Author: kannadanewsnow09

ಶಿವಮೊಗ್ಗ: ಸಿದ್ದರಾಮಯ್ಯನವರ ಸರಕಾರ ಕೊಟ್ಟ ಅನ್ನಭಾಗ್ಯ ಯೋಜನೆಗೆ ಕಾಂಗ್ರೆಸ್ ಸರಕಾರವೇ ಕನ್ನ ಹಾಕುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಅದನ್ನು 5 ಕೆಜಿಗೆ ಇಳಿಸಿದರು. ಈಗ ಅದನ್ನೂ ನಿಲ್ಲಿಸುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯವು ಇವತ್ತು ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ ಎಂದು ಅವರು ವಿಶ್ಲೇಷಿಸಿದರು. ರಾಜ್ಯ ಸರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಣ ಕ್ರೋಡೀಕರಿಸಲು ಸಾಧ್ಯವಾಗುತ್ತಿಲ್ಲ. ಸರಕಾರಿ ನೌಕರರಿಗೆ ಸಂಬಳ ಕೊಡಲು ಕೂಡ ಸರಕಾರ ಪರದಾಡುತ್ತಿದೆ. ಅಭಿವೃದ್ಧಿಗೆ ಹಣ ಸಿಗದೆ ಆಡಳಿತ ಪಕ್ಷದ ಶಾಸಕರೇ ಬೀದಿಗಿಳಿಯುವ ಹಾಗೂ ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿವರಿಸಿದರು. ಒಂದು ಕಡೆ ರಾಜ್ಯ ಸರಕಾರ, ಮುಖ್ಯಮಂತ್ರಿಗಳು, ಅವರ ಸಚಿವ ಸಂಪುಟವು ಕೊಟ್ಟಂಥ ಭರವಸೆ ಈಡೇರಿಸಿದ್ದಾಗಿ ಅವರಿಗೆ ಅವರೇ ಶಹಬ್ಬಾಸ್‍ಗಿರಿ ಕೊಡುತ್ತಿದ್ದಾರೆ. ಆದರೆ, ವಾಸ್ತವಿಕ ಸತ್ಯ ಏನೆಂದರೆ ಇವತ್ತು ಮಹಾನಗರ ಪಾಲಿಕೆ ವಿಚಾರದಲ್ಲಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಇಂದು ರಾಜ್ಯ ಸರ್ಕಾರ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಬೆಂಗಳೂರಿನ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಜೆಹೆರಾ ನಸೀಮ್, ಐಎಎಸ್ (ಕೆಎನ್: 2013) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ, ಕಲಬುರಗಿ ಉಪ ಆಯುಕ್ತರಾಗಿ ಶ್ರೀ ಕೃಷ್ಣ ಬಾಜಪೇಯಿ, ಐಎಎಸ್ ಅವರನ್ನು ವರ್ಗಾವಣೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ವಿಜಯಪುರ ಜಿಲ್ಲೆಯ ಉಪ ಆಯುಕ್ತರಾದ ಭೂಬಾಲನ್ ಟಿ, ಐಎಎಸ್ (ಕೆಎನ್: 2015) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ಇ-ಆಡಳಿತ ಕೇಂದ್ರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಇ-ಆಡಳಿತ ಇಲಾಖೆ ಉಪಾಧ್ಯಕ್ಷರಾಗಿ ಡಾ. ದಿಲೀಶ್ ಶಶಿ, ಐಎಎಸ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಯಾದಗಿರಿ ಜಿಲ್ಲೆಯ ಡಿಸಿ ಡಾ. ಸುಶೀಲಾ ಬಿ, ಐಎಎಸ್ (ಕೆಎನ್: 2015)…

