Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಇನ್ನೋವ ಕಾರು ಚಾಲಕನೊಬ್ಬ ಅಜಾಗರೂಕತೆ, ಅತಿವೇಗವಾಗಿ ಕಾರು ಓಡಿಸಿದ ಪರಿಣಾಮ, ಬೆಂಗಳೂರಿನ ಹೊಸೂರು ರಸ್ತೆಯಲ್ಲಿ ಸರಣಿ ಅಪಘಾತ ಉಂಟಾಗಿದೆ. ಅಲ್ಲದೇ ಅಪಘಾತದ ನಂತ್ರ ಟ್ರಾಫಿಕ್ ಜಾಮ್ ಕೂಡ ಉಂಟಾಗಿರೋದಾಗಿ ತಿಳಿದು ಬಂದಿದೆ. ಇನ್ನೋವ ಕಾರೊಂದು ಗೂಡ್ಸ್ ಆಟೋ ಹಾಗೂ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ, ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಬೊಮ್ಮಸಂದ್ರ ಸರ್ವೀಸ್ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಚಂದಾಪುರ ಕಡೆಗೆ ತೆರಳುತ್ತಿದ್ದಂತ ಇನ್ನೋವ ಕಾರು ಚಾಲಕ ಅಜಾಗರೂಕತೆ, ಅತೀ ವೇಗದ ಚಾಲನೆಯಿಂದಲೇ ಈ ಅಪಘಾತ ನಡೆದಿರೋದಾಗಿ ತಿಳಿದು ಬಂದಿದೆ. ಈ ಅಪಘಾತದಿಂದ ಹೆದ್ದಾರಿಯಲ್ಲಿನ ಬ್ಯಾರಿಕೇಡ್ ಮುರಿದು ಬಿದ್ದ ಪರಿಣಾಮ, ವಾಹನಗಳು ಜಖಂ ಗೊಂಡಿದೋರಾಗಿ ಹೇಳಲಾಗುತ್ತಿದೆ. ಬೊಮ್ಮಸಂದ್ರ ಬಳಿಯ ಸರ್ವೀಸ್ ರಸ್ತೆಯಲ್ಲಿ ಸಂಭವಿಸಿದಂತ ಸರಣಿ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾವರಿಗೆ ಸಣ್ಣಪುಟ್ಟ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/another-shock-for-karunada-heat-wave-conditions-likely-to-continue-till-may-2/ https://kannadanewsnow.com/kannada/breaking-team-india-announced-for-t20-world-cup-2019-kl-rahul-dismissed-as-rohit-sharma-to-lead-india/
ಬೆಂಗಳೂರು: ರಾಜ್ಯದ ಜನರು ಈಗಾಗಲೇ ಬೇಸಿಗೆ ಬಿಸಿಯಿಂದ ತತ್ತರಿಸಿ ಹೋಗಿದ್ದಾರೆ. ಎಲ್ಲೆಲ್ಲೂ ನೀರಿನ ಅಭಾವ ತಲೆದೋರಿದೆ. ಹೀಗಿರುವಾಗಲೇ ಕರ್ನಾಟಕದಲ್ಲಿ ಮುಂದಿನ ಮೂರು ದಿನ ಬಿಸಿಗಾಳಿ ಬೀಸಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೇರಳ ರಾಜ್ಯದಲ್ಲಿ ಬಿಸಿಗಾಳಿಯ ಪರಿಣಾಮವಾಗಿ ರಾಜ್ಯದಲ್ಲೂ ಬಿಸಿಗಾಳಿಯ ಎಫೆಕ್ಟ್ ತಟ್ಟಲಿದೆ. ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಕರ್ನಾಟಕದಲ್ಲಿ ಮುಂದಿನ ಮೂರು ದಿನ ಬಿಸಿಗಾಳಿ ಇರಲಿದೆ. ಕಲಬುರ್ಗಿ, ವಿಜಯಪುರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಇಂದಿನಿಂದ ಮೇ.5ರವರೆಗೆ ಬೆಂಗಳೂರಿನ ಜನತೆಗೆ ಬಿಸಿಲಾಘಾತದ ಜೊತೆಗೆ, ಬಿಸಿಗಾಳಿಯ ಆಘಾತ ಉಂಟಾಗಲಿದೆ. ಈ ಮೂಲಕ ಬಿಸಿಲ ಹೊಡೆತಕ್ಕೆ ಬೆಂದ ಕರುನಾಡಿಗೆ ಮತ್ತೊಂದು ಶಾಕ್ ತಟ್ಟಿದೆ. ಅದೇ ಮೇ.2ರವರೆಗೆ ಬಿಸಿಗಾಳಿ ಕಾಡಲಿದೆ. ರಾತ್ರಿ ಮಲಗೋದಕ್ಕೂ ಆಗೋದು ಡೌಟ್ ಎನ್ನುವುದಾಗಿದೆ. https://kannadanewsnow.com/kannada/shocking-news-for-bengaluru-people-how-many-more-days-will-there-be-a-terrible-heat-wave/ https://kannadanewsnow.com/kannada/breaking-team-india-announced-for-t20-world-cup-2019-kl-rahul-dismissed-as-rohit-sharma-to-lead-india/
ಬೆಂಗಳೂರು: ಬೇಸಿಗೆಯ ಬಿಸಿಲ ಜೊತೆಗೆ, ಈಗ ಬಿಸಿಗಾಳಿಯ ಆಘಾತ ಕೂಡ ಬೆಂಗಳೂರು ಜನತೆಗೆ ತಟ್ಟಲಿದೆ. ಏಪ್ರಿಲ್.30ರ ಇಂದಿನಿಂದ, ಮೇ.5ರವರೆಗೆ ಶಾಖಾಘಾತ ತಟ್ಟಲಿದೆ. ಈ ಕುರಿತಂತೆ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬಿಸಿಗಾಳಿ, ಬೇಸಿಗೆಯ ತಾಪಮಾನ ಮುಂದಿನ 48 ಗಂಟೆಗಳ ಕಾಲ ಮುಂದುವರೆಯಲಿದೆ ಎಂದಿದೆ. ಬೆಂಗಳೂರಲ್ಲಿ ಕಳೆದ ಒಂದು ವಾರದಿಂದ 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇನ್ನೂ ಕೆಲವು ದಿನ ಇದೇ ಬಿಸಿಗಾಳಿಯ ವಾತಾವಣ ಮುಂದುವರೆಯಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಏಪ್ರಿಲ್.30ರ ಇಂದಿನಿಂದ ಮೇ.5ರವರೆಗೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ. https://kannadanewsnow.com/kannada/breaking-team-india-announced-for-t20-world-cup-2019-kl-rahul-dismissed-as-rohit-sharma-to-lead-india/ https://kannadanewsnow.com/kannada/return-the-interest-collected-to-the-customer-rbi-issues-stern-warning-to-banks/
