Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ಬಳಿಯಲ್ಲಿ ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ಪ್ರಯಾಣಿಸುತ್ತಿದ್ದಂತ ಕಾರು ಅಪಘಾತವಾಗಿದೆ. ಈ ಅಪಘಾತದಲ್ಲಿ ಅವರು ಗಾಯಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿ ಪ್ರಯಾಣಿಸುತ್ತಿದ್ದಂತ ಕಾರು ಅಪಘಾತವಾಗಿದೆ. ಈ ಅಪಘಾತದಲ್ಲಿ ಉಪ ಸಭಾಪತಿ ರುದ್ರಪ್ಪ ಲಮಾಣಿ ಗಾಯಗೊಂಡಿದ್ದಾರೆ. ಅವರಿಗೆ ಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಎಸ್ ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಚಿಕಿತ್ಸೆಯ ಬಳಿಕ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ವರದಿ: ವಸಂತ ಬಿ ಈಶ್ವರಗೆರೆ https://kannadanewsnow.com/kannada/gujarat-one-woman-killed-three-injured-in-drunken-driving-accident/ https://kannadanewsnow.com/kannada/kiocl-to-get-permission-if-rules-are-complied-with-minister-ishwar-khandre/
ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕೆ.ಐ.ಎ.ಸಿ.ಎಲ್) ನಿಬಂಧನೆಗಳನ್ನು ಸಂಪೂರ್ಣವಾಗಿ ಅನುಪಾಲನೆ ಮಾಡಿದಲ್ಲಿ ಸಂಡೂರು, ದೇವದರಿಯಲ್ಲಿ ಗಣಿಗಾರಿಕೆಗೆ ಅನುಮತಿ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಧಾನಸಭೆಯಲ್ಲಿಂದು ನಿಯಮ 73ರಡಿ ಡಾ. ಭರತ್ ಶೆಟ್ಟಿ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, 2022ರ ಡಿಸೆಂಬರ್ 16ರಂದು ಉಪಯೋಗಿ ಸಂಸ್ಥೆ ಉನ್ನತಾಧಿಕಾರ ಸಮಿತಿಯ ಶಿಫಾರಸು ಮತ್ತು ಸೂಚನೆಗಳನ್ನು ಪಾಲನೆ ಮಾಡಬೇಕು ಎಂಬ ಷರತ್ತುಗೊಳಪಟ್ಟು ದೇವದರಿಯಲ್ಲಿ ಗಣಿಗಾರಿಕೆ ನಡೆಸಲು ಅನುಮೋದನೆ ನೀಡಲಾಗಿದೆ. ಈ ಹಿಂದೆ ಕೆಐಓಸಿಎಲ್ ರಾಜ್ಯದಲ್ಲಿ ಗಣಿಗಾರಿಕೆ ನಡೆಸುವಾಗ ಹಲವು ನಿಯಮಗಳ ಉಲ್ಲಂಘನೆ ಮಾಡಿದ್ದು, ನೋಟಿಸ್ ನೀಡಲಾಗಿದೆ. ಲಕ್ಯಾ ಅಣೆಕಟ್ಟೆ ಎತ್ತರಿಸಿ 340 ಹೆಕ್ಟೇರ್ ಅರಣ್ಯಕ್ಕೆ ಹಾನಿ ಮಾಡಿದ್ದಾರೆ. ಕುದುರೆಮುಖ ರಾಷ್ಟ್ರೀಯ ಉದ್ಯಾನದೊಳಗೆ ಕೊಳವೆ ಮಾರ್ಗ ಅಳವಡಿಸುವುದೂ ಸೇರಿ 465.73ಹೆಕ್ಟೇರ್ ಪ್ರದೇಶದಲ್ಲಿ ಅನುಮತಿ ಇಲ್ಲದೆ ಅರಣ್ಯೇತರ ಉದ್ದೇಶಕ್ಕೆ ಬಳಕೆ ಮಾಡಿದ್ದಾರೆ. ಈ ಪರಿಸರ ಹಾನಿಗೆ 142 ಕೋಟಿ ರೂ. ಕಟ್ಟಬೇಕಿದೆ. ಇದರ…
