Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ದ್ವಿತೀಯ ಪಿಯುಸಿ ತೇರ್ಗಡೆಯಾದಂತ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯ ರೂಪಿಸಿಕೊಳ್ಳೋ ನಿಟ್ಟಿನಲ್ಲಿ, ಜಿ.ಎನ್.ಎಂ. ನರ್ಸಿಂಗ್ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. 2024-2025 ನೇ ಸಾಲಿನ ಶೈಕ್ಷಣೆಕ ವರ್ಷಕ್ಕೆ ಸರ್ಕಾರಿ ನರ್ಸಿಂಗ್ ಶಾಲೆ ಹಾಗೂ ಖಾಸಗಿ ನರ್ಸಿಂಗ್ ಶಾಲೆಗಳಲ್ಲಿನ ಶೇಖಡ 10ರಷ್ಟು ಸರ್ಕಾರಿ ಕೋಟಾದ ಸೀಟುಗಳ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೋರ್ಸಿಗೆ ದಿನಾಂಕ: 21-06-2024ರ ಇಂದಿನಿಂದ ಆರಂಭಗೊಂಡಿದೆ. ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 05-07-2024 ಆಗಿದೆ. https://kannadanewsnow.com/kannada/renukaswamy-murder-case-bbmp-officials-issue-notice-to-pattanagere-shet-for-non-payment-of-taxes/ https://kannadanewsnow.com/kannada/98-indians-not-68-died-during-haj-pilgrimage-mea/
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ನಟ ದರ್ಶನ್ ಬಂಧಿಸಲ್ಪಟ್ಟು ಪೊಲೀಸರ ಕಸ್ಟಡಿಯಲ್ಲಿದ್ದಾರೆ. ಎ1 ಆರೋಪಿ ಪವಿತ್ರಾ ಗೌಡ ಅವರು ಜೈಲುಪಾಲಾಗಿದ್ದಾರೆ. ಈ ಪ್ರಕರಣ ಸಂಬಂಧ ರೇಣುಕಾಸ್ವಾಮಿ ಹತ್ಯೆ ನಡೆಸಿದಂತ ಸ್ಥಳದ ಶೆಡ್ ಮಾಲಿಕರು ತೆರಿಗೆ ಪಾವತಿ ಮಾಡದೇ ಇರೋದಾಗಿ ತಿಳಿದು ಬಂದಿದೆ. ಹೀಗಾಗಿ ಬಿಬಿಎಂಪಿ ಅಧಿಕಾರಿಗಳು ಶೆಡ್ ಮಾಲೀಕರಿಗೆ ನೋಟಿಸ್ ನೀಡಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಶೆಡ್ ಒಂದಕ್ಕೆ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿಕೊಂಡು ಬರಲಾಗಿತ್ತು. ಪಟ್ಟಣಗೆರೆ ಬಳಿಯ ಶೆಡ್ ನಲ್ಲಿ ಚಿತ್ರಹಿಂಸೆ ನೀಡಿ, ಆತನನ್ನು ಹತ್ಯೆಗೈಯ್ಯಲಾಗಿತ್ತು. ಈ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಪಟ್ಟಣಗೆರೆ ಶೆಡ್ ಮಾಲೀಕ ಆಸ್ತಿ ತೆರಿಗೆ ಪಾವತಿಸದೇ ಇರುವ ವಿಚಾರ ಬೆಳಕಿಗೆ ಬಂದಿದೆ. 2008ರಿಂದ ಪಟ್ಟಣಗೆರೆಯ ಶೆಡ್ ಮಾಲೀಕ ತೆರಿಗೆಯನ್ನು ಪಾವತಿಸದೇ ವಂಚಿಸಿರೋ ಆರೋಪ ಕೇಳಿಬಂದಿದೆ. ಹೀಗಾಗಿ ಬಿಬಿಎಂಪಿ ಆಡಳಿತಾಧಿಕಾರಿ ಇಷ್ಟು ದಿನ ಹೇಗೆ ತೆರಿಗೆ ಕಟ್ಟಿಸಿಕೊಳ್ಳದೇ ಬಾಕಿ ಬಿಟ್ಟಿದ್ದೀರಿ ಅಂತ ತರಾಟೆಗೆ…
ಬೆಂಗಳೂರು: ಖ್ಯಾತ ಗಾಯಕ ಲಕ್ಕಿ ಆಲಿ ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಅವರ ಪತಿ ಹಾಗೂ ಬಾಮೈದನ ವಿರುದ್ಧ ಕರ್ನಾಟಕ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. ಹೀಗಾಗಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೊಂದು ಸಂಕಷ್ಟ ಎದುರಾದಂತೆ ಆಗಿದೆ. ಈ ಕುರಿತಂತೆ ಕರ್ನಾಟಕ ಲೋಕಾಯುಕ್ತ ಪೊಲೀಸರಿಗೆ ಸಲ್ಲಿಸಿರುವಂತ ದೂರಿನ ಪ್ರತಿಯನ್ನು ಎಕ್ಸ್ ನಲ್ಲಿ ಖ್ಯಾತ ಗಾಯಕ ಲಕ್ಕಿ ಆಲಿ ಅವರು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಅವರ ಪತಿ ಸುಧೀರ್ ರೆಡ್ಡಿ ಹಾಗೂ ಬಾಮೈದ ಮಧುಸೂಧನ ರೆಡ್ಡಿ ವಿರುದ್ಧ ದೂರು ನೀಡಿದ್ದಾರೆ. https://twitter.com/luckyali/status/1803762086457053653 ಅವರು ನೀಡಿರುವಂತ ದೂರಿನಲ್ಲಿ ಯಲಹಂಕ ನ್ಯೂ ಟೌನ್ ವ್ಯಾಪ್ತಿಯಲ್ಲಿರುವಂತ ತಮ್ಮ ಟ್ರಸ್ಟ್ ಗೆ ಸಂಬಂಧಿಸಿದ ಭೂಮಿಯನ್ನು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಅವರ ಭಾಮೈದ ಮಧುಸೂಧನ ಅವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬುದಾಗಿ ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಖ್ಯಾತ ಗಾಯಕ ಲಕ್ಕಿ ಆಲಿ ಅವರು 2022ರಲ್ಲಿಯೂ ದೂರು ಸಲ್ಲಿಸಿದ್ದರು. ಅದರಲ್ಲಿ ಯಲಹಂಕ ನ್ಯೂ…
ನವದೆಹಲಿ: ಲೋಕಸಭಾ ಚುನಾವಣೆ 2024 ರ ಫಲಿತಾಂಶದ ನಂತರ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಇಂದು (ಜೂನ್ 21) ಪಶ್ಚಿಮ ಬಂಗಾಳದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮೂಲಗಳ ಪ್ರಕಾರ, ಚೌಧರಿ ಅವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಸೋಲನ್ನು ಒಪ್ಪಿಕೊಂಡಿದ್ದಾರೆ ಮತ್ತು ಬಂಗಾಳದಲ್ಲಿ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನವನ್ನು ಒಪ್ಪಿಕೊಂಡಿದ್ದಾರೆ. ಅಧೀರ್ ರಂಜನ್ ಚೌಧರಿ ಅವರ ರಾಜೀನಾಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮೂಲಗಳು ತಿಳಿಸಿವೆ. ಇದಕ್ಕೂ ಮುನ್ನ, ರಾಜಕೀಯ ರೂಕಿ ಯೂಸುಫ್ ಪಠಾಣ್ ಅವರ ಕೈಯಲ್ಲಿ ಅವರ ಸೋಲಿನ ಬಗ್ಗೆ ಕೇಳಿದಾಗ, ಹಿರಿಯ ಕಾಂಗ್ರೆಸ್ ಮುಖಂಡ ಅಧೀರ್ ಚೌಧರಿ ಅವರು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸುವ ತಮ್ಮ ಆಟದ ಯೋಜನೆಯಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದ್ದಾರೆ. ಧಾರ್ಮಿಕ ಆಧಾರದ ಮೇಲೆ ಮತದಾರರನ್ನು ತನ್ನಿಂದ ದೂರವಿರಿಸಲು ತಮ್ಮ ವಿರೋಧಿಗಳು ಪ್ರಯತ್ನಿಸಿದರೂ, ಎಲ್ಲಾ ಧರ್ಮಗಳ ಹೆಚ್ಚಿನ ಸಂಖ್ಯೆಯ…
