Author: kannadanewsnow09

ನವದೆಹಲಿ: ಭಾರತದ ಚುನಾವಣಾ ಆಯೋಗ (ಇಸಿಐ) ಹರಿಯಾಣದಲ್ಲಿ ಮತದಾನದ ದಿನವನ್ನು ಅಕ್ಟೋಬರ್ 1ರ ಬದಲು ಅಕ್ಟೋಬರ್ 5, 2024ಕ್ಕೆ ಪರಿಷ್ಕರಿಸಲಾಗಿದೆ. ಅದರಂತೆ ಜಮ್ಮು-ಕಾಶ್ಮೀರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಯ ಎಣಿಕೆಯ ದಿನವನ್ನು ಅಕ್ಟೋಬರ್ 4ರಿಂದ ಅಕ್ಟೋಬರ್ 8, 2024ಕ್ಕೆ ಪರಿಷ್ಕರಿಸಲಾಗಿದೆ. ತಮ್ಮ ಗುರು ಜಂಬೇಶ್ವರನ ಸ್ಮರಣಾರ್ಥ ಅಸೋಜ್ ಅಮಾವಾಸ್ಯೆ ಹಬ್ಬದ ಆಚರಣೆಯಲ್ಲಿ ಭಾಗವಹಿಸುವ ಶತಮಾನಗಳಷ್ಟು ಹಳೆಯ ಅಭ್ಯಾಸವನ್ನು ಎತ್ತಿಹಿಡಿದಿರುವ ಬಿಷ್ಣೋಯ್ ಸಮುದಾಯದ ಮತದಾನದ ಹಕ್ಕು ಮತ್ತು ಸಂಪ್ರದಾಯಗಳನ್ನು ಗೌರವಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. https://twitter.com/ANI/status/1829866904770736165 https://kannadanewsnow.com/kannada/good-news-for-government-aided-school-children-in-the-state-eggs-to-be-distributed-6-days-a-week-from-tomorrow/ https://kannadanewsnow.com/kannada/criminal-case-to-be-fixed-if-pop-ganesha-is-installed-in-bengaluru-heres-how-bbmp-guidelines/

Read More

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ಎನ್ನುವಂತೆ ಸೆಪ್ಟೆಂಬರ್ ನಿಂದ ವಾರದಲ್ಲಿ 6 ದಿನವೂ ಮೊಟ್ಟೆ ವಿತರಣೆ ಮಾಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸೆಪ್ಟೆಂಬರ್‌ ತಿಂಗಳಿನಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದ 6 ದಿನವೂ ಮೊಟ್ಟೆ ವಿತರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. https://twitter.com/KarnatakaVarthe/status/1829859325676044346 ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಶುಕ್ರವಾರ ದಿಢೀರ್ ಭೇಟಿ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಕ್ಕಳೊಂದಿಗೆ ಸಂವಾದ ನಡೆಸಿದರು. ಕಾರ್ಯಕ್ರಮ ನಿಮಿತ್ತ ಮಂಡ್ಯಗೆ ತೆರಳುತ್ತಿದ್ದ ಸಚಿವರನ್ನು ಮದ್ದೂರು ಶಾಸಕ ಕೆ.ಎಂ.ಉದಯ್ ಅವರ ಕೋರಿಕೆ ಮೇರೆಗೆ ನಿಡಘಟ್ಟ ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠಶಾಲೆ ಹಾಗೂ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಕೊಠಡಿಗಳ ಅವ್ಯವಸ್ಥೆ ಹಾಗೂ ಸಮಸ್ಯೆ ಕುರಿತಂತೆ ಶಾಲಾ ಮಕ್ಕಳೊಂದಿಗೆ ಚರ್ಚಿಸಿದರು. ನಂತರ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರೊಂದಿಗೆ ಮಾತುಕತೆ…