ಬೆಂಗಳೂರು: ನಟಿ ರನ್ಯಾ ರಾವ್ ಅಕ್ರಮ ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಆರ್ಥಿಕ ಅಪರಾಧಗಳ ನ್ಯಾಯಾಲಯವು ವಜಾಗೊಳಿಸಿದೆ. ಈ ಬೆನ್ನಲ್ಲೇ ರನ್ಯಾ ರಾವ್ ಪ್ರಕರಣದಲ್ಲೂ ಇಬ್ಬರು ಸಚಿವರ ಸೆಟಲ್ಮೆಂಟ್ ಆಗಿದೆ ಅಂತ ಶಾಸಕ ಮುನಿರತ್ನ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಸಿಪಿ ಯೋಗೇಶ್ವರ್ ಅವರದ್ದು ಬೆಂಗಳೂರು ಗ್ರಾಮಾಂತರ ಚುನಾವಣೆಯಲ್ಲಿ ಸೆಟಲ್ ಮೆಂಟ್ ಆಯ್ತು. ಅದೇ ರೀತಿಯಲ್ಲಿ ನನ್ನ ಪ್ರಕರಣದಲ್ಲೂ ಸೆಟಲ್ ಮೆಂಟ್ ಆಯ್ತು. ಮಾಜಿ ಸಚಿವ ರಮೇಶ್ ಜಾರಕಿಹೊಳಿ, ರೇವಣ್ಣ ಅವರದ್ದು ಆಗೋಯ್ತು. ಈಗ ಇನ್ನಿಬ್ಬರ ಸಚಿವರ ಸೆಟಲ್ ಮೆಂಟ್ ಆಗೋದು ಮಾತ್ರ ಬಾಕಿ ಇದೆ. ಅದು ಕೂಡ ಸದ್ಯದಲ್ಲೇ ಗೊತ್ತಾಗಲಿದೆ ಅಂತ ಹೇಳಿದರು. ಯಾವ ರೀತಿ ಸೆಟಲ್ ಮೆಂಟ್ ಆಗಲಿದೆ ಎಂಬುದು ಗೊತ್ತಿಲ್ಲ. ಅದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ಅಲ್ಲಿಯವರೆಗೆ ಕಾದು ನೋಡಬೇಕು. ನನಗೂ ಸೆಟಲ್ ಮೆಂಟ್ ಆದ ಮೇಲೆಯೇ ಅನುಭವ ಆಗಿದ್ದು. ಈಗ ರನ್ಯಾ ರಾವ್ ಕೇಸಲ್ಲೂ ಸೆಟಲ್ ಮೆಂಟ್…
ಬೆಂಗಳೂರು: ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ನೋಂದಾಯಿತ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯವನ್ನು ಕಾರ್ಮಿಕ ಇಲಾಖೆಯಿಂದ ನೀಡಲಾಗುತ್ತಿದೆ. ಈ ಪಿಂಚಣಿ ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆ ಹೇಗೆ.? ದಾಖಲೆಗಳು ಏನು ಅಂತ ಮುಂದೆ ಓದಿ. 60 ವರ್ಷ ಮೇಲ್ಪಟ್ಟ ನೋಂದಾಯಿತ ಕಾರ್ಮಿಕರಿಗೆ ಮಂಡಳಿಯು ಮಾಸಿಕ ಪಿಂಚಣಿ ಸೌಲಭ್ಯವನ್ನು ನೀಡುತ್ತದೆ. ಈ ಸೌಲಭ್ಯವನ್ನು ಪಡೆಯಲು ಫಲಾನುಭವಿಯು 60 ವರ್ಷ ಪೂರ್ಣಗೊಳ್ಳುವ ಮೊದಲು ಕನಿಷ್ಠ 3 ವರ್ಷ ನಿರಂತರವಾಗಿ ಮಂಡಳಿಯ ಸದಸ್ಯತ್ವವನ್ನು ನವೀಕರಿಸಿ ಫಲಾನುಭವಿಯಾಗಿ ಮುಂದುವರೆದಿರಬೇಕು. ಅರ್ಜಿಸಲ್ಲಿಸಲು