Author: kannadanewsnow09

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವಂತ ನಟ ದರ್ಶನ್ ಅಂಡ್ ಗ್ಯಾಂಗ್ ಗೆ ಮತ್ತೆ ಜೈಲೇ ಗತಿ ಎನ್ನುವಂತೆ ಆಗಿದೆ. ಇಂದು ಕೋರ್ಟ್ ಅವರಿಗೆ ಆಗಸ್ಟ್.28ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಇಂದು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧದ ಅರ್ಜಿಯ ವಿಚಾರಣೆಯನ್ನು ನಡೆಸಲಾಯಿತು. ಎಲ್ಲಾ ಆರೋಪಿಗಳನ್ನು ವೀಡಿಯೋ ಕಾನ್ಫೆರೆನ್ಸ್ ಮೂಲಕ ಕೋರ್ಟ್ ಗೆ ಜೈಲು ಅಧಿಕಾರಿಗಳು ಹಾಜರು ಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರಾದಂತ ವಿಶ್ವನಾಥ ಸಿ ಗೌಡರ್ ಅವರು, ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಆಗಸ್ಟ್.28ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶಿಸಿದ್ದಾರೆ. ಹೀಗಾಗಿ ನಟ ದರ್ಶನ್ ಅಂಡ್ ಗ್ಯಾಂಗ್ ಗೆ ಜೈಲೇ ಗತಿ ಎನ್ನುವಂತೆ ಆಗಿದೆ. https://kannadanewsnow.com/kannada/chikkamagaluru-district-hospital-anaesthetist-dr-somashekar-suspended/ https://kannadanewsnow.com/kannada/farmers-of-the-state-note-get-e-kyc-done-immediately-to-deposit-pm-kisan-money/

Read More

ಬೆಂಗಳೂರು: ಸಾರ್ವಜನಿಕರಿಂದ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಅರವಳಿಕೆ ತಜ್ಞರಾಗಿದ್ದಂತ ಡಾ. ಸೋಮಶೇಖರ್.ಪಿ ವಿರುದ್ಧ ಸಾಕಷ್ಟು ದೂರುಗಳು ಕೇಳಿ ಬಂದಿದ್ದವು. ಈ ಹಿನ್ನಲೆಯಲ್ಲಿ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಡಾ|| ಸೋಮಶೇಖರ್ ಪಿ., ಅರವಳಿಕೆ ತಜ್ಞರು, ಜಿಲ್ಲಾ ಆಸ್ಪತ್ರೆ ಚಿಕ್ಕಮಗಳೂರು ಜಿಲ್ಲೆ ಆದ ಇವರು ಆಸ್ಪತ್ರೆಯ ಕರ್ತವ್ಯದ ಸಂದರ್ಭದಲ್ಲಿ ದುರವರ್ತನೆ ತೋರಿರುವ ಕುರಿತು, ಪದೇ ಪದೇ ಸಾರ್ವಜನಿಕರಿಂದ ಮತ್ತು ಆಸ್ಪತ್ರೆಯ ಸಿಬ್ಬಂದಿಗಳಿಂದ ದೂರುಗಳು ಬರುತ್ತಿರುವ, ಅಲ್ಲದೇ ಆಸ್ಪತ್ರೆಯ ಕರ್ತವ್ಯ ನಿರ್ವಹಿಸುವ ಸಮಯದಲ್ಲಿ ಪಾನಮತ್ತರಾಗಿ ಶಸ್ತ್ರಚಿಕಿತ್ಸೆಗೆ ಒಳಗಾದ ರೋಗಿಗಳಿಗೆ ಅರವಳಿಕೆ ಚುಚ್ಚುಮದ್ದನ್ನು ನೀಡಲು ಮುಂದಾಗಿ ಪಾನಮತ್ತರಾಗಿ ಅರವಳಿಕೆ ನೀಡಲು ಸಾಧ್ಯವಾಗದೇ ಇದ್ದು, ಶಸ್ತ್ರಚಿಕಿತ್ಸೆಯ ಹಲವು ಪ್ರಕರಣಗಳು ವಿಫಲವಾಗಿರುವುದು ಕಂಡುಬಂದು, ಇದರಿಂದಾಗಿ ಚಿಕಿತ್ಸೆ ಬಯಸಿ ಬರುವ ಸಾರ್ವಜನಿಕರಿಗೆ ತುಂಬಾ ಅಡಚಣೆಯಾಗಿರುತ್ತದೆ. ಈ ಬಗ್ಗೆ ವೈದ್ಯರ ಕುರಿತು ಅನೇಕ ದೂರು ಸಹ ಇರುತ್ತದೆ ಎಂದಿದ್ದಾರೆ. ಆಸ್ಪತ್ರೆಯ ಕರ್ತವ್ಯಕ್ಕೆ…