Read More

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯವ್ಯಾಪ್ತಿಯ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ರಾಷ್ಟ್ರೀಯ ಗುಣಮಟ್ಟ ಮಾನದಂಡಗಳನ್ನು ಅನುಷ್ಠಾನಗೊಳಿಸಲು ಹೊಣೆಗಾರಿಕೆ ನಿಗದಿಪಡಿಸಿದೆ. ಈ ಗುಣಮಟ್ಟದ ಮಾನದಂಡ ಸಾಧಿಸದಿದ್ದರೇ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ಈ ಕುರಿತು ಆರೋಗ್ಯ ಇಲಾಖೆಯಿಂದ ಆದೇಶ ಹೊರಡಿಸಿದ್ದು, 2021-2030ರ ದಶಕವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಸೇವೆಗಳ ದಶಕವೆಂದು ಘೋಷಿಸಲಾಗಿದೆ. ಆರೋಗ್ಯ ಸೇವೆಯಲ್ಲಿ ಚಿಕಿತ್ಸೆಯ ಗುಣಮಟ್ಟ ಅಥವಾ ವಿಳಂಬದಿಂದಾಗಿ ಹಾಗೂ ಔಷಧಿ ಸೇವನೆಯ ಕುರಿತು ಸಮಾಲೋಚನೆಯ ಕೊರತೆಯೂ ಇದ್ದು, ಈ ಕಾರಣದಿಂದಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ, 50%ಕ್ಕಿಂತಲೂ ಹೆಚ್ಚಿನ ಅನಾರೋಗ್ಯದ ಗುಣಮಟ್ಟವಿದೆಯೆಂದು ವರದಿಯಾಗಿದೆ. ರೋಗ ಪೀಡಿತರ ಆರೋಗ್ಯ ಸುಧಾರಣೆಗಾಗಿ ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸುವುದು ಇಲಾಖೆಯ ಮೂಲತತ್ವವಾಗಿದೆ. ಸಾರ್ವಜನಿಕರು ಬಳಸುವ ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುವ ಮೂಲಕ ಇಲಾಖೆಯು ರೋಗಗಳನ್ನು ತಡೆಗಟ್ಟಿ, ಗುಣಪಡಿಸಲು ಸಾಧ್ಯವಾಗುತ್ತದೆ. ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಆರೋಗ್ಯ ಸೇವೆಗಳ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಮತ್ತು ಸಾರ್ವಜನಿಕರ ಆರೋಗ್ಯ ಸುಧಾರಣೆಯು ಭಾರತ ಸರ್ಕಾರ ಅಭಿವೃದ್ಧಿಪಡಿಸಿದ NQAS ಮಾನದಂಡವಾಗಿದ್ದು,…

Read More

ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿಧಾಮದಲ್ಲಿ ಹುಲಿಗಳ ಸಂತತಿ ಹೆಚ್ಚಳವಾಗುತ್ತಿದ್ದು, ಈ ಕಾನನ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶವಾಗಿ ಘೋಷಿಸಲು ಸ್ಥಳೀಯರ ಅಭಿಪ್ರಾಯ ಸಂಗ್ರಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಅರಣ್ಯ ಪಡೆ ಮುಖ್ಯಸ್ಥರು, ಮುಖ್ಯ ವನ್ಯಜೀವಿ ಪರಿಪಾಲಕರು ಸೇರಿದಂತೆ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಎಂ.ಎಂ.ಹಿಲ್ಸ್ ಹುಲಿ ಸಂರಕ್ಷಿತ ಪ್ರದೇಶ ಘೋಷಣೆ ಮಾಡಲು ಕ್ರಮ ವಹಿಸುವಂತೆ ಹಾಗೂ ಎಲ್ಲ ಬಾಧ್ಯಸ್ಥರ ಸಭೆ ಕರೆದು ಚರ್ಚಿಸಿ, ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು. ರಾಜ್ಯದಲ್ಲಿ ವನ್ಯಜೀವಿಗಳ ಅಸಹಜ ಸಾವನ್ನು ನಿಯಂತ್ರಿಸಲು ಮತ್ತು ವನ್ಯಮೃಗಗಳ ದಾಳಿಯಿಂದ ಅಮೂಲ್ಯ ಜೀವಹಾನಿ ಆಗುವುದನ್ನು ತಡೆಯಲು ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ, ಆಯಾ ವಲಯದಲ್ಲಿ ಅಧಿಕಾರಿ, ಸಿಬ್ಬಂದಿಗೆ ಹೊಣೆಗಾರಿಕೆ ನಿಗದಿಪಡಿಸುವಂತೆ ನಿರ್ದೇಶನ ನೀಡಿದರು. ಕೇಂದ್ರೀಕೃತ ಕಮಾಂಡ್ ಸೆಂಟರ್: ರಾಜ್ಯದಲ್ಲಿ ಸುಮಾರು 40 ಸಾವಿರ ಚದರ ಕಿಲೋ ಮೀಟರ್ ಅರಣ್ಯ ಪ್ರದೇಶವಿದ್ದು, ಇದನ್ನು ಭೌತಿಕವಾಗಿ…

