Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಮಹತ್ವದ ಕ್ರಮವನ್ನು ವಹಿಸಲಾಗಿದೆ. ಇದರ ಭಾಗವಾಗಿ ಅನುಷ್ಠಾನ ಸಮಿತಿಯ ಅಧ್ಯಕ್ಷರನ್ನಾಗಿ ಹೆಚ್.ಎಂ ರೇವಣ್ಣ ಅವರನ್ನು ನೇಮಕ ಮಾಡಲಾಗಿದೆ. ಇದಲ್ಲದೇ ಉಪಾಧ್ಯಕ್ಷರಾಗಿ ನಾಲ್ವರನ್ನು ನೇಮಿಸಿ, ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಸರ್ಕಾರದ ಐತಿಹಾಸಿಕ ಐದು ಗ್ಯಾರಂಟಿ ಸ್ಕೀಂ ಗಳ ಅನುಷ್ಠಾನ ಸಮಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸಮಿತಿಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿದ್ದಾರೆ ಎಂದಿದೆ. ಮಾಜಿ ಸಚಿವ ಹೆಚ್.ಎಂ.ರೇವಣ್ಣ ಅವರು ಅಧ್ಯಕ್ಷರಾಗಿ ಕ್ಯಾಬಿನೆಟ್ ದರ್ಜೆ ಹೊಂದಿದ್ದಾರೆ. ಉಪಾಧ್ಯಕ್ಷರಾಗಿ ಮೆಹರೂಜ್ ಖಾನ್, ಪುಷ್ಪ ಅಮರನಾಥ್, ಎಸ್.ಆರ್.ಪಾಟೀಲ್ ಮತ್ತು ಸೂರಜ್ ಹೆಗ್ಡೆ ಅವರ ಹೆಸರನ್ನು ಸಿಎಂ ಸಿದ್ಧರಾಮಯ್ಯ ಅನುಮೋದಿಸಿದ್ದಾರೆ ಎಂಬುದಾಗಿ ತಿಳಿಸಿದೆ. https://kannadanewsnow.com/kannada/cm-siddaramaiah-gives-green-signal-to-40-congress-workers-to-be-given-corporation-board-seats/ https://kannadanewsnow.com/kannada/state-human-rights-commission-issues-notice-to-bmrcl-for-insulting-farmer-in-metro/
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಲಾಗಿದೆ. ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಅಂತ ವಿಪಕ್ಷಗಳ ನಾಯಕರು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿ ಬಿದ್ದಿದ್ದಾರೆ. ಆದರೇ ಅಸಲಿಗೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಲಾಗಿದ್ಯಾ.? ಆ ಬಗ್ಗೆ ಮುಂದೆ ಓದಿ. ನಿನ್ನೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬುದಾಗಿ ಘೋಷಣೆ ಕೂಗಲಾಗಿದೆ. ಇದು ರಾಜ್ಯದ ಶಕ್ತಿ ಸೌಧದಲ್ಲೇ ಕೂಗಿದ್ದು ಅಕ್ಷಮ್ಯ ಅಪರಾಧವಾಗಿದೆ. ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವಿಪಕ್ಷಗಳು ಒತ್ತಾಯಿಸಿದ್ದವು. ದೇಶದ್ರೋಹಿಗಳನ್ನು ಬಂಧಿಸುವವರೆಗೂ ಬಿಜೆಪಿಯಿಂದ ಹೋರಾಟ – ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಪಾಕಿಸ್ತಾನಕ್ಕೆ ಜೈಕಾರ ಹಾಕಿದ ದೇಶದ್ರೋಹಿಗಳನ್ನು ಬಂಧಿಸುವವರೆಗೂ ಬಿಜೆಪಿಯ ಹೋರಾಟ ಮುಂದುವರಿಯಲಿದೆ. ಇದು ಕಾಂಗ್ರೆಸ್ ಗೆ ನಾಚಿಕೆಗೇಡಿನ ವಿಚಾರವಾಗಿದ್ದು, ಇದರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದ ಒಳಗೆ ದೇಶದ್ರೋಹದ ಚಟುವಟಿಕೆ ನಡೆದಿದೆ. ಪಾಕಿಸ್ತಾನ ಜಿಂದಾಬಾದ್ ಎಂದು ಜೈಕಾರ ಹಾಕಲಾಗಿದೆ.…
