Author: kannadanewsnow09

ಬೆಂಗಳೂರು: ಸಕಲೇಶಪುರ ಟು ಬಾಳ್ಳುಪೇಟೆ ಮಾರ್ಗಮಧ್ಯದ ರೈಲು ಹಳಿಗಳ ಮೇಲೆ ಭೂ ಕುಸಿತ ಉಂಟಾಗಿ ಸಂಚಾರಕ್ಕೆ ಅಡ್ಡಿಯಾಗಿತ್ತು. ಇಂದು ಭೂ ಕುಸಿತದ ಮಣ್ಣನ್ನು ತೆರವುಗೊಳಿಸಲಾಗಿದ್ದು, ಸಂಚಾರ ಸುರಕ್ಷತೆಯ ಪರೀಕ್ಷೆಯನ್ನು ನಡೆಸಲಾಗಿದೆ. ಹೀಗಾಗಿ ನಾಳೆಯಿಂದ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಪುನರಾರಂಭಗೊಳಿಸಲಾಗುತ್ತಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಮಾಹಿತಿ ನೀಡಿದ್ದು, ಸಕಲೇಶಪುರ-ಬಳ್ಳುಪೇಟೆ ನಿಲ್ದಾಣಗಳ ನಡುವೆ ಭೂಕುಸಿತಕ್ಕೆ ಸಂಬಂಧಿಸಿದಂತೆ, ಹಳಿಯನ್ನು ಪುನಃಸ್ಥಾಪಿಸಲಾಗಿದೆ ಮತ್ತು ರೈಲು ಕಾರ್ಯಾಚರಣೆಗೆ ಯೋಗ್ಯವಾಗಿದೆ ಎಂದು ಪ್ರಮಾಣೀಕರಿಸಲಾಗಿದೆ ಎಂದು ತಿಳಿಸಿದೆ. ಯಾವೆಲ್ಲಾ ರೈಲುಗಳ ಸಂಚಾರ ರದ್ದುಪಡಿಸಲಾಗಿತ್ತು.? ದಿನಾಂಕ 11.08.2024ರ ನೈರುತ್ಯ ರೈಲ್ವೆ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ಬಿಡುಗಡೆ ಮಾಡಿದ್ದಂತ ಬುಲೆಟಿನ್ ಸಂಖ್ಯೆ-7 ರಲ್ಲಿ ಈ ಕೆಳಗಿನ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಇದೀಗ ನಾಳೆಯಿಂದ ಪುನರಾರಂಭಗೊಳಿಸಲಾಗುತ್ತಿದೆ ಅಂತ ತಿಳಿಸಿದೆ. ಆದರೇ ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್-ವಿಜಯಪುರ ಎಕ್ಸ್ಪ್ರೆಸ್ ವಿಶೇಷ ರೈಲು ದಿನಾಂಕ 14.08.2024 ರಂದು ರದ್ದಾಗಿದೆ ಎಂದು ಹೇಳಿದೆ. 1. ರೈಲು ಸಂಖ್ಯೆ 16595 ಕೆಎಸ್ಆರ್ ಬೆಂಗಳೂರು-ಕಾರವಾರ ಎಕ್ಸ್ಪ್ರೆಸ್…