ಈ ದಾಖಲೆಗಳು ಕಡ್ಡಾಯ ಮಂಡಳಿಯಿಂದ ನೀಡಿರುವ ಗುರುತಿನ ಚೀಟಿ ಫಲಾನುಭವಿಯ ಬ್ಯಾಂಕ್ ಬುಕ್ ಪ್ರತಿ ಜೀವಿತ ಪ್ರಮಾಣಪತ್ರ ( ಜೀವಿತ ಅವಧಿಯವರೆಗೆ ಪ್ರತಿ ವರ್ಷ ಸಲ್ಲಿಸುವುದು) ರೇಷನ್ ಕಾರ್ಡ್ ಆಧಾರ್ ಕಾರ್ಡ್ ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರ ನೋಂದಾಯಿತ ಕಾರ್ಮಿಕರು ನಿಮ್ಮ ಸಮೀಪದ ಕಾರ್ಮಿಕ ಇಲಾಖೆಗೆ ಭೇಟಿ ನೀಡಿ, ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಲ್ಲವೇ ಆನ್ ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿಯನ್ನು…
ವಡೋದರಾ: ಕುಡಿದ ಮತ್ತಿನಲ್ಲಿ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಗುಜರಾತ್ನ ವಡೋದರಾದಲ್ಲಿ ಗುರುವಾರ ರಾತ್ರಿ ನಡೆದಿದೆ. ಇದೇ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ, ಅಲ್ಲಿ ಚಾಲಕ ಕುಡಿದ ಅಮಲಿನಲ್ಲಿ ತೀವ್ರವಾಗಿ ಹಾನಿಗೊಳಗಾದ ಕಾರಿನಿಂದ ಹೊರಬರುತ್ತಿರುವುದು ಕಂಡುಬಂದಿದೆ. ಚಾಲಕ ಕಪ್ಪು ಟೀ ಶರ್ಟ್ ಧರಿಸಿದ್ದನು ಮತ್ತು “ಮತ್ತೊಂದು ಸುತ್ತು, ಮತ್ತೊಂದು ಸುತ್ತು!” ಎಂದು ಪದೇ ಪದೇ ಹೇಳುತ್ತಿದ್ದನು. ಮಾಹಿತಿಯ ಪ್ರಕಾರ, ಆರೋಪಿಯನ್ನು ರಕ್ಷಿತ್ ರವೀಶ್ ಚೌರಾಸಿಯಾ ಎಂದು ಗುರುತಿಸಲಾಗಿದೆ. ಅವರು ಎಂಎಸ್ ವಿಶ್ವವಿದ್ಯಾಲಯದಲ್ಲಿ ಕಾನೂನು ವಿದ್ಯಾರ್ಥಿಯಾಗಿದ್ದು, ಅಂದಾಜು 100 ಕಿ.ಮೀ ವೇಗದಲ್ಲಿ ಕಾರನ್ನು ಚಲಾಯಿಸುತ್ತಿದ್ದಾಗ ನಿಯಂತ್ರಣ ಕಳೆದುಕೊಂಡರು. ಚಾಲಕ ಕುಡಿದಿದ್ದ ಮತ್ತು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತೆ ಲೀನಾ ಪಾಟೀಲ್ ತಿಳಿಸಿದ್ದಾರೆ. ಸುದ್ದಿ ಸಂಸ್ಥೆ ಎಎನ್ಐಗೆ ಮಾಹಿತಿ ನೀಡಿದ ಜಂಟಿ ಪೊಲೀಸ್ ಆಯುಕ್ತರು, “ನಾಲ್ಕು ಚಕ್ರದ ವಾಹನವು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ ಮತ್ತು ಅಪಘಾತದಲ್ಲಿ…
