Subscribe to Updates
Get the latest creative news from FooBar about art, design and business.
Author: kannadanewsnow09
ಸಿಕ್ಕೀಂ: ಸಿಕ್ಕಿಂನಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಭಾರತೀಯ ಫುಟ್ಬಾಲ್ ಐಕಾನ್ ಬೈಚುಂಗ್ ಭುಟಿಯಾ ಮಂಗಳವಾರ ರಾಜಕೀಯವನ್ನು ತೊರೆಯುವುದಾಗಿ ಘೋಷಿಸಿದ್ದಾರೆ. ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ (ಎಸ್ಡಿಎಫ್) ಉಪಾಧ್ಯಕ್ಷ ಬೈಚುಂಗ್ ಅವರು ಬರ್ಫಂಗ್ ಕ್ಷೇತ್ರದಲ್ಲಿ ಎಸ್ಕೆಎಂನ ರಿಕ್ಷಲ್ ದೋರ್ಜಿ ಭುಟಿಯಾ ವಿರುದ್ಧ ಸೋತಿದ್ದಾರೆ. 2014 ರಲ್ಲಿ ಪಶ್ಚಿಮ ಬಂಗಾಳದ ಆಡಳಿತಾರೂಢ ಟಿಎಂಸಿ ಅವರನ್ನು ಡಾರ್ಜಿಲಿಂಗ್ ಲೋಕಸಭಾ ಸ್ಥಾನಕ್ಕೆ ತನ್ನ ಅಭ್ಯರ್ಥಿಯಾಗಿ ಘೋಷಿಸಿದಾಗ ಅವರು ರಾಜಕೀಯಕ್ಕೆ ಸೇರಿದರು. 2018 ರಲ್ಲಿ, ಅವರು ಹಮ್ರೊ ಸಿಕ್ಕಿಂ ಪಕ್ಷವನ್ನು ರಚಿಸುವ ಮೂಲಕ ತಮ್ಮ ರಾಜ್ಯದ ರಾಜಕೀಯ ರಂಗಕ್ಕೆ ಧುಮುಕಿದರು. ಕಳೆದ ವರ್ಷ ಅವರು ತಮ್ಮ ಪಕ್ಷವನ್ನು ಪವನ್ ಚಾಮ್ಲಿಂಗ್ ನೇತೃತ್ವದ ಎಸ್ಡಿಎಫ್ನೊಂದಿಗೆ ವಿಲೀನಗೊಳಿಸಿದ್ದರು. “ಮೊದಲನೆಯದಾಗಿ, ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕಾಗಿ ಪಿಎಸ್ ತಮಾಂಗ್ ಮತ್ತು ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್ಕೆಎಂ) ಅನ್ನು ನಾನು ಅಭಿನಂದಿಸಲು ಬಯಸುತ್ತೇನೆ. ಸಿಕ್ಕಿಂನ ಜನರು ಅವರಿಗೆ ಅದ್ಭುತ ಜನಾದೇಶವನ್ನು ನೀಡಿದ್ದಾರೆ ಮತ್ತು ಎಸ್ಕೆಎಂ ಸರ್ಕಾರವು ಅವರ ಭರವಸೆಗಳನ್ನು ಈಡೇರಿಸಲು ಮತ್ತು ಸಿಕ್ಕಿಂ…
ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸಭೆಯ ನಂತರ ಪ್ರಕಟಿಸಿದರು. “ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರನ್ನು ನೇಮಕ ಮಾಡುವ ನಿರ್ಧಾರವನ್ನು ತಿಳಿಸುವ ಮೂಲಕ ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅವರಿಗೆ ಪತ್ರ ಬರೆದಿದ್ದೇನೆ” ಎಂದು ವೇಣುಗೋಪಾಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಇಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ‘ಜೈ ಸಂವಿಧಾನ್’ (ಸಂವಿಧಾನಕ್ಕೆ ಜೈ) ಕರೆ ನೀಡಿದ ರಾಹುಲ್ ಗಾಂಧಿ 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸಂವಿಧಾನದ ಕೈಯಲ್ಲಿ, ಅನೇಕ ವಿರೋಧ ಪಕ್ಷದ ಸಂಸದರು ಸೋಮವಾರ ಲೋಕಸಭೆಗೆ ಮೆರವಣಿಗೆಯೊಂದಿಗೆ ಸಂಸತ್ತಿನಲ್ಲಿ ತಮ್ಮ ಚುನಾವಣಾ ಪುನರುಜ್ಜೀವನದ ಹೇಳಿಕೆಯಲ್ಲಿ 18 ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸಂಸತ್ತಿನ ಕೆಳಮನೆಯ ಮೊದಲ ಅಧಿವೇಶನದ ಎರಡನೇ ದಿನವಾದ ಮಂಗಳವಾರ 18 ನೇ ಲೋಕಸಭೆಗೆ ಹೊಸದಾಗಿ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ಸ್ವೀಕಾರ ಪುನರಾರಂಭವಾಯಿತು.…
