟಾಗಿ ಕೆಲಸ ಮಾಡಲಿವೆ. ಈ ಪರೀಕ್ಷೆಗಳು ಮುಂದಿನ-ಪೀಳಿಗೆಗೆ ಹೆಚ್ಚು ಉಪಯುಕ್ತವಾಗಲಿದ್ದು, ನೋವೆಲ್‌ ಬಯೋಮಾರ್ಕರ್-ಚಾಲಿತ ಡಯಾಗ್ನೋಸ್ಟಿಕ್ಸ್ ಸೇರಿದಂತೆ ಸುಧಾರಿತ ತಂತ್ರಗಳನ್ನು ಬಳಸಿಕೊಳ್ಳುತ್ತವೆ. ಪ್ರಾಥಮಿಕ ಮತ್ತು ಮರುಕಳಿಸುವ/ಮೆಟಾಸ್ಟಾಟಿಕ್ ಕ್ಯಾನ್ಸರ್ ಪತ್ತೆಹಚ್ಚುವಿಕೆಯನ್ನು ಸಕ್ರಿಯಗೊಳಿಸಲು, ಪೂರ್ವ-ಚಿಕಿತ್ಸೆಯ ಮುನ್ಸೂಚನೆ…

Read More