Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ 45 ಗಂಟೆಗಳ ಸುದೀರ್ಘ ಧ್ಯಾನವನ್ನು ಪೂರ್ಣಗೊಳಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತಮಿಳುನಾಡಿನ ಕನ್ಯಾಕುಮಾರಿಯ ಪ್ರಶಾಂತ ತೀರದಲ್ಲಿ ತಮ್ಮ ಅಭೂತಪೂರ್ವ 45 ಗಂಟೆಗಳ ಧ್ಯಾನ ಅಧಿವೇಶನವನ್ನು ಮುಕ್ತಾಯಗೊಳಿಸಿದರು. ಪ್ರಧಾನಿಯವರು ಆಧ್ಯಾತ್ಮಿಕ ಭೇಟಿಗಾಗಿ ಕನ್ಯಾಕುಮಾರಿಗೆ ಆಗಮಿಸಿದ್ದರು. ಪೂಜ್ಯ ಹಿಂದೂ ತತ್ವಜ್ಞಾನಿ ಸ್ವಾಮಿ ವಿವೇಕಾನಂದರು ‘ಭಾರತ ಮಾತೆ’ ಬಗ್ಗೆ ದೈವಿಕ ದರ್ಶನ ಹೊಂದಿದ್ದರು ಎಂದು ನಂಬಲಾದ ಧ್ಯಾನ ಮಂಟಪದಲ್ಲಿ ಅವರು ಧ್ಯಾನ ಮಾಡುತ್ತಿದ್ದರು. ಇದು ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನದ ಮುಕ್ತಾಯದೊಂದಿಗೆ ಹೊಂದಿಕೆಯಾಗುತ್ತದೆ. ಇದಕ್ಕೂ ಮುನ್ನ ಅವರು ವಿವೇಕಾನಂದ ರಾಕ್ ಮೆಮೋರಿಯಲ್ ನಲ್ಲಿ ಸೂರ್ಯೋದಯದ ಸಮಯದಲ್ಲಿ ‘ಸೂರ್ಯ ಅರ್ಘ್ಯ’ ಮಾಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಿಎಂ ಮೋದಿ ಅವರು ಸೂರ್ಯನ ರೂಪದಲ್ಲಿ ಪ್ರಕಟವಾದ ಸರ್ವಶಕ್ತನಿಗೆ ನಮಸ್ಕರಿಸುವ ಆಧ್ಯಾತ್ಮಿಕ ಅಭ್ಯಾಸಕ್ಕೆ ಸಂಬಂಧಿಸಿದ ‘ಸೂರ್ಯ ಅರ್ಘ್ಯ’ ಆಚರಣೆಯನ್ನು ಕೈಗೊಂಡರು. ಸಾಂಪ್ರದಾಯಿಕ, ಬೀಕರ್ ತರಹದ ಸಣ್ಣ ಪಾತ್ರೆಯಿಂದ ಸ್ವಲ್ಪ ನೀರನ್ನು ಸಮುದ್ರಕ್ಕೆ ಅರ್ಘ್ಯವಾಗಿ (ಅರ್ಘ್ಯ)…
ಬೆಂಗಳೂರು : ಸಿಎಂ ಹಾಗೂ ತಮ್ಮ ವಿರುದ್ಧ ಕೇರಳದ ದೇವಸ್ಥಾನದ ಸಮೀಪದ ಖಾಸಗಿ ಜಾಗದಲ್ಲಿ ಶತ್ರು ಭೈರವಿ ಯಾಗ ನಡೆಯುತ್ತಿರುವುದಾಗಿ ಹೇಳಿದ್ದೇನೆಯೇ ಹೊರತು ಕೇರಳದ ದೇವಸ್ಥಾನದಲ್ಲಿ ನಡೆಯುತ್ತಿರುವುದಾಗಿ ಹೇಳಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದರು. ನಗರದ ಸಿವಿಲ್ ಕೋರ್ಟ್ ಮುಂಭಾಗದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು. ಕೇರಳದ ದೇವಾಲಯಗಳಲ್ಲಿ ವಾಮಾಚಾರ, ಪ್ರಾಣಿಬಲಿ ನಡೆಯುತ್ತಿಲ್ಲ ಎಂಬ ಕೇರಳ ಸಚಿವೆಯ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ, “ನಾನು ದೇವಾಲಯದಲ್ಲಿ ವಾಮಾಚಾರ ನಡೆಯುತ್ತಿದೆ ಎಂದು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಕೇರಳ ದೇವರ ನಾಡು. ಅಲ್ಲಿನ ದೇವಾಲಯಗಳ ಬಗ್ಗೆ ನನಗೆ ಅಪಾರ ಗೌರವಿದೆ. ನಾನು ಯಾರ ಭಾವನೆಗಳಿಗೂ ಧಕ್ಕೆಯಾಗುವಂತೆ ನಡೆದುಕೊಂಡಿಲ್ಲ” ಎಂದರು. “ಇತ್ತೀಚೆಗೆ ರಾಜರಾಜೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದೆ. ನಾನು ರಾಜರಾಜೇಶ್ವರ ದೇವರ ಭಕ್ತ. ಎಲ್ಲಿ ವಾಮಾಚಾರ ನಡೆಯುತ್ತಿದೆ ಎನ್ನುವ ಬಗ್ಗೆ ಮಾಹಿತಿ ನೀಡಲು ಆ ದೇವಾಲಯದ ಹೆಸರು ಬಳಸಿದೆ. ಅದರ ಆಸುಪಾಸಿನ ಖಾಸಗಿ ಜಾಗದಲ್ಲಿ ನಡೆದಿದೆ…
ಹಾಸನ: ಹಾಸನ ಪೆನ್ ಡ್ರೈವ್ ಹಂಚಿಕೆ ವೈರಲ್ ಮಾಡಿದಂತ ಪ್ರಕರಣ ಸಂಬಂಧ ಶಾಸಕ ಎ.ಮಂಜು ಅವರನ್ನು ಪೊಲೀಸರು ಸತತ 1 ಗಂಟೆಯಿಂದ ವಿಚಾರಣೆ ನಡೆಸುತ್ತಿದ್ದಾರೆ. ಈಗಾಗಲೇ ಹಾಸನ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಇಬ್ಬರು ಜೈಲು ಪಾಲಾಗಿದ್ದಾರೆ. ಅಶ್ಲೀಲ ವೀಡಿಯೋ ಕೇಸಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ವಶದಲ್ಲಿದ್ದಾರೆ. ಸಂತ್ರಸ್ತೆ ಕಿಡ್ನ್ಯಾಪ್ ಕೇಸಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಭವಾನಿ ರೇವಣ್ಣ ಬಂಧನದ ಭೀತಿಯಲ್ಲಿದ್ದಾರೆ. ಹೆಚ್.ಡಿ ರೇವಣ್ಣ ಅಂತೂ ಜಾಮೀನು ಪಡೆದು ಹೊರಗಿದ್ದಾರೆ. ಇದರ ನಡುವೆ ಅರಕಲಗೂಡು ಶಾಸಕ ಎ.ಮಂಜು ಅವರನ್ನು ಹಾಸನದ ಸೈಬರ್ ಕ್ರೈಂ ಠಾಣೆಯ ಪೊಲೀಸರು, ಹಾಸನ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ ವಿಚಾರಣೆ ನಡೆಸುತ್ತಿದ್ದಾರೆ. ಹಾಸನ ಸೈಬರ್ ಕ್ರೈಂ ಠಾಣೆಯ ಎಎಸ್ಪಿ ಎಂ.ಕೆ ತಮ್ಮಯ್ಯ ಅವರ ನೇತೃತ್ವದಲ್ಲಿ ಶಾಸಕ ಎ.ಮಂಜು ಅವರನ್ನು ಸತತ 1 ಗಂಟೆಯಿಂದ ವಿಚಾರಣೆ ನಡೆಸಲಾಗುತ್ತಿದೆ. ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/alert-mobile-user-note-government-warns-against-accepting-these-calls/ https://kannadanewsnow.com/kannada/big-news-free-electricity-for-all-government-schools-in-the-state-state-government/
