Subscribe to Updates
Get the latest creative news from FooBar about art, design and business.
Author: kannadanewsnow09
ಕೊಪ್ಪಳ : ನಾನು 50 ವರ್ಷದಿಂದ ರಾಜಕಾರಣದಲ್ಲಿದ್ದೇನೆ. ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನೇ ಇವತ್ತಿನವರೆಗೂ ನಾನು ನೋಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ನುಡಿದರು. ಗಂಗಾವತಿಯಲ್ಲಿ ನಡೆದ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಬೃಹತ್ ಜನ ಸಾಗರವನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಿಕೆಗಳಲ್ಲಿ ಬಿಜೆಪಿ ಇಂದು ಸುಳ್ಳು ಜಾಹಿರಾತು ನೀಡಿದೆ. ಬಿಜೆಪಿ ಅಧಿಕಾರಿದಲ್ಲಿರುವ ಯಾವ ರಾಜ್ಯದಲ್ಲೂ ನಮ್ಮ ಹಾಗೆ ದಲಿತರಿಗೆ ಆರ್ಥಿಕ ಶಕ್ತಿ ನೀಡುವ SCP/TSP ಕಾಯ್ದೆ ಜಾರಿ ಮಾಡದ ಬಿಜೆಪಿ, ಕೇವಲ ಪತ್ರಿಕಾ ಜಾಹಿರಾತು ಮೂಲಕ ಹಾದಿ ತಪ್ಪಿಸುತ್ತಿದೆ. ಈ ಸುಳ್ಳು ಜಾಹಿರಾತು ನಂಬಿ ಮೋಸ ಹೋಗಬೇಡಿ ಎಂದರು. ಗಂಗಾವತಿ ನನಗೆ ಮನೆ ಇದ್ದಂತೆ ನನಗೆ ಗಂಗಾವತಿ ಮನೆ ಇದ್ದಂಗೆ. ನಾನು ಲೋಕಸಭೆಗೆ ನಿಂತಿದ್ದಾಗ ಗಂಗಾವತಿಯಲ್ಲಿ ಬಹುಮತ ಸಿಕ್ಕಿತ್ತು. ಈ ಋಣ ನಾನು ಯಾವತ್ತೂ ಮರೆಯಲ್ಲ. ಈ ಬಾರಿಯೂ ಗಂಗಾವತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಅತ್ಯಂತ ಹೆಚ್ಚು ಮತಗಳನ್ನು ಕಾಂಗ್ರೆಸ್ ಗೆ ಕೊಡಿಸಿ ಅಭೂತಪೂರ್ವವಾಗಿ…
ಹಾವೇರಿ: ಮಾಜಿ ಮುಖ್ಯಮಂತ್ರಿ ಬಸವರಾಜ ವಿರುದ್ಧ ಲೋಕಸಭಾ ಚುನಾವಣಾ ನೀತಿ ಸಂಹಿತೆ ಉಲ್ಘನೆ ಆರೋಪದಲ್ಲಿ ಎಫ್ ಐ ಆರ್ ದಾಖಲಾಗಿದೆ. ಅನುಮತಿ ಇಲ್ಲದೇ ನಗರದ ವಿದ್ಯಾಸಂಸ್ಥೆಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿರುವ ಆರೋಪದ ಮೇರೆಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ವಿರುದ್ಧ ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ. ಏ.27ರಂದು ಬೊಮ್ಮಾಯಿ ಅವರು ನಗರದ ಆಯುರ್ವೇದ ಕಾಲೇಜಿನಲ್ಲಿ ಪ್ರಚಾರ ಸಭೆ ನಡೆಸಿದ್ದರು. ನೀತಿಸಂಹಿತೆ ಜಾರಿ ಇರುವ ಸಂದರ್ಭದಲ್ಲಿ ಪೂರ್ವಾನುಮತಿ ಇಲ್ಲದೇ ಹಾಗೂ ನೀತಿಸಂಹಿತೆ ಅನ್ವಯ ನಿಷೇಧಿತ ಪ್ರದೇಶವಾದ ವಿದ್ಯಾಸಂಸ್ಥೆಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿದ್ದಾರೆ. ಇದಲ್ಲದೇ ಫೇಸ್ಬುಕ್ನಲ್ಲಿ ಸಭೆಯ ಫೋಟೊ ಹಂಚಿಕೊಳ್ಳುವ ಮೂಲಕ ನೀತಿಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕ್ಷಿಪ್ರ ಕಾರ್ಯಪಡೆ ಮುಖ್ಯಸ್ಥ ರಾಮಕೃಷ್ಣ ದೂರು ದಾಖಲಿಸಿದ್ದಾರೆ. ಈ ಮೂಲಕ ಮಾಜಿ ಸಿಎಂ ಬೊಮ್ಮಾಯಿಗೆ ಶಾಕ್ ನೀಡಲಾಗಿದೆ.
