Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಾನು ಕೇಂದ್ರ ಮಂತ್ರಿ ಆಗುವ ಬಗ್ಗೆ ಚಿಂತೆ ಮಾಡಿಲ್ಲ. ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ರಾಜ್ಯದ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವುದೇ ನಮ್ಮ ಗುರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು. ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಕೇಂದ್ರದ ಕೃಷಿ ಹಾಗೂ ಬುಡಕಟ್ಟು ವ್ಯವಹಾರಗಳ ಖಾತೆ ಸಚಿವ ಅರ್ಜುನ್ ಮುಂಡಾ ಅವರನ್ನು ಬೀಳ್ಕೊಟ್ಟ ನಂತರ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಇವುಗಳ ಯಾವುದರ ಬಗ್ಗೆ ಚಿಂತೆ ಮಾಡಿಲ್ಲ. 28 ಕ್ಷೇತ್ರಗಳನ್ನು ಗೆಲ್ಲುವುದಷ್ಟೆ ನಮ್ಮ ಮೈತ್ರಿಕೂಟದ ಗುರಿ. ನನ್ನ ಮುಂದೆ ಇರುವ ಏಕೈಕ ಅಜೆಂಡಾ ಎಂದರೆ ಕಾಂಗ್ರೆಸ್ ಪಕ್ಷವನ್ನು ಸೋಲಿಸೋದು ಎಂದು ಅವರು ಹೇಳಿದರು. ಮಂತ್ರಿಯಾಗಿ ಏನು ಮಾಡಲಿ? ನನಗೆ ಅ ಸುದ್ದಿಯೇ ಗೊತ್ತಿಲ್ಲ. ಮಾಧ್ಯಮಗಳಲ್ಲಿ ಈ ಸುದ್ದಿಯನ್ನು ಗಮನಿಸಿದ್ದೇನೆ. ನನಗೆ ಅ ಬಗ್ಗೆ ಆಸೆಯೂ ಇಲ್ಲ. ಅ ರೀತಿ ಚರ್ಚೆಯೇ ಆಗಿಲ್ಲ ಎಂದ ಅವರು; ಮುಂದಿನ ಫೆಬ್ರವರಿ ತಿಂಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ…
ಬೆಂಗಳೂರು: ನಗರದಲ್ಲಿ ಇನ್ಮುಂದೆ ವೃದ್ಧಾಶ್ರಮಕ್ಕೆ ತಂದೆ-ತಾಯಿಗಳ್ನು ಸೇರಿಸಿದ್ರೆ ಅಂಥವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕೋದಕ್ಕೆ ಬೆಂಗಳೂರು ನಗರ ಪೊಲೀಸರು ಸಜ್ಜಾಗಿದ್ದಾರೆ. ಅಲ್ಲದೇ ಈಗಾಗಲೇ ವೃದ್ಧಾಶ್ರಮಕ್ಕೆ ಸೇರಿಸಿರೋ ತಂದೆ-ತಾಯಿಗಳನ್ನು ಕರೆದೊಯ್ಯುವಂತೆಯೂ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು ನಗರ ಪೊಲೀಸರು 2024ರ ಹೊಸ ವರ್ಷದ ನಂತ್ರ ಹೊಸ ಹೆಜ್ಜೆಯನ್ನು ಇಡುತ್ತಿದ್ದಾರೆ. ಅದೇ ಬೆಂಗಳೂರು ನಗರದಲ್ಲಿ ವೃದ್ಧಾಶ್ರಮಕ್ಕೆ ತಂದೆ-ತಾಯಿಗಳನ್ನು ಸೇರಿಸಿದ್ರೆ ಅಂಥವರ ವಿರುದ್ಧ ಕ್ರಿಮನಲ್ ಕೇಸ್ ಬುಕ್ ಮಾಡೋದಕ್ಕೆ ತಯಾರಿ ನಡೆಸಿದ್ದಾರೆ. ಈಗಾಗಲೇ ಈ ಸಂಬಂಧ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಪೊಲೀಸರಿಗೆ ಖಡಕ್ ಸೂಚನೆ ನೀಡಿದ್ದಾರೆ. ಅವರ ಸೂಚನೆಯ ಮೇರೆಗೆ ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸುವವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕೋದಕ್ಕೆ ಮುಂದಾಗಿದ್ದಾರೆ. ಇದಷ್ಟೇ ಅಲ್ಲದೇ ಬೆಂಗಳೂರಿನ ವೃದ್ಧಾಶ್ರಮಗಳಲ್ಲಿ ತಮ್ಮ ತಂದೆ-ತಾಯಿಗಳನ್ನು ಮನೆಗೆ ಕರೆದೊಯ್ಯಬೇಕು. ಇಲ್ಲವಾದಲ್ಲಿ ಅಂಥವರ ವಿರುದ್ಧ ಕಾನೂನು ಕ್ರಮ ಜರುಗಿಸೋ ಎಚ್ಚರಿಕೆಯನ್ನು ನೀಡಿದ್ದಾರೆ. https://kannadanewsnow.com/kannada/trinamool-congress-leader-shot-dead-by-bike-borne-assailants-in-west-bengal/ https://kannadanewsnow.com/kannada/india-raises-concern-over-maldives-minister-mariyam-shiunas-derogatory-remarks-against-pm-modi/
ನವದೆಹಲಿ: ಲಕ್ಷದ್ವೀಪ ಪ್ರವಾಸದ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ನಂತರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಾಲ್ಡೀವ್ಸ್ ಸರ್ಕಾರ ಭಾನುವಾರ ತನ್ನ ಮೂವರು ಸಚಿವರನ್ನು ಅಮಾನತುಗೊಳಿಸಿದೆ. ಹಲವಾರು ಮಾಧ್ಯಮ ವರದಿಗಳ ಪ್ರಕಾರ, ಸಚಿವರಾದ ಮರಿಯಮ್ ಶಿಯುನಾ, ಮಲ್ಶಾ ಮತ್ತು ಹಸನ್ ಜಿಹಾನ್ ಅವರನ್ನು ಅಮಾನತುಗೊಳಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಾಲ್ಡೀವ್ಸ್ ಸರ್ಕಾರ ಭಾನುವಾರ ಮೂವರು ಸಚಿವರನ್ನು ಅಮಾನತುಗೊಳಿಸಿದೆ. ಮರಿಯಮ್ ಶಿಯುನಾ, ಮಲ್ಶಾ ಶರೀಫ್ ಮತ್ತು ಮಹಜೂಮ್ ಮಜೀದ್ ಅವರನ್ನು ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಅಮಾನತುಗೊಳಿಸಲಾಗಿದೆ. ಇದಕ್ಕೂ ಮುನ್ನ, ಮಾಲ್ಡೀವ್ಸ್ ಸರ್ಕಾರವು ಹೇಳಿಕೆಯಲ್ಲಿ ಹೇಳಿಕೆಗಳಿಂದ ಅಂತರ ಕಾಯ್ದುಕೊಂಡಿದ್ದು, ಅವುಗಳನ್ನು ‘ವೈಯಕ್ತಿಕ ಅಭಿಪ್ರಾಯಗಳು’ ಎಂದು ಕರೆದಿದೆ. ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ: ‘ಪ್ರಧಾನಿ ಮೋದಿ’ ವಿರುದ್ಧ ಹೇಳಿಕೆಗೆ ‘ಮಾಲ್ಡೀವ್ಸ್ ಸರ್ಕಾರ’ ಎಚ್ಚರಿಕೆ ನವದೆಹಲಿ: ಮಾಲ್ಡೀವ್ಸ್ ಸರ್ಕಾರ ಭಾನುವಾರ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ‘ವಿದೇಶಿ ನಾಯಕರು ಮತ್ತು…
ಬೆಂಗಳೂರು: ರಾಜ್ಯ ಸರ್ಕಾರ ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಕರ್ನಾಟಕದಲ್ಲಿ ಪೂಜಾ ಕೈಂಕರ್ಯವನ್ನು ನೆರವೇರಿಸುವಂತೆ ಆದೇಶಿಸಿದೆ. ಈ ಮೂಲಕ ಕಡೆಗೂ ರಾಮಭಕ್ತಿಗೆ ಶರಣಾದ ಕಾಂಗ್ರೆಸ್ ಸರ್ಕಾರ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಈ ಬಗ್ಗೆ ಇಂದು ಎಕ್ಸ್ ಮಾಡಿರುವಂತ ಅವರು, ಆಯೋಧ್ಯೆಯ ನವ್ಯ, ಭವ್ಯ ಶ್ರೀರಾಮ ಮಂದಿರದಲ್ಲಿ ಬಾಲರಾಮನಿಗೆ ಪ್ರಾಣ ಪ್ರತಿಷ್ಠಾಪನೆ ನಡೆಯುವ ಸುದಿನ, ಜನವರಿ 22ರಂದು ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಆಯೋಜಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಇದು ರಾಮಭಕ್ತರ, ಹಿಂದೂ ಕಾರ್ಯಕರ್ತರ ಹೋರಾಟಕ್ಕೆ ಸಿಕ್ಕ ಜಯ. ತುಷ್ಟೀಕರಣದ ವಿರುದ್ಧ ಹಿಂದುತ್ವದ ದಿಗ್ವಿಜಯ ಎಂದು ಹೇಳಿದ್ದಾರೆ. https://twitter.com/RAshokaBJP/status/1743946154960990631 ಮತ್ತೊಂದು ಟ್ವಿಟ್ ನಲ್ಲಿ ಬರ ಮತ್ತು ಸಾಲಬಾಧೆಯಿಂದ ಕಂಗೆಟ್ಟಿರುವ ಉತ್ತರ ಕರ್ನಾಟಕದ ರೈತರಿಗೆ ತಮ್ಮ ಜೀವ ಉಳಿಸಿಕೊಳ್ಳಲು ಈಗ ಊರು ಬಿಡುವುದೊಂದೇ ದಾರಿ ಎಂಬ ಶೋಚನೀಯ ಪರಿಸ್ಥಿತಿ ತಂದಿಟ್ಟಿದೆ ಕಾಂಗ್ರೆಸ್ ಸರ್ಕಾರ ಎಂದು ಕಿಡಿಕಾರಿದ್ದಾರೆ. ಸದಾ ಬಣ ರಾಜಕೀಯದಲ್ಲಿ ನಿರತವಾಗಿರುವ ಕಾಂಗ್ರೆಸ್ ಮಂತ್ರಿಗಳು ಹಾಗೂ ಶಾಸಕರು, ಎಷ್ಟು…