ಬೆಂಗಳೂರು: ನಮ್ಮ ಮೆಟ್ರೋದಲ್ಲಿ ತೆರಳೋದಕ್ಕೆ ಹೋದಂತ ರೈತರೊಬ್ಬರನ್ನು ಕೊಳಕು ಬಟ್ಟೆಯ ಕಾರಣಕ್ಕೆ ಭದ್ರತಾ ಸಿಬ್ಬಂದಿಗಳು ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಸಂಚಾರಕ್ಕೆ ನಿರಾಕರಿಸಲಾಗಿತ್ತು. ಈ ಪ್ರಕರಣ ಸಂಬಂಧ ರಾಜ್ಯ ಮಾನವ ಹಕ್ಕುಗಳ ಆಯೋಗವು ಬಿಎಂಆರ್ ಸಿಎಲ್ ಗೆ ನೋಟಿಸ್ ಜಾರಿಗೊಳಿಸಿದೆ. ಈ ಕುರಿತಂತೆ ರಾಜ್ಯ ಮಾನವಹಕ್ಕುಗಳ ಆಯೋಗದಿಂದ ನಮ್ಮ ಮೆಟ್ರೋದ ಎಂಡಿಗೆ ನೋಟಿಸ್ ನೀಡಲಾಗಿದ್ದು, ಅದರಲ್ಲಿ ವ್ಯಕ್ತಿಯ ಬಟ್ಟೆಯ ಆಧಾರದಲ್ಲಿ ಅವಕಾಶ ನಿರಾಕರಣ ಮಾಡುವಂತಿಲ್ಲ. ಸಾರ್ವಜನಿಕ ಸಾರಿಗೆಯಲ್ಲಿ ಅವಕಾಶ ನಿರಾಕರಿಸುವಂತಿಲ್ಲ. ಆ ರೀತಿಯಾದ್ರೇ ಅದು ಮಾನವಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂಬುದಾಗಿ ಎಚ್ಚರಿಸಿದೆ. ರಾಜಾಜಿನಗರ ನಮ್ಮ ಮೆಟ್ರೋ ನಿಲ್ದಾಣದಲ್ಲಿ ರೈತನ ಕೊಳಕು ಬಟ್ಟೆ ಧರಿಸಿದ ಕಾರಣಕ್ಕೆ ಪ್ರಯಾಣ ನಿರಾಕರಿಸಿರೋದು ತಪ್ಪು. ಈ ಕುರಿತಂತೆ 4 ವಾರಗಳಲ್ಲಿ ಸಂಪೂರ್ಣ ವರದಿಯನ್ನು ನೀಡುವಂತೆ ಬಿಎಂಆರ್ ಸಿಎಲ್ ಎಂಡಿಗೆ ಸೂಚಿಸಲಾಗಿದೆ. ಈ ಮೂಲಕ ನಮ್ಮ ಮೆಟ್ರೋಗೆ ಮಾನವಹಕ್ಕುಗಳ ಆಯೋಗವು ಶಾಕ್ ನೀಡಿದೆ. https://kannadanewsnow.com/kannada/actor-dali-dhananjay-appointed-as-ambassador-of-bangalore-international-film-festival/ https://kannadanewsnow.com/kannada/centre-bans-another-muslim-outfit-for-terror-links-in-kashmir/
ನವದೆಹಲಿ: ಜಾರ್ಖಂಡ್ನ ಜಮ್ತಾರಾ ಬಳಿ ರೈಲು ಡಿಕ್ಕಿ ಹೊಡೆದ ಪರಿಣಾಮ 12 ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಈ ಘಟನೆ ಜಮ್ತಾರಾ-ಕರ್ಮತಾಂಡ್ನ ಕಲ್ಜಾರಿಯಾ ಬಳಿ ನಡೆದಿದೆ. ರೈಲ್ವೆ ಆಡಳಿತ, ರೈಲ್ವೆ ಪೊಲೀಸರು ಮತ್ತು ಸ್ಥಳೀಯ ಆಡಳಿತವು ಸ್ಥಳಕ್ಕೆ ತಲುಪಿದೆ. ಗಾಯಗೊಂಡವರನ್ನು ಆಸ್ಪತ್ರೆಗಳಿಗೆ ದಾಖಲಿಸಲು ಅಧಿಕಾರಿಗಳು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ದೈನಿಕ್ ಜಾಗರಣ್ ವರದಿ ಮಾಡಿದೆ. ಸದ್ಯಕ್ಕೆ ಇಷ್ಟು ಮಾಹಿತಿ ದೊರೆತಿದ್ದು, ಕ್ಷಣ ಕ್ಷಣದ ಅಪ್ ಡೇಟ್ ಗಾಗಿ ಇದೇ ಪುಟಕ್ಕೆ ಭೇಟಿ ನೀಡಿ. https://kannadanewsnow.com/kannada/actor-dali-dhananjay-appointed-as-ambassador-of-bangalore-international-film-festival/ https://kannadanewsnow.com/kannada/centre-bans-another-muslim-outfit-for-terror-links-in-kashmir/