ಬೆಂಗಳೂರು: ಟಿಕೆಟ್ ಇಲ್ಲದೇ ಪ್ರಯಾಣಿಸಿದಂತ ಪ್ರಯಾಣಿಕರಿಗೆ ಕೆ ಎಸ್ ಆರ್ ಟಿಸಿ ಬಿಗ್ ಶಾಕ್ ಎನ್ನುವಂತೆ, ಬರೋಬ್ಬರಿ 3754 ಮಂದಿಗೆ ದಂಡವನ್ನು ವಿಧಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಮೇ-2024 ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 42,680 ವಾಹನಗಳನ್ನು ತನಿಖೆಗೊಳಪಡಿಸಿ 3708 ಪ್ರಕರಣಗಳನ್ನು ಪತ್ತೆಹಚ್ಚಿ, 3754 ಟಿಕೇಟ್ ರಹಿತ ಪ್ರಯಾಣಿಕರಿಂದ 6,54,738/-ರೂಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ ಅಂತ ತಿಳಿಸಿದೆ. ಇನ್ನೂ ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 88,429/- ರೂಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ, ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ ಎಂಬುದಾಗಿ ಹೇಳಿದೆ. ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ, ನಿಗಮವು ಈ ಮೂಲಕ ಪ್ರಯಾಣಿಕರಲ್ಲಿ ಕೋರಿದೆ. https://kannadanewsnow.com/kannada/chitradurga-age-is-not-important-for-learning-yoga-one-should-have-a-willingness-to-learn-shivalingappa/ https://kannadanewsnow.com/kannada/ration-card-holders-note-check-your-name-on-the-ration-card-like-this/
ಚಿತ್ರದುರ್ಗ: ಯೋಗ ಕಲಿಯಲು ವಯಸ್ಸು ಮುಖ್ಯವಲ್ಲ,ಆಸಕ್ತಿಯಿಂದ ಕಲಿಯುವ ಮನಸಿರಬೇಕು ಎಂದು ಐಯುಡಿಪಿ ಬಡಾವಣೆಯ ನಿಸರ್ಗ ಯೋಗಕೇಂದ್ರದ ಯೋಗಗುರು ಶಿವಲಿಂಗಪ್ಪ ಹೇಳಿದರು. ನಗರದ ಐಯುಡಿಪಿ ಬಡಾವಣೆಯಲ್ಲಿರುವ ಪ್ರಶಾಂತಿ ವಿದ್ಯಾಲಯದಲ್ಲಿ 10 ನೇ ಅಂತರರಾಷ್ಟ್ರೀಯ ಯೋಗಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಯೋಗಪ್ರದರ್ಶನದಲ್ಲಿ ಭಾಗಿಯಾಗಿದ್ದ ಅವರು, ನರ್ಸರಿ,ಎಲ್ ಕೆಜಿ ವಿದ್ಯಾರ್ಥಿಗಳು ಸೇರಿದಂತೆ ಪ್ರಾಥಾಮಿಕ ಶಾಲೆಯ ಮಕ್ಕಳಿಗೆ ಯೋಗತರಭೇತಿ ಕುರಿತು ತಿಳಿಸಿದರು. ಶಾಲೆಯ ಸಭಾಂಗಣದಲ್ಲಿ ನಡೆದ ಯೋಗಾಭ್ಯಾಸದಲ್ಲಿ ಮಾತನಾಡಿದ ಅವರು,ಯೋಗ ಅನ್ನೋದು ಇಂದು ಹೆಮ್ಮರವಾಗಿ ಬೆಳೆದಿದೆ.ವೈದ್ಯಕೀಯ ಲೋಕಕ್ಕೆ ಸವಾಲಾಗಿದೆ.ಔಶಧೋಪಚಾರದಿಂದ ಗುಣವಾಗದ ರೋಗರುಜಿನಗಳು ನಿತ್ಯ ಯೋಗಭ್ಯಾಸದಿಂದ ಸುಧಾರಿಸಿವೆ.ಹೀಗಾಗಿ ದೇಶ ವಿದೇಶಗಳಲ್ಲು ಯೋಗ ಬಹುಪ್ರಾಮುಖ್ಯತೆ ಪಡೆದಿದೆ ಎಂದರು. ಈ ವೇಳೆ ಹವ್ಯಾಸಿ ಯೋಗ ಪಟುಗಳ ಜಯ್ಯಣ್ಣ,ಪುಷ್ಪ,ಸಂಯುಕ್ತ,ದಿವ್ಯ ಯೋಗ ಪ್ರದರ್ಶನ ನೀಡಿದರು.ವಿದ್ಯಾರ್ಥಿಗಳು ಆಕರ್ಷಕ ಯೋಗ ಭಂಗಿಗಳನ್ನು ನೋಡಿ ಪುಳಕಿತರಾದರು.ಈ ವೇಳೆ ಪ್ರಶಾಂತಿ ಶಾಲೆಯ ಮುಖ್ಯಸ್ಥರಾದ ರಮೇಶ್ ಇಟಗಿ, ಶಿಕ್ಷಕಿಯಾದ ಸಂಪದ,ಸಂದ್ಯ ಮೇಡಂ ಇದ್ದರು. https://kannadanewsnow.com/kannada/panchaghataks-will-happen-this-time-kodimatha-sri-explosive-prediction/ https://kannadanewsnow.com/kannada/breaking-bmtc-employees-call-off-strike-state-govt-notifies-not-to-protest-for-6-months/