ಬೆಂಗಳೂರು : ನಂದಿನಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚ 2.00 ರೂ.ಗಾಳನ್ನು ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು. ಅವರು ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸರ್ಕಾರ ಜನರಿಗೆ ಕೊಟ್ಟಿರುವ ಗ್ಯಾರಂಟಿ ಭಾಗ್ಯ ಎಂದು ಹಾಲಿನ ದರ ಏರಿಕೆ ಬಗ್ಗೆ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾಸ್ವಾಮಿ ಅವರು ಮಾಡಿರುವ ಟೀಕೆ ಬಗ್ಗೆ ಪ್ರತಿಕ್ರಿಯೆ ನೀಡಿ ನಾಳೆ ಈ ಬಗ್ಗೆ ಜಾಹೀರಾತು ನೀಡಲಾಗುತ್ತಿದೆ. ಬೆಲೆ ಏರಿಕೆ ಮಾಡಿಲ್ಲ. ಹಾಲಿನ ಪ್ರಮಾಣ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚದ ಮೊತ್ತವನ್ನು ಹೆಚ್ಚಿಸಲಾಗಿದೆ ಎಂದರು. ಹಾಲಿನ ಉತ್ಪಾದನೆ ಜಾಸ್ತಿಯಾಗಿದ್ದು ಮಾರುಕಟ್ಟೆ ವ್ಯವಸ್ಥೆ ಇಲ್ಲದ ಕಾರಣ ಹೆಚ್ಚು ಹಾಲು ನೀಡಿ ದರ ಹೆಚ್ಚಿಸಲಾಗಿದೆ ಎಂದರು. ಕುರಿಗಾಹಿಗಳು ಕುರಿತ ಬಜೆಟ್ ಘೋಷಣೆಗಳಿಗೆ ಸರ್ಕಾರಿ ಆದೇಶ ಕುರಿಗಾಹಿಗಳು ಬಂದೂಕು ಪರವಾನಗಿ, ಸಂಚಾರಿ ಕುರಿಗಾಹಿಗಳ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ, ಆಸ್ಪತ್ರೆಗಳಲ್ಲಿ ಔಷಧಿ, ಚಿಕಿತ್ಸೆ ದೊರೆಯಬೇಕು.…
ಹಾಸನ: ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಈಗಾಗಲೇ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. ಈ ಬೆನ್ನಲ್ಲೇ ಡಾ.ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಇಂದು ಹಾಸನ ಜಿಲ್ಲೆಯ ಹೊಳೇನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡಾ.ಸೂರಜ್ ರೇವಣ್ಣ ವಿರುದ್ಧ 3 ವರ್ಷಗಳ ಹಿಂದೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬುದಾಗಿ ಹೊಳೆನರಸೀಪುರ ಮೂಲದ ಯುವಕನೊಬ್ಬ ನೀಡಿದಂತ ದೂರಿನ ಹಿನ್ನಲೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 377, 342, 506ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಹೀಗಾಗಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾದಂತೆ ಆಗಿದೆ. https://kannadanewsnow.com/kannada/state-government-issues-guidelines-for-transfer-of-government-employees-for-the-year-2024-25/ https://kannadanewsnow.com/kannada/anganwadi-workers-permanent-this-is-congress-govts-6th-guarantee-mla-belur-gopalakrishna/