ನವದೆಹಲಿ: ಚಂದ್ರಯಾನ -3 ಮಿಷನ್ ನ ಐತಿಹಾಸಿಕ ಯಶಸ್ಸಿನ ನಂತರ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (Indian Space Research Organisation -ISRO) ತನ್ನ ಮುಂದಿನ ಚಂದ್ರಯಾನ – ಚಂದ್ರಯಾನ -4 ಗೆ ( Chandrayaan-4 ) ಸಜ್ಜಾಗುತ್ತಿದೆ. ಇಸ್ರೋದ ಬಾಹ್ಯಾಕಾಶ ಅಪ್ಲಿಕೇಶನ್ ಕೇಂದ್ರದ (ಎಸ್ಎಸಿ) ಡಾ.ನಿಲೇಶ್ ದೇಸಾಯಿ ಅವರು ಇಂಡಿಯಾ ಟುಡೇಗೆ ಮುಂದಿನ ಮಿಷನ್ ಚಂದ್ರಯಾನ -4 ಅನ್ನು 2028 ರಲ್ಲಿ ಪ್ರಾರಂಭಿಸಲಾಗುವುದು ಎಂದು ಹೇಳಿದರು. ಹೆಚ್ಚು ಸಂಕೀರ್ಣ ಉದ್ದೇಶಗಳನ್ನು ಪ್ರಯತ್ನಿಸುವಾಗ ಇತ್ತೀಚೆಗೆ ಮುಕ್ತಾಯಗೊಂಡ ಚಂದ್ರಯಾನ -3 ಮಿಷನ್ ನ ಸಾಧನೆಗಳ ಬಗ್ಗೆ. ಚಂದ್ರಯಾನ -4 ಯಶಸ್ವಿಯಾದರೆ, ಚಂದ್ರನ ಮೇಲ್ಮೈಯಿಂದ ಮಾದರಿಗಳನ್ನು ಮರಳಿ ತರುವ ನಾಲ್ಕನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಲಿದೆ. “ಚಂದ್ರನಿಗೆ ಮನುಷ್ಯನನ್ನು ಕಳುಹಿಸಲು ನಮಗೆ ಮುಂದಿನ 15 ವರ್ಷಗಳಿವೆ” ಎಂದು ನಿಲೇಶ್ ದೇಸಾಯಿ ಏಜೆನ್ಸಿಯ ದೀರ್ಘಕಾಲೀನ ದೃಷ್ಟಿಕೋನವನ್ನು ವಿವರಿಸಿದರು. ಈ ಮಿಷನ್ ದಕ್ಷಿಣ ಧ್ರುವದ ಬಳಿ ಇಳಿದು ಬಂಡೆಯ ಮಾದರಿಗಳನ್ನು ಸಂಗ್ರಹಿಸಲು ಉದ್ದೇಶಿಸಿದೆ, ಅದನ್ನು ವಿಶ್ಲೇಷಣೆಗಾಗಿ…
ನವದೆಹಲಿ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸಿದ್ದಕ್ಕಾಗಿ ಮುಸ್ಲಿಂ ಕಾನ್ಫರೆನ್ಸ್ ಜಮ್ಮು ಕಾಶ್ಮೀರ ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಗೃಹ ಸಚಿವ ಅಮಿತ್ ಶಾ ಈ ಮಾಹಿತಿಯನ್ನು ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಉತ್ತೇಜಿಸಿದ್ದಕ್ಕಾಗಿ ಕೇಂದ್ರ ಸರ್ಕಾರ ನಿಷೇಧಿಸಿದ ಎರಡು ದಿನಗಳಲ್ಲಿ ಇದು ಎರಡನೇ ಪ್ರಮುಖ ಸಂಘಟನೆಯಾಗಿದೆ. ಮುಸ್ಲಿಂ ಕಾನ್ಫರೆನ್ಸ್ ಜಮ್ಮು ಮತ್ತು ಕಾಶ್ಮೀರ (ಸುಮಾಜಿ ಬಣ) ಮತ್ತು ಮುಸ್ಲಿಂ ಕಾನ್ಫರೆನ್ಸ್ ಜಮ್ಮು ಮತ್ತು ಕಾಶ್ಮೀರ (ಭಟ್ ಬಣ) ಅನ್ನು ಕಾನೂನುಬಾಹಿರ ಸಂಘಟನೆಗಳು ಎಂದು ಸರ್ಕಾರ ಘೋಷಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. https://twitter.com/AmitShah/status/1762837729035895146 ಈ ಸಂಘಟನೆಗಳು ದೇಶದ ಸಾರ್ವಭೌಮತ್ವ ಮತ್ತು ಸಮಗ್ರತೆಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ತೊಡಗಿವೆ. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಭಯೋತ್ಪಾದನೆಯನ್ನು ಬೇರುಸಹಿತ ಕಿತ್ತೊಗೆಯಲು ಬದ್ಧವಾಗಿದೆ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಯಾರಾದರೂ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಜಮ್ಮು ಮತ್ತು ಕಾಶ್ಮೀರದಲ್ಲಿ…