Read More

ಗರುಡನು ಶ್ರೀ ಮಹಾವಿಷ್ಣುವಿನ ಬಳಿ ಎಂತಹದೇ ಕಷ್ಟದ ಕಾಲದಲ್ಲಿ, ಎಂತಹ ಪರಿಸ್ಥಿತಿಯಲ್ಲೂ ಏನು ಆಗಬಾರದು ಅಂತಹ ಒಂದು ಮಂತ್ರವನ್ನು ತಿಳಿಸಿಕೊಡಿ ಎಂದು ಕೇಳಿದಾಗ, ಗರುಡನಿಗೆ ಮಹಾವಿಷ್ಣು ಈ ಮಂತ್ರವನ್ನು ಹೇಳುತ್ತಾರೆ. ಈ ಮಂತ್ರವನ್ನು ಗರುಡ ಪುರಾಣದಲ್ಲಿ ಹೇಳಲಾಗಿದೆ. ಗರುಡ ಪುರಾಣದಲ್ಲಿ ಉಲ್ಲೇಖವಾಗಿರುವ ಈ ಮಂತ್ರದ ಹೆಸರು ಏನಂದರೆ ಗಾರುಣಿ ಪರಾವಿದ್ಯ ಮಂತ್ರ. ಈ ಮಂತ್ರವನ್ನು ಪ್ರತಿನಿತ್ಯ ಹೇಳುವುದರಿಂದ ಆರೋಗ್ಯವು ವೃದ್ಧಿಯಾಗುತ್ತದೆ. ಈ ಮಂತ್ರದಿಂದ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇದ್ದರೂ ನಿವಾರಣೆಯಾಗುತ್ತದೆ. ಈ ಮಂತ್ರವನ್ನು ಹೇಳಬೇಕಾದರೆ ಶ್ರದ್ಧಾಭಕ್ತಿಯಿಂದ ನಂಬಿಕೆಯನ್ನು ಇಟ್ಟು ಹೇಳಬೇಕು. ದೇವರನ್ನು ನಂಬಿ ಈ ಮಂತ್ರವನ್ನು ಹೇಳಿದರೆ ಎಲ್ಲವೂ ಒಳ್ಳೆಯದಾಗುತ್ತದೆ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ವರ್ಗಾವಣೆ ದಂಧೆ ನಡೆಸಲಾಗುತ್ತಿದೆ. ಕಾಸಿಗಾಗಿ ಪೋಸ್ಟಿಂಗ್ ಮಾಡಲಾಗುತ್ತೆ ಎಂಬುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ವಿಪಕ್ಷಗಳ ನಾಯಕರು ಸೇರಿದಂತೆ ಅನೇಕರು ಗಂಭೀರ ಆರೋಪವನ್ನೇ ಮಾಡಿದ್ದಾರೆ. ಈ ಹೊತ್ತಿನಲ್ಲೇ ಕೆಪಿಟಿಸಿಎಲ್ ನಿಂದ ಮಹಾ ಎಡವಟ್ಟು ಎನ್ನುವಂತೆ ಒಂದೇ ಹುದ್ದೆಗೆ 7 ಕಿರಿಯ ಇಂಜಿನಿಯರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಇದಲ್ಲದೇ 4 ವರ್ಷ ಪೂರೈಸದ ಜೆಇಗಳ ಸ್ಥಾನಕ್ಕೂ ಬೇರೊಬ್ಬರನ್ನು ವರ್ಗಾವಣೆ ಮಾಡಿ ಮಹಾ ಎಡವಟ್ಟು ಮಾಡಿರುವುದು ಬೆಳಕಿಗೆ ಬಂದಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(KPTCL) ನ ಆಡಳಿತ ಮತ್ತು ಮಾ.ಸಂ ನ ನಿರ್ದೇಶಕರು ದಿನಾಂಕ 31-07-2024ರಂದು 226 ಕಿರಿಯ ಇಂಜಿನಿಯರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಿದ್ದಾರೆ. ಆದರೇ ವರ್ಗಾವಣೆಯ ಆದೇಶದಲ್ಲಿ ಒಬ್ಬರಲ್ಲ, ಇಬ್ಬರಲ್ಲ ಬರೋಬ್ಬರಿ 7 ಜೆಇಗಳನ್ನು ಒಂದೇ ಸ್ಥಳಕ್ಕೆ, ಒಂದೇ ಹುದ್ದೆಗೆ ವರ್ಗಾಯಿಸಿ ಆದೇಶಿಸಿದ್ದಾರೆ. ಒಂದೇ ಹುದ್ದೆಗೆ 7 ಕಿರಿಯ ಇಂಜಿನಿಯರ್ ವರ್ಗಾವಣೆ ಕೆಪಿಟಿಸಿಎಲ್ 226 ಕಿರಿಯ ಇಂಜಿನಿಯರ್ ( ವಿದ್ಯುತ್/ಕಾಮಗಾರಿ) ವರ್ಗಾವಣೆ ಆದೇಶದಲ್ಲಿ ಬೇರೆ…

