Author: kannadanewsnow09

ನವದೆಹಲಿ: ಆಪಲ್ ಅಂತಿಮವಾಗಿ ಬಹುನಿರೀಕ್ಷಿತ ಐಒಎಸ್ 18.1 ಅನ್ನು ಹೊರತಂದಿದ್ದು, ಬಳಕೆದಾರರ ಅನುಭವವನ್ನು ಹೆಚ್ಚಿಸಲು ವಿನ್ಯಾಸಗೊಳಿಸಲಾದ ಆಕರ್ಷಕ ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸಿದೆ. ಹೆಚ್ಚು ನಿರೀಕ್ಷಿತವೆಂದರೆ ಆಪಲ್ ಇಂಟೆಲಿಜೆನ್ಸ್ ( Apple Intelligence ), ಜೊತೆಗೆ ಈಗ ಐಫೋನ್ಗಳಲ್ಲಿ ಲಭ್ಯವಿರುವ ಮತ್ತೊಂದು ಹೆಚ್ಚು ವಿನಂತಿಸಿದ ವೈಶಿಷ್ಟ್ಯವೆಂದರೆ ಕರೆ ರೆಕಾರ್ಡಿಂಗ್. ಈ ಇತ್ತೀಚಿನ ನವೀಕರಣದೊಂದಿಗೆ, ಐಫೋನ್ ಬಳಕೆದಾರರು ಈಗ ಫೋನ್ ಕರೆಗಳನ್ನು ಸುಲಭವಾಗಿ ರೆಕಾರ್ಡ್ ಮಾಡಬಹುದು. ಈ ರೆಕಾರ್ಡ್ ಮಾಡಿದ ಕರೆಗಳ ನೈಜ-ಸಮಯದ ಪ್ರತಿಲೇಖನವನ್ನು ಒದಗಿಸುವ ಆಪಲ್ ಇಂಟೆಲಿಜೆನ್ಸ್ ವೈಶಿಷ್ಟ್ಯಗಳಿಂದ ಪ್ರಯೋಜನ ಪಡೆಯಬಹುದು. ನಿಮ್ಮ ಐಫೋನ್ ನಲ್ಲಿ ( iPhone ) ಕರೆಗಳನ್ನು ರೆಕಾರ್ಡ್ ಮಾಡಲು, ಮೊದಲು ನಿಮ್ಮ ಸಾಧನದಲ್ಲಿ ಸೆಟ್ಟಿಂಗ್ ಗಳು > ಸಾಫ್ಟ್ ವೇರ್ ನವೀಕರಣದಿಂದ ಇತ್ತೀಚಿನ ಐಒಎಸ್ 18.1 ನವೀಕರಣವನ್ನು ಡೌನ್ ಲೋಡ್ ಮಾಡಿ. ನಿಮ್ಮ ಐಫೋನ್ ಅನ್ನು ನವೀಕರಿಸಿದ ನಂತರ, ಈ ಹಂತಗಳನ್ನು ಅನುಸರಿಸಿ: ಕರೆಯನ್ನು ಪ್ರಾರಂಭಿಸಿ ಅಥವಾ ಒಳಬರುವ ಕರೆಗೆ ಉತ್ತರಿಸಿ. ಒಮ್ಮೆ ನೀವು ಸಕ್ರಿಯ ಕರೆಯಲ್ಲಿದ್ದಾಗ,…

