Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಜೈಲುಪಾಲಾಗಿದ್ದಾರೆ. ಅವರ ವಿರುದ್ಧ ಈಗ ಸಂತ್ರಸ್ತೆ ಮತ್ತೊಂದು ಸ್ಪೋಟಕ ಹೇಳಿಕೆ ಹೊರ ಹಾಕಿದ್ದಾರೆ. ಅದೇ ಶಾಕಿಂಗ್ ಎನ್ನುವಂತೆ ಮುನಿರತ್ನ ತಮ್ಮ ಮೇಲೆ ವಿಧಾನಸೌಧ, ವಿಕಾಸಸೌಧದಲ್ಲೂ ಅತ್ಯಾಚಾರ ಎಸಗಿರುವುದಾಗಿ ಹೇಳಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿತ್ತು. ಆ ಸಂಬಂಧ ಕೇಸ್ ದಾಖಲಾಗಿ, ಮುನಿರತ್ನ ಜೈಲುಪಾಲಾಗಿದ್ದಾರೆ. ಅವರ ವಿರುದ್ಧ ಅತ್ಯಾಚಾರ ಆರೋಪ ಮಾಡಿರುವಂತ ಸಂತ್ರಸ್ತೆಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ವಿಚಾರಣೆ ವೇಳೆ ಮತ್ತೊಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಪೊಲೀಸರ ಮುಂದೆ ವಿಚಾರಣೆಯ ವೇಳೆಯಲ್ಲಿ ಸಂತ್ರಸ್ತ ಮಹಿಳೆಯು ಬಿಜೆಪಿ ಶಾಸಕ ಮುನಿರತ್ನ ಅವರು ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿಯೂ ನನ್ನ ಮೇಲೆ ರೇಪ್ ಮಾಡಿದ್ದಾರೆ ಎಂಬುದಾಗಿ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ ಎನ್ನಲಾಗಿದೆ. 2020ರಿಂದ 2023ರವರೆಗೆ ತನ್ನ ಮೇಲೆ ಅತ್ಯಾಚಾರ ನಡೆಸಲಾಗಿದೆ. ಮುನಿರತ್ನ ಸಚಿವರಾಗಿದ್ದಾಗ ಕಚೇರಿ ಕರೆಸಿಕೊಂಡಿದ್ದರು. ಇದೇ ಕಚೇರಿಯಲ್ಲಿ ನನ್ನ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂಬುದಾಗಿ ಆರೋಪಿಸಿದ್ದಾರೆ. https://kannadanewsnow.com/kannada/party-stands-behind-cm-no-need-for-siddaramaiah-to-resign-dk-shivakumar/…
ಬೆಂಗಳೂರು : “ಮುಖ್ಯಮಂತ್ರಿಗಳು ರಾಜೀನಾಮೆ ನೀಡುವ ಅಗತ್ಯವಿಲ್ಲ. ಹಳ್ಳಿಯಿಂದ ದೆಹಲಿವರೆಗೂ ಕಾಂಗ್ರೆಸ್ ಪಕ್ಷ ನಮ್ಮ ಮುಖ್ಯಮಂತ್ರಿಗಳ ಪರವಾಗಿ ನಿಲ್ಲಲಿದೆ. ಪಕ್ಷದ ಅಧ್ಯಕ್ಷನಾಗಿ ನಾನು ಈ ಮಾತು ಹೇಳುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸ್ಪೀಕರ್ ಕೋಳಿವಾಡ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕೆಪಿಸಿಸಿ ಅಧ್ಯಕ್ಷ ನಾನು, ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷರು ರೆಹಮಾನ್ ಖಾನ್. ಇಲ್ಲಿ ನಾನೇ ಹೇಳುತ್ತಿದ್ದೇನೆಲ್ಲ. ಅವರ ರಾಜೀನಾಮೆ ಪ್ರಶ್ನೆಯೇ ಉದ್ಭವ ಆಗುವುದಿಲ್ಲ ಅಂತ ಎಂದು ಹೇಳಿದರು. ನಮ್ಮ ಮುಖ್ಯಮಂತ್ರಿಗಳ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನವರು ರಾಜಕೀಯವಾಗಿ ಷಡ್ಯಂತ್ರ ರೂಪಿಸುತ್ತಿದ್ದು, ನಮ್ಮ ಗ್ಯಾರಂಟಿ ಯೋಜನೆಗಳು ಜನರನ್ನು ತಲುಪುತ್ತಿರುವುದನ್ನು ಸಹಿಸಲು ವಿರೋಧ ಪಕ್ಷಗಳಿಂದ ಸಾಧ್ಯವಾಗುತ್ತಿಲ್ಲ” ಎಂದು ತಿಳಿಸಿದರು. “ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ದೊಡ್ಡ ರಾಜ್ಯ ಕರ್ನಾಟಕ. ಇಲ್ಲಿ ನಮ್ಮ ಸರ್ಕಾರ ಇರುವುದನ್ನು ಸಹಿಸಲು…
ಶಿವಮೊಗ್ಗ : ನಗರಾಭಿವೃದ್ಧಿ ಇಲಾಖೆಯ ಶಿವಮೊಗ್ಗ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2 ತಂತ್ರಾಂಶದೊಂದಿಗೆ ದಿ:23/09/2024ರ ಸರ್ಕಾರದ ಆದೇಶದಂತೆ ಜಾರಿಯಾಗಿರುತ್ತದೆ. 2024ರ ಅಕ್ಟೋಬರ್ 07 ರಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ತಂತ್ರಾಂಶದಿಂದಲೇ ಇ-ಖಾತಾ ಪಡೆಯಬೇಕೆಂದು ಜಿಲ್ಲಾ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನಗರ ಪ್ರದೇಶಗಳಲ್ಲಿ ಕೃಷಿಯೇತರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶವನ್ನು ರೂಪಿಸಿದ್ದು, ಇ-ಆಸ್ತಿ ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2.0 ತಂತ್ರಾಂಶದೊಂದಿಗೆ ಪ್ರಾಯೋಗಿಕವಾಗಿ ರಾಮನಗರ ಮತ್ತು ಕನಕಪುರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಸಂಬಂಧಿಸಿದಂತೆ, 2020 ರಿಂದ ನೋಂದಣಿ ಮಾಡುತ್ತಿರುವುದು ಯಶಸ್ವಿಯಾಗಿರುತ್ತದೆ. ಇ-ಖಾತಾ ಸಂಯೋಜನೆಯಿಂದ ಸಾರ್ವಜನಿಕರು ಸ್ವತ್ತುಗಳ ನೋಂದಣಿ…
ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸಂಪೂರ್ಣ ದುರ್ಬಲವಾಗಿದೆ. ಮುಡಾ ಹಗರಣದಲ್ಲಿ ಭಾಗಿಯಾಗಿರುವಂತ ಸಿಎಂ ಸಿದ್ಧರಾಮಯ್ಯ ಅವರನ್ನು ಕುರ್ಚಿಯಿಂದ ಕೆಳಗಿಳಿಸಲು ವಿಫಲವಾಗಿದೆ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ಇಂದು ಮಾತನಾಡಿದಂತ ಅವರು, ಕಾಂಗ್ರೆಸ್ಸಿಗರು ಮತ್ತು ಸಿದ್ದರಾಮಯ್ಯನವರು ಕರ್ನಾಟಕವನ್ನು ಎಟಿಎಂ ಮಾಡಿ ತಮ್ಮನ್ನು ತಾವು ಹಾಳು ಮಾಡಿಕೊಂಡರು ಎಂದು ನುಡಿದರು. ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದ ಮೂಲಕ ರಾಷ್ಟ್ರದಲ್ಲಿ ಕರ್ನಾಟಕದ ಮಾನವನ್ನು ಹರಾಜು ಹಾಕುತ್ತಿದೆ ಎಂದು ಟೀಕಿಸಿದರು. ರಾಜೀನಾಮೆ ಕೊಡುವ ಮೂಲಕ ಅಲ್ಪಸ್ವಲ್ವ ಗೌರವವನ್ನು ಉಳಿಸಿಕೊಳ್ಳಿ ಎಂದು ಸಿದ್ದರಾಮಯ್ಯನವರಿಗೆ ಸಲಹೆ ನೀಡಿದರು. ಮೊನ್ನೆ ಹೈಕೋರ್ಟ್ ಆದೇಶ ಬಂದ ಕೂಡಲೇ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ನಿಮ್ಮ ರಾಜೀನಾಮೆ ಪಡೆದು ಪಕ್ಷದಿಂದ ಉಚ್ಚಾಟಿಸಬೇಕಿತ್ತು. ಕಾಂಗ್ರೆಸ್ ಹೈಕಮಾಂಡ್ ಸಂಪೂರ್ಣ ದುರ್ಬಲ ಎಂಬುದು ಇದರಿಂದ ಗೊತ್ತಾಗುತ್ತದೆ ಎಂದು ತಿಳಿಸಿದರು. ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಧಿಕ್ಕಾರ, ಮೂಡ ಸೈಟ್ಗಳನ್ನು ಕೊಳ್ಳೆ ಹೊಡೆದ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಧಿಕ್ಕಾರ, ಸಿದ್ದರಾಮಯ್ಯ ಅವರೇ…
ಬಾಂಗ್ಲಾದೇಶದ ಆಲ್ರೌಂಡರ್ ಶಕೀಬ್ ಅಲ್ ಹಸನ್ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್ ಸೇರಿದಂತೆ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಬಾಂಗ್ಲಾದೇಶದ ಸ್ಟಾರ್ ಆಲ್ರೌಂಡರ್ ಶಕೀಬ್ ಅಲ್ ಹಸನ್ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಮಿರ್ಪುರದಲ್ಲಿ ತಮ್ಮ ತವರು ಪ್ರೇಕ್ಷಕರ ಮುಂದೆ ವಿದಾಯ ಪಂದ್ಯವನ್ನು ಆಡುವ ತಮ್ಮ ಮನವಿಯನ್ನು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ನೀಡದಿದ್ದರೆ ಭಾರತ ಮತ್ತು ಬಾನ್ ಕಾನ್ಪುರ ಟೆಸ್ಟ್ ತಮ್ಮ ಕೊನೆಯ ಪಂದ್ಯವಾಗಲಿದೆ ಎಂದು ಶಕೀಬ್ ಹೇಳಿದ್ದಾರೆ. https://kannadanewsnow.com/kannada/good-news-for-rural-journalists-state-govt-orders-distribution-of-free-bus-passes/ https://kannadanewsnow.com/kannada/former-tn-minister-senthil-balaji-granted-bail-by-sc-in-money-laundering-case/