Read More

ಬೆಂಗಳೂರು: ರಾಜ್ಯ ಸರ್ಕಾರ ಪಡಿತರ ಸಾಗಿಸಿದ್ದಕ್ಕಾಗಿ ಪಾವತಿ ಮಾಡಬೇಕಿದ್ದ ಹಣವನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ಈ ಮೂಲಕ ಪಡಿತರ ಸಾಗಿಸಿದ್ದ ಲಾರಿ ಮುಷ್ಕರದ ಬೆನ್ನಲ್ಲೇ ಈ ಆದೇಶ ಮಾಡಿದೆ. ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಫೆಬ್ರವರಿ, ಮಾರ್ಚ್, ಏಪ್ರಿಲ್ ಹಾಗೂ ಮೇ-2025ರ ಮಾಹೆಗಳಿಗೆ ಹೆಚ್ಚುವರಿ 5 ಕೆ.ಜಿ ಅಕ್ಕಿ ಖರೀದಿಗಾಗಿ ಮತ್ತು ಇತರ ಪ್ರಾಸಂಗಿಕ ಶುಲ್ಕಗಳಾದ ಸಗಟು ಮತ್ತು ಚಿಲ್ಲರೆ ಲಾಭಾಂಶ, ಸಾಗಾಣಿಕೆ ಶುಲ್ಕಗಳಿಗೆ ಉಂಟಾಗುವ ವೆಚ್ಚವನ್ನು ಭರಿಸಲು ರೂ.2082.99 ಕೋಟಿಗಳಅ ನುದಾನವನ್ನು ಬಿಡುಗಡೆ ಮಾಡಲಾಗಿರುತ್ತದೆ ಎಂದಿದೆ. ಮೇಲ್ಕಂಡಂತೆ ಬಿಡುಗಡೆಗೊಳಿಸಿದ ಅನುದಾನದಲ್ಲಿ ರೂ.21.79 ಕೋಟಿಗಳು ಕರ್ನಾಟಕ ಆಹಾರ ನಾಗರೀಕ ಸರಬರಾಜು ನಿಗಮ ನಿಗಮಿತ, ಬೆಂಗಳೂರು ಇವರಲ್ಲಿ ಉಳಿಕೆಯಾಗಿರುತ್ತದೆ. ಹಾಗಾಗಿ ಫೆಬ್ರವರಿ-2025 ರಿಂದ ಮೇ- 20250 ಮಾಹವರೆಗೂ ಸಗಟು/ಚಿಲ್ಲರೆ ಲಾಭಾಂಶ ಸಾಗಾಣಿಕೆ ವೆಚ್ಚಕ್ಕಾಗಿ ಬಿಡುಗಡೆಗೊಳಿಸಲು ಕೊರತೆಯಾಗುತ್ತದೆ ಎಂದು ತಿಳಿಸಿರುತ್ತಾರೆ. ಮುಂದುವರೆದು, ಫೆಬ್ರವರಿ-2025 ರಿಂದ ಮೇ-2025ರ ಮಾಹೆವರೆಗೂ ಸಗಟು/ಚಿಲ್ಲರೆ ಲಾಭಾಂಶ, ಸಾಗಾಣಿಕೆ ವೆಚ್ಚಕ್ಕಾಗಿ ಅನುದಾನವು ಕೊರತೆಯಾಗಿದ್ದು, ಈ ಕೆಳಕಂಡ ಪಟ್ಟಿಯಲ್ಲಿ…