Read More

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ 45 ಕಾಲೇಜುಗಳಲ್ಲಿ 4 ಹೊಸ ಕೋರ್ಸ್ ಗಳನ್ನು ಆರಂಭಿಸಲಾಗುತ್ತಿದೆ. ಈ ಕುರಿತಂತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಮಾಹಿತಿ ಹಂಚಿಕೊಂಡಿದ್ದು, ಯುವಕರಲ್ಲಿ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ಜ್ಞಾನದ ಕೌಶಲವೃದ್ಧಿಗಾಗಿ ರಾಜ್ಯದ 45 ಕಾಲೇಜುಗಳಲ್ಲಿ 4 ಹೊಸ ಕೋರ್ಸ್‌ಗಳು ಪ್ರಸಕ್ತ ವರ್ಷದಿಂದ ಆರಂಭವಾಗಲಿದ್ದು, 1,500 ವಿದ್ಯಾರ್ಥಿಗಳಿಗೆ ಪ್ರವೇಶ ಸಿಗಲಿದೆ ಎಂದು ತಿಳಿಸಿದ್ದಾರೆ. ಈಗಾಗಲೇ ವಿವಿಧ ಕೋರ್ಸ್ ಗಳಿಗೆ ಕಾಲೇಜುಗಳಲ್ಲಿ ಪ್ರವೇಶಾತಿಯನ್ನು ನೀಡಲಾಗಿದೆ. ಈಗ ಹೊಸದಾಗಿ ರಾಜ್ಯದ 45 ಕಾಲೇಜುಗಳಲ್ಲಿ 4 ಹೊಸ ಕೋರ್ಸ್ ಆರಂಭಿಸುವ ಮೂಲಕ, ವಿದ್ಯಾರ್ಥಿಗಳಿಗೆ ತಮ್ಮ ಇಷ್ಟದ ವಿಷಯದ ಕಲಿಕೆಗೆ ಅವಕಾಶವನ್ನು ಮಾಡಿಕೊಡಲಾಗುತ್ತಿದೆ. https://twitter.com/KarnatakaVarthe/status/1823337503669027249 https://kannadanewsnow.com/kannada/good-news-for-parents-of-children-500-karnataka-public-schools-to-be-opened-by-next-year/ https://kannadanewsnow.com/kannada/i-am-pro-farmer-wont-let-crops-suffer-siddaramaiah/ https://kannadanewsnow.com/kannada/chief-minister-siddaramaiah-instructs-officials-to-complete-tungabhadra-dam-gate-repair-work-at-the-earliest/

