Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಅಂತಾರಾಷ್ಟ್ರೀಯ ಗಾಲ್ಫ್ ಫೆಡರೇಶನ್ (International Golf Federation -IGF) ಮಂಗಳವಾರ ಬಿಡುಗಡೆ ಮಾಡಿದ ಅರ್ಹ ಆಟಗಾರರ ಅಂತಿಮ ಪಟ್ಟಿಯ ಪ್ರಕಾರ, ಗಾಲ್ಫ್ ಆಟಗಾರ್ತಿಯರಾದ ಅದಿತಿ ಅಶೋಕ್, ದೀಕ್ಷಾ ದಾಗರ್, ಶುಭಂಕರ್ ಶರ್ಮಾ ಮತ್ತು ಗಗನ್ಜೀತ್ ಭುಲ್ಲರ್ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ( Paris Olympics ) ಭಾರತವನ್ನು ಪ್ರತಿನಿಧಿಸಲಿದ್ದಾರೆ. ಐಜಿಎಫ್ನ ಒಲಿಂಪಿಕ್ ಅರ್ಹತಾ ಪಟ್ಟಿಯಲ್ಲಿ 60 ಪುರುಷರು ಮತ್ತು ಮಹಿಳಾ ಗಾಲ್ಫ್ ಆಟಗಾರರು ಸೇರಿದ್ದಾರೆ. ಶುಭಂಕರ್ ಮತ್ತು ಗಗನ್ಜೀತ್ ಕ್ರಮವಾಗಿ 48 ಮತ್ತು 54 ನೇ ಶ್ರೇಯಾಂಕಗಳೊಂದಿಗೆ ಒಲಿಂಪಿಕ್ ಶ್ರೇಯಾಂಕಗಳೊಂದಿಗೆ ಸ್ಥಾನ ಪಡೆದಿದ್ದಾರೆ. ಅದಿತಿ ಮತ್ತು ದೀಕ್ಷಾ ಕ್ರಮವಾಗಿ 24 ಮತ್ತು 40 ಅಂಕಗಳೊಂದಿಗೆ ಅರ್ಹತೆ ಪಡೆದರು. ಪ್ಯಾರಿಸ್ ಕ್ರೀಡಾಕೂಟಕ್ಕಾಗಿ ಪುರುಷರ (ಆಗಸ್ಟ್ 1-4) ಮತ್ತು ಮಹಿಳೆಯರ (ಆಗಸ್ಟ್ 7-10) ಗಾಲ್ಫ್ ಸ್ಪರ್ಧೆಗಳು ಸೇಂಟ್-ಕ್ವೆಂಟಿನ್-ಎನ್-ಯೆವೆಲೈನ್ಸ್ನ ಗಾಲ್ಫ್ ನ್ಯಾಷನಲ್ ಕೋರ್ಸ್ನಲ್ಲಿ ನಡೆಯಲಿವೆ. ಟೋಕಿಯೊ ಒಲಿಂಪಿಕ್ಸ್ನಲ್ಲಿ ಅದಿತಿ ನಾಲ್ಕನೇ ಸ್ಥಾನ ಪಡೆದಿದ್ದರು, ಇದು ಬೇಸಿಗೆ ಕ್ರೀಡಾಕೂಟದಲ್ಲಿ ಭಾರತೀಯ ಗಾಲ್ಫ್ ಆಟಗಾರ ಸಾಧಿಸಿದ ಅತ್ಯುತ್ತಮ ಫಲಿತಾಂಶವಾಗಿದೆ.…
ನವದೆಹಲಿ: ಮುಂಬೈ, ಜೈಪುರ ಮತ್ತು ಪಾಟ್ನಾ ವಿಮಾನ ನಿಲ್ದಾಣಗಳು ಸೇರಿದಂತೆ ದೇಶಾದ್ಯಂತ 40 ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ. ಖಾಸಗಿ ಸುದ್ದಿ ವಾಹಿನಿಗಳ ಮೂಲಗಳ ಪ್ರಕಾರ, ಇತರ ನಗರಗಳ ಜೊತೆಗೆ ಜೈಪುರದಲ್ಲಿ ವಿಮಾನ ನಿಲ್ದಾಣವನ್ನು ಸ್ಫೋಟಿಸಲು ಟ್ರೀಟ್ ಮೇಲ್ ಸ್ವೀಕರಿಸಲಾಗಿದೆ. ಮೇಲ್ ಸ್ವೀಕರಿಸಿದ ಕೂಡಲೇ ಭದ್ರತೆಯನ್ನು ಬಿಗಿಗೊಳಿಸಲಾಯಿತು, ನಂತರ ವಿಮಾನ ನಿಲ್ದಾಣದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು. ಆದಾಗ್ಯೂ, ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಕೆಲವು ಕಿಡಿಗೇಡಿಗಳು ಬೆದರಿಕೆ ಮೇಲ್ ಕಳುಹಿಸಿದ್ದಾರೆ. ಮೇಲ್ ಕಳುಹಿಸಿದ್ದಾರೆಂದು ನಂಬಲಾದ ವ್ಯಕ್ತಿಗಾಗಿ ಐಪಿ ವಿಳಾಸದ ಮೂಲಕ ಹುಡುಕಾಟ ನಡೆಯುತ್ತಿದೆ. “ವಿಮಾನ ನಿಲ್ದಾಣವನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದೆ. ಆದರೆ ಇಲ್ಲಿಯವರೆಗೆ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ” ಎಂದು ಪೊಲೀಸರು ತಿಳಿಸಿದ್ದಾರೆ. ಮುಂಬೈ, ಪಾಟ್ನಾ ವಿಮಾನ ನಿಲ್ದಾಣ ಸೇರಿದಂತೆ ಹಲವಾರು ಮೇಲ್ಗಳನ್ನು ಸ್ವೀಕರಿಸುವ ಸ್ಥಳಗಳಲ್ಲಿ ಭದ್ರತಾ ವ್ಯವಸ್ಥೆಗಳನ್ನು ಬಿಗಿಗೊಳಿಸಲಾಗಿದೆ. https://kannadanewsnow.com/kannada/green-signal-from-state-government-to-start-english-medium-bilingual-classes-in-government-schools/ https://kannadanewsnow.com/kannada/people-of-bengaluru-take-note-tomorrow-there-will-be-power-outages-in-these-areas-tomorrow/
ನಿಮಗೆಲ್ಲರಿಗೂ ತಿಳಿದೇ ಇದೆ ಉಪ್ಪಿನ ಮಹತ್ವ ನಮ್ಮ ಹಿರಿಯರು ಉಪ್ಪಿನ ಮೇಲೆ ಒಂದು ಗಾದೆಯನ್ನೇ ಕಟ್ಟಿದ್ದಾರೆ ಅದೇನೆಂದರೆ ಸ್ನೇಹಿತರೇ ಉಪ್ಪಿಗಿಂತ ರುಚಿ ಇಲ್ಲ ತಾಯಿಗಿಂತ ದೇವರಿಲ್ಲ ಅಂತ ಅಲ್ವಾ ಸ್ನೇಹಿತರೇ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ರಾಶಿಗಳು (12) ಮೇಷ, ವೃಷಭ, ಮಿಥುನ, ಕರ್ಕಾಟಕ ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ,…
ಬೆಂಗಳೂರು: ನಗರದಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ, ನಾಳೆ ಮತ್ತು ನಾಡಿದ್ದು ವಿವಿಧ ಪ್ರದೇಶಗಳಲ್ಲಿ ಕರೆಟ್ ಕಟ್ ಆಗಲಿದೆ ಅಂತ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 19-06-2024ರ ನಾಳೆ ಹಾಗೂ ದಿನಾಂಕ 20-06-2024ರ ನಾಡಿದ್ದು, ಬೆಂಗಳೂರಿನ ಈ ಕೆಳಗಿನ ಪ್ರದೇಶಗಳಲ್ಲಿ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ತಿಳಿಸಿದೆ. ಹೆಚ್.ಬಿ.ಆರ್’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಹೆಚ್.ಬಿ.ಆರ್. 1ನೇ ಬ್ಲಾಕ್, 2ನೇ ಬ್ಲಾಕ್, ಯಾಸಿನ್ ನಗರ, ಸುಭಾಶ್ ಲೇಔಟ್, ರಾಮ ದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀಚರ್ ಕಾಲೋನಿ, ಹೆಚ್.ಬಿ.ಆರ್. 3ನೇ ಬ್ಲಾಕ್, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ. ಹಳ್ಳಿ ಗ್ರಾಮ, ಸಿ.ಎಂ.ಆ.ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ,…
ಬೆಂಗಳೂರು: ರಾಜ್ಯದವರೇ ಆದ ಎಚ್ ಡಿ ಕುಮಾರಸ್ವಾಮಿ ಅವರು ಈಗ ಕೇಂದ್ರ ಸರ್ಕಾರದಲ್ಲಿ ಭಾರೀ ಕೈಗಾರಿಕಾ ಸಚಿವರಾಗಿದ್ದಾರೆ. ರಾಜ್ಯದಲ್ಲಿ ಸೆಮಿಕಂಡಕ್ಟರ್ ಉದ್ಯಮಕ್ಕೆ ಹೂಡಿಕೆ ಆಕರ್ಷಣೆ ಮತ್ತು ಮುಂದಿನ ಬೆಳವಣಿಗೆ ಕುರಿತು ಚರ್ಚಿಸಲು ಸದ್ಯದಲ್ಲೇ ಅವರನ್ನು ಭೇಟಿ ಮಾಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಂಗಳವಾರ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವಾದ ಗುಜರಾತಿನಲ್ಲಿ ನೆಲೆಯೂರಲಿರುವ ಅಮೆರಿಕದ ಮೈಕ್ರಾನ್ ಸೆಮಿಕಂಡಕ್ಟರ್ ಕಂಪನಿಗೆ ಕೇಂದ್ರ ಸರಕಾರ ಶೇ 50 ಮತ್ತು ಅಲ್ಲಿನ ರಾಜ್ಯ ಸರಕಾರ ಶೇ 20ರಷ್ಟು ಪ್ರೋತ್ಸಾಹಧನ ನೀಡುತ್ತಿವೆ. ನಮಗೂ ಇದೇ ಮಾದರಿಯ ಉತ್ತೇಜನ ಬೇಕಾಗಿದೆ. ಈ ಸಂಬಂಧ ಕುಮಾರಸ್ವಾಮಿ ಅವರನ್ನು ಭೇಟ ಮಾಡಿ ಬಂಡವಾಳ ಆಕರ್ಷಣೆ ಕುರಿತು ಚರ್ಚಿಸಲಾಗುವುದು ಎಂದು ಅವರು ಹೇಳಿದ್ದಾರೆ. ಸೆಮಿಕಂಡಕ್ಟರ್ ಕ್ಷೇತ್ರವು ಆಧುನಿಕ ಜಗತ್ತಿನಲ್ಲಿ ಪ್ರಮುಖ ಉದ್ಯಮವಾಗಿದೆ. ಕೇಂದ್ರ ಸರಕಾರವು ಎಲ್ಲ ರಾಜ್ಯಗಳಿಗೂ ಸಮಾನ ಅವಕಾಶ ಮತ್ತು ಪ್ರೋತ್ಸಾಹ ನೀಡಬೇಕಾದ್ದು…
ಬೆಂಗಳೂರು: ರಾಜ್ಯದಲ್ಲಿರುವ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆ ಮಾಡಿದ್ದು ಸಾಕಾಗಿಲ್ಲ ಎಂದು ಇದ್ದೆಲ್ಲ ಆಸ್ತಿಗಳ ಮಾರಾಟ, ಅಡವಿಡಲು ಹೊರಟಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಆಕ್ಷೇಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಭವಿಷ್ಯದ ಹಲವು ಯೋಜನೆಗಳಿಗೆ ಬಳಕೆ ಮಾಡಲು ಉದ್ದೇಶಿಸಿದ ಸಂರಕ್ಷಿತ ಸರಕಾರಿ ಭೂಮಿಯನ್ನು ಇವತ್ತಿನ ತಾತ್ಕಾಲಿಕ ಕೊರತೆ ತುಂಬಿಸಿಕೊಳ್ಳಲು ಮಾರಾಟ ಮಾಡುವುದು, ಲೀಸ್ ಕೊಡುವ ಹುನ್ನಾರವನ್ನು ಮಾಡುತ್ತಿದೆ. ಇದರ ಹಿಂದೆ ದೊಡ್ಡ ಸಂಚು ಇದ್ದಂತೆ ಭಾಸವಾಗುತ್ತಿದೆ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದ ಬಹುತೇಕ ಸಚಿವರು ರಿಯಲ್ ಎಸ್ಟೇಟ್ ಜೊತೆ ಸಂಬಂಧ ಹೊಂದಿರುವುದು ಗೊತ್ತಿರುವ ಸಂಗತಿ. ಅವರಿಗೆ ಈ ಭೂಮಿ ಕೊಡುವ ಸಂಚು ನಡೆದಿರುವ ಸಾಧ್ಯತೆ ಇದೆ ಎಂದ ಅವರು, ಮುಖ್ಯಮಂತ್ರಿಗಳ ಹೇಳಿಕೆಯಂತೆ ಕಾಂಗ್ರೆಸ್ ಸರಕಾರದ ಖಜಾನೆ ಭರ್ತಿ ಇದ್ದ ಮೇಲೆ ಒಂದು ಕಡೆ ಬೆಲೆ ಏರಿಕೆ, ಇನ್ನೊಂದು ಕಡೆ ಸರಕಾರಿ…
ನವದೆಹಲಿ: ಇಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (Pradhan Mantri Kisan Samman Nidhi – PM-KISAN Nidhi) ಯೋಜನೆಯಡಿ 20,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಜೂನ್ 18 ರಂದು ವಾರಣಾಸಿಗೆ ಭೇಟಿ, ಬಿಡುಗಡೆ ಮಾಡಿದ್ದಾರೆ. ಪಿಎಂ ಕಿಸಾನ್ ನಿಧಿಯ 17 ನೇ ಕಂತನ್ನು ಬಿಡುಗಡೆ ಮಾಡಲು ಅಧಿಕಾರ ನೀಡುವ ಮೂಲಕ ಪಿಎಂ ಮೋದಿ ಜೂನ್ 10 ರಂದು ತಮ್ಮ ಮೂರನೇ ಅವಧಿಯನ್ನು ಪ್ರಾರಂಭಿಸಿದರು, ಇದು 9.3 ಕೋಟಿ ರೈತರಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ಸುಮಾರು 20,000 ಕೋಟಿ ರೂ.