Read More

ಬೆಂಗಳೂರು: ರಾಜ್ಯಾಧ್ಯಂತ ಸೆಪ್ಟೆಬರ್.2ರಿಂದ ಪೋಡಿ ದುರಸ್ತಿ ಅಭಿಯಾನವನ್ನು ಆರಂಭಿಸಲಾಗುತ್ತದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಈ ಮೂಲಕ ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. “ರಾಜ್ಯದಲ್ಲಿ ಸುಮಾರು 10 ಲಕ್ಷ ರೈತರಿಗೆ ಹತ್ತಾರು ವರ್ಷಗಳ ಹಿಂದೆ ಸರ್ಕಾರಿ ಜಮೀನು ಅಕ್ರಮ ಸಕ್ರಮದಡಿ ಮಂಜೂರಾಗಿದ್ದರೂ ಸಹ, ಪೋಡಿ ದುರಸ್ಥಿ ಆಗದೆ ಬಾಕಿ ಉಳಿದಿದೆ. ಲಕ್ಷಾಂತರ ರೈತರು ಅನೇಕ ವರ್ಷಗಳಿಂದ ಪ್ರಯತ್ನ ಮಾಡುತ್ತಿದ್ದರೂ ಸಹ, ಕೆಲವೇ ಕೆಲವರಿಗೆ ಮಾತ್ರ ಪೋಡಿ ದುರಸ್ಥಿಯಾಗಿದ್ದು ಬಹುತೇಕರಿಗೆ ಆಗಿರುವುದಿಲ್ಲ. ಇದರಿಂದಾಗಿ ಹಲವು ರೈತರು ತೀವ್ರ ತೊಂದರೆಗೆ ಸಿಲುಕಿದ್ದು, ಅಧಿಕಾರಿಗಳು ಸೆಪ್ಟೆಂಬರ್‌ 2 ರಿಂದ ಅಭಿಯಾನ ಮಾದರಿಯಲ್ಲಿ 1-5 ನಮೂನೆ ಪೋಡಿ ದುರಸ್ಥಿ ಕೆಲಸಕ್ಕೆ ಮುಂದಾಗಬೇಕು, ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು” ಎಂದು ಸೂಚಿಸಿದರು. https://twitter.com/KarnatakaVarthe/status/1829860424012960082 ಮುಂದುವರೆದು, “ಜಮೀನು ಮಂಜೂರಾಗಿದ್ದರೂ ಪೋಡಿಯಾಗಿ ಆರ್.ಟಿ.ಸಿ ಆಗದೆ ಇರುವುದರಿಂದ, ಅಂತಹ ರೈತರ ಪರಿಸ್ಥಿತಿ ತ್ರಿಶಂಕುವಿನಂತೆ ಆಗಿದೆ. ತಾಲ್ಲೂಕು ಕಛೇರಿ, ಸರ್ವೆ ಕಛೇರಿಗಳಿಗೆ ಅಲೆದು ಅಲೆದು ಪ್ರಯೋಜನವಾಗದೆ ತೀವ್ರ ತೊಂದರೆಗೆ ತುತ್ತಾಗಿದ್ದಾರೆ.…