ಬೆಂಗಳೂರು: ನಾನು ನಿಜವಾಗಿಯೂ ಹೇಳ್ತೀನಿ ಆ ವೀಡಿಯೋ ನೋಡೋಕಾಗಲ್ಲ. ವಯಸ್ಸಾದ ತಾಯಿಯನ್ನು ಆ ರೀತಿ ಬಳಸಿಕೊಂಡಿದ್ದಾರೆ ಎಂಬುದಾಗಿ ಸಂಸದ ಡಿ.ಕೆ ಸುರೇಶ್, ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇದೊಂದು ಇಡೀ ದೇಶವೇ ಅಸಹ್ಯಪಡುವಂತ ಘಟನೆಯಾಗಿದೆ. ಈ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಮಾತನಾಡಬೇಕು. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ರಾಜಕೀಯ ಮಾಡಿದ್ರೆ ಅದು ಕುಮಾರಸ್ವಾಮಿನೇ ಮಾಡಿರಬೇಕು ಎಂದರು. ಹಾಸನ ಪೆನ್ ಡ್ರೈವ್ ಕೇಸಲ್ಲಿ ಯಾವ ರಾಜಕೀಯ ಕೂಡ ಇಲ್ಲ. ನಾನು ಸರ್ಕಾರಕ್ಕೆ ಹೇಳ್ತೀನಿ ಇದರಲ್ಲಿರೋ ಸಂತ್ರಸ್ತರ ಪರವಾಗಿ ನಿಲ್ಲಬೇಕು. ಅವರಿಗೆ ರಕ್ಷಣೆ ನೀಡಬೇಕು ಎಂದು ತಿಳಿಸಿದರು. ಕುಮಾರಸ್ವಾಮಿ, ದೇವೇಗೌಡ್ರೆ ಬೇರೆಯವರು ಯಾರಾದ್ರೂ ಹೀಗೆ ಮಾಡಿದ್ರೆ ಸುಮ್ನೆ ಇರ್ತಿದ್ರಾ? ತಾಯಂದಿರ ರಕ್ಷಣೆ ಮಾಡಬೇಕು. ಇದು ಅತ್ಯಂತ ಅಸಹ್ಯಕರ ವಿಚಾರವಾಗಿದೆ ಎಂದರು. https://kannadanewsnow.com/kannada/taluk-panchayat-eo-arrested-by-lokayukta-while-accepting-rs-1-50-lakh-bribe/ https://kannadanewsnow.com/kannada/breaking-team-india-announced-for-t20-world-cup-2019-kl-rahul-dismissed-as-rohit-sharma-to-lead-india/
ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಢ್ಲಘಟ್ಟದ ಕಾರ್ಯ ನಿರ್ವಾಹಣಾಧಿಕಾರಿಯೊಬ್ಬರು 1.50 ಲಕ್ಷ ಲಂಚ ಪಡೆಯುತ್ತಿದ್ದಾಗಲೇ, ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕು ಪಂಚಾಯ್ತಿ ಜಿ.ಮುನಿರಾಜು ಅವರು, ಖಾತೆ ಬದಲಾವಣೆ ಮಾಡಿಕೊಡೋದಕ್ಕಾಗಿ ಜಿ.ಬಿ ನಂಜೇಗೌಡ ಎಂಬುವರಿಗೆ 2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಓ ಜಿ.ಮುನಿರಾಜು ಲಂಚಕ್ಕೆ ಬೇಡಿಕೆ ಇಟ್ಟಿರೋ ವಿಷಯವನ್ನು ಚಿಕ್ಕಬಳ್ಳಾಪುರ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಇಂದು ಇಓ ಜಿ.ಮುನಿರಾಜು ಅವರು 1.50 ಲಕ್ಷ ಲಂಚದ ಹಣವನ್ನು ಪಡೆಯುತ್ತಿದ್ದಾಗ ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರದ ಲೋಕಾಯುಕ್ತ ಅಧಿಕಾರಿಗಳು ಶಿಡ್ಲಘಟ್ಟ ಇಒ ಜಿ.ಮುನಿರಾಜು ಅವರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಂಡಿದ್ದಾರೆ. ಈ ಮೂಲಕ 1.50 ಲಕ್ಷ ಲಂಚ ಸ್ವೀಕರಿಸುತ್ತಿದ್ದಂತ ಜಿ.ಮುನಿರಾಜುಗೆ ಕಾನೂನು ಕ್ರಮದ ಬಾಣ ಬೀಸಿದ್ದಾರೆ. https://kannadanewsnow.com/kannada/i-am-not-afraid-that-i-have-a-pen-drive-cd-in-my-pocket-i-will-fight-elections-directly-dk-shivakumar/ https://kannadanewsnow.com/kannada/breaking-team-india-announced-for-t20-world-cup-2019-kl-rahul-dismissed-as-rohit-sharma-to-lead-india/
ಬೆಂಗಳೂರು: “ನಾನು ಚುನಾವಣೆಯನ್ನು ನೇರವಾಗಿ ಎದುರಿಸುತ್ತೇನೆ. ಜೇಬಲ್ಲಿ ಪೆನ್ ಡ್ರೈವ್ ಇದೆ, ಸಿ.ಡಿ ಇದೆ ಎಂದು ಹೆದರಿಸುವವನು ನಾನಲ್ಲ. ಸದನದಲ್ಲಿ ಚರ್ಚೆಗೆ ಬರುವಂತೆ ನೇರ ಸವಾಲು ಹಾಕುವುದು ಬೆಂಗಳೂರಿನ ಕೆಂಪೇಗೌಡರ ರಕ್ತದ ಗುಣ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಜಿ ಸಿಎಂ ಕುಮಾರಸ್ವಾಮಿ ಮೇಲೆ ವಾಗ್ದಾಳಿ ನಡೆಸಿದರು. ಸದಾಶಿವನಗರ ನಿವಾಸದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಂಗಳವಾರ ಮಾತನಾಡಿದರು. “ಇದೆಲ್ಲವೂ ಹಳೇ ವಿಡಿಯೋ ಎಂದು ಸ್ವತಃ ರೇವಣ್ಣ ಅವರೇ ಒಪ್ಪಿಕೊಂಡಿದ್ದಾರೆ. ಉಪ್ಪು ತಿಂದವನು ನೀರು ಕುಡಿಯುತ್ತಾನೆ, ಈ ವಿಚಾರವಾಗಿ ದೇವೇಗೌಡರು ತೀರ್ಮಾನ ಮಾಡುತ್ತಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿ ನಾಯಕ ದೇವರಾಜೇಗೌಡ ಅವರು ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ನಾಯಕರಿಗೆ ಪತ್ರ ಬರೆದಿದ್ದರು. ಈ ಬಗ್ಗೆ ಮಾಧ್ಯಮಗಳಿಗೂ ತಿಳಿಸಿದ್ದಾರೆ. ಹೀಗಿರುವಾಗ ನನಗೂ ಈ ಪ್ರಕರಣಕ್ಕೂ ಏನು ಸಂಬಂಧ? ಎಂದು ಕೇಳಿದರು. ಕುಮಾರಸ್ವಾಮಿ ಅವರಿಗೆ ನನ್ನನ್ನು ನೆನೆಸಿಕೊಳ್ಳದೆ ಇರಲು ಸಾಧ್ಯವಿಲ್ಲ. ಈಗ ಮಾತ್ರವಲ್ಲ, ಬಹಳ ವರ್ಷಗಳಿಂದ ಅವರು ಹಾಗೂ ಅವರ…
ಗೋಕಾಕ್ : ಮೊದಲು ಹಾಗೂ ಎರಡನೇ ಹಂತದ ಚುನಾವಣೆಗಳಲ್ಲಿ ಬಿಜೆಪಿ, ಎನ್ ಡಿಎ ಅಧಿಕಾರಕ್ಕೆ ಬರುವುದಿಲ್ಲ. ತಮಗೆ ಸ್ಪಷ್ಟ ಸೋಲಾಗಿದೆ ಎನ್ನುವುದು ಖಚಿತವಾಗುತ್ತಿದ್ದಂತೆ ಮೋದಿಯವರು ಹತಾಶರಾಗಿದ್ದು, ಭಯಾನಕ ಸುಳ್ಳುಗಳಿಂದ ಭಾರತೀಯ ದಾರಿತಪ್ಪಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಅವರು ಇಂದು ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೃಣಾಳ್ ಹೆಬ್ಬಾಳ್ಕರ್ ಪರವಾಗಿ ಮತ ಮತಯಾಚಿಸಿ ಮಾತನಾಡಿದರು. ಬೆಲೆಏರಿಕೆ, ನಿರುದ್ಯೋಗದ ಬಗ್ಗೆ ಪ್ರಧಾನಿ ಮೋದಿ ಮಾಡನಾಡುವುದಿಲ್ಲ. 