Read More

ಧಾರವಾಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಂದಿನ ನೇಮಕಾತಿ ಸಂದರ್ಭದಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ ‌20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು. ಗ್ರಾಮೀಣ ಗೃಹ ವಿಜ್ಞಾನ ಮಹಾವಿದ್ಯಾಲಯ / ಸಮುದಾಯ ವಿಜ್ಞಾನ ಮಹಾವಿದ್ಯಾಲಯ ಪದವೀಧರರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ನನ್ನ ಇಲಾಖೆಗೆ ಅಗತ್ಯವಾದ ಕೌಶಲಗಳನ್ನು ಇಲ್ಲಿ ಕಲಿಸಲಾಗುತ್ತದೆ. ಇಲ್ಲಿ ಪದವಿ ಪಡೆದವರು ನಮ್ಮ ಇಲಾಖೆಗೆ ಹೆಚ್ಚು ಸೂಕ್ತವಾಗುತ್ತಾರೆ‌. ಈಗಾಗಲೇ ಸಾಕಷ್ಟು ಜನ ಕೆಲಸ ಮಾಡುತ್ತಿದ್ದಾರೆ. ಮುಂದಿನ ನೇಮಕಾತಿ ಸಂದರ್ಭದಲ್ಲಿ ಹೆಚ್ಚು ಆದ್ಯತೆ ನೀಡುವ ಸಂಬಂಧ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸುವೆ, ಜೊತೆಗೆ ಗ್ರಾಮೀಣಾಭಿವೃದ್ಧಿ ಹಾಗೂ ಕೌಶಾಲ್ಯಭಿವೃದ್ದಿ ಸಚಿವರ ಜೊತೆಗೂ ಚರ್ಚೆ ನಡೆಸಿ ಕೂಸಿನ ಮನೆ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಹೆಚ್ಚು ಅವಕಾಶ ಸಿಗುವಂತೆ ನೋಡಿಕೊಳ್ಳುತ್ತೇನೆ ಎಂದು ಹೇಳಿದರು. ಈ ಹಿಂದೆ ಮಹಿಳೆಯರು…

Read More

ಬೆಂಗಳೂರು: ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ದೃಷ್ಟಿಯಿಂದ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ತನ್ನ ಸೇವೆಗಳಲ್ಲಿ ಮಹತ್ವಪೂರ್ಣ ಮುಂದಾಳುವು ಮಾಡಿದ್ದು, ಓಪನ್ ನೆಟ್‌ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ (ಓಎನ್‌ಡಿಸಿ) ಮೂಲಕ ಕ್ಯೂಆರ್ ಟಿಕೆಟ್ ಸೇವೆ ನೀಡಲು ಚಾಲನೆ ನೀಡಿದೆ. ಈ ಹೊಸ ಸೌಲಭ್ಯದಿಂದ, ಪ್ರಯಾಣಿಕರು ಈಗಿನಿಂದ ಈಜ್ ಮೈ ಟ್ರಿಪ್ (EaseMyTrip), ಹೈವೇ ಡಿಲೈಟ್ (Highway Delite), ಮೈಲ್ಸ್ ಅಂಡ್ ಕಿಲೋಮೀಟರ್ಸ್ (Miles & Kilometres via Telegram), ನಮ್ಮ ಯಾತ್ರಿ (Namma Yatri), ವನ್ ಟಿಕೆಟ್ (OneTicket), ರಾಪಿಡೋ (Rapido), ರೆಡ್ಬಸ್ (Redbus), ಟಮ್ಮಾಕ್ (Tummoc) ಮತ್ತು ಯಾತ್ರಿ – ಸಿಟಿ ಟ್ರಾವೆಲ್ ಗೈಡ್ (Yatri – City Travel Guide) ಎನ್ನುವ ಒಂಬತ್ತು ಜನಪ್ರಿಯ ಅಪ್ಲಿಕೇಶನ್‌ಗಳ ಮೂಲಕ ಬಿಎಂಆರ್‌ಸಿಎಲ್ ಕ್ಯೂಆರ್ ಟಿಕೆಟ್‌ಗಳನ್ನು ಖರೀದಿಸಬಹುದಾಗಿದೆ. ಈ ಹೊಸ ಆಯ್ಕೆಗಳು ಈಗಾಗಲೇ ಲಭ್ಯವಿರುವ ಟಿಕೆಟ್ ಬುಕ್ಕಿಂಗ್ ಆಯ್ದ ಮಾರ್ಗಗಳಾದ ನಮ್ಮ ಮೆಟ್ರೋ ಮೊಬೈಲ್ ಆಪ್, ಬಿಎಂಆರ್‌ಸಿಎಲ್ ವಾಟ್ಸಾಪ್ ಚಾಟ್‌ಬಾಟ್…