ಬೆಂಗಳೂರು: ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ಇನ್ನೂ ಯಾವ ತೀರ್ಮಾನ ಆಗಿಲ್ಲ. ಕ್ಯಾಬಿನೆಟ್ ಉಪ ಸಮಿತಿ ವರದಿ ಕೂಡ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ? ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿಯ ಕೂಲಂಕಷ ಪರಿಶೀಲನೆಗೆ ಉಪ ಸಮಿತಿ ರಚಿಸಲಾಗಿದೆ. ಉಪ ಸಮಿತಿ ವರದಿ ಕೊಡುವುದು ಬಾಕಿ ಇದೆ. ವರದಿ ಬರುತ್ತಿದ್ದಂತೆ ಅದನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ. ವರದಿ ಬರುವ ಮೊದಲೇ ವಿವಿಗಳನ್ನು ಸರ್ಕಾರ ಮುಚ್ಚಲು ಹೊರಟಿದೆ ಎನ್ನುವುದು ಸರಿಯಲ್ಲ. ಇಂಥಾ ಯಾವುದೇ ತೀರ್ಮಾನ ನಾವು ಈ ವರೆಗೆ ಕೈಗೊಂಡಿಲ್ಲ ಎಂಬುದಾಗಿ ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟ ಪಡಿಸಿದ್ದಾರೆ. https://kannadanewsnow.com/kannada/tourists-going-to-jogada-falls-to-see-waterfalls-entry-banned-till-april-30/ https://kannadanewsnow.com/kannada/bengaluru-deputy-cm-dk-shivakumar-inspects-road-canal-retaining-wall-works/
ಬೆಂಗಳೂರು: ಇಂದು ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ಅವರು ಮಹದೇವಪುರ ವಲಯದ ಬೆಳ್ಳಂದೂರು ಕೋಡಿ – ಸಕ್ರಾ ಆಸ್ಪತ್ರೆ ರಸ್ತೆ ಹಾಗೂ ರಾಜಕಾಲುವೆ ತಡೆಗೋಡೆ ಕಾಮಗಾರಿಗಳ ಪರಿವೀಕ್ಷಣೆ ನಡೆಸಿದರು. ಈ ವೇಳೆ ಜಲಮಂಡಳಿ ಅಧ್ಯಕ್ಷರಾದ ರಾಮ್ ಪ್ರಸಾತ್ ಮನೋಹರ್, ವಲಯ ಆಯುಕ್ತರಾದ ರಮೇಶ್, ವಲಯ ಜಂಟಿ ಆಯುಕ್ತರಾದ ದಾಕ್ಷಾಯಣಿ, ಇಂಜಿನಿಯಂರಿಂಗ್ ವಿಭಾಗದ ಮುಖ್ಯಸ್ಥರಾದ ಪ್ರಹ್ಲಾದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. https://twitter.com/BBMPCOMM/status/1900520219539562811 ಈ ಹಿಂದೆ ಹಲವು ಭಾರಿಯೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಬೆಂಗಳೂರಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿದ್ದರು. ರಾಜಕಾಲುವೆ ಒತ್ತುವರಿಯನ್ನು ವೀಕ್ಷಣೆ ಮಾಡಿದ್ದರು. ಇಂದು ಮತ್ತೆ ರಸ್ತೆ, ರಾಜಕಾಲುವೆ ತಡೆಗೋಡೆ ಕಾಮಗಾರಿಯನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಪರಿಶೀಲನೆ ನಡೆಸಿದ್ದಾರೆ. https://kannadanewsnow.com/kannada/tourists-going-to-jogada-falls-to-see-waterfalls-entry-banned-till-april-30/ https://kannadanewsnow.com/kannada/india-57-corporation-vitaminb12/