Read More

ಬೆಂಗಳೂರು: ನವೆಂಬರ್.1ರಂದು ಕೊಡ ಮಾಡುವಂತ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರದಿಂದ ಇಂದು ಸಂಜೆ 4 ಗಂಟೆಗೆ ಪ್ರಕಟಿಸಲಿದೆ. ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಹಿತಿ ಹಂಚಿಕೊಳ್ಳಲಾಗಿದ್ದು,  ಕನ್ನಡ ಮತ್ತು ಸಂಸ್ಕೃತಿ ‌ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವರಾದ ಶಿವರಾಜ್ ಎಸ್.ತಂಗಡಗಿ ಅವರು ಇಂದು ಮಧ್ಯಾಹ್ನ 4.00 ಗಂಟೆಗೆ ವಿಕಾಸಸೌಧದ, ಒಂದನೇ ಮಹಡಿ, ಕೊಠಡಿ ಸಂಖ್ಯೆ: 123ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸುವರ್ಣ ಸಮಾರಂಭ ಪ್ರಶಸ್ತಿ ಪಟ್ಟಿ ಪ್ರಕಟಿಸುವ ಸಂಬಂಧ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದಿದ್ದಾರೆ. ಇಂದು ಸಂಜೆ 4 ಗಂಟೆಗೆ ಸಚಿವ ಶಿವರಾಜ್ ಎಸ್ ತಂಡರಗಿ ಅವರು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಲಿದ್ದು, ಆ ಬಳಿಕ ನವೆಂಬರ್.1ರಂದು ನಡೆಯುವಂತ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ನೀಡಿ, ಸನ್ಮಾನಿಸಿ, ಗೌರವಿಸಲಾಗುತ್ತದೆ. https://kannadanewsnow.com/kannada/breaking-actor-darshan-to-be-released-to-ballari-jail-likely-to-be-released-this-evening/ https://kannadanewsnow.com/kannada/good-news-for-ksrtc-passengers-cm-siddaramaiah-launches-airavata-club-class-2-0-buses/