ಬೆಂಗಳೂರು : ಚಿತ್ರಕಲೆಯ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈ ಬಾರಿ 50 ಲಕ್ಷ ರೂ.ಗಳ ಅನುದಾನವನ್ನು ಪರಿಷತ್ತಿಗೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕರ್ನಾಟಕ ಚಿತ್ರಕಲಾ ಪರಿಷತ್ ವತಿಯಿಂದ ಆಯೋಜಿಸಿರುವ 21 ನೇ ಚಿತ್ರ ಸಂತೆಯನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ಆರ್ಟ್ ಗ್ಯಾಲರಿ ಸ್ಥಾಪಿಸಲು ನೆರವು ಎಲ್ಲಾ ಜಿಲ್ಲೆಗಳಲ್ಲಿ ವಸ್ತು ಸಂಗ್ರಹಾಲಯ ಸ್ಥಾಪನೆ ಹಾಗೂ ಆರ್ಟ್ ಗ್ಯಾಲರಿ ಸ್ಥಾಪಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡಲಿದೆ ಎಂದರು. 2003 ರಿಂದ ಇಂದಿನವರೆಗೆ ಚಿತ್ರಸಂತೆ ಆಚರಣೆಯಾಗುತ್ತಿದೆ. ಈ ವರ್ಷ 21 ನೇ ಚಿತ್ರಸಂತೆ ನಡೆದಿದೆ. ಹಿಂದೆ ಮುಖ್ಯಮಂತ್ರಿ ಯಾಗಿದ್ದ ಸಂದರ್ಭದಲ್ಲಿ ಪ್ರತಿ ವರ್ಷ ಚಿತ್ರಸಂತೆಯನ್ನು ಉದ್ಘಾಟಿಸಿದ್ದೇನೆ ಎಂದು ಸ್ಮರಿಸಿದರು. 22 ರಾಜ್ಯಗಳಿಂದ 1600 ಕಲಾವಿದರು ಪ್ರತಿ ವರ್ಷ 3 ರಿಂದ 4 ಲಕ್ಷ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. 22 ರಾಜ್ಯಗಳಿಂದ 1600 ಕಲಾವಿದರು ಪಾಲ್ಗೊಳ್ಳುವುದು ಹೆಮ್ಮೆಯ ವಿಷಯ. ಈ ಬಾರಿ ಚಿತ್ರಸಂತೆಯನ್ನು ಬಾಹ್ಯಾಕಾಶ ವಿಜ್ಞಾನಿಗಳಿಗೆ ಸಮರ್ಪಣೆಯಾಗಿರುವುದು ಅವರಿಗೆ ಸಲ್ಲಿಸಿರುವ…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಮುಂಬೈ ಇಂಡಿಯನ್ಸ್ ತಂಡ 2ನೇ ಆವೃತ್ತಿಯ 2ನೇ ಆವೃತ್ತಿಗೆ ಕೀರನ್ ಪೊಲಾರ್ಡ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿದೆ. ರಶೀದ್ ಖಾನ್ ಟೂರ್ನಿಯಿಂದ ಹೊರಗುಳಿದ ನಂತರ ಪೊಲಾರ್ಡ್ ಅವರನ್ನು ತಂಡದ ನಾಯಕನನ್ನಾಗಿ ಹೆಸರಿಸಲಾಯಿತು. ರಶೀದ್ ಅವರು ಇತ್ತೀಚೆಗೆ ನಡೆಸಿದ ಬೆನ್ನು ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಕಳೆದ ಋತುವಿನಲ್ಲಿ ಎಂಐ ಕೇಪ್ ಟೌನ್ ತಂಡವು 10 ಪಂದ್ಯಗಳಲ್ಲಿ ಕೇವಲ ಮೂರು ಗೆಲುವುಗಳೊಂದಿಗೆ ಕೊನೆಯ ಸ್ಥಾನದಲ್ಲಿತ್ತು. ಆದಾಗ್ಯೂ, ಫ್ರಾಂಚೈಸಿ ಆಟಗಾರರನ್ನು ಬೆಂಬಲಿಸಿತು ಮತ್ತು ಪ್ರಮುಖ ತಂಡವನ್ನು ಉಳಿಸಿಕೊಂಡಿತು. “ಎಸ್ಎ 20 ಎರಡನೇ ಋತುವಿನಲ್ಲಿ ಕೀರನ್ ಪೊಲಾರ್ಡ್ ಮುಂಬೈ ಕೇಪ್ ಟೌನ್ ತಂಡದ ನಾಯಕರಾಗಲಿದ್ದಾರೆ. ಗಾಯದಿಂದ ಚೇತರಿಸಿಕೊಳ್ಳುತ್ತಿರುವ ರಶೀದ್ ಖಾನ್ ಸದ್ಯ ಅಲಭ್ಯರಾಗಿದ್ದಾರೆ. ರಶೀದ್ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಎಂಐ ಸಿಟಿ ಹಾರೈಸುತ್ತದೆ ಮತ್ತು ಶೀಘ್ರದಲ್ಲೇ ಅವರನ್ನು ಮತ್ತೆ ಆಟದ ಮೈದಾನಕ್ಕೆ ತರಲು ನೋಡುತ್ತಿದೆ, “ಎಂದು ಎಂಐ ಪ್ರಕಟಣೆಯಲ್ಲಿ ತಿಳಿಸಿದೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ ಸ್ಯಾಮ್ ಕರ್ರನ್, ಓಲಿ ಸ್ಟೋನ್, ಲಿಯಾಮ್ ಲಿವಿಂಗ್ಸ್ಟೋನ್ ಮತ್ತು…
ಬೆಂಗಳೂರು: ಬರ ಮತ್ತು ಸಾಲಬಾಧೆಯಿಂದ ಕಂಗೆಟ್ಟಿರುವ ಉತ್ತರ ಕರ್ನಾಟಕದ ರೈತರಿಗೆ ತಮ್ಮ ಜೀವ ಉಳಿಸಿಕೊಳ್ಳಲು ಈಗ ಊರು ಬಿಡುವುದೊಂದೇ ದಾರಿ ಎಂಬ ಶೋಚನೀಯ ಪರಿಸ್ಥಿತಿ ತಂದಿಟ್ಟಿದೆ ಕಾಂಗ್ರೆಸ್ ಸರ್ಕಾರ. ಕೃಷಿ ಕಾರ್ಮಿಕರಿಗೆ ಗುಳೆ ಗ್ಯಾರೆಂಟಿ ಎಂಬುದಾಗಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, ಸದಾ ಬಣ ರಾಜಕೀಯದಲ್ಲಿ ನಿರತವಾಗಿರುವ ಕಾಂಗ್ರೆಸ್ ಮಂತ್ರಿಗಳು ಹಾಗೂ ಶಾಸಕರು, ಎಷ್ಟು ಜನ ಡಿಸಿಎಂಗಳಿರಬೇಕು ಎಂದು ಲೆಕ್ಕಾಚಾರ ಹಾಕುವ ಬದಲು ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಏನು ಮಾಡಬೇಕು ಎಂದು ಯೋಚಿಸಿದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಪಂಚ ರಾಜ್ಯಗಳ ಚುನಾವಣೆಗೆ ಕಲೆಕ್ಷನ್ ಮಾಡುವಲ್ಲಿರುವ ಆಸಕ್ತಿಯಲ್ಲಿ, ತೆಲಂಗಾಣ ಚುನಾವಣೆಗೆ ಪ್ರಚಾರ ಮಾಡುವಲ್ಲಿರುವ ಉತ್ಸಾಹದಲ್ಲಿ ಕೊಂಚವಾದರೂ ರಾಜ್ಯದ ರೈತರ ಬಗ್ಗೆ ಇದ್ದಿದ್ದರೆ, ಕೃಷಿ ಕಾರ್ಮಿಕರು ಇಂದು ಮನೆ ಮಠ ಬಿಟ್ಟು ಗುಳೆ ಹೋಗುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದಿದ್ದಾರೆ. ಸಿಎಂ ಸಿದ್ಧರಾಮಯ್ಯ ಅವರೇ, ನಿಮ್ಮಲ್ಲಿ ನಿಜಕ್ಕೂ ಮಾನವೀಯತೆ ಇದ್ದರೆ, ರಾಜ್ಯದ ಕೃಷಿ ಕಾರ್ಮಿಕರು,…