ಹಾವೇರಿ: ಪ್ರಧಾನಿ ನರೇಂದ್ರಮೋದಿಯವರ ವಿಕಸಿತ ಭಾರತದ ಕನಸು ಸಾಕಾರಗೊಳಿಸಲು ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರನ್ನು ಗೆಲ್ಲಿಸಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಕರೆ ನೀಡಿದ್ದಾರೆ. ಅವರು ಇಂದು ಬ್ಯಾಡಗಿಯಲ್ಲಿ ಬಸವರಾಜ ಬೊಮ್ಮಾಯಿಯವರ ಪರವಾಗಿ ಬೃಹತ್ ರೋಡ್ ಶೋ ನಡೆಸಿ ಮಾತನಾಡಿದರು. ನಿಮ್ಮ ಉತ್ಸಾಹ ನೋಡಿದರೆ ಬೊಮ್ಮಾಯಿಯವರನ್ನು ಸಂಸತ್ ಸದಸ್ಯರನ್ನಾಗಿ ಮಾಡುವ ತೀರ್ಮಾನ ಮಾಡಿದ್ದೀರಿ. ಇದು ಬೊಮ್ಮಾಯಿಯವರ ಚುನಾವಣೆಯಲ್ಲ. ಮೋದಿಯವರು ವಿಕಸಿತ ಭಾರತ ಮಾಡಲು ಚುನಾವಣೆ ನಡೆಯುತ್ತಿದೆ. ಅವರನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ ಕಳುಹಿಸುವಂತೆ ಮನವಿ ಮಾಡಿದರು. ಮೋದಿಯವರು ನಿಮಗೆ ಕಿಸಾನ್ ಸಮ್ಮಾನ್ ನಿಡಿದ್ದಾರಲ್ವಾ, ಉಜ್ವಲ ಗ್ಯಾಸ್ ನೀಡಿದ್ದಾರಲ್ವಾ, ನೀರು ನೀಡಿದ್ದಾರಲ್ವಾ, ಮೋದಿ ಭಾರತವನ್ನು ಆರ್ಥಿಕತೆಯಲ್ಲಿ ವಿಶ್ವದ ಐದನೇ ಸ್ಥಾನಕ್ಕೆ ತಂದು ನಿಲ್ಲಿಸಿದ್ದಾರೆ. ಅವರನ್ನು ಮೂರನೆ ಬಾರಿ ಪ್ರಧಾನಿ ಮಾಡಿದರೆ ಭಾರತವನ್ನು ವಿಶ್ವದ ಮೂರನೆ ಆರ್ಥಿಕ ಶಕ್ತಿಯಾಗಿ ಮಾಡುತ್ತಾರೆ ಎಂದರು. ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ, ಇಂಡಿ ಒಕ್ಕೂಟ ಭ್ರಷ್ಟಾಚಾರಿಗಳ ಕೂಟವಾಗಿದೆ. ಕಾಂಗ್ರೆಸ್…
ಬೆಂಗಳೂರು: ಸುಪ್ರೀಂ ಕೋರ್ಟ್ ಸೂಚನೆಯಂತೆ ಉತ್ತರಾಖಾಂಡದಲ್ಲಿ ಪತಂಜಲಿಯ ಕೆಲ ಉತ್ಪನ್ನಗಳಿಗೆ ನಿಷೇಧ ಹೇರಲಾಗಿದೆ. ಈ ಬೆನ್ನಲ್ಲೇ ಕರ್ನಾಟಕದಲ್ಲೂ ಪತಂಜಲಿ ಉತ್ಪನ್ನ ನಿಷೇಧದ ಭೀತಿ ಎದುರಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷೆಗೆ ಆದೇಶಿಸಿದ್ದಾರೆ. ಇಂದು ಈ ಬಗ್ಗೆ ಎಕ್ಸ್ ಮಾಡಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಉತ್ತರಕಾಂಡದ BJP ಸರ್ಕಾರ #Patanjali 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದೆ. ಜನರ ಆರೋಗ್ಯದ ದೃಷ್ಟಿಯಿಂದ ರಾಜ್ಯದಲ್ಲಿ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ನಾನು ಆದೇಶಿಸಿದ್ದೆ. ಆಗ ತನ್ನ ಮನೆಗೇ ಬೆಂಕಿ ಬಿದ್ದಂತೆ ಚಡಪಡಿಸಿದ್ದ ವಿಪಕ್ಷ ನಾಯಕ ಆರ್.