Read More

ಬೆಂಗಳೂರು : ಮುಂದಿನ ಮಾರ್ಚ್ ವರೆಗೆ ಪ್ರತಿ ತಿಂಗಳು ರೂ. 2400 ಕೋಟಿ ರಾಜಸ್ವ ಸಂಗ್ರಹ ಗುರಿ ಸಾಧಿಸಲೇಬೇಕು ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಅವರ ಅಧ್ಯಕ್ಷತೆಯಲ್ಲಿ ನಡೆದ ನೋಂದಣಿ ಮತ್ತು ಮುದ್ರಾಂಕ ಇಲಾಖೆ 2024-25ರ ಸಾಲಿನ ರಾಜಸ್ವ ಸಂಗ್ರಹಣೆ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದರು. ನೋಂದಣಿ ಮತ್ತು ಮುದ್ರಾಂಕ ಇಲಾಖೆಯು 2024-25ರ ಸಾಲಿನಲ್ಲಿ ರೂ. 26000 ಕೋಟಿ ರಾಜಸ್ವ ಸಂಗ್ರಹ ಗುರಿ ಹೊಂದಿದ್ದು, ಅಕ್ಟೋಬರ್ ತಿಂಗಳ ಅಂತ್ಯದವರೆಗೆ ರೂ. 13,724 ಕೋಟಿ ಸಂಗ್ರಹ ಆಗಿದೆ. ಮುoದಿನ ಮಾರ್ಚ್ ವರೆಗೆ ಪ್ರತಿ ತಿಂಗಳು ರೂ. 2400 ಕೋಟಿ ರಾಜಸ್ವ ಸಂಗ್ರಹ ಗುರಿಯನ್ನು ಸಾಧಿಸಬೇಕು. ನೋoದಣಿಯೇತರ ದಾಸ್ತಾವೇಜುಗಳಿಗೆ ಸರಿಯಾದ ಮುದ್ರಾoಕ ಶುಲ್ಕವನ್ನು ಪಾವತಿಸಿಕೊoಡು ಹೆಚ್ಚಿನ ರಾಜಸ್ವ ಸoಗ್ರಹಿಸಬೇಕು ಎನ್ನುವ ಸೂಚನೆ ನೀಡಿದರು. ಸಾರಿಗೆ ಇಲಾಖೆ ರಾಜಸ್ವ ಪರಿಶೀಲನಾ ಸಭೆಯ ಮುಖ್ಯಾಂಶಗಳು 2024-25ನೇ ಸಾಲಿನಲ್ಲಿ ವಾರ್ಷಿಕ ರಾಜಸ್ವ ಸoಗ್ರಹ ಗುರಿ ರೂ. 13000 ಕೋಟಿ ಆಗಿದ್ದು,…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಕಾರ್ಗಲ್ ಪೊಲೀಸ್ ಠಾಣೆಯ ಪಿಎಸ್ಐ ಹೊಳೆಬಸಪ್ಪ ಅವರು ವೈರಲ್ ಸುದ್ದಿಯ ಬಗ್ಗೆ ಪತ್ರಕರ್ತರು ಕೇಳಿದಂತ ಪ್ರಶ್ನೆಗೆ ಸರಿಯಾಗಿ ಉತ್ತರಿಸದೇ ದರ್ಪ ತೋರಿದ್ದಾರೆ.  ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೆವ್ವ ಅಡ್ಡಬಂದು, ಬೈಕ್ ಸವಾರರಿಬ್ಬರು ತೀವ್ರವಾಗಿ ಅಪಘಾತಗೊಂಡು, ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬುದಾಗಿ ಸುದ್ದಿಯೊಂದು ವೈರಲ್ ಆಗಿತ್ತು. ಈ ಬಗ್ಗೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರಿಗೆ ಸ್ಪಷ್ಟನೆ ಕೂಡ ನೀಡಲಾಗಿತ್ತು. ಹೀಗಿತ್ತು ಕಾರ್ಗಲ್ ಪೊಲೀಸ್ ಠಾಣೆಯ ಪತ್ರಿಕಾ ಪ್ರಕಟಣೆ ದಿನಾಂಕ:-27-10-2024 ರಂದು ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಂಚಿಕೈ ರಸ್ತೆಯಲ್ಲಿ 2 ಜನ ಬೈಕ್ ಸವಾರರಿಗೆ ದೆವ್ವ ಎದುರಾಗಿ ಒಬ್ಬರು ತುಂಬಾ ಸೀರಿಯಸ್ ಆಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಹಾಗೂ ಇನ್ನೊಬ್ಬರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿರುತ್ತಾರೆ ಎಂದು ಯಾರೋ ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸಿ ಫೋಟೋ ಹಾಗೂ ವೀಡಿಯೋ ಹರಿಬಿಟ್ಟಿದ್ದು, ಇದು ಸುಳ್ಳು ಸುದ್ದಿಯಾಗಿದ್ದು ಈ ತರಹದ ಯಾವುದೇ ಪ್ರಕರಣ ಬೆಳಕಿಗೆ…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಕಾರ್ಗಲ್ ನಲ್ಲಿ ಬೈಕ್ ಸವಾರರಿಗೆ ದೆವ್ವವೊಂದು ಎದುರಾಗಿದೆ. ಈ ಕಾರಣಕ್ಕೆ ಬೈಕ್ ಸವಾರರು ಅಪಘಾತಕ್ಕೆ ಒಳಗಾಗಿ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ಸುದ್ದಿಯೊಂದು ವೈರಲ್ ಆಗಿತ್ತು. ಅದರ ವಾಸ್ತವ ಸತ್ಯಾಂಶ ಏನು ಎನ್ನುವ ಬಗ್ಗೆ ಅಸಲಿ ಸತ್ಯ ಮುಂದಿದೆ ಓದಿ. ಈ ಸಂಬಂಧ ಸಾಗರ ತಾಲ್ಲೂಕು ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ:-27-10-2024 ರಂದು ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಂಚಿಕೈ ರಸ್ತೆಯಲ್ಲಿ 2 ಜನ ಬೈಕ್ ಸವಾರರಿಗೆ ದೆವ್ವ ಎದುರಾಗಿ ಒಬ್ಬರು ತುಂಬಾ ಸೀರಿಯಸ್ ಆಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಹಾಗೂ ಇನ್ನೊಬ್ಬರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿರುತ್ತಾರೆ ಎಂದು ಯಾರೋ ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸಿ ಫೋಟೋ ಹಾಗೂ ವೀಡಿಯೋ ಹರಿಬಿಟ್ಟಿದ್ದಾರೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಇದು ಸುಳ್ಳು ಸುದ್ದಿಯಾಗಿದ್ದು ಈ ತರಹದ ಯಾವುದೇ ಪ್ರಕರಣ ವರದಿಯಾಗಿರುವುದಿಲ್ಲ. ಹಾಗೂ ಸಾರ್ವಜನಿಕರು ಆತಂಕ…