Read More

ಬೆಂಗಳೂರು: ಇಂದು ಕೆ‌ ಎಸ್ ಆರ್ ಟಿ‌‌ ಸಿಯ ಮೃತ ಕುಟುಂಬಸ್ಥರಿಗೆ ಅನುಕಂಪದ ನೇಮಕಾತಿಯ ಆದೇಶ ಪತ್ರವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ವಿತರಿಸಿದರು. ಸುಮಾರು 10 ವರ್ಷಗಳಿಗೂ ಮೇಲ್ಪಟ್ಟು ಅನುಕಂಪದ ಆಧಾರದ ಮೇಲೆ ನೇಮಕಾತಿ ಕೋರಿ ಅರ್ಜಿ ಸಲ್ಲಿಸಿದ್ದ 14 ಮೃತಾವಲಂಬಿತರುಗಳಿಗೆ ಇಂದು  ದಿನಾಂಕ: 08-07-2025 ರಂದು ಕಚೇರಿ ಸಹಾಯಕ (ಸ್ವಚ್ಚತೆ) ಹುದ್ದೆಗೆ ನೇಮಕಾತಿ ಆದೇಶ ನೀಡಲಾಯಿತು. * ಕಳೆದ 1 ವರ್ಷದಲ್ಲಿ ಒಟ್ಟಾರೆ 212 ಮೃತಾವಲಂಬಿತರುಗಳಿಗೆ ಅನುಕಂಪದ ಆಧಾರದ ನೇಮಕಾತಿ ಮಾಡಲಾಗಿದೆ. * ಕರಾಸಾ ಪೇದೆ (Security Guard) 107 ಕಚೇರಿ ಸಹಾಯಕ (ಸ್ವಚ್ಚತೆ) 46 ತಾಂತ್ರಿಕ ಸಹಾಯಕ 37 ಚಾಲಕ / ನಿರ್ವಾಹಕ / ಚಾಲಕ ಕಂ ನಿರ್ವಾಹಕ 22 ಒಟ್ಟು 212 , ಈ ದಿನ ನೀಡಿರುವ ಆದೇಶ ಸೇರಿ 226 ಅನುಕಂಪದ ನೌಕರಿ • ಕರಾಸಾ ಪೇದೆ (Security Guard) ಹುದ್ದೆಗಳಿಗೆ 50 ಮೃತಾವಲಂಬಿತರುಗಳಿಗೆ ಮುಂದಿನ ಒಂದು ವಾರದಲ್ಲಿ ದೇಹ ದಾರ್ಢ್ಯತೆ…

Read More

ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ವಿರುದ್ಧದ ಮೂಡಾ ಪ್ರಕರಣದಲ್ಲಿ 14 ನಿವೇಶನಗಳನ್ನು ಹಿಂತಿರುಗಿಸುವಂತಾಗಿದ್ದು ಬಿಜೆಪಿಯ ಹೋರಾಟದ ಫಲ. ವಾಲ್ಮೀಕಿ ನಿಗರಮದ ಹಗರಣದಲ್ಲಿ ಸಚಿವರು ರಾಜೀನಾಮೆ ಕೊಡುವಂತಾಗಿದ್ದು ನನ್ನ ಅಧ್ಯಕ್ಷತೆಯಲ್ಲಿ ಬಿಜೆಪಿ ನಡೆಸಿದ ತಾರ್ಕೀಕ ಅಂತ್ಯದ ಹೋರಾಟವೇ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. ಇಂದು ಶಿವಮೊಗ್ಗದಲ್ಲಿ ಶಿವಮೊಗ್ಗ, ಚಿಕ್ಕಮಗಳೂರು ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಪ್ರಮುಖರ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ ಅವರು, ಬಿಜೆಪಿಯ ಕಾರ್ಯಕರ್ತರಿಗೆ ಸ್ಪಷ್ಟವಾದ ಉದ್ದೇಶ, ಗುರಿ ಇದೆ. ಪಕ್ಷದ ಅನೇಕ ಹಿರಿಯರು, ಸಾವಿರಾರು ಕಾರ್ಯಕರ್ತರು ಬದ್ದತೆಯಿಂದ ಪಕ್ಷಕ್ಕಾಗಿ ದುಡಿದಿದ್ದಾರೆ. ಇದರ ಫಲವಾಗಿ ದೇಶದಲ್ಲಿ ಮತ್ತು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿದು ಜನರ ಸೇವೆಯನ್ನು ಮಾಡುತ್ತಿದೆ. ಆದರೆ ಕಾಂಗ್ರೇಸ್ ಪಕ್ಷ ಅನುಕಂಪ ಮತ್ತು ಇತರೆ ಕಾರಣಗಳಿಂದ 67 ವರ್ಷ ದೇಶವನ್ನು ಆಳಿದೆ. ಇತರೆ ರಾಷ್ಟ್ರೀಯ ಪಕ್ಷಕ್ಕೂ ಬಿಜೆಪಿಗೂ ಇರುವ ವ್ಯತ್ಯಾಸವೆಂದರೆ ಬಿಜೆಪಿ ಕಾರ್ಯಕರ್ತರಿಗೆ ರಾಷ್ಟ್ರೀಯತೆ ಮತ್ತು ರಾಷ್ಡ್ರೀಯ ವಿಷಯದ ಬಗ್ಗೆ ಬದ್ಧತೆಯಿದೆ ಇತರೆ ಪಕ್ಷಗಳಿಗೆ ಅಂತಹ ಯಾವ ಬದ್ದತೆ,…

