Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದ ಹೊರ ವಲಯದಲ್ಲಿರುವಂತ ವಂಡರ್ ಲಾ ಅಮ್ಯೂಸ್ ಮೆಂಟ್ ಪಾರ್ಕ್ ಗೆ ತೆರಳೋದಕ್ಕೆ ನೇರವಾಗಿ ಬಿಎಂಟಿಸಿ ಬಸ್ ಸೌಲಭ್ಯವಿರಲಿಲ್ಲ. ಇದೀಗ ಜನವರಿ.15ರಿಂದ ಬಿಎಂಟಿಸಿ ಬಸ್ ಸಂಚಾರವನ್ನು ಆರಂಭಿಸಲಾಗುತ್ತಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ಹಂಚಿಕೆ ಮಾಡಲಾಗಿದ್ದು, ಜನವರಿ 15ರಿಂದ ಮುಂಗಡ ಆಸನ ಕಾಯ್ದಿರಿಸಲು ಬಿಎಂಟಿಸಿಯಿಂದ ವಂಡರ್ ಲಾಗೆ ಶುರು ಮಾಡಲಾಗುತ್ತಿದೆ. ವಂಡರ್ ಲಾಗೆ ತೆರಳುವ ಪ್ರಯಾಣಿಕರು ಅವತಾರ್ ತಂತ್ರಾಂಶದಲ್ಲಿ ಮುಂಗಡವಾಗಿ ಆಸನ ಕಾಯ್ದಿರಿಸಲು ಅವಕಾಶ ನೀಡಲಾಗುತ್ತಿದೆ ಅಂತ ತಿಳಿಸಿದೆ. ಬೆಂಗಳೂರು ನಗರದ ವಿವಿಧ ಭಾಗಗಳಿಂದ 4 ಮಾರ್ಗಗಳಲ್ಲಿ 10 ಬಸ್ಸುಗಳು ದಿನಕ್ಕೆ 20 ಟ್ರಿಪ್ ಗಳನ್ನು ಏಕಮುಖವಾಗಿ ಸಂಚರಿಸಲಿವೆ ಅಂತ ಹೇಳಿದೆ. ವಂಡರ್ ಲಾಗೆ ತೆರಳುವ ಪ್ರಯಾಣಿಕರಿಗೆ ಅವತಾರ್ ತಂತ್ರಾಂಶದಲ್ಲಿ ಮುಂಗಡವಾಗಿ ಆಸನ ಕಾಯ್ದಿರಿಸಲು ಬಿಎಂಟಿಸಿ ಅವಕಾಶ ಕಲ್ಪಿಸಿದೆ. ಬೆಂಗಳೂರು ನಗರದ ವಿವಿಧ ಭಾಗಗಳಿಂದ ನಾಲ್ಕು ಮಾರ್ಗಗಳಲ್ಲಿ ವಂಡರ್ ಲಾ ಕಡೆಗೆ 10 ಬಸ್ಗಳು ದಿನಕ್ಕೆ 20 ಟ್ರಿಪ್ಗಳನ್ನು ಏಕಮುಖವಾಗಿ ನಡೆಸಲಿವೆ. ಜನವರಿ 15ರಿಂದ ಕೆಎಸ್ಆರ್ಟಿಸಿ ಅವತಾರ್ ತಂತ್ರಾಂಶದಲ್ಲಿ…
ಬೆಂಗಳೂರು: ರಾಜ್ಯದ ಅನೇಕ ಭಾಗಗಳಲ್ಲಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಕೃಷಿಯನ್ನು ರೈತರು ನಡೆಸುತ್ತಿದ್ದಾರೆ. ಈ ಸರ್ಕಾರಿ ಭೂಮಿಗೆ ಸಾಗುವಳಿ ಹಕ್ಕುಪತ್ರವನ್ನು ಇದೇ ಜನವರಿ ತಿಂಗಳಿನಲ್ಲಿ ನೀಡೋದಾಗಿ ಸರ್ಕಾರ ಘೋಷಿಸಿದೆ. ಈ ಮೂಲಕ ಅರಣ್ಯ ಭೂಮಿಯಲ್ಲಿ ಕೃಷಿ ನಡೆಸುತ್ತಿರೋರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದು ಅರಣ್ಯ ಇಲಾಖೆಗೆ ಸೇರಿದ ಭೂಮಿಯಲ್ಲಿ ಅರಣ್ಯ ಸಂರಕ್ಷಣಾ ಕಾಯಿದೆ 1980ರ ಜಾರಿಗೂ ಮುನ್ನ ಕೃಷಿ ಮಾಡುತ್ತಿರೋರಿಗೆ ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಜನವರಿ ಒಳಗಾಗಿ 7 ಸಾವಿರ ರೈತರಿಗೆ ಹಕ್ಕು ಪತ್ರವನ್ನು ನೀಡಲಾಗುತ್ತದೆ ಅಂತ ತಿಳಿಸಿದ್ದಾರೆ. ಇನ್ನೂ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿರುವ 13,750 ಪ್ರಕರಣಗಳ 31,864 ಎಕರೆ ಭೂಮಿ ಇದೆ. ಈ ಪೈಕಿ 7 ಸಾವಿರ ಪ್ರಕರಣಗಳಿಗೆ ಹಕ್ಕು ಪತ್ರ ನೀಡಲಾಗುವುದು. ಆದರೆ 3 ಎಕರೆಗಿಂತ ಹೆಚ್ಚಿನ ಭೂಮಿ ನೀಡುವುದಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ 371 (ಜೆ) ಅಡಿ ರಾಜ್ಯ ಸರ್ಕಾರದ 46 ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸದೆ ಬಾಕಿ ಇರುವ 14,771 ಹುದ್ದೆಗಳ ನೇಮಕಾತಿ ಹಾಗೂ ಪ್ರಾದೇಶಿಕ ಮತ್ತು ರಾಜ್ಯ ಮಟ್ಟದ ಹುದ್ದೆಗಳಲ್ಲಿ ಶೇಕಡ 8ರ ಮೀಸಲಾತಿಯಂತೆ ಮುಂಬಡ್ತಿ ನೀಡಬೇಕಾದ 8,278 ಹುದ್ದೆಗಳನ್ನು ಬಡ್ತಿ ಮೂಲಕ ತುಂಬಿಸಲು ಸರ್ಕಾರದ ವಿವಿಧ ಇಲಾಖೆಗಳು ತಕ್ಷಣ ಪ್ರಕ್ರಿಯೆ ಆರಂಭಿಸಲು ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯ ಸಂಪುಟ ಉಪ ಸಮಿತಿ ಸೂಚನೆ ನೀಡಿದೆ. ಗುರುವಾರದಂದು ಭಾರತ ಸಂವಿಧಾನದ ಅನುಚ್ಛೇದ 371 (ಜೆ) ಅಡಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿರುವ ಪ್ರಯುಕ್ತ ಹೊರಡಿಸಲಾದ ಆದೇಶಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಸಭೆಯಲ್ಲಿ ಸಚಿವ ಸಂಪುಟ ಉಪಸಮಿತಿ ಸದಸ್ಯರಾದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಾಲ್ಯಾಭಿವೃದ್ಧಿ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್ ಹಾಗೂ ಇತರರು ಭಾಗವಹಿಸಿದ್ದರು.…
ಇರಾನ್: 2020 ರಲ್ಲಿ ಯುಎಸ್ ಡ್ರೋನ್ನಿಂದ ಕೊಲ್ಲಲ್ಪಟ್ಟ ದಿವಂಗತ ಕಮಾಂಡರ್ ಕಾಸ್ಸೆಮ್ ಸೊಲೈಮಾನಿ ಅವರ ಸ್ಮರಣಾರ್ಥ ಇರಾನ್ನಲ್ಲಿ ನಡೆದ ಸಮಾರಂಭದಲ್ಲಿ ಸುಮಾರು 100 ಜನರ ಸಾವಿಗೆ ಕಾರಣವಾದ ಮತ್ತು ಅನೇಕರು ಗಾಯಗೊಂಡ ಎರಡು ಸ್ಫೋಟಗಳ ಜವಾಬ್ದಾರಿಯನ್ನು ಇಸ್ಲಾಮಿಕ್ ಸ್ಟೇಟ್ ಗುರುವಾರ ವಹಿಸಿಕೊಂಡಿದೆ. ಗುಂಪು ತನ್ನ ಸಂಯೋಜಿತ ಟೆಲಿಗ್ರಾಮ್ ಚಾನೆಲ್ಗಳಲ್ಲಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಹೌದು 2020 ರಲ್ಲಿ ಯುಎಸ್ ಡ್ರೋನ್ನಿಂದ ಕೊಲ್ಲಲ್ಪಟ್ಟ ಕಮಾಂಡರ್ ಖಾಸಿಮ್ ಸೊಲೈಮಾನಿ ಸ್ಮರಣಾರ್ಥ ಇರಾನ್ನಲ್ಲಿ ನಡೆದ ಸಮಾರಂಭದಲ್ಲಿ ಸುಮಾರು 100 ಜನರನ್ನು ಬಲಿ ತೆಗೆದುಕೊಂಡ ಮತ್ತು ಹಲವಾರು ಜನರನ್ನು ಗಾಯಗೊಳಿಸಿದ ಎರಡು ಸ್ಫೋಟಗಳ ಜವಾಬ್ದಾರಿಯನ್ನು ಇಸ್ಲಾಮಿಕ್ ಸ್ಟೇಟ್ ಗುರುವಾರ ವಹಿಸಿಕೊಂಡಿದೆ. https://kannadanewsnow.com/kannada/state-government-nominates-6-members-to-mangalore-university-syndicate-authority/ https://kannadanewsnow.com/kannada/state-kadugolla-welfare-association-expresses-deep-regret-over-incident-of-assault-on-dalit-youth-in-chikmagalur/
ಬೆಂಗಳೂರು: ನಗರದಲ್ಲಿ ಇನ್ನೂ ಬಾಲ್ಯವಿವಾಹ ಜೀವಂತವಾಗಿದೆ. ಅಪ್ರಾಪ್ತೆಯನ್ನು ವಿವಾಹವಾದ ಬಳಿಕ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸೋದಕ್ಕೆ ಪ್ರಯತ್ನ ಪಟ್ಟ ಯುವಕನ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಆರ್ ಆರ್ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿಗೆ ತಾಯಿ ವಿವಾಹ ಮಾಡಿಸಿದ್ದಳು. ದೇವಾಲಯದಲ್ಲಿ 27 ವರ್ಷದ ಯುವಕನೊಂದಿಗೆ ಅಪ್ರಾಪ್ತೆಯನ್ನು ವಿವಾಹ ಮಾಡಿಸಲಾಗಿತ್ತು. ಈ ಬಳಿಕ ಬಾಲಕಿಯೊಂದಿಗೆ ಬಲವಂತವಾಗಿ ಯುವಕ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಇದರಿಂದ ಮಾನಸಿಕವಾಗಿ ಘಾಸಿಕೊಂಡ ಅಪ್ರಾಪ್ತ ಬಾಲಕಿ, ಮಕ್ಕಳ ಕಲ್ಯಾಣ ಸಮಿತಿಗೆ ಕರೆ ಮಾಡಿ ಅಪ್ರಾಪ್ತ ವಯಸ್ಸಿಗೆ ಇಷ್ಟವಿಲ್ಲದಿದ್ದರೂ ಮದುವೆ ಮಾಡಿಸಿದ್ದು. ಯುವಕ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸೋದರ ಬಗ್ಗೆ ದೂರು ನೀಡಿದ್ದಳು. ಸ್ಥಳಕ್ಕೆ ಆಗಮಿಸಿದಂತ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಬಲವಂತವಾಗಿ ಮದುವೆ ಮಾಡಿಸಿದ್ದು, ಯುವಕ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದರ ಬಗ್ಗೆ ಅಲವತ್ತುಕೊಂಡಿದ್ದಾಳೆ. ಈ ಮಾಹಿತಿ ಆಧರಿಸಿ, ಇದೀಗ ಯುವಕನ ವಿರುದ್ಧ ಆರ್ ಆರ್ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. https://kannadanewsnow.com/kannada/ksrtc-bus-overturns-in-hassan-4-passengers-injured-one-in-critical-condition/ https://kannadanewsnow.com/kannada/state-government-nominates-6-members-to-mangalore-university-syndicate-authority/