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲು ನಿಗದಿ ಪಡಿಸಲಾಗಿದ್ದಂತ ಪಿಜಿಸಿಇಟಿ-2024ರ ಪರೀಕ್ಷೆಯನ್ನು ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಮುಂದೂಡಿಕೆ ಮಾಡಿ ಆದೇಶಿಸಲಾಗಿದೆ. ಈ ಕುರಿತಂತೆ ಕೆಇಎ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೆಲವು ವಿಶ್ವವಿದ್ಯಾಲಯಗಳು 2024 ರ ಜುಲೈ 5 ಮತ್ತು 10 ರಿಂದ ಅಂತಿಮ ಸೆಮಿಸ್ಟರ್ ಪರೀಕ್ಷೆಗಳನ್ನು ಪ್ರಾರಂಭಿಸುತ್ತಿರುವುದರಿಂದ 2024 ರ ಜುಲೈ 13 ಮತ್ತು 14 ರಂದು ನಡೆಯಬೇಕಿದ್ದ ಪಿಜಿಸಿಇಟಿ -2024 ಪರೀಕ್ಷೆಯನ್ನು ಮುಂದೂಡುವಂತೆ ಅನೇಕ ವಿದ್ಯಾರ್ಥಿಗಳು ಕೆಇಎಗೆ ವಿನಂತಿಗಳನ್ನು ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಇಎ 2024ರ ಜುಲೈ 13 ಮತ್ತು 14ರಂದು ನಡೆಯಬೇಕಿದ್ದ ಪಿಜಿಸಿಇಟಿ-2024 ಪರೀಕ್ಷೆಯನ್ನು ಮುಂದೂಡಿದ್ದು, ಪರಿಷ್ಕೃತ ದಿನಾಂಕಗಳನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು ಅಂತ ತಿಳಿಸಿದೆ. ಇದಲ್ಲದೆ, ಎಂಬಿಎ, ಎಂಸಿಎ, ಎಂಇ / M.Tech/M.Tech, M.ಆರ್ಕಿಟೆಕ್ಚರ್ ಕೋರ್ಸ್ಗಳ ಪ್ರವೇಶಕ್ಕಾಗಿ ಪಿಜಿಸಿಇಟಿ -2024 ಗೆ ನೋಂದಾಯಿಸಲು ಮತ್ತು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 26-06-2024 ರಂದು ಬೆಳಿಗ್ಗೆ 11.00…
ಶಿವಮೊಗ್ಗ: ರೈತರು ತಮ್ಮ ಜಮೀನಿನ ಪಹಣಿ ಪತ್ರಕ್ಕೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯವಾಗಿರುತ್ತದೆ. ರೈತರು ಸರ್ಕಾರದ ಯಾವುದೇ ಸೌಲಭ್ಯದ ಫಲಾನುಭವಿಯಾಗಲು ರೈತರು ತಮ್ಮ ಆರ್ಟಿಸಿ ಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕು. ಈ ಕುರಿತು ಸರ್ಕಾರ ಹೊಸ ತಂತ್ರಾಂಶವನ್ನು ಅಭಿವೃದ್ದಿಪಡಿಸಿದ್ದು ಇದನ್ನು ರೈತರು ತಮ್ಮ ಮೊಬೈಲ್ ಮೂಲಕ ಅಥವಾ ಸಂಬಂಧಿಸಿದ ಗ್ರಾಮ ಆಡಳಿತ ಅಧಿಕಾರಿಗಳನ್ನು ಭೇಟಿ ಮಾಡಿ ಸದರಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿರುತ್ತದೆ. ಆರ್ಟಿಸಿ ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಲು ಉದಾಸೀನ ಮಾಡಿದರೆ ಮುಂದಿನ ದಿನಗಳಲ್ಲಿ ಅಂತಹ ರೈತರಿಗೆ ಸರ್ಕಾರದಿಂದ ದೊರೆಯಬಹುದಾದ ಸೌಲಭ್ಯಕ್ಕೆ ತೊಂದರೆ ಉಂಟಾಗಲಿದೆ. ಆರ್ಟಿಸಿ ಗೆ ಆಧಾರ್ ಜೋಡಣೆ ಮಾಡುವುದರಿಂದ ಜಮೀನಿನ ದಾಖಲೆ ಮತ್ತಷ್ಟು ಸುರಕ್ಷಿತವಾಗಿರುತ್ತದೆ. ಭೂ ದಾಖಲೆ ಪಡೆಯುವುದು ಸುಲಭ. ಸರ್ಕಾರಿ ಯೋಜನೆಗೆ ಅರ್ಜಿ ಸಲ್ಲಿಕೆ ಸರಳವಾಗುತ್ತದೆ. ಖಾತಾ ವಿವಾದವನ್ನು ತಪ್ಪಿಸಲು ಅನುಕೂಲ, ಸಾಲ ಪ್ರಕ್ತಿಯೆ ಸುಲಭ ಹಾಗೂ ಜಮೀನು ಮಾರಾಟ ಸಮಯದಲ್ಲಿ ಹೆಚ್ಚಿನ ಪಾರದರ್ಶಕತೆ ಇರುತ್ತದೆ ಆದ್ದರಿಂದ ತಮ್ಮ ಆರ್ಟಿಸಿ ಗೆ ಆಧಾರ್ ಜೋಡಣೆ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಸಮೀಪದಲ್ಲೇ ಕಲ್ಲುಕ್ವಾರೆ ನಡೆಯುತ್ತಿದೆ. ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಕಲ್ಲುಕ್ವಾರಿ ನಡೆಸುತ್ತಿದ್ದಾರೆ. ಅದನ್ನು ತಕ್ಷಣದಿಂದ ನಿಲ್ಲಿಸಿ, ಆ ಸರ್ಕಾರಿ ಭೂಮಿಯನ್ನು ಗೋಶಾಲೆಗಾಗಿ ಮೀಸಲಿಡಿ ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಕೆಡಿಪಿ ಸಭೆಯಲ್ಲೇ ಖಡಕ್ ಆದೇಶ ಮಾಡಿದ್ರು. ಆದ್ರೇ ಸಾಗರ ತಾಲೂಕು ಆಡಳಿತ ಮಾತ್ರ, ಅದರ ಗೋಜಿಗೇ ಹೋಗಿಲ್ಲ. ಕಲ್ಲುಕ್ವಾರಿ ಬಂದ್ ಮಾಡಿಸಿ, ಸರ್ಕಾರಿ ಭೂಮಿ ಒತ್ತುವರಿ ತೆರವು ಮಾಡಿಸೋ ಕೆಲಸ ಮಾತ್ರ ಈವರೆಗೆ ಆಗಿಲ್ಲ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಬಳಿಯ ನಾಡಕಲಸಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರೋಬ್ಬರಿ 48 ಎಕರೆ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಲಾಗಿದೆ. ಈ ಬಗ್ಗೆ ಕೆಲ ದಿನಗಳ ಹಿಂದೆ ನಡೆದಿದ್ದಂತ ಸಾಗರ ತಾಲ್ಲೂಕು ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ತಹಶೀಲ್ದಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಸರ್ಕಾರಿ ಭೂಮಿ ಒತ್ತುವರಿಯನ್ನು ತೆರವುಗೊಳಿಸಬೇಕು. ಕೂಡಲೇ ಆ ಕೆಲಸ ಮಾಡಬೇಕು. ಆ ಭೂಮಿಯನ್ನು ಗೋಶಾಲೆಗೆ ಮೀಸಲಿಡಬೇಕು. ಒತ್ತುವರಿ ಮಾಡಿರೋರು…
ಬೆಂಗಳೂರು: ಸಂಚಾರಿ ಕುರಿಗಾಹಿಗಳ ಮೇಲಿನ ದೌರ್ಜನ್ಯ ತಡೆಗೆ ವಿಶೇಷ ಕಾಯ್ದೆ ಜಾರಿಗೆ ತರಲಾಗುತ್ತದೆ. 2024-25 ನೇ ಸಾಲಿನಲ್ಲಿ ಕುರಿಗಾಹಿ ಸಮುದಾಯಗಳಿಗೆ ಘೋಷಿಸಿರುವ ಕಾರ್ಯಕ್ರಮಗಳ ಜಾರಿಗೆ ಆದೇಶ ಹೊರಡಿಸಲು ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಲೆಮಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಅರಣ್ಯ ಪ್ರದೇಶದಲ್ಲಿ ಕುರಿಗಳನ್ನು ಮಾತ್ರ ಮೇಯಿಸಲು ಅವಕಾಶ ನೀಡುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಕುರಿಗಳು ಸತ್ತರೆ ಒಂದು ಕುರಿಗೆ 5 ಸಾವಿರ ರೂಪಾಯಿ ಪರಿಹಾರ ನೀಡುವ ಅನುಗ್ರಹ ಯೋಜನೆ ಜಾರಿಯಲ್ಲಿದೆ. ಈ ಮೊತ್ತವನ್ನು ಇನ್ನಷ್ಟು ಹೆಚ್ಚಿಸುವ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದರು. ರಾಜ್ಯದಲ್ಲಿನ ವಲಸೆ ಕುರಿಗಾರರ ಮತ್ತು ಅವರ ಸ್ವತ್ತುಗಳ ಮೇಲಿನ ದೌರ್ಜನ್ಯ ತಡೆಯುವ ಕಾಯ್ದೆ ರೂಪಿಸುವುದು, ಕುರಿಗಳಿಗೆ ಉಚಿತ ಲಸಿಕೆ ನೀಡಲೂ ಅಗತ್ಯ ಸೂಚನೆ ನೀಡಲಾಗುವುದು ಎಂದರು. ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ ನೀಡಲು…
‘ಡೆಂಘಿ ಜ್ವರ’ದಿಂದ ಸಾವುಗಳು ಆಗದಂತೆ ಮುನ್ನೆಚ್ವರಿಕೆ ವಹಿಸಿ: ಅಧಿಕಾರಿಗಳಿಗೆ ‘ಸಚಿವ ದಿನೇಶ್ ಗುಂಡೂರಾವ್’ ಖಡಕ್ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಡೆಂಘಿ ನಿಯಂತ್ರಣ ಕುರಿತಂತೆ ಬೆಂಗಳೂರಿನಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಸಭೆ ನಡೆಸಿದರು. ಡೆಂಘಿ ಜ್ವರ ವಿಚಾರದಲ್ಲಿ ಹೆಚ್ಚು ಮುಂಜಾಗೃತೆ ವಹಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಿಎಂ ಸಭೆಗು ಮುನ್ನ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿದ್ದರೂ, ಟೆಸ್ಟಿಂಗ್ ಕಡಿಮೆ ಮಾಡುವುದು ಬೇಡ. ಟೆಸ್ಟಿಂಗ್ ಹೆಚ್ಚು ಮಾಡಿ ಸಾಧ್ಯವಾದಷ್ಟು ಡೆಂಘಿ ಪ್ರಕರಣಗಳನ್ನ ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚುವ ಕಾರ್ಯ ನಡೆಯಬೇಕು ಎಂದು ಸೂಚನೆ ನೀಡಿದರು. ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಆತಂಕ ಪಡುವುದು ಬೇಡ. ಡೆಂಘಿ ಜ್ವರದಿಂದ ಸಾವುಗಳಾಗದಂತೆ ಮುನ್ನೆಚ್ವರಿಕೆ ವಹಿಸುವುದು ಮುಖ್ಯ. ಡೆಂಘಿ ಜ್ವರದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ವಿನ ಜಾಗೃತಿ ಮೂಡಿಸಿ ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರತಿ ಶುಕ್ರವಾರ source reduction activity (ರೋಗ ಹರಡುವ ಮೂಲ ಪತ್ತೆ ಮತ್ತು…
ಬೆಂಗಳೂರು : ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಕಲುಷಿತಗೊಳ್ಳದಂತೆ ಎಚ್ಚರಿಕೆ ನೀಡಲಾಗಿದ್ದು ಈ ಹಿನ್ನೆಲೆಯಲ್ಲಿ ಗ್ರಾಮೀಣ ನೀರು ಸರಬರಾಜು ಅಧಿಕಾರಿಗಳು ಹಾಗೂ ಎಂಜನಿಯರುಗಳು ಈ ತಿಂಗಳ 14ರಿಂದ 21ರವರೆಗಿನ ವಾರದಲ್ಲಿ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಮೂರು ಲಕ್ಷ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ಬಳಿಯ ಮುಣಜೇನಹಳ್ಳಿ ಹಾಗೂ ಬೆಳಗಾವಿ ಜಿಲ್ಲೆಯ ಗೋಕಾಕ್ ಬಳಿಯ ಕನಸಗೇರಿ ಗ್ರಾಮದಲ್ಲಿ ಈಚೆಗೆ ಕುಡಿಯುವ ನೀರು ಕಲುಷಿತಗೊಂಡ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಪರ್ಯಾಯ ಜಲಮೂಲಗಳನ್ನು ಬಳಸಿ ಶುದ್ಧ ನೀರು ಸರಬರಾಜು ಮಾಡಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಅಸ್ವಸ್ಥರಾದ ಗ್ರಾಮಸ್ಥರ ಆರೋಗ್ಯದ ಬಗ್ಗೆ ಎಚ್ಚರವಹಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ. ಗ್ರಾಮೀಣ ನೀರು ಸರಬರಾಜು ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಸಚಿವರಿಗೆ ಅಪರ ಮುಖ್ಯ…