Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಇಂಡಿಗೋ ಏರ್ ಹೋಸ್ಟೆಸ್ ಮತ್ತು ಪೈಲಟ್ ಪ್ರೇಮಕಥೆ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ ನಂತರ ಇಂಟರ್ನೆಟ್ನ ಹೃದಯಗಳನ್ನು ಗೆದ್ದಿದ್ದಾರೆ. ಅವರ ಲವ್ ಸ್ಟೋರಿ ಏನು ಅಂತ ಮುಂದೆ ಓದಿ. ಇಂಡಿಗೋ ಕ್ಯಾಬಿನ್ ಸಿಬ್ಬಂದಿ ಸದಸ್ಯೆಯಾಗಿ ಕೆಲಸ ಮಾಡುತ್ತಿರುವ ಸುಶ್ಮಿತಾ ಸುಭಾಷ್, ಇಂಡಿಗೋ ಪೈಲಟ್ ಸುಭಮ್ ಸೋನಿಯೊಂದಿಗಿನ ತಮ್ಮ ಸಂಬಂಧದ ವಿಶೇಷ ಕ್ಷಣವನ್ನು ದಾಖಲಿಸುವ ವೀಡಿಯೊವನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಈ ಕಿರು ಕ್ಲಿಪ್ನಲ್ಲಿ ಸುಭಮ್ ಒಂದು ಮೊಣಕಾಲಿನ ಮೇಲೆ ಕುಳಿತು ಸುಶ್ಮಿತಾಗೆ ಹೂವುಗಳನ್ನು ಅರ್ಪಿಸುವುದನ್ನು ಸೆರೆಹಿಡಿಯಲಾಗಿದೆ, ಇಬ್ಬರೂ ತಮ್ಮ ವಿಮಾನಯಾನ ಸಮವಸ್ತ್ರವನ್ನು ಧರಿಸಿರುತ್ತಾರೆ. ನಂತರ, ದಂಪತಿಗಳು ತಮ್ಮ ಸಂಗೀತ ಸಮಾರಂಭದಲ್ಲಿ ಒಟ್ಟಿಗೆ ನೃತ್ಯ ಮಾಡುತ್ತಾರೆ. ಅವರ ವಿವಾಹ ಆಚರಣೆಗಳ ಒಂದು ನೋಟವನ್ನು ನೀಡುತ್ತಾರೆ. ಪೈಲಟ್ ಆದ ನಂತರ ಸುಭಮ್ “ಬದಲಾಗುತ್ತಾರೆ” ಎಂದು ಸುಶ್ಮಿತಾಗೆ ಆಗಾಗ್ಗೆ ಹೇಳಲಾಗುತ್ತಿತ್ತು ಎಂದು ಪಠ್ಯ ಓವರ್ಲೇ ಸೂಚಿಸುತ್ತದೆ – ವೀಡಿಯೊ ಸೂಕ್ಷ್ಮವಾಗಿ ಪ್ರತಿವಾದಿಸುತ್ತದೆ, ದಂಪತಿಗಳು ಈಗ ಸಂತೋಷದಿಂದ ಮದುವೆಯಾಗಿದ್ದಾರೆ ಎಂದು ತೋರಿಸುತ್ತದೆ. ಜನರು ಪೈಲಟ್ನಂತೆ ಇದ್ದಾಗ ಬನ್ನೆ ಕೆ…
ವಿಜಯನಗರ: ಜಿಲ್ಲೆಯಲ್ಲಿ ಮಗನಿಂದಲೇ ತಂದೆ-ತಾಯಿ, ಸಹೋದರಿಯನ್ನು ಬರ್ಬರವಾಗಿ ಹತ್ಯೆಗೈದಿರುವಂತ ಭೀಕರ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಪುತ್ರ ಅಕ್ಷಯ್ ಎಂಬಾತನೇ ಈ ಕೃತ್ಯ ಎಸಗಿದಂತ ಆರೋಪಿಯಾಗಿದ್ದಾನೆ. ತನ್ನ ತಂದೆ-ತಾಯಿ, ಸಹೋದರಿಯನ್ನು ಕೊಲೆಗೈದಿರುವಂತ ಆರೋಪಿ, ಬೆಂಗಳೂರಿಗೆ ಪರಾರಿಯಾಗಿರುವಂತ ಶಂಕೆಯನ್ನು ಪೊಲೀಸರು ವ್ಯಕ್ತ ಪಡಿಸಿದ್ದಾರೆ. ಕೊಲೆ ಆರೋಪಿ ಅಕ್ಷಯ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಕೊಲೆ ಮಾಡಿದ ಬಳಿಕ ಬೆಂಗಳೂರಿನ ತಿಲಕ್ ನಗರ ಠಾಣೆಗೆ ತೆರಳಿ ಅಸ್ಪಷ್ಟವಾಗಿ ಕೊಲೆಗೈದ ಮಾಹಿತಿಯನ್ನು ಪೊಲೀಸರ ಮುಂದೆ ನೀಡಿದ್ದಾನೆ ಎನ್ನಲಾಗಿದೆ. ಆ ಬಳಿಕ ನಾಪತ್ತೆಯಾಗಿದ್ದಾನೆ. https://kannadanewsnow.com/kannada/groom-stabbed-while-on-his-way-to-security/ https://kannadanewsnow.com/kannada/government-gives-green-signal-to-fill-2000-vacant-teaching-posts-in-government-colleges-in-the-state/
ಚಾಮರಾಜನಗರ: ಜಿಲ್ಲೆಯಲ್ಲಿ ಆರಕ್ಷತೆಗೆ ತೆರವ ವೇಳೆಯಲ್ಲಿ ವರನನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದಂತ ಘಟನೆ ನಡೆದಿದೆ. ಗಾಯಗೊಂಡಿದ್ದಂತ ರವೀಶ್ ಎಂಬಾತನನ್ನು ಭೇಟಿಯಾಗಲು ಆಸ್ಪತ್ರೆಗೆ ವಧು ನಯನಾ ಭೇಟಿಯಾಗೋದಕ್ಕೆ ಹೋದಾಗ ಅವರ ಭೇಟಿಗೆ ನಿರಾಕರಿಸಿರುವಂತ ಘಟನೆ ನಡೆದಿದೆ. ಚಾಮರಾಗನಗರದ ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಚಾಕು ಇರಿತಕ್ಕೆ ಒಳಗಾಗಿದ್ದಂತ ವರ ರವೀಶ್ ಚಿಕಿತ್ಸೆ ಪಡೆಯುತ್ತಿದ್ದರು. ಅವರನ್ನು ವಧು ನಯನಾ ಭೇಟಿಯಾಗೋದಕ್ಕೆ ತೆರಳಿದ್ದರು. ಆದರೇ ಆಕೆಯನ್ನು ಭೇಟಿಯಾಗೋದಕ್ಕೆ ರವೀಶ್ ನಿರಾಕರಿಸಿದ್ದಾರೆ. ಆದರೇ ನಯನಾ ಮಾತ್ರ ನನ್ನನ್ನೇ ಮದುವೆಯಾಗುವಂತೆ ಆತನನ್ನು ಬೇಡಿಕೊಂಡಿದ್ದಾರೆ ಎನ್ನಲಾಗಿದೆ. ಮದುವೆಗೆ ರವೀಶ್ ಒಪ್ಪದ ಹಿನ್ನಲೆಯಲ್ಲಿ ವದು ನಯನಾ ವಾಪಾಸ್ ತೆರಳಿದ್ದಾರೆ. ಇನ್ನೂ ವರ ರವೀಶ್ ಅವರನ್ನು ಅಡ್ಡಗಟ್ಟಿ ಚಾಕು ಇರಿದಂತ ಆರೋಪಿಗಳ ಬಂಧನಕ್ಕಾಗಿ ವಿಶೇಷ ತಂಡವನ್ನು ಪೊಲೀಸರು ರಚಿಸಿದ್ದಾರೆ. ಆರೋಪಿಗಳಿಗಾಗಿ ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಮತ್ತೊಂದೆಡೆ ಪೊಲೀಸರ ತನಿಖೆಯ ವೇಳೆಯಲ್ಲಿ ವಧುವಿನ ಪ್ರಿಯಕರನೇ ಆರತಕ್ಷತೆಗೆ ತೆರಳುತ್ತಿದ್ದಂತ ವರನ ಮೇಲೆ ದಾಳಿ ನಡೆಸಿ, ಚಾಕುವಿನಿಂದ ಇರಿದು ಕೃತ್ಯ ಎಸಗಿರೋದು ದೃಢಪಟ್ಟಿದೆ. ಸದ್ಯದಲ್ಲೇ…