ಬೆಂಗಳೂರು: ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಗ್ರಾಮೀಣ ಪತ್ರಕರ್ತರಿಗೆ ವೃತ್ತಿಗೆ ಸಂಬಂಧಿ ಚಟುವಚಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ವಿತರಣೆಗೆ ಸರ್ಕಾರ ಆದೇಶಿಸಿದೆ. ಇಂದು ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಡಿ 2024-25ನೇ ಸಾಲಿನ ಅಯವ್ಯಯ ಭಾಷಣದ ಕಂಡಿಕೆ 431ರಲ್ಲಿ “ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಬಸ್ ಪಾಸ್ ಸೌಲಭ್ಯವನ್ನು ಪ್ರಾರಂಭಿಸಲಾಗುವುದು’ ಎಂದು ಘೋಷಿಸಲಾಗಿರುತ್ತದೆ ಎಂದಿದ್ದಾರೆ. ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ/ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಸೌಲಭ್ಯವನ್ನು ಅನುಷ್ಠಾನಗೊಳಿಸುವುದಕ್ಕೆ ಸಂಬಂಧಿಸಿದಂತೆ ದಿನಾಂಕ:21/03/2024ರಲ್ಲಿದ್ದಂತೆ ಮಾಧ್ಯಮ ಪಟ್ಟಿಯಲ್ಲಿರುವ ಮುದ್ರಣ/ವಿದ್ಯುನ್ಮಾನ ಮಾಧ್ಯಮಗಳ ಸಂಖ್ಯೆಯನ್ನಾಧರಿಸಿ, ರಾಜ್ಯಾದ್ಯಂತ ಒಟ್ಟು 5222 ಪತ್ರಕರ್ತರಿಗೆ ಈ ಯೋಜನೆಯನ್ನು ಒದಗಿಸಲು, ಕೆ.ಎಸ್.ಆರ್.ಟಿ.ಸಿ…
ಬೆಂಗಳೂರು: ರಾಜ್ಯ ಬಿಜೆಪಿ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಇಂದು ಸಿಎಂ ಸಿದ್ಧರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆಯನ್ನು ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರು, ಜನಪ್ರತಿನಿಧಿಗಳು ನಡೆಸಿದರು. ಇಂತಹ ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು. ರಾಜ್ಯ ಬಿಜೆಪಿ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ಕರೆಯನ್ವಯ ಪ್ರತಿಭಟನೆ ನಡೆಯಿತು. ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದರು. ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಧಿಕ್ಕಾರ, ಮೂಡ ಸೈಟ್ಗಳನ್ನು ಕೊಳ್ಳೆ ಹೊಡೆದ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಧಿಕ್ಕಾರ, ಸಿದ್ದರಾಮಯ್ಯ ಅವರೇ ಕೊಡಲೇಬೇಕು ಕೊಡಲೇಬೇಕು- ರಾಜೀನಾಮೆ ಕೊಡಲೇಬೇಕು, ಭ್ರಷ್ಟ ಸರಕಾರ ನಡೆಸುವ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಿಕ್ಕಾರ,…
ನವದೆಹಲಿ: ಭಾರತೀಯ ರೈಲ್ವೆಯ ಅಡಿಯಲ್ಲಿ ಬರುವ ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ ಲಿಮಿಟೆಡ್ (ಐಆರ್ಸಿಟಿಸಿ) ಭಾರತ್ ಗೌರವ್ ಪ್ರವಾಸಿ ರೈಲುಗಳ ಮೂಲಕ ಭಾರತದ ಶ್ರೀಮಂತ ಐತಿಹಾಸಿಕ, ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಪ್ರದರ್ಶಿಸುವ ಧ್ಯೇಯವನ್ನು ಮುಂದುವರೆಸಿದೆ. ಐಆರ್ಸಿಟಿಸಿ ಅಕ್ಟೋಬರ್ 1, 2024 ರಂದು ದೆಹಲಿಯಿಂದ “ಗರ್ವಿ ಗುಜರಾತ್” ಭಾರತ್ ಗೌರವ್ ಡೀಲಕ್ಸ್ ಎಸಿ ಪ್ರವಾಸಿ ರೈಲನ್ನು ಪ್ರಾರಂಭಿಸಲು ಸಜ್ಜಾಗಿದೆ. ಈ ವಿಶೇಷ ಪ್ರಯಾಣವು ಪ್ರಾಚೀನ ಪಟ್ಟಣ ವಡ್ನಗರ್ ಮತ್ತು ಸುಂದರವಾದ ದ್ವೀಪ ದಿಯು ಸೇರಿದಂತೆ ಗುಜರಾತ್ನ ಪ್ರಮುಖ ಆಧ್ಯಾತ್ಮಿಕ ಮತ್ತು ಪಾರಂಪರಿಕ ತಾಣಗಳ ಮೂಲಕ ಪ್ರಯಾಣಿಕರನ್ನು ಕರೆದೊಯ್ಯುತ್ತದೆ. ಆರಾಮ ಮತ್ತು ಅನುಕೂಲಕ್ಕಾಗಿ ವಿನ್ಯಾಸಗೊಳಿಸಲಾದ “ಗರ್ವಿ ಗುಜರಾತ್” ಭಾರತ್ ಗೌರವ್ ಡೀಲಕ್ಸ್ ಎಸಿ ಪ್ರವಾಸಿ ರೈಲು ಆಧುನಿಕ ಸೌಲಭ್ಯಗಳನ್ನು ಒದಗಿಸುತ್ತದೆ. ಪ್ರಯಾಣಿಕರು ಎರಡು ಡೈನಿಂಗ್ ರೆಸ್ಟೋರೆಂಟ್ ಗಳು, ಅತ್ಯಾಧುನಿಕ ಅಡುಗೆಮನೆ, ಶವರ್ ಕ್ಯೂಬಿಕಲ್ ಗಳು, ಸೆನ್ಸರ್ ಚಾಲಿತ ವಾಶ್ ರೂಮ್ ಗಳು ಮತ್ತು ಪಾದ ಮಸಾಜ್ ಗಳನ್ನು ಆನಂದಿಸಬಹುದು. ಮೊದಲ…
ನವದೆಹಲಿ: ಬಿಹಾರದ ಮರ್ಹೋರಾ ಸ್ಥಾವರವು ಭಾರತೀಯ ರೈಲ್ವೆಗೆ ಲೋಕೋಮೋಟಿವ್ಗಳ ಪ್ರಮುಖ ಪೂರೈಕೆದಾರನಾಗಿದೆ. ವಾಬ್ಟೆಕ್ ಲೋಕೋಮೋಟಿವ್ ಪ್ರೈವೇಟ್ ಲಿಮಿಟೆಡ್ ಭಾರತೀಯ ರೈಲ್ವೆ ಮತ್ತು ವಾಬ್ಟೆಕ್ ನಡುವಿನ ಜಂಟಿ ಉದ್ಯಮವಾಗಿದೆ. ರಫ್ತು ಮಾಡಲು ಲೋಕೋಮೋಟಿವ್ ಗಳನ್ನು ತಯಾರಿಸುವ ಸ್ಥಾವರದ ಸಾಮರ್ಥ್ಯವನ್ನು ಹೆಚ್ಚಿಸುವುದು ಯೋಜನೆಯ ಉದ್ದೇಶವಾಗಿದೆ. ಈ ಮಹತ್ವದ ಕ್ರಮಕ್ಕೆ ಧನ್ಯವಾದಗಳು, ಕಾರ್ಯತಂತ್ರದ ವಿಸ್ತರಣೆಯನ್ನು ನೋಡಬಹುದು ಏಕೆಂದರೆ ಮೊದಲ ಸಾಗಣೆಗಳು ಆಫ್ರಿಕಾದ ಗ್ರಾಹಕರನ್ನು ಗುರಿಯಾಗಿಸುತ್ತವೆ. 