Read More

ವಿಜಯನಗರ: ನಾನು ರೈತರ ಪರ: ಬೆಳೆಗಳಿಗೆ ತೊಂದರೆ ಆಗಲು ಬಿಡಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ತುಂಗಭದ್ರಾ ಡ್ಯಾಂ ಬಳಿಯಲ್ಲಿ ಕ್ರಸ್ಟ್ ಗೇಟ್ ಕೊಟ್ಟಿ ಹೋಗಿದ್ದನ್ನು ಪರಿಶೀಲಿಸಿದ ಬಳಿಕ ಹೇಳಿದ್ದಾರೆ. ಅವರು ಇಂದು ತುಂಗಭದ್ರಾ ಜಲಾಶಯ ಗೇಟ್ ಮುರಿದಿರುವ ಸ್ಥಳವನ್ನು ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ತುಂಗಭದ್ರಾ ಜಲಾಶಯದ ನೀರನ್ನು ಗೇಟ್ ಗಳ ಮೂಲಕ ಬಿಡಲಾಗುತ್ತಿತ್ತು. ನೀರಿನ ಹರಿವನ್ನು ತಡೆಯುವಂತಹ ಗೇಟ್ ಗಳಲ್ಲಿ 19ನೇ ಗೇಟ್ ತುಂಡಾಗಿದೆ. ಜಲಾಶಯ ಗೇಟ್ ಗಳ ನಿರ್ಮಾಣ ತಜ್ಞ ಹಾಗೂ ಸುರಕ್ಷತೆ ತಜ್ಞ ಎಂಜಿನಿಯರ್ ಕನ್ನಯ್ಯ ನಾಯ್ಡು ಅವರ ಜೊತೆ ಚರ್ಚಿಸಿದ್ದೀನಿ. ಅವರಿಂದ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗಿದೆ. ತುಂಗಭದ್ರಾ ಜಲಾಶಯದ ಸಂಪೂರ್ಣ ನಿರ್ವಹಣೆಯ ಜವಾಬ್ದಾರಿ ತುಂಗಭದ್ರಾ ಜಲಶಾಯ ಮಂಡಳಿಯದಾಗಿದ್ದು, ಭಾರತ ಸರ್ಕಾರ ನೇಮಿಸಿದ ಅಧ್ಯಕ್ಷರು, ಕೇಂದ್ರ ಜಲ ಆಯೋಗ, ಆಂಧ್ರ, ತೆಲಂಗಾಣ ಮತ್ತು ಕರ್ನಾಟಕದ ಸದಸ್ಯರು ಮಂಡಳಿಯಲ್ಲಿರುತ್ತಾರೆ. ಈ ಜಲಾಶಯದ ನಿರ್ಮಾಣ ದೇಶಕ್ಕೆ ಸ್ವಾತಂತ್ರ್ಯ ಬಂದ ಮರು ವರ್ಷವೇ ಕೈಗೆತ್ತಿಕೊಂಡು 1948 ರಲ್ಲಿ ಪ್ರಾರಂಭವಾಗಿ 1953…

Read More

ಬೆಂಗಳೂರು; ರಾಜ್ಯದ ಶಾಲಾ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ಮುಂದಿನ ವರ್ಷದ ವೇಳೆಗೆ ರಾಜ್ಯಾಧ್ಯಂತ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಪ್ರಸಕ್ತ ಸಾಲಿನಲ್ಲಿ 2 ಸಾವಿರ ಇಂಗ್ಲಿಷ್‌ ಮಾಧ್ಯಮ ಶಾಲೆ ತೆರೆಯಲಾಗಿದೆ. 1,008 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗಿದೆ ಎಂದಿದ್ದಾರೆ. ಮುಂದಿನ ವರ್ಷದ ವೇಳೆಗೆ 500 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ತೆರೆಯಲಾಗುವುದು. ನಾಲ್ಕು ವರ್ಷಗಳಲ್ಲಿ ಹಂತ ಹಂತವಾಗಿ ಇಂತಹ 3 ಸಾವಿರ ಶಾಲೆ ತೆರೆಯಲು ಉದ್ದೇಶಿಸಲಾಗಿದೆ. ಇದರಿಂದ 45 ಲಕ್ಷ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. https://twitter.com/KarnatakaVarthe/status/1823327788541128788 https://kannadanewsnow.com/kannada/50000-children-to-be-given-free-coaching-for-competitive-exams-from-next-year-madhu-bangarappa/ https://kannadanewsnow.com/kannada/landslide-case-near-shirur-several-parts-of-a-lorry-found-in-gangavali-river/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದಲೇ ಮುಂದಿನ ವರ್ಷದಿಂದ 50,000 ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತವಾಗಿ ತರಬೇತಿ ನೀಡಲಾಗುತ್ತದೆ ಎಂಬುದಾಗಿ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಮುಂದಿನ ವರ್ಷದಿಂದ 50 ಸಾವಿರ ಮಕ್ಕಳಿಗೆ ಸಿಇಟಿ, ನೀಟ್‌, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು. ಈ ವರ್ಷ 25 ಸಾವಿರ ಮಕ್ಕಳು ತರಬೇತಿಗೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. https://twitter.com/KarnatakaVarthe/status/1823331129270698475 https://kannadanewsnow.com/kannada/chief-minister-siddaramaiah-instructs-officials-to-complete-tungabhadra-dam-gate-repair-work-at-the-earliest/ https://kannadanewsnow.com/kannada/landslide-case-near-shirur-several-parts-of-a-lorry-found-in-gangavali-river/