Read More

ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಸೇರಿರುವಂತ ಅವರಿಗೆ ಈಗ ಮತ್ತೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಇಂದು ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯವು, ನಟ ದರ್ಶನ್ ಅಂಡ್ ಗ್ಯಾಂಗ್ ಗೆ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್.28ರವರೆಗೆ ವಿಸ್ತರಿಸಿ ಆದೇಶಿಸಿದೆ. ಅಂದಹಾಗೇ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳು ರೇಣುಕಾಸ್ವಾಮಿ ಮರ್ಡರ್ ಕೇಸಲ್ಲಿ ಜೈಲು ಪಾಲಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವಂತ ನಟ ದರ್ಶನ್ ಜೈಲೂಟ ಬೇಡ, ಮನೆಯೂಟ ಬೇಕು ಅಂತ ಅರ್ಜಿ ಸಲ್ಲಿಸಿದ್ದರೂ ಕೋರ್ಟ್ ಅವಕಾಶ ನೀಡಿರಲಿಲ್ಲ. ಜೈಲು ಅಧಿಕಾರಿಗಳು ನೋ ಎಂದಿದ್ದರು. https://kannadanewsnow.com/kannada/good-news-for-farmers-in-the-state-podi-campaign-to-be-launched-from-september/ https://kannadanewsnow.com/kannada/farmers-of-the-state-note-get-e-kyc-done-immediately-to-deposit-pm-kisan-money/

Read More

ನವದೆಹಲಿ: ಶಿಕ್ಷಣ ತಂತ್ರಜ್ಞಾನ ಕಂಪನಿಗೆ 1 ಬಿಲಿಯನ್ ಡಾಲರ್ (8,395 ಕೋಟಿ ರೂ.) ಬಾಕಿ ಇದೆ ಎಂದು ಹೇಳಿರುವ ಯುಎಸ್ ಸಾಲದಾತರಿಗೆ ವಿಜಯವಾಗಿ, ಹಿಂದಿನ ನ್ಯಾಯಮಂಡಳಿಯ ಆದೇಶವನ್ನು ತಡೆಹಿಡಿಯುವ ಮೂಲಕ ಸುಪ್ರೀಂ ಕೋರ್ಟ್ ಬುಧವಾರ ಬೈಜುಸ್ ವಿರುದ್ಧದ ದಿವಾಳಿತನ ಪ್ರಕ್ರಿಯೆಯನ್ನು ಪುನರುಜ್ಜೀವನಗೊಳಿಸಿದೆ. ಸುಪ್ರೀಂ ಕೋರ್ಟ್ನ ಆದೇಶವು ಕಂಪನಿಯ ಸಂಸ್ಥಾಪಕ ಬೈಜು ರವೀಂದ್ರನ್ ಅವರಿಗೆ ಹಿನ್ನಡೆಯಾಗಿದೆ. ಅವರು ಈ ತಿಂಗಳ ಆರಂಭದಲ್ಲಿ 22 ಬಿಲಿಯನ್ ಡಾಲರ್ (1.84 ಲಕ್ಷ ಕೋಟಿ ರೂ.) ಭಾರತದ ಅತ್ಯಂತ ಮೌಲ್ಯಯುತ ಸ್ಟಾರ್ಟ್ಅಪ್ನ ನಿಯಂತ್ರಣವನ್ನು ಮರಳಿ ಪಡೆದರು. ಪ್ರಾಯೋಜಕತ್ವದ ಬಾಕಿಯನ್ನು ಪಾವತಿಸಲಾಗಿಲ್ಲ ಎಂದು ಬಿಸಿಸಿಐ ನೀಡಿದ ದೂರಿನ ನಂತರ ಕಂಪನಿಯು ದಿವಾಳಿತನ ಪ್ರಕ್ರಿಯೆಗೆ ಒಳಗಾಗುತ್ತಿತ್ತು. ನಂತರ ಎರಡೂ ಕಡೆಯವರು ವಿವಾದವನ್ನು ಬಗೆಹರಿಸಿದರು ಮತ್ತು ಮೇಲ್ಮನವಿ ನ್ಯಾಯಮಂಡಳಿ ದಿವಾಳಿತನ ಪ್ರಕ್ರಿಯೆಯನ್ನು ನಿಲ್ಲಿಸಿತು. ವಿಚಾರಣೆಯ ಪುನರುಜ್ಜೀವನವು ಕಂಪನಿಯ ನಿಯಂತ್ರಣವನ್ನು ಮತ್ತೆ ನ್ಯಾಯಾಲಯ ನೇಮಿಸಿದ ದಿವಾಳಿತನ ನಿರ್ವಾಹಕರ ಕೈಗೆ ನೀಡುತ್ತದೆ. ಬೈಜುಸ್ ಗ್ರೂಪ್ ಕಂಪನಿಯ ಕೆಲವು ಸಾಲದಾತರನ್ನು ಪ್ರತಿನಿಧಿಸುವ ಯುಎಸ್ ಮೂಲದ ಗ್ಲಾಸ್…