2018 ರಲ್ಲಿ ಸ್ಥಾಪನೆಯಾದ ಮರ್ಹೋರಾ ಘಟಕವು ಜಾಗತಿಕ ಲೋಕೋಮೋಟಿವ್ ಉದ್ಯಮದಲ್ಲಿ ಪ್ರಮುಖ ಪಾತ್ರ ವಹಿಸಲು ಸಜ್ಜಾಗಿದೆ, ಇದು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ಉತ್ಪಾದನಾ ಪರಾಕ್ರಮವನ್ನು ಪ್ರದರ್ಶಿಸುತ್ತದೆ. ಭಾರತೀಯ ರೈಲ್ವೆಗಾಗಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ 1,000 ಲೋಕೋಮೋಟಿವ್ಗಳನ್ನು ದೇಶೀಯವಾಗಿ ತಯಾರಿಸಲು ಮರ್ಹೋರಾ ಸ್ಥಾವರವನ್ನು ಸ್ಥಾಪಿಸಲಾಯಿತು. ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆತ್ಮನಿರ್ಭರ ಭಾರತ ದೃಷ್ಟಿಕೋನದ ಅಡಿಯಲ್ಲಿ ‘ಮೇಕ್ ಇನ್ ಇಂಡಿಯಾ’ ಮತ್ತು ‘ಮೇಡ್ ಫಾರ್ ದಿ ವರ್ಲ್ಡ್’ ಉಪಕ್ರಮಗಳೊಂದಿಗೆ ಹೊಂದಿಕೆಯಾಗುವ ಮೂಲಕ ಭಾರತವನ್ನು ಲೋಕೋಮೋಟಿವ್ ಉತ್ಪಾದನೆಯ ಜಾಗತಿಕ ಕೇಂದ್ರವಾಗಿ ಇರಿಸಿರುವುದರಿಂದ…
ಬೆಂಗಳೂರು: ಮೈಸೂರಿನ ಮುಡಾದಿಂದ 2 ಸೈಟ್ ಪಡೆಯಬೇಕಾದ ಜಾಗದಲ್ಲಿ ನೀವು (ಮುಖ್ಯಮಂತ್ರಿಗಳ ಕುಟುಂಬ) 14 ಸೈಟ್ ಪಡೆದುದೇಕೆ ಎಂದು ಹೈಕೋರ್ಟ್ ಪ್ರಸ್ತಾಪಿಸಿದೆ. ಹೀಗಾಗಿ ಗವರ್ನರ್ ಅವರು ತನಿಖೆಗೆ ಕೊಟ್ಟ ಆದೇಶ ಸರಿ ಇದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಿನ್ನೆಯ ಹೈಕೋರ್ಟ್ ಆದೇಶವನ್ನು ಗಮನಿಸಿದ್ದೇವೆ. ಮಾನ್ಯ ಗವರ್ನರ್ ಅವರ ಆದೇಶವನ್ನು ಕೋರ್ಟ್ ಎತ್ತಿಹಿಡಿದಿದೆ ಎಂದರು. ಮಾನ್ಯ ಮುಖ್ಯಮಂತ್ರಿಗಳೂ ನಾನು ಯಾವುದೇ ತನಿಖೆಗೆ ಹೆದರುವುದಿಲ್ಲ; ತನಿಖೆ ಎದುರಿಸಲು ಸಿದ್ಧನಿದ್ದೇನೆ ಎಂದಿದ್ದಾರೆ ಎಂದು ವಿವರಿಸಿದರು. ಕೋರ್ಟ್ ಆದೇಶ ಬಂದ ಬಳಿಕ ತನಿಖೆಗೆ ಸಿದ್ಧ ಎನ್ನುವುದು ಅಪಾರ್ಥ. ಆದೇಶ ಬಂದ ಬಳಿಕ ಸಿದ್ಧನಿಲ್ಲ ಎನ್ನಲು ಸಾಧ್ಯವೇ ಎಂದು ಪ್ರಶ್ನಿಸಿದರು. ನನ್ನ ಪ್ರಕಾರ ನಿನ್ನೆಯ ಆದೇಶಕ್ಕೂ ಇವತ್ತಿನ ಜನಪ್ರತಿನಿಧಿ ವಿಶೇಷ ಕೋರ್ಟಿನ ಆದೇಶಕ್ಕೂ ಬಹಳ ವ್ಯತ್ಯಾಸವಿದೆ. ಇವತ್ತಿನ ಆದೇಶದಲ್ಲಿ ಮೈಸೂರಿನ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ…