2014 ಹಾಗೂ 2019 ರಲ್ಲಿ ಭಾರತೀಯರಲ್ಲಿ ಭ್ರಮೆಯನ್ನು ಹುಟ್ಟಿಸಿ ಅಧಿಕಾರಕ್ಕೆ ಬಂದ ಮೋದಿ ಒಂದೇ ಒಂದು ಭರವಸೆಗಳನ್ನೂ ಈಡೇರಿಸಲಿಲ್ಲ. ಪ್ರತಿ ಬಾರಿ ಕೇವಲ ಭಾವನಾತ್ಮಕವಾಗಿ ಜನರನ್ನು ಪ್ರಚೋದಿಸುವಂತೆ ಸುಳ್ಳುಗಳನ್ನು ಹೇಳುತ್ತಿಲೇ ಇದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ಖಚಿತವಾಗುತ್ತಿದ್ದಂತೆ ಸಂಪೂರ್ಣ ಹತಾಶರಾಗಿ ಹೆಚ್ಚೆಚ್ಚು ಸುಳ್ಳುಗಳನ್ನು ಹೇಳಿ ಹೇಳಿ ಎಷ್ಟು ಸಾಧ್ಯವೋ ಅಷ್ಟು ಭಾರತೀಯರ ದಾರಿತಪ್ಪಿಸಿ ಲಾಭ ಮಾಡಿಕೊಳ್ಳಲು ಒದ್ದಾಡುತ್ತಿದ್ದಾರೆ. ಬಿಜೆಪಿಯೇತರರು ದಲಿತರ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ನೀಡಲಿದೆ…
ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ನ ಎಫ್ಎಂಸಿಜಿ ಅಂಗ ಹಾಗೂ ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್ (ಆರ್ ಆರ್ ವಿಎಲ್) ಸಂಪೂರ್ಣ ಒಡೆತನದ ಅಂಗಸಂಸ್ಥೆಯಾದ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ ನಿಂದ ಕ್ಯಾಂಪಾ ಕೋಲಾ ಪರವಾಗಿ ಹೊಸದಾಗಿ ಬ್ರ್ಯಾಂಡ್ ಅಭಿಯಾನವನ್ನು ಆರಂಭಿಸಲಾಗಿದೆ. ಅಂದ ಹಾಗೆ ಕ್ಯಾಂಪಾ ಕೋಲಾ ಎಂಬುದು ಖ್ಯಾತ ಭಾರತೀಯ ಪಾನೀಯ ಬ್ರ್ಯಾಂಡ್ ಆಗಿದೆ. ಈ ಅಭಿಯಾನವು ವಿಭಿನ್ನ ವಿಧಾನದ ಭರವಸೆಯನ್ನು ನೀಡುತ್ತದೆ. ಇದರ ಜತೆಗೆ ನೈಜ ಭಾರತೀಯರನ್ನು ಪ್ರತಿಬಿಂಬಿಸುತ್ತದೆ ಮತ್ತು ಅವರ ಪಾರಮ್ಯ ಹಾಗೂ ಸಂಕಲ್ಪ ಸ್ಫೂರ್ತಿಯನ್ನು ಸಂಭ್ರಮಿಸುತ್ತದೆ. ನಿರಂತರವಾಗಿ ಹೊಸ ದಿಗಂತವನ್ನು ಬೆನ್ನಟ್ಟುವ ಯುವ ಭಾರತದ ಧೈರ್ಯಶಾಲಿ ಮನೋಭಾವಕ್ಕೆ ಗೌರವ ಸಮರ್ಪಣೆ ಮಾಡುತ್ತದೆ. “ಕಠಿಣ ಕೆಲಸಗಳನ್ನು ಮಾಡುವಂಥ ಭಾರತೀಯರಿಗೆ, ತಮ್ಮ ಉನ್ನತ ಆಕಾಂಕ್ಷೆಗಳನ್ನು ಈಡೇರಿಸುವುದಕ್ಕೆ ನಮ್ಮ ಸಂವಹನವಾಗಿದ್ದು, ಕೈಗೆಟುಕುವ ಬೆಲೆಗೆ ಜಾಗತಿಕ ಗುಣಮಟ್ಟದ ಉತ್ಪನ್ನಗಳನ್ನು ಒದಗಿಸುವುದಕ್ಕೆ ಇದು ನಮ್ಮ ಪಾಲಿಗೆ ಪಯಣದ ಆರಂಭವಾಗಿದೆ,” ಎಂದು ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ ಸಿಒಒ ಆದ ಕೇತನ್ ಮೋದಿ ಹೇಳಿದ್ದಾರೆ. ಆರ್…