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತ ಪಂಚ ಗ್ಯಾರಂಟಿ ಯೋಜನೆಗಳು ಜಾರಿಗೊಂಡು ವರ್ಷಗಳೇ ಉರುಳುತ್ತಿವೆ. ಈ ಗ್ಯಾರಂಟಿ ಯೋಜನೆಗಳಿಗೆ ತಗಲುತ್ತಿರುವಂತ ವೆಚ್ಚವನ್ನು ಕಂಡು ಸರ್ಕಾರವೇ ಬೆಚ್ಚಿ ಬಿದ್ದಿರುವುದಾಗಿ ಹೇಳಲಾಗುತ್ತಿದೆ. ಇದೇ ಕಾರಣಕ್ಕಾಗಿ ಗ್ಯಾರಂಟಿ ಸ್ಕೀಂಗಳನ್ನು ಪರಿಷ್ಕರಣೆ ಮಾಡಬೇಕು. ಜೊತೆಗೆ ಇನ್ನಷ್ಟು ಷರತ್ತುಗಳನ್ನು ವಿಧಿಸಬೇಕು ಎಂಬ ಕೂಗು ಎದ್ದಿದೆ. ರಾಜ್ಯ ಸರ್ಕಾರ ಜಾರಿಗೊಳಿಸಿರುವಂತ ಅನ್ನಭಾಗ್ಯ, ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಯುವನಿಧಿ ಹಾಗೂ ಶಕ್ತಿ ಯೋಜನೆಗೆ ಕಳೆದ 8 ತಿಂಗಳಿನಿಂದ ಕೋಟಿ ಕೋಟಿ ಖರ್ಚಾಗಿದೆಯಂತೆ. ಕಳೆದ 8 ತಿಂಗಳು ಗ್ಯಾರಂಟಿ ಯೋಜನೆಗಳಿಗೆ ಆಗಿರುವಂತ ಖರ್ಚು ನೋಡಿದಂತ ಸರ್ಕಾರ, ಪುಲ್ ಶಾಕ್ ಗೆ ಒಳಗಾಗಿದೆ ಎನ್ನಲಾಗುತ್ತಿದೆ. ಈ ನಡುವೆಯೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತ್ರ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಿಲ್ಲ. ಗ್ಯಾರಂಟಿ ಸ್ಕೀಂಗಳನ್ನು ಜಾರಿಗೊಳಿಸಿರುವುದೇ ಬಡವರು, ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಆಗಿದೆ. ಕಾಂಗ್ರೆಸ್ ಸರ್ಕಾರ ಇರುವವರೆಗೂ ಮುಂದುವರೆಯಲಿದೆ ಎಂಬುದಾಗಿ ಪದೇ ಪದೇ ಸ್ಪಷ್ಟ ಪಡಿಸಿದ್ದಾರೆ. ಅಂದಹಾಗೇ ಗೃಹ ಲಕ್ಷ್ಮೀ ಯೋಜನೆಗೆ ಪ್ರತಿ ತಿಂಗಳು …