ಗಳನ್ನು ವಿತರಿಸುವ ಗುರಿಯನ್ನು ಹೊಂದಿದೆ. 2019 ರ ಫೆಬ್ರವರಿಯಲ್ಲಿ ಪ್ರಾರಂಭಿಸಲಾದ ಈ ಯೋಜನೆಯು ವಾರ್ಷಿಕವಾಗಿ 6,000 ರೂ.ಗಳನ್ನು 2,000 ರೂ.ಗಳ ಮೂರು ಸಮಾನ ಕಂತುಗಳಲ್ಲಿ ನೇರವಾಗಿ ರೈತರ ಆಧಾರ್-ಸೀಡ್ ಮಾಡಿದ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. https://twitter.com/ANI/status/1803032508151603464 ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಚೌಹಾಣ್, 100 ದಿನಗಳ ಯೋಜನೆಯಲ್ಲಿ ಕೆಲಸ ಮಾಡುವ ಜವಾಬ್ದಾರಿಯನ್ನು ಪ್ರಧಾನಿ ಮೋದಿ ನೀಡಿದ್ದಾರೆ ಎಂದು…
ಬೆಂಗಳೂರು: ರಾಜ್ಯಾಧ್ಯಂತ ಇಂದು ಎಸ್ಎಸ್ ಎಲ್ ಸಿ ಪರೀಕ್ಷೆ-2ಗೆ ಮೊದಲ ದಿನದ ಗಣಿತ ಪರೀಕ್ಷೆ ನಡೆಯಿತು. ಮೊದಲ ದಿನದ ಪರೀಕ್ಷೆ ಯಶಸ್ವಿಯಾಗಿದ್ದು, ಈ ಪರೀಕ್ಷೆಗೆ 1.56 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಈ ಪರೀಕ್ಷೆಯಲ್ಲಿ ನಕಲಿಗೆ ಯತ್ನಿಸಿದಂತ ಮೂವರನ್ನು ಡಿಬಾರ್ ಕೂಡ ಮಾಡಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಇಂದಿನ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಗಣಿತ ವಿಷಯದ ಪರೀಕ್ಷೆಗೆ 1,79,169 ಮಂದಿ ನೋಂದಾಯಿಸಿಕೊಂಡಿದ್ದರು. ಇವರಲ್ಲಿ 1,56,658 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ತಿಳಿಸಿದೆ. ಇಂದಿನ ಮೊದಲ ದಿನದ ಪರೀಕ್ಷೆಗೆ 22,511 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಶೇ.87.44ರಷ್ಟು ವಿದ್ಯಾರ್ಥಿಗಳು ಇಂದಿನ ಪರೀಕ್ಷೆಗೆ ಹಾಜರಾಗಿದ್ದಾರೆ. ಕಲಬುರ್ಗಿಯ ಆರಾಧನಾ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ನಲ್ಲಿ ನಕಲಿಗೆ ಪ್ರಯತ್ನಿಸಿದಂತ ಮೂವರು ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ ಅಂತ ಮಾಹಿತಿ ನೀಡಿದೆ. https://kannadanewsnow.com/kannada/market-cap-crosses-5-trillion-mark-after-modi-becomes-pm-pm-modi/ https://kannadanewsnow.com/kannada/expensive-duniya-for-common-man-prices-of-essential-commodities-including-pulses-and-grains-rise-sharply/
ಬೆಂಗಳೂರು: ನಗರದ ಟರ್ಫ್ ಕ್ಲಪ್ ನಲ್ಲಿ ರೇಸಿಂಗ್ ಚಟುವಟಿಕೆಗಳನ್ನು ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು. ಇಂದು ಹೈಕೋರ್ಟ್ ಮತ್ತೆ ಟರ್ಫ್ ಕ್ಲಪ್ ನಲ್ಲಿ ರೇಸಿಂಗ್ ಚಟುವಟಿಕೆಗಳನ್ನು ನಡೆಸೋದಕ್ಕೆ ಅನುಮತಿ ನೀಡಿದೆ. ಬೆಂಗಳೂರಿನ ಟರ್ಫ್ ಕ್ಲಪ್ ನಲ್ಲಿ ರೇಸಿಂಗ್, ಬೆಟ್ಟಿ ಚಟುವಟಿಕೆ ಮುಂದುವರೆಸಲು ಹೈಕೋರ್ಟ್ ಅನುಮತಿ ನೀಡಿದೆ. ಹೈಕೋರ್ಟ್ ಏಕಸದಸ್ಯಪೀಠವು ಮಧ್ಯಂತರ ಅನುತಿ ನೀಡಿ ಆದೇಶಿಸಿದೆ. ರಾಜ್ಯ ಸರ್ಕಾರವು 2024-25ನೇ ಸಾಲಿನಲ್ಲಿ ಬೆಟ್ಟಿಂಗ್ ಚಟುವಟಿಕೆಯ ಹಿನ್ನಲೆಯಲ್ಲಿ ಅನುಮತಿ ನೀಡಲು ನಿರಾಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಬೆಂಗಳೂರಿನ ಟರ್ಫ್ ಕ್ಲಪ್ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಎಸ್. ಆರ್ ಕೃಷ್ಣಮೂರ್ತಿಯನ್ನು ಒಳಗೊಂಡಂತ ಏಕಸದಸ್ಯ ನ್ಯಾಯಪೀಠವು, ರೇಸಿಂಗ್, ಬೆಟ್ಟಿಂಗ್ ಮೇಲೆ ನಿಗಾ ವಹಿಸಲು ಸರ್ಕಾರಕ್ಕೆ ಸ್ವತಂತ್ರ್ಯವಿದೆ ಎಂಬುದಾಗಿ ಅಭಿಪ್ರಾಯ ಪಟ್ಟಿತು. ಅಲ್ಲದೇ ರೇಸಿಂಗ್, ಬೆಟ್ಟಿಂಗ್ ಚಟುವಟಿಕೆ ಮುಂದುವರೆಸಲು ಅನುಮತಿ ನೀಡಿ ಆದೇಶಿಸಿದೆ. https://kannadanewsnow.com/kannada/renukaswamy-murder-case-a1-accused-pavithra-gowdas-health-deteriorates-hospitalised/ https://kannadanewsnow.com/kannada/market-cap-crosses-5-trillion-mark-after-modi-becomes-pm-pm-modi/
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಬಂಧನದಲ್ಲಿರುವಂತ ಎ1 ಆರೋಪಿ ಪವಿತ್ರಾ ಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿರೋದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಪೊಲೀಸರ ಬಂಧನದಲ್ಲಿರುವಂತ ಎ1 ಆರೋಪಿ ಪವಿತ್ರಾ ಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ಚಿಕಿತ್ಸೆಗಾಗಿ ಪೊಲೀಸರು ದಾಖಲಿಸಿದ್ದಾರೆ. https://kannadanewsnow.com/kannada/rs-1-lakh-will-be-distributed-for-kempegowda-jayanti-celebrations-in-all-taluk-headquarters-dk-shivakumar/ https://kannadanewsnow.com/kannada/market-cap-crosses-5-trillion-mark-after-modi-becomes-pm-pm-modi/