Read More

ಬೆಂಗಳೂರು: ನಿಂದನಾತ್ಮಕ ಭಾಷೆ ಬಳಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಕಾಂಗ್ರೆಸ್ ನಾಯಕರ ಕುರಿತು ವಾಟ್ಸ್ ಆಪ್ ನಲ್ಲಿ ಅವಹೇಳನಕಾರಿ ಶಬ್ದಗಳನ್ನು ಬಳಸಿ ಪೋಸ್ಟ್ ಮಾಡಲಾಗಿತ್ತು. ಹೀಗೆ ಅವಹೇಳನಕಾರಿ ಶಬ್ದಗಳನ್ನು ಬಳಸಿ ನಿಂದಿಸಿದಂತವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇಂದು ಈ ಬಗ್ಗೆ ಕೆಪಿಸಿಸಿಯ ಸಂಯೋಜಕರಾದಂತ ಡಿ.ವಿ ಸತೀಶ್ ಹಾಗೂ ಮಾಜಿ ಸಚಿವ ಹೆಚ್.ಆಂಜನೇಯ ಅವರು ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಈ ದೂರು ಆಧರಿಸಿ ಓರ್ವ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ದೂರಿನಲ್ಲಿ ಏನಿದೆ.? ನಾನು ಕೆಪಿಸಿಸಿ ಸಂಯೋಜಕರಾಗಿ ನೇಮಕವಾಗಿದ್ದು, ನಾನು ಹೆಚ್. ಆಂಜನೇಯ ಮಾಜಿ ಸಚಿವರು, ಕರ್ನಾಟಕ ಸರ್ಕಾರ ಉಪಾಧ್ಯಕ್ಷರು ಕೆಪಿಸಿಸಿ ರವರು ನೀಡಿದ ಅನುಮತಿ ಪತ್ರದ ಮೇರೆಗೆ ಈ ದಿನ ನಾನು ಠಾಣೆಗೆ ಹಾಜರಾಗಿ ದೂರನ್ನು ಕೊಟ್ಟಿರುತ್ತೇನೆ, ಸದರಿ ದೂರಿನ ವಿಷಯವೆನೆಂದರೆ, ಒಳ ಮೀಸಲಾತಿ ಹೋರಾಟ ಸಮಿತಿ ವಿಜಯನಗರ ಜಿಲ್ಲೆ ಎಂಬ ಹೆಸರಿನಲ್ಲಿರುವ ವ್ಯಾಟ್ಸಾಪ್ ಗ್ರೂಪಿನಲ್ಲಿ ಒಳ ಮೀಸಲಾತಿಯ ಕುರಿತು ರಾಜ್ಯ ಸರ್ಕಾರದ ಸಂಪುಟದಲ್ಲಿ…

Read More

ಬೆಂಗಳೂರು: ನಿನ್ನೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದಲ್ಲಿ ಒಳ ಮೀಸಲಾತಿ ಕಲ್ಪಿಸೋ ಸಂಬಂಧ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಯಿತು. ನಿನ್ನೆ ಒಳ ಮೀಸಲಾತಿ ನೀಡುವ ಕುರಿತು ಸಚಿವ ಸಂಪುಟದ ತೀರ್ಮಾನ ಏನು ಎನ್ನುವ ಸಂಪೂರ್ಣ ಮಾಹಿತಿ ಮುಂದಿದೆ ಓದಿ. ಕಳೆದ 30 ವರ್ಷಗಳಿಂದ ನಿರಂತರವಾಗಿ ಒಳಮೀಸಲಾತಿ ಜಾರಿಗಾಗಿ ಹೋರಾಟ ನಡೆಯುತ್ತಿತ್ತು. ಅದಕ್ಕೆ ಅಂತ್ಯ ಹಾಡುವಂತೆ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರವು ದಿನಾಂಕ 28-10-2024 ರಂದು ಸ್ಪಷ್ಟವಾದ ಹಾಗೂ ಮುತ್ಸದ್ಧಿತನದ ತೀರ್ಮಾನವನ್ನು ತೆಗೆದುಕೊಂಡಿದೆ. 2. ಇತ್ತೀಚೆಗೆ ಸುಪ್ರೀಂಕೋರ್ಟಿನಲ್ಲಿ ಒಳಮೀಸಲಾತಿಯನ್ನು ಕೊಡುವುದು ಸಂವಿಧಾನ ಬದ್ಧವಾದ ಸಂಗತಿ ಎಂದು ತೀರ್ಮಾನವಾದ ನಂತರ ಒಳಮೀಸಲಾತಿ ಪರವಾದ ಹೋರಾಟಗಾರರು, ಹಲವು ಸಚಿವರು, ಶಾಸಕರು ಹಲವಾರು ಬಾರಿ ಮನವಿ ಸಲ್ಲಿಸಿ ಒತ್ತಡ ಸೃಷ್ಟಿಸಿದ್ದರು. ಇದೇ ಸಂದರ್ಭದಲ್ಲಿ ಹಲವು ಸಭೆಗಳೂ ಸಹ ನಡೆದಿದ್ದವು. 3. ಸುಪ್ರೀಂಕೋರ್ಟು ದಿನಾಂಕ:01-08-2024 ರಂದು ಭಾರತ ಸಂವಿಧಾನದ ಅನುಚ್ಛೇದ 15(4) ಮತ್ತು 16(4) ಗಳಂತೆ ಶಿಕ್ಷಣ ಮತ್ತು ರಾಜ್ಯ ಸರ್ಕಾರದ ಅಧೀನದ ಸೇವೆಗಳಲ್ಲಿ…

Read More

ಬೆಂಗಳೂರು: ಸುಪ್ರೀಂ ಕೋರ್ಟ್‌ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದಂತೆ ರಾತ್ರಿ 8 ರಿಂದ 10 ಗಂಟೆಯವರೆಗೆ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಅವಕಾಶ ನೀಡಲಾಗಿದೆ. ಉಳಿದ ಸಮಯದಲ್ಲಿ ಪಟಾಕಿ ಸಿಡಿಸುವುದು ಸಂಪೂರ್ಣ ನಿಷೇಧಿಸಲಾಗಿದೆ. https://twitter.com/KarnatakaVarthe/status/1851244290263171181 ಇದಲ್ಲದೆ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಮೇಲ್ಕಾಣಿಸಿದ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು, ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಧಿಸಿರುತ್ತದೆ. ಅಲ್ಲದೇ, ‘ಹಸಿರು ಪಟಾಕಿ’ ಕುರಿತು ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿಯ ವೆಬ್‌ಸೈಟ್‌ನಲ್ಲಿ ಮಾಹಿತಿ ಲಭ್ಯವಿರುತ್ತದೆ. ಮುಂದುವರೆದು, 2024 ನೇ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ ಸಾರ್ವಜನಿಕರು ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಹಾಗೂ ಹಸಿರು ಪಟಾಕಿಗಳನ್ನಲ್ಲದೆ, ಬೇರೆ ನಿಷೇಧಿತ ಪಟಾಕಿಗಳ ಮಾರಾಟ, ದಾಸ್ತಾನು ಮಾಡುವವರ ವಿರುದ್ಧ ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಂಡು ಸಂಬಂಧಿತ…