ಬೆಂಗಳೂರು: ನಟ ದರ್ಶನ್ ಗೆ ಮತ್ತೆ ಮತ್ತೆ ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಇದೀಗ ಮಹಿಳೆಯೊಬ್ಬರು ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಈ ಮೂಲಕ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾದಂತೆ ಆಗಿದೆ. ಬೆಂಗಳೂರಿನ 37ನೇ ಎಸಿಎಂಎಂ ಕೋರ್ಟ್ ನಲ್ಲಿ ರೇಣುಕಮ್ಮ ಎಂಬುವರು ನಟ ದರ್ಶನ್ ವಿರುದ್ಧ ಖಾಸಗಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 295(ಎ), 509, 504 ಅಡಿಯಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಇಂದು ಈ ಖಾಸಗಿ ದೂರಿನ ವಿಚಾರಣೆಯನ್ನು ಬೆಂಗಳೂರಿನ 37ನೇ ಎಸಿಎಂಎಂ ಕೋರ್ಟ್ ನಲ್ಲಿ ನಡೆಸಲಾಯಿತು. ದೂರುದಾರೆ ರೇಣುಕಮ್ಮ ಪರವಾಗಿ ವಕೀಲ ರಂಗನಾಥ್ ವಾದ ಮಂಡಿಸಿದರು. ವಾದವನ್ನು ಆಲಿಸಿದಂತ ನ್ಯಾಯಾಲಯವು ಅರ್ಜಿಯ ಮುಂದಿನ ವಿಚಾರಣೆಯನ್ನು ಮಾರ್ಚ್.1ಕ್ಕೆ ಮುಂದೂಡಲಾಗಿದೆ. ಅಂದಹಾಗೇ ನಟ ದರ್ಶನ್ ವಿರುದ್ಧ ಐಪಿಸಿ ಸೆಕ್ಷನ್ 295ಎ ಅಡಿಯಲ್ಲಿ ಉದ್ದೇಶಪೂರ್ವಕವಾಗಿ ಹೇಳಿಕೆ ನೀಡುವುದು. 509ರಡಿ ಮಹಿಳೆಯರನ್ನು ಅವಮಾನಿಸುವ ಉದಗ್ದೇಶ. 298 ಧಾರ್ಮಿಕ ಭಾನೆಗಳಿಗೆ ಧಕ್ಕೆ ತುರುವುದು. 504 ಶಾಂತಿ ಭಂಗಕ್ಕೆ ಪ್ರಚೋದನೆ ನೀಡುವುದು ಆಗಿದೆ. https://kannadanewsnow.com/kannada/actor-dali-dhananjay-appointed-as-ambassador-of-bangalore-international-film-festival/
ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳ ಜೊತೆಗೆ 7ನೇ ವೇತನ ಆಯೋಗದ ಜಾರಿಗೆ ಸರ್ಕಾರ ಸಕಾರಾತ್ಮಕ ತೀರ್ಮಾನ ಕೈಗೊಳ್ಳಲಿದೆ. ಆಯೋಗದ ಅಂತಿಮ ವರದಿ ಬಂದ ನಂತ್ರ ಖಂಡಿತ ಜಾರಿ ಮಾಡುತ್ತೇವೆ. ಈ ಬಗ್ಗೆ ಸಂಶಯ ಬೇಡ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ನಿರ್ಧರಿಸಿದಂತೆ ತುಟ್ಟಿಭತ್ಯೆಯನ್ನು ಯಾವುದೇ ವಿಳಂಬವಿಲ್ಲದೇ ರಾಜ್ಯದಲ್ಲಿ ನೀಡಲಾಗುತ್ತಿದೆ. ಎನ್ ಪಿ ಎಸ್ ತೆಗೆದು ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡುವ ಬಗ್ಗೆಯೂ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಸರ್ಕಾರಿ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿ ಮಾಡುವ ಬಗ್ಗೆಯೂ ಶೀಘ್ರದಲ್ಲಿ ತೀರ್ಮಾನಿಸಲಾಗುವುದು ಎಂದ ಮುಖ್ಯಮಂತ್ರಿಗಳು ಸರ್ಕಾರ ಮತ್ತು ಜನರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವ ಜವಾಬ್ದಾರಿಯುತ ಕೆಲಸವನ್ನು ಪರಿಣಾಮಕಾರಿಯಾಗಿ ಮಾಡುತ್ತಿರುವ ಸರ್ಕಾರಿ ನೌಕರರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದ ಅಭಿವೃದ್ಧಿಯಲ್ಲಿ ಬಾಗಿಯಾಗಬೇಕು ಕರ್ನಾಟಕದಲ್ಲಿ 7.50 ಲಕ್ಷ ಸರ್ಕಾರಿ ನೌಕರರಿದ್ದಾರೆ. ಅದರಲ್ಲಿ 5.90 ಲಕ್ಷ ಜನ ಹಾಲಿ ಕೆಲಸ…
ಬೆಂಗಳೂರು: ರಾಜ್ಯ ಸರ್ಕಾರದಿಂದ 2023-24ನೇ ಸಾಲಿನಲ್ಲಿ ಆಯೋಜಿಸುತ್ತಿರುವ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯನ್ನಾಗಿ ನಟ ಡಾಲಿ ಧನಂಜಯ್ ಅವರನ್ನು ನೇಮಕ ಮಾಡಿ ಆದೇಶಿಸಿದೆ. ಈ ಕುರಿತಂತೆ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯ ವತಿಯಿಂದ ಪ್ರತಿವರ್ಷ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಆಯೋಜಿಸುತ್ತಿದ್ದು, ಅದರಂತೆ ಪುಸಕ್ತ 2023-24ನೇ ಸಾಲಿನಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಏರ್ಪಡಿಸಲು ಉದ್ದೇಶಿಸಿರುವ ಮೇರೆಗೆ ಮೇಲೆ ಓದಲಾದ ಕ್ರಮ ಸಂಖ್ಯೆ (3)ರ ಸರ್ಕಾರದ ಆದೇಶದಲ್ಲಿ ಈ ಸಂಬಂಧ ಸಂಘಟನಾ ಮತ್ತು ಕೋರ್ ಸಮಿತಿಗಳನ್ನು ರಚಿಸಲಾಗಿದೆ ಎಂದು ಹೇಳಿದೆ. ದಿನಾಂಕ:03/01/2024ರಂದು ಮಾನ್ಯ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿನ ನಿರ್ಣಯದನ್ವಯ ಈ ಚಲನಚಿತ್ರೋತ್ಸವವನ್ನು 2024ರ ಫೆಬ್ರವರಿ 29 ರಿಂದ ಮಾರ್ಚ್ 07ರವರೆಗೆ ಏರ್ಪಡಿಸಲಾಗಿದ್ದು, ಚಿತ್ರೋತ್ಸವದ ಉದ್ಘಾಟನಾ ಸಮಾರಂಭವನ್ನು ದಿ.29/02/2024 ರಂದು…
ಬೆಂಗಳೂರು: ರಾಜ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡೋ ಸಂಬಂಧ ನಾಳೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈಕುರಿತಂತೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್ ಚಂದ್ರಶೇಖರ್ ಮಾಹಿತಿ ನೀಡಿದ್ದು ದಿನಾಂಕ 29-02-2024ರಂದು ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಕರೆಯಲಾಗಿದ್ದ ಸಚಿವ ಸಂಪುಟ ಸಭೆಯನ್ನು ಅದೇ ದಿನ ಸಂಜೆ 7ಗಂಟೆಗೆ ಮುಂದೂಡಲಾಗಿದೆ ಎಂದಿದ್ದಾರೆ. ನಾಳೆ ಸಂಜೆ 7 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಹಲವು ಅಭಿವೃದ್ಧಿ ಯೋಜನೆಗಳು, ಕಾಮಗಾರಿಗಳಿಗೆ ಅನುಮೋದನೆ ದೊರೆಯೋ ಸಾಧ್ಯತೆ ಇದೆ. https://kannadanewsnow.com/kannada/icici-bank-clarifies-allegations-of-fraud-by-manager-to-customers/ https://kannadanewsnow.com/kannada/pm-modi-attacks-dmk-govt-over-chinese-flag-in-indian-rocket-ad/