ಹುಬ್ಬಳ್ಳಿ: ಜಿಲ್ಲೆಯಲ್ಲಿ ನಡೆದಿದ್ದಂತ ನೇಹಾ ಹಿರೇಮಠ ಹತ್ಯೆ ಪ್ರಕರಣ ಸಂಬಂಧ ಆರೋಪಿ ಫಯಜ್ ನನ್ನು ಪೊಲೀಸರು ಬಂಧಿಸಿದ್ದರು. ಈ ಆರೋಪಿಯನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಹುಬ್ಬಳ್ಳಿಯ ಕಾರ್ಪೊರೇಟರ್ ಪುತ್ರಿಯಾಗಿದ್ದಂತ ನೇಹಾ ಹಿರೇಮಠನನ್ನು ಕಾಲೇಜಿನ ಆವರಣದಲ್ಲೇ ಆರೋಪಿ ಫಯಜ್ ಚಾಕುವಿನಿಂದ ಇರಿದು 14 ಬಾರಿ ಹತ್ಯೆಗೈದಿದ್ದನು. ಈ ಪ್ರಕರಣ ಇಡೀ ರಾಜ್ಯ, ದೇಶದ ಜನತೆಯನ್ನೇ ಬೆಚ್ಚಿ ಬೀಳಿಸುವಂತೆ ಮಾಡಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶಿಸಿದೆ. ಅಲ್ಲದೇ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆಗೂ ಸೂಚಿಸಲಾಗಿದೆ. ಈ ಬೆನ್ನಲ್ಲೇ ಆರೋಪಿ ಫಯಜ್ ನನ್ನು ಹುಬ್ಬಳ್ಳಿಯ 1ನೇ ಜೆಎಂಎಫ್ ಸಿ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಅಂದಹಾಗೇ ಆರೋಪಿ ಫಯಜ್ ನನ್ನು ಬಂಧನದ ಬಳಿಕ ಹೆಚ್ಚಿನ ವಿಚಾರಣೆಗಾಗಿ ಸಿಐಡಿ ವಶಕ್ಕೆ ಪಡೆದಿತ್ತು. 6 ದಿನಗಳ ಕಾಲ ವಶಕ್ಕೆ ಪಡೆದಿದ್ದಂತ ಸಿಐಡಿಯ ಕಾಲಾವಧಿ, ಇಂದು ಅಂತ್ಯಗೊಂಡಿತ್ತು. ಆರೋಪಿ ಫಯಜ್ ನನ್ನು ನ್ಯಾಯಾಲಯದ ಮುಂದೆ ಇಂದು ಹಾಜರುಪಡಿಸಲಾಗಿತ್ತು. ಕೋರ್ಟ್…
ಚಿಂಚೋಳಿ : ಕೋಮುವಾದಿ ಬಿ.ಜೆ.ಪಿ. ಸಮಾಜ ಒಡೆದು, ಜಾತಿ, ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುತ್ತಿದ್ದು, ದೇಶದ ಉಳಿವಿಗಾಗಿ ಎಲ್ಲ ಜಾತ್ಯತೀತ ಶಕ್ತಿಗಳೂ ಒಗ್ಗೂಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ. ಬೀದರ್ ಲೋಕಸಭಾ ಕ್ಷೇತ್ರಕ್ಕೆ ಸೇರಿದ ಗುಲ್ಬರ್ಗಾ ಜಿಲ್ಲೆಯ ಚಿಂಚೋಳಿಯಲ್ಲಿಂದು ಶೋಷಿತ ವರ್ಗಗಳ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಶೋಷಿತರ ನಡುವೆಯೇ ಎಡ- ಬಲ ಎಂಬಿತ್ಯಾದಿ ಭೇದ ಭಾವವನ್ನು ಬಿಜೆಪಿ ಹುಟ್ಟುಹಾಕುತ್ತಿದೆ. ಬಿಜೆಪಿಗೆ ಮೊದಲ ಹಂತದ ಚುನಾವಣೆ ಬಳಿಕ ಈ ಬಾರಿ ಸೋಲು ನಿಶ್ಚಿತ ಎಂದು ಅರಿವಾಗಿದ್ದು, ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ಜಾತಿ, ಧರ್ಮಗಳ ನಡುವೆ ದ್ವೇಷ ಹುಟ್ಟಿಸುವ ಮಾತನಾಡುವಷ್ಟು ಕೀಳು ಮಟ್ಟಕ್ಕೆ ಇಳಿದಿದೆ ಎಂದರು. ಬಿಜೆಪಿ 2004ರ ಚುನಾವಣೆಗೆ ಮುನ್ನ ಜನರಿಗೆ ಸ್ವರ್ಗವನ್ನೇ ಧರೆಗಿಳಿಸುವಂತೆ ಆಶ್ವಾಸನೆ ನೀಡಿತ್ತು. ಅಚ್ಛೇದಿನವೂ ಬರಲಿಲ್ಲ. ರೈತರ ಆದಾಯ ದುಪ್ಪಟ್ಟಾಗಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಆಗಲಿಲ್ಲ. ಬದಲಾಗಿ ಬಡವರ ಬದುಕು…