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕೆ ಎಸ್ ಆರ್ ಟಿ ಸಿ ಬಸ್ಸೊಂದು ಹಾಸನದ ಬಳಿ ಪಲ್ಟಿಯಾಗಿದೆ. ಈ ಪರಿಣಾಮ ಅದರಲ್ಲಿದ್ದಂತ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಲ್ಲದೇ ಓರ್ವ ಪ್ರಯಾಣಿಕನ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಗೌಡಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇಂದು ಕಾರು ಒಂದನ್ನು ಓವರ್ ಟೇಕ್ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾಗಿದೆ. ಈ ವೇಳೆಯಲ್ಲಿ 14ಕ್ಕೂ ಹೆಚ್ಚು ಪ್ರಯಾಣಿಕರು ಬಸ್ಸಿನಲ್ಲಿ ಇದ್ದರು ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿಯಾದ ಕಾರಣ, ನಾಲ್ವರು ಗಾಯಗೊಂಡಿದ್ದಾರೆ. ಇವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಚನ್ನರಾಯಪಟ್ಟಣ ಸಂಚಾರ ಠಾಣೆಯ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/state-kadugolla-welfare-association-expresses-deep-regret-over-incident-of-assault-on-dalit-youth-in-chikmagalur/ https://kannadanewsnow.com/kannada/state-government-nominates-6-members-to-mangalore-university-syndicate-authority/
ಚಿತ್ರದುರ್ಗ: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಗೇರಮರಡಿಯಲ್ಲಿ ದಲಿತಯುವಕನ ಮೇಲೆ ನಡೆದ ಘಟನೆಗೆ ಕರ್ನಾಟಕ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ತೀವ್ರ ವಿಷಾದವನ್ನು ವ್ಯಕ್ತ ಪಡಿಸಿದೆ. ಈ ಕುರಿತಂತೆ ರಾಜ್ಯಾಧ್ಯಕ್ಷ ಸಿ.ಶಿವು ಯಾದವ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಪತ್ರಿಕೆ ಮತ್ತು ಟಿವಿಯಲ್ಲಿ ಪ್ರಸಾರವಾದಂತ ಚಿಕ್ಕಮಗಳೂರಿನಲ್ಲಿ ನಡೆದಂತ ದಲಿತ ಯುವಕನ ಮೇಲಿನ ಘಟನೆಯ ಬಗ್ಗೆ ವರದಿಯನ್ನು ನೋಡಿದೆ ಸದರಿ ಘಟನೆ ವಾತ್ಸವಾಗಿ ನಡೆದಿದ್ದರೆ ಖಂಡನೀಯವಾದುದು. ಇತ್ತೀಚೆಗೆ ಇಂತಹ ಘಟನೆಗಳು ರಾಜ್ಯದಲ್ಲಿ ಯಾವ ಗೊಲ್ಲರಹಟ್ಟಿಗಳಲ್ಲಿ ನಡೆದಿರಲಿಲ್ಲ ಜೊತೆಗೆ ರಾಜ್ಯ ಸರ್ಕಾರ ಮತ್ತು ನಮ್ಮ ಸಂಘಟನೆ ಅಲ್ಲಲ್ಲಿ ಕೆಲವು ಗೊಲ್ಲರಹಟ್ಟಿಗಳಲ್ಲಿ ಜಾಗೃತಿ ಮೂಡಿಸಲು ಕೆಲಸವನ್ನು ಮಾಡಿದ್ದೆವು. ಶ್ರೀ ಕೃಷ್ಣ ಜಾಂಬವಂತನ ಮಗಳಾದ ಜಾಂಬವತಿಯನ್ನು ವಿವಾಹವಾಗಿರುವುದರಿಂದ ನಾವು ಆದಿಕರ್ನಾಟಕ ಜನಾಂಗದವರು ನೆಂಟರು ಬಂಟರು ಆಗಿದ್ದೆವೆ. ಈಗಿರುವಾಗ ಅವರನ್ನು ನಮ್ಮ ಮನೆಯಿಂದ ಹೊರಗೆ ಇಡುವ ಪ್ರವೃತ್ತಿ ಸಲ್ಲದು ಎಂದಿದ್ದಾರೆ. ಕಾನೂನಿನ ಅಡಿಯಲ್ಲಿ ಎಲ್ಲರೂ ಸಮಾನರು ಅವರಿಗೆ ಬಹಿಷ್ಕಾರ ಹಾಕಿದರೆ ಕಾನೂನಿನ ಪ್ರಕಾರ ಅಪರಾದವಾಗುತ್ತದೆ. ಯಾರೊ ಮಾಡಿದ ತಪ್ಪಿಗೆ ಇಡೀ ಸಮಾಜ ತಲೆ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಮಂಗಳೂರು ವಿಶ್ವವಿದ್ಯಾಲಯಕ್ಕೆ 6 ಮಂದಿ ಸಿಂಡಿಕೇಟ್ ಸದಸ್ಯರನ್ನು ನಾಮ ನಿರ್ದೇಶನ ಮಾಡಿ ಆದೇಶಿಸಿದೆ. ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಪ್ರಾಧಿಕಾರಕ್ಕೆ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ 6 ಮಂದಿಯನ್ನು ನಾಮನಿರ್ದೇಶ ಮಾಡಲಾಗಿದೆ ಅಂತ ತಿಳಿಸಿದೆ. ಅಂದಹಾಗೇ ಮಂಗಳೂರು ವಿವಿಯ ಸಿಂಡಿಕೇಟ್ ಗೆ ಸುರೇಶ್ ಕುಮಾರ್ ಬಿ ನಾವೂರು, ಸಿ.ಎ ನಿತಿನ್ ಚ ಶೆಟ್ಟಿ, ಮಜೂಡಿತ್ ಮೆಂಡೋನಿಕ, ರಘುರಾಜ್, ಅಚ್ಯುತ್ ಗಟ್ಟಿ ಹಾಗೂ ಸವಾದ್ ಸುಳ್ಯ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ಈ ನಾಮನಿರ್ದೇಶಿತ ಸದಸ್ಯರು ಮೀಸಲಾತಿಯ, ವಿದ್ಯಾರ್ಹತೆ ಬಗ್ಗೆ ಒಂದು ತಿಂಗಳ ಒಳಗಾಗಿ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದೆ. ಅಲ್ಲದೇ ನಾಮನಿರ್ದೇಶಿತ ಸದಸ್ಯರು ನಾಮನಿರ್ದೇಶನಗೊಂಡ ವಿವಿಯ ಸಂಯೋಜಿತ ಕಾಲೇಜಿನಲ್ಲಿ ಅಥವಾ ವಿವಿಯ ಯಾವುದೇ ಸ್ಥಾನಮಾನದಲ್ಲಿ ನಿಯೋಜನೆ ಹೊಂದಿರದ ಬಗ್ಗೆ ದೃಢೀಕರಿಸಿಕೊಳ್ಳತಕ್ಕದ್ದು.…
ಬೆಂಗಳೂರು: ರಾಜ್ಯದಲ್ಲಿ ಇಂದು ದಾಖಲೆಯ 298 ಮಂದಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಅಲ್ಲದೇ ಸೋಂಕಿನಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಇಂದು ರಾಜ್ಯ ಆರೋಗ್ಯ ಇಲಾಖೆಯಿಂದ ( Karnataka Health Department ) ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ ಆರ್ ಟಿ ಪಿಸಿಆರ್ ಮೂಲಕ 6900 ಹಾಗೂ RAT ಪರೀಕ್ಷೆ ಮೂಲಕ 891 ಜನರು ಸೇರಿದಂತೆ 7791 ಮಂದಿಯನ್ನು ಕೋವಿಡ್ ಸೋಂಕು ( Covid19 Case ) ಪತ್ತೆ ಪರೀಕ್ಷೆಗೆ ಒಳಪಡಿಸಿರೋದಾಗಿ ತಿಳಿಸಿದೆ. ಈ ಪರೀಕ್ಷೆಯಲ್ಲಿ ಬೆಂಗಳೂರಲ್ಲಿ 172, ಬಾಗಲಕೋಟೆ 4, ಬಳ್ಳಾರಿ 6, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 1, ಚಾಮರಾಜನಗರ 8, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 5, ಚಿತ್ರದುರ್ಗ 1, ದಕ್ಷಿಣ ಕನ್ನಡ 11, ದಾವಣಗೆರೆ 1, ಧಾರವಾಡ 3, ಗದಗ 1, ಹಾಸನ 19, ಕಲಬುರ್ಗಿ 3, ಕೊಡಗು 2, ಕೋಲಾರ 1, ಕೊಪ್ಪಳ 6,…
ಹುಬ್ಬಳ್ಳಿ; ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯ ಮುಂದೆ ಗಲಭೆ ಆರೋಪಿ ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಬಿಜೆಪಿ ನಾಯಕರಿಂದ ಪ್ರತಿಭಟನೆ ನಡೆಸಲಾಗಿತ್ತು. ಅಲ್ಲದೇ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕೋದಕ್ಕೂ ಯತ್ನಿಸಲಾಗಿತ್ತು. ಹೀಗೆ ಪ್ರತಿಭಟನೆ ನಡೆಸಿದಂತ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ 43 ಮಂದಿ ವಿರುದ್ಧ ಕಾಂಗ್ರೆಸ್ ನಿಯೋಗ ಪೊಲೀಸರಿಗೆ ದೂರು ನೀಡಿದೆ. ಈ ಕುರಿತಂತೆ ಇಂದು ಕಾಂಗ್ರೆಸ್ ನಿಯೋಗವು ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಗೆ ತೆರಳಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂಬುದಾಗಿ ನಿಂದಿಸಲಾಗಿದೆ. ಕಾನೂನು ಸುವ್ಯವಸ್ಥೆ ಮೀರುವಂತೆ ಪೊಲೀಸ್ ಠಾಣೆಗೆ ನುಗ್ಗೋದಕ್ಕೆ ಯತ್ನಿಸಿ ಪ್ರತಿಭಟನೆ ನಡೆಸಲಾಗಿದೆ ಅಂತ ದೂರಿನಲ್ಲಿ ಉಲ್ಲೇಖಿಸಿ, ಬಿಜೆಪಿ ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ದೂರಿನಲ್ಲಿ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ಉಪ ನಾಯಕ ಅರವಿಂದ್ ಬೆಲ್ಲದ್, ಶಾಸಕ ಮಹೇಶ್ ಟೆಂಗಿನಕಾಯಿ ಸೇರಿದಂತೆ 43 ಬಿಜೆಪಿ ಮುಖಂಡರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ. https://kannadanewsnow.com/kannada/note-the-deadline-for-online-application-for-class-6-entrance-examination-of-residential-schools-has-been-extended/ https://kannadanewsnow.com/kannada/breaking-50000-people-to-attend-pm-modis-mega-event-in-abu-dhabi-on-february-13-ahlan-modi/