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸ್ಥಳೀಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ “ನಿಷ್ಕಾಮ ಸೇವೆ ದ್ಯೇಯದ” ಅಡಿಯಲ್ಲಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಗೃಹರಕ್ಷಕರಾಗಲು ಬೇಕಾದಆರ್ಹತೆ:-ಭಾರತೀಯ ಪ್ರಜೆಯಾಗಿರಬೇಕು. 19 ವರ್ಷದ ಮೇಲ್ಪಟ್ಟು 45 ವರ್ಷಕ್ಕಿಂತಕಡಿಮೆ ವಯಸ್ಸಿನವರಾಗಿದ್ದು, 10ನೇ ತರಗತಿ ಉತ್ತೀರ್ಣರಾಗಿರ ಬೇಕು. ವೈದ್ಯಕೀಯವಾಗಿ ಸಶಕ್ತರಾಗಿರ ಬೇಕು. ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು / ಆರೋಪ ಅಥವಾ ಅಪರಾಧಿ ಎಂದು ದಾಖಲಾಗಿರದಿದ್ದಲ್ಲಿ ಅಂತಹವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಸಕ್ತರು ನಿಗದಿತ ಅರ್ಜಿಯನ್ನು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಿವಮೊಗ್ಗ. 08182 – 295630 & 255630 ಅಥವ ಜಿಲ್ಲೆಯ ಎಲ್ಲಾ ಗೃಹರಕ್ಷಕ ದಳ ಘಟಕ/ ಉಪ ಘಟಕಗಳ ಕಛೇರಿಗಳಲ್ಲಿ ಪಡೆದು, ಭರ್ತಿಮಾಡಿದ ಅರ್ಜಿಗಳನ್ನು ಫೆ. 03 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಸಮಾದೇಷ್ಟರು ಡಾ. ಚೇತನ ಹೆಚ್.ಪಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಗೃಹರಕ್ಷಕ ದಳ ಘಟಕ ಉಪ ಘಟಕ ಮತ್ತು ಘಟಕಾಧಿಕಾರಿಗಳು…
ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುತಾತ್ಮ ದಿನಾಚರಣೆ ಅಂಗವಾಗಿ ಮಹಾತ್ಮಾಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರಮಾಧ್ಯಮದವರೊಂದಿಗೆ ಮಾತನಾಡಿದರು. ಮಹಾತ್ಮಾಗಾಂಧೀಜಿಯವರು ದೇಶಕ್ಕೆ ನೀಡಿದ ಕೊಡುಗೆಯನ್ನು ಇಂದಿನ ದಿನ ಸ್ಮರಿಸಲಾಗುತ್ತಿದೆ. ಭಾರತ ಹಳ್ಳಿಗಳ ದೇಶವಾಗಿದ್ದು, ಅಂದು ಶೇ.80 ರಷ್ಟು ಜನ ಹಳ್ಳಿಗಳಲ್ಲಿ ವಾಸಿಸುತ್ತಿದ್ದರು. ಗ್ರಾಮಗಳು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಸ್ವಾವಲಂಬಿಯಾಗಬೇಕು. ಗ್ರಾಮಗಳ ಪ್ರಗತಿಯಲ್ಲಿಯೇ ದೇಶದ ಪ್ರಗತಿ ಅಡಗಿದೆ ಎಂದು ಅವರು ನುಡಿದಿದ್ದರು. ಪಂಚಾಯತಿಗಳಿಗೆ ಮಹಾತ್ಮಾಗಾಂಧೀಜಿ ಹೆಸರು ರಾಜ್ಯದಲ್ಲಿ ಸುಮಾರು 6 ಸಾವಿರ ಪಂಚಾಯ್ತಿಗಳಿವೆ. ಅವುಗಳಿಗೆ ಮಹಾತ್ಮಾಗಾಂಧಿಯವರ ಹೆಸರು ಇಡಬೇಕೆಂಬ ನಿರ್ಧಾರವನ್ನು ಕೈಗೊಳ್ಳಲಿದ್ದೇವೆ. ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ್ದರು. ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿಯಿಂದ ಅಲ್ಲ ಎಂಬುದನ್ನು ಪ್ರತಿಪಾದಿಸಿದ್ದುದಾಗಿ ತಿಳಿಸಿದರು. ಗಾಂಧೀಜಿಯವರ ಕೊಡುಗೆಯನ್ನು ಇಡೀ ದೇಶ ಸ್ಮರಿಸುತ್ತದೆ ಇಂತಹ ಮಹಾನ್ ಚೇತನ ಗುಂಡೇಟಿಗೆ ಬಲಿಯಾಗಿ ನಮ್ಮನ್ನ…
ಶಿವಮೊಗ್ಗ : ಕೇಂದ್ರ ಸರ್ಕಾರದಿಂದ ಬಜೆಟ್ ಅಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಇದರ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಯಾರೂ ದನಿ ಎತ್ತಿಲ್ಲ. ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವ್ಯಂಗ್ಯವಾಡಿದರು. ಶಿವಮೊಗ್ಗ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಕೇಂದ್ರ ಬಜೆಟ್ ಬಗೆಗಿನ ನಿರೀಕ್ಷೆಗಳ ಬಗ್ಗೆ ಕೇಳಿದಾಗ, “ಕೇಂದ್ರ ಬಜೆಟ್ ಅಲ್ಲಿ ಕೊಟ್ಟ ಮಾತನ್ನೇ ಉಳಿಸಿಕೊಂಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಕೊಡುತ್ತೇನೆ ಎಂದು ಹೇಳಿ ಕೊಟ್ಟಿಲ್ಲ” ಎಂದು ತಿವಿದರು. ಬಿಜೆಪಿ ಹಗರಣಗಳನ್ನು ಬಯಲು ಮಾಡೋಣ ಕಾಂಗ್ರೆಸ್ ಭ್ರಷ್ಟಾಚಾರ ಎಂದು ಬಿಜೆಪಿ ಪೋಸ್ಟರ್ ಅಭಿಯಾನ ಹಾಗೂ ತಿಮ್ಮಾಪುರ ಅವರ ರಾಜಿನಾಮೆಗೆ ಪಟ್ಟು ಹಿಡಿದಿರುವ ಬಗ್ಗೆ ಕೇಳಿದಾಗ,“ಬಿಜೆಪಿಯವರ ಹಗರಣಗಳನ್ನು ನಾವು ಸಹ ಸಾಕಷ್ಟು ಬಿಚ್ಚಿದ್ದೇವೆ. ಕೋವಿಡ್ ಸೇರಿದಂತೆ ಹಿಂದೆ ಇದ್ದಂತಹ ಅನೇಕ ಆರೋಪಗಳಿವೆ. ನಾವು ಅವುಗಳನ್ನು ಬಯಲು ಮಾಡೋಣ. ರಾಜಕೀಯ…