Read More

ಕೆಎನ್ಎನ್ ಸಿನಿಮಾ ಡೆಸ್ಕ್: ಕಂಗನಾ ರನೌತ್ ಅಭಿನಯದ ತುರ್ತು ಪರಿಸ್ಥಿತಿಯ ಟ್ರೈಲರ್ ಅಂತಿಮವಾಗಿ ಹೊರಬಂದಿದೆ. ಬುಧವಾರ, ನಟಿ ತನ್ನ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಟ್ರೈಲರ್ ಅನ್ನು ಹಂಚಿಕೊಂಡಿದ್ದಾರೆ ಮತ್ತು ಚಿತ್ರಕ್ಕಾಗಿ ಎಲ್ಲರನ್ನೂ ಉತ್ಸುಕರಾಗಿದ್ದಾರೆ. 1975ರಲ್ಲಿ ಭಾರತದಲ್ಲಿ ನಡೆದ ಈ ಚಿತ್ರವು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ ಸಮಯದ ಸುತ್ತ ಸುತ್ತುತ್ತದೆ. ರಾಜಕೀಯ ನಾಟಕದಲ್ಲಿ, ಕಂಗನಾ ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಕಂಗನಾ ಜೊತೆಗೆ, ಅನುಪಮ್ ಖೇರ್, ಮಿಲಿಂದ್ ಸೋಮನ್, ಮಹಿಮಾ ಚೌಧರಿ ಮತ್ತು ಶ್ರೇಯಸ್ ತಲ್ಪಾಡೆ ಕೂಡ ನಟಿಸಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಪಾತ್ರದಲ್ಲಿ ಶ್ರೇಯಸ್ ತಲ್ಪಾಡೆ, ಜಯಪ್ರಕಾಶ್ ನಾರಾಯಣ್ ಪಾತ್ರದಲ್ಲಿ ಅನುಪಮ್ ಖೇರ್ ಕಾಣಿಸಿಕೊಳ್ಳಲಿದ್ದಾರೆ. ದಿವಂಗತ ನಟ ಸತೀಶ್ ಕೌಶಿಕ್ ಅವರು ಭಾರತದ ಮಾಜಿ ಉಪ ಪ್ರಧಾನಿ ಜಗಜೀವನ್ ರಾಮ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಎಮರ್ಜೆನ್ಸಿಯ ಟ್ರೈಲರ್ ಚಿತ್ರಕ್ಕಾಗಿ ನೆಟ್ಟಿಗರನ್ನು ಉತ್ಸುಕರನ್ನಾಗಿ ಮಾಡಿದೆ. ಹಲವಾರು ಅಭಿಮಾನಿಗಳು ಇದಕ್ಕೆ ಪ್ರತಿಕ್ರಿಯಿಸಿದ್ದಾರೆ ಮತ್ತು ಅದನ್ನು ನೋಡಲು “ಕಾಯಲು ಸಾಧ್ಯವಿಲ್ಲ” ಎಂದು ಹಂಚಿಕೊಂಡಿದ್ದಾರೆ.…