Read More

ಬೆಂಗಳೂರು: ಅಕ್ಟೋಬರ್‌ 31 ರಿಂದ ನವೆಂಬರ್‌ 2ರ ವರೆಗೆ ಪಟಾಕಿ ಸಿಡಿಸಲು ಮಾತ್ರ ಅವಕಾಶ ನೀಡಲಾಗಿದೆ. ರಾತ್ರಿ 10ರ ನಂತರ ಹಾಗೂ ಹಗಲು ಹೊತ್ತಿನಲ್ಲಿ ಪಟಾಕಿ ಸಿಡಿಸುವಂತಿಲ್ಲ. ಸುಪ್ರೀಂ ಕೋರ್ಟ್‌ ಅನುಮತಿ ನೀಡಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ. https://twitter.com/KarnatakaVarthe/status/1851258959048609910 ಮಾನ್ಯ ಸರ್ವೋಚ್ಛ ನ್ಯಾಯಾಲಯವು ಪಟಾಕಿಗಳಿಗೆ ಸಂಬಂಧಿಸಿದಂತೆ ಹಲವಾರು ನಿರ್ದೇಶನಗಳನ್ನು ನೀಡಿರುತ್ತದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದನ್ವಯ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ರಾತ್ರಿ 8.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ದಿನಾಂಕ: 31/10/2024 ರಿಂದ 02/11/2024ರವೆಗೆ ಸ್ಫೋಟಿಸಲು ಅವಕಾಶ ನೀಡಿದೆ. ಉಳಿದ ಸಮಯದಲ್ಲಿ ಪಟಾಕಿಗಳ ಸ್ಪೋಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಇದಲ್ಲದೆ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಮೇಲ್ಕಾಣಿಸಿದ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು, ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ…

Read More

ಬೆಂಗಳೂರು: ಪ್ರತಿಯೊಂದು ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೂ ಚಟುವಟಿಕೆ ಸಲುವಾಗಿ ₹1 ಕೋಟಿವರೆಗೂ ಅನುದಾನ ಒದಗಿಸಲಾಗುತ್ತಿದೆ. ಕಾರ್ಯಕ್ರಮದ ಕುರಿತು ಪ್ರಸ್ತಾವ ಸಲ್ಲಿಸಿದರೆ, ಅದಕ್ಕೆ ಅಗತ್ಯ ಅನುದಾನ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್‌ ಎಸ್‌. ತಂಗಡಗಿ ತಿಳಿಸಿದ್ದಾರೆ. ಕರ್ನಾಟಕದಲ್ಲಿ ವ್ಯಾಪಾರ, ವ್ಯವಹಾರ ಮಾಡುತ್ತಿದ್ದೀರಿ ಎಂದರೆ ಶೇ.60 ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಸ್ಪಷ್ಟವಾಗಿ ತಿಳಿಸಿರುವ ನ್ಯಾಯಾಲಯದ ಅಭಿಪ್ರಾಯ ಐತಿಹಾಸಿಕವಾದದ್ದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರು ಬಣ್ಣಿಸಿದರು. ಶೇ. 60ರಷ್ಟು ಕನ್ನಡ ಬಳಕೆ ಮಾಡಬೇಕೆಂಬ ಪ್ರಶ್ನಿಸಿ ಕೆಲ ವಾಣಿಜ್ಯ ಸಂಸ್ಥೆಗಳು ಕೋರ್ಟ್ ಮೆಟ್ಟಿಲೇರಿದ್ದವು. ಆದರೆ ನ್ಯಾಯಾಲಯ ನೀವು ಕರ್ನಾಟಕದಲ್ಲಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲಿ ಪ್ರದರ್ಶಿಸಬೇಕು ಎಂದು ಹೇಳಿರುವುದು ನಿಜಕ್ಕೂ ಶ್ಲಾಘನೀಯ. ಕನ್ನಡ ಭಾಷೆ ನೆಲ ಜಲ, ಸಂಸ್ಕೃತಿ, ಆಚಾರ – ವಿಚಾರ, ಸಂರಕ್ಷಣೆಯ ವಿಚಾರದಲ್ಲಿ ಸರ್ಕಾರ ವಿಶೇಷ ಕಾಳಜಿ ಹೊಂದಿದೆ ಎಂದು ತಿಳಿಸಿದರು. https://twitter.com/KarnatakaVarthe/status/1851245987043668440 https://kannadanewsnow.com/kannada/manjunath-bhandari-the-government-should-take-strict-action-against-those-who-disturb-peace-and-spread-hatred-in-the-society/ https://kannadanewsnow.com/kannada/50-achievers-to-be-honoured-with-golden-jubilee-awards-on-kannada-rajyotsava-day-minister-shivaraj-tandaragi/

Read More