Read More

ಹೊಸಪೇಟೆ:  ತುಂಗಭದ್ರಾ ಜಲಾಶಯ ಮತ್ತೆ ತುಂಬತ್ತದೆ. ಬಾಗಿನ ಅರ್ಪಿಸೋಕೆ ನಾನು ಬರ್ತೀನಿ ಎಂಬುದಾಗಿ ಇಂದು ಸಿ.ಎಂ.ಸಿದ್ದರಾಮಯ್ಯ ಆತ್ಮವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಅವರು ಇಂದು ತುಂಗಭದ್ರಾ ಜಲಾಶಯ ಗೇಟ್ ಮುರಿದಿರುವ ಸ್ಥಳವನ್ನು ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕೆಲವರ್ಷಗಳಿಂದ ತುಂಗಭದ್ರಾ ಜಲಾಶಯದ ದುರಸ್ತಿಯಿಂದಾಗಿ ನೀರು ಪೋಲಾಗುತ್ತಿರುವ ಬಗ್ಗೆ ಪ್ರಶ್ನಿಸಿದ ಮಾಧ್ಯಮದರಿಗೆ ಉತ್ತರಿಸಿದ ಮುಖ್ಯಮಂತ್ರಿಗಳು, 2019 ಜಲಾಶಯದ ನೀರು ಬಿಡುವ ಕಾಲುವೆಗಳಲ್ಲಿ ಸಮಸ್ಯೆ ಆಗಿತ್ತೇ ಹೊರತು, ಜಲಾಶಯದ ಗೇಟ್ ಗಳಲ್ಲಿ ಯಾವುದೇ ಸಮಸ್ಯೆ ಆಗಿರಲಿಲ್ಲ . 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಗೇಟ್ ನ ಸರಪಳಿ ತುಂಡಾಗಿರುವ ಘಟನೆ ನಡೆದಿದೆ. ತಜ್ಞರ ಸಲಹೆಯಂತೆ 50 ವರ್ಷಗಳಿಗೊಮ್ಮೆ ಗೇಟ್ ಹಾಗೂ ಸರಪಳಿಗಳನ್ನು ಬದಲಾಯಿಸಬೇಕಾಗಿದ್ದು, ಇನ್ನು ಮುಂದೆ ತಜ್ಞರ ಸಲಹೆಯಂತೆ ತುಂಗಭದ್ರಾ ಮಂಡಳಿ ಹಾಗೂ ಸಂಬಂಧಪಟ್ಟ ಸರ್ಕಾರಗಳು ಕ್ರಮ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು. ಇಂತಹ ಘಟನೆಗಳಿಗೆ ಯಾರು ಹೊಣೆ ಹೊರುತ್ತಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರ ನೇಮಿಸಿದ ತುಂಗಭದ್ರ ಮಂಡಳಿ…

Read More

ಹೊಸಪೇಟೆ : ತುಂಗಭದ್ರಾ ಜಲಾಶಯ ಗೇಟ್ ನ ದುರಸ್ತಿಯನ್ನು ತ್ವರಿತವಾಗಿ ಮುಗಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದ್ದು, ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ತುಂಗಭದ್ರಾ ಜಲಾಶಯ ಗೇಟ್ ಮುರಿದಿರುವ ಸ್ಥಳವನ್ನು ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ತುಂಗಭದ್ರಾ ಜಲಾಶಯದ ನೀರನ್ನು ಗೇಟ್ ಗಳ ಮೂಲಕ ಬಿಡಲಾಗುತ್ತಿತ್ತು. ನೀರಿನ ಹರಿವನ್ನು ತಡೆಯುವಂತಹ ಗೇಟ್ ಗಳಲ್ಲಿ 19ನೇ ಗೇಟ್ ತುಂಡಾಗಿದೆ. ಜಲಾಶಯ ಗೇಟ್ ಗಳ ನಿರ್ಮಾಣ ತಜ್ಞ ಹಾಗೂ ಸುರಕ್ಷತೆ ತಜ್ಞ ಎಂಜಿನಿಯರ್ ಕನ್ನಯ್ಯ ನಾಯ್ಡು ಅವರ ಜೊತೆ ಚರ್ಚಿಸಿದ್ದೀನಿ. ಅವರಿಂದ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗಿದೆ. ತುಂಗಭದ್ರಾ ಜಲಾಶಯದ ಸಂಪೂರ್ಣ ನಿರ್ವಹಣೆಯ ಜವಾಬ್ದಾರಿ ತುಂಗಭದ್ರಾ ಜಲಶಾಯ ಮಂಡಳಿಯದಾಗಿದ್ದು, ಭಾರತ ಸರ್ಕಾರ ನೇಮಿಸಿದ ಅಧ್ಯಕ್ಷರು, ಕೇಂದ್ರ ಜಲ ಆಯೋಗ, ಆಂಧ್ರ, ತೆಲಂಗಾಣ ಮತ್ತು ಕರ್ನಾಟಕದ ಸದಸ್ಯರು ಮಂಡಳಿಯಲ್ಲಿರುತ್ತಾರೆ. ಈ ಜಲಾಶಯದ ನಿರ್ಮಾಣ ದೇಶಕ್ಕೆ ಸ್ವಾತಂತ್ರ್ಯ ಬಂದ ಮರು ವರ್ಷವೇ ಕೈಗೆತ್ತಿಕೊಂಡು 1948 ರಲ್ಲಿ ಪ್ರಾರಂಭವಾಗಿ 1953 ರಲ್ಲಿ ಪೂರ್ಣಗೊಂಡು, 1954…

Read More

ಶಿವಮೊಗ್ಗ: ಆಗಸ್ಟ್.15ರಂದು ಸಾಗರ ನಗರಸಭೆಯ ವ್ಯಾಪ್ತಿಯಲ್ಲಿ ಅದ್ಧೂರಿಯಾಗಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಡೆಸಲಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆಯ ಸುಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟಿಕ್ ಧ್ವಜವನ್ನು ಬಳಸದಂತೆ ನಗರಸಭೆ ಆಯುಕ್ತ ಹೆಚ್.ನಾಗಪ್ಪ ಮನವಿ ಮಾಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ನಗರಸಭೆ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್.15ರಂದು ಆಚರಿಸಲಾಗುತ್ತದೆ. ಗಣಪತಿ ಕೆರೆಯ ಸಮೀಪದ ಬೃಹತ್ ಧ್ವಜ ಸ್ಥಂಭದ ಬಳಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾಗರ ತಾಲ್ಲೂಕಿನ ಶಾಸಕರಾದಂತ ಬೇಳೂರು ಗೋಪಾಲಕೃಷ್ಣ ಅವರು ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಅಲ್ಲದೇ ನಗರಸಭೆಯ ಸದಸ್ಯರು ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿರಲಿದ್ದಾರೆ ಎಂದರು. ಆಗಸ್ಟ್.15ರ ಸ್ವಾತಂತ್ರ್ಯ ಸಂಭ್ರಮದ ವೇಳೆಯಲ್ಲಿ ಸಾಗರ ನಗರದ ಜನತೆ ಪ್ಲಾಸ್ಟಿಕ್ ಧ್ವಜವನ್ನು ಬಳಸಬಾರದು. ಇದು ಕೋರ್ಟ್ ಆದೇಶ ಕೂಡವಾಗಿದೆ. ಒಂದು ವೇಳೆ ಬಳಕೆ ಮಾಡಿದರೇ ಅಂತವರ ವಿರುದ್ಧ ಕಾನೂನು ಕ್ರಮವನ್ನು ಕೈಗೊಳ್ಳಲು ಅವಕಾಶವಿದೆ. ಸಾರ್ವಜನಿಕರು ಬಟ್ಟೆಯಿಂದ ಮಾಡಿದಂತ ರಾಷ್ಟ್ರಧ್ವಜವನ್ನು ಬಳಕೆ ಮಾಡಿ, ಪರಿಸರವನ್ನು ಸ್ವಚ್ಛಂದವಾಗಿ ಇರಿಸುವಂತೆ ಮನವಿ ಮಾಡಿದರು. ವರದಿ: ವಸಂತ…

Read More