Read More

ಬೆಂಗಳೂರು : ಅರಣ್ಯ ಭೂಮಿಯನ್ನು ಮಾರಾಟ, ದಾನ ಮಾಡಲು ಯಾರಿಗೂ ಅವಕಾಶವಿಲ್ಲ, ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿ ಮರು ವಶಕ್ಕೆ ಪಡೆದ ಬಳಿಕ ಅಲ್ಲಿ ವೃಕ್ಷೋಧ್ಯಾನ ನಿರ್ಮಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಎಚ್.ಎಂ.ಟಿ. ವಶದಲ್ಲಿರುವ ಜಮೀನು ಪಡೆದು ಯಾರಿಗೆ ಮಾರುತ್ತೀರಿ ಎಂದು ಕೇಳಿದ್ದಾರೆ. ಅರಣ್ಯ ಭೂಮಿ ಮಾರಾಟ ಮಾಡಿರುವುದು ಈಗ ನಿಮ್ಮ ಇಲಾಖಾ ವ್ಯಾಪ್ತಿಯಲ್ಲಿರುವ ಎಚ್.ಎಂ.ಟಿ.ಯೇ ಹೊರತು ಅರಣ್ಯ ಇಲಾಖೆ ಅಲ್ಲ ಎಂದು ತಿರುಗೇಟು ನೀಡಿದರು. ಬೆಂಗಳೂರಿನ ಪ್ರಮುಖ ಭಾಗದಲ್ಲಿರುವ ಪೀಣ್ಯ ಜಾಲಹಳ್ಳಿ ಅರಣ್ಯ ಜಮೀನು ಮರು ವಶಕ್ಕೆಪಡೆದು ಶುದ್ಧ ಉಸಿರಾಟಕ್ಕೊಂದು ತಾಣ (ಲಂಗ್ ಸ್ಪೇಸ್) ನಿರ್ಮಾಣ ಮಾಡಲು ತಾವು ಬಯಸಿರುವುದಾಗಿ ತಿಳಿಸಿದರು. ಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್.ಎಂ.ಟಿ. ರಿಯಲ್ ಎಸ್ಟೇಟ್ ಸಂಸ್ಥೆಯಂತೆ ವರ್ತಿಸುತ್ತಿದೆ. 1997ರಿಂದ 2011ರವರೆಗೆ ಎಚ್.ಎಂ.ಟಿ. ಸಂಸ್ಥೆ ತನ್ನ ವಶದಲ್ಲಿದ್ದ ಅರಣ್ಯ ಭೂಮಿಯನ್ನು ಅಕ್ರಮವಾಗಿ…

Read More

ಬೆಂಗಳೂರು: ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಗ್ರಾಮ ಪಂಚಾಯತಿಗಳ ಆರು ಮಂದಿ ಮಹಿಳಾ ಅಧ್ಯಕ್ಷರು ವಿಶೇಷ ಆಹ್ವಾನಿತರಾಗಿ ಆಮಂತ್ರಣಗೊಂಡಿದ್ದು ಇವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅಭಿನಂದಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲುಕಿನ ಗೆದರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಲಕ್ಷ್ಮಿನರಸಮ್ಮ, ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಪೆರುವಾಯಿ ಗ್ರಾಮ ಪಂಚಾಯತಿ ಅಧ್ಯಕ್ಷೆ ನಫೀಜಾ, ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಕಮತನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ರಾಜೇಶ್ವರಿ ಗುತ್ತಿ, ಕಲಬುರಗಿ ಜಿಲ್ಲೆಯ ತಾಜ್ ಸುಲ್ತಾನಪುರ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಜಯಶ್ರೀ, ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಕನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ದೇವಿ ಪಿ.ಟಿ ಮತ್ತು ಚಾಮರಾಜನಗರ ತಾಲ್ಲೂಕಿನ ಅಟ್ಟಗುಳಿಪುರ ಗ್ರಾಮ ಪಂಚಾಯತಿ ಅಧ್ಯಕ್ಷೆ ಶಿವಮ್ಮ ನಾಳೆ ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲಿರುವ ವಿಶೇಷ ಆಹ್ವಾನಿತರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ…