ಚಿಕ್ಕಬಳ್ಳಾಪುರ: ರಾಜ್ಯ, ದೇಶದಲ್ಲಿ ಈ ಬಾರಿ ಪಂಚಘಾತಕಗಳು ಸಂಭವಿಸಲಿದ್ದಾವೆ. ಇವುಗಳನ್ನು ಗೆಲ್ಲೋದು ತುಂಬಾನೇ ಕಷ್ಟ ಎಂಬುದಾಗಿ ಶಾಕಿಂಗ್ ಭವಿಷ್ಯವನ್ನು ಕೋಡಿಮಠದ ಶ್ರೀಗಳು ನುಡಿದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೋಡಿಮಠದ ಶಿವಾನಂದ ಸ್ವಾಮೀಜಿಯವರು, ಕ್ರೋಧಿನಾಮ ಸಂವಸ್ತರದಲ್ಲಿ ಕ್ರೋಧ, ದ್ವೇಷ, ಮಧ, ಅಸೂಯೆಗಳು ಹೆಚ್ಚಾಗಲಿವೆ ಅಂತ ತಿಳಿಸಿದ್ದಾರೆ. ಪಂಚಾಘಾತಕಗಳು ಅಂದ್ರೆ ಭೂಕಂಪ, ಅಗ್ನಿ, ಜಲಕಂಟಕ, ವಾಯುವಿನಿಂದಲೂ ಆಪತ್ತು ದೇಶ, ರಾಜ್ಯಕ್ಕೆ ಎದುರಾಗಲಿದೆ. ಈ ಕ್ರೋಧಿನಾಮ ಸಂವತ್ಸರದಲ್ಲಿ ಗುರು ಶಿಷ್ಯನಾಗುತ್ತಾನೆ. ಶಿಷ್ಯ ಗುರುವಾಗುತ್ತಾನೆ. ದೇಶದಲ್ಲಿ ಹೆಣ್ಣುಮಕ್ಕಳ ಪ್ರಾಬಲ್ಯ ಹೆಚ್ಚಾಗುತ್ತದೆ. ಅದರಿಂದ ಸುಖ-ದುಖ ಎರಡೂ ಇದೆ ಅಂತ ಹೇಳಿದರು. ಈ ಹಿಂದೆ ಕೋಠಿಮಠ ಶ್ರೀಗಳು ರಾಜ್ಯ, ದೇಶದ ರಾಜಕೀಯ, ಅವಘಡಗಳ ಬಗ್ಗೆ ಮಹತ್ವದ ಭವಿಷ್ಯ ನುಡಿದಿದ್ದರು. ಅವುಗಳಲ್ಲಿ ಅನೇಕವು ನಿಜ ಕೂಡ ಆಗಿದ್ದವು. ಈಗ ಮತ್ತೊಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. https://kannadanewsnow.com/kannada/ration-card-holders-note-check-your-name-on-the-ration-card-like-this/ https://kannadanewsnow.com/kannada/state-govt-allows-pre-primary-classes-to-start-in-578-schools/
ಬೆಂಗಳೂರು: ಕೇಂದ್ರ ಸರ್ಕಾರದ ಶಿಕ್ಷಣ ಮಂತ್ರಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ ಅನುಮೋದನೆಗೊಂಡಂತೆ ರಾಜ್ಯದ ಆಯ್ದ 578 ಸರ್ಕಾರಿ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಅನುಮತಿಸಿ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಕೇಂದ್ರ ಸರ್ಕಾರದ ಶಿಕ್ಷಣ ಮಂತ್ರಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ ಅನುಮೋದನೆಗೊಂಡಂತೆ ರಾಜ್ಯದ ಆಯ್ದ 578 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡುವ ಕುರಿತು.. 1. ಕೇಂದ್ರ ಸರ್ಕಾರದ ಶಿಕ್ಷಣ ಮಂತ್ರಾಲಯದ 2023-24 ಹಾಗೂ 2024 25ನೇ ಸಾಲಿನ ವಾರ್ಷಿಕ ಯೋಜನಾ ಮಂಡಳಿ ಅನುಮೋದನೆಯ 3:17-04-2023 3 15-04-2024. 2. ರಾಜ್ಯ ಯೋಜನಾ ನಿರ್ದೇಶಕರು, ಸಮಗ್ರ ಶಿಕ್ಷಣ ಕರ್ನಾಟಕ ಇವರ ಏಕ ಕಡತ ಸಂಖ್ಯೆ: SSK/Prpy/PAB/4/2024-JDQ. ಕೇಂದ್ರ ಸರ್ಕಾರದ ಶಿಕ್ಷಣ ಮಂತ್ರಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ 2023-24 ಹಾಗೂ 2024-25ನೇ ಸಾಲಿನಲ್ಲಿ ಕ್ರಮವಾಗಿ ರಾಜ್ಯದ 262 ಮತ್ತು 316 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ…