Read More

ಶಿವಮೊಗ್ಗ : ಎನಿವೇರ್ ನೋಂದಣಿ ವ್ಯವಸ್ಥೆಯು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು ಶಿವಮೊಗ್ಗದ ಹಿರಿಯ ಉಪನೋಂದಣಾಧಿಕಾರಿಗಳ ಕಛೇರಿಯಲ್ಲಿ ಸೆ.2 ರಿಂದ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ. ಎನಿವೇರ್ ನೋಂದಣಿ ವ್ಯವಸ್ಥೆಯನ್ನು ನೋಂದಣಿ ಕಾಯ್ದೆ 1908 ರ ಕಲಂ(5) ಹಾಗೂ ಕಲಂ (6) ರಡಿಯಲ್ಲಿ ಅನುಷ್ಟಾನಗೊಳಿಸಲಾಗುತ್ತಿದೆ. ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪ ನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನ ನೋಂದಣಿ ಮಾಡಲು ಅವಕಾಶವಿತ್ತು, ಆದರೆ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಸಾರ್ವಜನಿಕರು ಎನಿವೇರ್ ನೋಂದಣಿಯ ವ್ಯವಸ್ಥೆಯನ್ನು ಸದುಪಯೋಗಪಡಿಸಿಕೊಂಡು ಜಿಲ್ಲೆ ಒಳಗೆ ತಮಗೆ ಹತ್ತಿರ ಇರುವ ನೋಂದಣಿ ಸ್ಲಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳಬಹುದೆಂದು ಶಿವಮೊಗ್ಗ ಹಿರಿಯ ಉಪನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಗರದಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ ಎನಿವೇರ್ ನೋಂದಣಿ ವ್ಯವಸ್ಥೆಯು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ…

Read More

ನವದೆಹಲಿ: ಐರಿಶ್ ಸುದ್ದಿ ಸಂಸ್ಥೆ ಬಿಸಿನೆಸ್ ಪೋಸ್ಟ್ಗೆ ಲಭ್ಯವಾದ ಆಂತರಿಕ ದಾಖಲೆಗಳ ಪ್ರಕಾರ, ಕಂಪನಿಯ ಸ್ವಯಂಪ್ರೇರಿತ ವಿಚ್ಛೇದನ ಕಾರ್ಯಕ್ರಮವು ಕೊನೆಗೊಳ್ಳುತ್ತಿದ್ದಂತೆ ಐರ್ಲೆಂಡ್ನಲ್ಲಿನ ಇಂಟೆಲ್ ಉದ್ಯೋಗಿಗಳು ಕಡ್ಡಾಯ ವಜಾಗೊಳಿಸುವಿಕೆಯನ್ನು ಎದುರಿಸುವ ಸಾಧ್ಯತೆಯಿದೆ. ಔಟ್ಲೆಟ್ ಪರಿಶೀಲಿಸಿದ ಆಂತರಿಕ ಮೆಮೋವು ಇಂಟೆಲ್ ಸ್ವಯಂಪ್ರೇರಿತ ವಿಚ್ಛೇದನ ಅರ್ಜಿಗಳನ್ನು “ವ್ಯವಹಾರ ಆದ್ಯತೆಗಳ” ಪ್ರಕಾರ ಮೌಲ್ಯಮಾಪನ ಮಾಡುತ್ತದೆ ಎಂದು ಸೂಚಿಸುತ್ತದೆ, ಅಂದರೆ ಸ್ವಯಂಪ್ರೇರಿತ ಪ್ರತ್ಯೇಕತೆಗೆ ಅರ್ಜಿ ಸಲ್ಲಿಸಿದ ಕೆಲವು ಉದ್ಯೋಗಿಗಳು ತಮ್ಮ ವಿನಂತಿಗಳನ್ನು ನಿರಾಕರಿಸಬಹುದು. ಜ್ಞಾಪಕ ಪತ್ರವು ಹೀಗೆ ಹೇಳುತ್ತದೆ: ವ್ಯವಹಾರ ಘಟಕಗಳು ಅರ್ಹರಾದ ಮತ್ತು ಸಾಧನದಲ್ಲಿ ಅರ್ಜಿ ಸಲ್ಲಿಸುವ ಎಲ್ಲಾ ಉದ್ಯೋಗಿಗಳನ್ನು ಪರಿಶೀಲಿಸುತ್ತವೆ ಮತ್ತು ವ್ಯವಹಾರದ ಆದ್ಯತೆಗಳ ಆಧಾರದ ಮೇಲೆ ಯಾರನ್ನು ಸ್ವೀಕರಿಸಬೇಕು ಮತ್ತು ಯಾರು ಸ್ವೀಕರಿಸಬಾರದು ಎಂಬುದರ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತವೆ ಎಂದಿದೆ. ಗಮನಾರ್ಹ ಪುನರ್ರಚನೆ ಪ್ರಯತ್ನದ ಭಾಗವಾಗಿ, ಚಿಪ್ ತಯಾರಕ ತನ್ನ ಜಾಗತಿಕ ಉದ್ಯೋಗಿಗಳನ್ನು ಶೇಕಡಾ 15 ರವರೆಗೆ ಕಡಿಮೆ ಮಾಡಲು ಪ್ರಯತ್ನಿಸುತ್ತಿದೆ. ಐರ್ಲೆಂಡ್ನಲ್ಲಿ ತೆಗೆದುಹಾಕಲಾಗುವ ಸ್ಥಾನಗಳ ನಿಖರ ಸಂಖ್ಯೆಯನ್ನು ಕಂಪನಿಯು ಬಹಿರಂಗಪಡಿಸದಿದ್ದರೂ, ಐರ್ಲೆಂಡ್ನಲ್ಲಿನ ತನ್ನ…

Read More

ರಾಣೆಬೆನ್ನೂರು: ಇಲ್ಲಿನ ಚಳಗೇರಿ ಟೋಲ್ ಬಳಿಯಲ್ಲಿ ಆಟೋ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಉಂಟಾಗಿದೆ. ಈ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಟೋಲ್ ಬಳಿಯಲ್ಲಿ ಆಟೋ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಆಟೋದಲ್ಲಿ ಪ್ರಯಾಣಿಸುತ್ತಿದ್ದಂತ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನುಳಿದಂತ ನಾಲ್ವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಆಟೋ-ಕ್ಯಾಂಟರ್ ಅಪಘಾತದಲ್ಲಿ ಗಾಯಗೊಂಡಿರುವಂತ ಗಾಯಾಳುಗಳನ್ನು ರಾಣೆಬೆನ್ನೂರು ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ರಾಣೆಬೆನ್ನೂರು ಗ್ರಾಮಾಂತರ ಠಾಣೆಯ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/renukaswamy-murder-case-court-rejects-a1-accused-pavithra-gowdas-bail-plea/ https://kannadanewsnow.com/kannada/criminal-case-to-be-fixed-if-pop-ganesha-is-installed-in-bengaluru-heres-how-bbmp-guidelines/ https://kannadanewsnow.com/kannada/man-attempts-suicide-by-consuming-poison-in-court-fearing-jail-term-in-davangere/