Read More

ಬೆಂಗಳೂರು: ನಿಮ್ಮ ಕನ್ನಡ ನ್ಯೂಸ್ ನೌ ನಿನ್ನೆಯಂದು ‘KPTCL ಕಿರಿಯ ಇಂಜಿನಿಯರ್’ ವರ್ಗಾವಣೆಯಲ್ಲಿ ‘ಮಹಾ ಎಡವಟ್ಟು’: ಒಂದೇ ಹುದ್ದೆಗೆ ‘7 ಜೆಇ’ ನೇಮಕ ಎಂಬುದಾಗಿ ಸುದ್ದಿಯೊಂದನ್ನು ಪ್ರಕಟಿಸಿತ್ತು. ವೈರಲ್ ಸುದ್ದಿಯ ಹಿನ್ನಲೆಯಲ್ಲಿ ಈ ಸುದ್ದಿ ಪ್ರಕಟಿಸಿದ ನಂತ್ರ, ಕೆಪಿಟಿಸಿಎಲ್ ಹಿರಿಯ ಅಧಿಕಾರಿಗಳು ಕರೆ ಮಾಡಿ, ಅದರ ವಾಸ್ತವ ಸತ್ಯ ಸಂಗತಿ ಏನು ಎಂಬುದನ್ನು ಸ್ಪಷ್ಟವಾಗಿ ತಿಳಿಸಿಕೊಟ್ಟಿದ್ದಾರೆ. ಹಾಗಾದ್ರೆ ಒಂದೇ ಹುದ್ದೆಗೆ ಕೆಪಿಟಿಸಿಎಲ್ ನಿಂದ 7 ಕಿರಿಯ ಇಂಜಿನಿಯರ್ ವರ್ಗಾವಣೆ ಮಾಡಿದೆ ಎನ್ನುವ ವೈರಲ್ ಸುದ್ದಿಯ ಅಸಲಿ ಸತ್ಯ ಏನು ಅಂತ ಮುಂದೆ ಓದಿ. ದಿನಾಂಕ 31-07-2024ರಂದು ಕೆಪಿಟಿಸಿಎಲ್ ನಿಂದ 226 ಕಿರಿಯ ಇಂಜಿನಿಯರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿತ್ತು. ಈ ವರ್ಗಾವಣೆ ಆದೇಶದಲ್ಲಿ ಮಹಾ ಎಡವಟ್ಟು ಮಾಡಿದೆ. ಒಂದೇ ಹುದ್ದೆಗೆ 7 ಕಿರಿಯ ಇಂಜಿನಿಯರ್ ನೇಮಕ ಮಾಡಿದೆ ಎಂಬುದಾಗಿ ತಿಳಿದು ಬಂದಿತ್ತು. ಇದಷ್ಟೇ ಅಲ್ಲದೇ ಕನಿಷ್ಠ 4 ವರ್ಷ ಗ್ರೂಪ್-ಸಿ ಪದವೃಂದದ ನೌಕರರು ಆ ಹುದ್ದೆಯಲ್ಲಿ ಕೆಲಸ ಮಾಡಿದ್ದರೇ ಮಾತ್ರವೇ ವರ್ಗಾವಣೆ…

Read More

ಬೆಂಗಳೂರು: ಎಐಸಿಸಿಯಿಂದ ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಿಗೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಮಾಡಿದೆ. ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಸೌಮ್ಯ ರೆಡ್ಡಿ ಅವರನ್ನು ನೇಮಿಸಲಾಗಿದೆ. ಈ ಕುರಿತಂತೆ ಎಐಸಿಸಿಯ ಜನರಲ್ ಸೆಕ್ರೇಟರಿ ಕೆ.ಸಿ ವೇಣುಗೋಪಾಲ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಅಧ್ಯಕ್ಷರ ಅನುಮತಿಯ ಮೇರೆಗೆ ಆಂಧ್ರಪ್ರದೇಶದ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಚುಕು ನಾಚಿ ಅವರನ್ನು ನೇಮಕ ಮಾಡಲಾಗಿದೆ ಅಂತ ತಿಳಿಸಿದ್ದಾರೆ. ಇನ್ನೂ ಚಂಡೀಗಡದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನಂದಿತಾ ಹೂಡ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯನ್ನಾಗಿ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರನ್ನು ನೇಮಕ ಮಾಡಲಾಗಿರುವುದಾಗಿ ತಿಳಿಸಿದ್ದಾರೆ. https://kannadanewsnow.com/kannada/good-news-for-students-in-the-state-4-new-courses-to-be-started-in-45-colleges/ https://kannadanewsnow.com/kannada/landslide-case-near-shirur-several-parts-of-a-lorry-found-in-gangavali-river/

Read More