ಕೆಎನ್ಎನ್ ಸಿನಿಮಾ ಡೆಸ್ಕ್: ಇಂದು ದಿ ಕೇರಳ ಸ್ಟೋರಿ 2: ಗೋಸ್ ಬಿಯಾಂಡ್ನ ಮೊದಲ ಟೀಸರ್ ಅಧಿಕೃತವಾಗಿ ಬಿಡುಗಡೆಯಾಗಿದೆ. ವಿಪುಲ್ ಅಮೃತ್ಲಾಲ್ ಶಾ ಮತ್ತು ಸಹ-ನಿರ್ಮಾಪಕ ಆಶಿನ್ ಎ ಷಾ ನಿರ್ಮಿಸಿದ ಮತ್ತು ರಾಷ್ಟ್ರೀಯ ಪ್ರಶಸ್ತಿ ವಿಜೇತ ಕಾಮಾಖ್ಯ ನಾರಾಯಣ್ ಸಿಂಗ್ ನಿರ್ದೇಶಿಸಿದ ಪಾರ್ಟ್-2 ದೃಷ್ಟಿಕೋನದಲ್ಲಿ ಗಮನಾರ್ಹ ಬದಲಾವಣೆಯನ್ನು ನೀಡುತ್ತದೆ. ದುಃಖದ ದಾಖಲೀಕರಣದಿಂದ ಪ್ರತಿಭಟನೆಯ ನಿರೂಪಣೆಗೆ ಚಲಿಸುತ್ತದೆ. ಕೇರಳ ಸ್ಟೋರಿ 2 ತಯಾರಕರು ಟೀಸರ್ ಅನ್ನು ನಮ್ಮ ಹೆಣ್ಣುಮಕ್ಕಳು ಪ್ರೀತಿಯಲ್ಲಿ ಬೀಳುವುದಿಲ್ಲ, ಅವರು ಬಲೆಗಳಲ್ಲಿ ಬೀಳುತ್ತಾರೆ. ಅಬ್ ಸಹೇಂಗೆ ನಹಿಂ… ಲಡೇಂಗೆ ಎಂಬ ಶೀರ್ಷಿಕೆಯೊಂದಿಗೆ ಅನಾವರಣಗೊಳಿಸಿದರು. ಕೇರಳ ಸ್ಟೋರಿ 2 ಟೀಸರ್ ಉಲ್ಕಾ ಗುಪ್ತಾ, ಐಶ್ವರ್ಯಾ ಓಜಾ ಮತ್ತು ಅದಿತಿ ಭಾಟಿಯಾ ಒಳಗೊಂಡ ಹೊಸ ಪ್ರಮುಖ ಪಾತ್ರವರ್ಗವನ್ನು ಪರಿಚಯಿಸುತ್ತದೆ. ಆರಂಭದಲ್ಲಿ, ದೃಶ್ಯಗಳು ಮೂವರು ಯುವ ಹಿಂದೂ ಮಹಿಳೆಯರು ಸಾಮಾನ್ಯ ಜೀವನವನ್ನು ನಡೆಸುತ್ತಿರುವುದನ್ನು ಚಿತ್ರಿಸುತ್ತದೆ. ಇದನ್ನು ಪ್ರಣಯ ಮತ್ತು ಭಾವನಾತ್ಮಕ ನಂಬಿಕೆಯಿಂದ ವ್ಯಾಖ್ಯಾನಿಸಲಾಗಿದೆ. ಆದಾಗ್ಯೂ, ಧಾರ್ಮಿಕ ಮತಾಂತರದ ಗುಪ್ತ ಕಾರ್ಯಸೂಚಿ ಬೆಳಕಿಗೆ ಬರುತ್ತಿದ್ದಂತೆ…
ಮೈಸೂರು: ಕೆಲ ದಿನಗಳ ಹಿಂದೆ ಜಿಲ್ಲೆಯ ಬ್ಯಾಂಕ್ ಒಂದರಲ್ಲಿ ಇರಿಸಲಾಗಿದ್ದಂತ ಚಿನ್ನದ ತೂಕದಲ್ಲೇ ಕಡಿಮೆಯಾಗಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಬೆನ್ನಲ್ಲೇ ಬ್ಯಾಂಕ್ ನಲ್ಲಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು, ಬರೋಬ್ಬರಿ 56.78 ಲಕ್ಷ ಸಾಲ ಪಡೆದು ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರಿನ ನಾರಾಯಣಶಾಸ್ತ್ರಿ ರಸ್ತೆಯಲ್ಲಿ ತಮಿಳುನಾಡು ಮೂಲದ ಮರ್ಕೆಂಟೈಲ್ ಬ್ಯಾಂಕ್ ಇದೆ. ಈ ಬ್ಯಾಂಕಿನಲ್ಲಿ ನಕಲಿ ಚಿನ್ನಾಭರಣವನ್ನು ಗಿರವಿ ಇಟ್ಟಿರುವಂತ ವಂಚಕರು, ಬರೋಬ್ಬರಿ 56.78 ಲಕ್ಷ ರೂಪಾಯಿ ಪಡೆದು ವಂಚಿಸಿರೋದು ತಿಳಿದು ಬಂದಿದೆ. ಬ್ಯಾಂಕ್ ಸಿಬ್ಬಂದಿ ಸುರೇಶ್ ಕಣ್ಣನ್ ಎಂಬುವರು ಮೈಸೂರಿನ ದೇವರಾಜ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಈ ದೂರಿನ ಹಿನ್ನಲೆಯಲ್ಲಿ 7 ಮಂದಿ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ. ಮೈಸೂರಿನ ಅಬ್ದುಲ್ ಜಲೀಲ್, ಮಂಡ್ಯದ ಸಾಗರ್, ಪುಟ್ಟರಾಜು, ರವಿಕುಮಾರ್, ಆತನ ಪತ್ನಿ ದಿವ್ಯಾ, ಬೆಂಗಳೂರಿನ ನಾಗರತ್ನ ರೆಡ್ಡಿ ಹಾಗೂ ಟಿ ನರಸೀಪುರದ ರವೀಂದ್ರ ಕುಮಾರ್ ಎಂಬುವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.…
ಬೆಂಗಳೂರು: ರಾಜ್ಯ ಸರ್ಕಾರದಿಂದ ಪೊಲೀಸ್ ಸಿಬ್ಬಂದಿಗಳಿಗೆ ಭರ್ಜರಿ ಗಿಫ್ಟ್ ಎನ್ನುವಂತೆ ಇನ್ನುಂದೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಗಳಿಗೆ ಸಾಂದರ್ಭಿಕ ರಜೆ ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಡಿಜಿ ಮತ್ತು ಐಜಿಪಿ ಡಾ.ಸಲೀಂ ಅವರು ಸುತ್ತೋಲೆ ಹೊರಡಿಸಿದ್ದು, ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಜಾರಿಯನ್ನು ಖಚಿತಪಡಿಸಿಕೊಳ್ಳಲು ಕಠಿಣ ಪರಿಸ್ಥಿತಿಗಳಲ್ಲಿ ಕೆಲಸ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವಗಳಂತಹ ವೈಯಕ್ತಿಕ ಕಾರ್ಯಕ್ರಮಗಳನ್ನು ಆಚರಿಸುವುದು ಬಹಳ ಮಹತ್ವದ್ದಾಗಿದೆ. ಈ ವಿಶೇಷ ದಿನಗಳಲ್ಲಿ ರಜೆ ಪಡೆಯುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾವನಾತ್ಮಕವಾಗಿ ಪುನಶ್ಚತನಗೊಳ್ಳಲು, ಕುಟುಂಬದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಲು ಹಾಗೂ ಕರ್ತವ್ಯ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ. ಇದರಿಂದ ಮನೋಬಲ ವೃದ್ಧಿಯಾಗುತ್ತದೆ, ಒತ್ತಡ ಲಡಿಮೆಯಾಗುತ್ತದೆ ಮತ್ತು ಒಟ್ಟಾರೆ ಕೆಲಸದ ತೃಪ್ತಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದಿದ್ದಾರೆ. ಈ ಮಾನವೀಯ ಕಾರ್ಯವು ಅವರ ತ್ಯಾಗಗಳನ್ನು ಗುರುತಿಸುವುದರ ಜೊತೆಗೆ ನಿಷ್ಠೆಯನ್ನು ಬೆಳೆಸುತ್ತದೆ ಮತ್ತು ಪೊಲೀಸ್ ಪಡೆಯ ಬದ್ಧತೆಯನ್ನು ಬಲಪಡಿಸಿ, ಸೇವೆಯಲ್ಲಿ ಉತ್ತಮ ಶಿಸ್ತು…
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯರು ಖಾಸಗಿ ಆಸ್ಪತ್ರೆ, ಕ್ಲಿನಿಕ್ ನಡೆಸುವುದರ ಬಗ್ಗೆ ಹಲವು ದೂರುಗಳು ಸರ್ಕಾರಕ್ಕೆ ಸಲ್ಲಿಕೆಯಾಗಿದ್ದವು. ಈ ಹಿನ್ನಲೆಯಲ್ಲಿ ಇನ್ಮುಂದೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಕೇವಲ ಹೊರ ರೋಗಿಗಳ ಸೇವೆಯಡಿ (OPD) ತಮ್ಮ ಖಾಸಗಿ ಕ್ಲಿನಿಕ್ ಗಳಲ್ಲಿ ಚಿಕಿತ್ಸೆ ನೀಡಬೇಕೇ ಹೊರತು, ಒಳ ರೋಗಿಗಳ ಸೇವೆಯಡಿ ( IPD) ಚಿಕಿತ್ಸೆ ನೀಡುವಂತಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಆದೇಶದಲ್ಲಿ ಖಡಕ್ ಮಾಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದ್ದು, ಅಸ್ತಿತ್ವದಲ್ಲಿರುವ ಸರ್ಕಾರಿ ಆದೇಶಗಳ ಪ್ರಕಾರ, ಸರ್ಕಾರಿ ವೈದ್ಯರು ಖಾಸಗಿ ಅಭ್ಯಾಸವನ್ನು ಕೈಗೊಳ್ಳಲು ಅನುಮತಿ ಪಡೆದಿದ್ದಾರೆ. ಆದರೆ ಅಂತಹ ಅಭ್ಯಾಸವು ಅವರ ನಿಯಮಿತ ಸರ್ಕಾರಿ ಕರ್ತವ್ಯಗಳಿಗೆ ಅಡ್ಡಿಯಾಗಬಾರದು ಎಂಬುದಾಗಿ ತಿಳಿಸಿದೆ. ಒಳರೋಗಿಗಳಿಗೆ ನಿರಂತರ ಆರೈಕೆಯನ್ನು ಒದಗಿಸುವ ಅವಶ್ಯಕತೆಯ ಕಾರಣದಿಂದಾಗಿ, ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳ ಚಿಕಿತ್ಸೆಗಾಗಿ ಸರ್ಕಾರಿ ವೈದ್ಯರು ನಡೆಸುವ ಖಾಸಗಿ ಅಭ್ಯಾಸವು ಸರ್ಕಾರಿ ಆಸ್ಪತ್ರೆಗಳಲ್ಲಿ ಅವರ ಸೇವೆಗಳ ವಿತರಣೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ಈ ಕಾರಣದಿಂದಾಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ…