ಬೆಂಗಳೂರು: ರಾಜ್ಯ ಸರ್ಕಾರದಿಂದ ಗುತ್ತಿಗೆ ಕಾಮಗಾರಿಯಲ್ಲಿ ನಡೆಯುತ್ತಿರೋ ಕಳಪೆ ಕಾಮಗಾರಿಯನ್ನು ತಡೆಯಲು ಮಹತ್ವದ ಕ್ರಮ ವಹಿಸಲಾಗಿದೆ. ಈವರೆಗಿನ ಗುತ್ತಿಗೆ ನಿಯಮಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಮೂಲಕ ರಾಜ್ಯ ಸರ್ಕಾರದಿಂದ ಗುತ್ತಿಗೆದಾರರಿಗೆ ಬಿಗ್ ಶಾಕ್ ನೀಡಲಾಗಿದೆ. ಒಂದು ವೇಳೆ ನಿಯಮ ಪಾಲಿಸದೇ ಇದ್ದರೇ ಡಿಬಾರ್ ಮೆಂಟ್ ಮಾಡೋದಾಗಿ ಎಚ್ಚರಿಕೆ ನೀಡಿದೆ. ಈ ಕುರಿತಂತೆ ಲೋಕೋಪಯೋಗಿ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ವಿಜಯಕುಮಾರಿ ಕೆ.ಸಿ ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ನಿಯಮಗಳು 2000ರ ನಿಯಮ 26(ಎ)ರನ್ವಯ ಟೆಂಡರ್ದಾರ ಅಥವಾ ಗುತ್ತಿಗೆದಾರ ಅಥವಾ ಸರಬರಾಜುದಾರ ಅಥವಾ ಅವರ ಯಾವುದೇ ಉತ್ತರಾಧಿಕಾರಿಯನ್ನು ಡಿಬಾರ್ ಮಾಡುವ ಕುರಿತು ಸಂಗ್ರಹಣಾ ಸಂಸ್ಥೆಯ ಹಂತದಲ್ಲಿ ಡಿಬಾರ್ಮೆಂಟ್ ಸಮಿತಿಯನ್ನು ರಚಿಸುವ ಕುರಿತು ಉಲ್ಲೇಖಿತ ದಿನಾಂಕ:27.07.2022ರ ಸುತ್ತೋಲೆಯಲ್ಲಿ ಸೂಚನೆಗಳನ್ನು ನೀಡಲಾಗಿರುತ್ತದೆ. ಹಾಗೂ ಸಂಗ್ರಹಣಾ ಪ್ರಾಧಿಕಾರಗಳು ಆರ್ಥಿಕ ಇಲಾಖೆಯ ಅಧಿಸೂಚನೆ ಸಂಖ್ಯೆ: FD 884 Exp-12/2019, ದಿನಾಂಕ:07.05.2020 ರಲ್ಲಿ ಹೊರಡಿಸಿರುವ ಕೆಟಿಪಿಪಿ ನಿಯಮ 26A ರನ್ವಯ ಡಿಬಾರ್ಮೆಂಟ್ ಸಮಿತಿ ರಚಿಸಲು…
ಶಿವಮೊಗ್ಗ: ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಗೆಲುವಿನ ಓಟದಲ್ಲಿ ಮುಂದಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಕಾರಣ ಎನ್ನುವಂತೆ ಭದ್ರಾವತಿ ತಾಲೂಕಿನಲ್ಲಿ ಮತದಾರರು ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಗೆ ಭಾರೀ ಬೆಂಬಲ ವ್ಯಕ್ತ ಪಡಿಸಿರೋದಾಗಿ ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತದಾರರು ಒಲವು ತೋರಿದ್ದಾರೆ ಎನ್ನಲಾಗುತ್ತಿದೆ. ಮತಬೇಟೆಗೆ ಇಳಿದಿರುವಂತ ಕಾಂಗ್ರೆಸ್ ಪಕ್ಷದ ಶಾಸಕರು, ಸಚಿವರು, ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಟೊಂಕಕಟ್ಟಿ ನಿಂತಿದ್ದಾರೆ ಎನ್ನುವಂತೆ ಮತಯಾಚನೆಯಲ್ಲಿ ತೊಡಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಅವರು ತಮ್ಮ ನಿವಾಸದಲ್ಲಿ ಶಿಕ್ಷಕರು, ಶಿಕ್ಷಕರ ಸಂಘಟನೆಯೊಂದಿಗೆ ಸಭೆ ನಡೆಸಿದರು. ಈ ವೇಳೆಯಲ್ಲಿ ವಿಧಾನಪರಿಷತ್ ಚುನಾವಣೆಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ಡಾ.ಕೆ.ಕೆ ಮಂಜುನಾಥ್ ಕುಮಾರ್ ಹಾಗೂ ಪದವೀಧರ ಕ್ಷೇತ್ರದ ಆಯನೂರು ಮಂಜುನಾಥ್ ಗೆ ಮೊದಲ ಪ್ರಾಶಸ್ತ್ಯ ಮತ ನೀಡುವಂತೆ ಮನವಿ ಮಾಡಿದರು. ಶಾಸಕ ಬಿ.ಕೆ ಸಂಗಮೇಶ್…
ಶಿವಮೊಗ್ಗ: ಜೂನ್.3ರಂದು ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಮತದಾರರನ್ನು ಮನವೊಲಿಸೋ ಕೆಲಸದಲ್ಲಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತೊಡಗಿದ್ದಾರೆ. ಇಂದು ಸಾಗರ ನಗರದ ಜೂನಿಯರ್ ಕಾಲೇಜಿಗೆ ಭೇಟಿ ನೀಡಿದಂತ ಅವರು, ಕಾಲೇಜಿನ ಉಪನ್ಯಾಸಕರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದಂತ ಪದವೀಧರ ಕ್ಷೇತ್ರದ ಆಯನೂರು ಮಂಜುನಾಥ್, ಶಿಕ್ಷಕರ ಕ್ಷೇತ್ರದ ಡಾ.ಕೆ.ಕೆ ಮಂಜುನಾಥ್ ಕುಮಾರ್ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು. ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಮನವಿಗೆ ಸಕಾರಾತ್ಮಕವಾಗಿಯೇ ಸ್ಪಂದಿಸಿರುವಂತ ಮತದಾರರು, ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್, ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಗೆ ಮತ ನೀಡುವಂತ ಭರವಸೆ ನೀಡಿದ್ದಾರೆ. ಇದಲ್ಲದೇ ಸಾಗರ ನಗರದಲ್ಲಿನ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಸೇರಿದಂತೆ ಇತರೆ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿದಂತ ಶಾಸಕ ಬೇಳೂರು ಗೋಪಾಲಕೃಷ್ಣ ಅವರು, ತಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸುವಂತೆ ಮನವಿ ಮಾಡಿಕೊಂಡರು. ಶಾಸಕ…
ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಕೇಸ್: ನಾನು ರವಿ ಇಬ್ಬರೂ ಪಾಟ್ನರ್ಸ್, ಪಾಲು ಹಂಚಿಕೊಂಡಿದ್ದೇವೆ: DKS ತಿರುಗೇಟು
ಬೆಂಗಳೂರು: ವಾಲ್ಮೀಕ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಾನು ಸಿ.ಟಿ ರವಿ ಇಬ್ಬರೂ ಪಾಟ್ನರ್ಸ್ ಆಗಿದ್ದೇವೆ. ಸಿಎಂ, ನಾನು ಹಣ ಹಂಚಿಕೊಂಡಿದ್ದಾರೆ ಅಂತ ಹೇಳಿದ್ದಾರೆ. ಆದ್ರೇ ರವಿ ಮತ್ತು ನಾನು ಇಬ್ಬರೂ ಹಂಚಿಕೊಂಡಿದ್ದೇವೆ ಅಂತ ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ನಗರದ ಸಿವಿಲ್ ಕೋರ್ಟ್ ಮುಂಭಾಗದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ರವಿ ಮತ್ತು ನಾನು ಹಣ ಹಂಚಿಕೊಂಡಿದ್ದೇವೆ ಸಿ.ಟಿ. ರವಿ ಆರೋಪದ ಬಗ್ಗೆ ಕೇಳಿದಾಗ “ಯಾರೋ ಒಬ್ಬ ರವಿ ಎನ್ನುವವನು ನನ್ನ ಮೇಲೆ ಹೇಳುತ್ತಿದ್ದಾನೆ. ನಾನು ಮತ್ತು ಅವನು ಇಬ್ಬರೂ ಪಾರ್ಟನರ್ಸ್. ಸಿಎಂ ಮತ್ತು ನಾನು ಹಣ ಹಂಚಿಕೊಂಡಿದ್ದೇವೆ ಎಂದು ಹೇಳಿದ್ದಾನಲ್ಲ. ಆದರೆ ರವಿ ಮತ್ತು ನಾನು ಇಬ್ಬರೂ ಹಂಚಿಕೊಂಡಿದ್ದೇವೆ” ಎಂದು ತಿರುಗೇಟು ನೀಡಿದರು. ಹಗರಣದ ತನಿಖೆಯನ್ನು ಸಿಬಿಐಗೆ ನೀಡಬೇಕು ಎನ್ನುವ ಆಗ್ರಹದ ಬಗ್ಗೆ ಕೇಳಿದಾಗ “ಇಂತಿಷ್ಟು ಕೋಟಿಯ ಬ್ಯಾಂಕ್ ಅವ್ಯವಹಾರ ನೇರವಾಗಿ ಸಿಬಿಐ ತನಿಖೆಗೆ ಹೋಗುತ್ತದೆ. ಅದು ನಿಯಮ. ಇಲ್ಲಿ ಸರ್ಕಾರ…