Read More

ಬೆಂಗಳೂರು: 2024ನೇ ಸಾಲಿನ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ, ಗಣೇಶ ಮೂರ್ತಿಗಳ ತಯಾರಿಕೆ ಪ್ರಾರಂಭವಾಗಿರುತ್ತದೆ. ಗಣೇಶ ಮೂರ್ತಿಯ ತಯಾರಿಕೆಗಾಗಿ ಬಳಸುವ ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್‌(ಪಿಓಪಿ)ಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿ, ನಿರ್ಬಂಧಿಸುವುದರ ಕುರಿತು ಹಾಗೂ ಈ ರೀತಿಯ ವಸ್ತುಗಳನ್ನು ಬಳಸಿ ತಯಾರಿಕೆಯಾಗುವ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಂಡು ನಿಯಾಮಾನುಸಾರ ವಿಲೇವಾರಿ ಮಾಡುವ ಕುರಿತು ಹಾಗೂ ಹಬ್ಬಗಳ ಆಚರಣೆಯಿಂದ ಬರುವ ಹಸಿತ್ಯಾಜ್ಯವನ್ನು ಪಾಲಿಕೆಯ ಸಂಸ್ಕರಣಾ ಘಟಕಗಳಿಗೆ ಸಂಸ್ಕರಣೆಗಾಗಿ ಕಳುಹಿಸಬೇಕಾಗಿರುತ್ತದೆ. ದಿನಾಂಕ: 27-02-2015 ರಂದು ನಡೆದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಭೆಯಲ್ಲಿ ತೀರ್ಮಾನವಾದ ವಿಷಯದ ಸಂಖ್ಯೆ:407/2014-15 ರ ನಿರ್ಣಯದನ್ವಯ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸಿದ್ದಲ್ಲಿ ಸಂಬಂಧಪಟ್ಟವರ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಬೇಕಾಗಿ ತೀರ್ಮಾನವಾಗಿರುತ್ತದೆ. ಅದರಂತೆ, ದಿನಾಂಕ: 23-08-2024 ರಂದು ಮಾನ್ಯ ಮುಖ್ಯ ಆಯುಕ್ತರು ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ಹಾಗೂ ತೀರ್ಮಾನಗಳಂತೆ ಪರಿಸರ ಸ್ನೇಹಿ…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲುಪಾಲಾಗಿರುವಂತ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ1 ಆರೋಪಿಯಾಗಿರುವಂತ ಪವಿತ್ರಾ ಗೌಡ ಅವರು ಪ್ರಕರಣದಲ್ಲಿ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಇಂದು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಸಲಾಯಿತು. ರೇಣುಕಾಸ್ವಾಮಿ ಹತ್ಯೆ ಆರೋಪಿ ಎ.1 ಪವಿತ್ರಾ ಗೌಡ ಹಾಗೂ ಅನುಕುಮಾರ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಪವಿತ್ರಾ ಗೌಡಗೆ ಬಿಗ್ ಶಾಕ್ ನೀಡಲಾಗಿದೆ. https://kannadanewsnow.com/kannada/bmtc-pass-now-available-on-mobile-app-as-well-follow-this-step-get-digital-bus-pass/ https://kannadanewsnow.com/kannada/note-bescom-cash-counters-to-remain-open-on-sunday-september-1-electricity-bill-payments-allowed/

Read More

ಬೆಂಗಳೂರು: ಈವರೆಗೆ ಪೂರ್ವ ಮುದ್ರಿತ ಬಸ್ ಪಾಸ್ ವಿತರಿಸುತ್ತಿದ್ದಂತ ಬಿಎಂಟಿಸಿ, ಇನ್ಮುಂದೆ ಡಿಜಿಟಲ್ ಬಸ್ ಪಾಸ್ ವಿತರಿಸಲಿದೆ. ಈ ಡಿಜಿಟಲ್ ಬಸ್ ಪಾಸ್ ಅನ್ನು ಮೊಬೈಲ್ ಆಪ್ ನಲ್ಲೇ ಪಡೆಯಬಹುದಾಗಿದೆ. ಹಾಗಾದ್ರೇ ಡಿಜಿಟಲ್ ಬಿಎಂಟಿಸಿ ಬಸ್ ಪಾಸ್ ಪಡೆಯೋದಕ್ಕೆ ಈ ಕೆಳಗಿನ ಹಂತಗಳನ್ನು ಅನುಸರಿಸಿ. ದೈನಿಕ, ಸಾಪ್ತಾಹಿಕ ಹಾಗೂ ಮಾಸಿಕ ಪಾಸುಗಳನ್ನು ಮೊಬೈಲ್ ಆ್ಯಪ್ ಮೂಲಕ ವಿತರಿಸಲು ಬಿಎಂಟಿಸಿ ಕ್ರಮ ಕೈಗೊಂಡಿದೆ. ಪ್ರಯಾಣಿಕರಿಗೆ ಪಾಸುಗಳು ಸುಲಭವಾಗಿ ದೊರೆಯಲು ಹಾಗೂ ನಗದು ರಹಿತ, ಕಾಗದ ರಹಿತ ಮತ್ತು ಸಂಪರ್ಕ ರಹಿತ ವಹಿವಾಟಿಗಾಗಿ, ಡಿಜಿಟಲ್ ವ್ಯವಸ್ಥೆಯಲ್ಲಿ ಪಾಸುಗಳ ವಿತರಣೆಯಾಗಲಿದೆ. ಮೊಬೈಲ್‌ನಲ್ಲಿ ಪ್ಲೇಸ್ಟೋರ್‌ಗೆ ಹೋಗಿ ಟುಮ್ಯಾಕ್‌ ಆ್ಯಪ್‌ (Tummoc App) ಡೌನ್ಲೋಡ್‌ ಮಾಡಿಕೊಂಡು ನೋಂದಣಿ ಮಾಡಿಕೊಳ್ಳಬೇಕು. ಪಾಸ್‌ ಆಯ್ಕೆ ಮಾಡಿಕೊಂಡು ವಿವರ ಭರ್ತಿ ಮಾಡಿ ಭಾವಚಿತ್ರ ಸಹಿತ ಅಪ್‌ಲೋಡ್‌ ಮಾಡಬೇಕು. ದೃಢೀಕರಣಗೊಂಡ ಬಳಿಕ ಪಾಸ್‌ ಮೊತ್ತ ಪಾವತಿಸಬೇಕು. ದೈನಿಕ ಪಾಸುಗಳನ್ನು ಇ.ಟಿ.ಎಂ ಯಂತ್ರದ ಮೂಲಕ ನಿರ್ವಾಹಕರಿಂದ ಪಡೆದುಕೊಳ್ಳಬಹುದು. BMTC ಡಿಜಿಟಲ್ ಬಸ್ ಪಾಸ್ ಪಡೆಯಲು ಈ…