ಅಶೋಕ್ ಪತಂಜಲಿ ಸಂಸ್ಥೆ ಮೇಲೆ ದ್ವೇಷ ಯಾಕೆ ಎಂದು ನನ್ನನ್ನು ಪ್ರಶ್ನಿಸಿದ್ದರು. ಈಗ ಅವರದ್ದೇ ಪಕ್ಷ ಅಧಿಕಾರದಲ್ಲಿರುವ ಉತ್ತರಕಾಂಡ ಸರ್ಕಾರ ಪತಂಜಲಿಯ 14 ಉತ್ಪನ್ನಗಳ ಪರವಾನಿಗೆಯನ್ನೇ ರದ್ದು ಮಾಡಿದೆ. ಈಗ ಅಶೋಕ್ರವರು ನನಗೆ ಕೇಳಿದ್ದ ಪ್ರಶ್ನೆಯನ್ನು ಉತ್ತರಕಾಂಡ ಸರ್ಕಾರಕ್ಕೂ ಕೇಳುತ್ತಾರಾ.? ಎಂದು ಪ್ರಶ್ನಿಸಿದ್ದಾರೆ. https://twitter.com/dineshgrao/status/1785158887081181322 ಸುಳ್ಳು ಜಾಹೀರಾತು ನೀಡಿ…
ದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪತ್ರ ಬರೆದು, ಚುನಾವಣೆಯಲ್ಲಿ ಗೆದ್ದು ಬರುವಂತೆ ಶುಭ ಕೋರಿದ್ದಾರೆ. ನೀವು ಸಂಸದರಾಗಿ ನನ್ನ ತಂಡ ಸೇರುತ್ತಿರುವುದು ದೊಡ್ಡ ಆಸ್ತಿ ಎಂದು ತಿಳಿಸಿದ್ದಾರೆ. ಸುದೀರ್ಘ ಪತ್ರ ಬರೆದಿರುವ ಅವರು, ನೀವು ಮುಖ್ಯಮಂತ್ರಿ ಯಾಗಿ, ನೀರಾವರಿ ಸಚಿವರಾಗಿ ಗೃಹ ಸಚಿವರಾಗಿ, ಕಾನೂನು ಸಚಿವರಾಗಿ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದೀರಿ, ನೀವು ಶಿಗ್ಗಾವಿಯಲ್ಲಿ ಸುಮಾರು 30 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಮಾಡಿದ್ದೀರಿ, ಕ್ಷೇತ್ರದಲ್ಲಿ ಸಿಮೆಂಟ್ ರಸ್ತೆಗಳು, ಶಿಕ್ಷಣ ಸಂಸ್ಥೆಗಳನ್ನು ನಿರ್ಮಾಣ ಮಾಡಿದ್ದೀರಿ, ಕೊವಿಡ್ ಸಂದರ್ಭದಲ್ಲಿ ನಿಮ್ಮ ಸ್ವಂತ ಮನೆಯನ್ನು ಕೊವಿಡ್ ಕೇಂದ್ರವನ್ನಾಗಿ ಮಾಡಿ ಆಸ್ಪತ್ರೆಗಳ ಮೇಲಿನ ಭಾರ ಕಡಿಮೆ ಮಾಡಿದ್ದೀರಿ. ನೇಕಾರರಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಿ, ಆಧುನಿಕ ತಂತ್ರಜ್ಞಾನ ಬಳಸಿ ಅವರ ಜೀವನ ಮಟ್ಟ ಸುಧಾರಣೆ ಮಾಡಿದ್ದೀರಿ, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಮಾಡಿದ್ದೀರ, ನೀವು ಒಬ್ಬ ಕಾರ್ಯಕರ್ತರಾಗಿ ಪಡೆದ ಅನುಭವ ಜನ ಸೇವಕರಾಗಿ ಮಾಡಿದ…
1) ಸಂಜೆ ದೇವರ ದೀಪ ಹಚ್ಚುವ ಸಮಯದಲ್ಲಿ ಮುಂಭಾಗದಲ್ಲಿರುವ ಬಾಗಿಲನ್ನು ತೆರೆದು ಮನೆಯ ಹಿಂಭಾಗದಲ್ಲಿರುವ ಬಾಗಿಲನ್ನು ಮುಚ್ಚಬೇಕು. 2)ಮನೆಯ ಮುಖ್ಯ ದ್ವಾರ ಬಾಗಿಲ ಹೊಸ್ತಿಲ ಮೇಲೆ ನಿಲ್ಲಬೇಡಿ.ಅಷ್ಟು ಮಾತ್ರವೇ ಅಲ್ಲ ಬೇರೆ ಯಾರು ಸಹ ಹೊಸ್ತಿಲ ಮೇಲೆ ನಿಲ್ಲದಂತೆ ಎಚ್ಚರ ವಹಿಸಿ ತಿಳಿ ಹೇಳಿ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ…
ಬೀದರ್ : ಯಾವುದೇ ರಾಗ, ದ್ವೇಷವಿಲ್ಲದೆ ಕರ್ತವ್ಯ ನಿರ್ವಹಿಸುವುದಾಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿ ಶಾಸಕನಾಗಿ, ಈಗ ಒಂದು ಕೋಮಿನ ಬಗ್ಗೆ ಹೀನಾಯವಾಗಿ ಮಾತನಾಡುವ, ದ್ವೇಷ ಬಿತ್ತುವ ಕೋಮುವಾದಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಶಾಸಕನಾಗಿರುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ನುಗ್ಗಿ ಹೊಡೆಯುತ್ತಾರೆ, ಅವರ ಹೆಣ್ಣುಮಕ್ಕಳನ್ನು ಹೊತ್ತೊಯ್ಯುತ್ತಾರೆ ಎಂದು ಊಹಾತ್ಮಕ ಹೇಳಿಕೆ ನೀಡಿ, ಮತದಾರರಲ್ಲಿ ಭೀತಿ ಹುಟ್ಟಿಸುತ್ತಿರುವ ಮತ್ತು ದ್ವೇಷ ಬಿತ್ತುತ್ತಿರುವ ಯತ್ನಾಳ್ ವಿರುದ್ಧ ಚುನಾವಣಾ ಆಯೋಗ ತತ್ ಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಖಂಡ್ರೆ ಕುಟುಂಬ ಲಿಂಗಾಯತರಿಗೆ ಕೊಟ್ಟಿರುವ ಕೊಡುಗೆ ಏನು ಎಂದು ಯತ್ನಾಳ್ ಪ್ರಶ್ನಿಸಿದ್ದಾರೆ, ವೀರಶೈವ ಲಿಂಗಾಯತರನ್ನು ಒಗ್ಗೂಡಿಸಿ ಸಂಘಟನೆ ಮಾಡಿದ್ದೇ ಶತಾಯುಷಿ ಭೀಮಣ್ಣ ಖಂಡ್ರೆ ಅವರು, ಬೆಂಗಳೂರಿನಲ್ಲಿ ಭವ್ಯ ವೀರಶೈವ ಲಿಂಗಾಯತ ಭವನ ನಿರ್ಮಿಸಿದ್ದೂ ಭೀಮಣ್ಣ ಖಂಡ್ರೆ ಅವರು, ಇಂದು ಜಿಲ್ಲೆ, ತಾಲೂಕು ಮಟ್ಟದಲ್ಲಿ ವೀರಶೈವ ಭವನ…
ಗೋಕಾಕ್ : ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ವೈಫಲ್ಯತೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಜನರು ಗಮನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ದೊರಕಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗೋಕಾಕ್ ನಗರದಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ-2 ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಪರ ಬೆಂಬಲ ನಿರೀಕ್ಷೆಗೆ ಮೀರಿ ಕಂಡುಬರುತ್ತಿದೆ. ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಗ್ಯಾರಂಟಿ ಯೋಜನೆಗಳು ಜನರಿಗೆ ನೀಡಲಾಗುತ್ತಿದೆ. ಆದರೆ ಮೋದಿಯವರು 2014 ಹಾಗೂ 2019 ರಲ್ಲಿ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದರು. ಮಣಿಪುರ ಹಿಂಸಾಚಾರದಲ್ಲಿ ಕೇಂದ್ರ ಕ್ರಮ ಕೈಗೊಂಡಿಲ್ಲ ಮೋದಿಯವರು , ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಮೋದಿಯವರು ಸುಳ್ಳು ಹೇಳುತ್ತಿದ್ದಾರೆ. ಮಣಿಪುರದ ಹಿಂಸಾಚಾರ ಘಟನೆಯಲ್ಲಿ ಕೇಂದ್ರ ಸರ್ಕಾರ ಏನು ಕ್ರಮ ಕೈಗೊಂಡಿದೆ. 30 ವರ್ಷಗಳಿಂದ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಲಾಗುತ್ತಿದೆ. ಬಸವರಾಜ ಬೊಮ್ಮಾಯಿ ಯವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 4%…
ಬೆಂಗಳೂರು: ಪಾರ್ಕಿನ್ಸನ್ ನಿಂದ ಉಂಟಾಗುವ ನರಮಂಡಲದ ಸಮಸ್ಯೆಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಥೆರಪಿಗಾಗಿ ಬನ್ನೇರುಘಟ್ಟ ಫೋರ್ಟಿಸ್ ಆಸ್ಪತ್ರೆಯಲ್ಲಿ ಪಾಕ್ಸಿನ್ಸನ್ ಮತ್ತು ಡೀಪ್ ಬ್ರೇನ್ ಸ್ಟಿಮುಲೇಷನ್ (ಡಿಬಿಎಸ್) ಎನ್ನುವ ಪ್ರತ್ಯೇಕ ಕ್ಲಿನಿಕ್ ಪ್ರಾರಂಭಿಸಲಾಗಿದೆ. ನೂತನ ಕ್ಲಿನಿಕ್ನನ್ನು ಉದ್ಘಾಟಿಸಿ ಮಾತನಾಡಿದ ಫೋರ್ಟಿಸ್ ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ವಿಭಾಗದ ನಿರ್ದೇಶಕ ಡಾ. ರಾಜಕುಮಾರ್ ದೇಶಪಾಂಡೆ, ಇಂದು ಸಾಕಷ್ಟು ಜನರು ವಯಸ್ಸಾದ ಬಳಿಕ ಪಾರ್ಕಿನ್ಸನ್ ಕಾಯಿಲೆಗೆ ತುತ್ತಾಗುತ್ತಿದ್ದಾರೆ, ಇದಕ್ಕೆ ಸೂಕ್ತ ಚಿಕಿತ್ಸೆಯನ್ನು ಫೋರ್ಟಿಸ್ ಆಸ್ಪತ್ರೆ ಈಗಾಗಲೇ ಪರಿಚಯಿಸಿದೆ, ಆದರೆ ಕೆಲವರಿಗೆ ಚಿಕಿತ್ಸೆಗಿಂತ ಹೆಚ್ಚಾಗಿ ಕೆಲವು ದೈಹಿಕ ಅಭ್ಯಾಸಗಳ ಮೂಲಕವೂ ಪಾರ್ಕಿನ್ಸನ್ನ ಲಕ್ಷಣಗಳಾದ ಕೈ-ಕಾಲು ನಡುಕ ಇತರೆ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಾಧ್ಯವಾಗಲಿದೆ. ಇದಕ್ಕಾಗಿಯೇ ಪ್ರತ್ಯೇಕ ಕ್ಲಿನಿಕ್ ತೆರೆದಿದ್ದೇವೆ. ಇದರ ಜೊತೆಗೆ, ಡೀಪ್ ಬ್ರೇನ್ ಸ್ಟಿಮ್ಯುಲೇಶನ್ (ಡಿಬಿಎಸ್) ಚಿಕಿತ್ಸೆಯೂ ದೊರೆಯಲಿದೆ. ಡೀಪ್ ಬ್ರೇನ್ ಸ್ಟಿಮ್ಯುಲೇಶನ್ ಪಾರ್ಕಿನ್ಸನ್ ಸಮಸ್ಯೆಗೆ ಚಿಕಿತ್ಸೆಯ ಭಾಗ ಎಂದು ವಿವರಿಸಿದರು. ಫೋರ್ಟಿಸ್ ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ವಿಭಾಗದ ಹೆಚ್ಚುವರಿ ನಿರ್ದೇಶಕ ಡಾ.ರಘುರಾಮ್ ಜಿ ಮಾತನಾಡಿ, ಪಾರ್ಕಿನ್ಸನ್ ಕಾಯಿಲೆಯಿಂದ ಕೈ-ಕಾಲುಗಳಲ್ಲಿ…
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣವನ್ನು ರಾಜ್ಯ ಸರ್ಕಾರ ಸರಿಯಾಗೇ ನಿಭಾಯಿಸುತ್ತಿದೆ. ಈ ವಿಷಯದಲ್ಲಿ ಕೇಂದ್ರ ಮಹಿಳಾ ಆಯೋಗ, ಕೇಂದ್ರ ಸರ್ಕಾರ ಏನು ಮಾಡುತ್ತಿದೆ ಎಂಬುದಾಗಿ ಶಾಸಕ ಸೌಮ್ಯಾರೆಡ್ಡಿ ಪ್ರಶ್ನಿಸಿದ್ದಾರೆ. ಇಂದು ಎಕ್ಸ್ ಮಾಡಿರುವಂತ ಅವರು, ರಾಜ್ಯ ಮಹಿಳಾ ಆಯೋಗ ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣವೇ ಸ್ಪಂದಿಸಿದೆ. ರಾಜ್ಯ ಸರ್ಕಾರ ಘಟನೆಯ ಗಂಭೀರತೆ ಅರಿತು ತಕ್ಷಣವೇ ಎಸ್ ಐಟಿ ರಚಿಸಿ ಪ್ರಕರಣದ ತನಿಖೆ ಆರಂಭಿಸಿದೆ. ಕೇಂದ್ರ ಮಹಿಳಾ ಆಯೋಗ ಎಲ್ಲಿದೆ? ಕೇಂದ್ರ ಸರ್ಕಾರ ಏನು ಮಾಡುತ್ತಿದೆ? ಎಂದು ಕೇಳಿದ್ದಾರೆ. https://twitter.com/Sowmyareddyr/status/1785282804840030315 ಮತ್ತೊಂದೆಡೆ ರಾಜಕೀಯ ಲಾಭಕ್ಕಾಗಿ ಎಷ್ಟು ಸುಳ್ಳು ಬೇಕಾದರು ಹೇಳುವ ಮೋದಿಯವರು, ಹಾಸನ ಪ್ರಕರಣದ ಬಗ್ಗೆ ಏಕೆ ಮಾತನಾಡುತ್ತಿಲ್ಲ..? ಪ್ರಜ್ವಲ್ ರೇವಣ್ಣ ಪರ ಮತ ಯಾಚಿಸಿದ್ದ ಮೋದಿಯವರು, ಆ ಸಂಸದನಿಂದ ಮಹಿಳೆಯರಿಗೆ ಅನ್ಯಾಯವಾಗಿದೆ ಎಂಬ ಆರೋಪ ಕೇಳಿ ಬಂದಾಗ ಖಂಡಿಸುವ ಮನಸ್ಸು ತೋರಲಿಲ್ಲ ಎಂಬುದಾಗಿ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ಮೋದಿಯವರೇ ಕರ್ನಾಟಕವನ್ನ ಕಡೆಗಣಿಸಿದ್ದಲ್ಲದೇ ಈಗ ಬೆಂಗಳೂರಿಗೆ…