ಬೆಂಗಳೂರು: “ಇಡೀ ದೇಶದಲ್ಲೇ ಕರ್ನಾಟಕ ಬಿಜೆಪಿ ಅತ್ಯಂತ ಭ್ರಷ್ಟ ಪಕ್ಷ. ಬಿಜೆಪಿಯ ಭ್ರಷ್ಟಾಚಾರವನ್ನು ಬಯಲು ಮಾಡಲು ಅವರೇ ಕರೆಯುತ್ತಿದ್ದಾರೆ. ಈಗ ನಾವು ನಮ್ಮ ಶಕ್ತಿ ತೋರಿಸುತ್ತೇವೆ” ಎಂದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ನಗರದ ಸಿವಿಲ್ ಕೋರ್ಟ್ ಮುಂಭಾಗದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. “ನಮ್ಮ ಜಾಹೀರಾತುಗಳ ಬಗ್ಗೆ ಬಿಜೆಪಿಯವರು ಖಾಸಗಿ ದೂರು ನೀಡಿದ್ದಾರೆ. ನಾವು ಸುಮ್ಮನೆ ಜಾಹೀರಾತು ನೀಡಿಲ್ಲ. ಬಿಜೆಪಿ ನಾಯಕರ, ಸಚಿವರ ಹೇಳಿಕೆಗಳ ಆಧಾರದ ಮೇಲೆ ಹಾಗೂ ಮಾಧ್ಯಮಗಳಲ್ಲಿ ಬಂದ ವರದಿಯನ್ನು ಆಧರಿಸಿ ಹಿಂದಿನ ರಾಜ್ಯ ಬಿಜೆಪಿ ಸರಕಾರದ ಹಗರಣಗಳ ಬಗ್ಗೆ ಪತ್ರಿಕಾ ಜಾಹೀರಾತು ನೀಡಿದ್ದೆವು. ಇದನ್ನೆಲ್ಲಾ ನಾವು ಸಾಬೀತು ಮಾಡುತ್ತೇವೆ ಎಂದರು. ಕೇಂದ್ರದ ಮಾಜಿ ಸಚಿವ, ಶಾಸಕ ಯತ್ನಾಳ್ ಅವರೇ ತಮ್ಮ ಬಿಜೆಪಿ ಸರ್ಕಾರದ ಮೇಲೆ ಹಗರಣದ ಆರೋಪ ಮಾಡಿದ್ದರು. ಹಣ ನೀಡದೆ ಯಾವುದೇ ಮಂತ್ರಿ ಸ್ಥಾನ ಸಿಗುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಮುಖ್ಯಮಂತ್ರಿ ಸ್ಥಾನಕ್ಕೆ 2,500 ಸಾವಿರ ಕೋಟಿ, ಮಂತ್ರಿ…
ಚಾಮರಾಜನಗರ: ರಾಜ್ಯದ ಪ್ರತಿಷ್ಠಿತ ದೇವಾಲಯಗಳಲ್ಲಿ ಒಂದು ಕೊಳ್ಳೇಗಾಲದ ಚಿಕ್ಕಲ್ಮೂರು ಸಿದ್ದಪ್ಪಾಜಿ ದೇವಾಲಯವಾಗಿದೆ. ಈ ದೇವಾಲಯದ ಅರ್ಚಕರು ತ್ರಿಶೂದಲ್ಲಿ ಹೊಡೆದಾಡಿಕೊಂಡ ಪರಿಣಾಮ, ಮೂವರು ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಚಾಮರಾಜನಗರದ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಪ್ರಸಿದ್ಧ ದೇವಾಲಯ ಚಿಕ್ಕಲ್ಮೂರು ಸಿದ್ದಪ್ಪಾಜಿ ದೇವಸ್ಥಾನದ ಅರ್ಚಕರ ನಡುವೆ ಗಲಾಟೆಯಾಗಿದೆ. ಗಲಾಟೆ ಸಂದರ್ಭದಲ್ಲಿ ಅರ್ಚಕರು ಪರಸ್ಪರ ತ್ರಿಶೂಲ ಹಿಡಿದು ಹೊಡೆದಾಡಿಕೊಂಡಿದ್ದಾರೆ. ಅರ್ಚಕರ ನಡುವಿನ ಹೊಡೆದಾಟದಲ್ಲಿ ಚಿಕ್ಕಲೀರಿ ದೇವಾಲಯದ ಅರ್ಚಕ ಶಂಕರಪ್ಪ, ಶಿವಕುಮಾರಸ್ವಾಮಿ ಹಾಗೂ ನಂಜುಂಡಸ್ವಾಮಿ ಎಂಬುವರು ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಚಿಕ್ಕಲ್ಮೂರು ಸಿದ್ದಪ್ಪಾಜಿ ದೇವಸ್ಥಾನದಲ್ಲಿ ಅರ್ಚಕರ ನಡುವಿನ ಗಲಾಟೆಗೆ ಪ್ರಮುಖ ಕಾರಣ, ಪೂಜೆ ವಿಚಾರಕ್ಕೆ ಎಂಬುದಾಗಿ ಹೇಳಲಾಗುತ್ತಿದೆ. ಗಲಾಟೆ ತಾರಕಕ್ಕೇರಿದಂತ ಸಂದರ್ಭದಲ್ಲಿ ಎರಡು ಗುಂಪಿನ ಅರ್ಚಕರು ಪರಸ್ಪರ ಬೆತ್ತ, ತ್ರಿಶೂಲದಲ್ಲಿ ಹೊಡೆದಾಡಿಕೊಂಡ ಪರಿಣಾಮ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/pakistan-occupied-kashmir-is-not-a-part-of-pakistan-shehbaz-govt-tells-hc/ https://kannadanewsnow.com/kannada/prajwal-revanna-pornography-video-case-jds-mla-a-manju-questioned-by-cyber-crime-police/
BREAKING: ‘ಪಾಕ್ ಆಕ್ರಮಿತ ಕಾಶ್ಮೀರ’ ಪಾಕಿಸ್ತಾನದ ಭಾಗವಲ್ಲ: ‘ಹೈಕೋರ್ಟ್’ನಲ್ಲಿ ಸತ್ಯ ಒಪ್ಪಿಕೊಂಡ ‘ಶೆಹಬಾಜ್ ಸರ್ಕಾರ’
ಇಸ್ಲಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರು 1999 ರಲ್ಲಿ ಭಾರತದೊಂದಿಗಿನ ಒಪ್ಪಂದವನ್ನು ಪಾಕಿಸ್ತಾನ ಮುರಿದಿದೆ ಎಂದು ಇತ್ತೀಚೆಗೆ ಒಪ್ಪಿಕೊಂಡಿದ್ದರು. ಈಗ ಪಾಕಿಸ್ತಾನ ಸರ್ಕಾರ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಬಗ್ಗೆ ಹೊಸ ಹೇಳಿಕೆ ನೀಡಿದೆ. ಪಿಒಕೆ ಕವಿ ಮತ್ತು ಪತ್ರಕರ್ತ ಅಹ್ಮದ್ ಫರ್ಹಾದ್ ಶಾ ಅವರ ಕಣ್ಮರೆ ಕುರಿತ ಎರಡು ವಾರಗಳ ವಿಚಾರಣೆಯ ಸಮಯದಲ್ಲಿ, ಪಾಕಿಸ್ತಾನ ಸರ್ಕಾರವು ಪಿಒಕೆ ತಮ್ಮ ಭಾಗವಲ್ಲ. ಅದು ವಿದೇಶಿ ಪ್ರದೇಶ ಎಂದು ಹೇಳಿದೆ. ನವಾಜ್ ಷರೀಫ್ ಸರ್ಕಾರದ ಈ ಹೇಳಿಕೆಯನ್ನು ಕೇಳಿ ಪಾಕಿಸ್ತಾನದ ಜನರು ಆಶ್ಚರ್ಯಚಕಿತರಾಗಿದ್ದಾರೆ. ಪಿಒಕೆ ಕವಿ ಅಹ್ಮದ್ ಫರ್ಹಾದ್ ಬಗ್ಗೆ, ಪಾಕಿಸ್ತಾನ ಸರ್ಕಾರದ ವಕೀಲರು ನ್ಯಾಯಾಲಯದಲ್ಲಿ, “ಅಹ್ಮದ್ ಫರ್ಹಾದ್ ಅವರನ್ನು ಬಂಧಿಸಲಾಗುವುದಿಲ್ಲ. ಏಕೆಂದರೆ ಪಿಒಕೆ ನಮ್ಮದಲ್ಲ ಆದರೆ ವಿದೇಶಿ ಪ್ರದೇಶ” ಎಂದು ಹೇಳಿದರು. ಆದಾಗ್ಯೂ, ಸರ್ಕಾರಿ ವಕೀಲರ ಈ ಹೇಳಿಕೆಯಿಂದ ಹೈಕೋರ್ಟ್ ಕೂಡ ಆಶ್ಚರ್ಯಚಕಿತವಾಗಿದೆ. ಪಿಒಕೆ ವಿದೇಶಿ ಭೂಪ್ರದೇಶವಾಗಿರುವಾಗ ಪಾಕಿಸ್ತಾನಿ ರೇಂಜರ್ಗಳು ಹೇಗೆ ಪ್ರವೇಶಿಸಿದರು ಎಂದು ನ್ಯಾಯಾಲಯ ಕೇಳಿದೆ. ಸರ್ಕಾರಿ…