Read More

ಬೆಂಗಳೂರು: ಮುಡಾ ಹಗರಣದಲ್ಲಿ ರಾಜ್ಯಪಾಲರು ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್.2ಕ್ಕೆ ಮುಂದೂಡಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಮತ್ತೆ ತಾತ್ಕಾಲಿಕ ರಿಲೀಫ್ ನೀಡಿದೆ. ಇಂದು ಸಿಎಂ ಸಿದ್ಧರಾಮಯ್ಯ ಅವರು ಮುಡಾ ಹಗರಣ ಸಂಬಂಧ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದಲ್ಲಿ ವಿಚಾರಣೆ ನಡೆಯಿತು. ದೂರುದಾರ ಪ್ರದೀಪ್ ಕುಮಾರ್ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾದವಗಿ ಅವರು ಆರೋಪಿಗಳಿಗೆ ನೋಟಿಸ್ ನೀಡಿ ತನಿಖೆಗೆ ಅವಕಾಶ ನೀಡಬಾರದು. ನೋಟಿಸ್ ನೀಡಿದರೇ ತನಿಖೆಯೇ ಪೂರ್ವಗ್ರಾಹಕ್ಕೊಳಗಾಗಲಿದೆ. 17ಎ ಹಂತದಲ್ಲಿ ರಾಜ್ಯಪಾಲರ ಕ್ರಮ ಪ್ರಶ್ನಿಸಲು ಅವಕಾಶವಿಲ್ಲ. ಎಫ್ಐಆರ್ ದಾಖಲಾದ ಬಳಿಕವಷಅಟೇ ಆರೋಪಿಗೆ ಅದನ್ನು ಪ್ರಶ್ನಿಸುವ ಹಕ್ಕು ಬರಲಿದೆ ಎಂದು ವಾದಿಸಿದರು. ಸಂವಿಧಾನದ 163ರಡಿ ಸಿಎಂ ಕೂಡ ಕ್ಯಾಬಿನೆಟ್ ಭಾಗವಾಗಿದ್ದಾರೆ. ಹೀಗಾಗಿ ಸಿಎಂ ಹೊರತಾದ ಕ್ಯಾಬಿನೆಟ್ ಇರಲು ಸಾಧ್ಯವಿಲ್ಲ. ಹೀಗಾಗಿ ಕ್ಯಾಬಿನೆಟ್ ನಿರ್ಣಯವನ್ನು ರಾಜ್ಯಪಾಲರು…

Read More