ಹುಬ್ಬಳ್ಳಿ: ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದ್ದು, ಕಾಂಗ್ರೆಸ್ ಸರ್ಕಾರ ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ. ಏಳೇ ತಿಂಗಳಲ್ಲಿ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲೀ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಸರ್ಕಾರ ದಬ್ಬಾಳಿಕೆಯ ಸರ್ಕಾರ. ಮುಖ್ಯಮಂತ್ರಿಗಳು, ಮಂತ್ರಿಗಳ ಭಾಷೆ ವ್ಯಕ್ತಿಯ ಸ್ವಾತಂತ್ರ್ಯಕ್ಕೆ ಧಕ್ಕೆ ಆಗುತ್ತಿದೆ. ಅನ್ಯಾಯದ ವಿರುದ್ದ ಹೋರಾಟ ಮಾಡಿದರೆ ಅವರ ವಿರುದ್ಧ ಕೇಸ್ ಹಾಕುತ್ತಿದ್ದಾರೆ. ಈ ಸರ್ಕಾರದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ವಾತಾವರಣ ಇದೆ. ಕರ್ನಾಟಕದಲ್ಲಿ ಜನರಲ್ಲಿ ಭಯ ಹುಟ್ಟಿಸುವ ಪ್ರಯತ್ನ ನಡೆಯುತ್ತಿದೆ. ಅದರಲ್ಲಿ ಶ್ರೀಕಾಂತ್ ಪೂಜಾರಿ ಕೇಸ್ ಒಂದು. ಅವರ ವಿರುದ್ದ ಯಾವುದೇ ಪ್ರಕರಣ ಇಲ್ಲದಿದ್ದರೂ, ಅವರನ್ನು ಒಳಗಡೆ ಹಾಕಿದರು. ಇದು ಎಮರ್ಜೆನ್ಸಿಯಲ್ಲಿ ಮಾತ್ರ ಸಾಧ್ಯ ಎಂದರು. ಶ್ರೀಕಾಂತ ಪೂಜಾರಿ ಅವರನ್ನು ಒಳಗಡೆ ಹಾಕಿದ ಅಧಿಕಾರಿ, ಮಂತ್ರಿಗಳು ಕ್ಷಮೆ ಕೇಳಲಿಲ್ಲ. ಇದನ್ನು ಜನರು ಗಮನಸುತ್ತಿದ್ದಾರೆ. ಏಳೇ ತಿಂಗಳಲ್ಲಿ ಈ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ. ಸರ್ಕಾರದ ದಾಷ್ಟ್ಯ…
ಯಾದಗಿರಿ: ಮುಂದಿನ ಟೈಯರ್ ಸ್ಪೋಟಗೊಂಡ ಪರಿಣಾಮ, ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ವ್ಯಾನ್ ಉರುಳಿ ಬಿದ್ದಿದೆ. ಈ ಬಳಿಕ ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡು ನೋಡ ನೋಡುತ್ತಿದ್ದಂತೆ ನಡು ರಸ್ತೆಯಲ್ಲೇ ಹೊತ್ತಿ ಉರಿದಿರೋ ಘಟನೆ ಯಾದಗಿರಿಯ ಚಿತ್ತಾಪುರದಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರದಲ್ಲಿ ಓಮ್ನಿ ವ್ಯಾನ್ ಒಂದರ ಟೈಯರ್ ಸ್ಪೋಟಗೊಂಡಿದೆ. ಈ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ನೋಡ ನೋಡುತ್ತಿದ್ದಂತೆ ಪಲ್ಟಿಯಾಗಿದೆ. ಓಮ್ನಿ ವ್ಯಾನ್ ಪಲ್ಟಿಯಾದ ಪರಿಣಾಮ ಅದರೊಟ್ಟಿಗೆ ಬೆಂಕಿ ಕಾಣಿಸಿಕೊಂಡಿದೆ. ಇದನ್ನ ಗಮನಿಸಿದಂತ ವಾಹನ ಸಾವರರು ಓಮ್ನಿ ವ್ಯಾನಿನಲ್ಲಿದ್ದಂತ ಓರ್ವನನ್ನು ಹೊರಗೆ ಎಳೆದುಕೊಂಡಿದ್ದಾರೆ. ಈ ಬಳಿಕ ಓಮ್ನಿ ವ್ಯಾನ್ ಸಂಪೂರ್ಣವಾಗಿ ನಡು ರಸ್ತೆಯಲ್ಲೇ ಧಗಧಗಿಸಿ ಹೊತ್ತಿ ಉರಿದಿದೆ. ಈ ಅವಗಢದಲ್ಲಿ ಗಾಯಗೊಂಡಿದ್ದಂತ ಓರ್ವ ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದ ಸ್ಥಳಕ್ಕೆ ಆಗಮಿಸಿದಂತ ಚಿತ್ತಾಪುರ ಠಾಣೆಯ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಮ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/cm-siddaramaiah-orders-investment-in-construction-of-silk-bhavan-in-bengaluru/ https://kannadanewsnow.com/kannada/trinamool-congress-leader-shot-dead-by-bike-borne-assailants-in-west-bengal/
ಬೆಂಗಳೂರು: ನಮಗೆ ಹಣ ಬೇಡ ಅಕ್ಕಿ ಕೊಡಿ ಎಂಬುದಾಗಿ ರಾಜ್ಯದ ಅನ್ನಭಾಗ್ಯ ಫಲಾನುಭವಿಗಳ ಒತ್ತಾಯವಾಗಿದೆ. ಇದರ ನಡುವೆ ಅಕ್ಕಿ ಸಿಗೋವರೆಗೂ ಹೆಚ್ಚುವರಿ 5 ಕೆಜಿ ಅಕ್ಕಿಗೆ ಹಣ ನೀಡುವುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೆಲವು ಕಡೆ ಅಕ್ಕಿ ಬೇಕು. ನಮಗೆ ಹಣ ಬೇಡ ಎಂಬುದಾಗಿ ಅನ್ನಭಾಗ್ಯ ಫಲಾನುಭವಿಗಳು ಕೇಳುತ್ತಿದ್ದಾರೆ. ಹೆಚ್ಚುವರಿ 5 ಕೆಜಿ ಅಕ್ಕಿ ವಿತರಣೆಗಾಗಿ ಅಕ್ಕಿಗಾಗಿ ಸರ್ಕಾರ ಹುಡುಕಾಟ ಮುಂದುವರೆಸಿದೆ ಎಂದರು. ಹೆಚ್ಚುವರಿ 5 ಕೆಜಿ ಅಕ್ಕಿಯನ್ನೇ ವಿತರಣೆ ಮಾಡೋದಕ್ಕಾಗಿ ರಾಜ್ಯ ಸರ್ಕಾರದಿಂದ ತೆಲಂಗಾಣ, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಿಂದ ಖರೀದಿಗೆ ಕ್ರಮವಹಿಸಲಾಗಿದೆ. ಆದ್ರೇ ಸೂಕ್ತ ಬೆಲೆ ನಿಗದಿಯಾಗುತ್ತಿಲ್ಲ. ಅದರಲ್ಲೂ ಈ ಸಲ ಮಳೆ ಕಡಿಮೆಯಾಗಿರೋ ಕಾರಣ ಉತ್ಪಾದನೆಯೂ ಕುಂಠಿತಗೊಂಡಿದೆ ಎಂದರು. ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಅಕ್ಕಿ ಬದಲಾಗಿ ಸದ್ಯಕ್ಕೆ ಹಣವನ್ನೇ ನೀಡಲಾಗುತ್ತದೆ. ಅನ್ನಭಾಗ್ಯ ಫಲಾನುಭವಿಗಳಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಹಣವನ್ನು ಜಮಾ ಮಾಡಲಾಗುತ್ತದೆ. ಅಕ್ಕಿ ದೊರೆತ ಕೂಡಲೇ…