Read More

ಬೆಂಗಳೂರು: ರಾಜ್ಯ ಸರ್ಕಾರವು ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ಕ್ಕೆ ಕಾನೂನು ಬಲ ನೀಡಲು ಮುಂದಾಗಿದೆ. ಒಂದು ವೇಳೆ ಬಾಲ್ಯ ವಿವಾಹ ನಿಷೇಧ ( ಕರ್ನಾಟಕ ತಿದ್ದುಪಡಿ) ಮಸೂದೆ-2025ಕ್ಕೆ ವಿಧಾನ ಮಂಡಲದಲ್ಲಿ ಮಂಡನೆಗೊಂಡು, ಒಪ್ಪಿಗೆ ಪಡೆದ್ರ, ಬಾಲಕ-ಬಾಲಕಿಯರ ನಿಶ್ಚಿತಾರ್ಥವೂ ಅಪರಾಧವಾಗಲಿದೆ. ಹೌದು ಬಾಲ್ಯ ವಿವಾಹಗಳನ್ನು ಮಾಡಲು ಯತ್ನಿಸುವುದು, ಸಿದ್ಧತೆ ನಡೆಸುವ ಅಥವಾ ಚಿಕ್ಕ ವಯಸ್ಸಿನ ಬಾಲಕ-ಬಾಲಕಿಯರನ್ನು ಮದುವೆ ಉದ್ದೇಶದಿಂದ ನಿಶ್ಚಿತಾರ್ಥ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು, ಸರ್ಕಾರ ಬಾಲ್ಯ ವಿವಾಹ ನಿಷೇಧ ( ಕರ್ನಾಟಕ ತಿದ್ದುಪಡಿ) ಮಸೂದೆ-2025 ಅನ್ನು ಮುಂಬರುವಂತ ವಿಧಾನ ಮಂಡಲದ ಅಧಿವೇಶನದಲ್ಲಿ ಮಂಡಿಸಲು ಮುಂದಾಗಿದೆ. ಈ ಮಸೂದೆಗೆ ಉಭಯ ಸದನಗಳಲ್ಲಿ ಒಪ್ಪಿಗೆ ದೊರೆತರೇ ನಿಶ್ಚಿತಾರ್ಥವೂ ಅಪರಾಧವಾಗಲಿದೆ. ಅಂದಹಾಗೇ ಬಾಲ್ಯ ವಿವಾಹ ನಿಷೇಧ ( ಕರ್ನಾಟಕ ತಿದ್ದುಪಡಿ) ಮಸೂದೆ-2025ರ ಅನುಸಾರ ಬಾಲ್ಯ ವಿವಾಹ ಮಾಡೋದಕ್ಕೆ ಯತ್ನಿಸೋದು ಅಪರಾಧ. ಅಲ್ಲದೇ ಸಿದ್ಧತೆ ಅಥವಾ ಚಿಕ್ಕ ವಯಸ್ಸಿನ ಹುಡುಗ-ಹುಡುಗಿಗೆ ನಿಶ್ಚಿತಾರ್ಥ ಮಾಡುವವರ ವಿರುದ್ಧ 2 ವರ್ಷಗಳವರೆಗೆ ವಿಸ್ತರಿಸಬಹುದಾದಂತ ಕಠಿಣ ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ.…

Read More