ಶಿವಮೊಗ್ಗ : ಜಿಲ್ಲೆಯ ವಿಶ್ವ ವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನೆಡೆಯುತ್ತಿದ್ದು ಈ ಕಾಮಗಾರಿಗಳಲ್ಲಿ ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿಯೂ ಒಂದಾಗಿರುವ ಕಾರಣ ಏ.30 ರವರೆಗೆ ಜೋಗ ಜಲಪಾತಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿಯು ಕಾಲ ಮಿತಿಯೊಳಗೆ ಪೂರ್ಣಗೊಳಿಸಬೇಕಿದ್ದು, ಕಾಮಗಾರಿ ಅನುಷ್ಟಾನದ ಸಮಯದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಯಾವುದೇ ರೀತಿಯ ತೊಂದರೆಯಾಗಬಾರದೆAಬ ಹಿತದೃಷ್ಟಿಯಿಂದ ಜೋಗ ಜಲಪಾತದ ಪ್ರವೇಶ ದ್ವಾರವನ್ನು ಜ.1 ರಿಂದ ಮಾ.15 ರವರೆ ಮುಚ್ಚಲಾಗಿರುತ್ತದೆ. ಮಾ.15 ರ ವೇಳೆಗೂ ಜೋಗ ಜಲಪಾತದ ಮುಖ್ಯ ದ್ವಾರದ ಕಾಮಗಾರಿಯು ಪೂರ್ಣಗೊಳ್ಳದೇ ಇರುವುದರಿಂದ ಏ.30 ರವರೆಗೆ ಮುಚ್ಚಲಾಗಿದೆ. ಆದ್ದರಿಂದ ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಗುರುದತ್ತ ಹೆಗಡೆ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-251444 ಸಂಪರ್ಕಿಸಬಹುದಾಗಿದೆ. https://kannadanewsnow.com/kannada/rbi-gets-digital-transformation-award-2025-from-central-banking-london/ https://kannadanewsnow.com/kannada/former-himachal-pradesh-mla-bambar-thakur-shot-at-two-injured/
ನವದೆಹಲಿ: ಲಂಡನ್ನ ಸೆಂಟ್ರಲ್ ಬ್ಯಾಂಕಿಂಗ್ ಸಂಸ್ಥೆಯು ಭಾರತೀಯ ರಿಸರ್ವ್ ಬ್ಯಾಂಕ್ (RBI) ಅನ್ನು ಆಯ್ಕೆ ಮಾಡಿದೆ. X ನಲ್ಲಿನ ಪೋಸ್ಟ್ನಲ್ಲಿ RBI, “ಲಂಡನ್ನ ಸೆಂಟ್ರಲ್ ಬ್ಯಾಂಕಿಂಗ್, UK ಯಿಂದ 2025 ರ ಡಿಜಿಟಲ್ ಟ್ರಾನ್ಸ್ಫರ್ಮೇಷನ್ ಪ್ರಶಸ್ತಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಅನ್ನು ಆಯ್ಕೆ ಮಾಡಲಾಗಿದೆ. ಆಂತರಿಕ ಡೆವಲಪರ್ ತಂಡವು ಅಭಿವೃದ್ಧಿಪಡಿಸಿದ ಪ್ರವಾಹ ಮತ್ತು ಸಾರಥಿ ವ್ಯವಸ್ಥೆಗಳು ಸೇರಿದಂತೆ ಅದರ ಉಪಕ್ರಮಗಳಿಗಾಗಿ RBI ಅನ್ನು ಪ್ರಶಸ್ತಿ ಮತ್ತು ಗುರುತಿಸಲಾಗಿದೆ. ಈ ಡಿಜಿಟಲ್ ಉಪಕ್ರಮಗಳು ಕಾಗದ ಆಧಾರಿತ ಸಲ್ಲಿಕೆಗಳ ಬಳಕೆಯನ್ನು ಹೇಗೆ ಕಡಿಮೆ ಮಾಡಿ RBI ನ ಆಂತರಿಕ ಮತ್ತು ಬಾಹ್ಯ ಪ್ರಕ್ರಿಯೆಗಳನ್ನು ಪರಿವರ್ತಿಸಿವೆ ಎಂಬುದನ್ನು ಪ್ರಶಸ್ತಿ ಸಮಿತಿ ಗಮನಿಸಿದೆ ಎಂದಿದೆ. https://twitter.com/RBI/status/1900475478164881418 ಸೆಂಟ್ರಲ್ ಬ್ಯಾಂಕಿಂಗ್ ಲಂಡನ್ ಒಂದು ಪ್ರಕಟಣೆಯಲ್ಲಿ ಈ ಎರಡು ಉಪಕ್ರಮಗಳು ಈ ಕೆಲಸಕ್ಕೆ ಪ್ರಮುಖವಾಗಿವೆ ಎಂದು ಹೇಳಿದೆ. ಹಿಂದಿಯಲ್ಲಿ ‘ಸಾರಥಿ’ ಎಂಬ ಅರ್ಥವನ್ನು ಹೊಂದಿರುವ ಸಾರಥಿ, RBI ನ ಎಲ್ಲಾ ಆಂತರಿಕ ಕೆಲಸದ ಹರಿವುಗಳನ್ನು ಡಿಜಿಟಲೀಕರಣಗೊಳಿಸಿತು. ಇದು ಜನವರಿ 2023…
ನವದೆಹಲಿ: ಭಾರತದಲ್ಲಿ ಮೌನ ಆರೋಗ್ಯ ಬಿಕ್ಕಟ್ಟು ತಲೆದೋರುತ್ತಿದೆ, ಕನಿಷ್ಠ ಪಕ್ಷ ಡಿಜಿಟಲ್ ಆರೋಗ್ಯ ರಕ್ಷಣಾ ವೇದಿಕೆಯಾದ ಮೆಡಿಬಡ್ಡಿ ನಡೆಸಿದ ಇತ್ತೀಚಿನ ಅಧ್ಯಯನವು ಅದನ್ನೇ ಸೂಚಿಸುತ್ತದೆ. ಅಲ್ಲದೇ ಭಾರತದ ಶೇ.57% ಕ್ಕಿಂತ ಹೆಚ್ಚು ಪುರುಷರು ವಿಟಮಿನ್ ಬಿ 12 ಕೊರತೆಯನ್ನು ಎದುರಿಸುತ್ತಿದ್ದಾರೆ ಎಂಬುದಾಗಿ ಸಮೀಕ್ಷೆಯೊಂದು ತಿಳಿಸಿದೆ. ಸಮೀಕ್ಷೆಯ ಪ್ರಕಾರ, ಶೇಕಡಾ 57 ಕ್ಕಿಂತ ಹೆಚ್ಚು ಪುರುಷ ಕಾರ್ಪೊರೇಟ್ಗಳು ವಿಟಮಿನ್ ಬಿ 12 ಕೊರತೆಯಿಂದ ಬಳಲುತ್ತಿದ್ದಾರೆ. ಇದು ಶಕ್ತಿ ಮತ್ತು ಮೆದುಳಿನ ಕಾರ್ಯಕ್ಕೆ ಪ್ರಮುಖ ಪೋಷಕಾಂಶವಾಗಿದೆ. ಈ ಅಧ್ಯಯನವು ಸುಮಾರು 4,400 ವ್ಯಕ್ತಿಗಳಿಂದ (3,338 ಪುರುಷರು ಮತ್ತು 1,059 ಮಹಿಳೆಯರು) ಡೇಟಾವನ್ನು ವಿಶ್ಲೇಷಿಸಿದೆ, ಅವರೆಲ್ಲರೂ ನಗರ ಪ್ರದೇಶದ ಕಾರ್ಪೊರೇಟ್ ಉದ್ಯೋಗಿಗಳು. ಮಹಿಳೆಯರಲ್ಲಿಯೂ ಸಹ, ಸುಮಾರು 50% ಜನರು ಕೊರತೆಯ ಮಟ್ಟವನ್ನು ಪ್ರದರ್ಶಿಸುತ್ತಾರೆ. ಕಾರ್ಪೊರೇಟ್ ವೃತ್ತಿಪರರಲ್ಲಿ ವಿಟಮಿನ್ ಬಿ 12 ಕೊರತೆ ಏಕೆ ಸಾಮಾನ್ಯವಾಗಿದೆ? ನಮ್ಮಲ್ಲಿ ಹೆಚ್ಚಿನವರಿಗೆ, ನಮ್ಮ ಕೆಲಸವು ಎಲ್ಲಕ್ಕಿಂತ ಹೆಚ್ಚಾಗಿ ಪ್ರಚಲಿತವಾಗಿದೆ ಎಂದು ಹೇಳುವುದು ಅತಿಶಯೋಕ್ತಿಯಾಗುವುದಿಲ್ಲ. ಬೇಡಿಕೆಯ ವೇಳಾಪಟ್ಟಿಗಳು, ಅನಿಯಮಿತ ಆಹಾರ ಪದ್ಧತಿಗಳು…