ಮಂಡ್ಯ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯ ಅವರನ್ನು ನಿಂದಿಸಿದ ಹಿನ್ನಲೆಯಲ್ಲಿ, ನಟ ದರ್ಶನ್ ಅವರ ಮಹಿಳಾ ಅಭಿಮಾನಿಯೊಬ್ಬರ ವಿರುದ್ಧ ಜೆಡಿಎಸ್ ಪೊಲೀಸರಿಗೆ ದೂರು ನೀಡಿದೆ. ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ಟೌನ್ ಪೊಲೀಸ್ ಠಾಣೆಗೆ ತೆರಳಿದಂತ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಜಾನಿಕೀರಾಮ್ ಅವರು, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ನಟ ದರ್ಶನ್ ಅವರ ಮೇಲೆ ಕೊಲೆ ಆರೋಪ ಬರುವಂತೆ ಮಾಡಿದ್ದಾರೆ. ದುಡ್ಡು ಕೊಟ್ಟು ನಟ ದರ್ಶನ್ ಅವರ ವಿರುದ್ಧ ಧಿಕ್ಕಾರ ಕೂಗಿಸುತ್ತೀಯಾ.? ಸುಮಲತಾ ಅಂಬರೀಶ್ ಮಂಡ್ಯದಲ್ಲಿ ನಿನಗೆ ಸ್ಪರ್ಧಿಸಲು ಅವಕಾಶ ಕೊಟ್ಟಿರುವುದಕ್ಕೆ ಡಿ ಬಾಸ್ ವಿರುದ್ಧವೇ ಸ್ಕೆಚ್ ಹಾಕುತ್ತೀಯಾ? ನೀನು ಸುಮಲತಾ ಅವರಿಂದ ಭಿಕ್ಷೆ ಹಾಕಿಸಿಕೊಂಡ ಮಗ ಎಂಬುದಾಗಿ ನಿಂದಿಸಿದ್ದಾರೆ ಅಂತ ದೂರಿನಲ್ಲಿ ಹೇಳಿದ್ದಾರೆ. ನಟ ದರ್ಶನ್ ಅವರ ಮಹಿಳಾ ಅಭಿಮಾನಿ ಎನ್ನಲಾಗುವಂತ ಮಂಗಳಾ ಎಂಬುವರು ಹೀಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನಿಂದಿಸಿರುವಂತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಏಕ ವಚನದಲ್ಲೇ ಹೆಚ್.ಡಿ…
ದೊಡ್ಡಬಳ್ಳಾಪುರ: ಇಲ್ಲಿನ ಕೆಸ್ತೂರು ಗೇಟ್ ಬಳಿಯಲ್ಲಿ ಬೈಕ್ ಗೆ ಲಾರಿಯೊಂದು ಡಿಕ್ಕಿಯಾದ ಪರಿಣಾಮ, ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 3 ವರ್ಷದ ಬಾಲಕ ಸಾವನ್ನಪ್ಪಿದ್ದು, ತಂದೆ-ತಾಯಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೆಸ್ತೂರು ಗೇಟ್ ನಲ್ಲಿ ಬೈಕ್ ನಲ್ಲಿ ದಂಪತಿಗಳು ಹಾಗೂ ಮಗು ತೆರಳುತ್ತಿದ್ದರು. ಈ ವೇಳೆಯಲ್ಲಿ ಲಾರಿಯೊಂದು ಬೈಕ್ ಗೆ ಡಿಕ್ಕಿಯಾಗಿದೆ. ಈ ಪರಿಣಾಮ ಸ್ಥಳದಲ್ಲೇ ಧನ್ವಿತ್(3) ಬಾಲಕ ಸಾವನ್ನಪ್ಪಿದ್ದಾನೆ. ಅವರ ತಂದೆ ತಾಯಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವಂತ ತಂದೆ ಆಂಜನೇಯ ಹಾಗೂ ತಾಯಿ ಮಮತಾಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಅಪಘಾತದ ಬಳಿಕ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/supreme-court-dismisses-plea-seeking-release-of-hamare-bara/ https://kannadanewsnow.com/kannada/ration-card-holders-note-check-your-name-on-the-ration-card-like-this/